ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಸಿದ್ದು ವಾಯ್ಸ ರಿಮೇಕ್‌ ಮಾಡಿದ್ದ ಯುವಕನ ವಿರುದ್ಧ ಪ್ರಕರಣ

Posted by Vidyamaana on 2023-12-20 08:02:16 |

Share: | | | | |


ಸಿದ್ದು ವಾಯ್ಸ ರಿಮೇಕ್‌ ಮಾಡಿದ್ದ ಯುವಕನ ವಿರುದ್ಧ ಪ್ರಕರಣ

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ವಾಯ್ಸ ರಿಮೇಕ್‌ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಶರತ್‌ ಗೌಡ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ನೀಡಿದ ದೂರಿನನ್ವಯ ನರಸಿಂಹರಾಜಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಿಎಸ್‌ವೈ ಹೇಳಿದ್ದನ್ನು ಸಿದ್ದರಾಮಯ್ಯ ಹೇಳಿದ್ದಾರೆಂದು ವಾಯ್ಸ ರಿಮೇಕ್‌ ಮಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹಣವನ್ನು ಎಲ್ಲಿಂದ ತರಲಿ, ಚುನಾವಣೆಗೋಸ್ಕರ ಹೇಳಿರ್ತಿವಿ. ಹೇಳಿದಂತೆ ನಡೆದುಕೊಳ್ಳಲು ಆಗುತ್ತಾ ಎಂದು ಆಡಿಯೋದಲ್ಲಿದೆ.

ಅಯೋಧ್ಯೆ ರಾಮ ಮಂದಿರ ದರ್ಶನದ ಸಮಯ ವಿಸ್ತರಣೆ : ಹೊಸ ವೇಳಾಪಟ್ಟಿ ಪರಿಶೀಲಿಸಿ

Posted by Vidyamaana on 2024-01-25 07:56:21 |

Share: | | | | |


ಅಯೋಧ್ಯೆ ರಾಮ ಮಂದಿರ ದರ್ಶನದ ಸಮಯ ವಿಸ್ತರಣೆ : ಹೊಸ ವೇಳಾಪಟ್ಟಿ ಪರಿಶೀಲಿಸಿ

ನವದೆಹಲಿ: ಅಯೋಧ್ಯೆಯ ರಾಮ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುವ ಹಿನ್ನೆಲೆಯಲ್ಲಿ, ದೇವಾಲಯದ ಆಡಳಿತವು ದರ್ಶನ ಸಮಯವನ್ನು ವಿಸ್ತರಿಸಲು ನಿರ್ಧರಿಸಿದೆ.ಸೀಮಿತ ಭೇಟಿಯ ಸಮಯದಿಂದಾಗಿ ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗದ ಭಕ್ತರಿಗೆ ಈ ನಿರ್ಧಾರವು ಪರಿಹಾರವಾಗಿದೆ.ಈಗ, ಭಕ್ತರು ರಾತ್ರಿ 10 ಗಂಟೆಯವರೆಗೆ ರಾಮ್ ಲಲ್ಲಾ ದರ್ಶನ ಪಡೆಯಬಹುದು.


ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತವು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಧಿಕೃತ ಮೂಲಗಳ ಪ್ರಕಾರ, ಸುಮಾರು ಐದು ಲಕ್ಷ ಭಕ್ತರು ಪ್ರಸ್ತುತ ಅಯೋಧ್ಯೆಯಲ್ಲಿ ಕ್ಯಾಂಪ್ ಮಾಡುತ್ತಿದ್ದು, ದೇವಾಲಯದಲ್ಲಿ ದರ್ಶನ ಪಡೆಯಲು ತಮ್ಮ ಸರದಿಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಹೆಚ್ಚುವರಿಯಾಗಿ, ನಿಯಮಿತವಾಗಿ ಭಕ್ತರ ಪ್ರವಾಹವೂ ಬರುತ್ತಿದೆ, ಇದು ಜನಸಂದಣಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ.ರಾಮಮಂದಿರಹೊಸದರ್ಶನದಸಮಯ


ಭೇಟಿಯ ಸಮಯದ ದೃಷ್ಟಿಯಿಂದ, ದೇವಾಲಯವು ಎರಡು ಪಾಳಿಗಳಲ್ಲಿ ದರ್ಶನಕ್ಕಾಗಿ ತೆರೆದಿರುತ್ತದೆ. ಬೆಳಗ್ಗೆ 7ರಿಂದ 11.30ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ ಪಾಳಿಯಲ್ಲಿ, ವಿಸ್ತೃತ ಸಮಯವು ಭಕ್ತರಿಗೆ ರಾತ್ರಿ 10 ರವರೆಗೆ ದರ್ಶನ ಪಡೆಯಲು ಅನುವು ಮಾಡಿಕೊಡುತ್ತದೆ, ಇದು ದೇವಾಲಯಕ್ಕೆ ಭೇಟಿ ನೀಡಲು ಮತ್ತು ದೈವಿಕ ಆಶೀರ್ವಾದ ಪಡೆಯಲು ಸಾಕಷ್ಟು ಸಮಯವನ್ನು ಒದಗಿಸುತ್ತದೆ.


ಭಕ್ತರು ರಾಮ್ ಲಲ್ಲಾ ದರ್ಶನವನ್ನು ಸಂಜೆ 7 ರ ಬದಲು ರಾತ್ರಿ 10 ರವರೆಗೆ ಮಾಡಬಹುದು.


ಬೆಳಿಗ್ಗೆ 7 ರಿಂದ 11.30 ರವರೆಗೆ ದರ್ಶನ ತೆರೆದಿರುತ್ತದೆ.


ಸಂಜೆ ಪಾಳಿಯಲ್ಲಿ ದರ್ಶನವು ಮಧ್ಯಾಹ್ನ 3 ರಿಂದ ರಾತ್ರಿ 10 ರವರೆಗೆ ತೆರೆದಿರುತ್ತದೆ.

ಮದುವೆಗೂ ಮುನ್ನ ಚಿನ್ನ ಜಾಗ ಕಾರಿಗೆ ಬೇಡಿಕೆ… ಮನನೊಂದ ಯುವ ವೈದ್ಯೆ ಶಹನಾ ಆತ್ಮಹತ್ಯೆ ರುವೈಸ್ ಪೊಲೀಸ್ ವಶಕ್ಕೆ

Posted by Vidyamaana on 2023-12-07 13:19:41 |

Share: | | | | |


ಮದುವೆಗೂ ಮುನ್ನ ಚಿನ್ನ ಜಾಗ ಕಾರಿಗೆ ಬೇಡಿಕೆ… ಮನನೊಂದ ಯುವ ವೈದ್ಯೆ ಶಹನಾ ಆತ್ಮಹತ್ಯೆ ರುವೈಸ್ ಪೊಲೀಸ್ ವಶಕ್ಕೆ

ತಿರುವನಂತಪುರಂ: ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹಾನಾ ಮಂಗಳವಾರ ಬೆಳಗ್ಗೆ ಕಾಲೇಜು ಬಳಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಶಹಾನಾ ಪೋಷಕರು ದೂರು ನೀಡಿದ್ದು, ಘಟನೆ ಸಂಬಂಧ ಯುವ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಘಟನೆ ವಿವರ: ಶಹಾನಾ ಗೆ ಮದುವೆ ನಿಗದಿಯಾಗಿದ್ದು ಅದರಂತೆ ಯುವ ವೈದ್ಯ ರುವೈಸ್ ಎಂಬುವವರ ಜೊತೆ ಮದುವೆ ಮಾತುಕತೆ ನಡೆದಿತ್ತು, ಈ ನಡುವೆ ಹುಡುಗನ ಕಡೆಯವರು ವರದಕ್ಷಿಣೆ ರೂಪದಲ್ಲಿ 150 ಪವನ್ ಚಿನ್ನ, 15 ಎಕರೆ ಜಾಗ ಜೊತೆಗೆ ಬಿಎಂಡಬ್ಲ್ಯೂ ಕಾರು ನೀಡುವಂತೆ ಕೇಳಿಕೊಂಡಿದ್ದಾರೆ ಆದರೆ ಶಹಾನಾ ಮನೆಯವರ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಉತ್ತಮವಾಗಿರಲಿಲ್ಲ, ಆದರೂ ಐದು ಎಕರೆ ಜಾಗ ಜೊತೆಗೆ ಕಾರು ನೀಡಲು ಶಹಾನಾ ಕುಟುಂಬ ಮುಂದಾಗಿತ್ತು ಆದರೆ ರುವೈಸ್ ಕುಟುಂಬದವರು ತಾವು ಹೇಳಿದ್ದಷ್ಟೇ ನೀಡಬೇಕೆಂದು ಹಠಹಿಡಿದಿದ್ದರು ಆದರೆ ಅಷ್ಟೊಂದು ವರದಕ್ಷಿಣೆ ನೀಡಲು ಆಗುವುದಿಲ್ಲ ಎಂದಾಗ ರುವೈಸ್ ಕುಟುಂಬ ಶಹಾನಾ ಮದುವೆ ವಿಚಾರದಿಂದ ದೂರ ಉಳಿಯಲು ಪ್ರಾರಂಭಿಸಿದ್ದಾರೆ ಇದರಿಂದ ಮನನೊಂದ ಶಹಾನಾ ತಾನು ಇದ್ದ ರೂಮಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.


ಇತ್ತ ಮಗಳು ಆತ್ಮಹತ್ಯೆಗೆ ಶರಣಾಗಿರುವ ವಿಚಾರ ತಿಳಿಯುತ್ತಲೇ ಶಹಾನಾ ಪೋಷಕರು ಪೊಲೀಸ್ ಠಾಣೆಯಲ್ಲಿ ರುವೈಸ್ ಕುಟುಂಬದ ವಿರುದ್ಧ ವರದಕ್ಷಿಣೆ ಕೇಸು ದಾಖಲಿಸಿದ್ದಾರೆ.ಶಹಾನಾ ಕುಟುಂಬದವರ ದೂರಿನ ಮೇರೆಗೆ ಪೊಲೀಸರು ರುವೈಸ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.



ಈ ಕುರಿತು ಮಾಹಿತಿ ನೀಡಿದ ಪೊಲೀಸರು ಈ ಪ್ರಕರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎಂದು ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ಘಟನೆಯ ಬಳಿಕ ರುವೈಸ್ ಅವರನ್ನು ಪಿಜಿ ವೈದ್ಯರ ಸಂಘದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದ್ದು ತನಿಖೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ತನಿಖೆ ಮುಗಿಯುವವರೆಗೆ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗುವುದು ಎಂದು ಕೆಎಂಪಿಜಿಎ ಸಂಸ್ಥೆ ತಿಳಿಸಿದೆ.

ನಕಲಿ ದಾಖಲೆ ಪತ್ರ ಜಾಲ ಪತ್ತೆ: ಪುತ್ತೂರು ಮೂಲದ ಆರೋಪಿ ಸಿಸಿಬಿ ಬಲೆಗೆ

Posted by Vidyamaana on 2023-10-06 20:36:38 |

Share: | | | | |


ನಕಲಿ ದಾಖಲೆ ಪತ್ರ ಜಾಲ ಪತ್ತೆ: ಪುತ್ತೂರು ಮೂಲದ ಆರೋಪಿ ಸಿಸಿಬಿ ಬಲೆಗೆ

ಮಂಗಳೂರು, ಅ.6: ಆಧಾರ್, ರೇಶನ್ ಕಾರ್ಡ್, ಅಂಕಪಟ್ಟಿ ಮತ್ತಿತರ ಅತ್ಯಮೂಲ್ಯ ದಾಖಲೆ ಪತ್ರಗಳನ್ನೇ ಸೃಷ್ಟಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?



ಮಂಗಳೂರು ನಗರದ ಕಂಕನಾಡಿ– ಪಂಪ್ವೆಲ್ ಹಳೆ ರಸ್ತೆಯ ವಿಶ್ವಾಸ್ ಕ್ರೌನ್ ಅಪಾರ್ಟ್ಮೆಂಟಿನ ನೆಲ ಅಂತಸ್ತಿನಲ್ಲಿ ‘’ಹೆಲ್ಪ್ ಲೈನ್ ಮಂಗಳೂರು” ಎಂಬ ಹೆಸರಿನ ಶಾಪ್ ಇಟ್ಟುಕೊಂಡು ನಕಲಿ ದಾಖಲಾತಿಗಳನ್ನು ತಯಾರಿಸಿಕೊಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಕರ್ನಕಟ್ಟೆ ನಿವಾಸಿ ಬರ್ನಾಡ್ ರೋಶನ್ ಮೆಸ್ಕರೇನಸ್ (41) ಮೂಲತ ಪುತ್ತೂರು ತಾಲೂಕಿನ ದರ್ಬೆ ಕಾವೇರಿ ಕಟ್ಟೆ ನಿವಾಸಿ 

 ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ಈತನ ಕಚೇರಿಯಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ, ನಕಲಿ ಶೈಕ್ಷಣಿಕ ದಾಖಲೆ ಪತ್ರಗಳು, ಜನನ ಪ್ರಮಾಣಪತ್ರ ಇತ್ಯಾದಿ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳನ್ನು ಬಳಸಿಕೊಂಡು ಇತರೇ ದಾಖಲಾತಿಗಳನ್ನು ಮಾಡಿಕೊಡುತ್ತಿದ್ದ. ಅವನ್ನೇ ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ  ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

 

ದಾಳಿ ಸಂದರ್ಭದಲ್ಲಿ ವಿವಿಧ ಹೆಸರುಗಳಲ್ಲಿ ತಯಾರಿಸಿಟ್ಟಿದ್ದ ನಕಲಿ ಆಧಾರ್ ಕಾರ್ಡ್ ಗಳು, ನಕಲಿ ರೇಷನ್ ಕಾರ್ಡ್, ನಕಲಿ ಉದ್ದಿಮೆ ಪರವಾನಿಗೆ ಪತ್ರ, ನಕಲಿ ಎಸ್ಎಸ್ಎಲ್ಸಿ ಅಂಕಪಟ್ಟಿ, ನಕಲಿ ಜನನ ಪ್ರಮಾಣ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಮೂರು ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದವರು ಬ್ಯಾಂಕ್ ಇನ್ನಿತರ ಕಚೇರಿಗಳಿಗೆ ಸಾಲ ಸೌಲಭ್ಯಕ್ಕಾಗಿ ಮತ್ತು ಸರಕಾರಿ ಸೌಲಭ್ಯಗಳನ್ನು ಪಡೆಯಲು ಉಪಯೋಗಿಸಿದ್ದಾರೆ. ಆಮೂಲಕ ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದ್ದಾನೆ.

 ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ನಕಲಿ ಪ್ರಮಾಣ ಪತ್ರಗಳನ್ನು ತಯಾರಿಸಲು ಬಳಸುತ್ತಿದ್ದ ಲ್ಯಾಪ್ ಟಾಪ್, ಕಲರ್ ಪ್ರಿಂಟರ್, ಲ್ಯಾಮಿನೇಟರ್ ಮೆಶಿನ್, ಬಯೋಮೆಟ್ರಿಕ್ ಡಿವೈಸ್ ಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ದಾಖಲೆ ಪತ್ರ ತಯಾರಿ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ. 


ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಸಿಸಿಬಿ ಎಸಿಪಿ ಪಿಎ ಹೆಗಡೆ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್, ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ತುಮಕೂರಿನಲ್ಲಿ ತ್ರಿವಳಿ ಕೊಲೆ ಪ್ರಕರಣ: ಬೆಳ್ತಂಗಡಿಯ ಮನೆಗಳಿಗೆ ತಲುಪಿದ ಮೃತದೇಹ

Posted by Vidyamaana on 2024-03-29 11:32:14 |

Share: | | | | |


ತುಮಕೂರಿನಲ್ಲಿ ತ್ರಿವಳಿ ಕೊಲೆ ಪ್ರಕರಣ: ಬೆಳ್ತಂಗಡಿಯ ಮನೆಗಳಿಗೆ ತಲುಪಿದ ಮೃತದೇಹ

ಬೆಳ್ತಂಗಡಿ, ಮಾ.29: ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಕೊಲೆಯಾದವರ ಮೃತದೇಹಗಳು ಇಂದು (ಮಾ.29) ಮುಂಜಾನೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದೆ.


ನಡ ಗ್ರಾಮದ ಟಿ.ಬಿ. ಕ್ರಾಸ್ ನಿವಾಸಿ ಆಟೋ ಚಾಲಕ ಶಾಹುಲ್ ಹಮೀದ್, ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ ಮತ್ತು ಶಿರ್ಲಾಲು ಗ್ರಾಮದ ಸಿದ್ದೀಕ್ ಯಾನೆ ಇಮ್ಮಿಯಾಝ್ ಎಂಬವರ ಮೃತದೇಹಗಳು ಕೊಲೆಗೈದು ಕಾರು ಸಹಿತ ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಾ.22ರಂದು ತುಮಕೂರಿನ ಕುಚ್ಚಂಗಿ ಕೆರೆ ಎಂಬಲ್ಲಿ ಪತ್ತೆಯಾಗಿದ್ದವು.ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಎನ್ ಎ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಬಂದಿರುವ ಕಾರಣ ಇದೀಗ ಮೂವರ ಮೃತದೇಹಗಳನ್ನು ಹಸ್ತಾಂತರಿಸಲಾಗಿದ್ದು, ಕೃತ್ಯ ಬೆಳಕಿಗೆ ಬಂದ ಏಳು ದಿನಗಳ ಬಳಿಕ ಅಂದರೆ ಇಂದು ಬೆಳಗ್ಗೆ ಉಜಿರೆಗೆ ತಲುಪಿವೆ.


.

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Posted by Vidyamaana on 2024-02-13 11:08:34 |

Share: | | | | |


ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಮಂಚಿ ಗ್ರಾಮ ಕುಕ್ಕಾಜೆ ನಿವಾಸಿ ಮಹಮ್ಮದ್ ಸಮೀವುಲ್ಲಾ, ಮಂಚಿ ಗ್ರಾಮ ಕಂಚಿಲ ನಿವಾಸಿ ಇಬ್ರಾಹಿಂ ಬಂಧಿತರು.ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w 149 ಐಪಿಸಿ ಪ್ರಕರಣದಲ್ಲಿ ಆರೋಪಿಗಳಾದ ಮಹಮ್ಮದ್ ಸಮೀವುಲ್ಲಾ (34) ಹಾಗೂ ಇಬ್ರಾಹಿಂ (35) ಎಂಬವರುಗಳು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಅವರನ್ನು ಫೆ.12 ರಂದು ಪೊಲೀಸ್ ಉಪನಿರೀಕ್ಷರಾದ ಮೂರ್ತಿ, ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.


ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿರುತ್ತದೆ.



Leave a Comment: