ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಸುದ್ದಿಗಳು News

Posted by vidyamaana on 2024-07-08 14:36:42 |

Share: | | | | |


ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಬೆಂಗಳೂರು : ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ದಿಯಾ ಮಂಡೋಲ್ ಪಶ್ಚಿಮ ಬಂಗಾಳ‌ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು.

ಮೂರು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ದಿಯಾ ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

 Share: | | | | |


ಬಿಎಂಟಿಸಿಯಲ್ಲಿ ಗೋಲ್​ಮಾಲ್​ ಪ್ರಕರಣ: ಮುಖ್ಯ ಲೆಕ್ಕಾಧಿಕಾರಿ ಬಂಧನ

Posted by Vidyamaana on 2024-02-05 07:28:22 |

Share: | | | | |


ಬಿಎಂಟಿಸಿಯಲ್ಲಿ ಗೋಲ್​ಮಾಲ್​ ಪ್ರಕರಣ: ಮುಖ್ಯ ಲೆಕ್ಕಾಧಿಕಾರಿ ಬಂಧನ

ಬೆಂಗಳೂರು, ಫೆ.5: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ 11.81 ಕೋಟಿ ಹಗರಣ ಸಂಬಂಧ BMTC ಲೆಕ್ಕಪತ್ರ ವಿಭಾಗದ ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಅವರನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ 11.81 ಕೋಟಿ ಹಗರಣ ಸಂಬಂಧ FIR ವಿಳಂಬದ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡಿತ್ತು. ಬಳಿಕ BMTC ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್​ ಠಾಣೆಯಲ್ಲಿ FIR ದಾಖಲಾಗಿತ್ತು.ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ 11.81 ಕೋಟಿ ಹಗರಣ ನಡೆದಿತ್ತು. ಅಸಿಸ್ಟೆಂಟ್ ಸೆಕ್ಯುರಿಟಿ ಮತ್ತು ವಿಜಿಲೆನ್ಸ್ ಅಧಿಕಾರಿ ರಮ್ಯಾ ದೂರಿನ ಅನ್ವಯ FIR ದಾಖಲಾಗಿತ್ತು. ಅಲ್ಲದೆ, ಮುಖ್ಯ ಲೆಕ್ಕಾಧಿಕಾರಿ ಆಗಿದ್ದ ಅಬ್ದುಲ್‌ ಖುದ್ದುಸ್ ಅವರನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ.ವಂಚನೆಯಲ್ಲಿ ಶಾಮೀಲಾದ ಇತರರ ಬಗ್ಗೆಯೂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜನವರಿ 19 ರಂದು ಅಬ್ದುಲ್ ಖುದ್ದುಸ್ ಅವರನ್ನು ಅಮಾನತು ಮಾಡಿ ಕೆಎಸ್​ಆರ್​ಡಿಸಿ ಎಂಡಿ ಆದೇಶಿಸಿದ್ದರು. ಆದರೂ ಪೊಲೀಸರು ಎಫ್​ಐಆರ್ ದಾಖಲಿಸಿರಲಿಲ್ಲ. ಈ ಬಗ್ಗೆ ಟಿವಿ9 ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು.


ಚುನಾವಣಾ ಶಿರಸ್ತೇದಾರ್ ಪೂರ್ಣಿಮಾ ಅಮಾನತ್ತು


ರಾಮನಗರ: ಜಿಲ್ಲೆಯ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ಡಿ ಗ್ರೂಪ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಶಿಸ್ತು ಪ್ರಾಧಿಕಾರ ಅಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ಅವರು ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಿರಸ್ತೇದಾರ್ ಆಗಿದ್ದ ಪೂರ್ಣಿಮಾ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.ಚುನಾವಣಾ ಶಾಖಾ ಸಿಬ್ಬಂದಿ ಸುರೇಶ್ (49) ಆತ್ಮಹತ್ಯೆ ಎಂಬವರು ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆತ್ಮಹತ್ಯೆಗೂ ಮುನ್ನ ಸುರೇಶ್ ಅವರು ಬರೆದಿಟ್ಟಿದ್ದ ಡೆತ್​ನೋಟ್​ನಲ್ಲಿ ಶಿರಸ್ತೇದಾರ್ ಪೂರ್ಣಿಮಾ ಕಿರುಕುಳ ನೀಡಿದ್ದಾಗಿ ಉಲ್ಲೇಖಿಸಿದ್ದರು.


ಪ್ರಕರಣ ಸಂಬಂಧ ಪೂರ್ಣಿಮಾ‌ ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಪೂರ್ಣಿಮಾ ಅವರನ್ನು ವಶಕ್ಕೆ ಪಡೆದ ಬೆನ್ನೆಲೆ ಶಿಸ್ತು ಇಲಾಖೆಯು ಪೂರ್ಣಿಮಾ ಅವರನ್ನು ಅಮಾನತು ಮಾಡಿ ಆದೇಶಿಸಿದೆ.

ಶಾಂತಾ ಪುತ್ತೂರುರವರಿಗೆ ಸೌರಭ ರತ್ನ ರಾಜ್ಯ ಪ್ರಶಸ್ತಿ

Posted by Vidyamaana on 2024-05-24 16:16:51 |

Share: | | | | |


ಶಾಂತಾ ಪುತ್ತೂರುರವರಿಗೆ ಸೌರಭ ರತ್ನ ರಾಜ್ಯ ಪ್ರಶಸ್ತಿ

ಕಥಾಬಿಂದು ಪ್ರಕಾಶನ ಮಂಗಳೂರು ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯ ದಲ್ಲಿ ಸಾಹಿತ್ಯ ಸಂಭ್ರಮ 2024, ಕವಿಗೋಷ್ಠಿ, ಸೌರಭರತ್ನ ರಾಜ್ಯ ಪ್ರಶಸ್ತಿ,ಪ್ರದಾನ, ಸಾಂಸ್ಕೃತಿಕ ಕಾರ್ಯಕ್ರಮ, ಕೃತಿಗಳ ಅನಾವರಣ, ಮೇ 26 ರಂದು ಭಾರತಿಶಾಲೆ ಮುಡಿಪು  ಬಂಟ್ವಾಳ ದಲ್ಲಿ ನಡೆಯಲಿದೆ.ಈ ಸಂದರ್ಭದಲ್ಲಿ ಬೊಳುವಾರು ನಿವಾಸಿಯಾಗಿದ್ದು ಸರಕಾರಿ ಪ್ರೌಢಶಾಲೆ ಕಬಕದಲ್ಲಿ ಶಿಕ್ಷಕಿಯಾಗಿರುವ ಶಾಂತಾ ಪುತ್ತೂರು ರವರಿಗೆ ಸೌರಭ ರತ್ನ ರಾಜ್ಯ ಪ್ರಶಸ್ತಿ ನೀಡಲಾಗುವುದೆಂದು ಕಥಾಬಿಂದು ಪಿ. ವಿ.ಪ್ರದೀಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

. ಬಹುಮುಖ ಪ್ರತಿಭೆ ಯ ಶಾಂತಾ ಪುತ್ತೂರು ರವರು ಬಿ.ಎ.,ಬಿ.ಎಡ್, ಕನ್ನಡ ಎಂ.ಎ.ಡಿಪ್ಲೋಮ ಇನ್  ಯೋಗ,ಡ್ರಾಯಿಂಗ್ ಹೈಯರ್ ಗ್ರೇಡ್ ಉತ್ತೀರ್ಣ ರಾಗಿರುತ್ತಾರೆ.ಬೊಳುವಾರು ನಿವಾಸಿಯಾಗಿರುವ ಇವರು ಶಿಕ್ಷಕಿಯಾಗಿ

   28ವರ್ಷ ಸೇವೆ ಸಲ್ಲಿಸಿದ್ದು ಪ್ರಸ್ತುತ ಸರಕಾರಿ ಪದವಿ ಪೂರ್ವ ಕಾಲೇಜು ಕಬಕ ಪ್ರೌಢಶಾಲಾ ವಿಭಾಗದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಕವನಗಳನ್ನು, ಲೇಖನಗಳನ್ನು ಬರೆಯುವ ಹಾಗೂ ಚಿತ್ರ ಬಿಡಿಸುವ ಕರಕುಶಲ ವಸ್ತುಗಳ ತಯಾರಿಕೆ ಉತ್ತಮ ಪುಸ್ತಕ ಓದುವ ಹಾಗೂ ಸಂಗ್ರಹಿಸುವ ಹವ್ಯಾಸ ವನ್ನು ಹೊಂದಿದ್ದಾರೆ.ಓರ್ವ ಸಮರ್ಥ ಸಂಘಟಕಿಯಾಗಿರುವ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿಟ್ಲ ಸ್ಥಳೀಯ ಸಂಸ್ಥೆ ಯ   ಜೊತೆಕಾರ್ಯದರ್ಶಿಯಾಗಿ ಸೇವೆ ,ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಬಂಟ್ವಾಳ ತಾಲೂಕು ಯೋಗಸಂಘಟಕಿಯಾಗಿ  ಸುದೀರ್ಘ ಸೇವೆ ಸಲ್ಲಿಸಿದ್ದಾರೆ.ಕೇಂದ್ರಕನ್ನಡ ಸಾಹಿತ್ಯ ವೇದಿಕೆ ಕೇಂದ್ರಸಮಿತಿ ಬೆಂಗಳೂರು ಪುತ್ತೂರು ಘಟಕದ ಅಧ್ಯಕ್ಷೆ ಯಾಗಿ ಅಂತಾರಾಜ್ಯ ಮಟ್ಟದ ಕನ್ನಡ ನಾಡು ನುಡಿ ಸಂಸ್ಕೃತಿ ಕುರಿತಂತೆ ಕವನ ಸ್ಪರ್ಧೆ ಆಯೋಜನೆಯನ್ನು ಯಶಸ್ವಿ ಯಾಗಿಸಿದ್ದಾರೆ.ಅಂತಾರಾಜ್ಯ ಮಟ್ಟದ ಮಧು ಕವಿಗೋಷ್ಠಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕದಿಂದ ಸಂಯೋಜನೆ ಮಾಡಿದ್ದಾರೆ.ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಯಾಗಿ ಮೂಡಬಿದ್ರೆ, ಬಂಟ್ವಾಳ ಮೊದಲಾದ ಕಡೆ ‌ಸಾಹಿತ್ಯ ಕಮ್ಮಟ, ಕವಿಗೋಷ್ಠಿ ನಡೆಸಿರುತ್ತಾರೆ.ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು

ತುಂಬಿದ ಸಭೆಯಲ್ಲಿ ಮಹಿಳೆಯ ತುಟಿಗೆ ಚುಂಬಿಸಲು ಯತ್ನಿಸಿದ ವಿದೇಶಾಂಗ ಸಚಿವ - ವೈರಲ್ ಆಯ್ತು ವಿಡಿಯೋ..

Posted by Vidyamaana on 2023-11-06 21:00:45 |

Share: | | | | |


ತುಂಬಿದ ಸಭೆಯಲ್ಲಿ ಮಹಿಳೆಯ ತುಟಿಗೆ ಚುಂಬಿಸಲು ಯತ್ನಿಸಿದ ವಿದೇಶಾಂಗ ಸಚಿವ - ವೈರಲ್ ಆಯ್ತು  ವಿಡಿಯೋ..

       ದೇಶ ಒಂದರ ವಿದೇಶಾಂಗ ಸಚಿವರು ಅಂದರೆ ಅದು ಅತ್ಯಂತ ಜವಾಬ್ದಾರಿಯುತ ಸ್ಥಾನ. ಆದರೆ ಇದೀಗ ಅಂತಹದ್ದೊಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ವಿದೇಶಾಂಗ ಸಚಿವರು ತುಂಬಿದ ಸಭೆಯಲ್ಲಿ ಮಹಿಳೆಯೊಬ್ಬರಿಗೆ ಕಿಸ್ ಮಾಡಲು ಪ್ರಯತ್ನಿಸಿದ್ದಾರೆ.ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋ ನೋಡಲು ಕ್ಲಿಕ್ ಮಾಡಿ

ಜರ್ಮನಿಯಲ್ಲಿ ನಡೆದ ಯುರೋಪಿಯನ್ ಯೂನಿಯನ್ ಸಮ್ಮೇಳನದ ಗ್ರೂಪ್ ಫೋಟೋ ತೆಗೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.ತುಂಬಿದ ಸಭೆಯಲ್ಲಿ ಪೋಲಿ ಸಚಿವನ ಕಿಸ್ ಮಸ್‌!


ಹೌದು, ಜರ್ಮನಿಯಲ್ಲಿ ನಡೆದ ಯುರೋಪಿಯನ್ ಯೂನಿಯನ್ ಸಮ್ಮೇಳನದ ಗ್ರೂಪ್ ಫೋಟೋ

ಸೆಷನ್ ವೇಳೆ ಕ್ರೋವೆಷಿಯಾದ 65 ವರ್ಷದ ಪೋಲಿ ವಿದೇಶಾಂಗ ಸಚಿವ ಗೋರ್ಡನ್ ಗ್ರೀಕ್ ರಾಡ್ ಮನ್ತ ನ್ನ ಪಕ್ಕದಲ್ಲಿ ನಿಂತಿದ್ದ ಜರ್ಮನಿಯ ಮಹಿಳಾ ಪ್ರತಿನಿಧಿ ಅನ್ನಾಲೆನ್ ಬೇರ್ ಬಾಕ್ ಎಂಬವರಿಗೆ ಕಿಸ್ ಮಾಡಲು ಪ್ರಯತ್ನಿಸಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಾಗತಿಕ ಮಟ್ಟದಲ್ಲಿ ಈ ವಿಚಾರ ಬಿಸಿಬಿಸಿ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.

1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಸುಪ್ರೀಂಗೆ ಕೇಂದ್ರ ಮಾಹಿತಿ

Posted by Vidyamaana on 2024-06-13 14:31:21 |

Share: | | | | |


1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಸುಪ್ರೀಂಗೆ ಕೇಂದ್ರ ಮಾಹಿತಿ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನೀಟ್-ಯುಜಿ 2024 ರ 1,563 ಅಭ್ಯರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ನಿರ್ಧಾರವನ್ನು ರದ್ದುಗೊಳಿಸಲಾಗಿದೆ ಮತ್ತು ವಿದ್ಯಾರ್ಥಿಗಳಿಗೆ ಜೂನ್ 23 ರಂದು ಮರು ಪರೀಕ್ಷೆಗೆ ಅರ್ಜಿ ಸಲ್ಲಿಸುವ ಆಯ್ಕೆಯನ್ನು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.

BIG BREAKING: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

Posted by Vidyamaana on 2024-06-06 15:59:17 |

Share: | | | | |


BIG BREAKING: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದರು.

ಕಾಪು ಠಾಣೆ ಮಹಿಳಾ ಪೇದೆ ಆತ್ಮಹತ್ಯೆ ; ಕೆಎಸ್ಸಾರ್ಟಿಸಿ ಉದ್ಯೋಗಿ ಪತಿಯನ್ನು ಬಂಧಿಸಿದ ಪೊಲೀಸರು

Posted by Vidyamaana on 2024-04-01 20:14:15 |

Share: | | | | |


ಕಾಪು ಠಾಣೆ ಮಹಿಳಾ ಪೇದೆ ಆತ್ಮಹತ್ಯೆ ; ಕೆಎಸ್ಸಾರ್ಟಿಸಿ ಉದ್ಯೋಗಿ ಪತಿಯನ್ನು ಬಂಧಿಸಿದ ಪೊಲೀಸರು

ಉಡುಪಿ, ಎ.1: ಕಾಪು ಪೊಲೀಸ್ ಠಾಣೆ ಮಹಿಳಾ ಸಿಬಂದಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. 


ಮಾ.30ರಂದು ಕಾಪು ಠಾಣೆ ಸಿಬಂದಿ, ಬಾಗಲಕೋಟ ಮೂಲದ ಜ್ಯೋತಿ (28) ತನ್ನ ಪೊಲೀಸ್ ಕ್ವಾಟ್ರಸ್ ನಲ್ಲಿ ಸಾವಿಗೆ ಶರಣಾಗಿದ್ದರು. ಇವರ ಪತಿ ರವಿಕುಮಾರ್ ಕೆಎಸ್ಸಾರ್ಟಿಸಿ ಉದ್ಯೋಗಿಯಾಗಿದ್ದು ಬೆಳಗ್ಗೆ ಕೆಲಸಕ್ಕೆ ಹೊರಡುವ ಸಂದರ್ಭದಲ್ಲಿ ಪತ್ನಿ ನೇಣಿಗೆ ಶರಣಾಗಿದ್ದರೆಂದು ತಿಳಿಸಿದ್ದರು.

Recent News


Leave a Comment: