ಉಡುಪಿ: ನಾಳೆ (ಜು.09)ರಂದು ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿಗಳು News

Posted by vidyamaana on 2024-07-08 17:22:55 |

Share: | | | | |


ಉಡುಪಿ: ನಾಳೆ (ಜು.09)ರಂದು ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಜು.09 ರಂದು ರೆಡ್ ಅಲರ್ಟ್ ಘೋಷಿಸಿದ್ದು ಅದರಂತೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

 Share: | | | | |


ಉಳ್ಳಾಲದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ – ವಿಟ್ಲ ಕೋಡಿ ಮೂಲದ ರುಕಿಯ ಸಹಿತ ನಾಲ್ವರ ಬಂಧನ- ಪಿಂಪ್‌ ಲತೀಫ್ ಪರಾರಿ

Posted by Vidyamaana on 2023-03-08 11:42:43 |

Share: | | | | |


ಉಳ್ಳಾಲದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ – ವಿಟ್ಲ ಕೋಡಿ ಮೂಲದ ರುಕಿಯ ಸಹಿತ ನಾಲ್ವರ ಬಂಧನ- ಪಿಂಪ್‌ ಲತೀಫ್ ಪರಾರಿ

ಉಳ್ಳಾಲ: ವೇಶ್ಯಾವಾಟಿಕೆ ದಂಧೆಯನ್ನು ಭೇದಿಸಿರುವ ಉಳ್ಳಾಲ ಪೊಲೀಸರು, ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ. ದಾಳಿಯ ವೇಳೆ ಗ್ರಾಹಕ ಹಾಗೂ ಮಹಿಳೆಯರ ಮಧ್ಯೆ ಪಿಂಪ್‌ ರೀತಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಪರಾರಿಯಾಗಿ ತಪ್ಪಿಸಿಕೊಂಡಿದ್ದಾನೆ.ಬಂಟ್ವಾಳದ ಬೋಳಂತೂರು ವಿಟ್ಲಕೋಡಿ ನಿವಾಸಿ ರುಕಿಯಾ (50), ಉಳ್ಳಾಲ ಸುಭಾಶ್ ನಗರ, ಕಡಪರನಿವಾಸಿ ಅಬ್ದುಲ್ ಶಮೀರ್ (30), ಬೆಳ್ತಂಗಡಿ ಕಾಣಿಯೂರು ನೋಂಡಿಲ್ ಕಜೆ ಮನೆ ನಿವಾಸಿ ಅಬ್ದುಲ್ ರಝಾಕ್ ಉಸ್ಮಾನ್ (45) ಹಾಗೂ ಉಳ್ಳಾಲ ಅಕ್ಕರೆಕೆರೆಮಿಲಾಸ್ ಪ್ಲಾಟ್ ನಿವಾಸಿ ಮುಹಮ್ಮದ್ ಇಬ್ರಾಹೀಂ(38) ಬಂಧಿತ ಆರೋಪಿಗಳು. ಲತೀಫ್ ಎಂಬಾತ ತಲೆಮರೆಸಿಕೊಂಡಿರುವ ಪಿಂಪ್‌.ಉಳ್ಳಾಲದ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ವಿಜೇತ ನಗರದಲ್ಲಿರುವ ʼ ಯಾನ್ವಿʼ   ಎಂಬ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಬಂದ ಮೇರೆಗೆ ಉಳ್ಳಾಲ ಪೊಲೀಸರು ,  ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ.   ಈಸಂಬಂಧ ರುಕಿಯಾ ಮತ್ತು ಲತೀಫ್ ಎಂಬವರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತುರುಕಿಯಾಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಲತೀಫ್  ತಲೆಮರೆಸಿಕೊಂಡಿದ್ದಾನೆ. ದಾಳಿಯ ವೇಳೆ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್’ಗಳು, 5000 ರೂ.ನಗದು ಸೇರಿ ಒಟ್ಟು 1,76,580 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೀಪ್ ಜಿ.ಎಸ್ ಹಾಗೂ ಪಿಎಸ್ಐ ಮಂಜುಳಾ, ಸಿಬ್ಬಂದಿಗಳಾದ ಮಂಜುನಾಥ್, ವಾಸುದೇವ, ಚವ್ಹಾಣ್, ದಾಕ್ಷಾಯಿಣಿ, ಲಕ್ಷ್ಮೀ, ಎಸಿಪಿ ಸ್ಮಾಡ್ ಸಿಬ್ಬಂದಿ ರೆಜಿ ಭಾಗವಹಿಸಿದ್ದರು.

ಕಬಕ ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರೌಢಶಾಲಾ ಮಟ್ಟದ ಫುಟ್ಬಾಲ್ ಪಂದ್ಯ

Posted by Vidyamaana on 2023-09-12 11:08:54 |

Share: | | | | |


ಕಬಕ ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರೌಢಶಾಲಾ ಮಟ್ಟದ ಫುಟ್ಬಾಲ್ ಪಂದ್ಯ

ಪುತ್ತೂರು: ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟ ಸೆ. 9ರಂದು ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಯ್ಯ ಅವರ ನೇತೃತ್ವದಲ್ಲಿ ನಡೆಯಿತು. 

ಕಬಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಎಂ.ಪಿ. ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು. 

ಕಬಕ ಗ್ರಾಮ  ಪಂಚಾಯತ್ ಉಪಾಧ್ಯಕ್ಷ, ಸದಸ್ಯರು, ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ., ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ ಹಾಗೂ ಗಣ್ಯರು  ಉಪಸ್ಥಿತರಿದ್ದರು. 

ಶಾಲಾ ಮುಖ್ಯಗುರು ಸುರೇಖಾ ಸ್ವಾಗತಿಸಿ, ಸುಮಿತ್ರಾ ವಂದಿಸಿದರು. ಶಿಕ್ಷಕಿ ಶಾಂತ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಹಕರಿಸಿದರು.

ನಿಷ್ಠಾವಂತ ಬಿಜೆಪಿಯವರಿಗೆ ಮಾತ್ರ ಪದಾಧಿಕಾರಿ ಮಾಡಿದ್ದಾರೆ: ಶಾಸಕ ಯತ್ನಾಳ್ ಅಸಮಾಧಾನ

Posted by Vidyamaana on 2023-12-24 12:36:38 |

Share: | | | | |


ನಿಷ್ಠಾವಂತ ಬಿಜೆಪಿಯವರಿಗೆ ಮಾತ್ರ ಪದಾಧಿಕಾರಿ ಮಾಡಿದ್ದಾರೆ: ಶಾಸಕ ಯತ್ನಾಳ್ ಅಸಮಾಧಾನ

ವಿಜಯಪುರ:ಯುವ ಮತ್ತು ಹೊಸ ಮುಖಗಳು, ವಿವಿಧ ಪ್ರದೇಶಗಳ ನಾಯಕರು, ಆರೆಸ್ಸೆಸ್ ನಿಷ್ಠಾವಂತರು ಮತ್ತು ಪಕ್ಷದ ಹಿರಿಯರ ಮಿಶ್ರಣವನ್ನು ಹೊಂದಿರುವ ರಾಜ್ಯ ಪದಾಧಿಕಾರಿಗಳ ಪಟ್ಟಿಗೆ ಬಿಜೆಪಿ ಕೇಂದ್ರ ನಾಯಕತ್ವವು ಶನಿವಾರ ಅನುಮೋದನೆ ನೀಡಿದೆ.ಇನ್ನು ಪದಾಧಿಕಾರಿಗಳ ನೇಮಕಕ್ಕೆ ಶಾಸಕ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದರು."ಪದಾಧಿಕಾರಿಗಳ ಆಯ್ಕೆ ನನ್ನ ಗಮನಕ್ಕೆ ಬಂದಿಲ್ಲ.ಅದು ಹೇಗೆ ನನ್ನ ಗಮನಕ್ಕೆ ಬರುತ್ತದೆ. ನಾವೇನು ಬಿಜೆಪಿ ಕಾರ್ಯಕರ್ತರಾ? ನಾವು ದೇಶದ ಕಾರ್ಯಕರ್ತರು ಅಷ್ಟೆ. ನಿಷ್ಠಾವಂತ ಬಿಜೆಪಿಯವರಿಗೆ ಅಷ್ಟೆ ಪದಾಧಿಕಾರಿ ಮಾಡಿದ್ದಾರೆ" ಎಂದು ಶಾಸಕ ಯತ್ನಾಳ್ ಹೇಳಿದರು.


ಬಿಎಸ್ ಯಡಿಯೂರಪ್ಪ ಪಾಳೆಯದ ಭಾಗವಾಗಿರುವ ಹಲವಾರು ನಾಯಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಅವರ ವಿರೋಧಿಗಳಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿ ಸೋಮಣ್ಣ ಅವರು ಪಟ್ಟಿಗೆ ಬರಲು ವಿಫಲರಾಗಿದ್ದಾರೆ.


ಪದಾಧಿಕಾರಿಗಳಲ್ಲಿ 10 ರಾಜ್ಯ ಉಪಾಧ್ಯಕ್ಷರು, 10 ರಾಜ್ಯ ಕಾರ್ಯದರ್ಶಿಗಳು, ನಾಲ್ವರು ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳ ಮುಖ್ಯಸ್ಥರು ಸೇರಿದ್ದಾರೆ.


ರಾಜ್ಯ ಉಪಾಧ್ಯಕ್ಷರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ್, ರಾಜುಗೌಡ ನಾಯ್ಕ್, ಎನ್.ಮಹೇಶ್,ಅನಿಲ್ ಬೆನಕೆ, ಹರತಾಳ್ ಹಾಲಪ್ಪ, ರೂಪಾಲಿ ನಾಯ್ಕ್, ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರ ಇದ್ದಾರೆ.


ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಬಿಜೆಪಿ ರಾಷ್ಟ್ರೀಯ ನಾಯಕತ್ವದ ವಿರುದ್ಧ ಸತತ ವಾಗ್ದಾಳಿ ನಡೆಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಉತ್ತರ ಕರ್ನಾಟಕದ ಪ್ರಭಾವಿ ಪಂಚಮಸಾಲಿ ಲಿಂಗಾಯತ ಮುಖಂಡ, ಮಾಜಿ ಸಚಿವ ನಿರಾಣಿ ಅವರನ್ನು ನೇಮಿಸಿದ ಕ್ರಮವು ಪ್ರತಿತಂತ್ರವಾಗಿದೆ.


ಆರೆಸ್ಸೆಸ್ ನಿಷ್ಠಾವಂತ ಮಾಜಿ ಸಚಿವ ವಿ ಸುನೀಲ್ ಕುಮಾರ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸ್ಥಾನ ಪಡೆದಿದ್ದಾರೆ. ಇತರ ಮೂವರಲ್ಲಿ ಪಿ ರಾಜೀವ್, ಎನ್ ಎಸ್ ನಂದೀಶ್ ರೆಡ್ಡಿ ಮತ್ತು ಪ್ರೀತಂ ಗೌಡ ಸೇರಿದ್ದಾರೆ.ಯುವ ಮತ್ತು ತಾಜಾ ಮುಖಗಳು ಸೇರಿದಂತೆ 10 ರಾಜ್ಯ ಕಾರ್ಯದರ್ಶಿಗಳು: ಶೈಲೇಂದ್ರ ಹೆಬ್ಬಾಳೆ, ಡಿ ಎಸ್ ಅರುಣ್, ಬಸವರಾಜು ಮತ್ತಿಮೋಡ್, ಸಿ ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಪುರ, ಲಕ್ಷ್ಮಿ ಅಶ್ವಿನ್ ಗೌಡ ಮತ್ತು ಅಂಬಿಕಾ ಹುಲಿನಾಯ್ಕರ್.


ವಿವಿಧ ಮೋರ್ಚಾ ಮುಖ್ಯಸ್ಥರಲ್ಲಿ ಎ ಎಸ್ ಪಾಟೀಲ್ ನಡಹಳ್ಳಿ (ರೈತ ಮೋರ್ಚಾ), ಅನಿಲ್ ಥಾಮಸ್ (ಅಲ್ಪಸಂಖ್ಯಾತ ಮೋರ್ಚಾ), ರಘು ಕೌಟಿಲ್ಯ (ಹಿಂದುಳಿದ ವರ್ಗಗಳ ಮೋರ್ಚಾ), ಎಸ್ ಮಂಜುನಾಥ್ (ಎಸ್ ಸಿ ಮೋರ್ಚಾ), ಬಂಗಾರು ಹನುಮಂತು (ಎಸ್ ಟಿ ಮೋರ್ಚಾ), ಧೀರಜ್ ಮುನಿರಾಜು (ಯುವ ಮೋರ್ಚಾ) ಮತ್ತು ಸಿ. ಮಂಜುಳಾ (ಮಹಿಳಾ ಮೋರ್ಚಾ).


ಸುಬ್ಬನರಸಿಂಹ ಅವರನ್ನು ರಾಜ್ಯ ಖಜಾಂಚಿಯಾಗಿ ನೇಮಕ ಮಾಡಲಾಗಿದೆ.ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಕೆಲವು ನಾಯಕರಾದ ಹರತಾಳ್ ಹಾಲಪ್ಪ, ರೂಪಾಲಿ ನಾಯ್ಕ್ ಮತ್ತು ಎಎಸ್ ಪಾಟೀಲ್ ನಡಹಳ್ಳಿ ಅವರಿಗೂ ಅವಕಾಶ ಕಲ್ಪಿಸಲಾಗಿದೆ.


ಕುತೂಹಲಕಾರಿಯಾಗಿ ಹಿಂದಿನ ಆಡಳಿತದಲ್ಲಿ ಬಿಜೆಪಿ ಸೇರಲು ಕಾಂಗ್ರೆಸ್ ಬಂಡಾಯಗಾರರಲ್ಲಿ ಒಬ್ಬರಾಗಿದ್ದ ಬೈರತಿ ಬಸವರಾಜ್ ಮತ್ತು ಮಾಜಿ ಬಿಎಸ್ಪಿ ನಾಯಕರಾದ ಕೊಳ್ಳೇಗಾಲದ ಮಾಜಿ ಶಾಸಕ ಎನ್ ಮಹೇಶ್ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.


ಯುವ ನಾಯಕರಾದ ಪ್ರೀತಂ ಗೌಡ ಮತ್ತು ಪಿ ರಾಜೀವ್ ಕೂಡ ಸೇರ್ಪಡೆಗೊಂಡಿದ್ದಾರೆ.


ಈ ಹಿಂದೆ ಎಂಎಲ್‌ಸಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಮಾಳವಿಕಾ ಅವಿನಾಶ್‌ ಅವರು ರಾಜ್ಯ ಉಪಾಧ್ಯಕ್ಷರ ಪೈಕಿ ಏಕೈಕ ಮಹಿಳೆಯಾಗಿದ್ದಾರೆ. ಲಕ್ಷ್ಮಿ ಅಶ್ವಿನ್ ಗೌಡ ಅವರಂತಹ ತಾಜಾ ಮುಖಗಳೂ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.


ಬಿಜೆಪಿ ಹೈಕಮಾಂಡ್ ಇತ್ತೀಚೆಗೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನಗಳನ್ನು ಭರ್ತಿ ಮಾಡಿದ ನಂತರ ಪದಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ.

ನೆಲ್ಯಾಡಿ : ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆ ಉದ್ಘಾಟನೆ

Posted by Vidyamaana on 2023-09-18 15:36:23 |

Share: | | | | |


ನೆಲ್ಯಾಡಿ : ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆ ಉದ್ಘಾಟನೆ

ನೆಲ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆಯು ನೆಲ್ಯಾಡಿ ರಬ್ಬರ್ ಸೊಸೈಟಿ ಬಳಿ ಸೈಂಟ್ ಮೇರೀಸ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.



ಉದನೆ ಸಂತ ಅಂತೋನೀಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ.ಫಾ. ಹನಿ ಜೇಕಬ್ ರವರು ಶಾಖೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.



ಸಭಾ ಕಾರ್ಯಕ್ರಮವನ್ನು ಬೆಳಾಲು ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.



ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಬಾಣಜಾಲು, ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಲಾಂ ಬಿಲಾಲ್, ಸಂಘದ ಅಧ್ಯಕ್ಷರಾದ ಕುಸುಮಾಧರ್ ಎಸ್.ಕೆ., ಸಂಘದ ಉಪಾಧ್ಯಕ್ಷರಾದ ಗಿರಿಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ. ಉಪಸ್ಥಿತರಿದ್ದರು.


ನವ್ಯ ಸ್ವಾಗತಿಸಿದರು. ಚೇತನ್ ಎ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅರ್ಪಣಾ ವಂದಿಸಿದರು. ಡಾ. ರಾಜೇಶ್ ಬೆಜ್ಜಂಗಳ ನಿರೂಪಿಸಿದರು.

ಪುತ್ತೂರು ನಗರ ಸಭೆ ಉಪಚುನಾವಣೆ ಕೈ ಅಭ್ಯರ್ಥಿಗಳ ಪಟ್ಟಿ ಫೈನಲ್

Posted by Vidyamaana on 2023-12-14 20:44:12 |

Share: | | | | |


ಪುತ್ತೂರು ನಗರ ಸಭೆ ಉಪಚುನಾವಣೆ ಕೈ ಅಭ್ಯರ್ಥಿಗಳ ಪಟ್ಟಿ ಫೈನಲ್

ಪುತ್ತೂರು : ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ ಎಂದು ತಿಳಿದು ಬಂದಿದೆ.ಕಾಂಗ್ರೆಸ್ ನಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ದಿನೇಶ್ ಶೇವಿರೆ ಹಾಗೂ ಅದೇ ರೀತಿ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ದಾಮೋದರ ಭಂಡಾರ್ಕರ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ್ ರೈ ಅವರು ತಿಳಿಸಿದ್ದಾರೆ.


ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.


ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.

ಶಾಸಕರ ಇಂದಿನ ಕಾರ್ಯಕ್ರಮ ಆ 9

Posted by Vidyamaana on 2023-08-08 23:09:12 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 9

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 9 ರಂದು


ಬೆಳಿಗ್ಗೆ 10 ಗಂಟೆಗೆ ಅಜಲಡ್ಕದಲ್ಲಿ ಕೆರೆ ಉದ್ಘಾಟನೆ

11 ರಿಂದ ಅಧಿಕಾರಿಗಳ ಸಭೆ

ಸಂಜೆ 3ಕ್ಕೆ ನೆಟ್ಟಣಿಗೆ ಮುಡ್ನೂರು ಸರಕಾರಿ ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ 

ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ



Leave a Comment: