ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ನಗರ ಸಭೆ ಕಚೇರಿ ದುರಸ್ತಿಗೆ ಬೇರಿನ್ಯಾವ ಅನುದಾನ ಬಳಸ್ಬೇಕು

Posted by Vidyamaana on 2023-08-30 11:25:42 |

Share: | | | | |


ನಗರ ಸಭೆ ಕಚೇರಿ ದುರಸ್ತಿಗೆ ಬೇರಿನ್ಯಾವ ಅನುದಾನ ಬಳಸ್ಬೇಕು

ಪುತ್ತೂರು: ಶಾಸಕರ ಕಚೇರಿ ನಗರಸಭೆಯ ಕಟ್ಟಡವಾಗಿದ್ದು, ಅದನ್ನು ದುರಸ್ಥಿ ಪಡಿಸಲು ನಗರಸಭೆಯ ಅನುದಾನವನ್ನು ಬಳಸಬೇಕಲ್ಲದೆ ಬೇರೆ ಯಾವ ಅನುದಾನವನ್ನು ಬಳಕೆ ಮಾಡಬಹುದು? ಅದು ಶಾಸಕರ ಕಚೇರಿ ಹೊರತು ಅಶೋಕ್ ಕುಮಾರ್ ರೈ ಅವರ ವೈಯುಕ್ತಿಕ ಕಚೇರಿಯಲ್ಲ. ಮುಂದಿನ ದಿನ ಯಾರೆ ಶಾಸಕರಾಗಲಿ ಅವರಿಗೆ ಈ ಕಚೇರಿ ಉಪಯೋಗಕ್ಕೆ ಬರುತ್ತದೆ ಎಂದ ಬಿಜೆಪಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ನಡೆದ ಪತ್ರಿಕಾಗೋಷ್ಠಿಗೆ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು, ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಐಷಾರಮಿ ಕಚೇರಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವುದು ತೆರಿಗೆಯ ದುರುಪಯೋಗವಲ್ಲವೇ ಎಂದು ಪ್ರಶ್ನಿಸಿದ್ದಾರೆ.ಅಶೋಕ್ ಕುಮಾರ್ ರೈ ಅವರು ಶಾಸಕರಾಗಿ ಮೂರೇ ತಿಂಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳನ್ನು ಹಾಕಿಕೊಂಡು ಜನಪ್ರಿಯರಾಗುತ್ತಿದ್ದಾರೆ. ಅವರ ಜನಪ್ರಿಯತೆ ಸಹಿಸಲಾಗದೆ ಹೊಟ್ಟೆಕಿಚ್ಚಿನಿಂದ ಮಾಜಿ ಶಾಸಕ ಸಂಜೀವ ಮಠಂದೂರು ಶಾಸಕರ ನೂತನ ಕಚೇರಿ ಕುರಿತು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಇವತ್ತು ಮಾಜಿ ಶಾಸಕರಿಗೆ ಕೆಲಸವಿಲ್ಲ. ಕಳೆದ ಚುನಾವಣೆಯಲ್ಲಿ ಅವರಿಗೆ ಟಿಕೇಟ್ ಕೊಡಲಿಲ್ಲ. ಇವತ್ತು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬೇರೆ ಬೇರೆ ವಿಚಾರ ತೆಗೆದು ಕೊಂಡು ಮಾದ್ಯಮದ ಮುಂದೆ ಬರುತ್ತಿದ್ದಾರೆ. ಅಶೋಕ್ ಕುಮಾರ್ ರೈ ಅವರು ತಮ್ಮನ್ನು ಭೇಟಿಯಾಗಲು ಬರುವ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಲ್ಲಿ ಸಭೆ ನಡೆಸಲು ಅನುಕೂಲವಾಗುವ ವ್ಯವಸ್ಥಿತವಾದ ಕಚೇರಿ ಇರಬೇಕೆಂಬ ಸುದುದ್ದೇಶದಿಂದ ಸುಸಜ್ಜಿತ ಕಚೇರಿ ನಿರ್ಮಿಸುವಂತೆ ಜಿಲ್ಲಾಡಳಿತದಲ್ಲಿ ಕೇಳಿಕೊಂಡಂತೆ ಹಿಂದಿನ ಪುರಸಭಾ ಕಟ್ಟಡದಲ್ಲಿ ನೂತನ ಕಚೇರಿ ನಿರ್ಮಾಣ ಮಾಡಲಾಗಿದೆ. ಆದರೆ ಈ ವಿಷಯವನ್ನು ತೆಗೆದುಕೊಂಡು ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹಿಂದಿನ ಕಚೇರಿ ಗೂಡಂಗಡಿ:

ಹಿಂದಿನ ಶಾಸಕ ಸಂಜೀವ ಮಠಂದೂರು ಅವರ ಮಿನಿ ವಿಧಾನ ಸೌಧದಲ್ಲಿರುವ ಕಚೇರಿ ಗೂಡಂಗಡಿಯಂತೆ ಇತ್ತು. ಈ ಕಚೇರಿಯಲ್ಲಿ ಸಾರ್ವಜನಿಕರಿಗೆ ಬಂದು ಭೇಟಿಯಾಗಿ ಮಾತನಾಡಲು ಸರಿಯಾದ ಸ್ಥಳಾವಕಾಶವಿರಲಿಲ್ಲ. ಅವರಿಗೆ ಸಾರ್ವಜನಿಕರಿಗೆ ತನ್ನ ಕಚೇರಿಯಿಂದ ಅನಾನುಕೂಲ ಆಗುತ್ತದೆ ಎಂಬ ಕಾಳಜಿಯೂ ಇರಲಿಲ್ಲ. ಆದರ ಈಗಿನ ಶಾಸಕರು ಸಾರ್ವಜನಿಕರಿಗಾಗಿ ವಿಶಾಲವಾದ ಕಚೇರಿ ಮಾಡಿಕೊಂಡಿದ್ದಾರೆ. ಎಂದು ಹೆಚ್.ಮಹಮ್ಮದ್ ಆಲಿ ಹೇಳಿದರು .

ಸಂಜೀವ ಮಠಂದೂರು ಅವರಿಂದ ಕೋಟ್ಯಾಂತರ ರೂಪಾಯಿ ದುರುಪಯೋಗ:

ಮಾಜಿ ಶಾಸಕ ಸಂಜೀವ ಮಠಂದೂರು ಅವರ ಅವಧಿಯಲ್ಲಿ ಸರಕಾರದ ವಿವಿಧ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ದುರುಪಯೋಗ ಆಗಿದೆ. ನಗರಸಭೆಗೆ ಸುಸಜ್ಜಿತ ಕಚೇರಿ ಇದ್ದಾಗಲೂ ಶಾಸಕ ಸಂಜೀವ ಮಠಂದೂರು ಅವರು ಹಿಂದಿನ ಪುರಸಭೆಯ ಕಟ್ಟಡ ಕೆಡವಿದಲ್ಲದೆ ಪಕ್ಕದಲ್ಲಿರುವ ಈಗಿನ ಶಾಸಕರ ಕಚೇರಿ ಕಟ್ಟಡವನ್ನು ಕೆಡವಿ ರೂ.13 ಕೋಟಿ ವೆಚ್ಚದಲ್ಲಿ ಹೊಸ ನಗರಭೆ ಕಚೇರಿ ನಿರ್ಮಿಸಲು ಹೊರಟಿದ್ದರು. ಆಗ ಜನರ ತೆರಿಗೆ ಹಣ ದುರುಪಯೋಗ ಆಗುತ್ತದೆ ಎಂದು ಅವರಿಗೆ ಗೊತ್ತಿರಲಲಿಲ್ಲವೇ? ಪುಡಾ ಕಚೇರಿಯಿಂದ ರೂ.13 ಸಾವಿರ ಬರುವ ಬಾಡಿಗೆ ನಷ್ಟ ಆಗಿದೆ ಎನ್ನುತ್ತಿರುವ ಮಾಜಿ ಶಾಸಕರಿಗೆ ಆ ಕಟ್ಟಡ ಕೆಡವಿದಾಗ ಪುಡಾದ ಬಾಡಿಗೆ, ತಳ ಅಂತಸ್ತಿನಲ್ಲಿರುವ ಹೊಟೇಲ್,ಇನ್ನಿತರ ಉದ್ಯಮದಿಂದ ಬರುವ ಬಾಡಿಗೆ ನಷ್ಟ ಆಗುತ್ತದೆ ಎಂದು ಗೊತ್ತಿರಲಿಲ್ಲವೇ? ನಗರಸಭೆಯ ವಿವಿಧ ಕಡೆಗಳಲ್ಲಿ ಹಲವು ಕಡೆ ಜನರೇ ಇಲ್ಲದಲ್ಲಿಗೆ ಪಾರ್ಕ್ ಮಾಡಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿರುವುದು, ರಸ್ತೆ ಬದಿಯ ಇಂಟರ್ ಲಾಕ್ ತೆರವು ಮಾಡಿ ಡಾಮಾರು ಹಾಕಿಸಿರುವುದು, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸ್ಮಾರ್ಟ್ ಬಸ್ ತಂಗುದಾಣ ಮಾಡಿರುವುದು, ಕೃಷಿ ಭೂಮಿ ಸಂರಕ್ಷಣೆಗೆ ಒದಗಿಸಲ್ಪಟ್ಟ ಸಣ್ಣ ನೀರಾವರಿ ಇಲಾಖೆಯ ಅನುದಾನದಲ್ಲಿ ನಿಮ್ಮ ಆಪ್ತರ ಪರಿವರ್ತನ ಭೂಮಿಗೆ ತಡೆಗೋಡೆ ಕಟ್ಟಿರುವುದು, ನಗರಸಭೆಯ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸುಸಜ್ಜಿತ ಕಚೇರಿಇದ್ದಾಗಲೂ ಬಿಜೆಪಿ ಆಡಳಿತ ಬಂದಾಗ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಎಸಿ ಅಳವಡಿಸಿ ಕಚೇರಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವುದು, ಮುಕ್ರಂಪಾಡಿಯಲ್ಲಿ ರೂ.50 ಲಕ್ಷದಲ್ಲಿ ಆಗುವ ಸೇತುವೆಗೆ ರೂ.1.75 ಕೋಟಿ ಖರ್ಚು ತೋರಿಸಿರುವುದು, ಇರ್ದೆ ಗ್ರಾಮದ ಬೈಲಾಡಿ ಗೋಪಾಲಕೃಷ್ಣ ದೇವಾಲಯದಿಂದ ಬೆಂದ್ರತೀರ್ಥಕ್ಕೆ ಹೋಗಲು ತೂಗು ಸೇತುವೆ ನಿರ್ಮಾಣ ಮಾಡುವ ಬದಲು ಖಾಸಗಿ ತೋಟಕ್ಕೆ ಹೋಗಲು ಸೇತುವೆ ಮಾಡಿರುವುದು, ಇದೆ ಗ್ರಾಮದ ಕೆಲ್ಲಾಡಿ ಎಂಬಲ್ಲಿ 500 ಮೀಟರ್ ಅಂತರದಲ್ಲಿ ರಸ್ತೆ ಸಂಪರ್ಕ ಇಲ್ಲದ ಗುಡ್ಡೆಗ ರೂ. 6.50 ಕೋಟಿ ಸೇತುವೆ ನಿರ್ಮಾಣ ಮಾಡಿರುವುದು ಯಾರ ತೆರಿಗೆಯ ಹಣದಲ್ಲಿ ಎಂದು ಪ್ರಶ್ನಿಸಿದ ಮಹಮ್ಮದ್ ಆಲಿಯವರು ಇದೆಲ್ಲ ದುರುಪಯೋಗವಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇವೆಲ್ಲ ಶೇ.40 ಕಮಿಷನ್ ಆಸೆಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಮಾಡಿದ ದುರುಪಯೋಗ ಎಂದರು. ಇವತ್ತು ಮಾಜಿ ಪುರಸಭೆ ಕಟ್ಟಡದಲ್ಲಿ ಶಾಸಕರ ಕಚೇರಿ ನಿರ್ಮಾಣಗೊಂಡಿದ್ದರಿಂದ ಅಲ್ಲಿ ಕಟ್ಟಡ ಕೆಡವುವ ಬಿಜೆಪಿಯ ಹುನ್ನಾರಕ್ಕೆ ತಡೆ ಹಿಡಿಯಲಾಗಿದೆ. ಮುಂದೆಯೂ ಅಲ್ಲಿ ನಗರಸಭೆ ಕಚೇರಿ ನಿರ್ಮಾಣ ಮಾಡಲುನಾವು ಬಿಡುವುದಿಲ್ಲ ಎಂದು ಮಹಮ್ಮದ್ ಆಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಶನ್ ರೈ ಬನ್ನೂರು, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕ್ಟ‌ ಪಾಯಸ್, ಉಪಾಧ್ಯಕ್ಷ ಮಂಜುನಾಥ್ ಕೆಮ್ಮಾಯಿ ಉಪಸ್ಥಿತರಿದ್ದರು.

ಪುತ್ತೂರು : ಅನಾರೋಗ್ಯದಿಂದಾಗಿ ಪ್ರತಿಭಾನ್ವಿತ ವಿದ್ಯಾರ್ಥಿ ಸುಪ್ರೀತ್ ನಿಧನ

Posted by Vidyamaana on 2023-11-01 17:54:59 |

Share: | | | | |


ಪುತ್ತೂರು : ಅನಾರೋಗ್ಯದಿಂದಾಗಿ ಪ್ರತಿಭಾನ್ವಿತ ವಿದ್ಯಾರ್ಥಿ ಸುಪ್ರೀತ್ ನಿಧನ

ಪುತ್ತೂರು : ಪ್ರಾಥಮಿಕ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸರ್ವೆ ಸಮೀಪ ನಡೆದಿದೆ.ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಮೃತ ಬಾಲಕ.ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.


ಸುಪ್ರೀತ್ ರವರು ಮುಂಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಮತ್ತು ಕುಂಞ ಮೇಸ್ತ್ರಿ ಅವರ ಪುತ್ರ.

ಈತ ಶಾಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ

ಹಾಲಿ ಶಾಸಕರು ಮಾಜಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡುವುದು, ಜನತೆಗೆ ಸುಳ್ಳು ಮಾಹಿತಿ ನೀಡುವುದು ಘನತೆಗೆ ತಕ್ಕುದಲ್ಲ’ – ರಾಧಾಕೃಷ್ಣ ಆಳ್ವ

Posted by Vidyamaana on 2024-01-13 21:27:38 |

Share: | | | | |


ಹಾಲಿ ಶಾಸಕರು ಮಾಜಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡುವುದು, ಜನತೆಗೆ ಸುಳ್ಳು ಮಾಹಿತಿ ನೀಡುವುದು ಘನತೆಗೆ ತಕ್ಕುದಲ್ಲ’ – ರಾಧಾಕೃಷ್ಣ ಆಳ್ವ

ಪುತ್ತೂರು : ಆರಂಭದ ಒಂದು ಮಳೆಗೆ ಕೊಡೆ ಹರಿದಂತೆ ಎಂಬ ಗಾದೆಯಂತೆ ಶಾಸಕರಾಗಿ ಮೊದಲ ಅರ್ಧ ವರ್ಷದಲ್ಲಿಯೇ ಈ ಹಿಂದಿನ ಶಾಸಕರು ತಂದಿರುವ ಅನುದಾನದ ಕಾಮಗಾರಿಯು ಶಿಲಾನ್ಯಾಸವಾಗಿ ಕೆಲಸ ಪ್ರಗತಿಯಲ್ಲಿರುವಾಗಲೇ ಹಾಲಿ ಶಾಸಕರು ಮತ್ತೊಮ್ಮೆ ಶಂಕುಸ್ಥಾಪನೆ ಮಾಡುತ್ತಾ ಇರುವುದು ಜನಸಾಮಾನ್ಯರ ನಡುವಿನಲ್ಲಿ ನಗೆಪಾಟಲಿಗೀಡಾಗಿರುವುದಂತು ಸತ್ಯ ಎಂದು ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷರಾದ ರಾಧಕೃಷ್ಣ ಆಳ್ವ ಹೇಳಿದರು.


ಪುತ್ತೂರು ಕ್ಷೇತ್ರಾದ್ಯಂತ ಈಗ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ಅದರಲ್ಲಿಯೂ ಉಪ್ಪಿನಂಗಡಿಯ ದ್ವಿಪದ ರಸ್ತೆಯಾಗಿರಲಿ., ಬಿಳಿಯೂರುಕಟ್ಟೆ-ಸಾಜ-ಕುದ್ದುಪದವು ರಸ್ತೆಯ ಕಾಮಗಾರಿಯಾಗಿರಲಿ.., ಎಲ್ಲವೂ ಕೂಡ ಬಿಜೆಪಿ ಸರಕಾರ ಇರುವಾಗ ಬಂದಿರುವಂತ ಅನುದಾನಗಳು ಆದರೆ ಹಾಲಿ ಶಾಸಕರು ಹೋದಲ್ಲಿ ಎಲ್ಲಾ ಮಾಜಿ ಶಾಸಕರನ್ನು ಅವಹೇಳನಕಾರಿಯಾಗಿ ಮಾತಾನಾಡುವುದು ಮತ್ತು ಜನರಿಗೆ ಸುಳ್ಳು ಮಾಹಿತಿಯನ್ನು ನೀಡುವುದು ಘನತೆಗೆ ತಕ್ಕುದಲ್ಲ ಎಂದು ಹೇಳಿದರು.ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಜನವರಿ14ರಿಂದ 21ರವರೆಗೆ ದೇವಸ್ಥಾನ, ದೈವಸ್ಥಾನ, ಮಠ ಮಂದಿರಗಳ ಸ್ವಚ್ಛತೆಯಲ್ಲಿ ಕಾರ್ಯಕರ್ತರು ,ಪದಾಧಿಕಾರಿಗಳು ಭಾಗವಹಿಸಬೇಕು ಮತ್ತು ಜ.22 ಪ್ರತಿಷ್ಠಾ ದಿನದಂದು ಎಲ್ಲಾ ಹಿಂದೂ ಮನೆಗಳಲ್ಲಿ ಪ್ರಧಾನಿಯವರ ಆಶಯದಂತೆ ದೀಪ ಬೆಳಗಿಸುವಂತೆ ಈ ಸಂದರ್ಭದಲ್ಲಿ ವಿನಂತಿಸಿದರು.


ಮಂಡಲದ ಪ್ರ.ಕಾರ್ಯದರ್ಶಿ ನಿತೀಶ್ ಶಾಂತಿವನ ಸ್ವಾಗತಿಸಿದರು.


ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ , ಮುಕುಂದ ಬಜತ್ತೂರು, ಅರುಣ್ ವಿಟ್ಲ, ಮೀನಾಕ್ಷಿ ಮಂಜುನಾಥ್,ಉಷಾ ಮುಳಿಯ,ವಿಜಯ ಕೋರಂಗ, ಖಜಾಂಜಿ ರಮೇಶ್ ಭಟ್, ಕಾರ್ಯದರ್ಶಿ ರಮಣಿ ಗಾಣಿಗ, ಲೋಹಿತ್ ಅಮ್ಚಿನಡ್ಕ, ವಿವಿಧ ಮೋರ್ಚಾ ಅಧ್ಯಕ್ಷ ಕಾರ್ಯದರ್ಶಿಗಳಾದ ಯಶಸ್ವಿನಿ ಶಾಸ್ತ್ರಿ, ಯಶೋಧ ಗೌಡ, ಸುರೇಶ್ ಕಣ್ಣರಾಯ, ಪುನೀತ್ ಮಾಡತ್ತಾರು, ನವೀನ್ ಪಡ್ನೂರು,ಸುನೀಲ್ ದಡ್ಡು, ಮಹಾಶಕ್ತಿ ಕಾರ್ಯದರ್ಶಿಗಳಾದ ಸುರೇಶ್ ಅತ್ರಮಜಲು, ದಯಾನಂದ ಶೆಟ್ಟಿ ಉಜ್ರೆಮಾರು ಮೊದಲಾದವರು ಉಪಸ್ಥಿತರಿದ್ದರು.ಮಂಡಲ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮಂಗ್ಲಿಮನೆ ಧನ್ಯವಾದ ಸಲ್ಲಿಸಿದರು.

ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

Posted by Vidyamaana on 2024-07-01 19:31:51 |

Share: | | | | |


ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಮಳೆಗಾಲ ಆರಂಭವಾಗಿದ್ದು, ಈ ಋತುವಿನಲ್ಲಿ ಆರೋಗ್ಯದ ಕಡೆ ಗಮನಹರಿಸುವುದು ಅಗತ್ಯವಾಗಿದೆ. ಋತುಮಾನದ ಕಾಯಿಲೆಗಳ ಜೊತೆಗೆ ಡೆಂಗ್ಯೂ ಅಪಾಯವಿದೆ. ಡೆಂಗ್ಯೂ ವಾಸ್ತವವಾಗಿ ಹೆಣ್ಣು ಈಜಿಪ್ಟಿ (ಈಡಿಸ್ ಸೊಳ್ಳೆ) ಸೊಳ್ಳೆಗಳಿಂದ ಹರಡುತ್ತದೆ.

ಈ ಸೊಳ್ಳೆಗಳ ಜೀವಿತಾವಧಿ ಕೇವಲ ಒಂದು ತಿಂಗಳು ಮಾತ್ರ. ಆದ್ರೆ, ಈ ಅವಧಿಯಲ್ಲಿ ಅವು 500 ರಿಂದ 1000 ಸೊಳ್ಳೆಗಳಿಗೆ ಜನ್ಮ ನೀಡುತ್ತವೆ. ಈ ಸೊಳ್ಳೆಗಳು ಕೇವಲ ಮೂರು ಅಡಿ ಮಾತ್ರ ಹಾರಬಲ್ಲವು. ಈ ಕಾರಣಕ್ಕಾಗಿ ಅವು ಕೇವಲ ಮನುಷ್ಯನ ಕೆಳಗಿನ ಅಂಗಗಳನ್ನ ಗುರಿಯಾಗಿಸುತ್ತಾರೆ. ಈ ಸೊಳ್ಳೆಗಳು ಕಚ್ಚಿದರೆ ತೀವ್ರ ಜ್ವರದ ಜೊತೆಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ.

ಡೆಂಗ್ಯೂ ಸೊಳ್ಳೆಗಳು ಕೂಲರ್‌, ಹೂವಿನ ಕುಂಡಗಳು, ಹಳೆಯ ಪಾತ್ರೆಗಳು ಅಥವಾ ಮನೆಯ ಛಾವಣಿಗಳು, ಟೈರ್‌ಗಳು, ಗುಂಡಿಗಳು ಇತ್ಯಾದಿಗಳಲ್ಲಿ ತಮ್ಮ ಮೊಟ್ಟೆಗಳನ್ನ ಇಡುತ್ತವೆ. ಡೆಂಗ್ಯೂ ಸೊಳ್ಳೆಗಳು ಒಮ್ಮೆಗೆ 100 ರಿಂದ 300 ಮೊಟ್ಟೆಗಳನ್ನ ಇಡುತ್ತವೆ. 4 ದಿನಗಳ ನಂತರ ಅವು ಸೊಳ್ಳೆಗಳಾಗಿ ರೂಪಾಂತರಗೊಳ್ಳುತ್ತವೆ. ಸೊಳ್ಳೆಗಳು ಹುಟ್ಟಿದ 2 ದಿನಗಳಲ್ಲಿ ಹಾರಲು ಪ್ರಾರಂಭಿಸುತ್ತವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನ ಪೋಸ್ಟ್ , ಬೆಳ್ತಂಗಡಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲು

Posted by Vidyamaana on 2023-10-27 16:43:17 |

Share: | | | | |


ಮುಖ್ಯಮಂತ್ರಿ  ಸಿದ್ದರಾಮಯ್ಯ ಬಗ್ಗೆ ಅವಹೇಳನ ಪೋಸ್ಟ್ , ಬೆಳ್ತಂಗಡಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು, ಅ.27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 


"ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ" ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ರಾಜ್ಯದ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು ಇದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 


ಇತ್ತೀಚೆಗೆ ಅರಣ್ಯ ಅಧಿಕಾರಿಗಳನ್ನು ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಒಂದು ವಾರದ ಅಂತರದಲ್ಲಿ ಮತ್ತೊಂದು ಎಫ್ಐಆರ್ ಆಗಿದೆ.‌

ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ: ಬಾವ

Posted by Vidyamaana on 2024-03-18 15:32:01 |

Share: | | | | |


ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ: ಬಾವ

ಮಂಗಳೂರು: ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲ ಸಿದ್ಧಾಂತಗಳ ಬಗ್ಗೆ ನನಗೆ ಸಹಮತವಿಲ್ಲ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿಯನ್ನು ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲಾ ಸಿದ್ಧಾಂತಗಳಿಗೆ ಸಹಮತ ಇಲ್ಲ. ಸಿಎಎ, ಹಿಜಾಬ್, ಆಝಾನ್ ಗೆ ವಿರೋಧದ ಬಿಜೆಪಿಯ ಸಿದ್ಧಾಂತಗಳನ್ನು ನಾನು ವಿರೋಧಿಸುತ್ತೇನೆ ಎಂದರು.

ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧೆಗಿಳಿಯುವ ನಿಟ್ಟಿನಲ್ಲಿ ನನ್ನ ಬೆಂಬಲಿಗರು ಇಚ್ಛೆ ವ್ಯಕ್ತಪಡಿಸಿದ್ದಾರೆ. ನಾನು ಯಾವುದೇ ನಿರ್ಧಾರ ಇನ್ನೂ ಮಾಡಿಲ್ಲ. ಮಾ.28ರಂದು ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದು ಬಾವ ಹೇಳಿದರು.



Leave a Comment: