ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

ಸುದ್ದಿಗಳು News

Posted by vidyamaana on 2024-07-22 11:26:34 |

Share: | | | | |


ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

ಮುಕ್ಕೂರು : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



ಮೂರು ದಿನಗಳ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರಿನ ಪಡೀಲು ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸದ್ಯ ಮೃತರ ಪಾರ್ಥಿವ ಶರೀರ ಮಂಗಳೂರಿನಲ್ಲಿ ಇದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

 Share: | | | | |


ಮಂಗಳೂರು : ಕಾಮಗಾರಿಯ ವರದಿ ನೀಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ

Posted by Vidyamaana on 2023-10-18 16:43:20 |

Share: | | | | |


ಮಂಗಳೂರು : ಕಾಮಗಾರಿಯ ವರದಿ ನೀಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ

ಮಂಗಳೂರು, ಅ.18: ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 


ಮಂಗಳೂರಿನ ಬೋಂದೆಲ್ ನಲ್ಲಿರುವ ಪಿಡಬ್ಲ್ಯುಡಿ ಇಲಾಖೆಯ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಅವರನ್ನು ಬಂಧಿಸಿದ್ದಾರೆ. 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 


ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ಎಎನ್ಎಂ ರಸ್ತೆ ಕಾಮಗಾರಿ (25 ಲಕ್ಷ) ಹಾಗೂ ಕರಿಮಣೇಲು ಗ್ರಾಮದ ಕೈರೋಳಿ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲನಿಯ ರಸ್ತೆ ಕಾಮಗಾರಿ (20 ಲಕ್ಷ) ನಡೆದು, ಬಿಲ್ ಪಾವತಿಯಾಗುವುದಕ್ಕೆ ಮೊದಲು ಕ್ವಾಲಿಟಿ ಚೆಕ್ಕಿಂಗ್ ರಿಪೋರ್ಟ್ ಕೊಡಬೇಕಾಗಿತ್ತು. ಗುತ್ತಿಗೆ ಕಾಮಗಾರಿ ನಿರ್ವಹಿಸಿದ್ದ ಪ್ರಭಾಕರ ನಾಯ್ಕ್ ಕ್ವಾಲಿಟಿ ಚೆಕ್ಕಿಂಗ್ ವರದಿ ಪಡೆಯಲೆಂದು ಮಂಗಳೂರಿನ ಎಇ ರೊನಾಲ್ಡ್ ಲೋಬೋ ಅವರಲ್ಲಿ ಬಂದಾಗ, 22 ಸಾವಿರ ರು. ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಗಮನಕ್ಕೆ ತಂದಿದ್ದು ಅಧಿಕಾರಿಗಳ ಸೂಚನೆಯಂತೆ ಟ್ರಾಪ್ ಮಾಡಿದ್ದಾರೆ. 20 ಸಾವಿರ ರೂ. ಹಣ ನೀಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು

ಎಲ್‌ಕೆಜಿ ತರಗತಿಯ ಗೋಡೆಗಳಲ್ಲಿ ಬಣ್ಣದ ಅಂಗ್ಲ ಆಕ್ಷರಗಳ ವರ್ಣಮಾಲೆ...

Posted by Vidyamaana on 2023-10-27 20:34:17 |

Share: | | | | |


ಎಲ್‌ಕೆಜಿ ತರಗತಿಯ ಗೋಡೆಗಳಲ್ಲಿ ಬಣ್ಣದ ಅಂಗ್ಲ ಆಕ್ಷರಗಳ ವರ್ಣಮಾಲೆ...

ಪುತ್ತೂರು: ಎ ಬಿ ಸಿ ಡಿ ಹೀಗೇ Zತನಕ ಇಂಗ್ಲೀಷ್ ಅಕ್ಷರಗಳು ತರಗತಿಯ ಗೋಡೆಗಳಲ್ಲಿ ಬಣ್ಣ ಬಣ್ಣಗಳಿಂದ ಬರೆಯಲಾಗಿದೆ, ಜೊತೆಗೆ ಅಕ್ಷರ ಓದಲು ಕಲಿಯುವಂತೆ ಸಹಕಾರಿಯಾಗಲು ಹೊಂದಿಕೊಂಡಿರುವ ಚಿತ್ರಗಳು, ಗೋಡೆಗಳಲ್ಲಿರುವ ಅಕ್ಷರವನ್ನು ನೋಡಿ ಪುಸ್ತಕದಲ್ಲಿ ಬರೆಯುವ ಅಬ್ಯಾಸ ಮಾಡಿಕೊಳ್ಳುವ ಹಾಲುಗಲ್ಲದ ಪುಟ್ಟ ಮಕ್ಕಳು. ಇದು ಕಂಡು ಬಂದಿದ್ದು ಕಾವು ಸರಕಾರಿ ಎಲ್‌ಕೆಜೆ ಯುಕೆಜಿ ತರಗತಿ ಕೊಠಡಿಯಲ್ಲಿ. ಮಕ್ಕಳ ಕಲಿಕೆಗೆ ನರವಾಗಲೆಂದು ಇಂಗ್ಲೀಷ್ ಅಕ್ಷರಗಳನ್ನು ಗೋಡೆಗಳಲ್ಲಿ ಜೋಡಿಸಿದ್ದು ಲಿಯೋ ಕ್ಲಬ್ ತಂಡ, ಲಯನ್ಸ್ ಕ್ಲಬ್ ನ ಸಹಬಾಗಿತ್ವದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಲಿಯೋ ಕ್ಲಬ್ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸಿದೆ.

ಕಾವು ಸರಕಾರಿ ಪ್ರಾಥಮಿಕ ಶಾಲೆಯನ್ನು ಕಾವು ಹೇಮನಾಥ ಶೆಟ್ಟಿಯವರು ದತ್ತು ತೆಗೆದುಕೊಂಡಿದ್ದಾರೆ. ದತ್ತು ತೆಗೆದುಕೊಂಡ ಬಳಿಕ ಇಲ್ಲಿ ಆಂಗ್ಲ ಮಾಧ್ಯಮ ಎಲ್‌ಕೆಜಿ ಯುಕೆಜಿ ತರಗತಿಯನ್ನು ಪ್ರಾರಂಭ ಮಾಡಲಾಗಿದೆ. ಸರಕಾರ ಕೆಪಿಎಸ್ ಸ್ಕೂಲ್‌ಗಳಲ್ಲಿ ಆಂಗ್ಲ ಮಾದ್ಯಮ ತರಗತಿ ಆರಂಭ ಮಾಡುವ ಮೊದಲೇ ಕಾವು ಸರಕಾರಿ ಶಾಲೆಯಲ್ಲಿ ಇಂಗ್ಲೀಷ್ ಕ್ರಾಂತಿಯನ್ನು ಪ್ರಾರಂಭಿಸಲಾಗಿತ್ತು. ಮಕ್ಕಳ ಸಂಖ್ಯೆಯೂ ಗಣನೀಯವಾಗಿದೆ.


ಕಲಿಕೆಗೆ ಸಹಕಾರಿ

ತರಗತಿಯ ಕೊಠಡಿಯ ಗೋಡೆಗಳಲ್ಲಿ ಇಂಗ್ಲೀಷ್ ಅಕ್ಷರಮಾಲೆಯನ್ನು ಚಿತ್ರ ಸಹಿತ ಬರೆದಿರುವ ಕಾರಣ ಮಕ್ಕಳಿಗೆ ಅಕ್ಷರದ ಪರಿಚಯ ಮತ್ತು ಅಕ್ಷರವನ್ನು ಬರೆಯುವ ವಿಧಾನವನ್ನು ಸುಲಭದಲ್ಲಿ ಮನನ ಮಾಡಬಹುದಾಗಿದೆ. ಸಾಧಾರಣವಾಗಿ ಶಾಲೆಯ ಗೋಡೆಗಳಲ್ಲಿ ಪಕ್ಷಿ, ಪರಿಸರ ಸೇರಿದಂತೆ ಇತರೆ ಬಣ್ಣ ಬಣ್ಣದ ಚಿತ್ರಗಳನ್ನು ಬಿಡಿಸಲಾಗುತ್ತದೆ. ಕಾವು ಶಾಲೆಯಲ್ಲಿ ಲಿಯೋ ಕ್ಲಬ್ ಮಕ್ಕಳ ಶಿಕ್ಷಣಕ್ಕೆ ನೆರವು ಆಗುವ ರೀತಿಯಲ್ಲಿ ಚಿತ್ರಗಳನ್ನು , ಅಕ್ಷರಗಳನ್ನು ಬರೆದಿರುವುದು ಮಕ್ಕಳ ಪೋಷಕರಲ್ಲೂ ಸಂತಸಕ್ಕೆ ಕಾರಣವಾಗಿದೆ. ಕಳೆದ ೨೦ ದಿನಗಳ ಹಿಂದೆ ಈ ಚಿತ್ರಗಳನ್ನು ಬಿಡಿಸಲಾಗಿದ್ದು ಆ ಬಳಿಕ ಮಕ್ಕಳ ಕಲಿಕಾ ಉತ್ಸಾಹವೂ ಇಮ್ಮಡಿಗೊಂಡಿದೆ ಮತ್ತು ಅಕ್ಷರ ಜ್ಞಾನವೂ ಮಕ್ಕಳಲ್ಲಿ ವೃದ್ದಿಯಾಗಿದೆ ಎನ್ನುತ್ತಾರೆ ಪೋಷಕರು.


ಆದೃತಿ ಯೋಜನೆಯಡಿ ನಾಲ್ಕು ಜಿಲ್ಲೆಗಳಲ್ಲಿ ಸೇವೆ

ಲಿಯೋ ಕ್ಲಬ್ ಇದರ ಆದೃತಿ ಯೋಜನೆಯಡಿ ಕ್ಲಬ್ ವ್ಯಾಪ್ತಿಯ ಹಾಸನ , ಚಿಕ್ಕಮಗಳೂರು, ಮಡಿಕೇರಿ ಮತ್ತು ದ ಕ ಜಿಲ್ಲೆಯ ಆಯ್ದ ೧೫ ಸರಕಾರಿ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಇದೇ ಸೇವೆ ನಡೆಯಲಿದೆ. ದ ಕ ಜಿಲ್ಲೆಯ ಕಿನ್ನಿಗೋಳಿ ಕರೆಕಾಡು, ಹಳೆಯಂಗಡಿ ಕೊಳ್ನಾಡಿ ಮುಚ್ಚಿ, ಮೂಡಬಿದ್ರೆ ಮಚ್ಚೂರು ಶಾಲೆ ಹಾಗೂ ಮಂಗಳೂರು ನಗರ ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ವರ್ಣಮಾಲೆ ಅಕ್ಷರ ಜೋಡನಾ ಕಾರ್ಯಕ್ಕೆ ಆಯ್ಕೆಗೊಂಡಿದೆ. ಲಿಯೋ ಕ್ಲಬ್ ವತಿಯಿಂದ ಆರೋಗ್ಯ ಮೇಳ, ಉದ್ಯೋಗ ಮೇಳ, ವಿಕಲಚೇತನರ ಜೊತೆ ಸಹಭೋಜನೆ, ವ್ಯಕ್ತಿತ್ವ ವಿಕಸನ ಸಮಾವೇಶ, ಸೇರಿದಂತೆ ಇನ್ನಿತರ ಸಮಾಜಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು ಕ್ಲಬ್‌ನ ಹಿರಿಮೆಯನ್ನು ಹೆಚ್ಚಿಸಿದೆ.




ಲಿಯೋ ಕ್ಲಬ್ ಸಂಸ್ಥೆ ಈ ಸೇವೆ ಇನ್ನೊಬ್ಬರಿಗೆ ಉತ್ತೇಜನ ನೀಡುವ ಕಾರ್ಯವಾಗಿದೆ. ಸರಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಡ ಗ್ರಾಮೀಣ ಮಕ್ಕಳ ಕಲಿಕೆಗೆ ಸಹಾಯ ಮಾಡುವ ಉದ್ದೇಶದಿಂದ ಈ ವರ್ಣ ಮಾಲೆಯನ್ನು ರಚಿಸಿದ್ದು ಇದಕ್ಕಾಗಿ ನಾನು ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಇದೇ ಸೇವೆಯನ್ನು ಕ್ಲಬ್ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲಿ ಮುಂದುವರೆಸಲಿದ್ದಾರೆ. ಸಂಸ್ಥೆಯ ಮೂಲಕ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಮುಂದಿನ ಯುವ ಸಮೂಹವಕ್ಕೆ ಸಮಾಜ ಸೇವಾ ಮನೋಭಾವ ಬೆಳೆಸುವ ಕೆಲಸ ನಿರಂತರ ಆಗಬೇಕಿದ್ದು ಅದನ್ನು ಲಿಯೋ ಕ್ಲಬ್ ಮೂಲಕ ನಡೆಸಲಾಗುತ್ತಿದೆ.

ಮೆಲ್ವಿನ್ ಡಿಸೋಜಾ, ಲಯನ್ಸ್ ಜಿಲ್ಲಾ ಗವರ್‍ನರ್

ಚಿತ್ರ ಇದೆ






ಲಿಯೋ ಡಿಸ್ಟ್ರಿಕ್ಟ್ ೩೧೭ ಡಿ ಇದರ ವತಿಯಿಂದ ಕ್ಲಬ್ ವ್ಯಾಪ್ತಿಯ ನಾಲ್ಕು ಜಿಲ್ಲೆಗಳ ಆಯ್ದ ಸರಕಾರಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿ ಗಳಲ್ಲಿ ಮಕ್ಕಳ ಕಲಿಕೆಗೆ ನೆರವಾಗುವುದು ಮತ್ತು ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಕೊಠಡಿಗಳಲ್ಲಿ ಆಧುನಿಕತೆಯ ಟಚಪ್‌ನೊಂದಿಗೆ ಅಕ್ಷರ ವರ್ಣ ಮಾಲೆಯನ್ನು ಚಿತ್ರದ ಮೂಲಕ ಬರೆಯಲಾಗಿದೆ. ಪ್ರಸಿದ್ದ ಆರ್ಟಿಸ್ಟ್ ಮೂಲಕ ಈ ವರ್ಣ ಮಾಲೆಯನ್ನು ರಚಿಸಲಾಗಿದೆ. ಲಿಯೋ ಕ್ಲಬ್ ಸದಸ್ಯರ ಸಹಕಾರದಿಂದ ಚಿತ್ರಕ್ಕೆ ಬಣ್ಣ ಕೊಡುವ ಕಾರ್ಯವನ್ನು ಮಾಡಲಾಗಿದೆ.  ಕ್ಲಬ್ ವತಿಯಿಂದ ಮಕ್ಕಳ ಕಲಿಕಾ ವ್ಯವಸ್ಥೆಗೆ ಒತ್ತು ನೀಡುವ ಉದ್ದೇಶವೂ ಇದರ ಹಿಂದೆ ಇದ್ದು , ಕ್ಲಬ್ ವ್ಯಾಪ್ತಿಯ ದ ಕ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಸೇವೆಯನ್ನು ನಡೆಸಲಾಗುವುದು. ಕ್ಲಬ್ ಯೋಜನೆಗೆ ಪೋಷಕರಿಂದ ಮತ್ತು ಸಾರ್ವಜನಿಕರಿಂದ ಅಭಿನಂದನೆಗಳು ವ್ಯಕ್ತವಾಗಿದೆ, ಸಮಾಜ ಸೇವೆ ಇನ್ನೂ ಮುಂದುವರೆಯಲಿದೆ.


ಡಾ. ರಂಜಿತಾ ಎಚ್ ಶೆಟ್ಟಿ

ಜಿಲ್ಲಾಧ್ಯಕ್ಷರು ಲಿಯೋ ಕ್ಲಬ್ ೩೧೭ಡಿ

ಚಿತ್ರ ಇದೆ



ಕಲಿಕೆಗೆ ತುಂಬಾ ಸಹಕಾರಿಯಾಗಿದೆ

ತರಗತಿಯ ಗೋಡೆಗಳಲ್ಲಿ ಇಂಗ್ಲೀಷ್ ವರ್ಣಮಾಲೆಯನ್ನು ಚಿತ್ರ ಸಹಿತ ಬರೆದಿರುವುದು ನಮಗೆ ತುಂಬಾ ಸಹಕಾರಿಯಾಗಿದೆ. ಮಕ್ಕಳಿಗೆ ಅಕ್ಷರದ ಪರಿಚಯ ಮಾಡಿಸಲು ಮತ್ತು ಬರೆಯವುದು ಮತ್ತು ಓದುವುದನ್ನು ಕಲಿಸಲು ಇದು ಪ್ರಯೋಜನಕಾರಿಯಾಗಿದ್ದು ಇತರ ಕಡೆಗೂ ಇದು ವಿಸ್ತರಣೆಯಾಗಬೇಕಿದೆ.


ವಂದಿತಾ, ಕಾವು ಶಾಲೆ ಶಿಕ್ಷಕಿ

ಪುತ್ತೂರಿನಲ್ಲಿ ಇಂದು ವಿದ್ಯುತ್ ವ್ಯತ್ಯಯ, ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಚೆಕ್ ಮಾಡಿ

Posted by Vidyamaana on 2024-03-21 04:51:39 |

Share: | | | | |


ಪುತ್ತೂರಿನಲ್ಲಿ ಇಂದು ವಿದ್ಯುತ್ ವ್ಯತ್ಯಯ, ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಚೆಕ್ ಮಾಡಿ

ಪುತ್ತೂರು : ಉಪ್ಪಿನಂಗಡಿ ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ ಪ್ರೆಸ್, ಕಾಂಚನ & ವಾಟರ್ ಸಪ್ಪೆ ಫೀಡರ್ ಮತ್ತು ಮತ್ತು 110/33/11ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ & ಕೆಮ್ಮಾರ ಫೀಡರ್‌ನಲ್ಲಿ ಮಾ.21 (ಗುರುವಾರ) ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ & 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ನೆಕ್ಕಿಲಾಡಿ & ಉಪ್ಪಿನಂಗಡಿ ಗ್ರಾಮದ

ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

1 ತಿಂಗಳಿನಿಂದ ನಾಪತ್ತೆಯಾಗಿದ್ದ ಡಾ.ಬ್ರೋ ಎಲ್ಲಿದ್ದಾರೆ ಗೊತ್ತಾ? ಇಲ್ಲಿದೆ ಉತ್ತರ

Posted by Vidyamaana on 2023-12-16 15:08:12 |

Share: | | | | |


1 ತಿಂಗಳಿನಿಂದ ನಾಪತ್ತೆಯಾಗಿದ್ದ ಡಾ.ಬ್ರೋ ಎಲ್ಲಿದ್ದಾರೆ ಗೊತ್ತಾ? ಇಲ್ಲಿದೆ ಉತ್ತರ

DrBro, ನಮಸ್ಕಾರ ದೇವ್ರು ಅಂತಲೇ ವಿಡಿಯೋ ಶುರು ಮಾಡುವ ಗಗನ್ ಶ್ರೀನಿವಾಸನ್ ಯೂಟ್ಯೂಬ್ ನೋಡೋ ಜನರು ಮಾತ್ರವಲ್ಲ ಸೋಷಿಯಲ್ ಮೀಡಿಯಾ ಬಳಸೋ ಎಲ್ಲರಿಗೂ ಅತ್ಯಂತ ಅಚ್ಚು ಮೆಚ್ಚು ಅಂತಲೇ ಹೇಳಬಹುದುಕಳೆದೊಂದು ತಿಂಗಳಿಂದ ಒಂದೇ ಒಂದು ವಿಡಿಯೋ ಸಹ ಹಾಕದೆ ಎಲ್ಲಿದ್ದಾರೆ ಎಂಬ ಮಾಹಿತಿಯೂ ಇಲ್ಲದೆ ಅವರ ಅಭಿಮಾನಿಗಳು, ನೆಟ್ಟಿಗರು ಆತಂಕಕ್ಕೂ ಒಳಗಾಗಿದ್ದಾರೆ.ಕಳೆದ ಚೀನಾ ಪ್ರವಾಸ ಕೈಗೊಂಡಿದ್ದ ಅವರು ಇದಾದ ಬಳಿಕ ಒಂದೂ ವಿಡಿಯೋ ಹಂಚಿಕೊಂಡಿಲ್ಲ.


ಇನ್ನು ಇದೀಗ ಡಾ ಬ್ರೋ(Dr Bro) ಕಳೆದ ಒಂದು ತಿಂಗಳಿನಿಂದ ವಿಡಿಯೋ ಮಾಡಿಲ್ಲ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇದನ್ನ ನೋಡೊದ ಗಗನ್ ಅವ್ರು ಅಭಿಮಾನಿಗಳು ಹಾಗೂ ನೆಟ್ಟಿಗರು ನಾಪತ್ತೆಯಾಗಿದ್ದಾರೆ ಗಗನ್ ಅಂತ ಸುದ್ದಿ ಹಬ್ಬಿಸಿದ್ರು. ಮಾಧ್ಯಮದವರು ಕೂಡ ಚೀನಾ ದೇಶದ ವಿಡಿಯೋ ಮಾಡಿ ಡಾ. ಬ್ರೋ ತೊಂದ್ರೇಗೆ ಸಿಲುಕಿದ್ದಾರೆ ಅಂತ ಹೇಳಿದ್ರು ಆದ್ರೆ ಇದೀಗ ಡಾ. ಬ್ರೋ ಬಗ್ಗೆ ಹೊಸ ಸುದ್ದಿಯೊಂದು ಸ್ಯಾಂಡಲ್ವುಡ್ ನಲ್ಲಿ ಹರಿದಾಡುತ್ತಿದ್ದೂ, ನಟ ಶೈನ್ ಶೆಟ್ಟಿ ಈ ಕುರಿತ ವಿಚಾರವೊಂದನ್ನ ಹಂಚಿಕೊಂಡಿದ್ದಾರೆ. ಹಾಗಾದ್ರೆ ಗಗನ್ ಎಲ್ಲಿದ್ದಾರೆ ಏನ್ ಮಾಡ್ತಿದ್ದಾರೆ? ಗಗನ್ ಬಗ್ಗೆ ಶೈನ್ ಶೆಟ್ಟಿ ಹೇಳಿದ್ದೇನು ನೋಡೋಣ ಬನ್ನಿ.ಡಾಕ್ಟರ್​​ ಬ್ರೋ(Dr Bro) ಅವ್ರ ನಿಜವಾದ ಹೆಸರು ಗಗನ್ ಶ್ರೀನಿವಾಸ್. ಇವ್ರು ಮೂಲತಃ ಬೆಂಗಳೂರಿನ ಹೊರವಲಯದವರು. ಹುಟ್ಟಿ ಬೆಳದದ್ದು ಮದ್ಯಮ‌ ವರ್ಗದ ಕುಟುಂಬದಲ್ಲಿ.ಇವ್ರ ತಂದೆ ಶ್ರೀನಿವಾಸ್​ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಾರೆ. ತಾಯಿಯ ಹೆಸರು ಪದ್ಮಾ ಅವರು ಮನೆಯಲ್ಲಿಯೆ ಇರುತ್ತಾರೆ. ಇನ್ನು ಗಗನ್ ಎರಡನೆ ತರಗತಿಯಲ್ಲಿ ಓದುತ್ತಿರುವಾಗಲೇ ಪೌರೋಹಿತ್ಯ ಕಲಿತು, ತಂದೆ ಇಲ್ಲದ ಸಮಯದಲ್ಲಿ ತಾವೇ ದೇವಸ್ಥಾನದ ಪೂಜೆ ಮಾಡುತ್ತಿದ್ದರು. ಡಾ ಬ್ರೋಗೆ ಓದಿನಲ್ಲಿ ಆಸಕ್ತಿ ಇರಲಿಲ್ಲ. ಹೀಗಾಗಿ ಯಾವಾಗಲೂ ಹಾಡು, ಡ್ಯಾನ್ಸ್​​ ನಿರೂಪಣೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರಿಂದ ಓದಿನ ಬಗ್ಗೆ ಹೆಚ್ಚಿನ ಗಮನ ಕೊಡುತ್ತಿರಲಿಲ್ಲ. ಹೀಗಾಗಿ ಭರತನಾಟ್ಯ ಕಲಿತು ಭರತನಾಟ್ಯ ಕ್ಲಾಸ್‌ ಕೂಡ ನಡೆಸುತ್ತಿದ್ದರು. ಇನ್ನು ನಂತರದಲ್ಲಿ ಫೋಟೋಗ್ರಾಫಿ ವಿಡಿಯೋ ಗ್ರಾಫಿ ಕಲಿಯುತ್ತಾರೆ.ಇದಾದ ನಂತರ 2016 ರಲ್ಲಿ ತನ್ನದೇ ಆದ ಡಾಕ್ಟರ್​​ ಬ್ರೋ ಯೂಟ್ಯೂಬ್‌ ಚಾನೆಲ್ ಶುರು ಮಾಡಿದ್ರು. ಪ್ರಾರಂಭದಲ್ಲಿ ಕಾಮಿಡಿ ವಿಡಿಯೋವನ್ನು ಮಾಡಿ ಅಪ್ಲೋಡ್ ಮಾಡಿ ಸ್ವಲ್ಪ ಮಟ್ಟಿನ ಜನಪ್ರಿಯತೆ ಪಡೆದುಕೊಂಡ್ರು. ನಂತರ ಸಿನಿಮಾ ನಟ ನಟಿಯರ ಇಂಟರ್ವ್ಯೂ ಮಾಡಿ ಹಾಕುತ್ತಿದ್ರು. ಇದೆಲ್ಲಾ ಆದ ನಂತರ ಇದೀಗ ಡಾ. ಬ್ರೋ ವಿಡಿಯೋಗಳು ಸಿಕ್ಕಾಪಟ್ಟೆ ಟ್ರೆಂಡ್ ಆಗ್ತಿದೆ ಕಾರಣ ರಾಜ್ಯದ ಬೇರೆ ಬೇರೆ ಕಡೆ ಸುತ್ತಾಡಿ ಅಲ್ಲಿನ‌ ವಿವರ ಕೊಡಲು ಶುರುಮಾಡಿ, ಅಂತರಾಜ್ಯ, ದೇಶ, ವಿದೇಶ ಸುತ್ತಿ ಅಲ್ಲಿನ ಆಚಾರ ವಿಚಾರ ಅವ್ರ ಜೀವನ ಶೈಲಿ ಆಹಾರ ಪದ್ಧತಿ ಸೇರಿದಂತೆ ಎಲ್ಲವನು ಕೂಡ ನೋಡುಗರು ಮುಂದೆ ತಂದಿಡುತ್ತಿದ್ರು. ಇಂತ ವಿಷಯಗಳಿಂದಲೇ ಡಾ. ಬ್ರೋ ಗೆ ಅಭಿಮಾನಿ ವರ್ಗ ಹೆಚ್ಚಾಗಿದೆ. ದೇಶ ಮಾತ್ರ ಅಲ್ಲಾ ಪ್ರಪಂಚದಾದ್ಯಂತ ಇದೀಗ ಡಾ. ಬ್ರೋ ಸಕತ್ ಫೇಮಸ್ ಆಗಿದ್ದರು ಆದ್ರೆ ಕಳೆದ ಒಂದು ತಿಂಗಳಿನಿಂದ ಡಾ. ಬ್ರೋ ಎಲ್ಲಿಯೂ ಕಾಣಿಸಿಲ್ಲ, ವಿಡಿಯೋನು ಮಾಡಿಲ್ಲ ಎಲ್ಲಿ ಹೋಗಿಬಿಟ್ರು ಅಂತ ಎಲ್ರು ಕೇಳ್ತಿದ್ರು ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು ಡಾ ಬ್ರೋ ಎಲ್ಲಿಯೂ ಹೋಗಿಲ್ಲ ಇಲ್ಲೆ ಇದ್ದಾರೆ ನೋಡಿ ಅಂತ ಶೈನ್ ಶೆಟ್ಟಿಬರೆದುಕೊಂಡಿದ್ದಾರೆ

ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ : ಮಾಜಿ ಸಿಎಂ ಯಡಿಯೂರಪ್ಪ

Posted by Vidyamaana on 2023-05-21 13:55:04 |

Share: | | | | |


ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ : ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು : ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ , ಈ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಕಾಂಗ್ರೆಸ್ ನವರು ಸಿಎಂ ಸಂಪುಟ ಸಭೆಯಲ್ಲಿ ಗ್ಯಾರೆಂಟಿ ಜಾರಿಗೆ ಬಗ್ಗೆ ಒಪ್ಪಿಗೆ ಪಡೆದಿದ್ದು, ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಭರವಸೆಗಳು ನಮಗೆ ಹಿನ್ನಡೆಯಾಗಿದೆ, ಹಾಗಂತ ನಾವು ಟೀಕೆ ಟಿಪ್ಪಣಿ ಮಾಡಲ್ಲ. ಕಾಂಗ್ರೆಸ್ ಎಲ್ಲಾ ಭರವಸೆಗಳನ್ನು ಈಡೇರಿಸಲಿ, ಇದರಿಂದ ಜನರಿಗೆ ಒಳ್ಳೆಯಾದರೆ ಸಾಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಬಿಜೆಪಿ ಹಗರಣಗಳ ಬಗ್ಗೆ ತನಿಖೆ ಮಾಡಲಾಗುತ್ತದೆ ಎಂಬ ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಈ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಯಾವುದೇ ಹಗರಣ ಇದ್ದರೂ ತನಿಖೆ ಮಾಡಲಿ ಎಂದರು. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದರು.

ಡಾ. ಪೂರ್ಣ ಚಂದ್ರಶೇಖರ ರಾವ್ ಅವರಿಗೆ ಮಾತೃ ವಿಯೋಗ

Posted by Vidyamaana on 2024-08-02 08:40:32 |

Share: | | | | |


ಡಾ. ಪೂರ್ಣ ಚಂದ್ರಶೇಖರ ರಾವ್ ಅವರಿಗೆ ಮಾತೃ ವಿಯೋಗ

ಪುತ್ತೂರು: ಮೂಲತಃ ಕುಂದಾಪುರ ತಾಲೂಕಿನ ಬೇಳೂರು ನಿವಾಸಿ, ಪುತ್ತೂರಿನ ಡಾ‌. ಪೂರ್ಣ ಸಿ. ರಾವ್ ಅವರ ತಾಯಿ ಸರೋಜ (88 ವ.) ಅವರು ಆ. 1ರಂದು ಪುತ್ತೂರಿನಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ದಿ. ಬೇಲೂರು ವೆಂಕಟದಾಸ ಅಡಿಗ ಅವರ ಧರ್ಮಪತ್ನಿ.

Recent News


Leave a Comment: