Posted by vidyamaana on 2023-06-29 12:19:28 |
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ ಮುಸ್ಲಿಂ ಮಗುವೊಂದು ಮೃತಪಟ್ಟಿದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.
Posted by Vidyamaana on 2023-12-30 22:43:45 |
ಉಡುಪಿ, ಡಿ.30: ನಗರದ ಪ್ರಸಿದ್ದ ಬಟ್ಟೆ ಮಳಿಗೆ ಜಯಲಕ್ಷ್ಮಿ ಸಿಲ್ಕ್ಸ್ ನಲ್ಲಿ ಶನಿವಾರ ಮಧ್ಯಾಹ್ನ ಗನ್ ಮಿಸ್ ಫೈರಿಂಗ್ ಆಗಿದ್ದು ಸಿಬ್ಬಂದಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.
ಬಟ್ಟೆ ಮಳಿಗೆಯಲ್ಲಿ ಗ್ರಾಹಕರು ಯಾರೋ ಗನ್ ಬಿಟ್ಟು ಹೋಗಿದ್ದಾರೆ ಎನ್ನಲಾಗುತ್ತಿದ್ದು ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್ ವಶಕ್ಕೆ ಪಡೆದುಕೊಂಡಿದ್ದಾರೆ. ಗನ್ ಯಾರಿಗೆ ಸೇರಿದ್ದು, ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2023-12-08 04:24:07 |
ಮಂಗಳೂರು: ರಾಯಲ್ ಟ್ರಾವಂಕೂರ್ ಹೆಸರಿನ ಹಣಕಾಸು ಸಂಸ್ಥೆಯಲ್ಲಿ ಠೇವಣಿದಾರರಿಗೆ ವಂಚನೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಹಣ ಕಳಕೊಂಡ ಗ್ರಾಹಕರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಮಂಗಳೂರು ನಗರದ ಪಿವಿಎಸ್ ವೃತ್ತದಲ್ಲಿ ರಾಯಲ್ ಟ್ರಾವಂಕೂರ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಹೆಸರಿನ ಹಣಕಾಸು ಸಂಸ್ಥೆಯಿದ್ದು, ಸೊಸೈಟಿ ಮಾದರಿಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಸರಿಯಾಗಿ ಒಂದು ವರ್ಷದ ಹಿಂದೆ ಮಂಗಳೂರಿನಲ್ಲಿ ಹೊಸ ಕಚೇರಿ ಆರಂಭಗೊಂಡಿತ್ತು. ಮಂಗಳೂರಿನಲ್ಲಿ ಪ್ರತಿ ದಿನ ಪಿಗ್ಮಿ ಕಲೆಕ್ಷನ್ ಆಗುತ್ತಿದ್ದರಿಂದ ಹೆಚ್ಚಾಗಿ ಅಂಗಡಿ, ವ್ಯಾಪಾರಸ್ಥರೇ ಇದರ ಗ್ರಾಹಕರಾಗಿದ್ದರು.ಹಂಪನಕಟ್ಟೆಯ ದುಬೈ ಮಾರ್ಕೆಟ್ ನಲ್ಲಿ ಮೊಬೈಲ್ ಅಂಗಡಿ ಹೊಂದಿರುವ ಅಬ್ದುಲ್ ಅಜೀಜ್ ಎಂಬವರು 70 ಸಾವಿರ ಕಳಕೊಂಡಿದ್ದು, ಆಯುಕ್ತರಿಗೆ ದೂರು ನೀಡಲು ಹೋದವರಲ್ಲಿ ಒಬ್ಬರು. ಅವರು ಹೇಳುವ ಪ್ರಕಾರ, ಹಂಪನಕಟ್ಟೆಯಲ್ಲೇ 100ಕ್ಕೂ ಹೆಚ್ಚು ಗ್ರಾಹಕರಿದ್ದು, ದಿನವೂ ಒಂದಷ್ಟು ದುಡ್ಡು ಉಳಿತಾಯ ಆಗಲಿ ಎಂದು ಪಿಗ್ಮಿ ಕಟ್ಟುತ್ತಿದ್ದರು. ಆದರೆ ವಾರದ ಹಿಂದೆ ಕಲೆಕ್ಷನ್ ಆದ ಮೊತ್ತದಲ್ಲಿ ಹಣವನ್ನು ತೆಗೆಯೋಣ ಎಂದಾಗ, ಸಂಸ್ಥೆಯಲ್ಲಿ ಹಣ ಇಲ್ಲ ಎಂಬ ಮಾಹಿತಿ ಬಂದಿತ್ತು. ಪಿವಿಎಸ್ ನಲ್ಲಿರುವ ಕಚೇರಿಗೆ ತೆರಳಿ ನೋಡಿದಾಗ, ಮೇಲಿನಿಂದಲೇ ಹಣ ಇಲ್ಲ ಎಂದು ಸೂಚನೆ ಬಂದಿದೆ ಎನ್ನುವ ಮಾಹಿತಿಯನ್ನು ಸಿಬಂದಿ ನೀಡಿದ್ದಾರಂತೆ.
ಹೆಚ್ಚಿನ ಮಂದಿಗೆ ಸಂಸ್ಥೆಯಲ್ಲಿ ಸಮಸ್ಯೆ ಆಗಿರುವ ಮಾಹಿತಿ ಇಲ್ಲ. ಹೀಗಾಗಿ ಪೊಲೀಸ್ ದೂರು ನೀಡಲು ಬಂದಿಲ್ಲ. ಹಲವಾರು ಮಂದಿ 40-50 ಸಾವಿರ ಅಂತ ಹಣ ಕಳಕೊಂಡಿದ್ದಾರೆ ಎಂದು ಅಬ್ದುಲ್ ಅಜೀಜ್ ತಿಳಿಸಿದ್ದಾರೆ. ರಾಯಲ್ ಟ್ರಾವಂಕೂರ್ ಹಣಕಾಸು ಸಂಸ್ಥೆ 2021ರಲ್ಲಿ ಆರಂಭಗೊಂಡಿದ್ದು ಕೇರಳದ ಕಣ್ಣೂರಿನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಕಾಸರಗೋಡು, ಕಣ್ಣೂರು ಸೇರಿದಂತೆ ಉತ್ತರ ಕೇರಳದ ಹಲವು ಕಡೆಗಳಲ್ಲಿ ಶಾಖಾ ಕಚೇರಿಯಿದ್ದು, ಕರ್ನಾಟಕದ ಮಂಗಳೂರು ಮತ್ತು ತೊಕ್ಕೊಟ್ಟಿನಲ್ಲಿ ಕಳೆದ ವರ್ಷ ಕಚೇರಿ ಆರಂಭಿಸಿತ್ತು. ರಾಹುಲ್ ಚಕ್ರಪಾಣಿ ಎಂಬವರು ಸಂಸ್ಥೆಯ ಎಂಡಿ ಆಗಿದ್ದಾರೆ.
Posted by Vidyamaana on 2023-04-25 07:27:36 |
ಪುತ್ತೂರು: ಫೇಸ್ಬುಕ್ನಲ್ಲಿ ಪರಿಚಯವಾದ ಅಪ್ರಾಪ್ತಯನ್ನು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿ ಆಕೆಯನ್ನು ಪುಸಲಾಯಿಸಿ ಅಂಗನವಾಡಿ ಶಾಲೆಯ ವರಾಂಡಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಬಗ್ಗೆ ಅಪ್ರಾಪ್ತಯೋರ್ವಳು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ನವೀನ್ ಫೇಸ್ಬುಕ್ನಲ್ಲಿ ಪರಿಚಯವಾದಕಾಸರಗೋಡು ಮೂಲದ ಅಪ್ರಾಪ್ತಯನ್ನು ಎ.16ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿದ್ದ. ಬಳಿಕ ಆಕೆಯನ್ನು ಪುಸಲಾಯಿಸಿ ರಾತ್ರಿ ಸ್ಕೂಟರ್ನಲ್ಲಿ ಕೆಯೂರಿನ ಮಾಡಾವು ಅಂಗನವಾಡಿ ಬಳಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಆರೋಪಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ರೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಕೆಯ್ಯರು ಗ್ರಾಮದ ಮಾಡವು ನಿವಾಸಿ ನವೀನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Posted by Vidyamaana on 2023-05-18 06:21:23 |
ಪುತ್ತೂರು; ಪುತ್ತೂರಿನಲ್ಲಿ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಏಳುಮಂದಿ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂಬ ಮಾಹಿತಿ ಇದ್ದು ಪ್ರಕರಣದ ಬಗ್ಗೆ ಕೂಲಂಕುಶ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಕಾನೂನುಕ್ರಮ ಕೈಗೊಳ್ಳಬೇಕು ಮತ್ತು ಇವತ್ತು ಸಂಜೆಯೊಳಗೆ ಸಸ್ಪೆಂಡ್ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ಕುಮಾರ್ ರೈ ಯವರು ಪೊಲೀಸ್ ಇಲಾಖೆಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿರುವ ಶಾಸಕರು ದೂರವಾಣಿ ಮೂಲಕ ಸಂಬಂದಿಸಿದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಪ್ರಕರಣದ ಬಗ್ಗೆ ಇಲಾಖಾವಾರು ತನಿಖೆ ನಡೆಸಬೇಕು. ಪ್ರಕರಣದಲ್ಲಿ ಯಾರು ತಪ್ಪಿತಸ್ಥರಾದರೂ ಅವರ ವಿರುದ್ದ ಕಠಿಣಕ್ರಮಕೈಗೊಳ್ಳಬೇಕು. ಇವತ್ತು ಸಂಜೆ 3 ಗಂಟೆ ಯೊಳಗೆ ಹಲ್ಲೆ ಮಾಡಿದವರ ವಿರುದ್ದ ಕ್ರಮಕೈಗೊಳ್ಳುವ ಮೂಲಕ ಅವರನ್ನು ಸಸ್ಪೆಂಡ್ ಮಾಡಬೇಕು ಎಂದು ಸೂಚನೆಯನ್ನು ನೀಡಿದ್ದಾರೆ.
ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಪುತ್ತೂರಿನ ನರಿಮೊಗರು ಗ್ರಾಮದ ಏಳುಮಂದಿಯನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆದಿರುವ ವಿಚಾರ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು.
Posted by Vidyamaana on 2023-10-25 15:43:20 |
ನವದೆಹಲಿ : ದೇಶಕ್ಕೆ ಹಾನಿ ಮಾಡುತ್ತಿರುವ ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ಬೇರು ಸಮೇತ ಕೀಳಬೇಕು. ಸ್ವಹಿತಾಸಕ್ತಿಗಳ ದಹನಕ್ಕೆ ದಸರೆಯು ನಾಂದಿ ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕರೆ ನೀಡಿದ್ದಾರೆ ಹಾಗೂ ಇದೇ ವೇಳೆ 10 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನರಿಗೆ ಕರೆ ನೀಡಿದ್ದಾರೆ.ಇಲ್ಲಿನ ದ್ವಾರಕಾ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾವಣ ದಹನ ಎಂಬುದು ಕೇವಲ ಪ್ರತಿಕೃತಿಯ ದಹನವಲ್ಲ. ಭಾರತ ಮಾತೆಯನ್ನು ಧರ್ಮ ಮತ್ತು ಪ್ರಾದೇಶಿಕತೆಯ ಹೆಸರಲ್ಲಿ ಭಾಗ ಮಾಡುತ್ತಿರುವುದರ ನಾಶವೂ ಸಹ ಆಗಿದೆ. ದೇಶಕ್ಕೆ ಹಾನಿ ತಂದೊಡ್ಡುತ್ತಿರುವ ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ಬೇರು ಸಮೇತ ಕಿತ್ತುಹಾಕಬೇಕು. ದಸರಾ ಹಬ್ಬ ಎನ್ನುವುದು ಕೆಟ್ಟದ್ದರ ಮೇಲೆ ಒಳ್ಳೆಯದು ವಿಜಯ ಸಾಧಿಸುವ ದಿನ. ಈ ವೇಳೆ ಸ್ವಹಿತಾಸಕ್ತಿಯ ದಹನವೂ ಆಗಬೇಕು ಎಂದು ವಿಪಕ್ಷಗಳ ಹೆಸರೆತ್ತದೆ ಪರೋಕ್ಷವಾಗಿ ಕುಟುಕಿದರು.ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ನಾವೆಲ್ಲರೂ ಸಾಕ್ಷಿಯಾಗುತ್ತಿದ್ದೇವೆ. ಶತಮಾನಗಳ ಕಾಲ ಕಾದ ಬಳಿಕ ಇದು ನೆರವೇರುತ್ತಿದೆ. ಇನ್ನು ಕೆಲವು ದಿನಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಂಡು ಜನರ ತಾಳ್ಮೆಗೆ ಜಯ ತಂದುಕೊಡಲಿದೆ ಎಂದು ಹೇಳಿದರು.
10 ಸಂಕಲ್ಪ ಮಾಡಿ:
ಇನ್ನು ಇದೇ ವೇಳೆ, ನೀರಿನ ಸಂರಕ್ಷಣೆ, ಡಿಜಿಟಲ್ ವಹಿವಾಟಿಗೆ ಪ್ರೋತ್ಸಾಹ, ಸ್ವಚ್ಛತೆ, ವೋಕಲ್ ಫಾರ್ ಲೋಕಲ್: ಭಾರತದಲ್ಲಿ ತಯಾರಿಸಿದ ವಸ್ತುಗಳ ಖರೀದಿ, ಶ್ರೇಷ್ಠ ಕೆಲಸಗಳನ್ನು ಮಾಡುವುದು, ವಿದೇಶ ಪ್ರವಾಸಕ್ಕೂ ಮುನ್ನ ಭಾರತದಲ್ಲಿ ಪ್ರವಾಸ ಕೈಗೊಳ್ಳುವುದು, ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವುದು, ದೈನಂದಿನ ಊಟದಲ್ಲಿ ಸಿರಿಧಾನ್ಯಗಳ ಬಳಕೆ ಮಾಡುವುದು, ಯೋಗ ಮತ್ತು ಆಟಗಳ ಮೂಲಕ ಫಿಟ್ನೆಸ್ ಜೀವನದ ಭಾಗ ಮಾಡಿಕೊಳ್ಳುವುದು ಮತ್ತು ಬಡ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಜೀವನಕ್ಕೆ ನೆರವು ನೀಡುವ 10 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದರು.ಸಮಾರಂಭದಲ್ಲಿ ಮೋದಿ ಅವರಿಗೆ ಶಾಲು ಹೊದೆಸಿ, ದಂಡವನ್ನು ನೀಡಿ ಸಾಂಪ್ರದಾಯಿಕವಾಗಿ ವೇದಿಕೆಗೆ ಸ್ವಾಗತಿಸಲಾಯಿತು. ವೇದಿಕೆಯ ಮೇಲಿದ್ದ ರಾಮ ಪಾತ್ರಧಾರಿಗೆ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ಬಳಿಕ ಸೀತಾ ರಾಮಚಂದ್ರನಿಗೆ ಜಯವಾಗಲಿ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದ ಅವರು ದೇಶದ ಜನರಿಗೆ ನವರಾತ್ರಿಯ ಶುಭಾಶಯ ತಿಳಿಸಿದರು.
Posted by Vidyamaana on 2023-06-16 10:05:32 |
ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.