ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಸುದ್ದಿಗಳು News

Posted by vidyamaana on 2024-07-03 08:00:29 |

Share: | | | | |


ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ : ಎರಡು ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದಾರೆ.


ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಡೆದ ಸುಮಾರು 1,48,000 ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000 ರೂ. ಸೇರಿ ಒಟ್ಟು 1,78,000 ರೂ. ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ್ದು, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಿದ ಸೊತ್ತುಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿದೆ.

ಸದ್ರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್ ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಎಂ ಕೆ.ಎಸ್.ಪಿ.ಎಸ್ ಮತ್ತು ರಾಜೇಂದ್ರ ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತದೆ.

ಸದ್ರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮತ್ತು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಯನ್ನು ವ್ಯಕ್ತವಾಗಿದೆ.

 Share: | | | | |


ವಿಟ್ಲ ಮೋತಿ ಸಿಟಿ ಕಟ್ಟಡದಲ್ಲಿ ಮೆಹಂದಿ ತರಗತಿ ಉದ್ಘಾಟನೆ

Posted by Vidyamaana on 2024-07-02 22:10:24 |

Share: | | | | |


ವಿಟ್ಲ ಮೋತಿ ಸಿಟಿ ಕಟ್ಟಡದಲ್ಲಿ ಮೆಹಂದಿ ತರಗತಿ ಉದ್ಘಾಟನೆ

ವಿಟ್ಲ: ಮೆಹಂದಿಗೆ ಪ್ರಾಚೀನ ಕಾಲದ ಇತಿಹಾಸ ಇದ್ದು ಅದೊಂದು ಕೈಯಿಂದ ಕೈಯಲ್ಲಿ ಅರಳುವ ಅದ್ಬುತ ಕಲೆಯಾಗಿದೆ. ವಿದ್ಯಾರ್ಥಿನಿಯರು, ಯುವತಿಯರು ಹಾಗೂ ಗೃಹಣಿಯರು ಮೆಹಂದಿ ಬಿಡಿಸುವುದು ಕಲಿಯುವ ಮೂಲಕ ಕುಟುಂಬಕ್ಕೆ ಆರ್ಥಿಕ ನೆರವಾಗಬಹುದು ಎಂದು ವಿಟ್ಲದ ದಂತ ವೈದ್ಯೆ ಡಾ. ಕೌಲತ್ ಬಿ.ಎಂ. ಹೇಳಿದರು. 

ವಿಟ್ಲ ಸ್ಕೂಲ್ ರೋಡಿನ ಮೋತಿ ಸಿಟಿ ಕಟ್ಟಡದಲ್ಲಿ ಇತ್ತೀಚಿಗೆ ಆರಂಭಗೊಂಡ ದಿ ನ್ವಾಲೇಜ್ ಹಬ್ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಮೆಹಂದಿ ತರಗತಿಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. 


ಮಾ:17 ರಿಂದ 19 ಪಡುಮಲೆ ಪಮ್ಮಲ ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ ಧಾರ್ಮಿಕ ಉಪನ್ಯಾಸ

Posted by Vidyamaana on 2023-03-15 14:45:51 |

Share: | | | | |


ಮಾ:17 ರಿಂದ 19 ಪಡುಮಲೆ ಪಮ್ಮಲ ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ ಧಾರ್ಮಿಕ ಉಪನ್ಯಾಸ

ಪುತ್ತೂರು: ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವದ ಹೆಸರಲ್ಲಿ ನಡೆದುಕೊಂಡು ಬರುತ್ತಿರುವ ಆಂಡ್ ನೇರ್ಚೆ ಮೂರು ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ.17, 18 ಹಾಗೂ 19 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಡುಮಲೆ ಪ್ರದೇಶ ಮಸೀದಿ, ದೇವಸ್ಥಾನ, ದೈವಸ್ಥಾನಗಗಳನ್ನೊಳಗೊಂಡು ಸೌಹಾರ್ದತೆಯಿಂದ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ ಎಂದರು.

ಮಾ.17 ರಂದು ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪುತ್ತೂರು ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೊಕೋಯ ತಂಙಳ್ ಉದ್ಘಾಟಿಸಿ ಆಶೀರ್ವಚನ ನೀಡುವರು. ಬಹು | ಸಿರಾಜುದ್ದೀನ್ ದಾರಿಮಿ ಕಕ್ಕಾಡ್ ಮುಖ್ಯ ಪ್ರಭಾಷಣ ಮಾಡುವರು. ಮಾ.18 ರಂದು ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಮ್ಮಲ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮಹಮ್ಮದ್ ಬಡಗನ್ನೂರು ವಹಿಸಲಿದ್ದು, ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲಾರ ಮುಖ್ಯ ಪ್ರಭಾಷಣ ಮಾಡುವರು. ಮಾ.19 ರಂದು ಸಂಜೆ 5 ಗಂಟೆಗೆ ಸೌಹಾರ್ದ ಸಂಗಮ ನಡೆಯಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಉಪನಾಯಕ ಯು.ಟಿ.ಖಾದರ್, ಸದಸ್ಯರಾದ ಕೆ.ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮತ್ತಿತರ ಧಾರ್ಮಿಕ, ರಾಜಕೀಯ ನಾಯಕರು ಪಾಲ್ಗೊಳ್ಳಲಿದ್ದಾರೆ. 

ರಾತ್ರಿ 8.30 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಯ್ಯದ್ ರಶೀದ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಮಹಾಶೀರ್ವಚನ ನೀಡಲಿದ್ದು, ಪಮ್ಮಲ ಮಸೀದಿ ಖತೀಬ ಶಂಸುದ್ದೀನ್ ದಾರಿಮಿ ಉದ್ಘಾಟಿಸುವರು. ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಅಧ್ಯಕ್ಷತೆ ವಹಿಸುವರು. ಇ.ಪಿ.ಅಬೂಬಕ್ಕರ್ ಅಲ್ ಖಾಸಿಮಿ ಪತ್ತನಾಪುರಂ ಮುಖ್ಯ ಪ್ರಭಾಷಣ ಮಾಡುವರು. ಸಮಾರೋಪದ ಬಳಿಕ ಅನ್ನದಾನ ಸೇವೆ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಮಾಅತ್ ಕಮಿಟಿ ಉಪಾಧ್ಯಕ್ಷ ಪಕ್ರುದ್ದೀನ್ ಹಾಜಿ, ಖತೀಬ ಶಂದುದ್ದೀನ್ ದಾರಿಮಿ, ಕಾರ್ಯದರ್ಶಿ ಅಲಿಕುಂಞಿ ಹಾಜಿ, ಮಾಜಿ ಖಜಾಂಚಿ ಆದಂ ಹಾಜಿ ಉಪಸ್ಥಿತರಿದ್ದರು.

ಜನನ-ಮರಣ ನೋಂದಣಿಗೆ ಈಗ ಆಧಾರ್ ಕಾರ್ಡ್ ಕಡ್ಡಾಯವಲ್ಲ : ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

Posted by Vidyamaana on 2023-06-30 02:01:02 |

Share: | | | | |


ಜನನ-ಮರಣ ನೋಂದಣಿಗೆ ಈಗ ಆಧಾರ್ ಕಾರ್ಡ್ ಕಡ್ಡಾಯವಲ್ಲ : ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

ನವದೆಹಲಿ : ದೇಶದಲ್ಲಿ ಜನನ ಮತ್ತು ಮರಣ ನೋಂದಣಿ ಸಮಯದಲ್ಲಿ ಆಧಾರ್ ದೃಢೀಕರಣವನ್ನ ಕೈಗೊಳ್ಳಲು ರಿಜಿಸ್ಟ್ರಾರ್ ಜನರಲ್ (RGI) ಕಚೇರಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದಾಗ್ಯೂ, ಅಂತಹ ನೋಂದಣಿಗೆ ಆಧಾರ್ ಕಡ್ಡಾಯವಲ್ಲ. ಜನನ ಮತ್ತು ಮರಣ ನೋಂದಣಿ ಸಮಯದಲ್ಲಿ ಒದಗಿಸಲಾದ ಗುರುತಿನ ವಿವರಗಳನ್ನ ದೃಢೀಕರಿಸಲು ಆಧಾರ್ ಡೇಟಾಬೇಸ್ನ್ನ ಬಳಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಆರ್ಜಿಐ ಕಚೇರಿಗೆ ಅನುಮತಿ ನೀಡಿದೆ ಎಂದು ಜೂನ್ 27 ರಂದು ಪ್ರಕಟವಾದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಜನನ ಮತ್ತು ಮರಣ ನೋಂದಣಿ ಕಾಯ್ದೆ 1969 ಏನು.?

ಜನನ ಮತ್ತು ಮರಣ ನೋಂದಣಿ ಕಾಯ್ದೆ 1969ರ ಅಡಿಯಲ್ಲಿ, ನೇಮಕಗೊಂಡ ರಿಜಿಸ್ಟ್ರಾರ್ಗೆ ಆಧಾರ್ ಸಂಖ್ಯೆಯ ಪರಿಶೀಲನೆಗಾಗಿ ಸ್ವಯಂಪ್ರೇರಿತ ಆಧಾರದ ಮೇಲೆ ಹೌದು ಅಥವಾ ಇಲ್ಲ ಆಧಾರ್ ದೃಢೀಕರಣವನ್ನ ಕೈಗೊಳ್ಳಲು ಅವಕಾಶ ನೀಡಲಾಗುವುದು ಎಂದು ಅದು ಹೇಳುತ್ತದೆ.


ಜನನದ ಸಂದರ್ಭದಲ್ಲಿ ಮಗು, ಪೋಷಕರು ಮತ್ತು ಮಾಹಿತಿದಾರರ ಗುರುತನ್ನ ಸ್ಥಾಪಿಸುವ ಉದ್ದೇಶಕ್ಕಾಗಿ ಮತ್ತು ಜನನ ಮತ್ತು ಮರಣದ ನೋಂದಣಿಯ ಸಮಯದಲ್ಲಿ ಒದಗಿಸಲಾದ ಪ್ರಕರಣದಲ್ಲಿ, ಪೋಷಕರು, ಸಂಗಾತಿ ಹಾಗೂ ಮಾಹಿತಿದಾರರ ಗುರುತನ್ನ ಸ್ಥಾಪಿಸುವ ಉದ್ದೇಶಕ್ಕಾಗಿ ಪ್ರಕರಣ ಇರಬಹುದುಆಧಾರ್ ದೃಢೀಕರಣದ ಬಳಕೆಗೆ ಸಂಬಂಧಿಸಿದಂತೆ ಸಚಿವಾಲಯ ನಿಗದಿಪಡಿಸಿದ ಮಾರ್ಗಸೂಚಿಗಳನ್ನ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶ ಆಡಳಿತಗಳು ಅನುಸರಿಸುತ್ತವೆ. ಉತ್ತಮ ಆಡಳಿತ, ಸಾರ್ವಜನಿಕ ಹಣದ ಹರಿವು ಮತ್ತು ಸುಗಮ ಜೀವನವನ್ನ ಉತ್ತೇಜಿಸಲು ಸಂಸ್ಥೆಗಳನ್ನ ವಿನಂತಿಸುವ ಮೂಲಕ ಕೇಂದ್ರ ಸರ್ಕಾರವು ಆಧಾರ್ ದೃಢೀಕರಣವನ್ನ ಅನುಮತಿಸಬಹುದು ಎಂದು ಸಚಿವಾಲಯವು 2020 ರಲ್ಲಿ ನಿಯಮಗಳನ್ನ ಅಧಿಸೂಚನೆ ಹೊರಡಿಸಿತು.

ಶಾಸಕರ ಇಂದಿನ ಕಾರ್ಯಕ್ರಮ ಆ 12

Posted by Vidyamaana on 2023-08-11 23:13:55 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 12

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 12 ರಂದು


ಬೆಳಿಗ್ಗೆ 10 ಗಂಟೆಗೆ ಪಡ್ನೂರು ಗ್ರಾಮದ ಪರಂಬಾಜೆ ಎಂಬಲ್ಲಿ ತಾಳೆ ಕೃಷಿ ಬಗ್ಗೆ ತೋಟಗಾರಿಕೆ ಇಲಾಖೆಯಿಂದ ಮಾಹಿತಿ ಕಾರ್ಯಕ್ರಮ ಇದರ ಉದ್ಘಾಟನೆ



11 ಗಂಟೆಗೆ ಸಾಮೆತ್ತಡ್ಕ ಸರಕಾರಿ ಶಾಲೆಯಲ್ಲಿ ಕೊಠಡಿ ಉದ್ಘಾಟನೆ



11.30 ಕ್ಕೆ ಮೌಂಟನ್ ವ್ಯೂ ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮ


12.30 ಕ್ಕೆ ಪಾಪೆಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಅಭಿನಂದನಾ  ಕಾರ್ಯಕ್ರಮದ ಲ್ಲಿ ಭಾಗವಹಿಸಲಿದ್ದಾರೆ

CM ಸಿದ್ದರಾಮಯ್ಯರಿಗೆ ಕಂಬಳ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

Posted by Vidyamaana on 2023-11-22 20:33:55 |

Share: | | | | |


CM ಸಿದ್ದರಾಮಯ್ಯರಿಗೆ ಕಂಬಳ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ನವೆಂಬರ್ 25ಮತ್ತು 26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆದ ಅಶೋಕ್ ರೈ ಯವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ನೀಡಿದರು. 25 ರಂದು ಸಂಜೆ ನಡೆಯುವ ಮುಖ್ಯ ಸಭಾ ಕಾರ್ಯಕ್ರಮವನ್ನು ಸಿದ್ದರಾಮಯ್ಯರವರು ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಐತಿಹಾಸಿಕ ಕಂಬಳದ ಬಗ್ಗೆ ಅಶೋಕ್ ರೈ ಯವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಕಂಬಳಕ್ಕೆ ಬರುವ ಅತಿಥಿಗಳು ,ಭಾಗವಹಿಸುವ ಲಕ್ಷಾಂತರ  ಕಂಬಳಾಭಿಮಾನಿಗಳ ಬಗ್ಗೆಯೂ ಸಿಎಂ ಅವರಿಗೆ ವಿವರಣೆ ನೀಡಿದರು.

ಕರ್ನಾಟಕದ ಇತಿಹಾಸದಲ್ಲೇ ರಾಜ್ಯದ ರಾಜಧಾನಿಯಲ್ಲಿ ತುಳುನಾಡಿನ ಕಂಬಳ ಕ್ರೀಡೆಯನ್ನು ಆಯೋಜನೆ ಮಾಡಿರುವ ಬಗ್ಗೆ ಶಾಸಕರಾದ ಅಶೋಕ್ ರೈ ಯವರನ್ನು ಇದೇ ಸಂದರ್ಭದಲ್ಲಿ ಸಿಎಂ ರವರು ಅಭಿನಂದಿಸಿದರು. ಕಂಬಳಕ್ಕೆ ಬರಲು ನಾನು ರೆಡಿಯಾಗಿದ್ದೇನೆ, ನನಗೆ ಕಂಬಳವನ್ನು ವೀಕ್ಷಿಸಬೇಕು, ಕರಾವಳಿ ಭಾಗದ ಸುಪ್ರಸಿದ್ದ ಜನಪದ ಕ್ರೀಡೆಯನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡುವ ಮೂಲಕ ರಾಜ್ಯದ ಎಲ್ಲಾ ಜನರಿಗೂ, ರಾಜಧಾನಿಯಲ್ಲಿರುವ ದೇಶದ ನಾನಾ ರಾಜ್ಯದ ಜನತೆಗೂ, ವಿದೇಶಿ ಪ್ರವಾಸಿಗರಿಗೂ ಕಂಬಳದ ಸವಿಯನ್ನು ಅನುಭವಿಸುವ ಯೋಗ ದೊರಕಿದೆ ಇದಕ್ಕಾಗಿ ಅಭಿನಂದಿಸುವುದಾಗಿ ಸಿಎಂ ರವರು ಶಾಸಕರಿಗೆ ತಿಳಿಸಿದರು. ಕಂಬಳಕ್ಕೆ ಸರಕಾರದ ಪೂರ್ಣಪ್ರಮಾಣದ ಬೆಂಬಲವನ್ನು ಇದೇ ಸಂದರ್ಭದಲ್ಲಿ ಸಿಎಂ ರವರು ಘೋಷಿಸಿದರು. 

ಕಂಬಳಕ್ಕೆ ಪೆಟಾ ದವರ ಆಕ್ಷೇಪ ಇದ್ದ ಸಂದರ್ಭದಲ್ಲಿ ಅಂದು ಸಿಎಂ ಆಗಿದ್ದ ನೀವು ನಮ್ಮ ಹೋರಾಟಕ್ಕೆ ಸಹಾಯ ಮಾಡಿದ್ದನ್ನು ಶಾಸಕ ಅಶೋಕ್ ರೈ ಸಿಎಂ ಸಿದ್ದರಾಮಯ್ಯರವರ ಬಳಿ ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ವಿಧಾನಪರಿಷತ್

ಸದಸ್ಯರಾದ ಶ್ರೀ ಮಂಜುನಾಥ್ ಭಂಡಾರಿ ಮತ್ತು ಕಂಬಳ

ಸಮಿತಿ ಕಾರ್ಯಧ್ಯಕ್ಷರಾದ ಗುರುಕಿರಣ್ ಹಾಗೂ

ಪದಾಧಿಕಾರಿಗಳು ಉಪಸ್ಥಿತರಿದ್ದರು.


ದಿನನಿತ್ಯ ಟ್ರಾಫಿಕ್ ಜಾಮಿಗೆ ಕಾರಣವಾಗಿದೆ Ksrtc ಮುಂಭಾಗದ ಬ್ಯಾರಿಕೇಡ್

Posted by Vidyamaana on 2023-06-10 08:00:53 |

Share: | | | | |


ದಿನನಿತ್ಯ ಟ್ರಾಫಿಕ್ ಜಾಮಿಗೆ ಕಾರಣವಾಗಿದೆ Ksrtc ಮುಂಭಾಗದ ಬ್ಯಾರಿಕೇಡ್

ಪುತ್ತೂರು: ಇಲ್ಲಿನ‌ KSRTC ಬಸ್ ನಿಲ್ದಾಣಕ್ಕೆ ಜನ ಬರಬೇಕು. ಅದಕ್ಕಾಗಿಯೇ ಬೃಹತ್ ಸಂಕೀರ್ಣ ಕಟ್ಟಿಸಿರುವುದು. ಆದರೆ ಈ ವಾಣಿಜ್ಯ ಸಂಕೀರ್ಣದ ಮುಂಭಾಗ ಪ್ರಯಾಣಿಕರ, ಸಾರ್ವಜನಿಕರ ವಾಹನ ನಿಲ್ಲಿಸಬಾರದು. ಹೇಗಿದೆ ನೋಡಿ‌ ಇಲಾಖೆಯ ಲಾಜಿಕ್!

ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಬದಿಯ ಸ್ಬಲ್ಪ ಜಾಗ ಪ್ರಯಾಣಿಕರ ಅನುಕೂಲಕ್ಕಾಗಿ ಈ ಹಿಂದೆ ಬಳಕೆ ಆಗುತ್ತಿತ್ತು. ಅಂದರೆ ತಮ್ಮ ಸ್ವಂತ ವಾಹನ ಅಥವಾ ರಿಕ್ಷಾದಲ್ಲಿ ಬರುವ ಪ್ರಯಾಣಿಕರು ಹತ್ತಿಳಿಯಲು ಇದು ಪ್ರಯೋಜನಕಾರಿಯಾಗಿತ್ತು. ಆದರೆ ಈಗ ಈ ಜಾಗವನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಪರಿಣಾಮ ಬಸ್ ನಿಲ್ದಾಣಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ಪ್ರಯಾಣಿಕರು ರಸ್ತೆಯಲ್ಲೇ ವಾಹನ ನಿಲ್ಲಿಸಬೇಕಾಗಿದೆ. ಸಮಸ್ಯೆ ಶುರುವಾಗಿದ್ದೇ ಇಲ್ಲಿ. ಇದೀಗ ರಸ್ತೆಯಿಡೀ ಬ್ಲಾಕ್.

ನಿಲ್ದಾಣಕ್ಕೆ ಬರುವ ವಾಹನಗಳು, ನಿರ್ಗಮಿಸುವ ಬಸ್ ಗಳು, ಎಪಿಎಂಸಿ ರಸ್ತೆಯಿಂದ ಆಗಮಿಸುವ ಸಾರ್ವಜನಿಕ ವಾಹನಗಳು ಮುಖ್ಯರಸ್ತೆಯಿಂದ‌ ಆಗಮಿಸುವ ವಾಹನಗಳ ಸಂಚಾರಕ್ಕೆ ತೊಡಕಾಗಿ‌ ಪರಿಣಮಿಸಿದೆ.

ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಕೋಟಿ - ಚೆನ್ನಯರ ಹೆಸರು ನಾಮಕರಣದಂದು ಈ ಬ್ಯಾರಿಕೇಡ್ ಹಾಕಲಾಗಿತ್ತು. ಅದು, ಸಚಿವರು ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ ಎಂದು. ಆದರೆ ಈ ಬ್ಯಾರಿಕೇಡನ್ನು ಅದೇ ಸ್ಥಳದಲ್ಲಿ ಶಾಶ್ವತವಾಗಿಸುವುದೇ?

Ksrtc ನಿಲ್ದಾಣ ಮುಂಭಾಗ ಹಾಕಿರುವ ಬ್ಯಾರಿಕೇಡ್ ಗಳಿಂದ ಪ್ರಯಾಣಿಕರಿಗೆ ಮಾತ್ರವಲ್ಲ ಸಾರ್ವಜನಿಕರಿಗೂ ತೊಂದರೆಯಾಗಿದೆ. ಆದ್ದರಿಂದ ಈ ಬ್ಯಾರಿಕೇಡ್ ಗಳನ್ನು ತೆರವು ಮಾಡಬೇಕು ಎಂದು ಪುತ್ತೂರು ವರ್ತಕ ಸಂಘ ಮನವಿ ನೀಡಿತ್ತು. ಆದರೆ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳಿಂದ ಇದುವರೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ.



Leave a Comment: