ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಸುದ್ದಿಗಳು News

Posted by vidyamaana on 2024-06-30 19:31:43 |

Share: | | | | |


ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ

ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

 Share: | | | | |


ಆಸ್ತಿ ವಿವಾದದಿಂದ ಕಲಬುರಗಿ ವಕೀಲ ಈರಣ್ಣಗೌಡ ಕೊಲೆ : ಆರೋಪಿ ದಂಪತಿ ಅರೆಸ್ಟ್​

Posted by Vidyamaana on 2023-12-11 07:47:50 |

Share: | | | | |


ಆಸ್ತಿ ವಿವಾದದಿಂದ ಕಲಬುರಗಿ ವಕೀಲ ಈರಣ್ಣಗೌಡ ಕೊಲೆ : ಆರೋಪಿ ದಂಪತಿ ಅರೆಸ್ಟ್​

ಕಲಬುರಗಿ: ನ್ಯಾಯವಾದಿ ಈರಣ್ಣಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ನೀಲಕಂಠರಾವ್ ಪಾಟೀಲ್ ಹಾಗೂ ಇವರ ಪತ್ನಿ ಸಿದ್ದಮ್ಮ ಪಾಟೀಲ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.ಡಿಸೆಂಬರ್​​ 7 ರಂದು ಕಲಬುರಗಿ ನಗರದ ಗಂಗಾವಿಹಾರ ಅಪಾರ್ಟ್​ಮೆಂಟ್​ನಲ್ಲಿ ನ್ಯಾಯವಾದಿ ಈರಣ್ಣಗೌಡ ಪಾಟೀಲ್ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.


ಹತ್ಯೆಯ ನಾಲ್ಕೈದು ದಿನದ ಹಿಂದೆ ಕೊಲೆಗೆ ಪ್ಲಾನ್ ಮಾಡಿ ಎಲ್ಲಾ ವ್ಯವಸ್ಥೆ ಮಾಡಿದ್ರು ಎಂಬ ಆರೋಪ ಗಂಡ-ಹೆಂಡತಿ ಮೇಲಿದೆ. ಅಲ್ಲದೆ ಈರಣ್ಣಗೌಡ ಹತ್ಯೆಯಾದ ಬಳಿಕ ಆರೋಪಿ ಮಲ್ಲಿನಾಥ್ ನಾಯ್ಕೋಡಿಗೆ, ಸಿದ್ದಮ್ಮ 50 ಸಾವಿರ ಹಣ ಕೊಟ್ಟಿದ್ರು. ಕೊಲೆಯ ನಂತರ ಆರೋಪಿ ಮಲ್ಲಿನಾಥ್ ನಾಯ್ಕೋಡಿ ರಕ್ತದ ಕಲೆಯಲ್ಲಿಯೇ ಸಿದ್ದಮ್ಮ ಮನೆಗೆ ಬಂದು ಹಣ ತೆಗೆದುಕೊಂಡು ಹೋಗಿದ್ದನೆಂದು ತನಿಖೆಯಲ್ಲಿ ಬಯಲಾಗಿದೆ.ಬಂಧಿತ ನೀಲಕಂಠ ಪಾಟೀಲ್ ಹಾಗೂ ಕೊಲೆಯಾದ ನ್ಯಾಯವಾದಿ ಈರಣ್ಣಗೌಡ ಪಾಟೀಲ್ ಸಹೋದರ ಸಂಬಂಧಿಯಾಗಿದ್ದಾರೆ. ಕಲಬುರಗಿ ನಗರಕ್ಕೆ ಹೊಂದಿಕೊಂಡಂತೆ ಎಕರೆಗೆ 3ಕೋಟಿ ರೂ. ಬೆಲೆ ಬಾಳುವ 12 ಎಕರೆ ಜಮೀನು ಈರಣ್ಣಗೌಡ ಪಾಟೀಲ್​ ಅವರ ಹೆಸರಿನಲ್ಲಿ ಇತ್ತು. ಈ ಜಮೀನನ್ನು ಆರೋಪಿ ಮಲ್ಲಿನಾಥ ನಾಯ್ಕೋಡಿ ಕುಟುಂಬದವರು ನೋಡಿಕೊಳ್ಳುತ್ತಿದ್ದರು. ಈ ನಡುವೆ ಸೈಟ್ ಹಾಕಿ ಮಾರಾಟ ಮಾಡಿದ್ರೆ ಒಂದೊಂದು 30x40 ಸೈಜ್ ಸೈಟ್‌ಗೆ ಕನಿಷ್ಠ ಅಂದ್ರೂ 20 ರಿಂದ 30 ಲಕ್ಷ ರೂ. ಬೆಲೆ ಬಾಳುತ್ತದೆ. ಹೀಗಾಗಿ ತಮ್ಮ ಜಮೀನಿಗೆ ನಾನ್ ಅಗ್ರಿಕಲ್ಚರ್ (ಎನ್‌ಎ), ಜಿಡಿಎ ಮಾಡಿಸಿ ಸೈಟ್ ಆಗಿ ಪರಿವರ್ತನೆ ಮಾಡಲು ಈರಣ್ಣಗೌಡ ಪಾಟೀಲ್​ ಯೋಜಿಸಿದ್ದರು. ಆದ್ರೆ ಜಮೀನಿನಲ್ಲಿ ಪಾಲು ಬೇಕು ಎಂದು ನೀಲಕಂಠ ಪಾಟೀಲ್ ಹಾಗೂ ನಾಯ್ಕೋಡಿ ಕುಟುಂಬದವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.ಕೋಟಿ ಕೋಟಿ ಮೌಲ್ಯದ ಆಸ್ತಿ‌ ಆಗಿರೋದ್ರಿಂದ ಈ ಮುಂಚೆ‌ ಕೂಡಾ ಇದೆ ವಿಚಾರವಾಗಿ ಗಲಾಟೆ, ರಾಜಿ-ಪಂಚಾಯಿತಿಗಳು ನಡೆದಿದ್ದವು. 12 ಎಕೆರೆಯಲ್ಲಿ 2 ರಿಂದ 3 ಎಕರೆನಾದರೂ ನೀಡುವಂತೆ ಆರೋಪಿಗಳು ದುಂಬಾಲು ಬಿದ್ದಿದ್ದರು. ಆದರೆ ಇದಕ್ಕೆ ಈರಣ್ಣಗೌಡ ಪಾಟೀಲ್​ ಸುತಾರಾಂ ಒಪ್ಪಿರಲಿಲ್ಲ. ಈರಣ್ಣಗೌಡ ಒಬ್ಬನೇ ಮಗ, ಹೀಗಾಗಿ ಅವನನ್ನು ಮುಗಿಸಿದರೆ ಕೋಟಿ ಕೋಟಿ ಬೆಲೆಬಾಳುವ ಜಮೀನು ತಮ್ಮದಾಗುತ್ತೆಂದು ಹಂತಕರು ಕೊಲೆಗೆ ಯೋಜನೆ ರೂಪಿಸಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.


ಡಿಸೆಂಬರ್​ 7 ರಂದು ಜಮೀನು ವ್ಯಾಜ್ಯ ಸಂಬಂಧ ಅಂತಿಮ ತೀರ್ಪು ಇತ್ತು. ಆ ದಿನ ಈರಣ್ಣಗೌಡ ಪಾಟೀಲ್ ಕೋರ್ಟ್​ಗೆ ಹೋಗುತ್ತಿದ್ದರು. ಇತ್ತ ನೀಲಕಂಠ ಪಾಟೀಲ್​ ಮತ್ತು ಅವರ ಪತ್ನಿ ಸಿದ್ದಮ್ಮ ಪಾಟೀಲ್​ ತಮ್ಮ ಹೊಸ ಕಾರ್ ಪೂಜೆಗೆಂದು ಗಾಣಗಾಪುರಕ್ಕೆ ತೆರಳಿದ್ದರು. ಪ್ರೀ ಪ್ಲಾನ್​ನಂತೆ ಮಲ್ಲಿನಾಥ, ಅವಣ್ಣ, ಭಾಗೇಶ ನಾಯ್ಕೋಡಿ ದಾರಿಯಲ್ಲಿ ಈರಣ್ಣಗೌಡ ಪಾಟೀಲ್​ ಅವರನ್ನು ಅಡ್ಡಹಾಕಿ, ಕೈಯಲ್ಲಿ ಮಚ್ಚು ಹಿಡಿದುಕೊಂಡು ಅಟ್ಟಾಡಿಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.


ಘಟನೆ ಸಂಭವಿಸಿದ 24 ಗಂಟೆಯಲ್ಲೇ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ನಿನ್ನೆ ದಿನ ಮತ್ತಿಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಸದ್ಯ ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದೆ. ಬಂಧಿತರನ್ನು ಸಂಪೂರ್ಣವಾಗಿ ವಿಚಾರಣೆ ಮಾಡಿದ ಬಳಿಕ ನ್ಯಾಯಾಲಯಕ್ಕೆ ಅಂತಿಮ ವರದಿ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಚೇತನ್ ಆರ್​ ತಿಳಿಸಿದ್ದಾರೆ.

ಸೆ 10: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ

Posted by Vidyamaana on 2023-09-08 12:11:36 |

Share: | | | | |


ಸೆ 10: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆಯು ಸೆ. 10ರಂದು ಸಂಜೆ 5 ಗಂಟೆಗೆ ಪುತ್ತೂರು ಮನಿಷಾ ಹಾಲ್’ನಲ್ಲಿ ನಡೆಯಲಿದೆ.

ಇದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 43ನೇ ವಾರ್ಷಿಕ ಮಹಾಸಭೆಯಾಗಿದೆ ಎಂದು ಸಂಘದ ಅಧ್ಯಕ್ಷ ಜೋನ್ ಕುಟಿನ್ಹಾ, ಪ್ರಧಾನ ಕಾರ್ಯದರ್ಶಿ ಪಿ. ಉಲ್ಲಾಸ್ ಪೈ, ಕೋಶಾಧಿಕಾರಿ ರಾಜೇಶ್ ಆರ್. ಕಾಮತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.30, 2024 ರೊಳಗೆ ಜಮ್ಮು-ಕಾಶ್ಮೀರದ ವಿಧಾನಸಭೆ ಚುನಾವಣೆ ನಡೆಸಲು ಸುಪ್ರಿಂ ಕೋರ್ಟ್ ಸೂಚನೆ

Posted by Vidyamaana on 2023-12-11 15:57:29 |

Share: | | | | |


ಸೆ.30, 2024 ರೊಳಗೆ ಜಮ್ಮು-ಕಾಶ್ಮೀರದ ವಿಧಾನಸಭೆ ಚುನಾವಣೆ ನಡೆಸಲು ಸುಪ್ರಿಂ ಕೋರ್ಟ್ ಸೂಚನೆ

ನವದೆಹಲಿ: ಸೆಪ್ಟೆಂಬರ್ 30, 2024 ರೊಳಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಸಲು ಸುಪ್ರಿಂಕೋರ್ಟ್ ಸೂಚನೆ ನೀಡಿದೆ. ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ತೀರ್ಪು ನೀಡಿದ ಬಳಿಕ ಪಂಚಪೀಠ ಈ ಆದೇಶವನ್ನು ನೀಡಿದೆ.2024 ರ ಸೆಪ್ಟೆಂಬರ್ 30 ರೊಳಗೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಚುನಾವಣೆ ನಡೆಸಲು ಭಾರತದ ಚುನಾವಣಾ ಆಯೋಗವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ನಿರ್ದೇಶಿಸುತ್ತೇವೆ" ಎಂದು ಸಿಜೆಐ 370 ನೇ ವಿಧಿಯ ತೀರ್ಪಿನಲ್ಲಿ ಹೇಳಿದರು.


"370 (1) (ಡಿ) ವಿಧಿಯನ್ನು ಬಳಸಿಕೊಂಡು ಭಾರತದ ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಒಂದೇ ಬಾರಿಗೆ ಅನ್ವಯಿಸಬಹುದು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. CO 273 ಅನ್ನು ಹೊರಡಿಸಲು ರಾಷ್ಟ್ರಪತಿ ಗಳು ಅಧಿಕಾರವನ್ನು ಬಳಸುವುದು ದುರುದ್ದೇಶಪೂರಿತವೆಂದು ನಾವು ಭಾವಿಸುವುದಿಲ್ಲ. ಹೀಗಾಗಿ ನಾವು ರಾಷ್ಟ್ರಪತಿಗಳು ಅಧಿಕಾರದ ಪ್ರಯೋಗವನ್ನು ಮಾನ್ಯವೆಂದು ಪರಿಗಣಿಸುತ್ತೇವೆ" ಎಂದು ಸಿಜೆಐ ಹೇಳಿದರು. ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆಯ ವಿಸರ್ಜನೆಯ ನಂತರ 370 (3) ನೇ ವಿಧಿಯ ಅಡಿಯಲ್ಲಿ ಅಧಿಕಾರವು ಅಸ್ತಿತ್ವದಲ್ಲಿಲ್ಲ ಎಂದು ಹೇಳುವುದು ಏಕೀಕರಣ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಕಾರಣವಾಗುತ್ತದೆ ಎಂದು ಸಿಜೆಐ ಹೇಳಿದ್ದಾರೆ. ರಾಜ್ಯದಲ್ಲಿನ ಯುದ್ಧ ಪರಿಸ್ಥಿತಿಗಳಿಂದಾಗಿ 370 ನೇ ವಿಧಿಯು ಮಧ್ಯಂತರ ವ್ಯವಸ್ಥೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 370 ನೇ ವಿಧಿ ತಾತ್ಕಾಲಿಕ ನಿಬಂಧನೆ ಎಂದು ಪಠ್ಯ ಓದುವಿಕೆ ಸೂಚಿಸುತ್ತದೆ ಎಂದು ಸಿಜೆಐ ತೀರ್ಪನ್ನು ಓದಿದರು.

ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

Posted by Vidyamaana on 2024-02-06 12:24:15 |

Share: | | | | |


ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು :ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕೊಲೆ ಮಗ ಮಾಡಿದಲ್ಲ ಬದಲಿಗೆ ಅಪ್ಪನ ಕೊಲೆಯನ್ನು ತನ್ನ ಮೇಲೆ ಹಾಕಿಕೊಂಡು ಮಗನೇ ಪೊಲೀಸರಿಗೆ ತಾನೇ ಕೊಲೆ ಮಾಡಿದ್ದ ಎನ್ನಲಾಗಿದೆ.ಈ ನಡುವೆ ಫಿಂಗರ್ ಪ್ರಿಂಟ್ ಪತ್ತೆಯಾದ ಹಿನ್ನೆಲೆ ತನಿಖೆ ನಡೆಸಿದ್ದ ಪೊಲೀಸರು ಕೊಲೆಯಲ್ಲಿ ತಂದೆ ಕೊಲೆ ಮಾಡಿದ್ದ ಎನ್ನಲಾಗಿದೆ.ಮಹಿಳೆ ಕೊಲೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದೆ. ಈ ನಡುವೆ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟ ಇತ್ತು. ಕೆಲವೊಮ್ಮೆ ಎರಡು ಮೂರು ದಿನಗಳ ಕಾಲ ಮನೆಗೆ ಬರ್ತಾ ಇರಲಿಲ್ಲ. ಹೀಗಾಗಿ ಮಗನ ಜೊತೆ ಸೇರಿ ಕೊಲೆ ಮಾಡಲು ನಿರ್ಧಾರ ಮಾಡಿದೆ ಎಂದು ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎನ್ನಲಾಗಿದೆ. ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತೆ, ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಗ ಪೊಲೀಸರ ಮುಂದೆ ಹೇಳಿದ್ದ ಎನ್ನಲಾಗಿದೆ.

ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ತರಗತಿ ಉದ್ಘಾಟನೆ

Posted by Vidyamaana on 2023-09-09 19:36:57 |

Share: | | | | |


ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ತರಗತಿ ಉದ್ಘಾಟನೆ

ಪುತ್ತೂರು: ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ರೋಟರಿಕ್ಲಬ್ ಪುತ್ತೂರು ಸಿಟಿ, ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ಮತ್ತು ಅಂಗನವಾಡಿ ಪುನಶ್ವೇತನ ರೋಟರಿ ಜಿಲ್ಲಾ ಯೋಜನೆಯನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸರಕಾರ ಮಾಡಬೇಕಾದ ಕೆಲಸವನ್ನು ರೋಟರಿ ಕ್ಲಬ್ ಮಾಡುತ್ತಿರುವುದು ಶ್ಲಾಘನೀಯ, ರೋಟರಿ ಕ್ಲಬ್ ನಿಂದ ಸಮಾಜ ಸೇವೆ ನಿರಂತರವಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಮುಂದಿನ ಒಂದು ವರ್ಷದೊಳಗೆ ಎಲ್ಲಾ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಎಲ್ ಕೆ .ಜಿ ತರಗತಿ ಆರಂಭಿಸಲಾಗುವುದು ಮಾತ್ರವಲ್ಲ ಶಿಕ್ಷಕರ ನೇಮಕಾತಿಯೂ ಪೂರ್ಣಗೊಳ್ಳಲಿದೆ. ಇಂಗ್ಲೀಷ್ ಮಾದ್ಯಮದಲ್ಲಿ ಶಿಕ್ಷಣ ಅತೀ ಮುಖ್ಯವಾಗಿದ್ದು, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು. ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ, ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸುರೇಂದ್ರ ಕಿಣಿ, ರೋನ್ 4 ರ ಅಸಿಸ್ಟಂಟ್ ಗವರ್ನರ್ ಲಾರೆನ್ಸ್ ಗೋನ್ಸಾಲ್ವಿಸ್, ನಗರ ಸಬಾ ಸದಸ್ಯ ಶಕ್ತಿ ಸಿನ್ಹಾ ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ. ಶಾಲೆ ಮುಖ್ಯ ಶಿಕ್ಷಕಿ ಯಶೋಧ, ಎಸ್ ಡಿ ಎಂಸಿ ಅಧ್ಯಕ್ಷೆ ವಸುಧಾ, ರೊ. ಶ್ಯಾಮಲಾ ಎಂ ಶೆಟ್ಟಿ, ರೊ.ಗ್ರೇಸಿ ಗೊನ್ಸಾಲ್ವಿಸ್, ರೊ.ಸುಧಾಕರ್ ಶೆಟ್ಟಿ ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಡಾ. ಶಶಿಧರ್ ಕಜೆ ಕಾರ್ಯಕ್ರಮ ನಿರೂಪಿಸಿದರು.

ಬೆಂಗಳೂರು ಕೋಟ್ಯಧಿಪತಿ ಉದ್ಯಮಿಗೆ ಹನಿಟ್ರ್ಯಾಪ್‌ ಮಾಡಿ ಬ್ಲ್ಯಾಕ್‌ಮೇಲ್

Posted by Vidyamaana on 2023-12-17 08:56:34 |

Share: | | | | |


ಬೆಂಗಳೂರು ಕೋಟ್ಯಧಿಪತಿ ಉದ್ಯಮಿಗೆ ಹನಿಟ್ರ್ಯಾಪ್‌ ಮಾಡಿ ಬ್ಲ್ಯಾಕ್‌ಮೇಲ್

ಬೆಂಗಳೂರು: ಉದ್ಯಮಿಯೊಬ್ಬನನ್ನು ಹನಿಟ್ರ್ಯಾಪ್‌ಗೆ ಬೀಳಿಸಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಗಂಡ-ಹೆಂಡತಿ ಮತ್ತು ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.


ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ‍್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.


ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ‍್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.


ಈಕೆ ವಿಧವೆ ಜೊತೆಯಲ್ಲಿರು ಅಂತಾ ಪರಿಚಯಿಸಿದ್ದ. ಈ ವೇಳೆ ಅತಾವುಲ್ಲಾನನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಕಳೆದ ನವೆಂಬರ್ 14 ರಂದು ಅತಾವುಲ್ಲಾಗೆ ಫೋನ್ ಮಾಡಿದ್ದ ಸಭಾ,‌ ‘ಆರ್.ಆರ್. ನಗರದ ಬಳಿ ಬಾ.. ಬರುವಾಗ ರೂಂ ಬುಕ್ ಮಾಡಲು ಆಧಾರ್ ತರುವಂತೆ’ ಹೇಳಿದ್ದಳು. ಪ್ಲ್ಯಾನ್‌ನಂತೆ ಇತ್ತ ಸಭಾ ಹಾಗು ಅತಾವುಲ್ಲಾ ಜೊತೆಯಲ್ಲಿದ್ದಾಗ ಗಂಡನ ಹನಿಟ್ರ‍್ಯಾಪ್ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು.


ಒಬೇದ್ ಖಾನ್ ಎಂಬಾತ ಇಬ್ಬರನ್ನ ತಡೆದು ಸೀನ್ ಕ್ರಿಯೇಟ್ ಮಾಡಿದ್ದಾನೆ. ಖಲೀಮ್, ರಕೀಬ್, ಅತೀಕ್‌ನನ್ನ ಸ್ಥಳಕ್ಕೆ ಕರೆಸಿ ಧಮ್ಕಿ ಹಾಕಿದ್ದ. ನಿಮ್ಮ ವಿಚಾರ ಮನೆಯವರಿಗೆ ತಿಳಿಸುವುದಾಗಿ ಹೆದರಿಸಿ ಜೇಬಲ್ಲಿದ್ದ 4,000 ರೂ. ಹಣವನ್ನು ಗ್ಯಾಂಗ್ ಕಸಿದಿತ್ತು. ಅಲ್ಲದೆ 6 ಲಕ್ಷ ರೂ. ಹಣ ತರುವಂತೆ ಧಮ್ಕಿ ಹಾಕಿತ್ತು.


ಈ ವೇಳೆ ಅತೀವುಲ್ಲಾ ಅಲ್ಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಹೋಟೆಲ್‌ಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ರೆಡ್ ಹ್ಯಾಂಡ್ ಆಗಿ ಹನಿಟ್ರ್ಯಾಪ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.


ಆರೋಪಿಗಳು ಸರಣಿ ಹನಿ ಟ್ರ್ಯಾಪಿಂಗ್ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



Leave a Comment: