ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಪುತ್ತೂರು ವಿಧಾನಸಭಾ ಕ್ಷೇತ್ರದ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಎಡ್ವರ್ಡ್ ನೇಮಕ

Posted by Vidyamaana on 2024-03-28 20:08:33 |

Share: | | | | |


ಪುತ್ತೂರು ವಿಧಾನಸಭಾ ಕ್ಷೇತ್ರದ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಎಡ್ವರ್ಡ್ ನೇಮಕ

ಪುತ್ತೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಎನ್‌ಎಸ್‌ಯುಐ ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಎಡ್ವರ್ಡ್ ಪುತ್ತೂರುರವರನ್ನು ಆಯ್ಕೆ ಮಾಡಲಾಗಿದೆ. ಎನ್‌ಎಸ್‌ಯುಐ ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಎಡ್ವರ್ಡ್‌ರವರು ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದು NSUI ವಿದ್ಯಾರ್ಥಿ ಸಂಘಟನೆಯಲ್ಲಿ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಅಮ್ಮಿನಡ್ಕ ನಿವಾಸಿ ಮಿಂಗಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿಯ ಪುತ್ರ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಬಲಾತ್ಕಾರ ಎಸಗಿದ ಪ್ರಕರಣ : ಆರೋಪಿ ಖುಲಾಸೆ

Posted by Vidyamaana on 2023-08-27 05:32:01 |

Share: | | | | |


ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಬಲಾತ್ಕಾರ ಎಸಗಿದ ಪ್ರಕರಣ : ಆರೋಪಿ ಖುಲಾಸೆ

ಪುತ್ತೂರು : ಆರು ವರ್ಷಗಳ ಹಿಂದಿನ ಈ ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಕುದ್ರಡ್ಕ ನಿವಾಸಿ ಪ್ರಶಾಂತ್ ಯಾನೆ ನಾರಾಯಣರವರನ್ನು ಜಿಲ್ಲಾ ನ್ಯಾಯಾಲಯವು ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ.


 ಡಿ 26.2017 ರಂದು ಬೆಳ್ತಂಗಡಿ ತಾಲೂಕು, ಮಚ್ಚಿನ ಗ್ರಾಮದ ಕುದ್ರಡ್ಕ ಎಂಬಲ್ಲಿ ರಾತ್ರಿ ವೇಳೆಯಲ್ಲಿ ಆರೋಪಿಯನ್ನಲಾಗಿದ್ದ ಪ್ರಶಾಂತ್ ಯಾನೆ ನಾರಾಯಣರವರನ್ನು  ರವರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಕೆಯ ಮನೆಯವರು ತಿಳಿಸಿದಂತೆ ನೊಂದ ಬಾಲಕಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದರು. ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 417,376(2)(o),506 ಮತ್ತು ಪೋಕ್ಸೋ  ಕಾಯ್ದೆಯ ಕಲಂ 6 ರ ಅನ್ವಯದಂತೆ ಪ್ರಕರಣ ದಾಖಲಿಸಿದ್ದರು. ತದನಂತರ ತನಿಖೆ ಮುಂದುವರಿಸಿ ಆರೋಪಿ ಎನ್ನಲಾಗಿದ್ದ ಪ್ರಶಾಂತ್ ಯಾನೆ ನಾರಾಯಣರವರನ್ನು ದಸ್ತಗಿರಿ ಮಾಡಿ ತನಿಖೆ ನಡೆಸಿದ್ದರು. ನಂತರ ಪೊಲೀಸರು ಆರೋಪಿಯ ವಿರುದ್ಧ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಮಾನ್ಯ ಉಚ್ಚ ನ್ಯಾಯಾಲಯದ  ಆದೇಶದಂತೆ, ಮಂಗಳೂರಿನ ಎರಡನೇ  ಜಿಲ್ಲಾ  ನ್ಯಾಯಾಲಯದಲ್ಲಿದ್ದ ಪ್ರಕರಣವು  ಈ ಪುತ್ತೂರಿನ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿರುತ್ತದೆ.

 ಹೀಗಿರುವಲ್ಲಿ,ನ್ಯಾಯಾಲಯವು ಈ ಪ್ರಕರಣವನ್ನು ತನಿಖೆಗೆ   ಕೈಗೆತ್ತಿಕೊಂಡು ಸುಮಾರು 22 ಸಾಕ್ಷಿಗಳ ಪೈಕಿ  16 ಸಾಕ್ಷಿಗಳನ್ನು ತನಿಖೆ ನಡೆಸಿತ್ತು. ದೂರಿನ ಸಲ್ಲಿಕೆಯಲ್ಲಿನ ವಿಳಂಬ, ಬಾಲಕಿಯ ವಯಸ್ಸಿನ ಕುರಿತ ವೈರುದ್ದ್ಯ ಹೇಳಿಕೆ ಆರೋಪಿಯು ಈ ಕೃತ್ಯ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ,ಸೂಕ್ತ ವೈಜ್ಞಾನಿಕ ಸಾಕ್ಷ್ಯಧಾರ ಮತ್ತು ದಾಖಲೆಗಳ ಕೊರತೆ, ತನಿಖೆಯಲ್ಲಿನ ವಿರೋಧಾಬಾಸಗಳು, ಇವುಗಳ ಹಿನ್ನೆಯಲ್ಲಿ ಪ್ರಾಸಿಕ್ಯೂಷನ್ ಈ ಪ್ರಕರಣವನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ವಿಫಲಗೊಂಡಿದೆ ಎಂದು ತೀರ್ಮಾನಿಸಿ, ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು  ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತರಾಜು ಎಸ್. ವಿ ರವರು ಆರೋಪಿಯನ್ನು ನಿರ್ದೋಷಿ ಎಂದು ಆದೇಶಿಸಿರುತ್ತಾರೆ. ಆರೋಪಿ ಪರ ವಕೀಲರಾದ ಪುತ್ತೂರಿನ ಕಜೆ ಲಾ ಚೇಂಬರ್ಸ್ ಮಹೇಶ್ ಕಜೆ ಮತ್ತು ಮಂಗಳೂರಿನ ರಾಜೇಶ್ ರೈಯವರು ವಾದಿಸಿದ್ದರು.

ಗುಂಡು ಸೂಜಿ ನುಂಗಿದ ಬಾಲಕ: ಬ್ರಾಂಕೋಸ್ಕೋಪ್ ಮೂಲಕ ಹೊರತೆಗೆದ ರಿಮ್ಸ್ ವೈದ್ಯರು

Posted by Vidyamaana on 2023-12-03 12:26:48 |

Share: | | | | |


ಗುಂಡು ಸೂಜಿ ನುಂಗಿದ ಬಾಲಕ: ಬ್ರಾಂಕೋಸ್ಕೋಪ್ ಮೂಲಕ ಹೊರತೆಗೆದ ರಿಮ್ಸ್ ವೈದ್ಯರು

ರಾಯಚೂರು: ಆಟವಾಡುವ ಭರದಲ್ಲಿ ಬಾಲಕನೊಬ್ಬ ಗುಂಡು ಸೂಜಿ ನುಂಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಸಿರವಾರ ತಾಲೂಕಿನ ಮುಚ್ಚುಳ‌ಗುಡ್ಡ ಕ್ಯಾಂಪ್​ನ 13 ವರ್ಷದ ಬಾಲಕ ಶಿವಕುಮಾರ ದೇವರಾಜ ಶಾಲೆಯಲ್ಲಿ ಆಟವಾಡುವ ವೇಳೆ ನೋಟಿಸ್​ ಬೋರ್ಡ್ ಅಂಟಿಸುವ ಗುಂಡು ಸೂಜಿಯನ್ನು ಬಾಯಿಯಲ್ಲಿ ಇಟ್ಟುಕೊಂಡಾಗ ಆಕಸ್ಮಿಕವಾಗಿ ನುಂಗಿದ್ದಾನೆ. ಪರಿಣಾಮ ಗುಂಡು ಸೂಜಿಯು ಬಲ ಶ್ವಾಸಕೋಶದೊಳಗಡೆ ಸೇರಿತ್ತು. 


ಹೀಗಾಗಿ ಚಿಕಿತ್ಸೆಗಾಗಿ ಬಾಲಕನನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾದ ಬಾಲಕನ ಶ್ವಾಸಕೋಶದ ಎಕ್ಸ್​ ರೇ ಮಾಡಿಸಿದಾಗ ಬಲ ಶ್ವಾಸಕೋಶದಲ್ಲಿ ಸೂಚನಾ ಫಲಕದ ಗುಂಡು ಇರುವುದು ಖಚಿತಪಡಿಸಿಕೊಂಡು, ಆಗ ರಿಮ್ಸ್ ವೈದ್ಯರ ತಂಡ ಬ್ರಾಂಕೋಸ್ಕೋಪ್ ಮೂಲಕ ಗುಂಡು ಸೂಜಿಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. 


ಶಸ್ತ್ರ ಚಿಕಿತ್ಸೆ ತಂಡದಲ್ಲಿ ಇಎನ್‌ಟಿ ತಜ್ಞ ವೈದ್ಯ ಡಾ. ಅರವಿಂದ್ ಸಂಗವಿ, ಅರವಳಿಕೆ ತಜ್ಞ ವೈದ್ಯ ಡಾ.ಕಿರಣ ನಾಯಕ, ಡಾ. ಮಲ್ಲಿಕಾರ್ಜುನ್ .ಕೆ ಪಾಟೀಲ್, ಡಾ.ಸಿಂಧು ಪಿಜಿ, ಡಾ.ಇಂದುಮಣಿ, ನರ್ಸಿಂಗ್ ಅಧಿಕಾರಿ ಅಮರೇಶ್ ಸಕ್ರಿ, ಓಟಿ ತಂತ್ರಜ್ಞರಾದ ಲಿಂಗರಾಜ್, ಸುಮನ್ ಕ್ಲ್ಯಾರಿ, ನಾರಾಯಣ, ಶಂಕರ ಸೇರಿದಂತೆ ಇನ್ನಿತರಿದ್ದರು.


ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಪೀರಾಪುರ್, ರಿಮ್ಸ್ ಮೆಡಿಕಲ್ ಕಾಲೇಜ ಪ್ರಾಂಶುಪಾಲ ಡಾ.ಬಸವರಾಜ್ ಎಂ ಪಾಟೀಲ್, ವೈದ್ಯಕೀಯ ಅಧೀಕ್ಷಕ ಡಾ.ಭಾಸ್ಕರ್ ಕೆಂಪೇಗೌಡ, ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ.ವೆಂಕಟೇಶ್ ಹಾಗೂ ಅರವಳಿಕೆ ಮುಖ್ಯಸ್ಥ ಡಾಕ್ಟರ್ ನಂದನ್ ಪಡಶೆಟ್ಟಿ, ಓಟಿ ಇಂಚಾರ್ಜ್ ಶುಶ್ರುಷಕ ಮೇಲ್ವಿಚಾರಕಿ ಆಶಾ ಹುಂಬಿ ಅತ್ಯುತ್ತಮ ಉಪಕರಣಗಳನ್ನು ಆಸ್ಪತ್ರೆಗೆ ಒದಗಿಸಿ ಶಸ್ತ್ರ ಚಿಕಿತ್ಸೆ ಯಶಸ್ವಿಗೊಳಿಸಿದ್ದಕ್ಕೆ ಇವರಿಗೆಲ್ಲ ಬಾಲಕನ ಕುಟುಂಬಸ್ಥರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಸದ್ಯ ಶಿವಕುಮಾರ ಆರಾಮವಾಗಿ ಶಸ್ತ್ರಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾನೆ.ಸೇಫ್ಟಿ ಪಿನ್ ನುಂಗಿದ್ದ 5 ತಿಂಗಳ ಮಗು: ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿತ್ತು. 5 ತಿಂಗಳ ಮಗು ಅಚಾನಕ್​ ಆಗಿ ಸೇಫ್ಟಿ ಪಿನ್ ನುಂಗಿತ್ತು. ಇದು ಪೋಷಕರಿಗೆ ತಿಳಿದಿರಲಿಲ್ಲ. ಮಗುವಿಗೆ ಉಸಿರಾಟದ ತೊಂದರೆಯಾಗಲು ಆರಂಭವಾದಾಗ ಅವರು ಮಗುವನ್ನು ಕರೆದುಕೊಂಡು ಸಮೀಪ ವೈದ್ಯರ ಬಳಿ ಹೋದಾಗ ಶೀತ ಭಾದೆ ಉಂಟಾಗಿದೆ ಎಂದು ಚಿಕಿತ್ಸೆ ನೀಡಲು ಆರಂಭಿಸಿದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಕೋಲ್ಕತ್ತಾ ವೈದ್ಯಕೀಯ ಕಾಲೇಜಿಗೆ ದಾಖಲಿಸಿದರು. ಅಲ್ಲಿ ವೈದ್ಯರು ಎಕ್ಸ್ - ರೇ ಮಾಡಿದಾಗ ಶ್ವಾಸನಾಳದಲ್ಲಿ ಉದ್ದನೆಯ ಸೇಫ್ಟಿ ಪಿನ್​ ಸಿಲುಕಿರುವುದು ಗೊತ್ತಾಗಿದೆ. ಫಿನ್​ನ ಚುಪಾದ ಒಂದು ತುದಿ ಬಾಯ್ತೆರೆದುಕೊಂಡಿರುವುದನ್ನೂ ಕಂಡುಕೊಂಡರು. ಹೀಗಾಗಿ ಮಗುವಿಗೆ 40 ನಿಮಿಷದ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನೆರವೇರಿಸಿ ಪಿನ್ ಅ​ನ್ನು ಹೊರತೆಗೆದು ಮಗುವಿನ ಪ್ರಾಣ ಉಳಿಸಿದ್ದರು.

ಅಳಿಕೆ ಗ್ರಾಮದ ಮುಳಿಯದಲ್ಲಿ ಪ್ರಚಾರ ಸಭೆ

Posted by Vidyamaana on 2023-05-01 05:37:43 |

Share: | | | | |


ಅಳಿಕೆ ಗ್ರಾಮದ ಮುಳಿಯದಲ್ಲಿ ಪ್ರಚಾರ ಸಭೆ

ಪುತ್ತೂರು: ಕಳೆದ 5 ವರ್ಷಗಳಲ್ಲಿ ಬಿಜೆಪಿ ಮಾಡಿದ ಅಭಿವೃದ್ದಿ ಕೆಲಸವನ್ನು ಜನತೆಗೆ ತಿಳಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸವಾಲು ಹಾಕಿದರು. ಅಲ್ಲೊ ಇಲ್ಲೋ ಕೆಲವು ಕಡೆ ರಸ್ತೆಗೆ ಡಾಮಾರು,ಸಿಮೆಂಟ್ ಹಾಕಿದ್ದನ್ನು ಬಿಟ್ಟರೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆಯೇ . ಅಕ್ರಮ ಸಕ್ರಮ ಕಡತಗಳನ್ನು ಹಣ ಕೊಡದೆ ವಿಲೇವಾರಿ ಮಾಡಿದ್ದಾರ? ಬಡವರ ಕಣ್ಣೀರೊರೆಸುವ ಕೆಲಸವನ್ನು ಬಿಜೆಪಿ ಮಾಡಿಯೇ ಇಲ್ಲ. 40% ಕಮಿಷನ್ ಹೊಡೆಯುವ ಉದ್ದೇಶದಿಂದ ಹೆಚ್ಚು ಅನುದಾನವನ್ನು ರಸ್ತೆಗೆ ಬಳಕೆ ಮಾಡಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಮನೆ ಮಂಜೂರು ಮಾಡಿಸಿಲ್ಲ. ಸಾವಿರಾರು ಕುಟುಂಬಗಳು ಸರಕಾರದ ವಸತಿ ಯೋಜನೆಯಲ್ಲಿ ಮನೆ ನಿವೇಶನಕ್ಕೆ ಅರ್ಜಿ ಹಾಕಿದರೂ ಬಿಜೆಪಿ ಸರಕಾರ ಮನೆ ನೀಡಿಲ್ಲ ಇದು ಬಡವರಿಗೆ ಮಾಡಿದ ಮಹಾದ್ರೋಹವಾಗಿದೆ ಎಂದು ಹೇಳಿದರು. ಸಭೆಯಲ್ಲಿ  ಕೆಪಿಸಿ ಲಸ ಸದಸ್ಯಎಂ ಎಸ್ ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಪ್ರವೀಣ್ಚಂದ್ರ ಆಳ್ವ, ಪೆರುವಾಯಿ ಗ್ರಾಪಂ ಮಾಜಿ ಅಧ್ಯಕ್ಷೆ ಪುಷ್ಪಾ, ಬ್ಲಾಕ್ ಅಧ್ಯಕ್ಷರಾದ ಡಾ.ರಾಜರಾಂ ಕೆ ಬಿ, ವೇದನಾಥ ಸುವರ್ಣ,ಅಳಿಕೆ ಗ್ರಾಪಂ ಉಪಾಧ್ಯಕ್ಷ ಜಗದೀಶ್ ಶೆಟ್ಟಿ, ಅಳಿಕೆ ಗ್ರಾಪಂ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಅಭ್ಯರ್ಥಿಗಳ ಫಸ್ಟ್ ಪಟ್ಟಿ ರಿಲೀಸ್ ಸುದ್ದಿ ಫೇಕ್ – ಈ ಫೆಕ್ ಪಟ್ಟಿಯಲ್ಲಿ ಯಾರಿಗೆಲ್ಲಾ ಸಿಕ್ಕಿತ್ತು ಟಿಕೆಟ್!?

Posted by Vidyamaana on 2023-04-04 10:03:55 |

Share: | | | | |


ಬಿಜೆಪಿ ಅಭ್ಯರ್ಥಿಗಳ ಫಸ್ಟ್ ಪಟ್ಟಿ ರಿಲೀಸ್ ಸುದ್ದಿ ಫೇಕ್ – ಈ ಫೆಕ್ ಪಟ್ಟಿಯಲ್ಲಿ ಯಾರಿಗೆಲ್ಲಾ ಸಿಕ್ಕಿತ್ತು ಟಿಕೆಟ್!?

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಈ ಮಧ್ಯೆ ವಿವಿಧ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳ ಎದೆಬಡಿತವೂ ನಾರ್ಮಲ್ ಗಿಂತ ಜಾಸ್ತಿನೇ ಇದೆ. ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಫರ್ಸ್ಟ್ ಲಿಸ್ಟ್ ಬಿಡುಗಡೆಗೊಳಿಸಿದ್ದು, ಜೆಡಿಎಸ್ ಸಹ ತನ್ನ ಅಭ್ಯರ್ಥಿಗಳನ್ನು ಬಹುತೇಕ ಫೈನಲ್ ಮಾಡಿದೆ. ಆದ್ರೆ ಕ್ಯಾಡಿಂಡೇಟ್ ಸೆಲೆಕ್ಷನ್ ವಿಚಾರದಲ್ಲಿ ಬಿಜೆಪಿ ಮಾತ್ರ ಅಳೆದು ತೂಗಿ ನೋಡುವುದ್ರಲ್ಲೇ ಇದೆ.


ಈ ನಡುವೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಒಂದು ಸಂಚಲನ ಉಂಟಾಯ್ತು. ಭಾರತೀಯ ಜನತಾ ಪಾರ್ಟಿ ವಿಧಾನ ಸಭಾ ಚುನಾವಣೆಗಾಗಿ 100 ಜನರ ಪಟ್ಟಿಯನ್ನು ರಿಲೀಸ್ ಮಾಡಿದ್ದು ವಿವಿಧ ದ.ಕ., ಉಡುಪಿ ಸೇರಿದಂತೆ ರಾಜ್ಯದ ಒಟ್ಟು 100 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯ ಹೆಸರಿರುವ ಪಟ್ಟಿಯ ಪಿಡಿಎಫ್ ಫೈಲೊಂದು ಹರಿದಾಡ್ತಿದೆ. 

ಈ ಪಟ್ಟಿಯಲ್ಲಿರುವಂತೆ ಪುತ್ತೂರಿಗೆ ಸಂಜೀವ ಮಠಂದೂರು, ಸುಳ್ಯ ಕ್ಷೇತ್ರಕ್ಕೆ ಅಂಗಾರ, ಬೆಳ್ತಂಗಡಿಗೆ ಹರೀಶ್ ಪೂಂಜಾ ಮತ್ತು ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ವೇದವ್ಯಾಸ ಕಾಮತ್ ಹೆಸರುಗಳನ್ನೇ ಫೈನಲ್ ಮಾಡಲಾಗಿದೆ. ಆದ್ರೆ ಸದ್ಯ ಡಾ. ಭರತ್ ಶೆಟ್ಟಿ ಪ್ರತಿನಿಧಿಸ್ತಿರೋ ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ!

ಈ ಪಟ್ಟಿಯಲ್ಲಿರೋ ಇನ್ನೊಂದು ಮೇಜರ್ ಶಾಕ್ ಏನಪ್ಪಾ ಅಂದ್ರೆ ತೀವ್ರ ಕುತೂಹಲ ಕೆರಳಿಸಿದ್ದ ಕಾರ್ಕಳ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಬದಲಿಗೆ ಪ್ರಮೋದ್ ಮುತಾಲಿಕ್ ಅವರಿಗೆ ಪಕ್ಷ ಟಿಕೆಟ್ ನೀಡಿದ್ದು ಸುನಿಲ್ ಅವರನ್ನು ಉಡುಪಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇನ್ನುಳಿದಂತೆ ಯಾರ್ಯಾರಿಗೆ ಪಕ್ಷ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದೆ ಎಂಬುದನ್ನು ನೀವೇ ಚೆಕ್ ಮಾಡ್ಕೊಳ್ಳಿ..!

ವಿಶೇಷವಂದ್ರೆ ಬಿಜೆಪಿಯ ಕೇಂದ್ರ ಕಚೇರಿಯ ಹೆಸ್ರಿನಲ್ಲಿ ರಿಲೀಸ್ ಆಗಿರೋ ಈ ಪಟ್ಟಿಯಲ್ಲಿ ಪ್ರತೀ ಪೇಜಿನಲ್ಲಿ ಪಕ್ಷದ ಸೀಲ್ ಮತ್ತು ನ್ಯಾಷನಲ್ ಜನರಲ್ ಸೆಕ್ರೆಟರಿ ಅರುಣ್ ಸಿಂಗ್ ಅವರ ಸಹಿಯೂ ಇದೆ. ಆದರೆ ಈ ಪಟ್ಟಿ ಫೇಕ್ ಎನ್ನಲಾಗುತ್ತಿದ್ದು . ಏನೇ ಆದ್ರೂ ಬಿಜೆಪಿಯ ಒರಿಜಿನಲ್ ಪಟ್ಟಿ ರಿಲೀಸ್ ಆದ್ಮೇಲೆ ಈ ‘ಫೇಕ್’ ಪಟ್ಟಿಯೊಂದಿಗೆ ಕಂಪೇರ್ ಮಾಡ್ಕೊಳ್ಳಿ...!

ರಾಜ್ಯದಲ್ಲಿ ನಡೆಯುತ್ತಿದೆ ಭಾರತೀಯ ಸೇನಾ ದಿನಾಚರಣೆ : ಬೆಂಗಳೂರಿನಲ್ಲಿ ನಡೆಯಲಿದೆ ಪಥ ಸಂಚಲನ

Posted by Vidyamaana on 2023-01-19 03:44:43 |

Share: | | | | |


ರಾಜ್ಯದಲ್ಲಿ ನಡೆಯುತ್ತಿದೆ ಭಾರತೀಯ ಸೇನಾ ದಿನಾಚರಣೆ : ಬೆಂಗಳೂರಿನಲ್ಲಿ ನಡೆಯಲಿದೆ ಪಥ ಸಂಚಲನ

ಭಾರತದ ಗೌರವದ ಪ್ರತೀಕ ಭಾರತೀಯ ಸೇನೆ. ವಿಶ್ವದ ಬಲಿಷ್ಠ ಸೈನ್ಯಗಳ ಪೈಕಿ ಭಾರತವೂ ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡಿದೆ. ಆದ್ದರಿಂದ ಸೇನಾ ದಿನಾಚರಣೆ ಎಂದರೆ ಎಲ್ಲರಿಗೂ ಪುಳಕ. ಈ ವರ್ಷ ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನ ಆಯೋಜನೆಗೊಳ್ಳುತ್ತಿದೆ ಎನ್ನುವುದೇ ಹೆಮ್ಮೆಯ ವಿಷಯ.

     ಪ್ರತೀ ವರ್ಷವೂ ಜನವರಿ 15ರಂದು ಆಯೋಜನೆಗೊಳ್ಳುವ ಭಾರತೀಯ ಸೇನಾ ದಿನಾಚರಣೆ ಈ ವರ್ಷ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿದೆ. ವಿಶೇಷವಾಗಿ, ಈ ವರ್ಷ ಭಾರತೀಯ ಸೇನಾ ದಿನಾಚರಣೆಯ 75ನೇ ವರ್ಷಾಚರಣೆ ರಾಷ್ಟ್ರ ರಾಜಧಾನಿ ದಿಲ್ಲಿಯಿಂದ ಹೊರಗಡೆ ನಡೆಯುತ್ತಿದೆ.

       ಕರ್ನಾಟಕ ಮತ್ತು ಕೇರಳ ಉಪ ಪ್ರಾಂತದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಆಗಿರುವ ಮೇಜರ್ ಜನರಲ್ ರವಿ ಮುರುಗನ್ ಅವರು ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ (ಎಂಇಜಿ) ಕೇಂದ್ರ ಬೆಂಗಳೂರಿನಲ್ಲಿ ಮಾತನಾಡುತ್ತಾ, ಈ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದಿದ್ದಾರೆ. ಎಂಇಜಿ ಕೇಂದ್ರ ಸೇನಾ ದಿನಾಚರಣೆಯ ಪರೇಡಿನ ಸ್ಥಳವಾಗಿರಲಿದ್ದು, ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯಾಚರಿಸಲಿದೆ ಎನ್ನುತ್ತಾರವರು.

      ಪಥ ಸಂಚಲನದಲ್ಲಿ ಒಟ್ಟು ಎಂಟು ವಿಭಾಗಗಳಿರಲಿದ್ದು, ಅವುಗಳಲ್ಲಿ ಒಂದು ಆರ್ಮಿ ಸರ್ವಿಸ್ ಕಾರ್ಪ್ಸ್ನ ಅಶ್ವದಳವೂ ಸೇರಿದೆ. ಅದರೊಡನೆ, ಐದು ರೆಜಿಮೆಂಟುಗಳ ಬ್ರಾಸ್ ಬ್ಯಾಂಡ್ಗಳ ಸಮ್ಮಿಲಿತವಾದ ಮಿಲಿಟರಿ ಬ್ಯಾಂಡ್ ಸಹ ಕಾರ್ಯಾಚರಿಸಲಿದೆ. ಈ ಎಂಟರಲ್ಲಿ ಪ್ರತಿಯೊಂದು ವಿಭಾಗವೂ ಬೇರೆ ಬೇರೆ ರೆಜಿಮೆಂಟ್ಗಳನ್ನು ಪ್ರತಿನಿಧಿಸಲಿದೆ. ಪ್ರತಿಯೊಂದು ರೆಜಿಮೆಂಟಿಗೂ ಅದರದೇ ಆದ ಸುಪ್ರಸಿದ್ಧ ಇತಿಹಾಸ ಮತ್ತು ಪರಂಪರೆಗಳಿವೆ. ಸೇನಾ ದಿನದ ಪಥಸಂಚಲನಕ್ಕೆ ಬೆಂಬಲವಾಗಿ, ಆರ್ಮಿ ಏವಿಯೇಷನ್ನ ಧ್ರುವ್ ಹಾಗೂ ರುದ್ರ ಹೆಲಿಕಾಪ್ಟರ್ಗಳು ಫ್ಲೈ ಬೈ ಹಾರಾಟ ಪ್ರದರ್ಶಿಸಲಿವೆ.


ಸೇನಾ ದಿನಾಚರಣೆಯ ಬಗ್ಗೆ ಒಂದಿಷ್ಟು...

       ಜನವರಿ 15, 1949ರಂದು ಫೀಲ್ಡ್ ಮಾರ್ಷಲ್ ಕೊಡಂದೇರ ಎಂ. ಕಾರ್ಯಪ್ಪ ಅವರು ಕೊನೆಯ ಬ್ರಿಟಿಷ್ ಜನರಲ್ ಫ್ರಾನ್ಸಿಸ್ ಬುಚರ್ ಅವರಿಂದ ಸೇನಾ ಮಹಾದಂಡನಾಯಕರಾಗಿ ಅಧಿಕಾರ ಸ್ವೀಕರಿಸಿದರು. ಈ ಭಡ್ತಿಯ ಬಳಿಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪಅವರು ಭಾರತೀಯ ಸೇನೆಯ ಪ್ರಥಮ ಕಮಾಂಡರ್ ಇನ್ ಚೀಫ್ ಆಗಿ ನೇಮಕಗೊಂಡರು. ಈ ದಿನವನ್ನು ಸ್ಮರಿಸಲು ಪ್ರತಿವರ್ಷ ಜನವರಿ 15ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ.

ಪಥ ಸಂಚಲನ, ಪದಕ ಪ್ರದಾನ, ಮಿಲಿಟರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ದಿನ ಹೊಸದಿಲ್ಲಿ ಮತ್ತು ಇತರ ಆರ್ಮಿ ಕಮಾಂಡ್ ಮುಖ್ಯ ಕಚೇರಿಗಳಲ್ಲಿ ನಡೆಯುತ್ತವೆ.

1947ರಲ್ಲಿ ಭಾರತ ಸಾರ್ವಭೌಮತ್ವವನ್ನು ಪಡೆದುಕೊಂಡಿತು. ಬಹುತೇಕ ಎರಡು ಶತಮಾನಗಳ ಬ್ರಿಟಿಷ್ ಆಡಳಿತದಿಂದ ಭಾರತ ಮುಕ್ತವಾಯಿತು. ಆ ಸಂದರ್ಭದಲ್ಲಿ ದೇಶ ವಿಭಜನೆ ನಡೆದು, ಪಾಕಿಸ್ತಾನದಿಂದ ಸಾಕಷ್ಟು ನಿರಾಶ್ರಿತರು ಭಾರತಕ್ಕೆ ಬರುತ್ತಿದ್ದರು. ಆಗ ದೇಶಾದ್ಯಂತ ಅಸ್ಥಿರತೆ ಎದುರಾಗಿತ್ತು.

ಆಡಳಿತ ಅಸ್ಥಿರತೆಯ ಕಾರಣದಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು, ಶಾಂತಿ ಸ್ಥಾಪಿಸಲು ಸೇನೆ ಮಧ್ಯ ಪ್ರವೇಶಿಸಬೇಕಾಗಿತ್ತು. ಈ ಸಂದರ್ಭದಲ್ಲಿ ಕೆ.ಎಂ. ಕಾರ್ಯಪ್ಪನವರನ್ನು ಸೇನಾ ಮುಖ್ಯಸ್ಥರಾಗಿ ನೇಮಿಸಲಾಯಿತು.


ಕಾರ್ಯಪ್ಪನವರು 1899ರಲ್ಲಿ ಕರ್ನಾಟಕದ ಕೊಡಗಿನಲ್ಲಿ ಜನಿಸಿದರು. ಅವರ ತಂದೆ ಮಾದಪ್ಪಕಂದಾಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ಸ್ಯಾಮ್ ಮಾಣಿಕ್ ಶಾ ಅವರೊಡನೆ ಐದು ಸ್ಟಾರ್ಗಳ ಫೀಲ್ಡ್ ಮಾರ್ಷಲ್ ಹುದ್ದೆಗೆ ನೇಮಕಗೊಂಡರು. ಅವರು ಭಾರತದ ಪ್ರಥಮ ಸೇನಾ ಮಹಾದಂಡನಾಯಕರಾಗಿ ನೇಮಕಗೊಳ್ಳುವ ಮತ್ತು ಫೈವ್ ಸ್ಟಾರ್ ಜನರಲ್ ಆಗಿರುವುದನ್ನು ಹೊರತುಪಡಿಸಿ, ಅವರು ಭಾರತೀಯ ಸೇನೆ ಆರಂಭಗೊಂಡ ಅವಧಿಯಲ್ಲಿ ಸೇರ್ಪಡೆಗೊಂಡಿದ್ದವರಲ್ಲಿ ಒಬ್ಬರಾಗಿದ್ದರು.


ಫೀಲ್ಡ್ ಮಾರ್ಷಲ್ ಕಾರ್ಯಪ್ಪ

ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರು ಪದವಿ ಗಳಿಸಿದ ಬಳಿಕ ಡಿಸೆಂಬರ್ 1, 1919ರಂದು ತಾತ್ಕಾಲಿಕ ಸೇನಾ ಸೇರ್ಪಡೆ ಪಡೆದುಕೊಂಡರು. ಅವರನ್ನು ಸೇನೆಗೆ ಸೆಪ್ಟಂಬರ್ 9, 1922ರಂದು, ಜುಲೈ 17, 1920ರಿಂದ ಜಾರಿಗೆ ಬರುವಂತೆ ಶಾಶ್ವತ ಸೇರ್ಪಡೆಗೊಳಿಸಲಾಯಿತು. ಇದನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪಅವರು ತನ್ನೊಡನೆ ಜುಲೈ 16, 1920ರಂದು ಪದವಿ ಪಡೆದ ಬ್ರಿಟಿಷ್ ಅಧಿಕಾರಿಗಳಿಂದ ಕೆಳಗಿನ ರ್ಯಾಂಕಿಂಗ್ ಪಡೆಯುವಂತೆ ಮಾಡುವ ಉದ್ದೇಶದಿಂದ ಮಾಡಲಾಗಿತ್ತು. ಮೇ 1920ರಲ್ಲಿ ಕಾರ್ಯಪ್ಪನವರನ್ನು 2/125 ನೇಪಿಯರ್ ರೈಫಲ್ಸ್ ಗೆ ವರ್ಗಾಯಿಸಲಾಯಿತು. ಆ ಪಡೆಯನ್ನು ಮೆಸಪೊಟಾಮಿಯಾಗೆ (ಇಂದಿನ ಇರಾಕ್) ಸ್ಥಳಾಂತರಿಸಲಾಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರು ಭಾರತಕ್ಕೆ ಬಂದ ಬಳಿಕ ಜೂನ್ 1922ರಲ್ಲಿ 7ನೇ ಪ್ರಿನ್ಸ್ ಆಫ್ ವೇಲ್ಸ್ ಡೋಗ್ರಾ ರೆಜಿಮೆಂಟಿಗೆ ನೇಮಿಸಲಾಯಿತು. ಜೂನ್ 1923ರಲ್ಲಿ ಅವರು 1/7 ರಜಪೂತ್ ರೆಜಿಮೆಂಟಿಗೆ ನೇಮಕಗೊಂಡರು. ಅದು ಅವರ ಶಾಶ್ವತ ರೆಜಿಮೆಂಟ್ ಆಯಿತು.

1925ರಲ್ಲಿ ಕಾರ್ಯಪ್ಪನವರು ಯುರೋಪ್, ಅಮೆರಿಕ, ಜಪಾನ್, ಚೀನಾ ಹಾಗೂ ಇತರ ದೇಶಗಳ ಪ್ರವಾಸ ನಡೆಸಿದರು. ಅವರು ಈ ಪ್ರವಾಸದಲ್ಲಿ ಹಲವು ದೇಶಗಳ ಸೈನಿಕರು ಮತ್ತು ನಾಗರಿಕರನ್ನು ಭೇಟಿ ಮಾಡಿದ್ದು, ಅವರಿಗೆ ಹೊಸ ಜ್ಞಾನ ನೀಡಿತ್ತು. ಅವರು ಫತೇಗರ್ನಲ್ಲಿ ಕಾರ್ಯ ನಿರ್ವಹಿಸುವಾಗ ಓರ್ವ ಬ್ರಿಟಿಷ್ ಅಧಿಕಾರಿಯ ಪತ್ನಿ ಅವರಿಗೆ ‘ಕಿಪ್ಪರ್’ ಎಂಬ ಅಡ್ಡ ಹೆಸರು ನೀಡಿದರು. 1927ರಲ್ಲಿ ಅವರು ಕ್ಯಾಪ್ಟನ್ ಆಗಿ ಪದೋನ್ನತಿ ಪಡೆದರೂ, ಅದನ್ನು ಸಾರ್ವಜನಿಕವಾಗಿ 1931ರ ತನಕ ಪ್ರಕಟಿಸಿರಲಿಲ್ಲ.

1947ರಲ್ಲಿ ಕಾರ್ಯಪ್ಪ ಯುನೈಟೆಡ್ ಕಿಂಗ್ಡಮ್ನ ಇಂಪೀರಿಯಲ್ ಡಿಫೆನ್ಸ್ ಕಾಲೇಜ್ನಲ್ಲಿ ತರಬೇತಿಗೆ ದಾಖಲಾದ ಪ್ರಥಮ ಭಾರತೀಯ ಎನಿಸಿಕೊಂಡರು. ಭಾರತ ಸ್ವತಂತ್ರಗೊಂಡ ಬಳಿಕ, ಕಾರ್ಯಪ್ಪನವರನ್ನು ಮೇಜರ್ ಜನರಲ್ ರ್ಯಾಂಕ್ನೊಂದಿಗೆ ಡೆಪ್ಯುಟಿ ಚೀಫ್ ಆಫ್ ಜನರಲ್ ಸ್ಟಾಫ್ ಆಗಿ ನೇಮಿಸಲಾಯಿತು. ಪಾಕಿಸ್ತಾನದೊಡನೆ ಯುದ್ಧ ಆರಂಭವಾದ ಬಳಿಕ, ಅವರನ್ನು ಈಸ್ಟರ್ನ್ ಆರ್ಮಿ ಕಮಾಂಡರ್ ಹಾಗೂ ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೆಸ್ಟರ್ನ್ ಕಮಾಂಡ್ ಆಗಿ ಭಡ್ತಿಗೊಳಿಸಲಾಯಿತು.

1947ರ ಭಾರತ ಪಾಕ್ ಯುದ್ಧದಲ್ಲಿ ಕಾರ್ಯಪ್ಪನವರು ಭಾರತದ ಪಶ್ಚಿಮ ಪಡೆಗಳನ್ನು ಮುನ್ನಡೆಸಿದರು. ಬಳಿಕ ಅವರನ್ನು ಸೇನಾ ಮುಖ್ಯಸ್ಥರಾಗಿ ನೇಮಿಸಲಾಯಿತು. ಅವರು ಕಾರ್ಗಿಲ್ ಪ್ರಾಂತವನ್ನು ಮರುವಶಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅದೊಂದು ಮಹತ್ತರ ಸಾಧನೆಯಾಗಿತ್ತು.

ಕಾರ್ಯಪ್ಪನವರು ಕಮಾಂಡರ್ ಇನ್ ಚೀಫ್ ಹುದ್ದೆಯಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿ, ಜನವರಿ 14, 1953ರಂದು ನಿವೃತ್ತರಾದರು. ಅವರು ನಿವೃತ್ತಿ ಪಡೆಯುವ ಮುನ್ನ, ಅವರ ಮೊದಲ ರೆಜಿಮೆಂಟ್ ಆಗಿದ್ದ ರಜಪೂತ್ ರೆಜಿಮೆಂಟಲ್ ಕೇಂದ್ರಕ್ಕೆ ಬೀಳ್ಕೊಡುಗೆ ಭೇಟಿ ನೀಡಿದರು. ಅವರು ನಿವೃತ್ತರಾದ ಬಳಿಕ 1956ರ ತನಕ ಆಸ್ಟ್ರೇಲಿಯಾ ಹಾಗೂ ನ್ಯೂಝಿಲ್ಯಾಂಡ್ ಗಳಲ್ಲಿ ಭಾರತೀಯ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದರು.


ವೈಯಕ್ತಿಕ ಜೀವನ

ಮಾರ್ಚ್ 1937ರಲ್ಲಿ ಕಾರ್ಯಪ್ಪನವರು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರ ಮಗಳಾದ ಮುತ್ತು ಮಾಚಯ್ಯನವರನ್ನು ವಿವಾಹವಾದರು. ಅವರಿಗೆ ಒಬ್ಬ ಮಗ ಮತ್ತು ಒಬ್ಬಳು ಮಗಳಿದ್ದು, ಅವರ ಮಗ ಏರ್ ಮಾರ್ಷಲ್ ಕೆ.ಸಿ. ನಂದಾ ಕಾರ್ಯಪ್ಪಸಹ ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದರು.

ಅವರಿಗೆ ಗೌರವಾರ್ಥವಾಗಿ ‘ಆರ್ಡರ್ ಆಫ್ ದ ಕಮಾಂಡರ್ ಇನ್ ಚೀಫ್ ಆಫ್ ದ ಲೀಜನ್ ಆಫ್ ಮೆರಿಟ್’ ನೀಡಲಾಯಿತು. 1993ನೇ ಇಸವಿಯಲ್ಲಿ, ತನ್ನ 94ನೇ ವಯಸ್ಸಿನಲ್ಲಿ ಕಾರ್ಯಪ್ಪನವರು ಬೆಂಗಳೂರಿನಲ್ಲಿ ವಿಧಿವಶರಾದರು. ಶಿಸ್ತಿನ ವ್ಯಕ್ತಿಯಾಗಿದ್ದ ಅವರ ಕೊಡುಗೆಗಳನ್ನು ಸೇನಾ ದಿನಾಚರಣೆಯ ಮೂಲಕ ನೆನಪಿಸಿ, ಗೌರವಿಸಲಾಗುತ್ತದೆ. ಅವರು ತನ್ನ ದೇಶಭಕ್ತಿಯ ಕಾರ್ಯಗಳಿಂದ ತಲೆಮಾರುಗಳ ಕಾಲ ಆದರ್ಶವಾಗಿ ಉಳಿದಿದ್ದಾರೆ.



Leave a Comment: