ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಪುತ್ತೂರು ನಗರಸಭೆ ಬೈ ಎಲೆಕ್ಷನ್ ಹೊರಬಿತ್ತು ಬಿಜೆಪಿ ಅಭ್ಯರ್ಥಿಗಳ ಹೆಸರು ಎರಡು ವಾರ್ಡ್ ಗಳಿಗೆ ಕಮಲ ಕಲಿಗಳು ಯಾರು?

Posted by Vidyamaana on 2023-12-14 20:49:14 |

Share: | | | | |


ಪುತ್ತೂರು ನಗರಸಭೆ ಬೈ ಎಲೆಕ್ಷನ್  ಹೊರಬಿತ್ತು ಬಿಜೆಪಿ ಅಭ್ಯರ್ಥಿಗಳ ಹೆಸರು ಎರಡು ವಾರ್ಡ್ ಗಳಿಗೆ ಕಮಲ ಕಲಿಗಳು ಯಾರು?

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ ಎಂದು ತಿಳಿದು ಬಂದಿದೆ.ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ರನ್ನು., ಅದೇ ರೀತಿ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ರವರ ನೇತೃತ್ವದಲ್ಲಿ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.


ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.

ನದಿಯಲ್ಲಿ ಈಜಲು ಹೋದ ಕಾರ್ಕಳದ ಉಪನ್ಯಾಸಕರಿಬ್ಬರು ನಾಪತ್ತೆ: ಒಬ್ಬರ ಶವ ಪತ್ತೆ

Posted by Vidyamaana on 2023-06-18 11:03:17 |

Share: | | | | |


ನದಿಯಲ್ಲಿ ಈಜಲು ಹೋದ ಕಾರ್ಕಳದ ಉಪನ್ಯಾಸಕರಿಬ್ಬರು ನಾಪತ್ತೆ: ಒಬ್ಬರ ಶವ ಪತ್ತೆ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋದ ಉಪನ್ಯಾಸಕರಿಬ್ಬರಲ್ಲಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೀರ್ಥ ಮತ್ತೂರು ಗ್ರಾಮದ ಬಳಿಯ ತುಂಗಾ ನದಿಯಲ್ಲಿ ಈ ಘಟನೆ ನಡೆದಿದೆ.


ಕಾರ್ಕಳದ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರಿಬ್ಬರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದರು. ತುಂಗಾನದಿಯಲ್ಲಿ ಈಜಲು ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ನಿಟ್ಟೆ ಕಾಲೇಜಿನ ಉಪನ್ಯಾಸಕರಾದ 38 ವರ್ಷದ ಪುನೀತ್‌ ಹಾಗೂ 36 ವರ್ಷದ ಬಾಲಾಜಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ, ಒಬ್ಬರು ಉಪನ್ಯಾಸಕರ ಮೃತದೇಹ ಪತ್ತೆಯಾಗಿದ್ದರೆ, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ.


ಪ್ರವಾಸಕ್ಕೆಂದು ಬಂದಿದ್ದ ಉಪನ್ಯಾಸಕರು ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ತಂಗಿದ್ದರು. ಈಜಲು ತೆರಳಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಇಬ್ಬರನ್ನು ಪತ್ತೆಹಚ್ಚಲು ತೀರ್ಥಹಳ್ಳಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆ ಉದ್ಘಾಟನೆ – ಗಣ್ಯರ ಶುಭ ಹಾರೈಕೆ

Posted by Vidyamaana on 2023-10-02 07:44:52 |

Share: | | | | |


ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆ ಉದ್ಘಾಟನೆ – ಗಣ್ಯರ ಶುಭ ಹಾರೈಕೆ

ಸುಳ್ಯ: ಸಮಾಜಕ್ಕೆ ಬೇಕಾದ ಶೈಕ್ಷಣಿಕ ಅವಶ್ಯಕತೆಗಳನ್ನು ಪೂರೈಸುತ್ತಿರುವ ವಿದ್ಯಾಮಾತ ಅಕಾಡೆಮಿ, ಅವಿಭಜಿತ ಜಿಲ್ಲಾಕೇಂದ್ರಗಳಾದ ಮಂಗಳೂರು, ಉಡುಪಿ, ಕುಂದಾಪುರದಲ್ಲೂ ಆರಂಭವಾಗಲಿ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಶುಭಹಾರೈಸಿದರು.

ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಮೂಲಕ ಮನೆ ಮಾತಾಗಿರುವ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಸುಳ್ಯ ರಥಬೀದಿಯ ಟಿಎಪಿಸಿಎಂಎಸ್ ಕಟ್ಟಡದಲ್ಲಿ ಗುರುವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಾದ ಐಎಎಸ್, ಐಪಿಎಸ್ ಮೂಲಕ ನಮ್ಮ ಊರಿನ ಯುವಕರು, ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎನ್ನುವ ಆಶಯದೊಂದಿಗೆ ವಿದ್ಯಾಮಾತಾದ ಭಾಗ್ಯೇಶ್ ರೈ ಕೆಲಸ ನಿರ್ವಹಿಸುತ್ತಿದ್ದಾರೆ. ಶೈಕ್ಷಣಿಕ ಕ್ಷೇತ್ರದ ಅವರ ಎಲ್ಲಾ ಆಶಯಗಳು ಈಡೇರಲಿ ಎಂದು ಹಾರೈಸಿದರು.


ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಪುತ್ತೂರಿನಲ್ಲಿ ಯಶಸ್ವಿ ಸಾಧನೆ ಮಾಡಿ .ಇದೀಗ ಸುಳ್ಯದಲ್ಲಿ ಶಾಖೆಯೊಂದು ಆರಂಭಗೊಂಡಿದೆ ಸಂತಸ. ಸುಳ್ಯ ಶಿಕ್ಷಣ ಕ್ಷೇತ್ರದಲ್ಲಿ ಪುತ್ತೂರಿಗಿಂತಲೂ ಎತ್ತರ ಏರಿದೆ. ಆರ್ಥಿಕ ಸಮಸ್ಯೆಯಿರುವಂತಹ ವಿದ್ಯಾರ್ಥಿಗಳಿಗೂ ಅಕಾಡೆಮಿ ತರಬೇತಿ ನೀಡೋ ಕಾರ್ಯ ಮಾಡುವಲ್ಲಿ ಸೈ ಎನಿಸಿದ್ದು ಮಂಗಳೂರಿನಲ್ಲಿ ಕೂಡ ಶಾಖೆ ಶೀಘ್ರದಲ್ಲೇ ಉದ್ಘಾಟನೆಯಾಗಲಿಯೆಂದು ಹೇಳಿದರು.


ಸುಳ್ಯದ ಟಿ.ಎ.ಪಿ.ಸಿ.ಎಂ.ಎಸ್‌. ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮಾತನಾಡಿ, ಈ ಕಟ್ಟಡದಲ್ಲಿ ಒಳ್ಳೆಯ ತರಬೇತಿ ಕೇಂದ್ರ ಆರಂಭವಾಗಬೇಕುನ್ನುವ ಆಕಾಂಕ್ಷೆಯಿತ್ತು, ಅದು ಈಗ ಭಾಗ್ಯಶ್ ರೈ ಮೂಲಕ ಪೂರ್ಣ ವಾಗಿದೆ. ಐ.ಎ.ಎಸ್,ಕೆ.ಎ.ಎಸ್ ತರಬೇತಿ ಕೇಂದ್ರವೇ ಇಲ್ಲದಿರುವ ಸುಳ್ಯಕ್ಕೆ ಅತ್ಯುತ್ತಮ ಭಾಗ್ಯ ಒದಗಿಬಂದಿದೆ.ಅಕಾಡೆಮಿ ಯೋಜನೆ ಯೋಚನೆ ಹಾಗೂ ವ್ಯವಸ್ಥೆಯಿಂದ ಯಶಸ್ಸು ಸಾಧ್ಯವಾಗಲಿಯೆಂದು ಹೇಳಿದರು.


ವಿದ್ಯಾರ್ಥಿಗಳಿಗೆ, ಸಾಧಕರಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಸನ್ಮಾನ

ಭಾರತೀಯ ಸೇನೆಗೆ ಆಯ್ಕೆಗೊಂಡಿರುವ 2 ಜಿಲ್ಲೆಯ 6 ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದ ಸಾಧಕರೂ ಹಾಗೂ ಅಕಾಡೆಮಿಯ ಸಿಬ್ಬಂದಿ ವರ್ಗಕ್ಕೆ ಅತಿಥಿಗಳ ಮುಖೇನ ಸನ್ಮಾನ ಕಾರ್ಯಕ್ರಮ ನಡೆಯಿತು

ಭಾಗ್ಯಶ್ ರೈಯವರ ತಂದೆ-ತಾಯಿ ಎ.ಕೆ.ತಿಮ್ಮಪ್ಪ ರೈ  ಪುತ್ರಿ ದೇವಿದ್ಯಾ ರೈ,ಕೊಳ್ತಿಗೆ ಕೆಳಗಿನ ಮನೆ ಮತ್ತು ರತ್ನಾವತಿ ಟಿ.ರೈ, ಮಾಜಿ ವಿಧಾನ ಪರಿಷತ್‌ ಸದಸ್ಯ ಅಣ್ಣಾ ವಿನಯಚಂದ್ರ, ಪಿ.ಸಿ.ಜಯರಾಮ್, ಜಯಪ್ರಕಾಶ್ ರೈ, ಪ್ರೊ| ಬಾಲಚಂದ್ರ ಗೌಡ, ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಮಾಜಿ ನಗರ ಕಾಂಗ್ರೆಸ್‌ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್, ಗಣೇಶ್ ಶೆಟ್ಟಿ, ಲಯನ್ಸ್ ಪುತ್ತೂರ್ದ ಮುತ್ತು ಅಧ್ಯಕ್ಷ ರವೀಂದ್ರ ಪೈ, ರವಿಪ್ರಸಾದ್ ಶೆಟ್ಟಿ, ಶ್ರೀಪ್ರಸಾದ್ ಪಾಣಾಜೆ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್‌.ಬಿ.ಜಯರಾಮ್ ರೈ, ಪಿ.ಎಸ್.ಗಂಗಾಧರ್, ಭಾಗ್ಯಶ್ ರೈ ಸಹೋದರ ಯೋಗೀಶ್ ರೈ ಮತ್ತು ಚಿಕ್ಕಪ್ಪ ಎ.ಕೆ.ಜಯರಾಮ ರೈ, ಅತ್ತೆ-ಮಾವ ಸಂಕಪ್ಪ ಶೆಟ್ಟಿ ಹಾಗೂ ಪ್ರೇಮಾ ಎಸ್ ಶೆಟ್ಟಿ, ಟಿಎಪಿಸಿಎಂಎಸ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ ದೇರಪ್ಪಜ್ಜನಮನೆ, ಅರವಿಂದ ಚೊಕ್ಕಾಡಿ, ಡಾ| ಪೂವಪ್ಪ ಕಣಿಯೂರು, ವಿನಯ ಕಂದಡ್ಕ, ಪಿ.ಬಿ.ಸುಧಾಕರ ರೈ,ಸುಭಾಶ್ಚಂದ್ರ ರೈ ಸಾರ್ಯ, ಹರಿನಾಥ ರೈ ಕೂಡೇಲು, ವಿದ್ಯಾಮಾತಾ ಅಕಾಡೆಮಿ ಇದರ ಬೋಧಕ ಹಾಗೂ ಬೋಧಕೇತರ ವೃಂದ, ವಿದ್ಯಾರ್ಥಿಗಳ ಸಹಿತ ಹಲವರು ಹಾಜರಿದ್ದರು. ಭಾಗ್ಯಶ್ ರೈ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ನಿರೂಪಿಸಿ, ಅಕಾಡೆಮಿಯ ಸಂಚಾಲಕಿ ರಮ್ಯಾ ಭಾಗೇಶ್ ರೈ ವಂದಿಸಿದರು.ಕಾರ್ಯಕ್ರಮದ ನಡುವೆ ಪುತ್ತೂರಿನ ವಿಶ್ವ ಕಲಾ ನಿಕೇತನ ತಂಡದಿಂದ ನೃತ್ಯ ಕಾರ್ಯಕ್ರಮ ನೆರವೇರಿತು. ಇದಕ್ಕೂ ಮೊದಲು ವೇದಿಕೆ ಮುಂಭಾಗದ ನಟರಾಜ ಮೂರ್ತಿಗೆ ಗೌರವ ಅರ್ಪಣೆ ನೆರವೇರಿತು. ಸಂಜೆ ದುರ್ಗಾ ನಮಸ್ಕಾರವೂ ನಡೆಯಿತು.

ವಿದ್ಯಾಮಾತಾ ಅಕಾಡೆಮಿ:

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯು ಕಳೆದ 5 ವರ್ಷಗಳಲ್ಲಿ 4000 ಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗುವ ಅವಕಾಶವನ್ನು ಮಾಡಿಕೊಟ್ಟಿದೆ. ಪುತ್ತೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಂಸ್ಥೆ ಇದೀಗ ಸುಳ್ಯದಲ್ಲಿ ಶಾಖೆಯನ್ನು ತೆರೆದಿದೆ.

ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಅವರು 2017ರಲ್ಲಿ ಪುತ್ತೂರಿನಲ್ಲಿ ವಿದ್ಯಾಮಾತಾ ಫೌಂಡೇಶನ್ 2017ನ್ನು ಹುಟ್ಟು ಹಾಕಿದರು. 2020ರಲ್ಲಿ ವಿದ್ಯಾಮಾತಾ ಅಕಾಡಮಿ ಸ್ಥಾಪಿಸಿ ಸರ್ಕಾರದ ಮಾನ್ಯತೆ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಆರಂಭಿಸಿದರು.ಕಳೆದ ಎರಡು ವರ್ಷಗಳಲ್ಲಿ 90 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸರ್ಕಾರಿ ಸೇವೆಗೆ ಸೇರುವಂತೆ ತರಬೇತು ಮಾಡಿದ್ದಾರೆ. ಸುಮಾರು 4000 ಕ್ಕೂ ಅಧಿಕ ಮಂದಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಲಭ್ಯವಾಗುವಂತೆ ಅವಕಾಶ ಕಲ್ಪಿಸಿದ್ದಾರೆ. ಸುಳ್ಯ ತಾಲೂಕಿನಲ್ಲಿ ಇದೀಗ ಶಾಖೆ ಆರಂಭಿಸಿದ್ದಾರೆ. ಎಲ್ಲಾ ವೃತ್ತಿಪರ ಕೋರ್ಸ್ ಗಳ ಅರ್ಜಿ,ಉದ್ಯೋಗ ಮಾಹಿತಿ,ತರಬೇತಿ, ಎಲ್ಲಾ ಶ್ರೇಣಿಯ ಉದ್ಯೋಗಗಳಿಗೆ ತರಬೇತಿ ಈ ಸಂಸ್ಥೆಯಲ್ಲಿ ಸಿಗುತ್ತದೆ.

ಸಂಪಾಜೆ : ಸರಕಾರಿ ಬಸ್-ಕಾರು ಭೀಕರ ಅಪಘಾತ; ಆರು ಮಂದಿ ದುರ್ಮರಣ; ಇಬ್ಬರು ಗಂಭೀರ

Posted by Vidyamaana on 2023-04-14 10:28:38 |

Share: | | | | |


ಸಂಪಾಜೆ : ಸರಕಾರಿ ಬಸ್-ಕಾರು ಭೀಕರ ಅಪಘಾತ; ಆರು ಮಂದಿ ದುರ್ಮರಣ; ಇಬ್ಬರು ಗಂಭೀರ

ಸುಳ್ಯ: ಸಂಪಾಜೆಯಲ್ಲಿ ಸರಕಾರಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಎ.14ರ ಶುಕ್ರವಾರ ನಡೆದಿದೆ.

ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಮೂರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಒಂದು ಮಗು ಹಾಗೂ ಒಬ್ಬ ಪುರುಷ ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಮಂಡ್ಯ ಮೂಲದ ಕಾರು ಇದು ಎನ್ನಲಾಗಿದ್ದು, ಗಂಭೀರ ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟ ಮೃತದೇಹಗಳನ್ನು  ಖಾಸಗಿ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತರ ಹಾಗೂ ಗಾಯಾಳುಗಳ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

ಉಡುಪಿ: ವಾರದ ಬಳಿಕ ಪತ್ತೆಯಾಯ್ತು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ

Posted by Vidyamaana on 2023-07-30 07:59:14 |

Share: | | | | |


ಉಡುಪಿ: ವಾರದ ಬಳಿಕ ಪತ್ತೆಯಾಯ್ತು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ

ಕುಂದಾಪುರ: ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.

ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು 23 ವರ್ಷದ ಶರತ್ ಕುಮಾರ್ ಸ್ನೇಹಿತನೊಂದಿಗೆ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು.


ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸಿದ್ದವು. ಆದರೆ ತೀವ್ರ ಮಳೆ ಮತ್ತು ನೀರಿನ ರಭಸದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿತ್ತು. ಇದೀಗ ವಾರದ ಬಳಿಕ ಜುಲೈ 30ರಂದು ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.


ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್‌), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್‌ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸಿದ್ದರು. ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತುಶರತ್‌ ಪತ್ತೆಗಾಗಿ ಜಲಪಾತ ಹರಿದು ಬರುವ ಬೇರೆ ಬೇರೆ ಕಡೆಗಳಲ್ಲಿ ಸಾಗರ ಬಾರಕೂರು ಅವರ ನೇತೃತ್ವದಲ್ಲಿ ಡ್ರೋನ್‌ ಕೆಮರಾದ ಮೂಲಕ ಹುಡುಕುವ ಪ್ರಯತ್ನ ಮಾಡಲಾಗಿತ್ತು

Watch Video:ಸಾವು ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ?

Posted by Vidyamaana on 2024-06-07 16:38:03 |

Share: | | | | |


Watch Video:ಸಾವು ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ?

ಕೇರಳ: ಅಯ್ಯೋ ನನ್ನ ಸಾವು ಕಣ್ಣೆದುರೇ ಪಾಸ್ ಆದಂತೆ ಆಯ್ತು. ಆ ಘಟನೆಯಿಂದ ನಾನು ಬದುಕಿ ಬಂದಿದ್ದೇ ಪವಾಡ ಹಾಗೆ ಹೀಗೆ ಅಂತ ಹೇಳೋದನ್ನು ಕೇಳಿದ್ದೀರಿ. ಆದ್ರೇ ಇಲ್ಲೊಬ್ಬ ಸಾವಿನಿಂದ ಜಸ್ಟ್ ಮಿಸ್ ಆಗಿದ್ದಾರೆ. ಕಂಡೆಕ್ಟರ್ ಸಹಾಯದಿಂದ ಬದುಕಿ ಬಂದ ಬಡಜೀವದ ಬಗ್ಗೆ ಮುಂದೆ ಓದಿ.

ಕೇರಳದ ಮಲಬಾರ್ ಬಸ್ ನಲ್ಲಿ ವ್ಯಕ್ತಿಯೊಬ್ಬ ಪ್ರಯಾಣಿಸುತ್ತಿದ್ದನು. ಬಸ್ಸಿನ ಡೋರ್ ಬಳಿಯಲ್ಲೇ ನಿಂತು, ಟಿಕೆಟ್ ಖರೀದಿಸಲು ಮುಂದಾಗಿದ್ದಾನೆ. ಬಸ್ ಕಂಡಕ್ಟರ್ ತನ್ನ ಪಾಡಿಗೆ ತಾನು ಡೋರ್ ಸಮೀಪವೇ ನಿಂತಿದ್ದಂತ ವ್ಯಕ್ತಿಗೆ ಟಿಕೆಟ್ ಕೊಡೋದಕ್ಕೆ ಮುಂದಾಗಿದ್ದಾನೆ.

Recent News


Leave a Comment: