Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31
ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ
ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.
Posted by Vidyamaana on 2023-04-25 07:27:36 |
ಪುತ್ತೂರು: ಫೇಸ್ಬುಕ್ನಲ್ಲಿ ಪರಿಚಯವಾದ ಅಪ್ರಾಪ್ತಯನ್ನು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿ ಆಕೆಯನ್ನು ಪುಸಲಾಯಿಸಿ ಅಂಗನವಾಡಿ ಶಾಲೆಯ ವರಾಂಡಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಬಗ್ಗೆ ಅಪ್ರಾಪ್ತಯೋರ್ವಳು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ನವೀನ್ ಫೇಸ್ಬುಕ್ನಲ್ಲಿ ಪರಿಚಯವಾದಕಾಸರಗೋಡು ಮೂಲದ ಅಪ್ರಾಪ್ತಯನ್ನು ಎ.16ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿದ್ದ. ಬಳಿಕ ಆಕೆಯನ್ನು ಪುಸಲಾಯಿಸಿ ರಾತ್ರಿ ಸ್ಕೂಟರ್ನಲ್ಲಿ ಕೆಯೂರಿನ ಮಾಡಾವು ಅಂಗನವಾಡಿ ಬಳಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಆರೋಪಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ರೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಕೆಯ್ಯರು ಗ್ರಾಮದ ಮಾಡವು ನಿವಾಸಿ ನವೀನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Posted by Vidyamaana on 2024-06-19 13:49:15 |
ಬೆಂಗಳೂರು : ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್ಇಡಿ ದೀಪಗಳನ್ನು ಅಳವಡಿಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾರ್ ಸೂಚಿಸಿದ್ದಾರೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದ್ದು ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ.
Posted by Vidyamaana on 2023-03-25 15:43:28 |
ಪುತ್ತೂರು: ಪುತ್ತೂರು ರೋಟರಿ ಕ್ಲಬ್ ಪುತ್ತೂರು ಸಿಟಿ ಚರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ನೆಲ್ಲಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆ ಜಿ ಯು ಕೆ ಜಿ ತರಗತಿಗಳ ಉದ್ಘಾಟನೆ ಮಾ 25 ರಂದು ನಡೆಯಿತು.ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ರೋಟರಿ ಸಂಘಟನೆ ಉತ್ತಮ ನಿರ್ಧಾರ ತೆಗೆದುಕೊಂಡು ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಿ ಇತಿಹಾಸ ನಿರ್ಮಿಸಲು ಹೊರಟ್ಟಿದಾರೆ. ಮಕ್ಕಳ ಆರೋಗ್ಯದ ಕಾಳಜಿ ಜತೆ ಸರಕಾರಿ ಶಾಲೆಯ ಉಳಿಸುವ ನಿಟ್ಟಿನಲ್ಲಿ ವಿಗೆ 5 ಕೋಟಿ ವೆಚ್ಚದಲ್ಲಿ 111 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಕೊಡುವ ಕೆಲಸ ಆಗಿದೆ ಎಂದರು.
ರೋಟರಿ ಸಂಸ್ಥೆಯ ಸದಸ್ಯ ಹಾಗೂ ಎಲ್ ಕೆ ಜಿ,ಯುಕೆಜಿಯತರಗತಿಗಳ ಸಂಚಾಲಕ ಉಲ್ಲಾಸ್ ಪೈ ಮಾತನಾಡಿ ತರಗತಿಯನ್ನು ನಡೆಸಲು ಪುತ್ತೂರು ರೋಟರಿ ಸಿಟಿ ಚಾರಿಟೇಬಲ್ ಟ್ರಸ್ಟ್ ಮುಂದೆ ಬಂದಿರುವುದು ಶ್ಲಾಘನೀಯ ಸರಕಾರಿ ಶಾಲೆಯಗಳ ಅಭಿವೃದ್ಧಿಗೆ ಕೈ ಜೋಡಿಸಿ ಮುಂದಿನ ದಿನಗಳಲ್ಲಿ ಮಾದರಿ ಶಾಲೆ ಆಗಿ ಮಾರ್ಪಾಡು ಮಾಡಲು ಮತ್ತು ದತ್ತು ಸಮಿತಿ ಹಿರಿಯ ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳ ಸಹಕಾರ ಕೋರಿದರು.
ಪುತ್ತೂರು ರೋಟರಿ ಕ್ಲಬ್ ಪುತ್ತೂರು ಸಿಟಿ ಚರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಜಿ ಸುರೇಂದ್ರ ಕಿಣಿ ಮಾತನಾಡಿ ರೋಟರಿ ಸಂಸ್ಥೆಯು ತನ್ನ ಆದಾಯದ ಒಂದು ಅಂಶವನ್ನು ಸಾಮಾಜಿಕ ಚಟುವಟಿಕೆಗಳಿಗೆ ವಿನಿಯೋಗ ಮಾಡುತ್ತಾ ಬಂದಿರುತ್ತದೆ, ಸಂಸ್ಥೆಯು ಪ್ರತಿವರ್ಷ ಉತ್ತಮ ಕಾರ್ಯ ಚಟುವಟಿಕೆಗಳನ್ನು ಆಯೋಜಿಸಿ ಇಂದು 150 ವರ್ಷ ಹಳೆಯ ವಿದ್ಯಾಸಂಸ್ಥೆಯಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಎಲ್ ಕೆ ಜಿ ಯುಕೆಜಿ ತರಗತಿಗಳನ್ನು ಮಾಡಲು ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಹೇಳಿ ಶುಭ ಹಾರೈಸಿದರು.
ವೇದಿಕೆಯಲ್ಲಿ ರೋಟರಿ ಸಿಟಿ ಚಾರಿಟೇಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ಹಾಗೂ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜಾನ್ ಕುಟಿನ ಕೋ ಆರ್ಡಿನೇಟರ್ ತನುಜ ಹಾಗೂ ಮುಖ್ಯ ಗುರುಗಗಳಾದ ಯಶೋಧ ಮತ್ತು ಎಸ್ಡಿಎಂಸಿ ಅಧ್ಯಕ್ಷ ಪಂಚಾಕ್ಷರಿ,ನಿವೃತ್ತ ದೈಹಿಕ ಶಿಕ್ಷಕಿ ಮೀನಾಕ್ಷಿ
ಸಹಾಯಕ ಶಿಕ್ಷಕ ವಿಘ್ನೇಶ್ವರ ಭಟ್, ಅಂಗನವಾಡಿ ಕಾರ್ಯಕರ್ತೆಯರು, ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
Posted by Vidyamaana on 2023-12-28 07:25:01 |
ಬೆಂಗಳೂರು : ಬಿಜೆಪಿಯಲ್ಲಿ (Karnataka BJP) ಆಂತರಿಕ ಕಲಹ ಮಿತಿ ಮೀರುತ್ತಿರುವ ಹೊತ್ತಿನಲ್ಲೇ ಮತ್ತೊಬ್ಬ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಡಿವಿ ಸದಾನಂದ ಗೌಡ (DV S
non
ananda Gowda) ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದಾರೆ.ಈ ಬಗ್ಗೆ ಸುದ್ದಿಗೋಷ್ಠಿ ಕರೆದು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ನಾನು ತುಂಬಾ ಬೇಸರದಿಂದ ಈ ಸುದ್ದಿಗೋಷ್ಟಿ ಕರೆದು ಮಾತನಾಡುತ್ತಿದ್ದೇನೆ.ಕರ್ನಾಟಕ ಬಿಜೆಪಿ ಘಟಕಕ್ಕೆ ಪದಾಧಿಕಾರಿಗಳ ಬಿಡುಗಡೆ ಆಗಿದೆ. ಒಂದು ಪಕ್ಷದ ಆಂತರಿಕ ವ್ಯವಸ್ಥೆ ಇನ್ನೂ ಸರಿ ಆಗಿಲ್ಲ ಯಾಕೆ? ಡಜನ್ ಗಟ್ಟಲೆ ಪ್ರಮುಖ ಸ್ಥಾನದಲ್ಲಿರುವ ನಾಯಕರು ಪಕ್ಷದ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯನ್ನ ಕುಲಗೇಡಿಸೋರು ಬಿಜೆಪಿಯ ಒಳಗಿನವರೇ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲೆಂಬ ದೃಷ್ಟಿಯಿಂದ ಹೇಳುತ್ತಿದ್ದೇನೆ ಎಂದ ಡಿವಿಎಸ್, ನಾನು ನಿನ್ನೆ ಕಡಬ ಒಕ್ಕಲಿಗರ ಭವನ ಕಾರ್ಯಕ್ರಮಕ್ಕೆ ಹೋಗಿದ್ದೆ. ಸುಳ್ಯ ವಿಧಾನಸಭಾ ಕ್ಷೇತ್ರ ಸಂಘಟನೆಯಲ್ಲಿ ನಂಬರ್ 1 ಸ್ಥಾನದಲ್ಲಿರುವ ಕ್ಷೇತ್ರ. ಆಗ ಕಾರ್ಯಕರ್ತರು ಬಂದು ನಿಮ್ಮಂತಹ ಹಿರಿಯರು ಇದ್ದು ಈ ರೀತಿ ಆಗಿದ್ಯಲ್ಲ ಅಂತ ಕೇಳಿದ್ರು, ಗಂಭೀರವಾಗಿ ಬೇಸರದಿಂದ ಪ್ರಶ್ನೆ ಮಾಡಿದ್ರು ಎಂದು ನೋವು ತೋಡಿಕೊಂಡರು.ಕೇಂದ್ರ ಅಥವಾ ರಾಜ್ಯ ನಾಯಕರು ಬುದ್ದಿ ಹೇಳುತ್ತಿಲ್ಲ, ಕರ್ನಾಟಕ ಬಿಜೆಪಿಯಲ್ಲಿ ಯಾರೂ ಹೇಳುವವರಿಲ್ಲ, ಕೇಳೋರಿಲ್ಲ ಎಂದ ಡಿವಿ ಸದಾನಂದ ಗೌಡ, ನಾವು ಹೇಳಿದಂತೆ ನಡೆಯುತ್ತೆ ಅಂತ ತಿಳಿದಿದ್ದಾರೆ. ಕುಲಗೆಟ್ಟ ವ್ಯವಸ್ಥೆ ಈ ರೀತಿ ಎಂದೂ ನೋಡಿರಲಿಲ್ಲ. ಕರ್ನಾಟಕ ವಿಕಸಿತ ಬಿಜೆಪಿ ಬಗ್ಗೆ ಯಾರೂ ಯೋಚನೆ ಮಾಡಲ್ವಾ? ಪಕ್ಷದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವವರ ಬಾಯಿಗೆ ಬೀಗ ಹಾಕುವ ಕೆಲಸ ಅಗಬೇಕಿದೆ. ಪಕ್ಷ ಚಟುವಟಿಕೆ ಹೇಗೆ ಆರಂಭಿಸೋದು ಅಂತ ನನ್ನಂತಹ ಹಿರಿಯ ನಾಯಕನಿಗೆ ಅನಿಸಿದೆ. ನಮ್ಮ ತಂಡದ ಬಗ್ಗೆ ನಾವೇ ಮಾತನಾಡುವುದು ಬಾರೀ ದೊಡ್ಡ ರೀತಿಯಲ್ಲಿ ಪರಿಣಾಮ ಬೀರುತ್ತೆ ಎಂದರು.ಕಾರ್ಯಕರ್ತರು ಪಕ್ಷದ ನಾಯಕರನ್ನ ಪ್ರಶ್ನಿಸುವ ಸ್ಥಿತಿ ಬಂದೊದಗಿದೆ. ಹೀಗಾಗಿ ಅರಿತುಕೊಳ್ಳದಿದ್ದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಎಚ್ಚರಿಕೆ ನೀಡಿದ ಸದಾನಂದ ಗೌಡ, ಹೊಸ ಟೀಂ ಮಾಡುವಾಗ ನಿಮ್ಮನ್ನ ಪರಿಗಣಿಸಿದ್ರಾ ಅಂತ ಕಾರ್ಯಕರ್ತರು ನನ್ನನ್ನ ಕೇಳಿದ್ರು. ಅದಕ್ಕೆ ಏನು ಉತ್ತರ ಕೊಡಲಿ ಹೇಳಿ ನಾನು? ಅದಕ್ಕೆ ನಾನು ಹೇಳಿದೆ, ಇಲ್ಲ ಬಂದಿಲ್ಲ. ಹೊಸ ಟೀಂ ರಚನೆ ಮಾಡುವಾಗಲೂ ಸಮಾಲೋಚನೆ ಮಾಡಿಲ್ಲ. ತುಂಬಾ ನೋವಾಗ್ತಿರೋದು ನನಗೆ ಮಾದ್ಯಮಗಳ ಮೂಲಕವೇ ಈ ಎಲ್ಲ ಬೆಳವಣಿಗೆಗಳು ತಿಳಿಯಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.
ಪಕ್ಷದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಕೇಂದ್ರ ನಾಯಕರು ಯಾರೂ ಬಂದು ಮಾತನಾಡುತ್ತಿಲ್ಲ, ವಿಪಕ್ಷ ನಾಯಕರು, ಪಕ್ಷದ ಅಧ್ಯಕ್ಷರ ನೇಮಕದ ವಿಳಂಬವೇ ಪಕ್ಷಕ್ಕೆ ದೊಡ್ಡ ಹಿನ್ನಡೆ ಆಗಿದೆ. ಪಕ್ಷದಲ್ಲಿ ಅಧಿಕಾರ ಅನುಭವಿಸಿ ಮಾತನಾಡುತ್ತಿರುವುದು ಒಳ್ಳೆಯದಲ್ಲ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೋದಿ ಪ್ರಧಾನಿ ಮಾಡುವ ದೃಷ್ಟಿಯಿಂದ ಸುಮ್ಮನಿರಬೇಕು ಎಂದರು.ಇನ್ನು, ಪಕ್ಷ ವಿರೋಧಿ ಹೇಳಿಕೆ ಕೊಟ್ಟ ಜನಾರ್ಧನ ರೆಡ್ಡಿಯನ್ನ ನಾನು ಕೂಡಲೇ ಸಸ್ಪೆಂಡ್ ಮಾಡಿದ್ದೆ ಎಂದ ಡಿ.ವಿ ಸದಾನಂದಗೌಡ, ಯತ್ನಾಳ್ರನ್ನೂ ಅಮಾನತ್ತು ಮಾಡಿದ್ದೆ. ಆಮೇಲೆ ಬಿಎಸ್ವೈ ಬಸನಗೌಡ ಪಾಟೀಲ ಯತ್ನಾಳ್ ಅಮಾನತು ಆದೇಶ ವಾಪಾಸ್ ಪಡೆಯಿರಿ ಅಂದ್ರು. ಅದರ ಪರಿಣಾಮ ಇವತ್ತು ಅನುಭವಿಸ್ತಾ ಇದ್ದೀವಿ. ನನ್ನ ಕಾಲಘಟ್ಟದಲ್ಲಿ ಈ ರೀತಿ ನಡೆದಿರಲಿಲ್ಲ. ಪಕ್ಷದ ರಾಜ್ಯಾಧ್ಯಕ್ಷರು ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕು ಎಂದು ಹೇಳಿದರು.
ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ 40,000 ಕೋಟಿ ಮೌಲ್ಯದ ಹಗರಣದ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ ಗಂಭೀರ ಆರೋಪದ ಬಗ್ಗೆಯೂ ಮಾತನಾಡಿದ ಡಿವಿ ಸದಾನಂದ ಗೌಡ, ನಾನು ಯತ್ನಾಳ್ರನ್ನ ಅಮಾನತ್ತು ಮಾಡಿದ್ದೆ, ಬಿಎಸ್ವೈ ವಾಪಾಸ್ ಪಡೆಸಿದ್ದರ ಪರಿಣಾಮ ಇವತ್ತು ಅನುಭವಿಸ್ತಿದ್ದೀವಿ.ಯತ್ನಾಳ್ಗೆ ಕನಿಷ್ಠ ನೋಟೀಸ್ ಆದರೂ ಜಾರಿ ಮಾಡಬೇಕು. ಇಲ್ಲದಿದ್ದರೆ ಪಕ್ಷವನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
Posted by Vidyamaana on 2023-08-11 12:56:45 |
ಬೆಳ್ತಂಗಡಿ: ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದರು. ಆದರೆ ಇದೀಗ ನಾನು ಆ ರೀತಿ ಹೇಳಿಕೆ ನೀಡಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು ಸೌಜನ್ಯ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದ್ದೇ ನಾನು, ವಿಧಾನಸಭೆಯಲ್ಲಿ ಈ ಬಗ್ಗೆ ಒತ್ತಾಯ ಮಾಡಿರುವುದೇ ನಾನು, 6 ತಿಂಗಳು ಸಿಬಿಐ ಚೆನ್ನಾಗಿ ತನಿಖೆ ಮಾಡಿದೆ, ಆದರೆ 6 ತಿಂಗಳ ಬಳಿಕ ಸಿಬಿಐ ಕವಚಿ ಬಿದ್ದಿದ್ದು, ತಪ್ಪು ದಾರಿಯಲ್ಲಿ ಹೋಗಿದೆ. ನನ್ನ ಪ್ರಕಾರ ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಗಳ ಪತ್ತೆ ಹಚ್ಚಲು ಸಾಧ್ಯ ಸಂದರ್ಭ ಬಂದಾಗ ಸೌಜನ್ಯ ವಿಚಾರದಲ್ಲಿ ಹೇಳಬೇಕಾದ ವಿಚಾರವನ್ನು ಹೇಳುತ್ತೇನೆ.
ಆದರೆ ಸತ್ಯ ಹೇಳಿದರೆ ನನ್ನನ್ನು ಕೊಲ್ಲುತ್ತಾರೆ ಎಂದು ನಾನು ಹೇಳೆ ಇಲ್ಲ ಎಂದರು. ಜೀವಂತವಾಗಿ ಯಾರಿಗೂ ನನ್ನನ್ನು ಕೊಲ್ಲಲು ಸಾಧ್ಯವಿಲ್ಲ ಜಿಲ್ಲೆಯಲ್ಲಿ ತಾಲೂಕಿನಲ್ಲಿ ಎಷ್ಟೇ ದೊಡ್ಡವರಿಗೂ ಒಬ್ಬನನ್ನು ಕೊಲ್ಲಲು ಸಾಧ್ಯವಿಲ್ಲ. ಬೆಳ್ತಂಗಡಿಯಲ್ಲಿ ನಡೆದ ಸಭೆಯಲ್ಲಿ ದೇವರು ನನ್ನನ್ನು ರಕ್ಷಣೆ ಮಾಡುತ್ತಾರೆ ಎಂದಿದ್ದೆ, ಆದರೆ ನನ್ನ ಮಾತನ್ನು ಮಾಧ್ಯಮಗಳ ತಿರುಚಿವೆ ಎಂದಿದ್ದಾರೆ.
Posted by Vidyamaana on 2023-03-26 11:42:14 |
ಬೆಂಗಳೂರು: ಭಾರತ್ ಜೋಡೋದ ಯಶಸ್ಸನ್ನು ಸಹಿಸದೇ ಕವಟದಿಂದ, ದ್ವೇಷದಿಂದ ಕಾಂಗ್ರೆಸಿನ ಯುವ ನಾಯಕ, ಸಂಸದ ರಾಹುಲ್ ಗಾಂಧಿಯವರನ್ನು ಜೈಲಿಗೆ ಹಾಕುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಆದ್ದರಿಂದ ನರೇಂದ್ರ ಮೋದಿ ವಿರುದ್ಧ ಮೋದಿ ಹಟಾವೋ, ದೇಶ ಬಚಾವೋ ಎನ್ನುವ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಿದ್ದೇವೆ ಎಂದು ಕರ್ನಾಟಕ ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ. ಘೋಷಿಸಿದ್ದಾರೆ.
ಮೋದಿ ಎಂಬ ಉಪನಾಮ ಹೊಂದಿರುವ ವ್ಯಕ್ತಿಗಳು, ಮಧ್ಯಮ ವರ್ಗದವರು ಕಟ್ಟಿರುವ ತೆರಿಗೆ ಹಣವನ್ನು ಲೂಟಿ ಮಾಡಿದ್ದು, ಅದಕ್ಕೆ ಪ್ರಧಾನಿ ಬೆಂಬಲ ನೀಡಿದ್ದಾರೆ. ಹೀಗಿರುವಾಗ ಇದನ್ನು ಕಾಂಗ್ರೆಸಿನ ಮುಂಚೂಣಿ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿರುವುದರಲ್ಲಿ ತಪ್ಪೇನು ಎಂದು ಜುನೈದ್ ಪ್ರಶ್ನಿಸಿದ್ದಾರೆ.
ಸಂಸದನಾಗಿ, ಕಾಂಗ್ರೆಸ್ ಮುಂಚೂಣಿ ನಾಯಕನಾಗಿ, ಜಾತ್ಯಾತೀತತೆ, ಬಾಂಧವ್ಯದ ತಳಹದಿಯೊಂದಿಗೆ ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಯುವ ನಾಯಕ ರಾಹುಲ್ ಗಾಂಧಿ, ಮೋದಿ, ಚೋಕ್ಸಿಯಂತಹವರು ಲೂಟಿ ಮಾಡಿರುವ ಕೋಟ್ಯಾಂತರ ರೂ.ವನ್ನು ರಾಹುಲ್ ಗಾಂಧಿ ಸರಿಯಾಗಿಯೇ ಪ್ರಶ್ನಿಸಿದ್ದಾರೆ. ಇದನ್ನು ಸಹಿಸದೇ ಅವರನ್ನು ಜೈಲಿಗೆ ಕಳುಹಿಸುವುದು, ಅವರ ಸಂಸದ ಸ್ಥಾನವನ್ನು ರದ್ದು ಮಾಡಿಸುವ ಪ್ರಧಾನಿ ಮೋದಿ ಕ್ರಮಕ್ಕೆ ಯಂಗ್ ಬ್ರಿಗೇಡ್ ಖಂಡನೆ ಸೂಚಿಸುತ್ತದೆ ಎಂದು ಜುನೈದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಅನುಸರಿಸುತ್ತಿರುವ ಮೋದಿ ಕ್ರಮವನ್ನು ಪ್ರತಿ ಮನೆಗೂ ತಲುಪಿಸಲಾಗುವುದು, ಪ್ರತಿ ಮಗುವಿಗೂ ತಲುಪಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.