ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ; ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಸುದ್ದಿಗಳು News

Posted by vidyamaana on 2024-06-30 21:58:04 |

Share: | | | | |


ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ;  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ.

ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.

ಬೆಂಕಿ ಅವಘಡದ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತರಾದ ಸಲೀಕತ್, ಅಬೂಬಕ್ಕರ್, ರಿಯಾಝ್, ಜುನೈದ್ ಮನೆಯೊಳಗೆ ಪ್ರವೇಶಿಸಿ

ವಿದ್ಯುತ್ ಸಂಪರ್ಕ, ಗ್ಯಾಸ್ ಸಂಕರ್ಪ ಕಡಿತಗೊಳಿಸಿದರು. ಪುತ್ತೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.

ಘಟನಾ ಸ್ಥಳಕ್ಕೆ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಆತೂರು ಬದ್ರಿಯಾ ಮಸೀದಿ ಖತೀಬ್ ಜುನೈದ್ ಜಿಫ್ರಿ ತಂಙಳ್ ಭೇಟಿ ನೀಡಿದರು. ಕೊಯಿಲ ಗ್ರಾಮಕರಣಿಕ ಶೇಷಾದ್ರಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ನಾನು ಕೋಣೆಯೊಂದರಲ್ಲಿ ಕೆಲಸದಲ್ಲಿ ನಿರತಳಾಗಿದ್ದೆ. ತುಂತುರು ಮಳೆಯಾಗುತ್ತಿತ್ತು. ಭಾರಿ ಸಿಡಿಲಿನ ಶಬ್ದ ಕೇಳಿಸಿತ್ತು. ಸ್ವಲ್ಪ ಹೊತ್ತಿನ ಬಳಿಕ ಮನೆಯೊಳಗೆ ಹೊಗೆ ತುಂಬತೊಡಗಿತು. ಮನೆಯಿಂದ ಹೊರ ಬರುವುದಕ್ಕೂ ದಾರಿ ಕಾಣುತ್ತಿರಲಿಲ್ಲ ಎಂದು ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ತಿಳಿಸಿದರು.

ಉಪ್ಪಿನಂಗಡಿ ಸಮೀಪದ ಕೆಮ್ಮಾರದಲ್ಲಿ ಮನೆ ಭಾಗಶಃ ಬೆಂಕಿಗೆ ಆಹುತಿಯಾಗಿದ್ದು ಕಂದಾಯ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 09

Posted by Vidyamaana on 2023-07-09 01:30:29 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 09

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 9 ರಂದು.

ಬೆಳಿಗ್ಗೆ 10 ಗಂಟೆಗೆ ಉಪ್ಪಿನಂಗಡಿ ಸುದೀಂದ್ರ ಹಾಲ್ ನಲ್ಲಿ ಹಲಸು ಮೇಳ

ಮಧ್ಯಾಹ್ನ 2 ಗಂಟೆಗೆ ಪುನಚ ಬೊಳಂತಿಮೊಗರಿನಲ್ಲಿ ಕೆಸರುಗದ್ದೆ ಕ್ರೀಡಾಕೂಟದಲ್ಲಿ   ಭಾಗವಹಿಸಲಿದ್ದಾರೆ.

ಸಂಜೆ ಬೆಂಗಳೂರು ಪ್ರಯಾಣ

ಜೋರು ಮಳೆಗೆ ರಜೆ ನಡುವೆ ಚಿಣ್ಣರಿಗೆ ಇನ್ನೊಂದು ಗುಡ್ ನ್ಯೂಸ್

Posted by Vidyamaana on 2023-07-06 03:59:05 |

Share: | | | | |


ಜೋರು ಮಳೆಗೆ ರಜೆ ನಡುವೆ ಚಿಣ್ಣರಿಗೆ ಇನ್ನೊಂದು ಗುಡ್ ನ್ಯೂಸ್

ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ.ಈ ಕುರಿತು ಜಿಲ್ಲಾ, ತಾಲ್ಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರು ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.ಸಂಭ್ರಮ ಶನಿವಾರ ದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ. ವಿದ್ಯಾರ್ಥಿ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಕೈಪಿಡಿಯನ್ನು ಡಿಎಸ್‌ಇಆರ್‌ಟಿ ವೆಬ್‌ಸೈಟ್ https://dsert.karnataka.gov.in/ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಹತ್ರಾಸ್ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಸಾವಿನ ಸಂಖ್ಯೆ 122 ಕ್ಕೆ ಏರಿಕೆ.!

Posted by Vidyamaana on 2024-07-02 19:47:54 |

Share: | | | | |


ಹತ್ರಾಸ್ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಸಾವಿನ ಸಂಖ್ಯೆ 122 ಕ್ಕೆ ಏರಿಕೆ.!

ಹತ್ರಾಸ್ : ಹತ್ರಾಸ್ನಲ್ಲಿ ಭೋಲೆ ಬಾಬಾ ಸತ್ಸಂಗದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 122 ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿದೆ.ಈ ಅವಘಡದಲ್ಲಿ 150 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, ಅನೇಕರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಮೈಸೂರು ರಾಜ್ಯ ಕರ್ನಾಟಕ ವಾದದ್ದು ಹೇಗೆ ? ಇಲ್ಲಿದೆ ಕನ್ನಡ ರಾಜ್ಯೋತ್ಸವ ದ ಸಂಪೂರ್ಣ ಇತಿಹಾಸ

Posted by Vidyamaana on 2023-11-01 07:46:21 |

Share: | | | | |


ಮೈಸೂರು ರಾಜ್ಯ ಕರ್ನಾಟಕ ವಾದದ್ದು ಹೇಗೆ ? ಇಲ್ಲಿದೆ ಕನ್ನಡ ರಾಜ್ಯೋತ್ಸವ ದ ಸಂಪೂರ್ಣ ಇತಿಹಾಸ

ಬೆಂಗಳೂರು : ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956 ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.ರಾ ಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಇತಿಹಾಸ:

ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.ಕನ್ನಡ ಧ್ವಜ


1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.


ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು “ಮೈಸೂರು” ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ 1, 1973 ರಂದು “ಕರ್ನಾಟಕ” ಎಂದು ಬದಲಾಯಿತು.ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ (“ಜಯ ಭಾರತ ಜನನಿಯ ತನುಜಾತೆ”)ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.


ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ.


ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.

ಕನ್ನಡಾಂಬೆಗೆ ನುಡಿ ನಮನ:

ಕರ್ನಾಟಕಕ್ಕೆ 50 ರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷವಾಗಿ ಈ ನಾಡಿನ ಹೆಸರಾಂತ 05 ಕವಿಗಳು ರಚಿಸಿರುವ ಗೀತೆಗಳನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.ಇದರನ್ವಯ ಹುಯಿಲಗೋಳ ನಾರಾಯಣರಾಯರು ರಚಿಸಿರುವ "ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು", ಕುವೆಂಪು ರಚಿತ "ಎಲ್ಲಾದರು ಇರು ಎಂತಾದರು ಇರು", ದ.ರಾ.ಬೇಂದ್ರ ರಚಿಸಿರುವ "ಒಂದೇ ಒಂದೇ ಕರ್ನಾಟಕ ಒಂದೇ", ಸಿದ್ದಯ್ಯ ಪುರಾಣಿಕರು ರಚಿಸಿರುವ "ಹೊತ್ತಿತೋ ಹೊತ್ತಿತು ಕನ್ನಡದ ದೀಪ", ಹಾಗೂ ಚನ್ನವೀರ ಕಣವಿ ಅವರು ಬರೆದಿರುವ "ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ" ಎಂಬ 05 ಗೀತೆಗಳನ್ನು ಕಡ್ಡಾಯವಾಗಿ ಹಾಡುವಂತೆ ಸೂಚನೆ ನೀಡಲಾಗಿದೆ.

ಆಸಿಡ್ ದಾಳಿ ನಡೆದ ಕಡಬ ಕಾಲೇಜಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ

Posted by Vidyamaana on 2024-03-07 16:53:27 |

Share: | | | | |


ಆಸಿಡ್ ದಾಳಿ ನಡೆದ ಕಡಬ ಕಾಲೇಜಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ

ಪುತ್ತೂರು: ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯಿಂದ ಆಸಿಡ್ ದಾಳಿ ನಡೆದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಗುರುವಾರ ಮಧ್ಯಾಹ್ನ ಭೇಟಿ ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಕಾರಣ ಮಧ್ಯಾಹ್ನ ಪರೀಕ್ಷೆ  ಮುಗಿದ ಬಳಿಕ ಕಾಲೇಜಿಗೆ ಭೇಟಿ ನೀಡಿದ ಶಕುಂತಳಾ ಶೆಟ್ಟಿ, ವಿದ್ಯಾರ್ಥಿನಿಯರ ಜತೆ ಸಮಾಲೋಚನೆ ನಡೆಸಿದರು. ಆಸಿಡ್ ದಾಳಿಯ ದಿನ ನಡೆದ ಘಟನಾವಳಿಗಳ ಬಗ್ಗೆ ವಿದ್ಯಾರ್ಥಿನಿಯರು ಮಾಜಿ ಶಾಸಕಿಯವರಿಗೆ ವಿವರಿಸಿದರು. ಸರಕಾರ ಮತ್ತು ಇಡೀ ಆಡಳಿತ ವ್ಯವಸ್ಥೆ ನಿಮ್ಮ ಜತೆಗಿದೆ. ನೀವು ಯಾವುದೇ ಕಾರಣಕ್ಕೆ ದೃತಿಗೆಡಬೇಡಿ. ಆರೋಪಿಗೆ ಕಠಿಣ ಶಿಕ್ಷೆಯಾಗಲಿದೆ. ಸರಕಾರಿ ಕಾಲೇಜಿನಲ್ಲಿ ಭದ್ರತೆಯಿಲ್ಲ ಎಂಬ ಭಾವನೆ ಬೇಡ. ಎಲ್ಲ ರೀತಿಯ ಸುರಕ್ಷತೆ ಒದಗಿಸಲಾಗುವುದು. ಆದರೂ ಕೆಲವೊಂದು ವಿಚಾರಗಳಲ್ಲಿ ವಿದ್ಯಾರ್ಥಿನಿಯರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದವರು ಹೇಳಿದರು. ಆಸಿಡ್ ಎರಚಿದ ದುಷ್ಕರ್ಮಿಯನ್ನು ತಕ್ಷಣ ಹಿಡಿದು ತಪ್ಪಿಸಿಕೊಳ್ಳದಂತೆ ನೋಡಿಕೊಂಡ ಕಾಲೇಜಿನ ವಿದ್ಯಾರ್ಥಿಗಳ ಸಾಹಸವನ್ನು  ಅವರು ಕೊಂಡಾಡಿದರು.

ಬೇಡಿಕೆ ಸಲ್ಲಿಕೆ

ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ೧೭೦ ವಿದ್ಯಾರ್ಥಿನಿಯರಿದ್ದಾರೆ. ಇಷ್ಟ ಹೆಣ್ಮಕ್ಕಳಿಗೆ ಕೇವಲ ಒಂದು ಶೌಚಾಲಯವಿರುವುದರಿಂದ ಬಹಳಷ್ಟು ಸಮಸ್ಯೆಯಾಗುತ್ತಿದೆ. ಹೆಚ್ಚುವರಿ ಶೌಚಾಲಯದ ವ್ಯವಸ್ಥೆ ಮಾಡಿಕೊಡಬೇಕೆಂದು ವಿದ್ಯಾರ್ಥಿನಿಯರು ಮನವಿ ಮಾಡಿದರು. ಈ ಬಗ್ಗೆ ಸರಕಾರದ ಗಮನ ಸೆಳೆದು ವ್ಯವಸ್ಥೆ ಮಾಡುವುದಾಗಿ ಶಕುಂತಳಾ ಶೆಟ್ಟಿ ಭರವಸೆ ನೀಡಿದರು. ಕಾಲೇಜಿನ ಆವರಣಗೋಡೆ ಇಲ್ಲದಿರುವ ಬಗ್ಗೆಯೂ ವಿದ್ಯಾರ್ಥಿಗಳು ಗಮನ ಸೆಳೆದರು.

ಮೇ.08 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ

Posted by Vidyamaana on 2023-05-07 10:12:49 |

Share: | | | | |


ಮೇ.08 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು: ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಮೇ.08ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆ ನೀಡಿದೆ. ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.



Leave a Comment: