2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಡ್ರೆಸ್ ಮಳಿಗೆಯಲ್ಲಿ ಅತೀ ಕಡಿಮೆ ಬೆಲೆಗೆ ಮಾರಾಟ

Posted by Vidyamaana on 2023-06-16 06:46:10 |

Share: | | | | |


ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಡ್ರೆಸ್ ಮಳಿಗೆಯಲ್ಲಿ ಅತೀ ಕಡಿಮೆ ಬೆಲೆಗೆ ಮಾರಾಟ

ಪುತ್ತೂರು: ಪುತ್ತೂರಿನ ಡ್ರೆಸ್ ಮಳಿಗೆಗಳ ಪೈಕಿ ಪ್ರಸಿದ್ಧಿಯನ್ನು ಪಡೆದುಕೊಂಡಿರುವ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಜೂನ್ 16ರಿಂದ ನಡೆಯಲಿದೆ.

ಅತೀ ಕಡಿಮೆ ಬೆಲೆಗೆ ಡ್ರೆಸ್ ಗಳ ಮಾರಾಟ ಇಲ್ಲಿ ನಡೆಯಲಿದ್ದು, ಗ್ರಾಹಕರ ನಿರೀಕ್ಷೆಯಂತೆಯೇ ಶುಕ್ರವಾರದಿಂದ ಈ ಸೇಲ್ ಗೆ ಚಾಲನೆ ನೀಡಲಾಗಿದೆ.

ಪುತ್ತೂರು ಕೋಟಿ – ಚೆನ್ನಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗದ ಶಾಲಿಮಾರ್ ಬಿಲ್ಡಿಂಗ್ ನ ಎದುರುಗಡೆ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ಕಾರ್ಯಾಚರಿಸುತ್ತಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ದೀಪಿಕಾ ಸುಳ್ಯದಲ್ಲಿ ಪತ್ತೆ

Posted by Vidyamaana on 2024-05-10 07:20:16 |

Share: | | | | |


ನಾಪತ್ತೆಯಾಗಿದ್ದ ವಿದ್ಯಾರ್ಥಿನಿ  ದೀಪಿಕಾ ಸುಳ್ಯದಲ್ಲಿ ಪತ್ತೆ

ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ.

ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದವಳು ನಾಪತ್ತೆಯಾಗಿದ್ದಳು. ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪುಸ್ತಕ ಮತ್ತು ಮೊಬೈಲನ್ನು ಕಾಲೇಜಿನಲ್ಲಿಯೇ ಬಿಟ್ಟು ತೆರಳಿದ್ದರಿಂದ ಭಾರೀ ಕುತೂಹಲ ಉಂಟಾಗಿತ್ತು.

ಲೋಕಸಭೆ ಚುನಾವಣೆ : ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಣೆ

Posted by Vidyamaana on 2024-04-25 07:17:31 |

Share: | | | | |


ಲೋಕಸಭೆ ಚುನಾವಣೆ : ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಣೆ

ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಿಸಲಾಗಿದೆ. 

ಕರ್ನಾಟಕದ ಹಿಜಾಬ್ ನಿಷೇಧ ಆದೇಶ ವಾಪಸ್, ಸಿಎಂ ಸಿದ್ದರಾಮಯ್ಯ ಘೋಷಣೆ

Posted by Vidyamaana on 2023-12-22 20:31:30 |

Share: | | | | |


ಕರ್ನಾಟಕದ ಹಿಜಾಬ್ ನಿಷೇಧ ಆದೇಶ ವಾಪಸ್, ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು(ಡಿ.22) ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ.ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿತ್ತು. ಹಿಂದಿನ ಬಿಜೆಪಿ ಸರ್ಕಾರದ ವೇಳೆ ನಡೆದ ಈ ಹಿಜಾಬ್ ಗಲಾಟೆ ರಾಜಕೀಯ ಗುದ್ದಾಟಕ್ಕೂ ಕಾರಣಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದಿದ್ದಾರೆ.

ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ

Posted by Vidyamaana on 2023-12-20 09:53:04 |

Share: | | | | |


ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ

ಮಂಗಳೂರು : ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆಇವರು ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್‌ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ.

ಮಂಗಳೂರು ಡ್ರಗ್ಸ್ ಜಾಲದ ಸೂತ್ರಧಾರಿ ಪೊಲೀಸರ ಬಲೆಗೆ

Posted by Vidyamaana on 2023-09-02 15:45:50 |

Share: | | | | |


ಮಂಗಳೂರು ಡ್ರಗ್ಸ್ ಜಾಲದ ಸೂತ್ರಧಾರಿ  ಪೊಲೀಸರ ಬಲೆಗೆ

ಮಂಗಳೂರು: "ಡ್ರಗ್ಸ್ ಫ್ರೀ ಮಂಗಳೂರು" ಎಂಬ ಗುರಿ ಇಟ್ಟುಕೊಂಡು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಮತ್ತು ಗಾಂಜಾ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಡ್ರಗ್ಸ್ ಜಾಲದ ಪ್ರಮುಖ ಸೂತ್ರಧಾರಿ ಎನ್ನಲಾದ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಡ್ರಗ್ ದಂಧೆಯ ಕಿಂಗ್ ಪಿನ್ ಯಾರಿದ್ದಾರೆಂದು ಪತ್ತೆ ಮಾಡಲು ಮಂಗಳೂರು ಸಿಸಿಬಿ ಪೊಲೀಸರು ಕಳೆದ ಮೂರು ತಿಂಗಳಿನಿಂದ ತನಿಖೆ ಕೈಗೊಂಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಬಂಧಿತರಾಗಿರುವ ಹೆಚ್ಚಿನ ಆರೋಪಿಗಳಿಗೆ ನೈಜಿರಿಯಾ ಮೂಲದವರಿಂದಲೇ ಡ್ರಗ್ಸ್ ಪೂರೈಕೆ ಆಗುತ್ತಿರುವುದು ತಿಳಿದುಬಂದಿತ್ತು. ನಿರಂತರ ಕಾರ್ಯಾಚರಣೆ ಬಳಿಕ ನೈಜೀರಿಯಾ ಮೂಲದ ಮಹಿಳೆಯೊಬ್ಬಳು ತನ್ನ ನಿಜ ವಿಚಾರ ಮುಚ್ಚಿಟ್ಟು ಬೆಂಗಳೂರಿನ ಯಲಹಂಕದಲ್ಲಿ ವಾಸ್ತವ್ಯ ಇರುವುದು ಪತ್ತೆಯಾಗಿತ್ತು. 


ಪೊಲೀಸರು ಇದೀಗ ನೈಜೀರಿಯಾ ಮೂಲದ ಅಡೆವೊಲೆ ಅಡೆಟುಟು ಆನು @ ರೆಜಿನಾ ಜರಾ @ ಆಯಿಶಾ(33) ಎಂಬಾಕೆಯನ್ನು ಬಂಧಿಸಿದ್ದಾರೆ. ಈಕೆ ‌ಮೂಲತಃ ನೈಜೀರಿಯಾ ದೇಶದ ಒಂಡೋ ರಾಜ್ಯದ ಅಕುರೆ ನಗರದ ನಿವಾಸಿಯಾಗಿದ್ದು ಪ್ರಸಕ್ತ ಯಲಹಂಕ ಹೋಬಳಿಯ ಜಕ್ಕೂರಿನ ಜಿಪಿ ನಾರ್ತ್ ಅವೆನ್ಯೂ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದಳು. 


ಆರೋಪಿ ವಶದಿಂದ ಒಟ್ಟು 400 ಗ್ರಾಂ ತೂಕದ ರೂ. 20 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಐಫೋನ್-1, ನಗದು ರೂ. 2910 ವಶಪಡಿಸಲಾಗಿದೆ. ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ ರೂ 20,52,910 ಆಗಬಹುದೆಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಣದ ಉದ್ದೇಶದಲ್ಲಿ ಭಾರತದ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದ ಈಕೆ, ಬಳಿಕ ಇಲ್ಲಿಯೇ ಉಳಿದುಕೊಂಡಿದ್ದಳು.‌ ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು ಆನಂತರ ನರ್ಸಿಂಗ್ ಕೆಲಸ ಬಿಟ್ಟು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದಳು. ಮಂಗಳೂರು ನಗರದ ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಮಂಗಳೂರು ಉತ್ತರ, ಕಂಕನಾಡಿ ನಗರ, ಕೊಣಾಜೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈಕೆ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಗಳಲ್ಲಿ ಬಂಧಿತ ಆರೋಪಿಗಳು ಈಕೆಯಿಂದಲೇ ಮಾದಕ ವಸ್ತು ಖರೀದಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.  


ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ  ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

Recent News


Leave a Comment: