ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಎ.10ರಂದು (ಬುಧವಾರ) ಈದುಲ್ ಫಿತ್‌ರ್ : ದ.ಕ.ಜಿಲ್ಲಾ ಖಾಝಿ

Posted by Vidyamaana on 2024-04-09 19:30:04 |

Share: | | | | |


ಎ.10ರಂದು (ಬುಧವಾರ) ಈದುಲ್ ಫಿತ್‌ರ್ : ದ.ಕ.ಜಿಲ್ಲಾ ಖಾಝಿ

ಮಂಗಳೂರು, ಎ.9: ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್‌ ಫಿತ್‌ರ್ 

ಪುತ್ತೂರು ನಗರಸಭಾ ಉಪಚುನಾವಣೆ : ತೆರವಾದ ಎರಡು ಸ್ಥಾನಗಳಿಗೆ ಇಂದು (ಡಿ. 27)ಚುನಾವಣೆ

Posted by Vidyamaana on 2023-12-27 10:05:49 |

Share: | | | | |


ಪುತ್ತೂರು ನಗರಸಭಾ ಉಪಚುನಾವಣೆ : ತೆರವಾದ ಎರಡು ಸ್ಥಾನಗಳಿಗೆ ಇಂದು (ಡಿ. 27)ಚುನಾವಣೆ

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ (ಡಿ.27) ಉಪಚುನಾವಣೆ ನಡೆಯಲಿದೆ.ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆಗೆ ಕೆಲ ಗಂಟೆಗಳಷ್ಟೇ ಬಾಕಿಯಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಪಕ್ಷೇತರರಾಗಿ ಚುನಾವಣಾ ಕಣದಲ್ಲಿದ್ದಾರೆ.


ವಾರ್ಡ್-11 ನೆಲ್ಲಿಕಟ್ಟೆಯ ಉಪಚುನಾವಣೆಯು ಕೊಂಬೆಟ್ಟು ಶಾಲೆಯಲ್ಲಿ ಹಾಗೂ ವಾರ್ಡ್-1 ರಕ್ತೇಶ್ವರಿ ವಠಾರದ ಉಪಚುನಾವಣೆಯು ಸುದಾನಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ.ಅಭ್ಯರ್ಥಿಗಳ ವಿವರ :


ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ, ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಕಣದಲ್ಲಿದ್ದಾರೆ.

ಕಾಂಗ್ರೆಸ್ ನಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ದಿನೇಶ್ ಶೇವಿರೆ ಹಾಗೂ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ದಾಮೋದರ ಭಂಡಾರ್ಕರ್ ಕಣದಲ್ಲಿದ್ದಾರೆ.

ಪುತ್ತಿಲ ಪರಿವಾರದಿಂದ ವಾರ್ಡ್ 11 ರ ಅಭ್ಯರ್ಥಿಯಾಗಿ ಚಿಂತನ್ ಪಿ., ವಾರ್ಡ್ 1 ರ ಅಭ್ಯರ್ಥಿಯಾಗಿ ಅನ್ನಪೂರ್ಣ ಎಸ್.ಕೆ. ಕಣದಲ್ಲಿದ್ದಾರೆ.



(ಡಿ.27) ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದ್ದು, ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.


ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.

ಪುತ್ತೂರು : ರಾಂಗ್ ಸೈಡ್ ನಲ್ಲಿ ವಿದ್ಯಾರ್ಥಿಗಳ ತ್ರಿಬಲ್ ರೈಡ್ : ಕಾರುಗಳಿಗೆ ಡಿಕ್ಕಿ

Posted by Vidyamaana on 2024-05-17 13:46:03 |

Share: | | | | |


ಪುತ್ತೂರು : ರಾಂಗ್ ಸೈಡ್ ನಲ್ಲಿ ವಿದ್ಯಾರ್ಥಿಗಳ ತ್ರಿಬಲ್ ರೈಡ್ : ಕಾರುಗಳಿಗೆ ಡಿಕ್ಕಿ

ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ರಾಂಗ್ ಸೈಡ್ ನಿಂದ ಬಂದು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆ ಸಮೀಪ ನಡೆದಿದೆ.

ಮೈಮೇಲೆ ಪ್ರೇತ ಬರುವ ನೆಪ: 3 ತಿಂಗಳಿನಿಂದ ಕತ್ತಲ ಕೋಣೆಯಲ್ಲಿ ದಿಗ್ಭಂಧನವಾಗಿದ್ದ ಮಹಿಳೆಯ ರಕ್ಷಣೆ

Posted by Vidyamaana on 2024-01-04 11:36:22 |

Share: | | | | |


ಮೈಮೇಲೆ ಪ್ರೇತ ಬರುವ ನೆಪ: 3 ತಿಂಗಳಿನಿಂದ ಕತ್ತಲ ಕೋಣೆಯಲ್ಲಿ ದಿಗ್ಭಂಧನವಾಗಿದ್ದ ಮಹಿಳೆಯ ರಕ್ಷಣೆ

ಪುತ್ತೂರು: ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜ ಎಂಬಲ್ಲಿ ಕೊಠಡಿಯೊಂದರಲ್ಲಿ ದಿಗ್ಭಂಧನದಲ್ಲಿರಿಸಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ರಕ್ಷಿಸಿದ್ದಾರೆ. ಮಹಿಳೆಯನ್ನು ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಶ್ರೀಪತಿ ಹೆಬ್ಬಾರ್ ಎಂಬುವರ ಪತ್ನಿಯನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದ ಕೋಣೆಯಲ್ಲಿ ಕಳೆದ 3 ತಿಂಗಳಿನಿಂದ ದಿಗ್ಬಂಧನದಲ್ಲಿರಿಸಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅನಾಮಧೇಯ ಕರೆ ಬಂದಿತ್ತು.

ಈ ಹಿನ್ನೆಲೆಯಲ್ಲಿ ಮೇಲ್ವಿಚಾರಕರ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಮಹಿಳೆ ಎದ್ದು ನಡೆಯಲಾರದ ಮತ್ತು ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದಾಗ ನಿರಾಕರಿಸಿದ್ದರು. ಬಳಿಕ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮಹಿಳೆಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.ಶ್ರೀಪತಿ ಹೆಬ್ಬಾರ್ ಅವರ ಮನೆಯಲ್ಲಿದ್ದ ಅವರ ಸಹೋದರಿಯನ್ನು ಅಧಿಕಾರಿಗಳು ವಿಚಾರಿಸಿದಾಗ ಆಕೆಗೆ ಪ್ರೇತ ಮೈಮೇಲೆ ಬರುವ ಕಾರಣಕ್ಕಾಗಿ ದಿಗ್ಭಂಧನದಲ್ಲಿಸಿರುವುದಾಗಿ ತಿಳಿಸಿದ್ದರು. ಅಧಿಕಾರಿಗಳು ಶ್ರೀಪತಿ ಹೆಬ್ಬಾರ್​​ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದರೂ, ಅವರು ಕರೆ ಸ್ವೀಕರಿಸಿಲ್ಲ ಎಂಬ ಮಾಹಿತಿ ಲಭಿಸಿದೆ.


ದಿಗ್ಭಂಧನದಲ್ಲಿದ್ದ ಮಹಿಳೆಯ ಗಂಡ ಮತ್ತು ಆತನ ಸಹೋದರಿ ಇದೇ ಮನೆಯಲ್ಲಿ ವಾಸವಾಗಿದ್ದು, ಮಹಿಳೆಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿರುವ ಬಗ್ಗೆ ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.,ಪ್ರೇತ ಮೈಮೇಲೆ ಬರುವ ನೆಪ?: ಅಡುಗೆ ವೃತ್ತಿ ಮಾಡುತ್ತಿದ್ದ ಶ್ರೀಪತಿ ಹೆಬ್ಬಾರ್​ ಅವರು ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ಮಹಿಳೆಯನ್ನುಅಂತರ್ಜಾತಿ ವಿವಾಹವಾಗಿದ್ದರು. ಈ ಅವರ ಮೈಮೇಲೆ ಪ್ರೇತ ಬರುತ್ತದೆ ಎಂಬ ಕಾರಣದ ಹಿನ್ನೆಲೆಯಲ್ಲಿ ಮನೆಯ ಪಕ್ಕದ ಗೂಡಿನಂತಿರುವ ಕೊಠಡಿಯಲ್ಲಿ ಕೂಡಿ ಹಾಕಿ ದಿನವೊಂದಕ್ಕೆ ಒಂದು ಬಾರಿ ಮಾತ್ರ ಹಾಲು ಬಳಸದ ಚಹಾ ಮತ್ತು ಬಿಸ್ಕೆಟ್​ ಮಾತ್ರ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿನಿಂದ ಈ ರೀತಿ ದಿಗ್ಭಂಧನದಲ್ಲಿರಿಸಲಾಗಿತ್ತು. ಸುದೀರ್ಘ ಸಮಯದಿಂದ ಸ್ನಾನ ಮಾಡಿಸದ ರೀತಿ, ತೀರಾ ಅಶಕ್ತರಾಗಿದ್ದರು ಎಂಬ ಮಾಹಿತಿ ಅಧಿಕಾರಿಗಳಿಗೆ ವಿಚಾರಣೆಯ ವೇಳೆ ದೊರಕಿದೆ.

ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ ಮೃತ್ಯು

Posted by Vidyamaana on 2023-07-16 15:26:15 |

Share: | | | | |


ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ  ಮೃತ್ಯು

ಬೆಳ್ತಂಗಡಿ : ರಜೆ ಇದ್ದ ಕಾರಣ ಮನೆಯಲ್ಲಿ ಸಾರಿಯಲ್ಲಿ ಮಾಡಿದ್ದ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ದಿಡುಪೆಯಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (14)  ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದು ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ.

ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

Posted by Vidyamaana on 2024-05-03 08:25:04 |

Share: | | | | |


ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಬೆಂಗಳೂರು : ಹಾಸನ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಹಾಸನ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಪ್ರೀತಮ್‌ ಗೌಡ ಅವರು, ಪ್ರಜ್ವಲ್‌ ರೇವಣ್ಣ ಪ್ರಕರಣ ದೇಶಾದ್ಯಂತ ತೀವ್ರ ಬಿರುಗಾಳಿ ಎಬ್ಬಿಸಿದರೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಗ್ರಾಸವಾಗಿದೆ.ತಮ್ಮ ವಾಟ್ಸಾಪ್‌ ನಂಬರ್‌ನಲ್ಲಿ ಆಗಾಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಟೇಟಸ್‌ ಅಪ್‌ಡೇಟ್‌ ಮಾಡುತ್ತಿರುವುದನ್ನು ಬಿಟ್ಟರೆ, ಮಾಧ್ಯಮಗಳಿಗೆ ಹೇಳಿಕೆಯನ್ನೂ ಕೊಟ್ಟಿಲ್ಲ. ಪ್ರೀತಮ್‌ ಇದ್ದಕ್ಕಿದ್ದಂತೆ ತಟಸ್ಥರಾದಂತೆ ವರ್ತಿಸುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.



Leave a Comment: