ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ

ಸುದ್ದಿಗಳು News

Posted by vidyamaana on 2024-06-29 13:06:13 |

Share: | | | | |


ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪುತ್ತೂರಿನಿಂದ ಪಾಣಾಜೆ - ಬೆಟ್ಟಂಪಾಡಿ ಭಾಗಕ್ಕೆ ತೆರಳುವವರು ಸಂಟ್ಯಾರ್ ರಸ್ತೆಯಾಗಿ ತೆರಳಬಹುದು. ದೇವಸ್ಯ ಕಡೆಯಿಂದ ತೆರಳುವವರು ಚೆಲ್ಯಡ್ಕದವರೆಗೆ ಮಾತ್ರ ತೆರಳಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

 Share: | | | | |


ಏ.28 : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ

Posted by Vidyamaana on 2023-04-27 05:50:02 |

Share: | | | | |


ಏ.28 : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ

ಪುತ್ತೂರು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ ಏ.28 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ನೇಮೋತ್ಸವದ ಅಂಗವಾಗಿ ಏ.27 ಗುರುವಾರ ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಧ್ಯಾಹ್ನ 12.15 ಕ್ಕೆ ದೇವತಾ ಪ್ರಾರ್ಥನೆ, ಮಹಾಪೂಜೆ, ಸಂಜೆ 6 ಕ್ಕೆ ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ, ರಾತ್ರಿ 7 ಕ್ಕೆ ಶ್ರೀ ದೈವಗಳ ಭಂಡಾರ ತೆಗೆಯುವುದು, ರಾತ್ರಿ 9 ಕ್ಕೆ ತಂಬಿಲಾದಿಗಳು ನಡೆದು ಪ್ರಸಾದ ವಿತರಣೆ, 9.30 ಕ್ಕೆ ಅನ್ನಸಂತರ್ಪಣೆ ಜರಗಲಿದೆ.

ಏ.28 ಶುಕ್ರವಾರ ಬೆಳಿಗ್ಗೆ 9 ರಿಂದ ಶ್ರೀ ದಂಡನಾಯಕ ದೈವದ ವಾಲಸರಿ ನೇಮ, 10 ರಿಂದ ಶ್ರೀ ಉಳ್ಳಾಲ್ತಿ ನೇಮ, ಮಧ್ಯಾಹ್ನ 12.30 ಕ್ಕೆ ಅನ್ನಸಂತರ್ಪಣೆ, ಮಧ್ಯಾಹ್ನ 2 ರ ನಂತರ ಶ್ರೀ ಕಾಳರಾಹು ಮತ್ತು ಶ್ರೀ ಮಲರಾಯ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಶ್ರೀ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ತನ್ನ ಕಾರು ಚಾಲಕನಿಗೆ ದೀಪಾವಳಿಯ ಬಂಪರ್ ಉಡುಗೋರೆ ಕೊಟ್ಟ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ

Posted by Vidyamaana on 2023-11-16 14:16:22 |

Share: | | | | |


ತನ್ನ ಕಾರು ಚಾಲಕನಿಗೆ ದೀಪಾವಳಿಯ ಬಂಪರ್ ಉಡುಗೋರೆ ಕೊಟ್ಟ  ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿಯವರು ತನ್ನ ಕಾರು ಚಾಲಕನಿಗೆ ದೀಪಾವಳಿ ಪ್ರಯುಕ್ತ ಸುಮಾರು ೧,೩೦೦೦೦ ರೂ ಮೌಲ್ಯದ ಟಿವಿಎಸ್ ರೈಡರ್ ಬೈಕನ್ನು ಉಡುಗೋರೆಯಾಗಿ ನೀಡಿದ್ದಾರೆ.


ಕಳೆದ ಹತ್ತು ವರ್ಷಗಳಿಂದ ಹೇಮನಾಥ ಶೆಟ್ಟಿಯವರ ಕಾರು ಚಾಲಕರಾಗಿ ಕೆಲಸ ಮಾಡುತ್ತಿರುವ ಪಾಣಾಜೆ ನಿವಾಸಿ ದಿನೇಶ್ ಉಡುಗೋರೆ ಪಡೆದುಕೊಂಡ ಚಾಲಕ.


ದೀಪಾವಳಿ ಸಂದರ್ಭದಲ್ಲಿ ತಮ್ಮ ಸಿಬಂದಿಗಳಿಗೆ ಬೋನಸ್, ಸಿಹಿತಿಂಡಿ ಅಥವಾ ಊಟೋಪಚಾರಗಳನ್ನು ನೀಡುವುದು ಸಾಮಾನ್ಯವಾಗಿದೆ. ಆದರೆ ಪ್ರಾಮಾಣಿಕವಾಗಿ ಚಾಲನಾ ಕೆಲಸ ಮಾಡುತ್ತಿರುವ ದಿನೇಶ್ ತನ್ನ ಮಾಲಕರಿಂದ ಭಾರೀ ಮೊತ್ತದ ಬೈಕನ್ನು ಉಡುಗೋರೆಯಾಗಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹೇಮನಾಥ ಶೆಟ್ಟಿಯವರನ್ನು ಕೇಳಿದರೆ ದೀಪಾವಳಿ ಪ್ರಯುಕ್ತ ಸಣ್ಣ ಗಿಫ್ಟ್ ನೀಡಿದ್ದೇನೆ ಎಂದಷ್ಟೇ ಹೇಳಿದರು.

ನಾನು ಕಳೆದ ಹತ್ತು ವರ್ಷಗಳಿಂದ ಹೇಮನಾಥ ಶೆಟ್ಟಿಯವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಅವರ ಕುಟುಂಬದ ಎಲ್ಲರೂ ನನ್ನನ್ನು ಅವರ ಕುಟುಂಬದ ಸದಸ್ಯನಂತೆ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಕಷ್ಟದ ಸಮಯದಲ್ಲಿ ನೆರವಾಗುತ್ತರೆ. ನನಗೆ ಮನೆ ಕಟ್ಟಲು ನೆರವಾಗಿದ್ದಾರೆ. ಈ ಬಾರಿ ಬೈಕನ್ನು ಉಡುಗೋರೆಯಾಗಿ ನೀಡಿದ್ದಾರೆ. ಇದು ನನ್ನ ಜೀವನದಲ್ಲಿ ಮರೆಯಲಾರದ ದಿನವಾಗಿದೆ

ದಿನೇಶ್ ಪಾಣಾಜೆ, ಕಾರು ಚಾಲಕ

ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ

Posted by Vidyamaana on 2023-10-24 12:44:17 |

Share: | | | | |


ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ

ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿನ ಧರ್ಮಾಧ್ಯಕ್ಷರ ನಿವಾಸದಲ್ಲಿ ಕಾರ್ಯಾಚರಿಸುತ್ತಿರುವ ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ವತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಾರ್ಯಕ್ರಮ ಅ.22ರಂದು ಸಂಜೆ ಜೆಪ್ಪು ಸಂತ ಅಂತೋನಿ ಆಶ್ರಮದಲ್ಲಿನ ಸಂಭ್ರಮ ಸಭಾಭವನದಲ್ಲಿ ನಡೆಯಿತು.

ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ 12 ವಲಯಗಳಲ್ಲಿನ ವಿವಿಧ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಸಂಸ್ಥಾಪಕರಾಗಿ, ಸಂಪಾದಕರಾಗಿ, ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೊಂಕಣಿ ಕ್ರೈಸ್ತ ಪತ್ರಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಚರಿತ್ರೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಕಳೆದ 14 ವರ್ಷಗಳಿಂದ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿಯಾಗಿರುವ ಸಂತೋಷ್ ಮೊಟ್ಟೆತ್ತಡ್ಕ ಸೇರಿದಂತೆ ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 43 ಮಂದಿ ಕ್ರೈಸ್ತ ಪತ್ರಕರ್ತರನ್ನು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ|ಡಾ|ಪೀಟರ್ ಪಾವ್ಲ್ ಸಲ್ದಾನ್ಹಾರವರು ಶಾಲು ಹೊದಿಸಿ ಸನ್ಮಾನಿಸಿದರು. 

ಕಥೋಲಿಕ್ ಸಭಾ ಕೇಂದ್ರ ಸಮಿತಿ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರುರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಾತ್ಮಿಕ ನಿರ್ದೇಶಕ ವಂ|ಡಾ|ಜೆ.ಬಿ ಸಲ್ದಾನ್ಹಾ, ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕ ವಂ|ಜೆ.ಬಿ ಕ್ರಾಸ್ತಾ, ದಾಯ್ಜಿವಲ್ಡ್೯ ಮೀಡಿಯಾ ಲಿಮಿಟೆಡ್ ನ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಮಹಾರಾಷ್ಟ್ರ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕರಾವಳಿ ಸುದ್ದಿ ವಾರಪತ್ರಿಕೆಯ ಸಂಪಾದಕ ಹಾಗೂ ಪ್ರಕಾಶಕ ಭೊನಿಪಾಸ್ ರೋಶನ್ ಮಾರ್ಟಿಸ್, ಕಥೋಲಿಕ್ ಸಭಾ ಕೇಂದ್ರ ಸಮಿತಿಯ ಕಾರ್ಯದರ್ಶಿ ವಿಲ್ಮಾ ಮೊಂತೇರೊ, ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಾರ್ಯದ ಸಂಚಾಲಕ ಪಾವ್ಲ್ ರೋಲ್ಫಿ ಡಿಕೋಸ್ಟರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಸನ್ಮಾನದ ಸಂದರ್ಭದಲ್ಲಿ ಸಂತೋಷ್ ಮೊಟ್ಟೆತ್ತಡ್ಕರವರ ತಾಯಿ ಐರಿನ್ ಮೊರಾಸ್, ಪತ್ನಿ ಪ್ರಮೀಳಾ ಸಿಕ್ವೇರಾ, ಪುತ್ರಿ ಸಿಯೋನಾ ಮೊರಾಸ್, ಪುತ್ರ ಸೇವಿಯನ್ ಮೊರಾಸ್, ತಂಗಿ ಮಗಳು ಕ್ಯಾರಲ್ ಸಿಕ್ವೇರಾ ಉಪಸ್ಥಿತರಿದ್ದರು.

ಪುತ್ತೂರು ತಾಲೂಕಿನ ಕ್ರೈಸ್ತ ಧರ್ಮದ, ಸಂಘ-ಸಂಸ್ಥೆಯ ವರದಿಗಳನ್ನು ಸಕಾಲದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಭಿತ್ತರಿಸಿದ್ದಕ್ಕೆ ಪುತ್ತೂರು ಮಾಯಿದೆ ದೇವುಸ್ ಚರ್ಚ್ ಸಮುದಾಯ ದಿನದಂದು ಡೊನ್ ಬೊಸ್ಕೊ ಕ್ಲಬ್ ನಿಂದ, ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿಯಿಂದ, ಚರ್ಚ್ ನ ಹಲವಾರು ವಾಳೆಗಳಿಂದ ಸನ್ಮಾನ ಜೊತೆಗೆ ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಿಂದ, ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ, ಆರ್ಯಾಪು ಶ್ರೀ ಮಾರಿಯಮ್ಮ ದೇವಸ್ಥಾನದಿಂದ ಸನ್ಮಾನ ಜೊತೆಗೆ ಹಲವು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರ ಪಡೆದಿರುವ ಸಂತೋಷ್ ಮೊಟ್ಟೆತ್ತಡ್ಕ  ಅವರು ತುಳು ನಾಟಕಗಳಾದ ತಪ್ಪುಗು ತಕ್ಕ ಶಿಕ್ಷೆ, ದೇವೆರೆ ತೀರ್ಪು ಜೊತೆಗೆ ಹಲವಾರು ಕೊಂಕಣಿ ಪ್ರಹಸನಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದಾರೆ.

ಭಂಡಾಜೆ ಫಾಲ್ಸ್ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಧನುಷ್ ಪತ್ತೆ

Posted by Vidyamaana on 2024-02-26 11:19:40 |

Share: | | | | |


ಭಂಡಾಜೆ ಫಾಲ್ಸ್ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಧನುಷ್ ಪತ್ತೆ

ಮೂಡಿಗೆರೆ: ಬಾಳೂರು ಠಾಣಾ ವ್ಯಾಪ್ತಿಯ ಬಲ್ಲಾಳ ರಾಯ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಗೆ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇದರೊಂದಿಗೆ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.ಏನಿದು ಘಟನೆ:

ಭಾನುವಾರ ಮುಂಜಾನೆ ಯುವಕರ ತಂಡವೊಂದು ಭಂಡಾಜೆ ಫಾಲ್ಸ್ ನೋಡಲು ತಂಡ ಹೊರಟಿತ್ತು ಅದರಂತೆ ತಂಡದ ಸದಸ್ಯರು ಚಾರಣ ಕೈಗೊಂಡು ಹಿಂತಿರುಗುವ ವೇಳೆ ತಂಡದಲ್ಲಿ ಓರ್ವನಾದ ಧನುಷ್ ಎಂಬಾತ ನಾಪತ್ತೆಯಾಗಿದ್ದ ಇದರಿಂದ ಗಾಬರಿಗೊಂಡ ಜೊತೆಗಿದ್ದ ಯುವಕರು ಆತನ ಮೊಬೈಲ್ ಗೆ ಕರೆ ಮಾಡಿದರೆ ನೆಟ್ ವರ್ಕ್ ಇರಲಿಲ್ಲ ಕೂಡಲೇ ಯುವಕರು ನಡೆದುಕೊಂಡು ಸುಂಕ ಸಾಲೆ ಗ್ರಾಮಕ್ಕೆ ಬಂದು ಅಲ್ಲಿಂದ ಆತನ ಮೊಬೈಲ್ ಗೆ ಕರೆ ಮಾಡಿದರೆ ಆತನ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಬಳಿಕ ಎಚ್ಚೆತ್ತ ಯುವಕರು ಕೂಡಲೇ 112 ಗೆ ಕರೆ ಮಾಡಿ ಯುವಕ ನಾಪತ್ತೆಯಾಗಿರುವ ವಿಚಾರ ಪೊಲೀಸರೀಗೆ ತಿಳಿಸಿದ್ದಾರೆ.

ಮಾಹಿತಿ ಪಡೆದುಕೊಂಡ ಪೊಲೀಸರ ತಂಡ ಧನುಷ್ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ. ಅದರಂತೆ ಧನುಷ್ ನಾಪತ್ತೆಯಾದ ಸ್ಥಳದಿಂದ ಪೊಲೀಸರು ಮೂರೂ ತಂಡ ರಚಿಸಿ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ ಬರೋಬ್ಬರಿ ಮೂರೂ ಗಂಟೆ ಮೂವತ್ತು ನಿಮಿಷಗಳ ಕಾರ್ಯಾಚರಣೆ ಬಳಿಕ ಧನುಷ್ ದಟ್ಟ ಕಾಡಿನ ನಡುವೆ ಪತ್ತೆಯಾಗಿದ್ದಾನೆ.ಕುರಿತು ಮಾಹಿತಿ ನೀಡಿದ ಅಧಿಕಾರಿಗಳು ಧನುಷ್ ನಾಪತ್ತೆಯಾದ ಸ್ಥಳದಿಂದ ಆತನ ಪತ್ತೆಗೆ ಕಾರ್ಯಾಚರಣೆ ನಡೆಸಿ ಕಾಡಿನ ನಡುವೆ ಹುಡುಕಾಟ ನಡೆಸಿದ ನಮಗೆ ಸುಮಾರು ಮೂರುವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಸುಮಾರು 700 ಅಡಿ ಕೆಳಗೆ ದಟ್ಟವಾದ ಅರಣ್ಯ ಪ್ರದೇಶದ ಮದ್ಯದಲ್ಲಿ ಒಬ್ಬನೇ ನಿಂತಿರುವುದು ಕಂಡು ಬಂದಿದೆ ಕೂಡಲೇ ನಮ್ಮ ತಂಡ ಆತನ ಬಳಿಗೆ ಹೋಗುತ್ತಿದ್ದಂತೆ ಗಾಬರಿಗೊಂಡಿದ್ದ ಯುವಕ ನಮ್ಮನ್ನು ನೋಡಿ ನಮ್ಮತ್ತ ಓಡಿ ಬಂದಿದ್ದಾನೆ ಬಳಿಕ ವಿಚಾರಿಸಿದ ವೇಳೆ ಆತನೇ ಎಂಬುದು ದೃಢವಾಗಿದ್ದು ಬಳಿಕ ಗಾಬರಿಗೊಂಡಿದ್ದ ಆತನನ್ನು ಸಂತೈಸಿ ಬಳಿಕ ಯುವರನ್ನು ಕೊಟ್ಟಿಗೆಹಾರಕ್ಕೆ ಕರೆದುಕೊಂಡು ಬಂದು ಬಳಿಕ ಪೋಷಕರಿಗೆ ಕರೆ ಮಾಡಿ ಮಾತನಾಡಿಸಿ ಆ ಬಳಿಕ ಮಂಗಳೂರಿಗೆ ಕಳುಹಿಸಿಕೊಡಲಾಯಿತು ಎಂದು ಹೇಳಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮೆಹಬೂಬ್ ಸಾಧನಿ ಶಂಕರ್ ಬೋವಿ ಹಾಗೂ ಸ್ಥಳೀಯರು ಜೊತೆಗಿದ್ದರು.

ಇಂದು ಪ್ರಗತಿ ಸ್ಟಡಿ ಸೆಂಟರ್‌ನ ಪ್ರಾಯೋಜಕತ್ವದಲ್ಲಿ ಪ್ರಗತಿ ವೈಭವ ತಾಲೂಕು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ

Posted by Vidyamaana on 2023-12-17 07:30:09 |

Share: | | | | |


ಇಂದು ಪ್ರಗತಿ ಸ್ಟಡಿ ಸೆಂಟರ್‌ನ ಪ್ರಾಯೋಜಕತ್ವದಲ್ಲಿ ಪ್ರಗತಿ ವೈಭವ ತಾಲೂಕು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಇಲ್ಲಿನ ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ(ಸಮೂಹ), ಜಾನಪದ ನೃತ್ಯ (ಸಮೂಹ), ಮಾನ್ಯಾಧಾರಿತ ಹಾಸ್ಯ ಪ್ರಧಾನ ನಾಟಕ (ಸಮೂಹ), ದೇಶಭಕ್ತಿ ನೃತ್ಯ ರೂಪಕ (ಸಮೂಹ) ಕಾರ್ಯಕ್ರಮ ಡಿ.17 ರಂದು ಜೈನಭವನದಲ್ಲಿ ಬೆಳಗ್ಗೆ 10 ಗಂಟೆಯಿಂದ 8 ರವರೆಗೆ ನಡೆಯಲಿದೆ. ಕಾಠ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಇವರು ನೆರವೇರಿಸಲಿದ್ದಾರೆ.

ನಂತರ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಸ್ಪರ್ಧೆಗಳು ನಡೆಯಲಿದೆ. ಸಭಾಕಾಯಕ್ರಮ ಸಂಜೆ 4 ಗಂಟೆಗೆ ನಡೆಯಲಿದೆ. ಕಾಠ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಿಕೊಳ್ಳಲಿದ್ದಾರೆ. ಕಾಠ್ಯಕ್ರಮದ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.. ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು. ಪಿ. ಶಿವಾನಂದ, ತಾಲೂಕು ಕ.ಸಾ.ಪ. ಅಧ್ಯಕ್ಷ ಉಮೇಶ್ ನಾಯಕ್, ಶಿಕ್ಷಣ ತಜ್ಞೆ ವಚನ ಜಯರಾಮ್, ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ, ಅಪ್ಪಯ್ಯ ಪಿ.ಟಿ ಹಾಗೂ ಸರಿತ ಯಶೋಧ ಬೆಂಗಳೂರು, ವಿದ್ಯಾರ್ಥಿ ಪೋಷಕರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಶೆಟ್ಟಿ ನುಳಿಯಾಲು, ಸುಷ್ಮಾ ಡೆಪ್ಯೂಟಿ ಮ್ಯಾನೇಜರ್, ಐ.ಸಿ.ಐ.ಸಿ.ಐ ಬ್ಯಾಂಕ್ ಬೆಂಗಳೂರು ಹಾಗೂ ಹಿರಿಯ ವಿದ್ಯಾರ್ಥಿನಿ ಪ್ರಗತಿ ಸ್ಟಡಿ ಸೆಂಟರ್, ವಿನಿತಾ ಸಹಾಯಕ ಪ್ರಾಧ್ಯಾಪಕರು, ಕೆ.ಎಲ್.ಇ ಸೊಸೈಟಿ ನಿಜಲಿಂಗಪ್ಪ ಕಾಲೇಜು, ರಾಜಾಜಿ ನಗರ ಬೆಂಗಳೂರು ಹಾಗೂ ಹಿರಿಯ ವಿದ್ಯಾರ್ಥಿನಿ ಪ್ರಗತಿ ಸ್ಟಡಿ ಸೆಂಟರ್ ಹಾಗೂ ಧರ್ಮದೈವ ಚಿತ್ರ ತಂಡದ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತೆ ಗುರುಪ್ರಿಯ ನಾಯಕ್ ಇವರ ತಂಡದವರಿಂದ ಗಾನನೃತ್ಯ ವೈಭವ ಕಾರ್ಯಕ್ರಮವು ಜರುಗಲಿದೆ. ನಂತರ ಪ್ರಗತಿ ಸ್ಟಡಿ ಸೆಂಟರ್ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮಗಳು ಜರುಗಲಿದೆ ಎಂದು ಪ್ರಾಶುಪಾಲರಾದ ಕೆ ಹೇಮಲತಾ ಗೋಕುಲ್ ನಾಥ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈಶ್ವರಮಂಗಲದಿಂದ ಗಾಳಿಮುಖತನಕ ಅಶೋಕ್‌ರೈ ಪರ ರೋಡ್‌ಶೋ

Posted by Vidyamaana on 2023-05-05 16:44:06 |

Share: | | | | |


ಈಶ್ವರಮಂಗಲದಿಂದ ಗಾಳಿಮುಖತನಕ ಅಶೋಕ್‌ರೈ ಪರ ರೋಡ್‌ಶೋ

ಪುತ್ತೂರು:ಬಡವರ ಸೇವೆ ಮಾಡಬೇಕು, ಅನ್ಯಾಯಕ್ಕೊಳಗಾದವರಿಗೆ ನ್ಯಾಯಕೊಡಿಸಬೇಕು, ನೊಂದವರಿಗೆ ಸಾಂತ್ವನ ಹೇಳಬೇಕು, ಕಷ್ಟದಲ್ಲಿರುವವರಿಗೆ ನೆರವಾಗಬೇಕು ಮತ್ತು ಪುತ್ತೂರು ಕ್ಷೇತ್ರವನ್ನು ಅಭಿವೃದ್ದಿ ಮಾಡಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಕ್ಷೇತ್ರದ ಕಟ್ಟಕಡೇಯ ವ್ಯಕ್ತಿಗೂ ಖಂಡಿತವಾಗಿಯೂ ನ್ಯಾಯ ಕೊಡಿಸುವೆ ನನ್ನನ್ನು ಗೆಲ್ಲಿಸಿಕೊಡಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಮನವಿ ಮಾಡಿದರು.



Leave a Comment: