ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ

Posted by Vidyamaana on 2023-10-24 12:44:17 |

Share: | | | | |


ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ

ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿನ ಧರ್ಮಾಧ್ಯಕ್ಷರ ನಿವಾಸದಲ್ಲಿ ಕಾರ್ಯಾಚರಿಸುತ್ತಿರುವ ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ವತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಾರ್ಯಕ್ರಮ ಅ.22ರಂದು ಸಂಜೆ ಜೆಪ್ಪು ಸಂತ ಅಂತೋನಿ ಆಶ್ರಮದಲ್ಲಿನ ಸಂಭ್ರಮ ಸಭಾಭವನದಲ್ಲಿ ನಡೆಯಿತು.

ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ 12 ವಲಯಗಳಲ್ಲಿನ ವಿವಿಧ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಸಂಸ್ಥಾಪಕರಾಗಿ, ಸಂಪಾದಕರಾಗಿ, ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೊಂಕಣಿ ಕ್ರೈಸ್ತ ಪತ್ರಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಚರಿತ್ರೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಕಳೆದ 14 ವರ್ಷಗಳಿಂದ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿಯಾಗಿರುವ ಸಂತೋಷ್ ಮೊಟ್ಟೆತ್ತಡ್ಕ ಸೇರಿದಂತೆ ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 43 ಮಂದಿ ಕ್ರೈಸ್ತ ಪತ್ರಕರ್ತರನ್ನು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ|ಡಾ|ಪೀಟರ್ ಪಾವ್ಲ್ ಸಲ್ದಾನ್ಹಾರವರು ಶಾಲು ಹೊದಿಸಿ ಸನ್ಮಾನಿಸಿದರು. 

ಕಥೋಲಿಕ್ ಸಭಾ ಕೇಂದ್ರ ಸಮಿತಿ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರುರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಾತ್ಮಿಕ ನಿರ್ದೇಶಕ ವಂ|ಡಾ|ಜೆ.ಬಿ ಸಲ್ದಾನ್ಹಾ, ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕ ವಂ|ಜೆ.ಬಿ ಕ್ರಾಸ್ತಾ, ದಾಯ್ಜಿವಲ್ಡ್೯ ಮೀಡಿಯಾ ಲಿಮಿಟೆಡ್ ನ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಮಹಾರಾಷ್ಟ್ರ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕರಾವಳಿ ಸುದ್ದಿ ವಾರಪತ್ರಿಕೆಯ ಸಂಪಾದಕ ಹಾಗೂ ಪ್ರಕಾಶಕ ಭೊನಿಪಾಸ್ ರೋಶನ್ ಮಾರ್ಟಿಸ್, ಕಥೋಲಿಕ್ ಸಭಾ ಕೇಂದ್ರ ಸಮಿತಿಯ ಕಾರ್ಯದರ್ಶಿ ವಿಲ್ಮಾ ಮೊಂತೇರೊ, ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಾರ್ಯದ ಸಂಚಾಲಕ ಪಾವ್ಲ್ ರೋಲ್ಫಿ ಡಿಕೋಸ್ಟರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಸನ್ಮಾನದ ಸಂದರ್ಭದಲ್ಲಿ ಸಂತೋಷ್ ಮೊಟ್ಟೆತ್ತಡ್ಕರವರ ತಾಯಿ ಐರಿನ್ ಮೊರಾಸ್, ಪತ್ನಿ ಪ್ರಮೀಳಾ ಸಿಕ್ವೇರಾ, ಪುತ್ರಿ ಸಿಯೋನಾ ಮೊರಾಸ್, ಪುತ್ರ ಸೇವಿಯನ್ ಮೊರಾಸ್, ತಂಗಿ ಮಗಳು ಕ್ಯಾರಲ್ ಸಿಕ್ವೇರಾ ಉಪಸ್ಥಿತರಿದ್ದರು.

ಪುತ್ತೂರು ತಾಲೂಕಿನ ಕ್ರೈಸ್ತ ಧರ್ಮದ, ಸಂಘ-ಸಂಸ್ಥೆಯ ವರದಿಗಳನ್ನು ಸಕಾಲದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಭಿತ್ತರಿಸಿದ್ದಕ್ಕೆ ಪುತ್ತೂರು ಮಾಯಿದೆ ದೇವುಸ್ ಚರ್ಚ್ ಸಮುದಾಯ ದಿನದಂದು ಡೊನ್ ಬೊಸ್ಕೊ ಕ್ಲಬ್ ನಿಂದ, ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿಯಿಂದ, ಚರ್ಚ್ ನ ಹಲವಾರು ವಾಳೆಗಳಿಂದ ಸನ್ಮಾನ ಜೊತೆಗೆ ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಿಂದ, ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ, ಆರ್ಯಾಪು ಶ್ರೀ ಮಾರಿಯಮ್ಮ ದೇವಸ್ಥಾನದಿಂದ ಸನ್ಮಾನ ಜೊತೆಗೆ ಹಲವು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರ ಪಡೆದಿರುವ ಸಂತೋಷ್ ಮೊಟ್ಟೆತ್ತಡ್ಕ  ಅವರು ತುಳು ನಾಟಕಗಳಾದ ತಪ್ಪುಗು ತಕ್ಕ ಶಿಕ್ಷೆ, ದೇವೆರೆ ತೀರ್ಪು ಜೊತೆಗೆ ಹಲವಾರು ಕೊಂಕಣಿ ಪ್ರಹಸನಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದಾರೆ.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 9

Posted by Vidyamaana on 2023-09-08 22:13:05 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 9

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 9 ರಂದು

ಬೆಳಿಗ್ಹೆ 10 ಗಂಟೆಗೆ ನೆಲ್ಲಿಕಟ್ಟೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ಎಲ್ ಕೆ ಜಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ


11 ಗಂಟೆಗೆ ಶಾಂತಿಗೋಡು ಸರಕಾರಿ ಹಿ ಪ್ರಾ ಶಾಲೆಯಲ್ಲಿ ನೂತನ ಕೊಠಡಿ ಉದ್ಘಾಟನೆ


12 ಗಂಟೆಗೆ ಬಿಳಿಯೂರು ಡ್ಯಾಂ ಕಾಮಗಾರಿ ವೀಕ್ಷಣೆ


2.30/_ಕ್ಕೆ ನೆಕ್ಕಿಲಾಡಿ‌ಸುಭಾಸ್ ನಗರ ಅಷ್ಟಮಿ ಕಾರ್ಯಕ್ರಮ


3.30 ವಿಟ್ಲದಲ್ಲಿ ಅಷ್ಟಮಿ ಕಾರ್ಯಕ್ರಮ


5 ಗಂಟೆಗೆ ಪೆರುವಾಯಿ ಗ್ರಾಪಂ ವಠಾರದಲ್ಲಿ ಅಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಕರ್ನಲ್‌ ಮನ್‌ಪ್ರೀತ್‌ ಸಿಂಗ್‌ 6 ವರ್ಷದ ಪುತ್ರನಿಂದ ತಂದೆಗೆ ಕೊನೆ ಸೆಲ್ಯೂಟ್‌ ನೋಡಿ ಕಣ್ಣೀರಿಟ್ಟ ಜನ

Posted by Vidyamaana on 2023-09-16 05:15:53 |

Share: | | | | |


ಕರ್ನಲ್‌ ಮನ್‌ಪ್ರೀತ್‌ ಸಿಂಗ್‌ 6 ವರ್ಷದ ಪುತ್ರನಿಂದ ತಂದೆಗೆ ಕೊನೆ ಸೆಲ್ಯೂಟ್‌ ನೋಡಿ ಕಣ್ಣೀರಿಟ್ಟ ಜನ

ನವದೆಹಲಿ : ಆರು ವರ್ಷದ ಹುಡುಗನಿಗೆ ತನ್ನ ತಂದೆಯನ್ನು ಬಾಕ್ಸ್‌ನಲ್ಲಿ ಯಾಕೆ ಇಟ್ಟಿದ್ದಾರೆ ಅನ್ನೋದು ಗೊತ್ತಿಲ್ಲ. ಇಲ್ಲಿಯವರೆಗೂ ಅಪ್ಪ ಏನು ಮಾಡ್ತಾ ಇದ್ರೂ ಅನ್ನೋದು ಗೊತ್ತಿರಲಿಲ್ಲ. ಆದರೆ, ಸೇನಾ ಸಮವಸ್ತ್ರದಲ್ಲಿದ್ದ ಆ ಹುಡುಗ ತಂದೆಯ ಶವಪೆಟ್ಟಿಗೆಗೆ ಕೊನೆಯ ಬಾರಿಗೆ ತನಗೆ ಗೊತ್ತಿರುವ ರೀತಿಯಲ್ಲಿ ಸೆಲ್ಯುಟ್‌ ಹೊಡೆದಾಗ ಅಲ್ಲಿದ್ದವರ ಕಣ್ಣಾಲಿಗಳು ತೇವವಾಗಿದ್ದವು.ಈ ಕ್ಷಣಗಳು ದಾಖಲಾಗಿದ್ದು ಪಂಜಾಬ್‌ನ ಮೊಹಾಲಿ ಜಿಲ್ಲೆಯ ಮಲ್ಲನ್‌ಪುರದಲ್ಲಿ. ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಕೋಕರ್‌ನಾಗ್‌ನಲ್ಲಿ ಪಾಪಿ ಪಾಕಿಸ್ತಾನದ ಭಯೋತ್ಪಾದಕ ಜೊತೆಗಿನ ಎನ್‌ಕೌಂಟ್‌ ಸತತ ಮೂರನೇ ದಿನ ಮುಂದುವರಿದಿದೆ. ಎನ್‌ಕೌಂಟರ್‌ನ ಮೊದಲ ದಿನ ಭಯೋತ್ಪಾದಕರ ಗುಂಡೇಟಿಗೆ 19 ರಾಷ್ಟ್ರೀಯ ರೈಫಲ್ಸ್‌ನ ಕರ್ನಲ್‌ ಮನ್‌ಪ್ರೀತ್‌ ಸಿಂಗ್‌ ಸಾವು ಕಂಡಿದ್ದರು. ಅವರೊಂದಿಗೆ ಮೇಜರ್‌ ಆಶೀಶ್‌ ಧೋನ್‌ಚಾಕ್‌ ಹಾಗೂ ಜಮ್ಮು ಕಾಶ್ಮೀರ ಪೊಲೀಸ್‌ ಡಿವೈಎಸ್‌ಪಿ ಹಿಮಾಯೂನ್‌ ಮುಜಾಮಿಲ್‌ ಭಟ್‌ ಕೂಡ ಸಾವು ಕಂಡಿದ್ದರು.


ಶುಕ್ರವಾರ ಮನ್‌ಪ್ರೀತ್‌ ಸಿಂಗ್‌ ಅವರ ಪಾರ್ಥಿವ ಶರೀರ ಪಂಜಾಬ್‌ನ ಅವರ ಸ್ವಗ್ರಾಮಕ್ಕೆ ಬಂದಾಗ ಇಡೀ ಪ್ರದೇಶ ಭಾವುಕವಾಗಿತ್ತು. ಅವರ ಸೇನಾ ಸಮವಸ್ತ್ರದಲ್ಲಿಯೇ ನಿಂತಿದ್ದ ಅವರ ಆರು ವರ್ಷದ ಪುತ್ರ ಹಾಗೂ ಎರಡು ವರ್ಷದ ಆತನ ತಂಗಿ ಸೆಲ್ಯುಟ್‌ ಹೊಡೆದು ತಂದೆಗೆ ಬೀಳ್ಕೊಟ್ಟರು. ಬಹುಶಃ ತಮ್ಮ ಕುಟುಂಬಕ್ಕೆ ಆಗಿರುವಂಥ ಗಾಯ ಎಷ್ಟು ಗಾಢವಾದದ್ದು ಎನ್ನುವ ಸಣ್ಣ ಅರಿವೂ ಆ ಪುಟ್ಟ ಮಕ್ಕಳಿಗೆ ಇದ್ದಿರಲಿಲ್ಲ. ಬಳಿಕ ಇಬ್ಬರು ಮಕ್ಕಳನ್ನು ಅವರ ಸಂಬಂಧಿಗಳು ಎತ್ತಿಕೊಂಡರೆ, ಮನ್‌ಪ್ರೀತ್‌ ಸಿಂಗ್‌ ಅವರ ಅಂತಿಮ ಯಾತ್ರೆಗೆ ಇಡೀ ಮಲ್ಲನ್‌ಪುರ ಅಲ್ಲಿ ನೆರೆದಿತ್ತು.


ಮನ್‌ಪ್ರೀತ್‌ ಸಿಂಗ್‌ ಅವರ ಪತ್ನಿ ಜಗ್‌ಮೀತ್‌ ಕೌರ್‌, ಅವರ ತಾಯಿ ಹಾಗೂ ಕುಟುಂಬದ ಇತರರನ್ನು ಸಮಾಧಾನ ಮಾಡುವುದೇ ಕಷ್ಟವಾಗಿತ್ತು. ಕಣ್ಣೀರಿಡುತ್ತಲೇ ಮನ್‌ಪ್ರೀತ್‌ ಸಿಂಗ್‌ ಅವರನ್ನು ಬೀಳ್ಕೊಟ್ಟಿದ್ದಾರೆ. 41 ವರ್ಷದ ಮನ್‌ಪ್ರೀತ್‌ ಸಿಂಗ್‌, 19 ರಾಷ್ಟ್ರೀಯ ರೈಫಲ್ಸ್‌ನ ಕಮಾಂಡಿಂಗ್‌ ಆಫೀಸರ್‌ ಆಗಿ ಎನ್‌ಕೌಂಟರ್‌ಅನ್ನು ಮುನ್ನಡೆಸಿದ್ದರು. ಪ್ರತಿಷ್ಠಿತ ಸೇನಾ ಪದಕ (ಶೌರ್ಯ) ಪುರಸ್ಕೃತರಾಗಿದ್ದ ಇವರು, ಬುಧವಾರ ರಾತ್ರಿ ಗುಂಡೇಟಿನಿಂದ ಸಾವನ್ನಪ್ಪಿದರು, ಭಯೋತ್ಪಾದಕರ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದಿದ್ದ ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸ್‌, ಇದಕ್ಕೆ ಪ್ರತಿಕ್ರಿಯೆಯಾಗಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭ ಮಾಡಿತ್ತು.


ಬುಧವಾರ ಕಾಶ್ಮೀರ ಕಣಿವೆಯ ಕೊಕೊರೆನಾಗ್ ಪ್ರದೇಶದ ಎತ್ತರದ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್‌ನ ಡಿವೈಎಸ್‌ಪಿ ಹಾಗೂ ಭಾರತೀಯ ಸೇನೆಯ ಕರ್ನಲ್‌ ಹಾಗೂ ಮೇಜರ್‌ ಸಾವು ಕಂಡಿದ್ದರು. 2020ರ ಬಳಿಕ ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಭಾರತ ಕಳೆದುಕೊಂಡಿದ್ದು ಇದೇ ಮೊದಲ ಬಾರಿಯಾಗಿದೆ.ಮನ್‌ಪ್ರೀತ್‌ ಸಿಂಗ್‌ ಅವರ ಜೊತೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಮೇಜರ್‌ ಆಶೀಶ್‌ ಧೋನ್‌ಚಾಕ್‌ ಅವರ ಮೃತದೇಹವನ್ನು ಪಾಣಿಪತ್‌ನ ಸ್ವಗ್ರಾಮಕ್ಕೆ ತರಲಾಗಿದೆ. ಈ ವೇಳೆ ಅವರ ಅಂತಿಮಯಾತ್ರಗೆ ಸ್ಥಳೀ ಸೇನಾಧಿಕಾರಿಗಳು ಹಾಗೂ ಕುಟುಂಬದವರು ಭಾಗಿಯಾಗಿದ್ದರು. ಶುಕ್ರವಾರ ಬೆಳಗ್ಗೆ ಪಾಣಿಪತ್‌ನಲ್ಲಿರುವ ಅವರ ನಿವಾಸಕ್ಕೆ ಮೃತದೇಹವನ್ನು ತರಲಾಗಿತ್ತು. ಬಳಿಕ ಸೇನಾ ವಾಹನದಲ್ಲಿಯೇ ಪಾರ್ಥೀವವನ್ನು ಬಿಂಝೋಲ್‌ ಗ್ರಾಮಕ್ಕೆ ತರಲಾಗಿತ್ತು.

ಬಳಿಕ ಗನ್‌ ಸೆಲ್ಯೂಟ್‌ ನೀಡಿ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಅಂತ್ಯಕ್ರಿಯೆಯ ಮೆರವಣಿಗೆಯು ಅವರ ಬಿಂಜೋಲ್ ಗ್ರಾಮವನ್ನು ತಲುಪಲು ಪಟ್ಟಣದಲ್ಲಿರುವ ಮೇಜರ್ ಅವರ ಮನೆಯಿಂದ ಸುಮಾರು ಎಂಟು ಕಿ.ಮೀ ದೂರವನ್ನು ಕ್ರಮಿಸಲು ಸುಮಾರು ಮೂರು ಗಂಟೆಗಳನ್ನು ತೆಗೆದುಕೊಂಡಿತು. ತಮ್ಮೂರಿನ ಸೈನಿಕನಿಗೆ ಜನ ಕಣ್ಣೀರಿನ ವಿದಾಯ ಹೇಳಲು ದೊಡ್ಡ ಮಟ್ಟದಲ್ಲಿ ಜಮಾಯಿಸಿದ್ದರು.ಬುಧವಾರ ಬುದ್ಗಾಮ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ಉಪ ಅಧೀಕ್ಷಕ 33 ವರ್ಷದ ಹಿಮಯುನ್ ಮುಜಾಮಿಲ್ ಭಟ್ ಅವರ ಅಂತ್ಯಕ್ರಿಯೆಯಲ್ಲೂ ದೊಡ್ಡ ಮಟ್ಟದ ಜನ ಜಮಾಯಿಸಿದ್ದರು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಅವರು ಪೊಲೀಸ್ ಅಧಿಕಾರಿಗೆ ಗೌರವ ಸಲ್ಲಿಸಿದರು




https://twitter.com/ANI/status/1702586231497093630?ref_src=twsrc%5Etfw%7Ctwcamp%5Etweetembed%7Ctwterm%5E1702586231497093630%7Ctwgr%5E%7Ctwcon%5Es1_c10&ref_url=http%3A%2F%2Fapi-news.dailyhunt.in%2F


ಎಲಾನ್ ಮಸ್ಕ್ ಜೊತೆ ಅಕ್ರಮ ಸಂಬಂಧ ಪತ್ನಿಗೆ ಡಿವೋರ್ಸ್ ಕೊಟ್ಟ ಗೂಗಲ್ ಸಹ ಸಂಸ್ಥಾಪಕ!

Posted by Vidyamaana on 2023-09-16 21:42:32 |

Share: | | | | |


ಎಲಾನ್ ಮಸ್ಕ್ ಜೊತೆ ಅಕ್ರಮ ಸಂಬಂಧ ಪತ್ನಿಗೆ ಡಿವೋರ್ಸ್ ಕೊಟ್ಟ ಗೂಗಲ್ ಸಹ ಸಂಸ್ಥಾಪಕ!

ನ್ಯೂಯಾರ್ಕ್: ಉದ್ಯಮಿ ಎಲಾನ್ ಮಸ್ಕ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಟ್ವಿಟರ್ ನಿಯಮ ಬದಲಾವಣೆ, ಶ್ರೀಮಂತರ ಪಟ್ಟಿ, ಉದ್ಯಮ ಸೇರಿದ ಕಾರಣವಲ್ಲ. ಇದೀಗ ಸುಂದರ ಸಂಸಾರದ ನಡುವೆ ಬಿರುಗಾಳಿ ಎಬ್ಬಿಸಿದ ಕಾರಣಕ್ಕೆ ಎಲಾನ್ ಮಸ್ಕ್ ಮತ್ತೆ ಟ್ರೆಂಡ್ ಆಗಿದ್ದಾರೆತನ್ನ ಪತ್ನಿಗೆ ಎಲಾನ್ ಮಸ್ಕ್ ಜೊತೆ ಅಫೇರ್ ಇದೆ ಅನ್ನೋ ಕಾರಣಕ್ಕೆ ಗೂಗಲ್ ಸಹ ಸಂಸ್ಥಾಪಕ ಸರ್ಗೆ ಬ್ರಿನ್ ದಾಂಪತ್ಯ ಜೀವನಕ್ಕೆ ವಿಚ್ಛೇದನ ನೀಡಿದ್ದಾರೆ. ಕೋರ್ಟ್ ಸರ್ಗೆ ಬ್ರಿನ್ ಹಾಗೂ ನಿಕೋಲ್ ಶನಹಾನ್ ಡಿವಿರೋಸ್‌ಗೆ ಅಂಕಿತ ಹಾಕಿದೆ.


2022ರಲ್ಲೇ ಎಲಾನ್ ಮಸ್ಕ್ ಹಾಗೂ ನಿಕೋಲ್ ಶಹನಾನ್ ನಡುವೆ ಗಾಢವಾದ ಸಂಬಂಧವಿದೆ ಅನ್ನೋ ಮಾತುಗಳು ಕೇಳಿಬಂದಿತ್ತು. ನಿಕೋಲ್ ಹಾಗೂ ಮಸ್ಕ್ ಗೆಳೆಯರಾಗಿದ್ದರು. ಆದರೆ ಈ ಗೆಳೆತನ ಅಕ್ರಮ ಸಂಬಂಧವಾಗಿ ಮಾರ್ಪಟ್ಟಿತ್ತು ಅನ್ನೋದು ಮಾಜಿ ಪತಿ ಸರ್ಗೆ ಬ್ರಿನ್ ಆರೋಪ. ಇದಕ್ಕೆ ಪುಷ್ಠಿ ನೀಡುವ ಹಲವು ದಾಖಲೆಗಳನ್ನು ಸರ್ಗೆ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮಾಧ್ಯಮಗಳಲ್ಲೂ ಮಸ್ಕ್ ಹಾಗೂ ನಿಕೋಲ್ ನಡುವಿನ ಅಫೇರ್ ಸುದ್ದಿಯಾಗಿತ್ತು.ಗೆಳೆಯರಾಗಿದ್ದ ಸರ್ಗೆ ಹಾಗೂ ಮಸ್ಕ್ ಹಲವು ಬಾರಿ ಸುದ್ದಿಯಾಗಿದ್ದಾರೆ. ಎಲಾನ್ ಮಸ್ಕ್ ಸಂಕಷ್ಟದಲ್ಲಿದ್ದಾರೆ ಹಲವು ಬಾರಿ ಸರ್ಗೆ ಬ್ರಿನ್ ನೆರವು ನೀಡಿದ್ದರು. 2021ರಿಂದ ನಿಕೋಲ್ ಪತಿ ಸರ್ಗೆಗಿಂತ ಹೆಚ್ಚು ಮಸ್ಕ್ ಜೊತೆ ಆತ್ಮೀಯವಾಗಿದ್ದರು. ಹಲವು ಸುತ್ತಿನ ಮಾತುಕತೆ ಬಳಿಕ ಇಬ್ಬರು ಪರಸ್ಪರ ಬೇರ್ಪಟ್ಟಿದ್ದಾರೆ. 2018 ನವೆಂಬರ್ 11 ರಂದು ಗೂಗಲ್ ಸಹ ಸಂಸ್ಥಾಪಕ ಸರ್ಗೆ ಬ್ರಿನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನಿಕೋಲ್ ಶನಹಾನ್ ಕೈಹಿಡಿದ ಸರ್ಗೆ ಕಳೆದ ಮೂರು ವರ್ಷ ಜೊತೆಯಾಗಿದ್ದರು. ಇವರಿಗೆ ಹೆಣ್ಣು ಮಗುವಿದೆ. 2015ರ ಯೋಗ ಕಾರ್ಯಕ್ರಮದಲ್ಲಿ ಇವರಿಬ್ಬರು ಭೇಟಿಯಾಗಿದ್ದರು.


ಮಸ್ಕ್ ತಂದೆ ಕಳವಳ: ಜಗತ್ತಿನ ಶ್ರೀಮಂತ ವ್ಯಕ್ತಿಯಾಗಿರುವ ನನ್ನ ಪುತ್ರನನ್ನು ಯಾವುದೇ ಸಮಯದಲ್ಲಿ ಹತ್ಯೆ ಮಾಡಬಹುದು ಎಂದು ಎಲಾನ್‌ ಮಸ್‌್ಕರ ತಂದೆ ಎರ್ರಾಲ್‌ ಮಸ್‌್ಕ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕ ಸರ್ಕಾರ ನಿರ್ಧಾರಗಳಲ್ಲಿ ಎಲಾನ್‌ ಮಸ್‌್ಕ ಪಾತ್ರದ ಕುರಿತು ಇತ್ತೀಚೆಗೆ ಪ್ರಕಟವಾದ ವರದಿಯೊಂದರ ಹಿನ್ನೆಲೆಯಲ್ಲಿ ಎರ್ರಾಲ್‌ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉಕ್ರೇನ್‌ ಯುದ್ದದ ವಿಷಯದಲ್ಲಿ ಈಗಾಗಲೇ ಮಸ್‌್ಕ ರಷ್ಯಾದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜೊತೆಗೆ ಸರ್ಕಾರದ ಮೇಲೆ ಅವರ ಪ್ರಭಾವದ ವಿಷಯದ ಕೂಡಾ ಹತ್ಯೆಗೆ ಕಾರಣವಾಗಬಹುದು ಎಂದು ಎರ್ರಾಲ್‌ ಹೇಳಿದ್ದಾರೆ. ರಷ್ಯಾ ಯುದ್ಧದ ವೇಳೆ ಮಸ್‌್ಕ ಉಕ್ರೇನ್‌ಗೆ ಉಚಿತ ಇಂಟರ್ನೆಟ್‌ ಒದಗಿಸಿದ್ದರು.

ರದ್ದಾದ ವಿಜಯೋತ್ಸವದ ಬಗ್ಗೆ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ಸ್ಪಷ್ಟನೆ

Posted by Vidyamaana on 2023-06-02 09:17:05 |

Share: | | | | |


ರದ್ದಾದ ವಿಜಯೋತ್ಸವದ ಬಗ್ಗೆ  ನಗರ ಕಾಂಗ್ರೆಸ್ ಅಧ್ಯಕ್ಷ  ಮಹಮ್ಮದಾಲಿ ಸ್ಪಷ್ಟನೆ

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಗೆದ್ದು ಶಾಸಕರಾಗಿ ಆಯ್ಕೆಯಾಗಿರುವುದರಿಂದ ಪಕ್ಷದ ವತಿಯಿಂದ ಸಂಭ್ರಮದ ವಿಜಯೋತ್ಸವ ಆಚರಿಸಬೇಕೆಂದು ಕಾರ್ಯಕರ್ತರ ಬಯಕೆ ಸಹಜವಾಗಿರುತ್ತದೆ.

ಕಳೆದ ಸೋಮವಾರ ನಡೆದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಬೊಲ್ವಾರ್ ನಿಂದ - ದರ್ಬೆಯವರೆಗೆ ವಿಜಯೋತ್ಸವದ ಮೆರವಣಿಗೆ ನಡೆಸುವುದೆಂದು ತೀರ್ಮಾನಕ್ಕೆ ಬರಲಾಗಿತ್ತು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ತಿಳಿಸಿದ್ದಾರೆ.


ಜೂನ್ 3ರಂದು ಶನಿವಾರ ನಡೆಯಲಿರುವ ವಿಜಯೋತ್ಸವ ಕಾರ್ಯಕ್ರಮದ ಬಗ್ಗೆ ನಡೆದ ಪೂರ್ವಬಾವಿ ಸಭೆಯಲ್ಲಿ ಹವಾಮಾನ ವರದಿಯಂತೆ ಶುಕ್ರವಾರವೇ ಮುಂಗಾರು ಮಳೆ ಪ್ರಾರಂಭವಾಗುವ ಮುನ್ಸೂಚನೆ ಇರುವುದರಿಂದ ವಿಜಯೋತ್ಸವದ ಮೆರವಣಿಗೆಗೆ ಮಳೆ ಅಡ್ಡಿಯಾದೀತು ಎಂಬ ಸಂಶಯ ಹಾಗೂ ಈಗಾಗಲೇ ನಾಮಪತ್ರ ಸಲ್ಲಿಸುವ ದಿನ ದರ್ಬೆಯಿಂದ - ಕಿಲ್ಲೆ ಮೈದಾನವರೆಗೆ ಮೆರವಣಿಗೆ ನಡೆಸಲಾಗಿದೆ,

ಬಹಿರಂಗ ಪ್ರಚಾರದ ಅಂತಿಮ ದಿನ ಬೊಲ್ವಾರ್ ನಿಂದ - ದರ್ಬೆಯವರೆಗೆ  ಭ್ರಹತ್ ರೋಡ್ ಶೋ,ನಡೆಸಲಾಗಿದೆ,

ಚುನಾವಣ ಪಲಿತಾಂಶದ ದಿನ  ಅಶೋಕ್ ಕುಮಾರ್ ರೈ ಯವರು ಶಾಸಕರಾಗಿ ಆಯ್ಕೆಯಾಗಿ ಬಂದ ಸಂದರ್ಭದಲ್ಲಿ ಮಾಣಿಯಿಂದ - ಪುತ್ತೂರಿನ ದರ್ಬೆಯ ಚುನಾವಣ ಕಚೇರಿ ತನಕ ಬ್ರಹತ್ ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಲಾಗಿದೆ,

ಪುನ್ಹ ಮೆರವಣಿಗೆ ಮಾಡಿ ವಿಜಯೋತ್ಸವ ಆಚರಿಸುವುದು ಅಬಾಸವಾಗಿ ಕಾಣುತ್ತದೆ,  ಮೆರವಣಿಗೆ ನಡೆಸಿದಾಗ ಟ್ರಾಫಿಕ್ ಜಾಮ್ ಆಗಿ ಜನರಿಗೆ ತೊಂದರೆ ಆಗುತ್ತದೆ,

ಮೆರವಣಿಗೆ ನಡೆಸಿ ದರ್ಬೆಯಲ್ಲಿ ಕೊನೆಗೊಳಿಸಿದರೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಅವಕಾಶವಾಗುವುದಿಲ್ಲ, ಹಾಲ್ ನಲ್ಲಿ ಸಭೆ ನಡೆಸಿದರೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಒಳ್ಳೆಯ ಭೋಜನ ನೀಡಬಹುದು ಎಂಬ ಕಾರಣಕ್ಕಾಗಿ ವಿಜಯೋತ್ಸವ ಮೆರವಣಿಗೆ ಕಾರ್ಯಕ್ರಮ ರದ್ದುಪಡಿಸಿ, ಪುತ್ತೂರು ಪುರಭವನದಲ್ಲಿ ಶಾಸಕರಿಗೆ ಅಭಿನಂದನೆ, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಕೃತಜ್ಞತ ಸಮರ್ಪಣೆ ಕಾರ್ಯಕ್ರಮ ನಡೆಸುವ ತೀರ್ಮಾನವು ಪಕ್ಷದ ಪ್ರಮುಖರ ತೀರ್ಮಾನವೇ ಹೊರತು ಶಾಸಕ ಅಶೋಕ್ ಕುಮಾರ್ ರೈ ಯವರ ಒಬ್ಬರ ತೀರ್ಮಾನವಲ್ಲ ಎಂಬುದರ ಬಗ್ಗೆ ಕಾರ್ಯಕರ್ತರಿಗೆ ಅರಿಕೆ ಮಾಡಿಕೊಳ್ಳುತ್ತಾ ಶನಿವಾರ ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇನೆ.

ಬಂಟ್ವಾಳ ; ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ತಾಯಿ, ಮಗಳನ್ನು ಬೆದರಿಸಿ ದರೋಡೆ, ಮುಸುಕುಧಾರಿಗಳ ಕೃತ್ಯ, ನಗ- ನಗದು ಲೂಟಿ

Posted by Vidyamaana on 2024-01-11 14:50:55 |

Share: | | | | |


ಬಂಟ್ವಾಳ ; ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ತಾಯಿ, ಮಗಳನ್ನು ಬೆದರಿಸಿ ದರೋಡೆ, ಮುಸುಕುಧಾರಿಗಳ ಕೃತ್ಯ, ನಗ- ನಗದು ಲೂಟಿ

ಬಂಟ್ವಾಳ, ಜ.11: ನಾಲ್ವರು ಮುಸುಕುಧಾರಿಗಳು  ಮನೆಯೊಂದಕ್ಕೆ ನುಗ್ಗಿ ತಾಯಿ, ಮಗಳಿಗೆ  ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ನಗ- ನಗದನ್ನು ದರೋಡೆಗೈದ ಘಟನೆ ಬೆಳ್ಳಂಬೆಳಗ್ಗೆ ವಗ್ಗದಲ್ಲಿ ನಡೆದಿದೆ. 


ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಫ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಫ್ಲೋರಿನ್ ಪಿಂಟೊ ಮತ್ತು ಅವರ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ತಿಳಿದಿದ್ದವರೇ ರಾಬರಿ ನಡೆಸಿದ್ದಾರೆ. ಕಪಾಟಿನಲ್ಲಿರಿಸಿದ್ದ ಸುಮಾರು ಅಂದಾಜು ರೂ 3,20,000/-ಮೌಲ್ಯದ ಒಟ್ಟು 82 ಗ್ರಾಂ ತೂಕದ ವಿವಿಧ ಮಾದರಿಯ ಚಿನ್ನಾಭರಣಗಳನ್ನು, ರೂ 11,000/- ಮೌಲ್ಯದ 2 ಮೊಬೈಲ್ ಫೋನ್ ಗಳನ್ನು ಸುಲಿಗೆ, 30 ಸಾವಿರ ರೂ. ನಗದು ಹಾಗೂ ಒಟ್ಟು ಮೂರುವರೆ ಲಕ್ಷಕ್ಕೂ ಅಧಿಕ ಮೌಲ್ಯದ ನಗ- ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗ್ಗೆ ಸುಮಾರು 6.30ರ ವೇಳೆಗೆ ಕಾಲಿಂಗ್ ಬೆಲ್ ಹಾಕಿದ್ದು ಬಾಗಿಲು ತೆಗದ ಕೂಡಲೇ ನಾಲ್ವರು ಮುಸುಕುಧಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ಚಿನ್ನ, ನಗದು ತೆಗೆದು ಕೊಡುವಂತೆ ಬೆದರಿಸಿದ್ದಾರೆ.


ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದು ಕಪಾಟು ಬೀಗದ ಕೀ ಪಡೆದಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ಆಸ್ಟಿನ್ ಪಿಂಟೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆ ಇದೇ ಪರಿಸರದಲ್ಲಿ ಅಂಗಡಿಯಿಂದ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ. ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.



Leave a Comment: