ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

Posted by Vidyamaana on 2024-06-13 08:11:33 |

Share: | | | | |


ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2024-25 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪ ಘಟಕದ ವ್ಯಕ್ತಿಗತ ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಂಘ ಹಾಗೂ ಬೀದಿ ಬದಿ ವ್ಯಾಪಾರಸ್ಥರು ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಸ್ವ-ಸಹಾಯ ಗುಂಪಿನಲ್ಲಿ ಸದಸ್ಯರಿರುವ ಕುಟುಂಬದ ಅರ್ಹ ಫಲಾನುಭವಿಗಳಿಂದ ಗುಂಪು ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಚಟುವಟಿಕೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಪ್ರದೇಶ ಮಟ್ಟದ ಒಕ್ಕೂಟವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳು ಅಥವಾ ಗುಂಪುಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಕೇಸ್: ಬೆಂಡಿಗೇರಿ ಠಾಣೆ ಇನ್ಸ್ ಪೆಕ್ಟರ್, ಮಹಿಳಾ ಪೇದೆ ಅಮಾನತು

Posted by Vidyamaana on 2024-05-16 04:37:59 |

Share: | | | | |


ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಕೇಸ್: ಬೆಂಡಿಗೇರಿ ಠಾಣೆ ಇನ್ಸ್ ಪೆಕ್ಟರ್, ಮಹಿಳಾ ಪೇದೆ ಅಮಾನತು

ಹುಬ್ಬಳ್ಳಿ: ಜಿಲ್ಲೆಯಲ ವೀರಾಪುರ ಓಣಿಯಲ್ಲಿ ನಡೆದಿದ್ದಂತ ಯುವತಿ ಅಂಜಲಿ ಅಂಬಿಗೇರಿ ಹತ್ಯೆ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ತಲೆದಂಡವಾಗಿದೆ. ಬೆಂಡಿಗೇರಿ ಠಾಣೆ ಇನ್ಸ್ ಪೇಕ್ಟರ್ ಹಾಗೂ ಮಹಿಳಾ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿನ ಯುವತಿ ಅಂಜಲಿ ಅಂಬಿಗೇರಿಯನ್ನು ವಿಶ್ವ ಎಂಬಾತ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದನು.

ಕೊರಗಜ್ಜನ ಆದಿಕ್ಷೇತ್ರದಲ್ಲಿ ಗೆಲುವಿಗಾಗಿ ಪ್ರಾರ್ಥನೆ - ಕಾರ್ಯಕರ್ತರೇ ನಮಗೆ ಸ್ಟಾರ್ ಪ್ರಚಾರಕರು

Posted by Vidyamaana on 2024-04-06 17:30:22 |

Share: | | | | |


ಕೊರಗಜ್ಜನ ಆದಿಕ್ಷೇತ್ರದಲ್ಲಿ ಗೆಲುವಿಗಾಗಿ ಪ್ರಾರ್ಥನೆ - ಕಾರ್ಯಕರ್ತರೇ ನಮಗೆ ಸ್ಟಾರ್ ಪ್ರಚಾರಕರು

ಉಳ್ಳಾಲ, ಎ.6: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಅವರು ಉಳ್ಳಾಲದಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಹಿರಿಯರು, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿಯವರು ಪದ್ಮರಾಜ್ ಅವರನ್ನ ಆಶೀರ್ವದಿಸಿ ಸಲಹೆ ನೀಡಿದರು.


ವಿಧಾನಸಭಾ ಸ್ಪೀಕರ್‌ ಯು.ಟಿ.ಖಾದರ್‌ ಅವರು ಪ್ರತಿನಿಧಿಸುವ ಮಂಗಳೂರು (ಉಳ್ಳಾಲ) ಕ್ಷೇತ್ರದ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಗೆ ಇಂದು ಬೆಳಗ್ಗೆ ಪದ್ಮರಾಜ್ ಭೇಟಿ ನೀಡಿ ವರ್ತಕರು, ಗ್ರಾಹಕರಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾರುಕಟ್ಟೆಯ ವರ್ತಕರು ನನಗೆ ನೀಡಿದ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಮಂಗಳೂರು ಸೆಂಟ್ರಲ್ ಮಾರುಕಟ್ಟೆಯ ಸಮಸ್ಯೆಯಿಂದ ವರ್ತಕರು ಯಾವ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ ಎನ್ನುವುದನ್ನು ಅರಿತಿದ್ದೇನೆ. ಮಂಗಳೂರು ನಗರ ದೇಶದ ಬಲಿಷ್ಠ ನಗರಗಳಲ್ಲಿ ಒಂದಾಗಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಸುಸಜ್ಜಿತ ಅಂತಾರಾಷ್ಟ್ರೀಯ ಮಾದರಿಯ ಮಾರುಕಟ್ಟೆ ನಿರ್ಮಾಣಕ್ಕೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಮಂಗಳೂರಿನಲ್ಲಿ ನಲ್ವತ್ತು ವರುಷಗಳ ಕಾಲ ಕಾಂಗ್ರೆಸ್ ಸಂಸದರಿದ್ದರು. ನಂತರ ಬಿಜೆಪಿಯವರು ಸುಳ್ಳು ಹೇಳಿ ಜಯ ಗಳಿಸಿದರೆ ಹೊರತು ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿಲ್ಲ. ಈಗಾಗಲೇ ನಾನು ಬಹುತೇಕ ಮತದಾರರನ್ನ ತಲುಪಿದ್ದೇನೆ. ಮುಂದಿನ ಹದಿನೈದು ದಿವಸಗಳಲ್ಲಿ ಎಲ್ಲ ಮತದಾರರನ್ನು ಮುಟ್ಟುವ ಪ್ರಯತ್ನ ನಡೆಸುತ್ತೇನೆ. ಮತದಾರ ಪ್ರಭುಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್‌‌ಗಳೇ ಹೊರತು ಮಂಗಳೂರಿಗೆ ಸ್ಟಾರ್ ಪ್ರಚಾರಕರ ಅಗತ್ಯ ಇಲ್ಲ ಎಂದರು.

ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ

Posted by Vidyamaana on 2023-06-11 14:59:30 |

Share: | | | | |


ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ

ಪುತ್ತೂರು: ಆರೋಗ್ಯ ತುರ್ತು ಸಂದರ್ಭದಲ್ಲಿ ಬಡವರಿಗೆ ವರದಾನವಾಗಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಹಿಂದಿನ ಸರಕಾರ ನಿಷ್ಕ್ರೀಯಗೊಳಿಸಿದ್ದು ಅದನ್ನು ಮುಂದುವರೆಸುವಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.


 ಗ್ರಾಮೀಣ ಪ್ರದೇಶಗಳ ಸಹಾಕಾರಿ ಸಂಘಗಳ ಸದಸ್ಯರು, ಸ್ತ್ರೀ ಶಕ್ತಿ ಗುಂಪು ಸ್ವ-ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಸಹಕಾರಿ ಸಂಘ ಸಹಕಾರಿ ಬ್ಯಾಂಕ್‌ಗಳಲ್ಲಿ ಹಣಕಾಸಿನ ವಹಿವಾಟು ಹೊಂದಿರುವ ಸ್ವ-ಸಹಾಯ ಗುಂಪಿನ ಸದಸ್ಯರು ಈ ಯೋಜನೆಗೆ ಒಳಪಡುತ್ತಾರೆ. ಈ ಯೋಜನೆಯಲ್ಲಿ ಹಲವಾರು ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗಳು ಒಳಗೊಂಡಿರತ್ತದೆ, ಈ ಹಿಂದೆ ಚಿಕಿತ್ಸೆ ನೀಡಿದ್ದ ಆಸ್ಪತ್ರೆಗಳಿಗೆ ಸರ್ಕಾರದಿಂದ ಮೊತ್ತ ಪಾವತಿಯಾಗದಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ  ಯೋಜನೆಯನ್ನು ನಿಷ್ಕ್ರೀಯಗೊಳಿಸಿರುತ್ತಾರೆ, ಪುತ್ತೂರು  ತಾಲೂಕಿನ ಯಾವ ಆಸ್ಪತ್ರೆಯು ಈ ಯೋಜನೆಯಲ್ಲಿ ಒಳಗೊಂಡಿರುವುದಿಲ್ಲ. ಯಶಸ್ವಿನಿ ಆರೋಗ್ಯ ಯೋಜನೆಯು ಬಡವರ ಪಾಲಿಗೆ ಅತೀ  ಅಮೂಲ್ಯವಾದ ಉಚಿತ ಆರೋಗ್ಯ ಯೋಜನೆಯಾಗಿರುವುದರಿಂದ ದಕ್ಷಿಣಕನ್ನಡ ಜಿಲ್ಲೆ ಹಾಗೂ ಪುತ್ತೂರಿನ ಎಲ್ಲಾ ಆಸ್ಪತ್ರೆಗಳಲ್ಲಿ ಪ್ರಾರಂಭಿಸುವಂತೆ ಉಸ್ತುವಾರಿ ಸಚಿವರ ಮೂಲಕ ಸರಕಾರವನ್ನು ಆಗ್ರಹಿಸಿದ್ದಾರೆ.

ದೂಮಡ್ಕದಲ್ಲಿ ೨೭ ನೇ ವರ್ಷದ ಮೊಸರುಕುಡಿಕೆ ಉತ್ಸವಕ್ಕೆ ಶಾಸಕರಿಂದ ಚಾಲನೆ

Posted by Vidyamaana on 2023-09-06 16:32:38 |

Share: | | | | |


ದೂಮಡ್ಕದಲ್ಲಿ ೨೭ ನೇ ವರ್ಷದ ಮೊಸರುಕುಡಿಕೆ ಉತ್ಸವಕ್ಕೆ ಶಾಸಕರಿಂದ ಚಾಲನೆ

ಪುತ್ತೂರು: ನಮಗೆ ಕಷ್ಟ ಬಂದಾಗ, ಜೀವನದಲ್ಲಿ ಸೋತಾಗ ನಮಗೆ ದೇವರ ನೆನಪಾಗುತ್ತದೆ, ನಾವು ದೇವರಿರುವ ಜಾಗವನ್ನು ಹುಡುಕಿಕೊಂಡು ಹೋಗುತ್ತೇವೆ, ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ , ಹಬ್ಬ ಹರಿದಿನಗಳಲ್ಲೂ ನಾವು ದೇವರ ಬಳಿ ಹೋಗುತ್ತೇವೆ ಆದರೆ ನಮ್ಮ ಮನೆಯೊಳಗೇ ಇರುವ ತಂದೆ ತಾಯಿ ಎಂಬ ದೇವರನ್ನು ಮರೆತುಬಿಡುತ್ತೇವೆ, ತಂದೆ ತಾಯಿಯ ಮನಸ್ಸಿಗೆ ನೋವು ಮಾಡಿದವನಿಗೆ ದೇವರ ಆಶೀರ್ವಾದ ಎಂದಿಗೂ ಲಭಿಸುವುದಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ದೂಮಡ್ಕದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ ೨೭ ನೇ ವರ್ಷದ ಮೊಸರುಕುಡಿಕೆ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ಆಶೀರ್ವಾದವನ್ನು ನಾವು ಮೊದಲು ಪಡೆಯಬೇಕು, ಜೀವ ಇರುವಾಗ ನಾವು ಅವರ ಚಾಕರಿಯನ್ನು ಮಾಡಬೇಕು. ಮುದಿ ಪ್ರಾಯದಲ್ಲಿ ಅವರನ್ನು ಆಶ್ರಮಕ್ಕೆ ಸೇರಿಸುವ ಸಂಸ್ಕಾರ ನಮ್ಮದಲ್ಲ ನಾವು ತಂದೆ ತಾಯಿಯನ್ನು ಎಲ್ಲಿಯತನಕ ಮನಸಾರೆ ಪ್ರೀತಿಸುವುದಿಲ್ಲವೋ ಅಲ್ಲಿಯವರೆಗೆ ನವು ಜೀವನದಲ್ಲಿ ಉದ್ದಾರ ಆಗುವುದೇ ಇಲ್ಲ ಎಂದು ಹೇಳಿದ ಶಾಸಕರು ನಮಗೆ ದೇವರು ಒಲಿಯಬೇಕಾದರೆ ಮೊದಲು ಜನ್ಮ ಕೊಟ್ಟ ದೇವರನ್ನು ಮನೆಯಲ್ಲೇ ಪೂಜಿಸಬೇಕು ಎಂದು ಹೇಳಿದರು. ನಾವು ಕಷ್ಟ ಬಂದಾಗ ಪ್ರಶ್ನೆ ಕೇಳಲು ಹೋಗುತ್ತೇವೆ, ನಮಗೆ ಯಾರಾದರೂ ಏನಾದರು ಮಾಡಿದ್ದಾರ ಎಂದು ಕೇಳಲು ಹೋಗುತ್ತೇವೆ ಅವರ ಬಳಿ ಹೋಗುವ ಬದಲು ತಂದೆ ತಾಯಿಯನ್ನು ಗೌರವಿಸಿ ಅಷ್ಟೇ ಸಾಕು ನಮಗೆ ದೇವರು ಎಲ್ಲವನ್ನೂ ಕೊಡುತ್ತಾನೆ ಎಂದು ಹೇಳಿದರು.ವೇದಿಕೆಯಲ್ಲಿ ಬೈಲಾಡಿ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಭಟ್ ಘಾಟೆ, ಬೈಲಾಡಿ ಶಾರದೋತ್ಸವ ಸಮಿತಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ಬ್ಥರಮಜಲು, ದೂಮಡ್ಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಗಣೇಶ್ ರೈ, ದೂಮಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷರಾದ ಶೀನಪ್ಪ ನಾಯ್ಕ, ಬೆಟ್ಟಂಪಾಡಿ ಗ್ರಾಪಂ ಸದಸ್ಯ ನವೀನ್ ರೈ, ಮಹಾಲಿಂಗ ನಾಯ್ಕ, ಬೆಳಿಯೂರುಕಟ್ಟೆ ಸರಕರಿ ಪಪೂ ಕಾಲೇಜು ಪ್ರಾಂಶುಪಾಲರಾದ ಹರಿಪ್ರಕಾಶ್ ಬೈಲಾಡಿ ಮೊದಲಾದವರು ಉಪಸ್ತಿತರಿದ್ದರು.

ಕರಾವಳಿ ಭಾಗದಿಂದ ಸೂಪರ್ ಸಿಂಗಂ ಸ್ಪರ್ಧೆ.. ಅಣ್ಣಾಮಲೈಗೆ ಗೆಲುವಿನ ಮಾಲೆ ತೊಡಿಸಲು ಬಿಜೆಪಿ ಹೈಕಮಾಂಡ್ ಮೆಘಾ ಪ್ಲ್ಯಾನ್!

Posted by Vidyamaana on 2024-03-06 21:17:28 |

Share: | | | | |


ಕರಾವಳಿ ಭಾಗದಿಂದ ಸೂಪರ್ ಸಿಂಗಂ ಸ್ಪರ್ಧೆ..  ಅಣ್ಣಾಮಲೈಗೆ ಗೆಲುವಿನ ಮಾಲೆ ತೊಡಿಸಲು ಬಿಜೆಪಿ ಹೈಕಮಾಂಡ್ ಮೆಘಾ ಪ್ಲ್ಯಾನ್!

ನವದೆಹಲಿ :2024ರ ಲೋಕಸಭೆ ಚುನಾವಣೆ ಅಖಾಡ ರಂಗೇರಿದೆ. ಅದರಲ್ಲೂ, ಈ ಬಾರಿ ಲೋಕಸಭೆಗೆ ಬಿಜೆಪಿ & ಕಾಂಗ್ರೆಸ್ ನಡುವೆ ಭಾರಿ ಪೈಪೋಟಿ ನಿರೀಕ್ಷೆ ಮಾಡಲಾಗುತ್ತಿದೆ. ಕೆಲ ತಿಂಗಳಿಂದ, ಎರಡೂ ಪಕ್ಷಗಳ ನಾಯಕರ ನಡುವೆ ಮಾತಿನ ಮಹಾಯುದ್ಧ ಕೂಡ ನಡೆಯುತ್ತಿದೆ. ಹೀಗೆ ಫೈಟಿಂಗ್ ಜೋರಾದ ಸಮಯಕ್ಕೇ, ಬಿಜೆಪಿ ವರಿಷ್ಠರ ಪಡೆ ರಣತಂತ್ರಗಳ ಮೇಲೆ ರಣತಂತ್ರ ಹೆಣೆಯುತ್ತಿದ್ದಾರೆ. ಈಗ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ವರಿಷ್ಠರು, ಕರ್ನಾಟಕದಿಂದ ಚುನಾವಣೆ ಅಖಾಡಕ್ಕೆ ಇಳಿಸುತ್ತಾರಾ? ಮುಂದೆ ಓದಿ.ಅಣ್ಣಾಮಲೈ ಅಂದ್ರೆ ತಮಿಳುನಾಡಿನ ಮೂಲೆ ಮೂಲೆಯಲ್ಲೂ ಹವಾ ಇದೆ. ಇನ್ನು ಕರ್ನಾಟಕ ರಾಜ್ಯದಲ್ಲೂ ಅಣ್ಣಾಮಲೈ ಅವರು ದೊಡ್ಡ ಹೆಸರು ಸಂಪಾದಿಸಿದ್ದಾರೆ.


ಯಾಕಂದ್ರೆ ಇದೇ ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ರು. ಚಿಕ್ಕಮಗಳೂರು ಭಾಗದಲ್ಲಿ ಇವರ ಹೆಸರಿನ ಬದಲು ಸಿಂಗಂ ಅಣ್ಣಾಮಲೈ ಅಂತಾನೆ ಜನರು ಕರೆಯುತ್ತಿದ್ದರು. ಈಗ ಇದೆ ಅಣ್ಣಾಮಲೈ ಅವರು ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದಾರೆ. ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎಂಬ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗಿದೆ.


ಕರ್ನಾಟಕಕ್ಕೆ ಅಣ್ಣಾಮಲೈ ಎಂಟ್ರಿ?ಅಣ್ಣಾಮಲೈ ಅವರ ಹೆಸರು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ದೊಡ್ಡ ಮಟ್ಟಿಗೆ ಸದ್ದು ಮಾಡುತ್ತಿದೆ. ಹೀಗಾಗಿಯೇ ಈ ಬಾರಿ ಕೆ. ಅಣ್ಣಾಮಲೈ ಅವರನ್ನು ಕರ್ನಾಟಕದ ಕರಾವಳಿ ಭಾಗದ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ಸಾಗಿವೆ ಎಂಬ ಮಾತು ಹರಿದಾಡಿದೆ. ಇನ್ನೊಂದು ಕಡೆ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಇದೀಗ ದಕ್ಷಿಣ ಕನ್ನಡದಲ್ಲಿ ಅಸಮಾಧಾನ ಇದೆ ಎಂಬ ಆರೋಪ ಕೇಳಿಬರುತ್ತಿದೆ.


ಹೀಗಾಗಿಯೇ ಕಟೀಲ್ ಬದಲು ಈಗ ಅಣ್ಣಾಮಲೈ ಅವರನ್ನ ದಕ್ಷಿಣ ಕನ್ನಡದಿಂದ ಲೋಕಸಭೆಗೆ ಇಳಿಸಲು ಚರ್ಚೆ ನಡೆದಿಯಂತೆ. ಹಾಗಾದರೆ ಇದರ ಹಿಂದಿನ ತಂತ್ರ ಏನು?ಬಿ.ಎಲ್. ಸಂತೋಷ್ ಅವರ ಆಪ್ತರುಕೆ. ಅಣ್ಣಾಮಲೈ ಅವರನ್ನು ಕಂಡರೆ ಪ್ರಧಾನಿ ಮೋದಿ ಅವರಿಂದ ಹಿಡಿದು, ಆರ್‌ಎಸ್‌ಎಸ್ ಮುಖಂಡರ ತನಕ ಪ್ರತಿಯೊಬ್ಬರಿಗೂ ಭಾರಿ ಗೌರವ.


ಬಿಜೆಪಿಗೆ ಬಂದು ಕೆಲವೇ ವರ್ಷದಲ್ಲಿ ಅಣ್ಣಾಮಲೈ ಅವರು ದೊಡ್ಡ ಹೆಸರು ಸಂಪಾದಿಸಿದ್ದಾರೆ. ಅದ್ರಲ್ಲೂ ಕೆಲವು ದಿನಗಳ ಹಿಂದೆ ಅಷ್ಟೇ ಪ್ರಧಾನಿ ಮೋದಿ ಅವರು ಅಣ್ಣಾಮಲೈ ಅವರನ್ನು ಹೊಗಳಿದ್ದರು. ಇದರ ಜೊತೆಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಗಿರುವ ಬಿ.ಎಲ್. ಸಂತೋಷ್‌ರ, ಹೊಸ ರಣತಂತ್ರದ ಪ್ರಕಾರ ಅಣ್ಣಾಮಲೈಗೆ ದಕ್ಷಿಣ ಕನ್ನಡ ಲೋಕಸಭೆ ಟಿಕೆಟ್ ಸಿಗುತ್ತದೆ ಎನ್ನಲಾಗುತ್ತಿದೆ.


ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಒಟ್ನಲ್ಲಿ ಕಣ್ಣು ಮುಚ್ಚಿ ಕಣ್ಣು ಬಿಡುವುದರ ಒಳಗೆ 2024ರ ಲೋಕಸಭೆ ಚುನಾವಣೆಯು ಬಂದೇ ಬಿಡುತ್ತೆ. ಯಾಕಂದ್ರೆ 2024ರ ಲೋಕಸಭೆ ಚುನಾವಣೆಗೆ ಕಡಿಮೆ ಸಮಯ ಇದ್ದು. ಹೀಗಾಗಿಯೇ ದೇಶದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತೀವ್ರ ಪೈಪೋಟಿ ಶುರುಮಾಡಿವೆ. ಬಿಜೆಪಿಗೆ ಈ ಗೆಲುವು ದೊಡ್ಡ ಬಲ ತಂದುಕೊಡುವ ನಿರೀಕ್ಷೆ ಇದ್ದು, ಹೀಗಾಗಿ ಕಮಲ ಪಡೆ ಅಭ್ಯರ್ಥಿ ಆಯ್ಕೆಯಲ್ಲಿ ಭಾರಿ ಮುನ್ನೆಚ್ಚರಿಕೆ ವಹಿಸಿದೆ.



Leave a Comment: