ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ನರಿಮೊಗರಿನಲ್ಲಿ ಬದುಕಿನ ಆಧಾರ ಸ್ತಂಭಕ್ಕೇ ಢಿಕ್ಕಿ ಹೊಡೆದ ಯಮರೂಪಿ ಜಿಪು!

Posted by Vidyamaana on 2024-04-21 12:56:21 |

Share: | | | | |


ನರಿಮೊಗರಿನಲ್ಲಿ ಬದುಕಿನ ಆಧಾರ ಸ್ತಂಭಕ್ಕೇ ಢಿಕ್ಕಿ ಹೊಡೆದ ಯಮರೂಪಿ ಜಿಪು!

ಆತ್ಮೀಯ ಸಮಾಜ ಭಾಂಧವರೇ....

ನಿನ್ನೆ ದಿನಾಂಕ 17/ 4/2024 ರಂದು ರಾತ್ರಿ ನರಿಮೊಗರಿನಲ್ಲಿ ಬೈಕ್ ಗೆ  ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಭಕ್ತಕೋಡಿಯ ಕಡ್ಯ ನಿವಾಸಿ ಲೋಕೇಶ್ ಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದು ಅವರ  ಜೊತೆಯಲ್ಲಿದ್ದ ಮಕ್ಕಳಾದ ದೀಪ್ತಿ (8 ವ), ಗಗನ್ (6ವ) ಜೀವನ್ಮರಣ ಹೋರಾಟದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರಾದ ಲೋಕೇಶ್ ರು ತನ್ನ ವೃದ್ಧ ತಾಯಿಗೆ ಔಷಧಿ ತೆಗೆದುಕೊಳ್ಳಲು ಹೊರಟಾಗ ನಮ್ಮನ್ನು ಜಾತ್ರೆಗೆ ಕರೆದುಕೊಂಡು ಹೋಗಿ  ಅಪ್ಪ ... ಎಂದು ಮಕ್ಕಳಿಬ್ಬರೂ ಹಠ ಮಾಡಿದ್ದಕ್ಕೆ ಜೊತೆಯಲ್ಲಿ ಕರೆದುಕೊಂಡು ಜಾತ್ರೆಯಲ್ಲಿ ಸುತ್ತಾಡಿಸಿ ಮನೆಗೆ

ಕಂಪನಿಯ ರಜತ ಮಹೋತ್ಸವ ವೇದಿಕೆಯಲ್ಲಿ ಅವಘಡ: ಸಿಇಒ ಮೃತ್ಯು

Posted by Vidyamaana on 2024-01-20 16:45:29 |

Share: | | | | |


ಕಂಪನಿಯ ರಜತ ಮಹೋತ್ಸವ ವೇದಿಕೆಯಲ್ಲಿ ಅವಘಡ: ಸಿಇಒ ಮೃತ್ಯು

ಹೈದರಬಾದ್: ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಸಿಇಓ ಹಾಗೂ ಬಹುರಾಷ್ಟ್ರೀಯ ಸಾಫ್ಟ್ ವೇರ್ ಕಂಪನಿಯ ಸಂಸ್ಥಾಪಕ ಕಂಪನಿಯ ರಜತ ಮಹೋತ್ಸವದ ಸಂದರ್ಭದಲ್ಲಿ ಸಮಾರಂಭದ ವೇಳೆ ವೇದಿಕೆಯಲ್ಲಿ ನಡೆದ ದುರಂತದಲ್ಲಿ ಮೃತಪಟ್ಟಿದ್ದಾರೆ.


ಇಲಿನೊಯಿಸ್ ಮೂಲದ ಸಿಇಓ ಸಂಜಯ್ ಶಾ (56) ಮೃತರು ಎಂದು ಗುರುತಿಸಲಾಗಿದೆ.


ರಜತ ಮಹೋತ್ಸವವ ಸಮಾರಂಭವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಆಯೋಜಿಸಲಾಗಿತ್ತು.


ಸಮಾರಂಭಕ್ಕೆ ಚಾಲನೆ ನೀಡಲು ಶಾ ಹಾಗೂ ರಾಜು ಕಬ್ಬಿಣದ ಗೂಡಿನಿಂದ ಕೆಳಗಿಳಿದು ವೇದಿಕೆಗೆ ಬರಬೇಕಿತ್ತು. ಅವರನ್ನು ರೋಪ್ ಬಳಸಿ ಕಬ್ಬಿಣದ ಗೂಡಿನ ಮೂಲಕ ಕೆಳಗಿದ್ದ ವೇದಿಕೆಗೆ ಕರೆತರಲು ಉದ್ದೇಶಿಸಲಾಗಿತ್ತು. ಸಂಗೀತದ ಹಿಮ್ಮೇಳದಲ್ಲಿ ಶಾ ಹಾಗೂ ರಾಜು ಸಿಬ್ಬಂದಿಗೆ ಕೈಬೀಸುತ್ತಾ ಇಳಿಯುತ್ತಿದ್ದರು. ಆದರೆ ದಿಢೀರನೇ ಈ ಕಬ್ಬಿಣದ ಗೂಡಿಗೆ ಜೋಡಿಸಿದ್ದ ಎರಡು ವೈರ್ ಗಳ ಪೈಕಿ ಒಂದು ತುಂಡಾಯಿತು. ಇಬ್ಬರೂ 15 ಅಡಿ ಕೆಳಕ್ಕೆ ಬಿದ್ದು, ಕಾಂಕ್ರಿಟ್ ವೇದಿಕೆಗೆ ಅಪ್ಪಳಿಸಿದರು. ಗಂಭೀರ ಗಾಯಗೊಂಡ ಇವರನ್ನು ತಕ್ಷಣ ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಲಾಯಿತಾದರೂ ಶಾ ಮೃತಪಟ್ಟಿದ್ದಾರೆ.

ನಾಳೆ (ಜೂನ್ 3)ಪುತ್ತೂರು ಕಿಲ್ಲೆ ಮೈದಾನದ ಸಂತೆಗೆ ಹಿಂಬಾಗಿಲಿನಿಂದ ಪ್ರವೇಶಿಸಿ- ತಹಸೀಲ್ದಾ‌ರ್ ಕುಂಞ ಅಹಮ್ಮದ್

Posted by Vidyamaana on 2024-06-02 23:35:39 |

Share: | | | | |


ನಾಳೆ (ಜೂನ್ 3)ಪುತ್ತೂರು ಕಿಲ್ಲೆ ಮೈದಾನದ ಸಂತೆಗೆ ಹಿಂಬಾಗಿಲಿನಿಂದ ಪ್ರವೇಶಿಸಿ- ತಹಸೀಲ್ದಾ‌ರ್ ಕುಂಞ ಅಹಮ್ಮದ್

ಪುತ್ತೂರು: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿ ಮತಗಟ್ಟೆ ಸಮೀಪ ಪುತ್ತೂರು ಕಿಲ್ಲೆ ಮೈದಾನದ ಸೋಮವಾರದ ಸಂತೆ ನಡೆಯಲಿರುವ ಹಿನ್ನೆಲೆಯಲ್ಲಿ ಸಂತೆಯನ್ನು ರದ್ದುಗೊಳಿಸದೆ ಸಂತೆಯ ಪ್ರವೇಶದ ಮುಖ್ಯ ದ್ವಾರವನ್ನು ಬಂದ್ ಮಾಡಲಾಗುವುದು.

ಹಿಂಬಂದಿಯ ಗೇಟಿನ ಮೂಲಕ ಸಾರ್ವಜನಿಕರಿಗೆ ಸಂತೆಗೆ ಆಗಮಿಸಲು ಅವಕಾಶ ಮಾಡಲಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಕುಂಞ ಅಹಮ್ಮದ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮತದಾನ ಪ್ರಕ್ರಿಯೆ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಮುಕ್ತ ಹಾಗು ನ್ಯಾಯೋಚಿತ ನಿಷ್ಪಕ್ಷವಾಗಿ ಚುನಾವಣೆಯನ್ನು ನಡೆಸುವ ಸಲುವಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಿಲ್ಲೆ ಮೈದಾನದ ಸೋಮವಾರ ಸಂತೆಯು ಕೂಡಾ ಚುನಾವಣೆ ಸಂದರ್ಭದಲ್ಲಿ ನಡೆಯುತ್ತದೆ.

ಕಡಬದಲ್ಲಿ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Posted by Vidyamaana on 2023-09-28 21:01:17 |

Share: | | | | |


ಕಡಬದಲ್ಲಿ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ

ಕಡಬ: ಸಮೀಪದ ಮೀನಾಡಿಯಲ್ಲಿಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟು ಮೂರು ತಿಂಗಳು ಕಳೆಯುತ್ತಿದ್ದಂತೆಯೇ ಐತ್ತೂರು ಗ್ರಾಮದಲ್ಲಿ ಮತ್ತೊಂದು ಕಾಡಾನೆ ದಾಳಿಯಾಗಿದ್ದು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.



ಐತ್ತೂರು ಗ್ರಾಮದ ಗೇರ್ತಿಲ‌ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.


ಅವರು ಗುರುವಾರ ಸಂಜೆ ಕೂಲಿ‌ ಕೆಲಸ ಬಿಟ್ಟು ಮನೆಯ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಗ್ರಾಮದ ನೆಲ್ಯಡ್ಕ ಶಾಲೆಗೆ ಹೊಂದಿಕೊಂಡಿರುವ ಕಾರ್ತಿಕೇಯ ಭಜನಾ ಮಂದಿರದ ಬಳಿ ಕಾಡಾನೆ ಹಠಾತ್ತಾಗಿ ಎದುರು ಬಂದು ಅವರನ್ನು‌ ಸೊಂಡಿಲಿನಿಂದ ಎತ್ತಿ ಬಿಸಾಕಿದೆ. ಪರಿಣಾಮವಾಗಿ ಚೋಮ‌ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಪ್ರಥಮ‌ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.


ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಜಿ.ಎಲ್.ಆಚಾರ್ಯ ಜ್ಯುವೆಲ್ಸ್ ನಲ್ಲಿ ಫ್ಲ್ಯಾಶ್ ಸೇಲ್

Posted by Vidyamaana on 2024-02-19 14:04:00 |

Share: | | | | |


ಜಿ.ಎಲ್.ಆಚಾರ್ಯ ಜ್ಯುವೆಲ್ಸ್ ನಲ್ಲಿ ಫ್ಲ್ಯಾಶ್ ಸೇಲ್

ಪುತ್ತೂರು: ವೈವಿಧ್ಯ ಹಾಗೂ ಪಾರಂಪರಿಕ ಚಿನ್ನಾಭರಣಗಳಿಗೆ ಹೆಸರುವಾಸಿಯಾಗಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಇದೀಗ ಫ್ಲ್ಯಾಶ್ ಸೇಲ್ ಮೂಲಕ ಗ್ರಾಹಕರ ಮುಂದೆ ಬಂದಿದೆ.


ಚಿನ್ನಾಭರಣ ಹಾಗೂ ವಜ್ರಾಭರಣಗಳ ಮೇಲೆ ಈ ಫ್ಲ್ಯಾಶ್ ಸೇಲ್ ನಡೆಯಲಿದ್ದು, ಫೆ.19 ರಿಂದ 25ರವರೆಗೆ ಈ ಕೊಡುಗೆ ಲಭ್ಯವಿರಲಿದೆ. 


ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 150ರವೆರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ರೂ.7000ದವರೆಗೆ ಪ್ರತಿ ಕ್ಯಾರೆಟ್ ಮೇಲೆ ರಿಯಾಯಿತಿ ದೊರಕಲಿದೆ.


2 000ಕ್ಕೂ ಮಿಕ್ಕಿದ ಡಿಸೈನ್ ಗಳಲ್ಲಿ ಕಣ್ಮನ ಸೆಳೆಯುವ ಗ್ಲೋ ಆಭರಣಗಳು, ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ವಜ್ರಾಭರಣಗಳ ಆಯ್ಕೆ ಲಭ್ಯವಿದೆ.


ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ, ಕಡಿಮೆ ಬೆಲೆಯಲ್ಲಿ ಪ್ರೀಮಿಯಂ ಗುಣಮಟ್ಟದ ವಜ್ರಾಭರಣಗಳು ಲಭ್ಯವಿದ್ದು, ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ.


ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರದಲ್ಲಿ ಮಳಿಗೆಗಳನ್ನು ಹೊಂದಿದೆ.


ಷರತ್ತುಗಳ ಅನ್ವಯದೊಂದಿಗೆ ‘ಫ್ಲ್ಯಾಶ್ ಸೇಲ್’ ಪುತ್ತೂರು, ಸುಳ್ಯ, ಮೂಡಬಿದ್ರೆ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಎ.24 : ಕಲ್ಲಾರೆ ಶಿವಬ್ರಾಹ್ಮಣ ಸಮಾಜ ಸೇವಾ ಸಂಘದ ಶಿವಕೃಪಾ ಸಭಾಭವನ ಲೋಕಾರ್ಪಣೆ

Posted by Vidyamaana on 2024-04-21 08:44:30 |

Share: | | | | |


ಎ.24 : ಕಲ್ಲಾರೆ ಶಿವಬ್ರಾಹ್ಮಣ ಸಮಾಜ ಸೇವಾ ಸಂಘದ ಶಿವಕೃಪಾ ಸಭಾಭವನ ಲೋಕಾರ್ಪಣೆ

ಪುತ್ತೂರು: ಕಲ್ಲಾರೆ ಶಿವಬ್ರಾಹ್ಮಣ್ಯ (ಸ್ಥಾನಿಕ) ಸಮಾಜ ಸೇವಾ ಸಂಘ ೧೯೩೬ರಲ್ಲಿ ಸ್ಥಾಪನೆಗೊಂಡು, ಕಳೆದ೮೮ ವರ್ಷಗಳಿಂದ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತಾ ಬಂದಿದೆ. ನೂತನವಾಗಿ ಸುಮಾರು ೧.೫೦ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ ಶಿವ ಕೃಪಾ ಸಭಾಭವನದ ಲೋಕಾರ್ಪಣೆ ಏ.೨೪ರಂದು ಸಾಯಂಕಾಲ ೬.೩೦ಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಂದ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್. ಕೆ. ಜಗನ್ನಿವಾಸ ರಾವ್ ಹೇಳಿದರು.



Leave a Comment: