ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಅಮಿತ್‌ ಶಾ ಭೇಟಿಯಾದ ಹೆಚ್‌ಡಿಕೆ, ಮಂಜುನಾಥ್

Posted by Vidyamaana on 2024-03-17 13:57:09 |

Share: | | | | |


ಅಮಿತ್‌ ಶಾ ಭೇಟಿಯಾದ ಹೆಚ್‌ಡಿಕೆ, ಮಂಜುನಾಥ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ (CN Manjunath) ಭೇಟಿಯಾಗಿ ಮಾತುಕತೆ ನಡೆಸಿದರು.ಲೋಕ ಸಭಾ ಚುನಾವಣೆಗೆ ಇನ್ನೇನೂ ಕೆಲವೇ ದಿನಗಳು ಬಾಕಿಯಿದೆ. ಈ ಬೆನ್ನಲ್ಲೇ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಈ ವೇಳೆ ಕೆಲಕಾಲ ಮಾತುಕತೆ ನಡೆಸಿದರು.


ಈ ವೇಳೆ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್, ಅನಸೂಯ ಮಂಜುನಾಥ್ ಇದ್ದರು.

ಪುತ್ತೂರು ಬಿಜೆಪಿ ಟಿಕೆಟ್‌ ತಪ್ಪಿದ ಹಿನ್ನೆಲೆ ಇಂದು ಸಂಜೆ ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

Posted by Vidyamaana on 2023-04-12 04:38:26 |

Share: | | | | |


ಪುತ್ತೂರು ಬಿಜೆಪಿ ಟಿಕೆಟ್‌ ತಪ್ಪಿದ ಹಿನ್ನೆಲೆ ಇಂದು ಸಂಜೆ ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

ಪುತ್ತೂರು: ಜಿಲ್ಲೆಯ ಪ್ರಭಾವಿ ಹಿಂದೂ ಸಂಘಟನೆಯ ಮುಂದಾಳು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಎ.12 ರಂದು ಬೆಂಬಲಿಗರ ನೇತೃತ್ವದಲ್ಲಿ ಇಂದು ಸಂಜೆ  ಕೋಟೇಚಾ ಹಾಲ್ ನಲ್ಲಿ ತುರ್ತು ಸಭೆ ನಡೆಯಲಿದೆ.ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಅವರ ಬೆಂಬಲಿಗರು ಟ್ವಿಟರ್ ಅಭಿಯಾನದ ಮೂಲಕ ನರೇಂದ್ರ ಮೋದಿ, ಅಮಿತ್ ಶಾ ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ಬಿಜೆಪಿಯ ಸರ್ವೇ ಕಾರ್ಯದಲ್ಲಿ ಕೇಳಿ ಬಂದಿದ್ದ ಆಕಾಂಕ್ಷಿತರ ಪಟ್ಟಿಯಲ್ಲಿ ಅರುಣ್ ಹೆಸರು ಕೂಡ ಇತ್ತು ಎನ್ನಲಾಗಿದ್ದು ಹೀಗಾಗಿ ಈ ಬಾರಿ ಅರುಣ್ ಅವರಿಗೆ ಟಿಕೇಟ್ ಸಿಗುವ ನಿರೀಕ್ಷೆಯನ್ನು ಬೆಂಬಲಿಗರು ಹೊಂದಿದ್ದರು.ಪಕ್ಷೇತರ ಸ್ಪರ್ದೆಗೆ ಒತ್ತಡ:

ಎ.10 ರಂದು ರಾತ್ರಿ ಪ್ರಕಟವಾದ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಅರುಣ್ ಪುತ್ತಿಲ ಹೆಸರಿಲ್ಲದ ಹಿನ್ನೆಲೆಯಲ್ಲಿ ಅರುಣ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಡ ಹೇರಲಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ತುರ್ತು ಸಭೆ ಮಹತ್ವ ಪಡೆದಿದೆ.

ಬೇಟಿ ಬಚಾವೋ ಬೇಟಿ ಪಡಾವೋ ಎಂದು ಬರೆಯಲು ಬಾರದೆ ಕೇಂದ್ರ ಸಚಿವೆ ಪರದಾಟ; ನೆಟ್ಟಿಗರಿಂದ ಕ್ಲಾಸ್

Posted by Vidyamaana on 2024-06-19 21:04:57 |

Share: | | | | |


ಬೇಟಿ ಬಚಾವೋ ಬೇಟಿ ಪಡಾವೋ ಎಂದು ಬರೆಯಲು ಬಾರದೆ ಕೇಂದ್ರ ಸಚಿವೆ ಪರದಾಟ; ನೆಟ್ಟಿಗರಿಂದ ಕ್ಲಾಸ್

ಬೋಪಾಲ್:‌ ದೇಶದಲ್ಲಿ ಸಿ ದರ್ಜೆ, ಡಿ ದರ್ಜೆ ನೌಕರರನ್ನು ನೇಮಿಸಿಕೊಳ್ಳಲು ಕೂಡ ಮಾನದಂಡ ಇದೆ. ಕನಿಷ್ಠ ಇಷ್ಟೇ ಶಿಕ್ಷಣ ಪಡೆದಿರಬೇಕು ಎಂಬ ನಿಯಮವಿದೆ. ಆದರೆ, ದೇಶದ ಭವಿಷ್ಯ ರೂಪಿಸಬೇಕಾದ ರಾಜಕಾರಣಿಗಳಿಗೆ ಯಾವುದೇ ಶೈಕ್ಷಣಿಕ ಹಿನ್ನೆಲೆಯ ಕಟ್ಟುಪಾಡುಗಳಿಲ್ಲ. ಇದೇ ಕಾರಣಕ್ಕೆ, 10ನೇ ಕ್ಲಾಸು ಫೇಲಾದವರು ಗ್ರಂಥಾಲಯ ಸಚಿವರಾಗುತ್ತಾರೆ, ಓದಲು ಬರದವರೂ ಶಿಕ್ಷಣ ಸಚಿವರಾಗುತ್ತಾರೆ.

ಇದಕ್ಕೆ ನಿದರ್ಶನ ಎಂಬಂತೆ, ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್‌ (Savitri Thakur) ಅವರು ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ (Beti Bachao Beti P

non

hao) ಅಭಿಯಾನವನ್ನು ಹಿಂದಿಯಲ್ಲಿ ಬರೆಯಲು ಪರದಾಡಿದ್ದಾರೆ. ಅವರು ಅಭಿಯಾನದ ಹೆಸರನ್ನು ತಪ್ಪಾಗಿ ಬರೆದ ವಿಡಿಯೊ ಈಗ ವೈರಲ್‌ (Viral Video) ಆಗಿದೆ.

ಹೌದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಹಾಯಕ ಸಚಿವೆಯಾಗಿರುವ ಸಾವಿತ್ರಿ ಠಾಕೂರ್‌ ಅವರು ಮಧ್ಯಪ್ರದೇಶದ ಧಾರ್‌ನಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ಸ್ಕೂಲ್‌ ಚಲೋ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಅವರು ಬೋರ್ಡ್‌ ಮೇಲೆ ಬೇಟಿ ಬಚಾವೋ ಬೇಟಿ ಪಡಾವೋ ಎಂಬುದಾಗಿ ಬರೆಯಲು ಮುಂದಾಗಿದ್ದಾರೆ. ಆದರೆ, ಅಭಿಯಾನದ ಹೆಸರು ಬರೆಯಲು ಅವರಿಗೆ ಬಂದಿಲ್ಲ. ಅವರು ಬೇಡಿ ಪಡಾವೋ ಬಚ್ಚಾವ್  ಎಂಬುದಾಗಿ ತಪ್ಪಾಗಿ ಬರೆದಿದ್ದಾರೆ.

ಮಂಗಳೂರು: ಸೇಂಟ್ ಜೆರೋಸಾ ಶಾಲೆ ಪ್ರಕರಣ: ವಿದ್ಯಾರ್ಥಿನಿಯ ಪೋಷಕಿಗೆ ಬೆದರಿಕೆ ಕರೆ, ದೂರು ದಾಖಲು

Posted by Vidyamaana on 2024-02-20 11:24:25 |

Share: | | | | |


ಮಂಗಳೂರು: ಸೇಂಟ್ ಜೆರೋಸಾ ಶಾಲೆ ಪ್ರಕರಣ: ವಿದ್ಯಾರ್ಥಿನಿಯ ಪೋಷಕಿಗೆ ಬೆದರಿಕೆ ಕರೆ, ದೂರು ದಾಖಲು

ಮಂಗಳೂರು: ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿ ಧರ್ಮ ಅವಹೇಳನ ಆರೋಪ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ.


ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ಪೋಷಕಿಗೆ ವಿದೇಶದಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಪೋಷಕಿಯ ಕುಟುಂಬದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ.


ಜೆಪ್ಪಿನಮೊಗರು ನಿವಾಸಿಯಾಗಿರುವ ಪೋಷಕಿ ಕವಿತಾ ಅವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಕಂಕನಾಡಿ ನಗರ ಪೊಲೀಸ್‌ ಠಾಣೆಗೆ ಕವಿತಾ ದೂರು ನೀಡಿದ್ದಾರೆ.


ಕವಿತಾ ಪುತ್ರಿ ಸೇಂಟ್ ಜೆರೋಸಾ ಶಾಲೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ದ ಪೋಷಕರ ಪ್ರತಿಭಟನೆಯಲ್ಲೂ ಕವಿತಾ ಭಾಗವಹಿಸಿದ್ದರು.


ಶಿಕ್ಷಕಿ ಆಡಿಯೋ ವೈರಲ್ ಮಾಡಿದ್ದು ಪೋಷಕಿ ಕವಿತಾ ಎಂದು ಆರೋಪಿಸಿ ಬೆದರಿಕೆ ಹಾಕಲಾಗಿದ್ದು, ಕತಾರ್, ದುಬೈ, ಸೌದಿ ಅರೇಬಿಯಾ ಸೇರಿದಂತೆ ಹಲವೆಡೆಯಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು,ಹಲವು ವಿದೇಶಿ ನಂಬ‌ರ್ ಗಳಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ ಕವಿತಾ ದೂರು ದಾಖಲಿಸಿದ್ದಾರೆ

ರಾಮದರ್ಶನ ಪಡೆದು ಹೃದಯಾಘಾತದಿಂದ ಕೊನೆಯುಸಿರೆಳೆದ ಉಡುಪಿ ಮೂಲದ ಶಾನುಭಾಗ್‌

Posted by Vidyamaana on 2024-03-11 08:44:56 |

Share: | | | | |


ರಾಮದರ್ಶನ ಪಡೆದು ಹೃದಯಾಘಾತದಿಂದ ಕೊನೆಯುಸಿರೆಳೆದ ಉಡುಪಿ ಮೂಲದ ಶಾನುಭಾಗ್‌

ಅಯೋಧ್ಯೆ/ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಗಾಳ ಪಾಂಡುರಂಗ ಶಾನುಭಾಗ್‌ (62) ಅವರು ಮಾ.10ರಂದು ಅಯೋಧ್ಯೆಯ ರಾಮಮಂದಿರದ ಬಳಿ ನಿಧನ ಹೊಂದಿದರು. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.ಪ್ರತಿಷ್ಠೆಯ ಮಂಡಲಪೂಜೆ ಸಮಾಪನ ಸಂದರ್ಭ ರವಿವಾರ ಬೆಳಗ್ಗೆ ರಾಮನ ದರ್ಶನ ಪಡೆದು, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂಸ್ಕೃತದಲ್ಲಿಯೇ ಮಾತನಾಡಿದ್ದರು. ಅಪರಾಹ್ನ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ದ್ವಾರದ ಬಳಿ ಹೃದಯಾಘಾತವಾಯಿತು. ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ನಿಧನ ಹೊಂದಿದ್ದರು. ಮುಂದಿನ ವ್ಯವಸ್ಥೆಯನ್ನು ವಿಶ್ವ ಹಿಂದೂ ಪರಿಷತ್‌ ಪ್ರಮುಖರಾದ ಗೋಪಾಲ್‌, ಮಾಜಿ ಶಾಸಕ ಕೆ.ರಘುಪತಿ ಭಟ್‌ ಮಾಡಿದರು.

ಶಾನುಭಾಗ್‌ ಅವರು ಅಂಧರಾಗಿದ್ದರೂ ಬಾಲ್ಯದಿಂದಲೂ ಆರೆಸ್ಸೆಸ್‌ ಸಂಪರ್ಕ ಹೊಂದಿ ಜಿಲ್ಲಾ ಬೌದ್ಧಿಕ್‌ ಪ್ರಮುಖ್‌ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಶ್ರೀರಾಮ ಮಂದಿನ ನಿರ್ಮಾಣ ಹೋರಾಟಗಳಲ್ಲಿಯೂ ಸಕ್ರಿಯರಾಗಿದ್ದರು. ಸಿಂಡಿಕೇಟ್‌ ಬ್ಯಾಂಕಿನ ಮಣಿಪಾಲ ಪ್ರಧಾನ ಕಚೇರಿ, ಉಡುಪಿಯ ಕೆಥೋಲಿಕ್‌ ಸೆಂಟರ್‌ ಕಚೇರಿಗಳಲ್ಲಿ ಟೆಲಿಫೋನ್‌ ಆಪರೇಟರ್‌ ಮತ್ತು ಸಿಬಂದಿ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದರು. ಸಂಸ್ಕೃತ, ರಾಮಾಯಣ, ಮಹಾಭಾರತದಲ್ಲಿ ಅಪಾರವಾದ ಪಾಂಡಿತ್ಯ ಹೊಂದಿದ್ದರು. ಚಿಂತಕರೂ ಆಗಿದ್ದ ಇವರ ನಿಧನಕ್ಕೆ ಪೇಜಾವರ ಶ್ರೀ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌ ಮುಂತಾದವರು ಸಂತಾಪ ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ; ಪೆಟ್ರೋಲ್ ಡೀಸೆಲ್ ದರ ಕಡಿತ

Posted by Vidyamaana on 2024-03-15 06:19:54 |

Share: | | | | |


ಲೋಕಸಭಾ ಚುನಾವಣೆ ಹಿನ್ನೆಲೆ ; ಪೆಟ್ರೋಲ್ ಡೀಸೆಲ್ ದರ ಕಡಿತ

ನವದೆಹಲಿ, ಮಾ 15: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ದೇಶದ ಜನರಿಗೆ ಗಿಫ್ಟ್ ಕೊಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ತಲಾ 2 ರೂ.ಗಳಂತೆ ಇಳಿಕೆ ಮಾಡಿ ಪ್ರಕಟಣೆ ಹೊರಡಿಸಿದೆ. ಮಾ. 15ರ ಬೆಳಗ್ಗೆ 6 ಗಂಟೆಯಿಂದ ಹೊಸ ದರಗಳು ಜಾರಿಯಾಗುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇತ್ತೀಚೆಗೆ ಎಲ್ ಪಿಜಿ ಗ್ಯಾಸ್ ಹಾಗೂ ಸಿಎನ್ ಜಿ ಇಂಧನಗಳ ಬೆಲೆಯನ್ನು ಕೇಂದ್ರ ಸರ್ಕಾರ ಅಲ್ಪ ಇಳಿಸಿತ್ತು. ಅದರ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ದರಗಳೂ ಇಳಿಮುಖವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆ ನಿರೀಕ್ಷೆಯೀಗ ನಿಜವಾಗಿದೆ.


ಬೆಂಗಳೂರಿನಲ್ಲಿ ಮಾ. 13- 14ರ ಪೆಟ್ರೋಲ್ ದರ ಪ್ರತಿ ಲೀಟರಿಗೆ 101.94 ರೂ.ಇದ್ದು, ಪರಿಷ್ಕತರ ದರಗಳು ಅನ್ವಯವಾದ ನಂತರ ಮಾ. 14ರ ಮಧ್ಯರಾತ್ರಿಯಿಂದ ಪ್ರತಿ ಲೀಟರಿಗೆ 99.94 ರೂ. ಆಗಲಿದೆ. ಇನ್ನು, ಮಾ. 13- 14ರಂದು ಪೆಟ್ರೋಲ್ ನ ದರ ಪ್ರತಿ ಲೀಟರ್ ಗೆ 87.89 ಇದ್ದು, ಇದರ ದರ ಪ್ರತಿ ಲೀಟರ್ ಗೆ 85.89 ರೂ. ಆಗಲಿದೆ.



Leave a Comment: