ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ :ಪೆರಿಯಡ್ಕ ನಿವಾಸಿ ರೆಹಮಾನ್ ಪೊಲೀಸ್ ವಶಕ್ಕೆ

ಸುದ್ದಿಗಳು News

Posted by vidyamaana on 2024-07-22 17:34:57 |

Share: | | | | |


ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ :ಪೆರಿಯಡ್ಕ ನಿವಾಸಿ ರೆಹಮಾನ್ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದ ಅರುಣ್ ಕುಮಾರ್ ಪುತ್ತಿಲ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸಿಸಿಟಿವಿಗೆ ಒತ್ತಾಯ: ಈಗಾಗಲೇ ಉಪ್ಪಿನಂಗಡಿಯಲ್ಲಿ ಹಿಂದೂಗಳನ್ನು ಕೇಂದ್ರೀಕರಿಸಿ ಹಲವು ಘಟನೆಗಳು ನಡೆದಿದ್ದು, 2ವರ್ಷದ ಹಿಂದೆ ಮೀನು ಅಂಗಡಿಗೆ ಬೆಂಕಿ ಹಾಕಿದ್ದು ಇನ್ನೂ ಪತ್ತೆಯಾಗಿಲ್ಲ.

ಈ ಘಟನೆಯಲ್ಲಿ ಆರೋಪಿಯನ್ನು ಊರಾವರೇ ಹಿಡಿದುಕೊಟ್ಟಿದ್ದಾರೆ. ಪೆರಿಯಡ್ಕ ಜಂಕ್ವನ್ ನಲ್ಲಿ ಪೊಲೀಸ್ ಇಲಾಖೆಯ ಸಿಸಿಟಿವಿ ಅಗತ್ಯತೆ ಇದೆ ಎಂದು ಠಾಣಾಧಿಕಾರಿಯಲ್ಲಿ ಮನವಿ ಮಾಡಿದರು.

 Share: | | | | |


ಪತ್ನಿ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಸೂಸೈಡ್

Posted by Vidyamaana on 2023-12-20 08:25:33 |

Share: | | | | |


ಪತ್ನಿ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಸೂಸೈಡ್

ಬೆಂಗಳೂರು : ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಗಂಡ ರೈಲ್ವೇ ಟ್ರ್ಯಾಕ್‌ಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಲದೇವನಹಳ್ಳಿ ಬಳಿಯಲ್ಲಿ ನಡೆದಿದೆ.


ಮೃತ ದುರ್ದೈವಿಯನ್ನು ರಮೇಶ್ ಎಂದು ಗುರುತಿಸಲಾಗಿದೆ.


ರಮೇಶ್‌ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್‌ನಲ್ಲಿ ತನ್ನ ಸಾವಿಗೆ ಹೆಂಡತಿ ಶಿಲ್ಪಾ ಮತ್ತು ಆಕೆಯ ಬಾಯ್ ಫ್ರೆಂಡ್ ಸಂಜು ಎಂಬಾತ ಕಾರಣ ಎಂದು ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೇ ಸಾವನ್ನಪ್ಪುವ ಮುನ್ನ ಇಬ್ಬರ ಫೋಟೋವನ್ನು ಸ್ಟೇಟಸ್ ಹಾಕಿದ್ದು, ತನ್ನ ಸಾವಿಗೆ ಕಾರಣರಾದ ಇಬ್ಬರಿಗೂ ಶಿಕ್ಷೆ ನೀಡಿ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.


ಈ ಘಟನೆಯ ಕುರಿತು ಯಶವಂತಪುರ ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಶಿಲ್ಪಾ ಮತ್ತು ಇನ್ನೋರ್ವ ವ್ಯಕ್ತಿಯ ಮೇಲೆ ಎಫ್‌ಐಆ‌ರ್ ದಾಖಲಾಗಿದೆ.

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ವಿಚಾರವಾದಿ ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ ಯತ್ನ

Posted by Vidyamaana on 2023-10-14 16:08:14 |

Share: | | | | |


ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ವಿಚಾರವಾದಿ ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ ಯತ್ನ

ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗ ಸಂಘದ ಸದಸ್ಯರು ಚಿಂತಕ ಪ್ರೊ.ಭಗವಾನ್ ನಿವಾಸಕ್ಕೆ ಮುತ್ತಿಗೆ‌ ಹಾಕಲು ಯತ್ನಿಸಿದರು.


ಮಹಿಷಾ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರೊ.ಭಗವಾನ್, ‘ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳೆಂದು ಕುವೆಂಪು ಹೇಳಿದ್ದರು’ ಎಂದು ಹೇಳಿಕೆ ನೀಡಿದ್ದರು.


ಈ ಹೇಳಿಕೆಯಿಂದ ಆಕ್ರೋಶಗೊಂಡ ಮೈಸೂರು ಚಾಮರಾಜನಗರ ಒಕ್ಕಲಿಗರ ಸಂಘದ ಸದಸ್ಯರು ನಗರದ ಕುವೆಂಪು ನಗರದಲ್ಲಿರುವ ಅವರ ಮನೆ ಮುತ್ತಿಗೆಗೆ ಯತ್ನಿಸಿದರು. ಏಕಾಏಕಿ ಓಳನುಗ್ಗಲು ಪ್ರಯತ್ನಿಸಿದಾಗ ಪೊಲೀಸರು ತಡೆದರು. ಎಳೆದಾಟದಲ್ಲಿ ಗಿರೀಶ್ ಅವರಿಗೆ ಮುಖಕ್ಕೆ ಪೆಟ್ಟು ಬಿದ್ದು ರಕ್ತ ಹೊರಬಂತು. ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿ, ಧಿಕ್ಕಾರ ಕೂಗಿದರು.


‘ಸಂಸ್ಕೃತಿ ಯಾವುದೆಂದು ಭಗವಾನ್‌ ಅವರು ಒಕ್ಕಲಿಗರಿಗೆ ತಿಳಿಸಲಿ, ಪಾಠ ಕಲಿಯುತ್ತೇವೆ. ಅವರ ಭೇಟಿಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಅವರನ್ನು ಗಡಿಪಾರು ಮಾಡಿ’ ಎಂದು ಪಟ್ಟು ಹಿಡಿದರು. ‘ಷರತ್ತಬದ್ಧ ಅನುಮತಿ ಇದ್ದರೂ ಪ್ರಚೋದನಕಾರಿ ಭಾಷಣ ಮಾಡಿದ್ದರ ವಿರುದ್ಧ, ಮೆರವಣಿಗೆ ನಡೆಸಿದ್ದರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ’ ಎಂದು ಪ್ರಶ್ನಿಸಿದರು. ರಸ್ತೆ ಬದಿಯಲ್ಲಿ ಪ್ರತಿಭಟನೆ ನಡೆಸಿ ಭಗವಾನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಎಳ್ಳುನೀರು ಬಿಟ್ಟು ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಪೊಲೀಸರು ಉದಯರವಿ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ, ವಾಹನ ಸಂಚಾರ ನಿರ್ಬಂಧಿಸಿದರು.

ಮನೆಗೆ ನುಗ್ಗಲು ಯತ್ನಿಸಿದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೆ.ವಿ.ಶ್ರೀಧರ್, ಮೈಸೂರು- ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಗಿರೀಶ್, ಚೇತನ್, ಮುಖಂಡರಾದ ಸತೀಶ್ ಗೌಡ, ಸ್ವರೂಪ್ ಹಾಗೂ ಬೆಂಬಲಿಗರನ್ನು ಬಂಧಿಸಿ ಕರೆದೊಯ್ದರು. ಪರಿಸ್ಥಿತಿ ತಿಳಿಯಾದ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಗರ ಪೊಲೀಸರು ಹಾಗೂ ರಾಜ್ಯ ಮೀಸಲು ಪಡೆ ಪೊಲೀಸರನ್ನು ಮನೆಯ ಸುತ್ತ ಭದ್ರತೆಗಾಗಿ ನಿಯೋಜಿಸಲಾಗಿದೆ.

ಕರ್ನಾಟಕದ ಹಿಜಾಬ್ ನಿಷೇಧ ಆದೇಶ ವಾಪಸ್, ಸಿಎಂ ಸಿದ್ದರಾಮಯ್ಯ ಘೋಷಣೆ

Posted by Vidyamaana on 2023-12-22 20:31:30 |

Share: | | | | |


ಕರ್ನಾಟಕದ ಹಿಜಾಬ್ ನಿಷೇಧ ಆದೇಶ ವಾಪಸ್, ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು(ಡಿ.22) ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ.ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿತ್ತು. ಹಿಂದಿನ ಬಿಜೆಪಿ ಸರ್ಕಾರದ ವೇಳೆ ನಡೆದ ಈ ಹಿಜಾಬ್ ಗಲಾಟೆ ರಾಜಕೀಯ ಗುದ್ದಾಟಕ್ಕೂ ಕಾರಣಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದಿದ್ದಾರೆ.

ದುರಂತ ಅಂತ್ಯ ಕಂಡ ಲವ್​ ಮ್ಯಾರೇಜ್​: ಮೊದಲ ರಾತ್ರಿಯಂದೇ ಪತ್ನಿಯ ಮದ್ವೆ ಸೀರೆಗೆ ಕೊರಳೊಡ್ಡಿದ ಯುವಕ

Posted by Vidyamaana on 2023-09-22 07:36:36 |

Share: | | | | |


ದುರಂತ ಅಂತ್ಯ ಕಂಡ ಲವ್​ ಮ್ಯಾರೇಜ್​: ಮೊದಲ ರಾತ್ರಿಯಂದೇ ಪತ್ನಿಯ ಮದ್ವೆ ಸೀರೆಗೆ ಕೊರಳೊಡ್ಡಿದ ಯುವಕ

ಚೆನ್ನೈ: ಮದುವೆಯಾದ ಎರಡೇ ದಿನದಲ್ಲಿ 27 ವರ್ಷದ ಯುವಕನೊಬ್ಬ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ಬುಧವಾರ ನಡೆದಿದೆ.ಮೃತ ವ್ಯಕ್ತಿಯನ್ನು ಸರವಣನ್​ ಎಂದು ಗುರುತಿಸಲಾಗಿದೆ. ಈತ ಓಚೇರಿ ನಿವಾಸಿಯಾಗಿದ್ದು, ಸುಂಗುವಚತಿರಂನಲ್ಲಿರುವ ಸ್ಯಾಮ್​ಸಂಗ್​ ಮೊಬೈಲ್​ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.ಬಾಲ್ಯದಿಂದಲೇ ಸ್ನೇಹಿತೆಯಾಗಿ ಶ್ವೇತಾ ಎಂಬಾಕೆಯನ್ನು ಕೆಲವು ವರ್ಷಗಳಿಂದ ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದರು.


ಮದುವೆಯನ್ನು ಎರಡೂ ಕುಟುಂಬದವರು ಅದ್ಧೂರಿಯಾಗಿ ಏರ್ಪಡಿಸಿದ್ದರು. ಮಂಗಳವಾರ (ಸೆ.19) ನವ ದಂಪತಿ ತಮ್ಮ ಮದುವೆಯ ನಂತರ ಮೊದಲ ಬಾರಿಗೆ ದಿಮ್ಮಾವರಂಗೆ ಬಂದರು ಮತ್ತು ಆ ದಿನ ಅವರ ಮೊದಲ ರಾತ್ರಿಯಾಗಿತ್ತು.


ರಾತ್ರಿ 9 ಗಂಟೆಗೆ ದಂಪತಿ ತಮ್ಮ ಕೋಣೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಶ್ವೇತಾಳ ಕಿರುಚಾಟ ಕೇಳಿ ಮನೆಯವರು ಬೆಚ್ಚಿಬಿದ್ದಿದ್ದಾರೆ. ಶ್ವೇತಾ ಕೋಣೆಯಿಂದ ಹೊರಗೆ ಓಡಿ ಪ್ರಜ್ಞೆ ತಪ್ಪಿ ಬಿದ್ದಳು. ಆಕೆಯ ಪಾಲಕರು ಕೊಠಡಿಯೊಳಗೆ ಹೋಗಿ ನೋಡಿದಾಗ ಶ್ವೇತಾಳಮುಹೂರ್ತದ ಸೀರೆಯನ್ನು ಬಳಸಿ ಸರವಣನ್ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.


ಚೆಂಗಲ್ಪಟ್ಟು ತಾಲೂಕು ಪೊಲೀಸರ ತಂಡ ಆತನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಜಿಎಚ್‌ಗೆ ಕಳುಹಿಸಿದೆ.ಮಂಗಳವಾರ ರಾತ್ರಿ ಸರವಣನ್ ತನ್ನ ಪಾಲಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಹನಿಮೂನ್‌ ಪ್ರವಾಸಕ್ಕಾಗಿ ಯೋಜಿಸಿರುವ ಸ್ಥಳಗಳ ಬಗ್ಗೆ ತಿಳಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ಬುಧವಾರದಿಂದಲೇ ಹನಿಮೂನ್​ ಪ್ರವಾಸ ಆರಂಭಿಸಬೇಕಾಗಿತ್ತು. ಅಷ್ಟರಲ್ಲಿ ಈ ದುರ್ಘಟನೆ ನಡೆದಿದೆ. ಮಂಗಳವಾರ ಮೊದಲ ರಾತ್ರಿ ಸರವಣನ್​ ಮುಖದಲ್ಲಿ ಯಾವುದೇ ಆತಂಕ ಅಥವಾ ದುಃಖದ ಲಕ್ಷಣಗಳು ಇರಲಿಲ್ಲ ಎಂದು ಪಾಲಕರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸರವಣನ್​ ಸಾವು ತುಂಬಾ ನಿಗೂಢವಾಗಿದೆ. ಚೆಂಗಲಪಟ್ಟು ತಾಲೂಕು ಪೊಲೀಸರು ಅನುಮಾನಾಸ್ಪದ ಸಾವಿನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಶ್ವೇತಾ ಮತ್ತು ಆಕೆಯ ಪೋಷಕರನ್ನು ವಿಚಾರಣೆ ನಡೆಸುತ್ತಿದ್ದಾರೆ

ವಿಟ್ಲ: ಚಾಲಕನ ನಿಯಂತ್ರಣ ಕಳೆದು ಟಿ.ಟಿ ವಾಹನ ಪಲ್ಟಿ

Posted by Vidyamaana on 2024-01-16 16:20:50 |

Share: | | | | |


ವಿಟ್ಲ: ಚಾಲಕನ ನಿಯಂತ್ರಣ ಕಳೆದು ಟಿ.ಟಿ ವಾಹನ ಪಲ್ಟಿ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.


ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಇವರೆಲ್ಲ ಉಜಿರೆ ಮೂಲದವರಾಗಿದ್ದು, ಶಬರಿಮಲೆ ತೆರಳಿ ಹಿಂತಿರುಗುತ್ತಿದ್ದರು.

ಕಲ್ಲರ್ಪೆಯಲ್ಲಿ ಕಾರು, ಆ್ಯಕ್ಟೀವ್ ಅಪಘಾತ: ಸವಾರ ಇಸ್ಮಾಯಿಲ್ ನೈತ್ತಾಡಿ ಮೃತ್ಯು

Posted by Vidyamaana on 2023-06-20 04:29:42 |

Share: | | | | |


ಕಲ್ಲರ್ಪೆಯಲ್ಲಿ ಕಾರು, ಆ್ಯಕ್ಟೀವ್ ಅಪಘಾತ: ಸವಾರ ಇಸ್ಮಾಯಿಲ್ ನೈತ್ತಾಡಿ ಮೃತ್ಯು

ಪುತ್ತೂರು: ಕಾರು ಹಾಗೂ ಆ್ಯಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಕಲ್ಲರ್ಪೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ನೈತ್ತಾಡಿ ಮೂಲದ ನಿವಾಸಿಯಾಗಿರುವ ಇಸ್ಮಾಯಿಲ್ . ಅಡಿಕೆ ವ್ಯಾಪಾರಸ್ಥರಾಗಿರುವ ಇವರು, ಅಜ್ಜಿಕಟ್ಟೆ ಜಮಾತ್ ಕಮಿಟಿ ಸದಸ್ಯರಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಸುಮಾರು 7 ಗಂಟೆಯ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಸವಾರ ಗಂಭೀರ ಗಾಯಗೊಂಡಿದ್ದರು. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಹಾದಿಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಓರ್ವ ಪುತ್ರ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

Recent News


Leave a Comment: