ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಸುದ್ದಿಗಳು News

Posted by vidyamaana on 2024-07-01 19:31:51 |

Share: | | | | |


ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಮಳೆಗಾಲ ಆರಂಭವಾಗಿದ್ದು, ಈ ಋತುವಿನಲ್ಲಿ ಆರೋಗ್ಯದ ಕಡೆ ಗಮನಹರಿಸುವುದು ಅಗತ್ಯವಾಗಿದೆ. ಋತುಮಾನದ ಕಾಯಿಲೆಗಳ ಜೊತೆಗೆ ಡೆಂಗ್ಯೂ ಅಪಾಯವಿದೆ. ಡೆಂಗ್ಯೂ ವಾಸ್ತವವಾಗಿ ಹೆಣ್ಣು ಈಜಿಪ್ಟಿ (ಈಡಿಸ್ ಸೊಳ್ಳೆ) ಸೊಳ್ಳೆಗಳಿಂದ ಹರಡುತ್ತದೆ.

ಈ ಸೊಳ್ಳೆಗಳ ಜೀವಿತಾವಧಿ ಕೇವಲ ಒಂದು ತಿಂಗಳು ಮಾತ್ರ. ಆದ್ರೆ, ಈ ಅವಧಿಯಲ್ಲಿ ಅವು 500 ರಿಂದ 1000 ಸೊಳ್ಳೆಗಳಿಗೆ ಜನ್ಮ ನೀಡುತ್ತವೆ. ಈ ಸೊಳ್ಳೆಗಳು ಕೇವಲ ಮೂರು ಅಡಿ ಮಾತ್ರ ಹಾರಬಲ್ಲವು. ಈ ಕಾರಣಕ್ಕಾಗಿ ಅವು ಕೇವಲ ಮನುಷ್ಯನ ಕೆಳಗಿನ ಅಂಗಗಳನ್ನ ಗುರಿಯಾಗಿಸುತ್ತಾರೆ. ಈ ಸೊಳ್ಳೆಗಳು ಕಚ್ಚಿದರೆ ತೀವ್ರ ಜ್ವರದ ಜೊತೆಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ.

ಡೆಂಗ್ಯೂ ಸೊಳ್ಳೆಗಳು ಕೂಲರ್‌, ಹೂವಿನ ಕುಂಡಗಳು, ಹಳೆಯ ಪಾತ್ರೆಗಳು ಅಥವಾ ಮನೆಯ ಛಾವಣಿಗಳು, ಟೈರ್‌ಗಳು, ಗುಂಡಿಗಳು ಇತ್ಯಾದಿಗಳಲ್ಲಿ ತಮ್ಮ ಮೊಟ್ಟೆಗಳನ್ನ ಇಡುತ್ತವೆ. ಡೆಂಗ್ಯೂ ಸೊಳ್ಳೆಗಳು ಒಮ್ಮೆಗೆ 100 ರಿಂದ 300 ಮೊಟ್ಟೆಗಳನ್ನ ಇಡುತ್ತವೆ. 4 ದಿನಗಳ ನಂತರ ಅವು ಸೊಳ್ಳೆಗಳಾಗಿ ರೂಪಾಂತರಗೊಳ್ಳುತ್ತವೆ. ಸೊಳ್ಳೆಗಳು ಹುಟ್ಟಿದ 2 ದಿನಗಳಲ್ಲಿ ಹಾರಲು ಪ್ರಾರಂಭಿಸುತ್ತವೆ.

ಡೆಂಗ್ಯೂ ಸೊಳ್ಳೆ ಕಚ್ಚಿದ ತಕ್ಷಣ ಡೆಂಗ್ಯೂ ಲಕ್ಷಣಗಳು ಕಾಣಿಸುವುದಿಲ್ಲ. ಆದ್ರೆ, ಕೆಲವು ದಿನಗಳ ನಂತರ ಅದರ ಪರಿಣಾಮಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಈಡಿಸ್ ಸೊಳ್ಳೆಗಳು ಕಚ್ಚಿದ 3 ರಿಂದ 5 ದಿನಗಳ ನಂತರ ಡೆಂಗ್ಯೂ ಜ್ವರ ಬರುತ್ತದೆ. ಈ ಸೊಳ್ಳೆಗಳು ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ಮಾತ್ರ ಸಂಚರಿಸುತ್ತಿದ್ದು, ಡೆಂಗ್ಯೂ ಸೊಳ್ಳೆಗಳು ಮನೆಗಳ ಮೂಲೆಗಳಲ್ಲಿ ಪರದೆಯ ಹಿಂದೆ, ಸೊಳ್ಳೆಗಳು ಇರುವ ಸ್ಥಳಗಳಲ್ಲಿ ಅಡಗಿಕೊಳ್ಳುತ್ತವೆ.

ಡೆಂಗ್ಯೂ ಜ್ವರದ ಲಕ್ಷಣಗಳು.!

ಡೆಂಗ್ಯೂ ಈಡಿಸ್ ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುವ ಗಂಭೀರ ಕಾಯಿಲೆಯಾಗಿದ್ದು, ಇದರ ಲಕ್ಷಣಗಳು ಸಾಮಾನ್ಯವಾಗಿ ಜ್ವರದಂತಿರುತ್ತವೆ. ಆದ್ರೆ, ಇದು ತೀವ್ರವಾದ ಹೆಮರಾಜಿಕ್ ಜ್ವರಕ್ಕೆ ಕಾರಣವಾಗಬಹುದು. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಿದೆ ಎನ್ನುತ್ತಾರೆ ವೈದ್ಯರು.

ಲಕ್ಷಣಗಳೇನು.?

ತೀವ್ರವಾದ ಜ್ವರ, ತಲೆನೋವು, ಸ್ನಾಯು ನೋವು, ಚರ್ಮದ ಮೇಲೆ ಕೆಂಪು ಗುಳ್ಳೆಗಳು, ಕಣ್ಣುಗಳ ಕೆಳಗೆ ನೋವು, ಮೊಣಕಾಲು ನೋವು, ಊತ, ಹಲ್ಲು, ಮೂಗು, ಒಸಡುಗಳಿಂದ ರಕ್ತಸ್ರಾವ ಇತ್ಯಾದಿಗಳನ್ನ ಗಮನಿಸಿದರೆ ತಕ್ಷಣವೇ ಎಚ್ಚರಗೊಳ್ಳಿ.

ಡೆಂಗ್ಯೂ ತಡೆಗಟ್ಟುವುದು ಹೇಗೆ.?

* ವಿಶೇಷವಾಗಿ ಮಳೆಗಾಲದಲ್ಲಿ ದೇಹವನ್ನ ಸಂಪೂರ್ಣವಾಗಿ ಮುಚ್ಚುವ ಬಟ್ಟೆಗಳನ್ನ ಧರಿಸಿ.

* ಮಲಗುವಾಗ ಸೊಳ್ಳೆ ಪರದೆಗಳನ್ನ ಬಳಸಿ.

* ಸೊಳ್ಳೆ ಕಡಿತವನ್ನು ತಡೆಯಲು ದೇಹಕ್ಕೆ ಎಣ್ಣೆ ಅಥವಾ ಕ್ರೀಮ್ ಹಚ್ಚಿ.

* ನಿಮ್ಮ ಮನೆ ಮತ್ತು ಸುತ್ತಮುತ್ತ ಕೊಳಕು ನೀರು ಬರುವುದನ್ನ ತಪ್ಪಿಸಿ.

* ಅನಗತ್ಯ ವಸ್ತುಗಳು ಹಾಗೂ ಕೂಲರ್ ಕಾಲಕಾಲಕ್ಕೆ ಸ್ವಚ್ಛಗೊಳಿಸುತ್ತಿರಬೇಕು.

* ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

 Share: | | | | |


ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜೂನ್ 17) ವಿದ್ಯುತ್ ನಿಲುಗಡೆ

Posted by Vidyamaana on 2023-06-16 23:14:10 |

Share: | | | | |


ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜೂನ್ 17) ವಿದ್ಯುತ್ ನಿಲುಗಡೆ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ಕಬಕ, ಕೆದಿಲ ಮತ್ತು ನಗರ ಫೀಡರ್‌ನಲ್ಲಿ ಜೂ.17ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 2ರ ವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆ.ವಿ ಮತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್‌ ಸರಬರಾಜಾಗುವ ನಗರ, ಕಬಕ, ಕೊಡಿಪ್ಪಾಡಿ, ಬನ್ನೂರು, ಬಲ್ನಾಡು, ನವನಗರ, ವಿವೇಕಾನಂದ ಕಾಲೇಜು ಪರಿಸರ, ಪಡ್ಡಾಯೂರು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ, ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಫೈನಲ್ ನಲ್ಲಿ ಹೈದರಾಬಾದ್ ಗೆ ಹೀನಾಯ ಸೋಲು.. ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ಕಾವ್ಯ ಮಾರನ್

Posted by Vidyamaana on 2024-05-27 08:25:45 |

Share: | | | | |


ಫೈನಲ್ ನಲ್ಲಿ ಹೈದರಾಬಾದ್ ಗೆ ಹೀನಾಯ ಸೋಲು.. ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ಕಾವ್ಯ ಮಾರನ್

IPL ನ ಅಂತಿಮ ಹಣಾಹಣಿಯಲ್ಲಿ ಎಸ್​ಆರ್​ಹೆಚ್​ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಮೊದಲ ಓವರ್​ನಲ್ಲೇ ಮಿಚೆಲ್ ಸ್ಟಾರ್ಕ್ ಆಘಾತ ನೀಡಿದ್ದರು.ಮೊದಲ ಓವರ್​ನ 5ನೇ ಎಸೆತದಲ್ಲಿ ಅಭಿಷೇಕ್ ಶರ್ಮಾ (2) ರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಸ್ಟಾರ್ಕ್ ಶುಭಾರಂಭ ಮಾಡಿದ್ದರು. ಇದಾದ ಬಳಿಕ ಟ್ರಾವಿಸ್ ಹೆಡ್ (0) ವೈಭವ್ ಅರೋರಾಗೆ ವಿಕೆಟ್ ಒಪ್ಪಿಸಿದರು. ಪವರ್​ಪ್ಲೇನಲ್ಲೇ ಪ್ರಮುಖ 2 ವಿಕೆಟ್ ಕಳೆದುಕೊಂಡ ಸನ್​ರೈಸರ್ಸ್ ಹೈದರಾಬಾದ್ ಈ ಆಘಾತದಿಂದ ಪಾರಾಗುವ ಮುನ್ನವೇ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್​ಗಳಲ್ಲಿ 113 ರನ್​ಗಳಿಸಿ ಆಲೌಟ್ ಆಯಿತು

ಕಾರಿನೊಳಗೆ ಇರಲೇ ಇಲ್ಲ ಆ ಮಹಿಳೆ ಆದ್ರೂ AI ಕ್ಯಾಮೆರಾದಲ್ಲಿ ಸೆರೆ

Posted by Vidyamaana on 2023-11-05 18:32:53 |

Share: | | | | |


ಕಾರಿನೊಳಗೆ ಇರಲೇ ಇಲ್ಲ ಆ ಮಹಿಳೆ ಆದ್ರೂ AI ಕ್ಯಾಮೆರಾದಲ್ಲಿ ಸೆರೆ

ತಿರುವನಂತಪುರ: ಕೇರಳದಲ್ಲೊಂದು ವಿಚಿತ್ರ ಪ್ರಕರಣ ವರದಿಯಾಗಿದೆ. ಸೀಟ್ ಬೆಲ್ಟ್ ಧರಿಸಿಲ್ಲ ಎಂಬ ಕಾರಣಕ್ಕೆ ಎಐ ಚಾಲಿತ ಕ್ಯಾಮೆರಾ ಟ್ರಾಫಿಕ್ ಉಲ್ಲಂಘನೆಯನ್ನು ಪತ್ತೆಹಚ್ಚಿತ್ತು. ಬಳಿಕ ಕಾರು ಮಾಲಕರಿಗೆ ದಂಡಸ ಚಲನ್ ನೀಡಿದಾಗ ಅದರಲ್ಲಿ ಎಐ ಕ್ಯಾಮೆರಾದ ಸೆರೆಹಿಡಿದಿದ್ದ ಫೋಟೋ ನೋಡಿ ಮಾಲಕರು ಗಾಬರಿಗೊಂಡಿದ್ದಾರೆ

ಏಕೆಂದರೆ, ಆ ಸಮುದಲ್ಲಿ ಕಾರಿನಲ್ಲಿ ಇಬ್ಬರೇ ಪ್ರಯಾಣಿಸುತ್ತಿದ್ದರು ಆದರೆ ದಂಡದ ಚಲನ್ ನಲ್ಲಿ ಪ್ರಿಂಟ್ ಆಗಿದ್ದ ಕಾರಿನ ಫೊಟೋದಲ್ಲಿ ಮೂವರಿರುವುದು ಕಂಡುಬಂದಿದೆ.

ಚೆರುವತ್ತೂರಿನ ಕೈತಕ್ಕಾಡ್ ಮೂಲದ ಆದಿತ್ಯನ್ ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸಿದ್ದಕ್ಕಾಗಿ ದಂಡ ವಿಧಿಸಲಾಗಿದೆ. ಪಯ್ಯನ್ನೂರಿನಲ್ಲಿ ಅಳವಡಿಸಲಾಗಿದ್ದ ಎಐ ಕ್ಯಾಮೆರಾದಲ್ಲಿ ಈ ಮೇಲಿನ ಚಿತ್ರ ಸೆರೆಯಾಗಿದೆ.

ಟ್ರಾಫಿಕ್ ಪೊಲೀಸರು ನೀಡಿರುವ ನೋಟೀಸ್ನಲ್ಲಿರುವ ಚಿತ್ರವು ಕಾರಿನ ಹಿಂಬದಿಯ ಸೀಟಿನಲ್ಲಿ ಇನ್ನೊಬ್ಬ ಮಹಿಳೆಯ ಆಕೃತಿಯನ್ನು ತೋರಿಸುತ್ತದೆ. ಆದರೆ ಅಂತಹ ವ್ಯಕ್ತಿ ಕಾರಿನಲ್ಲಿರಲಿಲ್ಲ ಎಂದು ಆದಿತ್ಯನ್ ಮತ್ತು ಆತನ ಕುಟುಂಬದವರು ವಾದಿಸಿದ್ದಾರೆ. ಹಾಗದರೆ ಆ ಮಹಿಳೆ ಯಾರು ಎಂಬುದು ಇದೀಗ ದೊಡ್ಡ ಪ್ರಶ್ನೆಯಾಗಿದೆ.

ಚಲನ್ ಮೇಲೆ ವಾಹನದಲ್ಲಿ ಇಲ್ಲದವರ ಫೋಟೋ ಮುದ್ರಿಸಿರುವುದು ಮೋಟಾರು ವಾಹನ ಇಲಾಖೆಗೂ ಗೊಂದಲ ಮೂಡಿಸಿದ್ದು ಇದು ತಾಂತ್ರಿಕ ದೋಷದಿಂದ ಆಗಿರುವ ಎಡವಟ್ಟೋ ಅಥವಾ ಇನ್ನಾವುದಾದರೂ ‘ನಿಗೂಢ’ ಶಕ್ತಿಯ ಕೈವಾಡವೋ ಎಂಬ ಬಿಸಿ ಬಿಸಿ ಚರ್ಚೆ ಇದೀಗ ನೆಟ್ಟಿಗರ ವಲಯದಲ್ಲಿ ಜೋರಾಗಿ ನಡೆಯುತ್ತಿದೆ.

ವಿಟ್ಲ: ಅರವಿಂದ ಭಾಸ್ಕರ್ ಅನುಮಾನಾಸ್ಪದ ಸಾವು : ಪತ್ನಿ ಹಾಗೂ ಯೋಗೀಶ್ ಗೌಡ ವಿರುದ್ಧ ಪ್ರಕರಣ ದಾಖಲು..!!!

Posted by Vidyamaana on 2023-02-27 03:29:14 |

Share: | | | | |


ವಿಟ್ಲ: ಅರವಿಂದ ಭಾಸ್ಕರ್ ಅನುಮಾನಾಸ್ಪದ ಸಾವು : ಪತ್ನಿ ಹಾಗೂ ಯೋಗೀಶ್ ಗೌಡ ವಿರುದ್ಧ ಪ್ರಕರಣ ದಾಖಲು..!!!

ವಿಟ್ಲ: ಇಡ್ಕಿದು ಗ್ರಾಮದ ಚೈತನ್ಯ ಕುಮೇರು ನಿವಾಸಿ ಅರವಿಂದ ಭಾಸ್ಕರ್ (39) ಅನುಮಾನಾಸ್ಪದ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರವಿಂದ ಭಾಸ್ಕರ ರವರ ಸಂಬಂಧಿ ನೀಡಿದ ದೂರಿನ ಮೇರೆಗೆ ಅರವಿಂದ ಭಾಸ್ಕರ್ ರವರ ಪತ್ನಿ ಹಾಗೂ ಯೋಗೀಶ್ ಗೌಡ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

ಮೃತ ಅರವಿಂದ ಭಾಸ್ಕರ ರವರ ಮೃತದೇಹದ ಸ್ಥಿತಿಗತಿಯನ್ನು ನೋಡಿದಾಗ ಅರವಿಂದ ಭಾಸ್ಕರನ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯವಿರುವುದಾಗಿ ಹಾಗೂ ಫೆ. 25 ರಂದು ರಾತ್ರಿಯಿಂದ ಫೆ.26 ರ ಬೆಳಿಗ್ಗೆಯ ಮಧ್ಯ ಸಮಯದಲ್ಲಿ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಚೈತನ್ಯಕುಮೇರು ಎಂಬಲ್ಲಿ ಮೃತರ ವಾಸದ ಮನೆಯಲ್ಲಿ ಆರೋಪಿಗಳಾದ ಯೋಗೀಶ ಗೌಡ ಹಾಗೂ ಅರವಿಂದ ಭಾಸ್ಕರನ ಪತ್ನಿ ಆಶಾ ರವರು ಒಟ್ಟು ಸೇರಿಕೊಂಡು ಕೊಲೆ ಮಾಡುವ ಸಮಾನ ಉದ್ದೇಶದಿಂದ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 30/2023 ಕಲಂ: ಕಲಂ 302 ಜೊತೆಗೆ 34 ಐಪಿಸಿ ಮತ್ತು ಕಲಂ 3(2)(V),3(2)(Va) SC/ST (POA) Ammendmanent Act-2015 ಕಲಂ ಗಳ ಅಡಿಯಲ್ಲಿ ಅವರುಗಳ ವಿರುದ್ದ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಮಣಿಪಾಲ ; ಪರೀಕ್ಷೆ ಭಯದಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಸುಮನ್ ಆತ್ಮಹತ್ಯೆ

Posted by Vidyamaana on 2024-02-17 21:20:23 |

Share: | | | | |


ಮಣಿಪಾಲ ; ಪರೀಕ್ಷೆ ಭಯದಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಸುಮನ್ ಆತ್ಮಹತ್ಯೆ

ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. 


ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ. 


ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳ ನಿಷೇಧ; ಗೃಹ ಸಚಿವರ ಹೇಳಿಕೆ

Posted by Vidyamaana on 2023-06-01 11:25:25 |

Share: | | | | |


ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳ ನಿಷೇಧ; ಗೃಹ ಸಚಿವರ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳವನ್ನು ನಿಷೇಧ ಮಾಡುತ್ತೇವೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಯಾರೂ ಸರಿಯಾಗಿ ಓದಿಲ್ಲ. ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳ ನಿಷೇಧ ಮಾಡುತ್ತೇವೆ. ಅಂತಹ ಕೆಲಸ ಮಾಡದೇ ಇದ್ದರೆ ಸುಮ್ಮನೆ ಯಾಕೆ ಬ್ಯಾನ್ ಮಾಡುತ್ತೇವೆ. ನಿಷೇಧ ಮಾಡುವ ಸಂದರ್ಭ ಬರಬಾರದು ಅಂತಾ ಅನಿಸುತ್ತದೆ ಎಂದಿದ್ದಾರೆ.ನೈತಿಕ ಪೊಲೀಸ್ ಗಿರಿ, ಕೋಮು ಚಟುವಟಿಕೆ ನಾವು ಸಹಿಸುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪಿಎಸ್ ಐ ಹಗರಣದ ಪ್ರಕರಣ ಹೈಕೋರ್ಟ್ ನಲ್ಲಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.



Leave a Comment: