Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31
ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ
ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.
Posted by Vidyamaana on 2023-04-21 22:44:15 |
ಪುತ್ತೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣವನ್ನು ಇನ್ನಷ್ಟು ಸಮರ್ಥವಾಗಿ ಬಳಸಿಕೊಳ್ಳುವ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿಯಲ್ಲಿ ಸಾಮಾಜಿಕ ಜಾಲತಾಣಗಳ ನಿರ್ವಹಣೆಗಾರರ ಸಭೆ ಏ 21 ರಂದು ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆಯಿತು.
ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸಾಮಾಜಿಕ ಜಾಲತಾಣ ನಿರ್ವಹಣಾಗಾರರಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು. ಸುಮಾರು 50ಕ್ಕೂ ಅಧಿಕ ಸಾಮಾಜಿಕ ಜಾಲತಾಣ ನಿರ್ವಹಣಾಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಅಶೋಕ್ ರೈ ಅವರ ಪರ ಹಾಗೂ ವಿರೋಧವಾಗಿ ಪ್ರಕಟವಾಗುವ ಸಂದೇಶ, ವರದಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು. ಅಪಪ್ರಚಾರ ನಡೆಸುವ ಸಂದೇಶಗಳನ್ನು ಯಾವ ರೀತಿ ನಿರ್ವಹಿಸಬೇಕು ಎನ್ನುವುದರ ಬಗ್ಗೆ ಅವರಿಗೆ ತಿಳಿಸಲಾಯಿತು.
Posted by Vidyamaana on 2023-04-28 13:57:41 |
ಪುತ್ತೂರು; ಮಕ್ಕಳೇ ನಮ್ಮ ಸಂಪತ್ತು, ಮಕ್ಕಳಿಗಾಗಿ ನಾವು ಎಲ್ಲವನ್ನೂ ಸಹಿಸುತ್ತೇವೆ, ತ್ಯಾಗಗಳನ್ನು ಮಾಡುತ್ತೇವೆ ಆದರೆ ಅದೇ ಮಕ್ಕಳು ನಾಳೆ ದಾರಿ ತಪ್ಪಿದಾಗ ಅಥವಾ ಕಲಿತು ಉದ್ಯೋಗ ಇಲ್ಲವಾದಾಗ ನಾವೇ ಅದರ ನೋವನ್ನು ಅನುಭವಿಸಬೇಕಾಗುತ್ತದೆ , ಮಕ್ಕಳು ದಾರಿತಪ್ಪದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಪೋಷಕರದ್ದು , ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರೆಯುವಂತಾಗಲು ರಾಜ್ಯದಲ್ಲಿ , ದೇಶದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವದಲ್ಲಿರುವಂತೆ ನೋಡಿಕೊಳ್ಳಿ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.
ನಮಗೆ ಧರ್ಮಗಳ ನಡುವಿನ ಜಗಳ, ದ್ವೇಷ ಬೇಡ. ನಮ್ಮ ಮಕ್ಕಳೂ ಅದಕ್ಕೆ ಬಲಿಯಾಗುವುದು ಬೇಡ. ಧರ್ಮ ಧರ್ಮಗಳ ನಡುವೆ ದ್ವೇಷದಿಂದ ಸಮಾಜಕ್ಕ ಗಳಿಸಿಕೊಳ್ಲುವಂತದ್ದು ಏನೂ ಇಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಪರಸ್ಪರ ಒಂದಾಗಿ ಬಾಳಬೇಕು. ದೇಶದಲ್ಲಿ ಹಲವು ಧರ್ಮಳು, ಜಾತಿಯವರನ್ನೊಳಗೊಂಡ ಸುಂದರ ಹೂದೋಟ, ಈ ಹೂದೋಠ ಹಾಗೇಯೇ ಉಳಿಯಲಿ. ದೇಶದಲ್ಲಿ ಜಾತ್ಯಾತೀತ ಕಲ್ಪನೆ ಉಳಿದುಕೊಳ್ಳಬೇಕಾದರೆ ಹಿಂದೂ ಮುಸ್ಲಿಂ ಪರಸ್ಪರ ಒಟ್ಟಾಗಿರಬೇಕು. ಧರ್ಮಗಳ ನಡುವೆ ವಿಷ ಬೀಜ ಬಿತ್ತುವವರ ಜೊತೆ ನಮ್ಮ ಮಕ್ಕಳು ಸೇರದಂತೆ ನಾವು ಜಾಗೃತರಾಗಬೇಕಿದೆ ಎಂದು ಹೇಳಿದರು.
ಪುತ್ತೂರು ನಗರವನ್ನು ಅಭಿವೃದ್ದಿ ಮಾಡುತ್ತೇವೆ ಎಂದು ಶಾಸಕರು ಪ್ರಾರಂಭದಲ್ಲಿ ಹೇಳಿದ್ದರು ಆದರೆ ಅಭಿವೃದ್ದಿ ಮಾಡಿಲ್ಲ, ಕೇವಲ ಫ್ಲೆಕ್ಸ್ ಹಾಕಿದ್ದು ಮಾತ್ರ, ಬ್ರಹ್ಮ ನಗರದಲ್ಲಿ ೧೦೦ ಮನೆಗಳ ಫ್ಲ್ಯಾಟ್ ನಿರ್ಮಾಣ ಮಾಡುತ್ತೇವೆ ಎಂದವರಿಗೆ ಅಲ್ಲಿಗೆ ಸರಿಯಾದ ಮೂಲಭೂತ ಸೌಕರ್ಯವನ್ನು ಮಾಡಲು ಸಾಧ್ಯವಾಗಲಿಲ್ಲ. ಶಂಕುಸ್ಥಾಪನೆ ಮಾಡಿದ್ದು, ಫ್ಲೆಕ್ಸ್ ಹಾಕಿದ್ದು, ೪೦ ಪರ್ಸೆಂಟ್ ಕಮಿಷನ್ ತಗೊಂಡು ಜಾಲಿ ಮಾಡಿದ್ದು ಬಿಟ್ರೆ ಏನೇನೂ ಅಭಿವೃದ್ದಿ ಕೆಲಸ ಮಾಡಿಲ್ಲ. ಪುತ್ತೂರು ನಗರದಲ್ಲಿ ಇನ್ನೂ ಒಳಚರಂಡಿ ವ್ಯವಸ್ಥೆ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆ ಸರಿಯಿಲ್ಲ ಎಂದು ದೂರಿದರು. ಕಾಂಗ್ರೆಸ್ ಬೆಂಬಲಿಸಿ ನಾವು ಅಭಿವೃದ್ದಿ ಮಡಿ ತೋರಿಸುತ್ತೇವೆ ಎಂದು ರೈಗಳು ಸಭೆಗೆ ತಿಳಿಸಿದರು. ಈ ಬಾರಿ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಹವಾ ಇದೆ. ಖಂಡಿತವಾಗಿಯೂ ನಿಮ್ಮೆಲ್ಲರ ಸಹಕಾರದಿಂದ ಪುತ್ತೂರಿನಲ್ಲಿ ಕಾಂಗ್ರೆಸ್ ಮತ್ತೆ ಇತಿಹಾಸವನ್ನು ನಿರ್ಮಾಣ ಮಾಡಲಿದೆ ಎಂದು ಭವಿಷ್ಯ ನುಡಿದರು
ದೇಶಕಟ್ಟಿದ್ದು ಕಾಂಗ್ರೆಸ್ ಮಾರಿದ್ದು ಬಿಜೆಪಿ; ಮಹಮ್ಮದ್ ಬಡಗನ್ನೂರು
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟದ್ದು ಕಾಂಗ್ರೆಸ್ ಎಂದು ಕಾಂಗ್ರೆಸ್ಸನ್ನು ದೂರುವವನಿಗೂ ಗೊತ್ತಿದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಬಡವರಿಗೆ ಬದುಕಲು ಸಾಧ್ಯ ಎಂದು ಇಂದಿರಾಗಾಂಧಿಯನ್ನು, ನೆಹರೂ ಅವರನ್ನು ಹಿಯ್ಯಾಳಿಸುವವನಿಗೆ ಗೊತ್ತಿದೆ ಎಲ್ಲವೂ ಗೊತ್ತಿದ್ದು ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುತ್ತಿರುವವರು ದೆಶದ ಇತಿಹಾಸವನ್ನು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು ಹೇಳಿದರು.
ಹುಟ್ಟುವಾಗಲೇ ಚಿನ್ನದ ಚಮಚ ಬಾಯಿಗೆ ಇಟ್ಟುಕೊಂಡುಕೊಂಡು ಬಂದ ದೇಶದ ಜನರಿಗೋಸ್ಕರ ಅನೇಕ ವರ್ಷ ಜೈಲು ವಾಸ ಅನುಭವಿಸಿದರು. ಉಳುವವನಿಗೇ ಭೂಮಿಯನ್ನು ಕೊಟ್ಟ ಇಂದಿರಾಗಾಂಧಿಯನ್ನು ಗುಂಡಿಟ್ಟು ಕೊಂದರು, ಭಾರತವನ್ನು ವಿಶ್ವಗುರು ಮಾಡಲು ಹೊರ ರಾಜೀವ ಗಾಂಧಿ ದೇಶಕ್ಕಾಗಿ ರಕ್ತ ಸಾಕ್ಷಿಯಾದರು ಇವರೆಲ್ಲರ ತ್ಯಾಗದ ಫಲವಾಗಿ ಇಂದು ಭಾರತ ಕಂಗೊಳಿಸುತ್ತದೆ ವಿನಾ ಸಾರ್ವರ್ಕರ್ ಸಂತತಿಗಳಿಂದ ದೇಶ ಉದ್ದಾರ ಆಗಿಲ್ಲ. ಕಾಂಗ್ರೆಸ್ ಕಟ್ಟಿದ ಭವ್ಯ ಭಾರತವನ್ನು ಇಂದು ಅಧಿಕಾರದಲ್ಲಿರುವ ಬಿಜೆಪಿ ಒಂದೊಂದಾಗಿ ಮಾರಾಟ ಮಾಡುತ್ತಿದೆ. ದೇಶ ಉಳಿಯಬೇಕಾದರೆ ಬಿಜೆಪಿ ತೊಳಗಬೆಕು. ಬಿಜೆಪಿ ಮುಕ್ತ ಕರ್ನಾಟಕ, ಬಿಜೆಪಿ ಮುಕ್ತ ಭಾರತವಾಗುವಲ್ಲಿ ಪ್ರತೀಯೊಬ್ಬ ಪ್ರಜೆಯೂ ಚಿಂತಿಸಬೇಕಿದೆ. ಕಾಂಗ್ರೆಸ್ ಬೆಂಬಲಿಸುವ ಮೂಲಕ ನಾವು ಹಿರಿಯರ ತ್ಯಾಗಕ್ಕೆ ಗೌರವ ಕೊಡುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ಶಾಸಕರಾದವರಿಗೆ ನೈತಿಕತೆ ಬೇಕು
ಚುನಾವಣೆಗೆ ಎಲ್ಲರಿಗೂ ಸ್ಪರ್ದಿಸಬಹುದು ಆದರೆ ಆತನಿಗೆ ಕನಿಷ್ಟ ನೈತಿಕತೆಯಾದರೂ ಬೇಕಾಗುತ್ತದೆ. ನೈತಿಕತೆಯಲ್ಲಿ ಬಲಹೀನನಾದವನಿಗೆ ಜನರ ಸೇವೆಯನ್ನು ಹೇಗೆ ಮಾಡಲು ಸಾಧ್ಯವಾಗುತ್ತದೆ. ಪುತ್ತೂರಿನಲ್ಲಿ ಇದೇ ಕಾರಣಕ್ಕೆ ಟಿಕೆಟ್ ಕೊಡಲಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. ಜನಪ್ರತಿನಿಧಿಯಾದವರು ಚುನಾವಣೆ ಸಂದರ್ಬದಲ್ಲಿ ತಮ್ಮ ಬಂಡವಾಳ ಬಯಲು ಆಗದಂತೆ ನ್ಯಾಯಾಲಯದಿಂದ ಸ್ಟೇ ಆರ್ಡರ್ ತರುತ್ತಿರುವುದು ನೈತಿಕತೆ ಕುಸಿದಿರುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದರು.
ಕಾಂಗ್ರೆಸ್ಗೆ ಸೇರ್ಪಡೆ
ಇದೇ ಸಂಧರ್ಭದಲ್ಲಿ ಬಿಜೆಪಿ ಮುಖಂಡ, ಆರ್ಯಾಪು ಗ್ರಾಪಂ ಮಾಜಿ ಸದಸ್ಯ ಜಬ್ಬಾರ್ ಸಂಪ್ಯ ತಮ್ಮ ಅಭಿಮಾನಿಗಳ ಜೊತೆಗೆ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಹೇಮನಾಥ ಶೆಟ್ಟಿ ಕಾವು, ಎಂ ಎಸ್ ಮಹಮ್ಮದ್, ನಗರ ಪ್ರಚಾರ ಸಮಿತಿ ಅಧ್ಯಕ್ಷ ಪ್ರಸನ್ನ ಶೆಟ್ಟಿ ಸಿಝ್ಲರ್, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದಾಲಿ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Posted by Vidyamaana on 2024-07-02 19:47:54 |
ಹತ್ರಾಸ್ : ಹತ್ರಾಸ್ನಲ್ಲಿ ಭೋಲೆ ಬಾಬಾ ಸತ್ಸಂಗದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 122 ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿದೆ.ಈ ಅವಘಡದಲ್ಲಿ 150 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, ಅನೇಕರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
Posted by Vidyamaana on 2023-08-10 15:13:43 |
ವಿಜಯವಾಡ: ಟಿಕೆಟ್ ಇಲ್ಲದೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಟಿಕೆಟ್ ಕಲೆಕ್ಟರ್ ಗಳ ಕಣ್ತಪ್ಪಿಸಲು ಟಾಯ್ಲೆಟ್ ಸೇರಿಕೊಂಡು ಅಲ್ಲಿ ಬಳಿಕ ಸಿಗರೇಟ್ ಸೇದುವ ಮೂಲಕ ಅಧ್ವಾನ ಸೃಷ್ಟಿಸಿದ ಘಟನೆಯೊಂದು ವರದಿಯಾಗಿದೆ.
ತಿರುಪತಿ-ಸಿಕಂದರಾಬಾದ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ರೈಲಿನ ಬೋಗಿಯ ಟಾಯ್ಲೆಟ್ ನಿಂದ ಹೊಗೆ ಬರುತ್ತಿದ್ದ ಕಾರಣ ಅಪಾಯದ ಕರೆಗಂಟೆ ಬಾರಿಸಿದ ಮತ್ತು ಆಟೋಮ್ಯಾಟಿಕ್ ಬೆಂಕಿ ನಿಯಂತ್ರಕ ವ್ಯವಸ್ಥೆ ಕಾರ್ಯಪ್ರವೃತ್ತಗೊಂಡ ಕಾರಣ ರೈಲು ನಿಲುಗಡೆಗೊಂಡ ಘಟನೆಯೂ ನಡೆದಿರುವುದನ್ನು ರೈಲ್ವೇ ಅಧಿಕಾರಿಗಳು ನೀಡಿರುವ ಮಾಹಿತಿಯಲ್ಲಿ ತಿಳಿಸಿದ್ದಾರೆ.
ರೈಲು ಸಂಖ್ಯೆ – 20702 ಆಂಧ್ರಪ್ರದೇಶದ ಗುಡೂರು ಮೂಲಕ ಸಾಗುತ್ತಿದ್ದಾಗ ಈ ಘಟನೆ ನಡೆದಿದ್ದು, ಸಿ-13 ಬೋಗಿಯಲ್ಲಿ ಇದು ನಡೆದಿದೆ. ಟಿಕೆಟ್ ಪಡೆದುಕೊಳ್ಳದ ವ್ಯಕ್ತಿಯೊಬ್ಬ ತಿರುಪತಿಯಲ್ಲಿ ರೈಲನ್ನು ಹತ್ತಿ ಸಿ-13 ಬೋಗಿಯಲ್ಲಿರುವ ಟಾಯ್ಲೆಟ್ ಒಳಹೊಕ್ಕು ಲಾಕ್ ಮಾಡಿಕೊಂಡಿದ್ದಾನೆ.
ಬಳಿಕ, ಅಲ್ಲಿ ಆ ವ್ಯಕ್ತಿ ಧೂಮಪಾನ ಮಾಡಿದ ಕಾರಣ ಟಾಯ್ಲೆಟ್ ಒಳಗಿದ್ದ ಸ್ವಯಂಚಾಲಿತ ಬೆಂಕಿ ನಿಯಂತ್ರಕ ವ್ಯವಸ್ಥೆ ಚಾಲನೆಗೊಂಡಿದೆ ಎಂಬ ಮಾಹಿತಿಯನ್ನು ದಕ್ಷಿಣ ಮಧ್ಯೆ ರೈಲ್ವೇ ವಲಯದ ವಿಜಯವಾಡ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮುನ್ನೆಚ್ಚರಿಕೆ ಗಂಟೆ ಬಾರಿಸುತ್ತಿದ್ದಂತೆ ಬೆಂಕಿ ನಿಯಂತ್ರಕದಿಂದ ಅಗ್ನಿ ಶಾಮಕ ಪೌಡರ್ ಬೋಗಿ ತುಂಬೆಲ್ಲಾ ಚಿಮುಕಲಾರಂಭಿಸಿದೆ, ಇದರಿಂದ ಗಾಬರಿಗೊಂಡ ಆ ಬೋಗಿಯಲ್ಲಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಬಳಿಕ ಅಲ್ಲಿದ್ದ ಎಮರ್ಜೆನ್ಸಿ ಫೋನ್ ಮೂಲಕ ರೈಲಿನ ಗಾರ್ಡಿಗೆ ಮಾಹಿತಿ ನೀಡಿದ್ದಾರೆ. ಬಳಿಕ ರೈಲು ಮನುಬೋಲು ಎಂಬಲ್ಲಿ ನಿಂತಿದೆ.
ತಕ್ಷಣವೇ ಆ ಬೋಗಿಯ ಕಡೆಗೆ ಆಗಮಿಸಿದ ರೈಲ್ವೇ ಪೊಲೀಸರು ಬೆಂಕಿ ನಿಯಂತ್ರಕ ವ್ಯವಸ್ಥೆಯೊಂದಿಗೆ ಬಂದವರೇ ಟಾಯ್ಲೆಟ್ ನ ಕಿಟಕಿ ಮುರಿದು ಒಳನುಗ್ಗಿದಾಗ ಅಸಲೀ ವಿಷಯ ಬೆಳಕಿಗೆ ಬಂದಿದೆ. ಇದೀಗ ಆ ವ್ಯಕ್ತಿಯನ್ನು ರೈಲ್ವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ರೈಲು ಅಲ್ಲಿಂದ ತನ್ನ ಪ್ರಯಾಣವನ್ನು ಮುಂದುವರೆಸಿದೆ.
Posted by Vidyamaana on 2024-07-25 16:43:22 |
ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.
ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.
ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್ ರೂಮ್ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.
ಕೂಡಲೇ ಎಂಟಿಹೆಚ್ಎಲ್ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್ನಲ್ಲಿ ಆಧಾರ್ ಕಾರ್ಡ್, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.
Posted by Vidyamaana on 2023-09-03 01:50:16 |
ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 3 ರಂದು
ಬೆಳಿಗ್ಗೆ 10 ಗಂಟೆಗೆ ದ ಕ ಜಿಲ್ಲಾ ಟ್ಯಾಕ್ಸಿಮೆನ್ ,ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸುರ್ಣಮಹೋತ್ಸವ
ಸ್ಥಳ: ಮಂಗಳೂರು ಪುರಭವನ
11 ಗಂಟೆಗೆ ಕೆಪಿಟಿ ಮಂಗಳೂರಿನಲ್ಲಿ ಅಭಿಮತ ಚಾನೆಲ್ ಉದ್ಘಾಟನೆ
12 ಗಂಟೆಗೆ ಕಂಬಳಬೆಟ್ಟುವಿನಲ್ಲಿ ಸೇವಾ ಸಹಕಾರಿ ಸಂಘ ಉದ್ಘಾಟನೆ
4 ಗಂಟೆಗೆ ಅಜ್ಜನಡ್ಕ ಸೌಹಾರ್ಧ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ
ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ