ಭೀಕರ ರಸ್ತೆ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13ಕ್ಕೆ ಏರಿಕೆ,ಇಬ್ಬರ ಸ್ಥಿತಿ ಗಂಭೀರ

ಸುದ್ದಿಗಳು News

Posted by vidyamaana on 2024-06-28 19:01:49 |

Share: | | | | |


ಭೀಕರ ರಸ್ತೆ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13ಕ್ಕೆ ಏರಿಕೆ,ಇಬ್ಬರ ಸ್ಥಿತಿ ಗಂಭೀರ

ಹಾವೇರಿ : ಇಂದು ಬೆಳ್ಳಂಬೆಳಗ್ಗೆ ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನರು ಸಾವನಪ್ಪಿದು ಇದೀಗ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಹಾವೇರಿಯ ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಇಬ್ಬರು ಪುರುಷರು ಸೇರಿದಂತೆ 9 ಮಹಿಳೆಯರು ಸಾವನಪ್ಪಿದ್ದಾರೆ.

ಹೌದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಪಡೆದು ವಾಪಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13 ಜನ ಸಾವನ್ನಪಪ್ಪಿದ್ದಾರೆ ಎಂದು ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ.ಮೃತರು ಶಿವಮೊಗ್ಗ ಜಿಲ್ಲೆಯ ಮೂಲದವರು ಎಂದು ತಿಳಿದು ಬಂದಿದೆ. ಪರಶುರಾಮ, ಭಾಗ್ಯ, ನಾಗೇಶ್, ವಿಶಾಲಾಕ್ಷಿ,ಅರ್ಪಿತ,ಸುಭದ್ರ, ಬಾಯಿ, ಪುಣ್ಯ, ಮಂಜುಳಾಬಾಯಿ, ಆದರ್ಶ, ಮಾನಸ, ಅಪರೂಪ, ಮಂಜುಳಾ ಮೃತಪಟ್ಟವರ ಎಂದು ಗುರುತಿಸಲಾಗಿದೆ.

ಟಿಟಿಯಲ್ಲಿ ಸುಮಾರು 16 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಇದೀಗ 13 ಜನರು ಸಾವನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಂತವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾಸ್ಥಳಕ್ಕೆ ಬ್ಯಾಡಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 Share: | | | | |


ಅಡಿಕೆ ರಬ್ಬರ್‌ಗೆ ಹಳದಿ ಚುಕ್ಕೆ ರೋಗ

Posted by Vidyamaana on 2023-07-18 12:31:41 |

Share: | | | | |


ಅಡಿಕೆ ರಬ್ಬರ್‌ಗೆ ಹಳದಿ ಚುಕ್ಕೆ ರೋಗ

ಪುತ್ತೂರು: ದ ಕ ಜಿಲ್ಲೆಯಲ್ಲಿ ಅಡಿಕೆಗೆ ಮತ್ತು ರಬ್ಬರ್‌ಗೆ ಎಲೆ ಚುಕ್ಕಿ ರೋಗ ಬಂದಿದ್ದು ಇದು ಕೃಷಿಕರ ಆತಂಕಕ್ಕೆ ಕಾರಣವಾಗಿದ್ದು ಈ ರೋಗಕ್ಕೆ ಕಾರಣ ಏನೆಂಬುದನ್ನು ಪತ್ತೆ ಮಾಡಬೇಕು ಮತ್ತು ಕೃಷಿಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸರಕಾರವನ್ನು ಆಗ್ರಹಿಸಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಶಾಸಕರು ಮಳೆಗಾಲ ಆರಂಭದಲ್ಲೇ ಹಳದಿ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದರಿಂದ ಈ ರೋಗ ಎಲ್ಲಾ ಕಡೆಗಳಲ್ಲೂ ಹರಡುವ ಸಾಧ್ಯತೆ ಇದೆ. ಅಡಿಕೆಗೆ ಒಂದಲ್ಲ ಒಂದು ರೋಗ ಬರುತ್ತಲೇ ಇದ್ದು ಇದು ಕೃಷಿಕರ ಆತಂಕಕ್ಕೂ ಕಾರಣವಾಗಿದೆ. ಹಳದಿ ಎಲೆ ಚುಕ್ಕಿ ರೋಗದಿಂದ ಅಡಿಕೆ ಹಾಗೂ ರಬ್ಬರ್ ಗಿಡಗಳು ಸತ್ತು ಹೋದಲ್ಲಿ ಕೃಷಿಕರಿಗೆ ನಷ್ಟವಾಗಲಿದ್ದು ಇದಕ್ಕೆ ಸರಕಾರ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಮನವಿ ಮಾಡಿದರು. ವಿಟ್ಲದಲ್ಲಿರುವ ಸಿಪಿಸಿಆರ್‌ಐ ಎಂಬ ಸಂಸ್ಥೆ ಅಡಿಕೆ ವಿಚಾರದಲ್ಲಿ ಸಂಶೋಧನೆ ಮಾಡುವ ಕೇಂದ್ರ ಸರಕಾರದ ಒಂದು ಸಂಸ್ಥೆಯಾಗಿದ್ದು ಈ ಸಂಸ್ಥೆ ಅಡಿಕೆ ಕೃಷಿಕರ ಪರವಾಗಿ ಯಾವುದೇ ಕೆಲಸವನ್ನು ಮಾಡುತ್ತಿಲ್ಲ , ಅಡಿಕೆಗೆ ಬಂದಿರುವ ರೋಗದ ಕುರಿತು  ಸಂಶೋಧನೆ ಮಾಡಿ ಅದಕ್ಕೆ ಪರಿಹಾರ ಕಂಡುಕೊಳ್ಳುವಂತೆ ಸಂಸ್ಥೆಗೆ ಸೂಚನೆ ನೀಡಬೇಕು ಎಂದು ಶಾಸಕರು ಸರಕಾರದ ಗಮನಕ್ಕೆ ತಂದರು.

ಗಾಯಾಳು ಕೃಷಿಕರಿಗೆ ಮಾಶಾಸನ ಕೊಡಿ:

ದ ಕ ಜಿಲ್ಲೆಯಲ್ಲಿ ಸಾವಿರಾರು ಕೃಷಿಕರು ಅಡಿಕೆ ಮರ, ತೆಂಗಿನ ಮರ ಮತ್ತು ಮರಗಳಿಂದ ಬಿದ್ದು ಗಂಬೀರ ಸ್ವರೂಪದ ಗಾಯಗಳಾಗಿದೆ, ಚಿಕಿತ್ಸೆಗೂ ಸ್ಪಂದನೆ ನೀಡಲು ಸಾಧ್ಯವಾಗದೆ ಅಥವಾ ಚಿಕಿತ್ಸೆ ನೀಡಿದರೂ ಗುಣಮುಖರಾಗದೆ ಮಲಗಿದ್ದಲ್ಲೇ ಇದ್ದು ಅಂಥಹ ಕೃಷಿಕರಿಗೆ ಸರಕಾರ ತಿಂಗಳಿಗೆ ಕನಿಷ್ಟ 5೦೦೦ ಮಾಶಾಸನವನ್ನು ನೀಡಬೇಕು. ಮಲಗಿದ್ದಲ್ಲೇ ಇರುವ ಇಂಥಹ ಕೃಷಿಕರಿಗೆ ನಿತ್ಯ ಊಟಕ್ಕೆ, ಔಷಧಿ ಖರ್ಚಿಗೆ ಹಣವಿಲ್ಲದೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ ಇಂತವರು ರಾಜ್ಯದಲ್ಲಿ ಸುಮಾರು ೨೫ ಸಾವಿರಕ್ಕೂ ಮಿಕ್ಕಿ ಇರಬಹುದು ಅವರೆಲ್ಲರಿಗೂ ಮಾನವೀಯತೆ ನೆಲೆಯಲ್ಲಿ ಸರಕಾರ ಮಾಶಾಸನವನ್ನು ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಎಸ್ ಪಿ ಕಚೇರಿ ಸ್ಥಳಾಂತರ ಮಾಡಿ:

ಮಂಗಳೂರಿನಲ್ಲಿ ಕಾರ್ಯಚರಿಸುತ್ತಿರುವ ಜಿಲ್ಲಾ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡಬೇಕು. ಸ್ಥಳಾಂತರಕ್ಕಾಗಿ ಕೆಲವೊಂದು ಪ್ರಕ್ರಿಯೆಗಳು ಈಗಾಗಲೇ ನಡೆದಿದ್ದು ಅದನ್ನು ಮುಂದಿನ ಬಜೆಟ್‌ನೊಳಗೆ ಕಾರ್ಯರೂಪಕ್ಕೆ ತರಬೇಕು ಎಂದು ಶಾಸಕರು ಆಗ್ರಹಿಸಿದರು. ಮಂಗಳೂರಿನಲ್ಲಿ ಕಮಿಷನರೇಟ್ ವ್ಯಾಪ್ತಿ ಇರುವ ಕಾರಣ ಗ್ರಾಮಾಂತರ ಭಾಗವಾದ ಪುತ್ತೂರಿಗೆ ಎಸ್ ಪಿ ಕಚೇರಿಯನ್ನು ಶಿಫ್ಟ್ ಮಾಡಬೇಕಾದ ಅವಶ್ಯಕತೆ ಇದ್ದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಇದು ಸಹಕಾರಿಯಾಗಲಿದೆ ಎಂದು ಶಾಸಕರು ಸರಕಾರಕ್ಕೆ ಮನವಿ ಮಾಡಿದರು.


ಪುತ್ತೂರಿನಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆಯಿಲ್ಲದ ಕಾರಣ ಬಡವರಿಗೆ ತುಂಬಾ ತೊಂದರೆಯಾಗಿದೆ ಈ ಕಾರಣಕ್ಕೆ ಪುತ್ತೂರಿಗೆ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದ್ದು ಈಗಾಗಲೇ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವ ಕುರಿತು ಸರಕಾರದ ಹಂತದಲ್ಲಿ ಮಾತುಕತೆಗಳನ್ನು ನಡೆಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜಿಗೆ ಅನುದಾನವನ್ನು ಕಾಯ್ದಿರುಸುವಂತೆ ಸರಕಾರಕ್ಕೆ ಮನವಿ ಮಾಡಿದರು.

ದ ಕ ಜಿಲ್ಲೆಗೆ ಬಜೆಟ್‌ನಲ್ಲಿ ಏನೂ ಸಿಗುತ್ತಿಲ್ಲ


ಕಳೆದ ೧೫ ವರ್ಷಗಳಿಂದ ಬಜೆಟ್‌ನಲ್ಲಿ ದ ಕ ಜಿಲ್ಲೆಗೆ ಏನೂ ವಿಶೇಷ ಅನುದಾನಗಳು ಸಿಗುತ್ತಿಲ್ಲ. ಮಂಗಳಾ ಕಾರಿಡಾರ್ ಯೋಜನೆಯನ್ನು ಅನುಷ್ಠಾನಗೊಳಿಸಬೇಕಿದೆ. ಇದಕ್ಕೆ ೧೦೦೦ ಕೋಟಿ ಅನುದಾನ ಬೇಕಿದ್ದು ಪ್ರತೀ ವರ್ಷ ತಲಾ ೨೦೦ ಕೋಟಿಯಂತೆ ನೀಡಿದರೆ ಈ ಯೋಜನೆಯನ್ನು ಸಾಕಾರಗೊಳಿಸಬಹುದಾಗಿದೆ. ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ, ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಆಗಾಗಿ ದ ಕ ಜಿಲ್ಲೆಗೆ ವಿಶೇಷ ಒತ್ತು ನೀಡುವಂತೆ ಮನವಿ ಮಾಡಿದರು.

ಮಾತಾಡದೆ ಇಷ್ಟು ಕಾರುಬಾರು ಮಾಡುತ್ತೀರಿ

ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಎಂದು ಶಾಸಕರು ಸಭಾಧ್ಯಕ್ಷರಲ್ಲಿ ಹೇಳಿದಾದ “ ನೀವು ಮಾತನಾಡದೆ ಇಷ್ಟೊಂದು ಕಾರುಬಾರು ಮಾಡುತ್ತೀರಿ ಇನ್ನು ಮಾತಾಡಿದ್ರೆ ಏನು ಮಾಡಬಹುದು. ನಾವಿಬ್ಬರೂ ಒಂದೇ ಕಡೆಯಿಂದ ಬಂದವರು ನೀವಲ್ಲಿ ಕುಳಿತುಕೊಂಡಿದ್ದೀರಿ , ಉಳಿದವರು ಆ ಬದಿಯಲ್ಲಿ ವಿರೋಧ ಪಕ್ಷದಲ್ಲಿ ಕೂತಿದ್ದಾರೆ ಎಂದು ಶಾಸಕರು ಹೇಳಿದರು.

ಅಡಿಕೆಗೆ ವಿರೋಧ ಮಾಡಿದವರು ದ್ವನಿ ಸೇರಿಸ್ತಾ ಇದ್ದಾರೆ

ಕಳೆದ ಬಾರಿ ಬಿಜೆಪಿ ಅದಿಕಾರದಲ್ಲಿದ್ದಾಗ ಬಿಜೆಪಿಯವರು ಅಡಿಕೆಗೆ ವಿರೋಧ ಮಾಡುತ್ತಿದ್ದವರು ಈಗ ಅಡಿಕೆ ಬೆಳೆಗಾರರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮಾತಿನಲ್ಲೇ ಏಟು ನೀಡಿದ್ದಾರೆ. ನಾವು ವಿರೋಧ ಮಾಡಿಲ್ಲ ಯಾರು ವಿರೋಧ ಮಾಡಿದವರು ಎಂದು ಅರಗಜ್ಞಾನೇಂದ್ರ ಅವರು ಮರು ಪ್ರಶ್ನಿಸಿದಾಗ ನೀವು ಏನು ಮಾಡಿದ್ದೀರಿ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಶಾಸಕರು ಮರುತ್ತರ ನೀಡಿದರು.

ಮಂದಿನ ೨೫ ವರ್ಷ ಬಿಜೆಪಿಗೆ ವಿರೋಧ ಪಕ್ಷದ ಸ್ಥಾನ

ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಚುನಾವಣಾ ಸಮಯದಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿದಾಗ ನನಗೆ ಒಂದು ರಈತಿಯ ಭಯ ಇತ್ತು. ಗೆದ್ದ ಬಳಿಕವೂ ಈ ಭಯ ಇತ್ತು. ಈ ಯೋಜನೆಗಳನ್ನು ಹೇಗೆ ಸರಕಾರ ಕೊಡಬಹುದು ಎಂಬ ಆತಂಕವೂ ಇತ್ತು ಆದರೆ ಬಜೆಟ್‌ನಲ್ಲಿ ಇದಕ್ಕೆ ಅನುದಾನ ಇಟ್ಟ ಬಳಿಕ ನನಗೆ ಧೈರ್ಯ ಬಂತು. ಗ್ಯಾರಂಟಿ ಯೋಜನೆಯನ್ನು ರಾಜ್ಯದ ಜನತೆ ಸ್ವೀಕರಿಸಿದ್ದಾರೆ ಈ ಕಾರಣಕ್ಕೆ ಮುಂದಿನ ೨೫ ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುತ್ತದೆ ಬಿಜೆಪಿ ವಿರೋಧ ಪಕ್ಷದಲ್ಲೇ ಕೂರಬೇಕಾದ ಸ್ಥಿತಿ ಬರಲಿದೆ ಎಂದು ಶಾಸಕರು ಹೇಳಿದರು.

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ಉಸ್ತುವಾರಿ

Posted by Vidyamaana on 2023-06-09 08:52:56 |

Share: | | | | |


ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ಉಸ್ತುವಾರಿ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬ ದುರಂತ ಅಂತ್ಯ: 41 ಕೋಟಿ ರೂ.ಬಂಗಲೆಯಲ್ಲಿ ಮೂವರ ಶವ ಪತ್ತೆ!

Posted by Vidyamaana on 2023-12-30 22:25:45 |

Share: | | | | |


ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬ ದುರಂತ ಅಂತ್ಯ: 41 ಕೋಟಿ ರೂ.ಬಂಗಲೆಯಲ್ಲಿ ಮೂವರ ಶವ ಪತ್ತೆ!

ವಾಷಿಂಗ್ಟನ್​: ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ಮ್ಯಾಸಚೂಸೆಟ್ಸ್‌ನ ಡೋವರ್‌ನಲ್ಲಿರುವ ಅವರ ಬಂಗಲೆಯಲ್ಲಿ ದಂಪತಿ ಮತ್ತು 18 ವರ್ಷದ ಯುವತಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ರಾಕೇಶ್ ಕಮಲ್ (57), ಟೀನಾ (54) ಮತ್ತು ಅವರ ಪುತ್ರಿ ಅರಿಯಾನಾ (18) ಎಂದು ಗುರುತಿಸಲಾಗಿದೆ. ರಾಕೇಶ್ ಮೃತದೇಹದ ಬಳಿ ಬಂದೂಕು ಪತ್ತೆಯಾಗಿದ್ದು, ಅವರ ಸಾವಿನ ಹಿಂದೆ ಹಲವು ಅನುಮಾನಗಳಿವೆ.ರಾಕೇಶ್ ಕಮಲ್ ದಂಪತಿ ಅಮೆರಿಕದಲ್ಲಿ ಶ್ರೀಮಂತ ಕುಟುಂಬ. ಕಮಲ್ ತಮ್ಮ ಶಿಕ್ಷಣವನ್ನು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ, ಬೋಸ್ಟನ್ ವಿಶ್ವವಿದ್ಯಾಲಯ ಮತ್ತು ಎಂಐಟಿ ಸ್ಲೋನ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಪೂರ್ಣಗೊಳಿಸಿದರು. ಟೀನಾ ತನ್ನ ಶಿಕ್ಷಣವನ್ನು ಹಾರ್ವರ್ಡ್ ವಿಶ್ವವಿದ್ಯಾಲಯ ಮತ್ತು ದೆಹಲಿ ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿದರು. ಇಬ್ಬರಿಗೂ ಶಿಕ್ಷಣ ಕ್ಷೇತ್ರದಲ್ಲಿ ಅನುಭವವಿದ್ದ ಕಾರಣ 2016ರಲ್ಲಿ ಎಡುನೋವಾ ಎಂಬ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ್ದರು.


ಆದರೆ ಹಣಕಾಸಿನ ತೊಂದರೆಗಳಿಂದಾಗಿ ಇದು 2021 ರಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿತು. ಕಳೆದ ವರ್ಷ ಸೆಪ್ಟೆಂಬರ್ 22ರಂದು ಶಿಕ್ಷಣ ಸಂಸ್ಥೆಯ ದಿವಾಳಿತನದ ಅರ್ಜಿಯನ್ನೂ ಸಲ್ಲಿಸಲಾಗಿದೆಯಂತೆ. ಇದರ ನಡುವೆ ಕಮಲ್ ದಂಪತಿ 2019 ರಲ್ಲಿ ಪ್ರತಿಷ್ಠಿತರು ವಾಸಿಸುವ ಮ್ಯಾಸಚೂಸೆಟ್ಸ್‌ನಲ್ಲಿ 4 ಮಿಲಿಯನ್ ಡಾಲರ್ ಕೊಟ್ಟು ಬೃಹತ್​ ಬಂಗಲೆ ಖರೀದಿಸಿದ್ದರು. 19 ಸಾವಿರ ಚದರ ಮೀಟರ್ ವಿಸ್ತೀರ್ಣ ಹೊಂದಿರುವ ಈ ಕಟ್ಟಡದಲ್ಲಿ 11 ಮಲಗುವ ಕೋಣೆಗಳಿದ್ದವು. ಈಗ ಆ ಕಟ್ಟಡದ ಮೌಲ್ಯ 5 ಮಿಲಿಯನ್ ಡಾಲರ್ (ರೂ. 41.26 ಕೋಟಿ). ಸದ್ಯ ಈ ಬಂಗಲೆಯಲ್ಲೇ ಕಮಲ್ ದಂಪತಿ ವಾಸವಿದ್ದರು.ಎರಡು ದಿನವಾದರೂ ಕಮಲ್ ದಂಪತಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಅವರ ಸಂಬಂಧಿಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಪೊಲೀಸರು ಕಟ್ಟಡಕ್ಕೆ ತೆರಳಿ ಪರಿಶೀಲಿಸಿದಾಗ ಮೂರು ಶವಗಳು ಪತ್ತೆಯಾಗಿವೆ. ಘಟನೆ ವೇಳೆ ಯಾರೂ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಅವರ ಸಾವಿಗೆ ಕೌಟುಂಬಿಕ ಕಲಹಗಳೇ? ಹಣಕಾಸಿನ ತೊಂದರೆಗಳು ಕಾರಣವೇ? ಅಥವಾ ಹೊರಗಿನವರಿಗೆ ಸಂಬಂಧವಿದೆಯೇ? ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ತನಿಖೆ ನಡೆಸುತ್ತಿದ್ದಾರೆ.

ಕೆಎಸ್‌ಆರ್‌ಟಿಸಿಯಲ್ಲಿ 46 ಮಂದಿ ಚಾಲಕ ಹುದ್ದೆಗೆ ಆಯ್ಕೆ : ಸ್ವಂತ ಖರ್ಚಿನಲ್ಲೇ ತರಬೇತಿ ವ್ಯವಸ್ಥೆ ಮಾಡಿದ್ದ ಪುತ್ತೂರು ಶಾಸಕರು

Posted by Vidyamaana on 2023-08-18 02:52:08 |

Share: | | | | |


ಕೆಎಸ್‌ಆರ್‌ಟಿಸಿಯಲ್ಲಿ 46 ಮಂದಿ ಚಾಲಕ ಹುದ್ದೆಗೆ ಆಯ್ಕೆ : ಸ್ವಂತ ಖರ್ಚಿನಲ್ಲೇ ತರಬೇತಿ ವ್ಯವಸ್ಥೆ ಮಾಡಿದ್ದ ಪುತ್ತೂರು ಶಾಸಕರು

ಪುತ್ತೂರು : ಕೆಎಸ್‌ಆರ್‌ಟಿಸಿ ಯಲ್ಲಿ ಪುತ್ತೂರು ವಿಭಾಗ ಸೇರಿದಂತೆ ಕರಾವಳಿ ಭಾಗದಲ್ಲಿ ಚಾಲಕ ಹುದ್ದೆ ಇರುವುದನ್ನು ಮನಗಂಡು ಈ ಹುದ್ದೆಗೆ ದ ಕ ಜಿಲ್ಲೆಯವರನ್ನೇ ನೇಮಕವಾಗಬೇಕು ಎಂಬ ಉದ್ದೇಶದಿಂದ ಚಾಲಕ ಹುದ್ದೆಗೆ ಸುಮಾರು 70 ಮಂದಿ ಅರ್ಜಿ ಸಲ್ಲಿಸಿದ್ದರು.


ಈ ಪೈಕಿ ತರಬೇತಿಗೆ ಹಾಜರಾಗಿ ಮೊದಲ ಪರೀಕ್ಷೆಯಲ್ಲಿ 55 ಮಂದಿ ತೇರ್ಗಡೆಹೊಂದಿದ್ದರು, ಈ ಪೈಕಿ 49 ಮಂದಿಗೆ ಮೊದಲ ಹಂತದಲ್ಲಿ ಚಾಲಕ ಹುದ್ದೆಗೆ ನೇಮಕವಾಗಿದ್ದು ಶಾಸಕರು ಪಟ್ಟ ಶ್ರಮ ಸಾರ್ಥಕವಾಗಿದೆ.



ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಶಾಸಕರು ತನ್ನ ಸ್ವಂತ ಖರ್ಚಿನಿಂದ ಎಲ್ಲಾ ಚಾಲಕ ಆಕಾಂಕ್ಷಿಗಳನ್ನು ಹಾಸನಕ್ಕೆ ಕರೆದೊಯ್ದು ಅಲ್ಲಿ ತರಬೇತಿಯನ್ನು ಕೊಡಿಸಿದ್ದರು. ಮೊದಲ ಹಂತದ ತರಬೇತಿಯಲ್ಲಿ ೨೭ ಮಂದಿ ಮತ್ತು ಎರಡನೆ ತಂಡದಲ್ಲಿ ೨೮ ಮಂದಿಗೆ ತರಬೇತಿಯನ್ನು ನೀಡಲಾಗಿತ್ತು. ಈ ಪೈಕಿ ಕೆಲವು ಮಂದಿ ತರಬೇತಿಯಲ್ಲಿ ಅನುತ್ತೀರ್ಣರಾದ ಕಾರಣ ಅವರನ್ನು ಮುಂದಿನ ತರಬೇತಿ ಅವಧಿಗೆ ಕಾಯ್ದಿರಿಸಲಾಗಿತ್ತು.


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದವರು ಆ.10 ರಂದು ಪ್ರಾದೇಶಿಕ ತರಬೇತಿ ಕೇಂದ್ರ ಹಾಸದಲ್ಲಿ ಚಾಲಕರ ಆಯ್ಕೆ ಯನ್ನು ಮಾಡಿರುತ್ತಾರೆ. ಇದರಲ್ಲಿ ಟ್ರಸ್ಟ್ ಮೂಲಕ ತರಬೇತಿ ಪಡಕೊಂಡ ೪೬ ಮಂದಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಠೆಯ ಹೊರಗುತ್ತಿಗೆ ಆಧಾರದಲ್ಲಿ ಬಸ್ ಚಾಲಕರಾಗಿ ಆಯ್ಕೆಯಾಗಿರುತ್ತಾರೆ.


ನಮ್ಮ ಜನರಿಗೆ ಕೆಎಸ್‌ಆರ್‌ಟಿಸಿಯಲ್ಲಿ ಹುದ್ದೆ ದೊರೆಯಬೇಕೆಂಬ ಉದ್ದೇಶದಿಂದ ನಾನು ಚಾಲಕ ಹುದ್ದೆಗೆ ಅರ್ಜಿ ಹಾಕುವಂತೆ ಪತ್ರಿಕೆಯಲ್ಲಿ ಜಾಹಿರಾತು ನೀಡಿ, ಹುದ್ದೆ ಆಕಾಂಕ್ಷಿಗಳನ್ನು ಆಯ್ಕೆ ಮಾಡಿ ಅವರನ್ನು ತನ್ನ ಸ್ವಂತ ಖರ್ಚಿನಲ್ಲೇ ಹಾಸಕನಕ್ಕೆ ಕರೆದೊಯ್ದು ಚಾಲನಾ ತರಬೇತಿಯನ್ನು ಕೊಡಿಸಿದ್ದು ಮೊದಲ ಆಯ್ಕೆ ಪ್ರಕ್ರಿಯೆಯಲ್ಲಿ ೪೬ ಮಂದಿ ಚಾಲಕ ಹುದ್ದೆಗೆ ನೇಮಕವಾಗಿದ್ದಾರೆ.


ಸರಕಾರಿ ಹುದ್ದೆಗೆ ಈ ಭಾಗದವರು ಅರ್ಜಿ ಹಾಕುವುದು ಬಹಳ ಕಡಿಮೆ. ನಮ್ಮವರಿಗೂ ಸರಕಾರಿ ಹುದ್ದೆ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ನಾನು ಶಾಸನೆಂಬ ನೆಲೆಯಲ್ಲಿ ಪ್ರಯತ್ನ ಪಟ್ಟಿದ್ದೆ ಅದಕ್ಕೆ ಪೂರಕ ಎಂಬಂತೆ ಚಾಲಕರು ಸಹಕಾರ ನೀಡಿದ್ದು ಇದೀಗ ೪೭ ಮಂದಿಗೆ ಉದ್ಯೋಗ ಲಭಿಸಿದ್ದು ನನಗೆ ಅತೀವ ಸಂತೋಷವನ್ನು ತಂದಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಜನ್ಮಾಷ್ಟಮಿ: ಅರ್ಘ್ಯ ಸಮಯದಲ್ಲೇ ಶ್ರೀ ಕೃಷ್ಣ ಮಠಕ್ಕೆ ಸ್ಪೀಕರ್ ಖಾದರ್ ಭೇಟಿ

Posted by Vidyamaana on 2023-09-07 14:22:07 |

Share: | | | | |


ಜನ್ಮಾಷ್ಟಮಿ: ಅರ್ಘ್ಯ ಸಮಯದಲ್ಲೇ ಶ್ರೀ ಕೃಷ್ಣ ಮಠಕ್ಕೆ ಸ್ಪೀಕರ್ ಖಾದರ್ ಭೇಟಿ

ಉಡುಪಿ; ಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣಮಠಕ್ಕೆ ಭೇಟಿ ಕೊಟ್ಟು ಸ್ಪೀಕರ್ ಯು ಟಿ ಖಾದರ್ ಅಚ್ಚರಿ ಮೂಡಿಸಿದ್ದಾರೆ.ಅದು ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಸ್ಪೀಕರ್ ಸರ್ವಧರ್ಮ ಸಮಾನತೆಯ ಸಂದೇಶ ಸಾರಿದ್ದಾರೆ.


ಇನ್ನೊಂದು ಗಮನಾರ್ಹ ವಿಚಾರವೆಂದರೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ 13 ಶಾಸಕರ ಪೈಕಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಉಡುಪಿ ಮಠಕ್ಕೆ ಭೇಟಿ ನೀಡಿ ದೇವರ ಕೃಪೆಗೆ ಪಾತ್ರರಾದ ಏಕೈಕ ಶಾಸಕರಾಗಿದ್ದಾರೆ.


ಇನ್ನು ಖಾದರ್ ಮಠಕ್ಕೆ ಭೇಟಿ ನೀಡುತ್ತಿದ್ದಂತೆ ಮಠದ ಸತ್ಯನಾರಾಯಣ ಭಟ್ ಅವರು ಅವರನ್ನು ಬರಮಾಡಿಕೊಂಡರು. ಮಠದ ಕೊಳದಲ್ಲಿ ಕೈ ಕಾಲು ತೊಳೆದು ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು.ಬುಧವಾರ ಬೆಳಿಗ್ಗೆ ಬೆಂಗಳೂರು ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಬಂದು ತನ್ನ ಕ್ಷೇತ್ರದಲ್ಲಿ ವಿವಿಧೆಡೆ ಕೃಷ್ಣಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಡುಪಿಯ ಕಡಿಯಾಲಿನಲ್ಲಿ ಪ್ರಸಾದ್ ಕಾಂಚನ್ ನೇತೃತ್ವದಲ್ಲಿ ಶಶಿರಾಜ್ ಕುಂದರ್ ಮತ್ತು ತಂಡದಿಂದ ಟೈಗರ್ ಫ್ರೆಂಡ್ಸ್ ನ ಹುಲಿವೇಷ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಿಂತಿರುಗುವಾಗ ಹಿತೈಷಿಗಳ ಕೋರಿಕೆ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ವಿಶೇಷವೆಂದರೆ ಕಾಕತಾಳೀಯವೆಂಬಂತೆ ಭೇಟಿ ನೀಡಿದ ಅದೇ ಗಳಿಗೆಯಲ್ಲಿ ಶ್ರೀಕೃಷ್ಣ ಜನ್ಮ ತಾಳಿದ್ದರು ಎಂದು ಮಠದ ಸತ್ಯನಾರಾಯಣ ಭಟ್ ಉಲ್ಲೇಖಿಸಿದರು. ಈ ಭಾಗ್ಯ ಎಲ್ಲರಿಗೂ ಪ್ರಾಪ್ತವಾಗದು. ಎರಡೂ ಜಿಲ್ಲೆಯ 13 ಶಾಸಕರ ಪೈಕಿ 11 ಮಂದಿ ಬಿಜೆಪಿ ಶಾಸಕರಿದ್ದರೂ ಅವರ್ಯಾರಿಗೂ ಸಿಗದ ಭಾಗ್ಯ ಸ್ಪೀಕರ್ ಖಾದರ್ ಗೆ ಲಭಿಸಿದ್ದು ಕಾಕತಾಳೀಯ.


ಸ್ಪೀಕರ್ ಅವರೊಂದಿಗೆ ಕೌನ್ಸಿಲರ್ ಭಾಸ್ಕರ ರಾವ್ ಕಿದಿಯೂರ್, ರಮೇಶ್ ಕಾಂಚನ್, ಮುನಿಯಾಲ ಉದಯಕುಮಾರ್ ಶೆಟ್ಟಿ, ಮುಸ್ತಫ ಹರೇಕಳ, ಬದ್ರುದ್ದೀನ್ ಜೊತೆಗಿದ್ದರು.

ಪತ್ರಕರ್ತನ ಮೊಬೈಲ್ ಒಡೆದು ಹಾಕಿದ ಪ್ರಕರಣ ಸುಖಾಂತ್ಯ

Posted by Vidyamaana on 2023-07-20 02:17:28 |

Share: | | | | |


ಪತ್ರಕರ್ತನ ಮೊಬೈಲ್ ಒಡೆದು ಹಾಕಿದ ಪ್ರಕರಣ ಸುಖಾಂತ್ಯ

ಪುತ್ತೂರು: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಅವರ ಮೊಬೈಲ್ ಒಡೆದು ಹಾಕಿರುವ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ ಎಂದು ತಿಳಿದುಬಂದಿದೆ.

ಬಪ್ಪಳಿಗೆ ಎಂಬಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಮೊಬೈಲ್ ಕಸಿದು‌ ಹಾನಿಗೊಳಿಸಲಾಗಿದೆ ಎಂದು ನಿಶಾಂತ್ ಆರೋಪಿಸಿದ್ದರು. ಇದನ್ನು ಪತ್ರಕರ್ತರ ಸಂಘಗಳು ಖಂಡಿಸಿ, ಸೂಕ್ತ ತನಿಖೆ ನಡೆಸಲು ಆಗ್ರಹಿಸಿದ್ದವು. ಇದೀಗ ಬಂದ ಮಾಹಿತಿಯಂತೆ, ಮೊಬೈಲ್ ಒಡೆದು‌ ಹಾಕಿದವರು‌ ಹೊಸ ಮೊಬೈಲನ್ನು ನಿಶಾಂತ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ. ಈ‌ ಹಿನ್ನೆಲೆಯಲ್ಲಿ ಪ್ರಕರಣವನ್ನು ಸುಖಾಂತ್ಯಗೊಳಿಸಲಾಗಿದೆ ಎಂದು‌ ತಿಳಿದುಬಂದಿದೆ.



Leave a Comment: