ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಮಂಗಳೂರು: SDPI ರಾಷ್ಟ್ರೀಯ ಅಧ್ಯಕ್ಷರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

Posted by Vidyamaana on 2023-05-05 08:31:45 |

Share: | | | | |


ಮಂಗಳೂರು:  SDPI ರಾಷ್ಟ್ರೀಯ ಅಧ್ಯಕ್ಷರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿಯವರು ಇಂದು ಮಂಗಳೂರಿಗೆ ಆಗಮಿಸಿದರು.

ಬಜಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಬಜಪೆ ಪಟ್ಟಣದವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ರಾಜ್ಯ ಚುನಾವಣಾ ಸಹ ಉಸ್ತುವಾರಿ ನವಾಝ್ ಉಳ್ಳಾಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ  ಜಮಾಲ್ ಜೋಕಟ್ಟೆ, ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಮೂಡಬಿದ್ರೆ ಕ್ಷೇತ್ರಾಧ್ಯಕ್ಷರಾದ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು ಹಾಗೂ ಇತರ ನಾಯಕರು ಉಪಸ್ಥಿತರಿದ್ದರು

ಇಂದು ಮತ್ತು ನಾಳೆ ಉಳ್ವಾಲ, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ನಡೆಯುವ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಎಂ.ಕೆ ಫೈಝಿಯವರು ಭಾಗವಹಿಸಲಿದ್ದಾರೆ.

ಬೆದ್ರಾಳ ಎಸ್. ಇಸ್ಮಾಯಿಲ್ ಹಾಜಿ ನಿಧನ

Posted by Vidyamaana on 2023-08-21 10:11:13 |

Share: | | | | |


ಬೆದ್ರಾಳ ಎಸ್. ಇಸ್ಮಾಯಿಲ್ ಹಾಜಿ ನಿಧನ

ಪುತ್ತೂರು: ಮುಕ್ವೆ ಜಮಾಅತ್ ಗೆ ಒಳಪಟ್ಟ ಬೆದ್ರಾಳ ನಿವಾಸಿ, ಮುಕ್ವೆ ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಎಸ್. ಇಸ್ಮಾಯಿಲ್ ಹಾಜಿ ಯಾನೆ ಶಿಬರ ಮೋನುಚ್ಚ (84 ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಆ. 21ರಂದು ಬೆದ್ರಾಳದ ಸ್ವಗೃಹದಲ್ಲಿ ನಿಧನರಾದರು.

ಇವರು ಹಲವಾರು ವರ್ಷಗಳ ಕಾಲ ಮುಕ್ವೆ ಜುಮಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಅವರು, ಸಮುದಾಯ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮೃತರು  ಪತ್ನಿ, ಪುತ್ರ ಅಬ್ದುಲ್ ರಹಿಮಾನ್,

 ಪುತ್ರಿಯರನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.


ಶಾಸಕರಿಂದ ವಾರ್ಡ್ 1 ರಲ್ಲಿ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-12-18 20:41:17 |

Share: | | | | |


ಶಾಸಕರಿಂದ ವಾರ್ಡ್ 1 ರಲ್ಲಿ ಚುನಾವಣಾ ಪ್ರಚಾರ ಸಭೆ

ಪುತ್ತೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಸೇವೆ, ಪ್ರತೀ ಮಹಿಳೆಯರಿಗೆ ತಿಂಗಳಿಗೆ 2000 ,ಯುವನಿಧಿ ಮತ್ತು ಪಡಿತರ ಹಣವನ್ನು ಪ್ರತೀ ಬಿಪಿಎಲ್ ಕುಟುಂಬಕ್ಕೆ ನೀಡಿದೆ,ಇದುವರೆಗೆ ಬಂದ ಸರಕಾರ ಯಾವ ಕೊಡುಗೆಯನ್ನೂ ನೀಡಿಲ್ಲ, ಕಾಂಗ್ರೆಸ್ ಕೊಟ್ಟ ಮಾತನ್ನು ಎಂದೂ ತಪ್ಪುವುದಿಲ್ಲ, ನಗರಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ಮತದಾರರಲ್ಲಿ ಶಾಸಕರಾದ ಅಶೋಕ್ ರೈ ಮನವಿ ಮಾಡಿದರು.

ಒಂದನೇ ವಾರ್ಡು ವ್ಯಾಪ್ತಿಯ ನೆಹರೂ ನಗರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಪುತ್ತೂರು ನಗರಸಭೆಯ ಪ್ರತೀ ವಾರ್ಡುಗಳಲ್ಲಿ ಅಭಿವೃದ್ದಿ ಕೆಲಸಗಳನ್ನು ಮಾಡುತ್ತೇವೆ, ನಗರಸಭಾ ವ್ಯಾಪ್ತಿಯಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಕುರಿತು ಈಗಾಗಲೇ 1000 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದ ಶಾಸಕರು ನಗರಸಭಾ ವ್ಯಾಪ್ತಿಯಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು.

ಬಡವರ ಪರ ಇರುವ ಕಾಂಗ್ರೆಸ್ ಎಂದಿಗೂ ಅಭಿವೃದ್ದಿಯ ಪರವೇ ಆಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನುಡಿದಂತೆ ನಡೆಯುವ ಸೀಎಂ. ಕಾಂಗ್ರೆಸ್ ವಿರುದ್ದ ಅಪಪ್ರಚಾರ ಮಾಡುವವರಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಬಗ್ಗೆ ತಿಳಿಸಿ. ಪ್ರತೀ ಕುಟುಂಬಕ್ಕೂ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತಿರುವುದು ದೇಶದಲ್ಲೇ ಮೊದಲ ಯೋಜನೆಯಾಗಿದೆ. ಮಹಿಳೆಯರು ಇಡೀ‌ರಾಜ್ಯಾದ್ಯಂತ ಸರಕಾರಿ ಬಸ್ ನಲ್ಲಿ ಉಚಿತ ಸಂಚಾರ ಮಾಡಬಹುದಾಗಿದೆ. ಪುತ್ತೂರಿಗೆ ಕೆಎಂಎಫ್ ಯೋಜನೆಯನ್ನು ತರುವ ಮೂಲಕ ಪುತ್ತೂರಿನ ಯುವಕರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಲಿದೆ. 94 ಸಿ ಮತ್ತು ಸಿ ಸಿ ಯಾವುದೇ ಭೃಷ್ಡಾಚಾರವಿಲ್ಲದೆ ನೀಡಲಾಗುತ್ತಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜನ ನೆಮ್ಮದಿಯಿಂದ ಇದ್ದಾರೆ.ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೊಡುಗೆ ಅನುದಾನವನ್ನು ನೀಡುವ ಮೂಲಕ ಅಭಿವೃದ್ದಿ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು. ಸರಕಾರದ ಉಚಿತ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾದ ಎಲ್ಲರೂ ಕಾಂಗ್ರೆಸ್ ಬೆಂಬಲಿಸುವ ಮೂಲಕ ಕಾಂಗ್ರೆಸ್ ಗೆ ಶಕ್ತಿ ನೀಡಬೇಕು. ಮತದಾರ ಶಕ್ತಿ ನೀಡಿದರೆ ಇನ್ನೂ ಹೆಚ್ಚಿನ ಅಭಿವೃದ್ದಿ ಕೆಲಸ ಮಾಡಲು ಉತ್ತೇಜನ ನೀಡಿದಂತಾಗುತ್ತದೆ ಎಂದು ಶಾಸಕರು ಹೇಳಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಮುರಳೀಧರ್ ರೈ ಮಟಂತಬೆಟ್ಟು, ಚಂದ್ರಹಾಸ ಶೆಟ್ಟಿ, ಕೃಷ್ಣಪ್ರಸಾದ್ ಳ್ವ, ರೋಶನ್ ರೈ ಬನ್ನೂರು,ರಾಧಾಕೃಷ್ಣ ನಾಯ್ಕ್, ಜಯಪ್ರಕಾಶ್ ಬದಿನಾರ್, ರಂಜಿತ್ ಬಂಗೇರ,ಈಶ್ವರ ಭಟ್ ಪಂಜಿಗುಡ್ಡೆ, ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ರಾಮಣ್ಣ ಪಿಲಿಂಜ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು. ನಗರ ಕಾಂಗ್ರೆಸ್ ಅಧ್ಯಕ್ಷರಾದ‌ ಮಹಮ್ಮದ್ ಆಲಿ .ಸ್ವಾಗತಿಸಿದರು 

ಮೇ 21: ಪುತ್ತಿಲ ಅಭಿಮಾನಿಗಳಿಂದ ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ

Posted by Vidyamaana on 2023-05-16 03:26:05 |

Share: | | | | |


ಮೇ 21: ಪುತ್ತಿಲ ಅಭಿಮಾನಿಗಳಿಂದ ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ

ಪುತ್ತೂರು: ಪುತ್ತಿಲ ಅಭಿಮಾನಿಗಳಿಂದ ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ ಎನ್ನುವ ಹೆಸರಿನಲ್ಲಿ ಕಾಲ್ನಡಿಗೆ ಜಾಥಾವನ್ನು ಮೇ 21ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ. ದರ್ಬೆ ವೃತ್ತದಿಂದ‌ ಹೊರಡುವ ಜಾಥಾ ಮುಖ್ಯರಸ್ತೆಯಾಗಿ ಸಂಚರಿಸಿ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಮಾಪನಗೊಳ್ಳಲಿದೆ.

ಕಾಲ್ನಡಿಗೆ ಜಾಥಾದ ಬಳಿಕ ದೇವಸ್ಥಾನದ ವಠಾರದಲ್ಲಿ ಬೃಹತ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಚುನಾವಣೆ ಬಳಿಕ ಪುತ್ತಿಲ ಅಭಿಮಾನಿಗಳು ಎಂಪಿ ಫಾರ್ ಪುತ್ತಿಲ ಅಭಿಯಾನ‌ ಕೈಗೊಂಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪುತ್ತೂರಿಗೆ ಪುತ್ತಿಲ ಘೋಷ ವಾಕ್ಯ ಹತ್ತೂರಿಗೆ ಪುತ್ತಿಲ ಎಂಬುದಾಗಿ ಪರಿವರ್ತನೆಯಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಮೇ 21ರಂದು ನಡೆಯುವ ಕಾಲ್ನಡಿಗೆ ಜಾಥಾ ಹಾಗೂ ಬೃಹತ್ ಕಾರ್ಯಕರ್ತರ ಸಭೆ ಮಹತ್ವ ಪಡೆದುಕೊಂಡಿದೆ.

ವಿಧಾನಸಭಾ ಚುನಾವಣೆಯಲ್ಲಿ ವೀರೋಚಿತ ಸೋಲು ಅನುಭವಿಸಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಚುನಾವಣೆಯ ಬಳಿಕ ತಮ್ಮ ಅಭಿಮಾನಿಗಳ ಸಂಖ್ಯೆಯನ್ನು ಇನ್ನೂ ಹೆಚ್ಚಿಸಿಕೊಂಡಿದ್ದಾರೆ. ಸರ್ವಧರ್ಮೀಯರು ಪುತ್ತಿಲ ಅಭಿಮಾನಿಗಳಾಗಿರುವುದು ಕಾಂಗ್ರೆಸ್ ವಿಜಯೋತ್ಸವದ ವೇಳೆಯೇ ಗಮನಕ್ಕೆ ಬಂದಿತ್ತು.

ಬಂಟ್ವಾಳ : ವಗ್ಗ ಮನೆಯವರಿಗೆ ಬೆದರಿಸಿ ದರೋಡೆಗೈದ ಪ್ರಕರಣ

Posted by Vidyamaana on 2024-01-22 21:54:00 |

Share: | | | | |


ಬಂಟ್ವಾಳ : ವಗ್ಗ ಮನೆಯವರಿಗೆ ಬೆದರಿಸಿ ದರೋಡೆಗೈದ ಪ್ರಕರಣ

ಬಂಟ್ವಾಳ: ದರೋಡೆಕೋರರ ತಂಡವೊಂದು ಮಾರಾಕಾಸ್ತ್ರಗಳೊಂದಿಗೆ ನುಗ್ಗಿ ಮನೆಯವರನ್ನು ಬೆದರಿಸಿ ಸುಮಾರು ರೂ.3,15,000 ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ ಘಟನೆ ದ.ಕ.ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ರ ಸಮೀಪದ ಮೇನಾಡು ಎಂಬಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳದ ಮರಿಟಾ ಸಿಂಥಿಯಾ ಪಿಂಟೋ ಎಂಬವರ ವಾಸದ ಮನೆಗೆ ದಿನಾಂಕ 11-01-2024 ರಂದು ಮುಂಜಾನೆ 6-15 ಗಂಟೆಗೆ ದರೋಡೆಕೋರರ ತಂಡವೊಂದು ಮಾರಾಕಾಸ್ತ್ರಗಳೊಂದಿಗೆ ನುಗ್ಗಿ ಮನೆಯವರನ್ನು ಬೆದರಿಸಿ ಸುಮಾರು ರೂ.3,15,000 ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಕುರಿತಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ๒.:03/2024 : 395, 397, 411 ... ರಂತೆ ಪುಕರಣ ದಾಖಲಾಗಿತ್ತು.ಯಾವುದೇ ಸಣ್ಣ ಸುಳಿವುಗಳೇ ಇಲ್ಲದ ಈ ದರೋಡೆ ಪ್ರಕರಣವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಗೆ ಒಂದು ಸವಾಲು ಆಗಿತ್ತು. ಪ್ರಕರಣದ ಗಂಭೀರತೆಯನ್ನು ಮನಗಂಡು ಶ್ರೀ ರಿಷ್ಯಂತ್, ಐಪಿಎಸ್. ಪೊಲೀಸ್ ಅಧೀಕ್ಷಕರು, ದ.ಕ.ಜಿಲ್ಲೆ ರವರು ಶ್ರೀ ಧರ್ಮಪ್ಪ, ಮತ್ತು ಶ್ರೀ ರಾಜೇಂದ್ರ, ಹೆಚ್ಚುವರಿ ಪೊಲೀಸ್ ಅಧೀಕ್ಷಕರವರುಗಳ ಸಹಭಾಗಿತ್ವದಲ್ಲಿ, ಶ್ರೀ. ಎಸ್. ವಿಜಯ ಪ್ರಸಾದ್, ಡಿ.ವೈ.ಎಸ್.ಪಿ. ಬಂಟ್ವಾಳ ರವರ ನೇತೃತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕರಾದ ಶ್ರೀ ಶಿವಕುಮಾರ ಬಿ, ಶ್ರೀ ನಂದಕುಮಾ‌ರ್, ಪಿ.ಎಸ್.ಐ. ಪುಂಜಾಲಕಟ್ಟೆ, ಶ್ರೀ ಹರೀಶ ಎಂ.ಆರ್. ಪಿ.ಎಸ್.ಐ. ಬಂಟ್ವಾಳ ಗ್ರಾಮಾಂತರ ಠಾಣೆರವರ 3 ವಿಶೇಷ ಪತ್ತೆ ತಂಡಗಳನ್ನು ರಚಿಸಿ ಸದ್ರಿ ತಂಡಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ, ನುರಿತ ಅಪರಾಧ ವಿಭಾಗದ ಸಿಬ್ಬಂದಿಗಳಾದ ಎ.ಎಸ್.ಐ. ಗಿರೀಶ್, ಹೆಚ್.ಸಿ. ಗಳಾದ ಸುಜು, ರಾಧಾಕೃಷ್ಣ, ಉದಯ ರೈ, ಅದ್ರಾಮ, ಪ್ರವೀಣ್ ರೈ, ಪ್ರವೀಣ್, ಸಂದೀಪ್, ರಾಹುಲ್, ಇರ್ಷಾದ್, ರಾಜೇಶ್, ಹರಿಶ್ಚಂದ್ರ, ಪಿ.ಸಿ.ಗಳಾದ ಪುನೀತ್, ರಮ್ಯಾನ್, ಯೋಗೇಶ್ ಡಿ.ಎಲ್, ಕುಮಾರ್ ಹೆಚ್. ಕೆ., ವಿನಾಯಕ ಬಾರ್ಕಿ, ಜಗದೀಶ ಅತ್ತಾಜೆ, ಜಮೀ‌ರ್ ಕಲಾರಿ, ಎ.ಹೆಚ್.ಸಿ.ಗಳಾದ ಕುಮಾ‌ರ್, ಮಹಾಂತೇಶ್‌, ಜಿಲ್ಲಾ ಪೊಲೀಸ್ ಕಚೇರಿಯ ಗಣಕಯಂತ್ರ ವಿಭಾಗದ ದಿವಾಕರ್, ಸಂಪತ್ ರವರನ್ನು ನೇಮಕ ಮಾಡಿದ್ದರು.ಇಲಾಖಾ ಮೇಲಾಧಿಕಾರಿಗಳ ಅತ್ಯಂತ ಅನುಭವಿ ಹಾಗು ಸಮಯೋಚಿತ ಮಾರ್ಗದರ್ಶನ, ಸಲಹೆ ಸೂಚನೆ ಮತ್ತು ನಿರಂತರ ನಿಗಾವಣೆಯಲ್ಲಿ ಸದ್ರಿ ವಿಶೇಷ ಪತ್ತೆ ತಂಡವು ತನ್ನ ನಿರಂತರ ಹಾಗು ಶ್ರಮಭರಿತ ಪ್ರಯತ್ನದಿಂದ ಸದ್ರಿ ದರೋಡೆ ಪ್ರಕರಣವನ್ನು ಭೇಧಿಸಿ ದರೋಡೆಕೋರರನ್ನು ಬಂಧಿಸಿ ದರೋಡೆಗೊಳಗಾದ ರೂ.3,15,000 ಮೌಲ್ಯದ ಚಿನ್ನಾಭರಣ ಹಾಗು ದರೋಡೆಗೆ ಬಳಸಿದ ಒಂದು ಇನ್ನೋವಾ ಕಾರು ಅಂದಾಜು ಮೌಲ್ಯ ರೂ.8 ಲಕ್ಷ ಹಾಗು ಟಾಟಾ ಇಂಡಿಕಾ ಕಾರು ಅಂದಾಜು ಮೌಲ್ಯ ರೂ.2 ಲಕ್ಷ ಇವುಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿ ಆಗಿರುತ್ತಾರೆ.


ದರೋಡೆಕೋರರನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಸುರೇಶ ನಾಯ್ಕ ಅವರ ಮಗ ಗಣೇಶ ನಾಯ್ಕ (26) ದಿನೇಶ್ ನಾಯ್ಕ (22), ಮಂಗಳೂರು ತಾಲೂಕು, ಐಕಳ ಗ್ರಾಮದ ಜಯರಾಜ್ ಶೆಟ್ಟಿ ಅವರ ಮಗ ಸಾಗರ ಶೆಟ್ಟಿ (21), ಕಡಬ ತಾಲೂಕು, ಬೆಳಂದೂ ಗ್ರಾಮದ, ವಿನ್ಸಿ ಲ್ಯಾನ್ಸಿ ಪಿಂಟೋ ಅವರ ಮಗ ರಾಕೇಶ್ ಎಲ್. ಪಿಂಟೋ (29), ವಾಸು ಸಾಲ್ಯಾನ್ ಅವರ ಮಗ ಪ್ರವೀಣ್ (36), ಅಣ್ಣಿ ಪೂಜಾರಿ ಅವರ ಮಗ ಸುಧೀರ್ (29) ಎಂದು ಗುರುತಿಸಲಾಗಿದೆ.ಇನ್ನು ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದಾತ


ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದವನಾದ ಪ್ರಸ್ತುತ ಗೌರಿ ಕಾಲುವೆ, ಚಿಕ್ಕಮಗಳೂರು ಜಿಲ್ಲೆ ವಾಸಿ ಮಹಮ್ಮದ್ ಹನೀಫ್ (49). ಸದ್ರಿ ಆರೋಪಿಗಳ ಪೈಕಿ ಗಣೇಶ ನಾಯ್ಕ ಈತನು 2023ನೇ ಸಾಲಿನಲ್ಲಿ ಮಂಗಳೂರು 

ನಗರ ವ್ಯಾಪ್ತಿಯ ಮುಲ್ಕಿ, ಐಕಳ ಹರೀಶ್ ಶೆಟ್ಟಿರವರ ಮನೆಯಿಂದ ಅಪಾರ ಮೊತ್ತದ ನಗದು, ಚಿನ್ನಾಭರಣ, ವಜ್ರ ಕಳವು ಮಾಡಿದ ಮುಖ್ಯ ಆರೋಪಿಯಾಗಿದ್ದು, ಉಳಿದಂತೆ 

ಸೀತಾರಾಮ, ಪ್ರವೀಣ್, ಸುಧೀರ್ ಹಾಗು ಮಹಮ್ಮದ್ ಹನೀಫ್ ರವರ ವಿರುದ್ಧ ದ.ಕ.ಜಿಲ್ಲೆ ಹಾಗು ಇನ್ನಿತರ ಜಿಲ್ಲೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿರುವ ಬಗ್ಗೆ ತನಿಖೆಯಿಂದ ತಿಳಿದು ಬಂದಿರುತ್ತದೆ.


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಈ ಪತ್ತೆ ಕಾರ್ಯಕ್ಕೆ ಇಲಾಖಾ ಮೇಲಾಧಿಕಾರಿಗಳು ಮೆಚ್ಚುಗೆಯನ್ನು ಸೂಚಿಸಿ ಬಹುಮಾನವನ್ನು ಘೋಷಿಸಿರುತ್ತಾರೆ ಹಾಗು ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿರುತ್ತದೆ

ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ಜಂಬೂರಾಜ್ ಮಹಾಜನ್ ನೇಮಕ

Posted by Vidyamaana on 2023-12-02 14:06:13 |

Share: | | | | |


ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ಜಂಬೂರಾಜ್ ಮಹಾಜನ್ ನೇಮಕ

ಪುತ್ತೂರು: ಡಿ.ಸಿ.ಆ‌ರ್.ಬಿ. ಚಿಕ್ಕಮಗಳೂರು

ಘಟಕದಲ್ಲಿದ್ದ ಜಂಬೂರಾಜ್ ಮಹಾಜನ್ ಅವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಆಗಿ ನೇಮಕಗೊಳಿಸಿ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಆದೇಶಿಸಿದ್ದಾರೆ.


ಇವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು.ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿದ್ದ ಧನಂಜಯ ಬಿ.ಸಿ. ಅವರು ಪಶ್ಚಿಮ ವಲಯ ಕಚೇರಿಗೆ ಸ್ಥಳಾಂತರಗೊಂಡಿದ್ದು, ತೆರವಾದ ಹುದ್ದೆಗೆ ಜಂಬೂರಾಜ್ ಮಹಾಜನ್ ವರ್ಗಾವಣೆಗೊಂಡಿದ್ದಾರೆ.



Leave a Comment: