Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10
ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.
ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.
ಕೊಲೆಗೆ ಕಾರಣವೇನು?
ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.
Posted by Vidyamaana on 2023-04-12 13:51:58 |
ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ವಿಧಾನ ಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಪುತ್ತಿಲ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಈ ಹಿನ್ನೆಲೆ ಕೊಟೇಚಾ ಸಭಾಂಗಣದಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ.ಸಭೆಗೆ ನೂರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದು, ಕೊಟೇಚಾ ಹಾಲ್ ನ ಹೊರಗೆ ಹಾಗೂ ಒಳಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ
ಕಳೆದ ಎರಡು ಅವಧಿಯಲ್ಲಿ ಅರುಣ್ ಅವರ ಹೆಸರು ಅಭ್ಯರ್ಥಿತನಕ್ಕೆ ಕೇಳಿ ಬಂದಿದ್ದರೂ ಅವಕಾಶ ಸಿಕ್ಕಿರಲಿಲ್ಲ.ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಅವರ ಬೆಂಬಲಿಗರು ಟ್ವಿಟರ್ ಅಭಿಯಾನದ ಮೂಲಕ ನರೇಂದ್ರ ಮೋದಿ, ಅಮಿತ್ ಶಾ ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ಬಿಜೆಪಿಯ ಸರ್ವೇ ಕಾರ್ಯದಲ್ಲಿ ಕೇಳಿ ಬಂದಿದ್ದ ಆಕಾಂಕ್ಷಿತರ ಪಟ್ಟಿಯಲ್ಲಿ ಅರುಣ್ ಹೆಸರು ಕೂಡ ಇತ್ತು ಎನ್ನಲಾಗಿದ್ದು, ಹೀಗಾಗಿ ಈ ಬಾರಿ ಅರುಣ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯನ್ನು ಬೆಂಬಲಿಗರು ಹೊಂದಿದ್ದರುಟಿಕೆಟ್ ಸಿಗದ ಹಿನ್ನೆಲೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಡ ಹೇರಲಾಗುತ್ತಿದ್ದು, ಮುಂದಿನ ನಡೆ ಯಾವ ರೀತಿಯಾಗಿದೆ ಎಂದು ಕಾದು ನೋಡಬೇಕಿದೆ.
Posted by Vidyamaana on 2023-08-29 16:09:05 |
ಮೈಸೂರು : ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ ನೀಡಲಾಗುತ್ತಿದ್ದು, 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ನಾಳೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ.ನಾಳೆ ಯ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಲಿದ್ದಾರೆ. 1.10 ಕೋಟಿ ಫಲಾನುಗಳಿಗೆ ಹಣ ಬಿಡುಗಡೆ ಮಾಡುತ್ತೇವೆ. ಮಹಿಳೆಯರ ಖಾತೆಗೆ ನಾಳೆಯೇ ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಹರಕೆ ಸಲ್ಲಿಸಿದರು. ತಾಯಿ ಚಾಮುಂಡೇಶ್ವರಿಗೆ ಹಸಿರು ಮತ್ತು ಕೆಂಪು ಸೀರೆ ನೀಡಿ ಹರಕೆ ಸಲ್ಲಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಯಶಸ್ವಿಯಾಗಲೆಂದು ಹರಕೆ ಕಟ್ಟಿಕೊಂಡಿದ್ದರು. ಇಂದು ಚಾಮುಂಡಿ ದೇವಿಗೆ ಹರಕೆ ಒಪ್ಪಿಸಿದರು. ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸುವಾಗ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈಗ ಹರಕೆ ಸಲ್ಲಿಸಿದ್ದಾರೆ. ಕನಕಾಂಬರ, ಮಲ್ಲಿಗೆ, ಗುಲಾಬಿ ಸೇರಿ ವಿವಿಧ ಬಗೆಯ ಹೂವಿನ ಹಾರ ಮತ್ತು ಫಲ ಸಮರ್ಪಣೆ ಮಾಡಿದರು.ಅಲ್ಲದೇ ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮಿಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಈಗಾಗಲೇ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ದತೆ ನಡೆದಿದೆ.
Posted by Vidyamaana on 2024-06-18 16:47:47 |
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ (35) ಬಂಧಿತ ಆರೋಪಿ.ರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬ ವ್ಯಕ್ತಿಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲಾಗಿತ್ತು. ಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಉದಯ ಕುಮಾರ್ ಗೆ ಬಾರೊಂದರಲ್ಲಿ ವಸಂತ ಎಂಬಾತನ ಪರಿಚಯವಾಗಿದ್ದು, ರವಿವಾರ ರಾತ್ರಿ ಕಾಂತಮಂಗಲಕ್ಕೆ ಅಟೋ ರಿಕ್ಷಾದಲ್ಲಿ ಬಂದು ಶಾಲಾ ಜಗಲಿಯಲ್ಲಿ ಮಲಗಿದ್ದರು. ವಸಂತ ಎಂಬವರ ಬಳಿ 800
Posted by Vidyamaana on 2024-02-09 19:02:36 |
ಚಿತ್ರದುರ್ಗ: ಆಸ್ಪತ್ರೆಯಲ್ಲೇ ಆಪರೇಷನ್ ಮಾಡೋ ತರ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿ, ಕರ್ತವ್ಯ ಲೋಪ ಎಸಗಿದ್ದಂತ ವೈದ್ಯ ಡಾ.ಅಭಿಷೇಕ್ ಅವರನ್ನು ಕೆಲಸದಿಂದ ವಜಾಗೊಳಿಸಿ, ಜಿಲ್ಲಾಧಿಕಾರಿ ವೆಂಕಟೇಶ್ ಆದೇಶಿಸಿದ್ದಾರೆ.ಚಿತ್ರದುರ್ಗದ (Chitr
non
urga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿತ್ತು.ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ , ರೋಗಿಯೊಬ್ಬರನ್ನು ಬೆಡ್ ಮೇಲೆ ಮಲಗಿಸಿ, ಆಪರೇಷನ್ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದರು.
ಅಂತಿಮವಾಗಿ ಆಪರೇಷನ್ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುವ ವಿಡಿಯೋ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಆಗುತ್ತಿದ್ದಂತೇ, ಗುತ್ತಿಗೆ ವೈದ್ಯರ ಪ್ರೀ ವೆಡ್ಡಿಂಗ್ ಶೂಟಿಂಗ್ ಬಗ್ಗೆ ವೈದ್ಯರೇ ಹೀಗೆ ಮಾಡಿದ್ದು ಸರಿಯಲ್ಲ ಎಂಬುದಾಗಿ ಆಕ್ಷೇಪ, ಆಕ್ರೋಶ ಹೊರಬಿದ್ದಿತ್ತು. ಈ ಬೆನ್ನಲ್ಲೇ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ.
Posted by Vidyamaana on 2023-05-06 23:19:43 |
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಗ್ರಾಮಗಳಿಗೆಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಶನಿವಾರ ಮತಯಾಚನೆ ನಡೆಸಿದರು. ಮುಖ್ಯವಾಗಿ ದಲಿತ ಕಾಲನಿಗಳು ಹಾಗೂ ಮನೆ ಮನೆಗೆ ಭೇಟಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಉಪ್ಪಿನಂಗಡಿ, ನೆಕ್ಕಿಲಾಡಿ, ಹಿರೆಬಂಡಾಡಿ, ಬನ್ನೂರು, ಒಳಮೊಗ್ರು, ಅರಿಯಡ್ಕ, ಬಜತ್ತೂರು, ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಹಲವಾರು ಕಾರ್ಯಕರ್ತರು ಇವರ ಜೊತೆಗಿದ್ದು ಅಭ್ಯರ್ಥಿ ಪರ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅಶೋಕ್ ರೈ ಬಹುತೇಕ ದಲಿತ ಕಾಲನಿಗಳು ಇನ್ನೂ ಅಭಿವೃದ್ದಿ ಕಂಡಿಲ್ಲ. ರಸ್ತೆಯಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಸಮರ್ಪಕವಾಗಿ ಮಾಡಿಲ್ಲ. ದಲಿತರ ಅಭಿವೃದ್ದಿಗೆ ಸರಕಾರ ವರ್ಷದಿಂದ ವರ್ಷಕ್ಕೆ ಕೋಟಿಗಟ್ಟಲೆ ಅನುದಾನವನ್ನು ಮೀಸಲಿಡುತ್ತದೆ ಆದರೆ ಆ ಅನುದಾನ ಎಲ್ಲಿ ಬಳಕೆಯಾಗಿದೆ ಎಂಬುದು ಗೊತ್ತಾಗುತ್ತಿಲ್ಲ. ಕಳೆದ ಐದು ವರ್ಷಗಳಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಕಾಲನಿಗಳಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ. ಮುಗ್ದ ಜನರನ್ನು ಧರ್ಮದ ಹೆಸರಿನಲ್ಲಿ ಬಲಿಪಶುಗಳನ್ನಾಗಿ ಮಡಿ ಅವರನ್ನು ಬಳಕೆ ಮಾಡಿಕೊಂಡ ಬಿಜೆಪಿ ಅವರ ಅಭಿವೃದ್ದಿಗೆಂದೇ ಬಂದ ಹಣವನ್ನು ಇಲ್ಲಿ ವಿನಿಯೋಗಿಸಿಲ್ಲ ಎಂದು ಅರೋಪಿಸಿದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು ಪುತ್ತೂರಿನಲ್ಲಿ ಕಾಂಗ್ರೆಸ್ ಗೆಲ್ಲಿಸಿದರೆ ಎಲ್ಲಾ ಕಾಲನೊಗಳ ಸಂಪೂರ್ಣ ಅಭಿವೃದ್ದಿ ಮಾಡುವುದಾಗಿ ಭರವಸೆ ನೀಡಿದರು.ಈ ಸಂದರ್ಬದಲ್ಲಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅದ್ಯಕ್ಷರಾದ ಡಾ. ರಾಜಾರಾಂ ಕೆ ಬಿ, ಮುರಳೀಧರ್ ರೈ ಮಠಂತಬೆಟ್ಟು , ಉಪ್ಪಿನಂಗಡಿ ಗ್ರಾಪಂ ಸದಸ್ಯ ಯು ಟಿ ತೌಸೀಫ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು, ಗ್ರಾಪಂ ಸದಸ್ಯರುಗಳು, ಮಾಜಿ ಗ್ರಾಪಂ ಸದಸ್ಯರುಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ತಿತರಿದ್ದರು. ಮನೆ ಮನೆ ಭೇಟಿ ವೇಳೆ ಅಶೋಕ್ ರೈ ಯವರಿಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಯಿತು.