ತಾಂತ್ರಿಕ ದೋಷ: ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್

ಸುದ್ದಿಗಳು News

Posted by vidyamaana on 2024-06-29 11:21:28 |

Share: | | | | |


ತಾಂತ್ರಿಕ ದೋಷ: ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್

ವಾಷಿಂಗ್ಟನ್: ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಬಚ್‌ ವಿಲ್ಮೋರ್ ಅವರು ಇನ್ನು ಕೆಲ ದಿನಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿಯಲಿದ್ದಾರೆ ಎಂದು ನಾಸಾ ತಿಳಿಸಿದೆ.ಜೂನ್ 5ರಂದು ಸುನಿತಾ ಮತ್ತು ವಿಲ್ಮೋರ್‌ ಅವರಿದ್ದ ಸ್ಟಾರ್‌ಲೈನರ್‌ ನೌಕೆಯನ್ನು ಫ್ಲಾರಿಡಾದ ಕೇಪ್‌ ಕ್ಯಾನವೆರಲ್‌ ಸ್ಪೇಸ್‌ ಫೋರ್ಸ್‌ ಕೇಂದ್ರದಿಂದ ಉಡಾವಣೆ ಮಾಡಲಾಗಿತ್ತು.

ಜೂನ್ 6ರ ಮಧ್ಯಾಹ್ನ 1.34ಕ್ಕೆ ಗಗನನೌಕೆಯನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಡಾಕ್‌ (ಕೂಡಿಕೊಳ್ಳುವ ಪ್ರಕ್ರಿಯೆ) ಮಾಡಲಾಗಿತ್ತು. 

ತಾಂತ್ರಿಕ ದೋಷಕ್ಕೆ ಕಾರಣಗಳೇನು ಎಂಬ ಬಗ್ಗೆ ಪರೀಕ್ಷೆಗಳು ನಡೆಯುತ್ತಿದ್ದು, ಗಗನಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ನಾಸಾ ತಿಳಿಸಿದೆ. ಆದರೆ, ಗಗನಯಾತ್ರಿಗಳು ಯಾವಾಗ ಭೂಮಿಗೆ ಹಿಂದಿರುಗಲಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

ನಾವು ಭೂಮಿಗೆ ಹಿಂದಿರುಗುವ ಕುರಿತಂತೆ ಆತುರಪಡುತ್ತಿಲ್ಲ ಎಂದು ನಾಸಾದ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮದ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ಹೇಳಿದರು.

ಡಾಕಿಂಗ್ ಮಾಡುವ ವೇಳೆ ಥ್ರಸ್ಟರ್‌ನಲ್ಲಿ(ಪ್ಯೊಪಲ್ಷನ್‌ ಮಾಡ್ಯೂಲ್‌ಗೆ ಅಗತ್ಯ ನೂಕುಬಲ ನೀಡಲು ಅಳವಡಿಸಲಾಗಿರುವ ಯಂತ್ರ) ತೊಂದರೆ ಕಾಣಿಸಿಕೊಂಡಿದೆ. ಅಲ್ಲದೇ ಉಡಾವಣೆ ವೇಳೆ ಹೀಲಿಯಂ ಸೋರಿಕೆಯೂ ಆಗಿದೆ. ಇವೆರಡರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಡಾಕಿಂಗ್ ಸಮಯದಲ್ಲಿ ಸಂಭವಿಸಿದ ಪರಿಸ್ಥಿತಿಯ ಬಗ್ಗೆ ತಿಳಿಯಲು ನ್ಯೂ ಮೆಕ್ಸಿಕೋ ಮರುಭೂಮಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಬಚ್‌ ಮತ್ತು ಸುನಿತಾ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿಲ್ಲ ಎಂದು ಸ್ವಿಚ್ ತಿಳಿಸಿದರು.

 Share: | | | | |


ಮುಂಗಾರಿನ ಸಂಭ್ರಮಕ್ಕೆ ಮುಳಿಯ ಬಂಗಾರ ದ ಶೃಂಗಾರ

Posted by Vidyamaana on 2023-07-25 11:42:05 |

Share: | | | | |


ಮುಂಗಾರಿನ ಸಂಭ್ರಮಕ್ಕೆ ಮುಳಿಯ ಬಂಗಾರ ದ ಶೃಂಗಾರ

ಪುತ್ತೂರು: ಪಾರಂಪರಿಕ ಹಾಗೂ ಆಧುನಿಕ ಶೈಲಿಯ ಚಿನ್ನಾಭರಣಗಳಿಗೆ ಹೆಸರುವಾಸಿಯಾಗಿರುವ ಜಿಲ್ಲೆಯ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್, ಪ್ರತಿ ಬಾರಿಯೂ ವಿಶೇಷ ಆಫರ್ ಗಳೊಂದಿಗೆ ಗ್ರಾಹಕರ ಮುಂದೆ ಬರುತ್ತಿದೆ.

ಈ ಬಾರಿಯ ಮುಂಗಾರಿಗೆ ಸಿಂಚನ ನೀಡುವಂತೆ ಮುಳಿಯ ಮಾನ್ಸೂನ್ ಧಮಾಕವನ್ನು ಗ್ರಾಹಕರ ಮುಂದಿರಿಸಿದೆ. ಸೋಮವಾರದಿಂದ ಅಂದರೆ ಜುಲೈ 24ರಿಂದ ಮುಳಿಯ ಮಾನ್ಸೂನ್ ಧಮಾಕ ಆರಂಭಗೊಂಡಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ.

ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸುವ ಉದ್ದೇಶದಿಂದಲೇ ಗ್ರಾಹಕರಿಗೆ ಹೊಸತನದ ಟಚ್ ನೀಡಲು ಮುಳಿಯ ವಿಶೇಷ ಆಫರ್ ಗಳನ್ನು ಗ್ರಾಹಕರ ಮುಂದಿರಿಸಿದೆ. ಮುಳಿಯದ ಪುತ್ತೂರು ಹಾಗೂ ಬೆಳ್ತಂಗಡಿಯ ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಗ್ರಾಹಕರು, ತಮ್ಮ ಹಳೆಯ ಚಿನ್ನಾಭರಣವನ್ನು ಹೊಸ 916 ಆಭರಣಗಳೊಂದಿಗೆ ವಿನಿಮಯ ಮಾಡಿ ಪ್ರತಿ ಗ್ರಾಂ ಮೇಲೆ 100 ರೂ. ಅಧಿಕ ಲಾಭ ಪಡೆಯಬಹುದು.

ವಿಎ ಚಾರ್ಜಸ್ ಮೇಲೆ ಶೇ. 50ರಷ್ಟು ಹಾಗೂ ವಜ್ರದ ಮೌಲ್ಯದ ಮೇಲೆ ಶೇ. 10ರವರೆಗೆ ಕಡಿತ ಕಡಿತ ನೀಡಲಾಗಿದೆ. ಬೆಳ್ಳಿ ಆಭರಣಗಳ ಮೇಲೆಯೂ ಶೇ. 5ರವರೆಗೆ ರಿಯಾಯಿತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿಗೆ ಮುಳಿಯ ಜ್ಯುವೆಲ್ಸಿನ ಕೋರ್ಟ್ ರೋಡಿನಲ್ಲಿರುವ ಪುತ್ತೂರು ಶಾಖೆ : 9379202916, ಬೆಳ್ತಂಗಡಿ ಮುಖ್ಯರಸ್ತೆಯ ಮಳಿಗೆ: 9343004916ನ್ನು ಸಂಪರ್ಕಿಸಬಹುದು.

ಗ್ರಾಮಾಂತರಗಳಲ್ಲಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-05-07 06:23:54 |

Share: | | | | |


ಗ್ರಾಮಾಂತರಗಳಲ್ಲಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಕಳೆದ‌ ಮೂರು ದಿನಗಳಿಂದ ಕ್ಷೇತ್ರದಾದ್ಯಂತ ಕಾಲೊನಿಗಳಿಗೆ ಕಾಲ್ನಡಿಗೆ‌ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಭಾನುವಾರದಂದು ನಿಡ್ಪಳ್ಳಿ, ಇರ್ದೆ,ಪಾಣಾಜೆ,ಕೊಳ್ತಿಗೆ,ಕೆಯ್ಯೂರು ಗ್ರಾಮಗಳ‌ ದಲಿತ ಕಾಲೊನಿಗಳಿಗೆ ಭೇಟಿ ನೀಡಿದರು

ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆ ಉದ್ಘಾಟನೆ – ಗಣ್ಯರ ಶುಭ ಹಾರೈಕೆ

Posted by Vidyamaana on 2023-10-02 07:44:52 |

Share: | | | | |


ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆ ಉದ್ಘಾಟನೆ – ಗಣ್ಯರ ಶುಭ ಹಾರೈಕೆ

ಸುಳ್ಯ: ಸಮಾಜಕ್ಕೆ ಬೇಕಾದ ಶೈಕ್ಷಣಿಕ ಅವಶ್ಯಕತೆಗಳನ್ನು ಪೂರೈಸುತ್ತಿರುವ ವಿದ್ಯಾಮಾತ ಅಕಾಡೆಮಿ, ಅವಿಭಜಿತ ಜಿಲ್ಲಾಕೇಂದ್ರಗಳಾದ ಮಂಗಳೂರು, ಉಡುಪಿ, ಕುಂದಾಪುರದಲ್ಲೂ ಆರಂಭವಾಗಲಿ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಶುಭಹಾರೈಸಿದರು.

ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಮೂಲಕ ಮನೆ ಮಾತಾಗಿರುವ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಸುಳ್ಯ ರಥಬೀದಿಯ ಟಿಎಪಿಸಿಎಂಎಸ್ ಕಟ್ಟಡದಲ್ಲಿ ಗುರುವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಾದ ಐಎಎಸ್, ಐಪಿಎಸ್ ಮೂಲಕ ನಮ್ಮ ಊರಿನ ಯುವಕರು, ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎನ್ನುವ ಆಶಯದೊಂದಿಗೆ ವಿದ್ಯಾಮಾತಾದ ಭಾಗ್ಯೇಶ್ ರೈ ಕೆಲಸ ನಿರ್ವಹಿಸುತ್ತಿದ್ದಾರೆ. ಶೈಕ್ಷಣಿಕ ಕ್ಷೇತ್ರದ ಅವರ ಎಲ್ಲಾ ಆಶಯಗಳು ಈಡೇರಲಿ ಎಂದು ಹಾರೈಸಿದರು.


ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಪುತ್ತೂರಿನಲ್ಲಿ ಯಶಸ್ವಿ ಸಾಧನೆ ಮಾಡಿ .ಇದೀಗ ಸುಳ್ಯದಲ್ಲಿ ಶಾಖೆಯೊಂದು ಆರಂಭಗೊಂಡಿದೆ ಸಂತಸ. ಸುಳ್ಯ ಶಿಕ್ಷಣ ಕ್ಷೇತ್ರದಲ್ಲಿ ಪುತ್ತೂರಿಗಿಂತಲೂ ಎತ್ತರ ಏರಿದೆ. ಆರ್ಥಿಕ ಸಮಸ್ಯೆಯಿರುವಂತಹ ವಿದ್ಯಾರ್ಥಿಗಳಿಗೂ ಅಕಾಡೆಮಿ ತರಬೇತಿ ನೀಡೋ ಕಾರ್ಯ ಮಾಡುವಲ್ಲಿ ಸೈ ಎನಿಸಿದ್ದು ಮಂಗಳೂರಿನಲ್ಲಿ ಕೂಡ ಶಾಖೆ ಶೀಘ್ರದಲ್ಲೇ ಉದ್ಘಾಟನೆಯಾಗಲಿಯೆಂದು ಹೇಳಿದರು.


ಸುಳ್ಯದ ಟಿ.ಎ.ಪಿ.ಸಿ.ಎಂ.ಎಸ್‌. ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮಾತನಾಡಿ, ಈ ಕಟ್ಟಡದಲ್ಲಿ ಒಳ್ಳೆಯ ತರಬೇತಿ ಕೇಂದ್ರ ಆರಂಭವಾಗಬೇಕುನ್ನುವ ಆಕಾಂಕ್ಷೆಯಿತ್ತು, ಅದು ಈಗ ಭಾಗ್ಯಶ್ ರೈ ಮೂಲಕ ಪೂರ್ಣ ವಾಗಿದೆ. ಐ.ಎ.ಎಸ್,ಕೆ.ಎ.ಎಸ್ ತರಬೇತಿ ಕೇಂದ್ರವೇ ಇಲ್ಲದಿರುವ ಸುಳ್ಯಕ್ಕೆ ಅತ್ಯುತ್ತಮ ಭಾಗ್ಯ ಒದಗಿಬಂದಿದೆ.ಅಕಾಡೆಮಿ ಯೋಜನೆ ಯೋಚನೆ ಹಾಗೂ ವ್ಯವಸ್ಥೆಯಿಂದ ಯಶಸ್ಸು ಸಾಧ್ಯವಾಗಲಿಯೆಂದು ಹೇಳಿದರು.


ವಿದ್ಯಾರ್ಥಿಗಳಿಗೆ, ಸಾಧಕರಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಸನ್ಮಾನ

ಭಾರತೀಯ ಸೇನೆಗೆ ಆಯ್ಕೆಗೊಂಡಿರುವ 2 ಜಿಲ್ಲೆಯ 6 ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದ ಸಾಧಕರೂ ಹಾಗೂ ಅಕಾಡೆಮಿಯ ಸಿಬ್ಬಂದಿ ವರ್ಗಕ್ಕೆ ಅತಿಥಿಗಳ ಮುಖೇನ ಸನ್ಮಾನ ಕಾರ್ಯಕ್ರಮ ನಡೆಯಿತು

ಭಾಗ್ಯಶ್ ರೈಯವರ ತಂದೆ-ತಾಯಿ ಎ.ಕೆ.ತಿಮ್ಮಪ್ಪ ರೈ  ಪುತ್ರಿ ದೇವಿದ್ಯಾ ರೈ,ಕೊಳ್ತಿಗೆ ಕೆಳಗಿನ ಮನೆ ಮತ್ತು ರತ್ನಾವತಿ ಟಿ.ರೈ, ಮಾಜಿ ವಿಧಾನ ಪರಿಷತ್‌ ಸದಸ್ಯ ಅಣ್ಣಾ ವಿನಯಚಂದ್ರ, ಪಿ.ಸಿ.ಜಯರಾಮ್, ಜಯಪ್ರಕಾಶ್ ರೈ, ಪ್ರೊ| ಬಾಲಚಂದ್ರ ಗೌಡ, ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಮಾಜಿ ನಗರ ಕಾಂಗ್ರೆಸ್‌ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್, ಗಣೇಶ್ ಶೆಟ್ಟಿ, ಲಯನ್ಸ್ ಪುತ್ತೂರ್ದ ಮುತ್ತು ಅಧ್ಯಕ್ಷ ರವೀಂದ್ರ ಪೈ, ರವಿಪ್ರಸಾದ್ ಶೆಟ್ಟಿ, ಶ್ರೀಪ್ರಸಾದ್ ಪಾಣಾಜೆ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್‌.ಬಿ.ಜಯರಾಮ್ ರೈ, ಪಿ.ಎಸ್.ಗಂಗಾಧರ್, ಭಾಗ್ಯಶ್ ರೈ ಸಹೋದರ ಯೋಗೀಶ್ ರೈ ಮತ್ತು ಚಿಕ್ಕಪ್ಪ ಎ.ಕೆ.ಜಯರಾಮ ರೈ, ಅತ್ತೆ-ಮಾವ ಸಂಕಪ್ಪ ಶೆಟ್ಟಿ ಹಾಗೂ ಪ್ರೇಮಾ ಎಸ್ ಶೆಟ್ಟಿ, ಟಿಎಪಿಸಿಎಂಎಸ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ ದೇರಪ್ಪಜ್ಜನಮನೆ, ಅರವಿಂದ ಚೊಕ್ಕಾಡಿ, ಡಾ| ಪೂವಪ್ಪ ಕಣಿಯೂರು, ವಿನಯ ಕಂದಡ್ಕ, ಪಿ.ಬಿ.ಸುಧಾಕರ ರೈ,ಸುಭಾಶ್ಚಂದ್ರ ರೈ ಸಾರ್ಯ, ಹರಿನಾಥ ರೈ ಕೂಡೇಲು, ವಿದ್ಯಾಮಾತಾ ಅಕಾಡೆಮಿ ಇದರ ಬೋಧಕ ಹಾಗೂ ಬೋಧಕೇತರ ವೃಂದ, ವಿದ್ಯಾರ್ಥಿಗಳ ಸಹಿತ ಹಲವರು ಹಾಜರಿದ್ದರು. ಭಾಗ್ಯಶ್ ರೈ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ನಿರೂಪಿಸಿ, ಅಕಾಡೆಮಿಯ ಸಂಚಾಲಕಿ ರಮ್ಯಾ ಭಾಗೇಶ್ ರೈ ವಂದಿಸಿದರು.ಕಾರ್ಯಕ್ರಮದ ನಡುವೆ ಪುತ್ತೂರಿನ ವಿಶ್ವ ಕಲಾ ನಿಕೇತನ ತಂಡದಿಂದ ನೃತ್ಯ ಕಾರ್ಯಕ್ರಮ ನೆರವೇರಿತು. ಇದಕ್ಕೂ ಮೊದಲು ವೇದಿಕೆ ಮುಂಭಾಗದ ನಟರಾಜ ಮೂರ್ತಿಗೆ ಗೌರವ ಅರ್ಪಣೆ ನೆರವೇರಿತು. ಸಂಜೆ ದುರ್ಗಾ ನಮಸ್ಕಾರವೂ ನಡೆಯಿತು.

ವಿದ್ಯಾಮಾತಾ ಅಕಾಡೆಮಿ:

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯು ಕಳೆದ 5 ವರ್ಷಗಳಲ್ಲಿ 4000 ಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗುವ ಅವಕಾಶವನ್ನು ಮಾಡಿಕೊಟ್ಟಿದೆ. ಪುತ್ತೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಂಸ್ಥೆ ಇದೀಗ ಸುಳ್ಯದಲ್ಲಿ ಶಾಖೆಯನ್ನು ತೆರೆದಿದೆ.

ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಅವರು 2017ರಲ್ಲಿ ಪುತ್ತೂರಿನಲ್ಲಿ ವಿದ್ಯಾಮಾತಾ ಫೌಂಡೇಶನ್ 2017ನ್ನು ಹುಟ್ಟು ಹಾಕಿದರು. 2020ರಲ್ಲಿ ವಿದ್ಯಾಮಾತಾ ಅಕಾಡಮಿ ಸ್ಥಾಪಿಸಿ ಸರ್ಕಾರದ ಮಾನ್ಯತೆ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಆರಂಭಿಸಿದರು.ಕಳೆದ ಎರಡು ವರ್ಷಗಳಲ್ಲಿ 90 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸರ್ಕಾರಿ ಸೇವೆಗೆ ಸೇರುವಂತೆ ತರಬೇತು ಮಾಡಿದ್ದಾರೆ. ಸುಮಾರು 4000 ಕ್ಕೂ ಅಧಿಕ ಮಂದಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಲಭ್ಯವಾಗುವಂತೆ ಅವಕಾಶ ಕಲ್ಪಿಸಿದ್ದಾರೆ. ಸುಳ್ಯ ತಾಲೂಕಿನಲ್ಲಿ ಇದೀಗ ಶಾಖೆ ಆರಂಭಿಸಿದ್ದಾರೆ. ಎಲ್ಲಾ ವೃತ್ತಿಪರ ಕೋರ್ಸ್ ಗಳ ಅರ್ಜಿ,ಉದ್ಯೋಗ ಮಾಹಿತಿ,ತರಬೇತಿ, ಎಲ್ಲಾ ಶ್ರೇಣಿಯ ಉದ್ಯೋಗಗಳಿಗೆ ತರಬೇತಿ ಈ ಸಂಸ್ಥೆಯಲ್ಲಿ ಸಿಗುತ್ತದೆ.

ಜೆರೋಸಾ ಶಾಲಾ ವಿವಾದ ಬೆನ್ನಲ್ಲೇ ದ.ಕ. ಡಿಡಿಪಿಐ ದಯಾನಂದ ನಾಯ್ಕ ದಿಢೀರ್‌ ವರ್ಗಾವಣೆ

Posted by Vidyamaana on 2024-02-14 20:59:58 |

Share: | | | | |


ಜೆರೋಸಾ ಶಾಲಾ ವಿವಾದ ಬೆನ್ನಲ್ಲೇ ದ.ಕ. ಡಿಡಿಪಿಐ ದಯಾನಂದ ನಾಯ್ಕ ದಿಢೀರ್‌ ವರ್ಗಾವಣೆ

ಮಂಗಳೂರು : ಮಂಗಳೂರು  ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್‌ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ ಶಾಲೆಯ ವಿವಾದದ ನಿರ್ವಹಣೆಯಲ್ಲಿ ವಿಫಲರಾಗಿರುವ ಕುರಿತು ಹಾಗೂ ಡಿಡಿಪಿಐ ವರ್ತನೆ ಬಗ್ಗೆ ಕಾಂಗ್ರೆಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು. ಮಂಗಳವಾರ ಶಾಲೆಗೆ ಭೇಟಿ ನೀಡಿದ್ದ ಮಾಜಿ ಸಚಿವ ರಮಾನಾಥ ರೈ, ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಸರಿಪಡಿಸಬೇಕಿತ್ತು. ಆದರೆ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಹಿಂದುಳಿದಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್‌.ಲೋಬೊ ಕೂಡ ಅಧಿಕಾರಿಗಳ ವರ್ತನೆಯನ್ನು ಖಂಡಿಸಿದ್ದರು. ಇದರ ಬೆನ್ನಲ್ಲೇ ಡಿಡಿಪಿಐ ದಯಾನಂದ ನಾಯ್ಕ ಅವರನ್ನು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರವಾಚಕರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.

ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ಉಪನಿರ್ದೇಶಕ (ಯೋಜನೆ)ರಾಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ದಕ್ಷಿಣ ಕನ್ನಡ ಡಿಡಿಪಿಐ ಆಗಿ ನೇಮಕ ಮಾಡಲಾಗಿದೆ

BREAKING : ಮಾ.31ರ ಭಾನುವಾರವೂ ಬ್ಯಾಂಕುಗಳು ತೆರೆದಿರುತ್ವೆ : RBI ಮಹತ್ವದ ನಿರ್ಧಾರ

Posted by Vidyamaana on 2024-03-20 20:32:07 |

Share: | | | | |


BREAKING : ಮಾ.31ರ ಭಾನುವಾರವೂ ಬ್ಯಾಂಕುಗಳು ತೆರೆದಿರುತ್ವೆ : RBI ಮಹತ್ವದ ನಿರ್ಧಾರ

ನವದೆಹಲಿ : ಮಾರ್ಚ್ 31ರ ಭಾನುವಾರದಂದು ಬ್ಯಾಂಕ್ನ್ನ ತೆರೆದಿಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿರ್ಧರಿಸಿದೆ.ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ವೀಟ್ ಮೂಲಕ ಆರ್ಬಿಐ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ. ಮಾರ್ಚ್ 31, 2024 ಭಾನುವಾರವಾಗಿದ್ದರೂ, ಎಲ್ಲಾ ಬ್ಯಾಂಕುಗಳು ತೆರೆದಿರುತ್ತವೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ.ಪ್ರಸಕ್ತ ಹಣಕಾಸು ವರ್ಷದ 2023-24ರ ಕೊನೆಯ ದಿನವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಎಲ್ಲಾ ಆದಾಯ ತೆರಿಗೆ ಕಚೇರಿಗಳು ತೆರೆದಿರುತ್ತವೆ.!

ಈ ಹಿಂದೆ, ಆದಾಯ ತೆರಿಗೆ ಇಲಾಖೆ ತನ್ನ ಎಲ್ಲಾ ಕಚೇರಿಗಳನ್ನ ತೆರೆದಿಡಲು ನಿರ್ಧರಿಸಿತ್ತು. ಗುಡ್ ಫ್ರೈಡೆ ರಜೆ ಸೇರಿದಂತೆ ಶನಿವಾರ ಮತ್ತು ಭಾನುವಾರ ರಜಾದಿನಗಳನ್ನ ಇಲಾಖೆ ರದ್ದುಗೊಳಿಸಿತ್ತು

ಫಿಲೋಮಿನಾ ಪಿಯು ವಿದ್ಯಾರ್ಥಿಗಳಿಂದ ಚಾರಣ ಸಂದರ್ಶನ

Posted by Vidyamaana on 2023-07-03 14:31:22 |

Share: | | | | |


ಫಿಲೋಮಿನಾ ಪಿಯು ವಿದ್ಯಾರ್ಥಿಗಳಿಂದ ಚಾರಣ ಸಂದರ್ಶನ

ಪುತ್ತೂರು: ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಸಂಘ ರೋವರ್ಸ್ ಮತ್ತು ರೇಂಜರ್ಸ್ ಆಶ್ರಯದಲ್ಲಿ  ಇತ್ತೀಚೆಗೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಚಾರಣ ನಡೆಸಲಾಯಿತು. 

ಇದೇ ಸಂದರ್ಭ ಪಾಣಾಜೆ ಕಿಲಂಪಾಡಿ ಪ್ರದೇಶದ ದೈವನರ್ತಕರ ಬಳಿ ದೈವಾರಾಧನೆಯ ಕುರಿತಾಗಿ ಮಾಹಿತಿಯನ್ನು ಪಡೆದುಕೊಂಡರು. ಆರ್ಲಪದವಿನ ಜಾಂಬ್ರಿ ಬೆಟ್ಟ ಪ್ರದೇಶಕ್ಕೆ ವಿದ್ಯಾರ್ಥಿಗಳು ಚಾರಣವನ್ನು ನಡೆಸಿದರು. ಸುಮಾರು 35 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

ಕಾಲೇಜಿನ ಉಪನ್ಯಾಸಕರಾದ ಸುರೇಶ್ ಕುಮಾರ್, ಸಂದೇಶ್ ಲೋಬೊ, ಶರತ್ ಆಳ್ವ ಸಹಕರಿಸಿದರು.



Leave a Comment: