ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಅಂತಃಕರಣ ಶುದ್ದಿಯಾಗಿಟ್ಟುಕೊಳ್ಳುವ ಮೌಲ್ಯ ಅಡಗಿರುವ ಕೃತಿ; ಡಿ ಯದುಪತಿ ಗೌಡ

Posted by Vidyamaana on 2023-10-16 09:27:16 |

Share: | | | | |


ಅಂತಃಕರಣ  ಶುದ್ದಿಯಾಗಿಟ್ಟುಕೊಳ್ಳುವ ಮೌಲ್ಯ ಅಡಗಿರುವ ಕೃತಿ; ಡಿ ಯದುಪತಿ ಗೌಡ

ಬೆಳ್ತಂಗಡಿ; ಜಾಗತೀಕರಣ, ಉದಾರೀಕರಣ, ಆಧುನೀಕರಣ, ಸಂಸ್ಕೃತೀಕರಣ, ಮೊಬೈಲೀಕರಣ  ಇವೆಲ್ಲದರ ಮಧ್ಯೆ ನಮ್ಮ ಅಂತಃಕರಣ ಮೌಲ್ಯ ಹೇಗೆ ಶುದ್ದಿಯಾಗಿಟ್ಟುಕೊಳ್ಳುವುದು ಎಂಬುದರ ಕುರಿತಾಗಿ

ವಿದ್ಯಾರ್ಥಿಗಳು, ಪೋಷಕರು ಓದಬೇಕಾದ ಕೃತಿಯಾಗಿ ಮೌಲ್ಯ  ಹುಡುಕಾಟದಲ್ಲಿ ಕೃತಿ ಹೊರಬಂದಿದೆ ಎಂದು ಕಸಾಪ ಬೆಳ್ತಂಗಡಿ ಘಟಕದ ಅಧ್ಯಕ್ಷ ಡಿ‌ ಯದುಪತಿ ಗೌಡ ಹೇಳಿದರು.

ವಾಣಿ ಕಾಲೇಜಿನ ಆವರಣದಲ್ಲಿ ಅ.14 ರಂದು, ಮಾಮರ ಪ್ರಕಾಶನ ಮೈಸೂರು‌ ಅವರು ಹೊರ ತಂದಿರುವ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಅವರ ಬರಹಗಳ ಸಂಕಲ "ಮೌಲ್ಯಗಳ ಹುಡುಕಾಟದಲ್ಲಿ" ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು. 


ಈ ಪುಸ್ತಕದಲ್ಲಿ 62 ಲೇಖನಗಳಿದ್ದು, ತನ್ನ ಶಿಕ್ಷಕ ವೃತ್ತಿಬದುಕಿನ ಅನುಭವ ಮತ್ತು ಬೇರೆ ಬೇರೆ ಮನಸ್ಥಿತಿಯ ವಿದ್ಯಾರ್ಥಿಗಳ ಒಡನಾಟದ ಅನುಭವದಿಂದ ಈ ಬರಹಗಳು ಅವರ ಮೂಲಕ ಹೊರ ಬಂದಿದೆ. ಸಾಮಾಜಿಕ ಮೌಲ್ಯ ಎಂದರೇನು ಎಂಬುದನ್ನು ಪ್ರಶ್ನಿಸುವ ದಿನಮಾನದಲ್ಲಿ ಶಿಕ್ಷಣ ಅಂದರೆ ಓದು ಮಾತ್ರ ಅಲ್ಲ. ಅದರ ಆಚೆಗೆ ಬದುಕು ಇದೆ. ಸಮಾಜದ ವ್ಯಕ್ತಿಗಳು ಮತ್ತು ವ್ಯವಸ್ಥೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡುಹೋಗಬೇಕಾದ ಮೌಲ್ಯವನ್ನು ಈ ಬರಹಗಳು ಎಚ್ಚರಿಸುತ್ತವೆ. ವ್ಯಕ್ತಿ ವ್ಯಕ್ತಿ ಗಳ ನಡುವಿನ ಸಂಬಂಧ ಇಲ್ಲದ ಶಿಕ್ಷಣ ಮೌಲ್ಯವಿಲ್ಲದ್ದು. ಹಿಂದಿನ ಕಾಲದಲ್ಲಿ ಬಡತನದ ಮಧ್ಯೆಯೂ ಹಿರಿಯರ ಜೀವನದಲ್ಲಿ ನೈತಿಕತೆ, ಜೀವನ ಮೌಲ್ಯ ಉಳಿದುಕೊಂಡಿದ್ದರು ಎಂದವರು ವಿವರಿಸಿದರು.

ಮುಖ್ಯ ಅತಿಥಿಯಾಗಿದ್ದ ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ‌ದ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ ಮಾತನಾಡಿ, ಮನುಷ್ಯನ ಮನಸ್ಸು ಮತ್ತು ಆಲೋಚನೆಗಳು ನಿರ್ಮಲವಾಗಿದ್ದರೆ ಬಾಹ್ಯವಾಗಿ ಮತ್ತು ಆಂತರಿಕವಾಗಿ ನಮ್ಮ ಯೌವ್ವನವನ್ನು ಕಾಪಾಡಿಕೊಳ್ಳಬಹುದು. ನಮ್ಮ ನಡೆ ನುಡಿಯಲ್ಲಿ ಯಾವುದಾದರೊಂದು ಅಧ್ಯಾಪಕನ ಪ್ರಭಾವ ಇದ್ದೇ ಇರುತ್ತದೆ. ಈಗಿನ ದಿನಮಾನಗಳಲ್ಲಿ ನಾವು ಹೋಗುವ ದಾರಿಯಲ್ಲಿ ಎಡವಿದ್ದೇವೆ ಎಂದೆನಿಸುತ್ತದೆ. ಆಧುನಿಕ ಶಿಕ್ಷಣದ ಶೈಲಿ ಬದಲಾದರೂ ಸ್ಥಿತಿ ಅದೇ ಎಂಬುದು ಮುಖ್ಯ. ಯಾಕೂಬ್ ಅವರ ಈ ಕೃತಿಯಲ್ಲಿ ಭಾವ ಕೇಂದ್ರಿತವಾಗಿ ವಿಚಾರವನ್ನು ಮಂಡಿಸುವ ಶೈಲಿಯ ಬರಹಗಳು ಅಡಗಿವೆ. ಇದು ಸಮಾಜಕ್ಕೆ ಪ್ರಯೋಜನಕಾರಿಯಾಗಲಿದೆ ಎಂದರು.

ಪುಸ್ತಕಕ್ಕೆ ಮುನ್ನುಡಿ‌ ಬರೆದ ಹಿರಿಯ ಸಾಹಿತಿ ಅರವಿಂದ ಚೊಕ್ಕಾಡಿ ಮಾತನಾಡಿ ಲೇಖಕ ಯಾವತ್ತೂ ತೀರ್ಪುಗಾರ ಅಲ್ಲ. ತನ್ನ ಒಳಶೋಧದ ಪರಿಣಾಮಗಳನ್ನು ಹೇಳುವವನು ಅಷ್ಟೇ. ಆತನ ಅನುಭವಗಳು ಸಹೃದಯನ ಓದಿನ‌ ಪರಿಣಾಮವಾಗಿ ಅವನ ಅನುಭವವಾಗಿ ಅವನು ಕಂಡುಕೊಳ್ಳುವ ಸತ್ಯವೇ ಅವರವರ ಮೌಲ್ಯವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಬೆಳ್ತಂಗಡಿ ಘಟಕ್ ಅಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಅವರು ಮಾತನಾಡಿ, ಲಯನ್ಸ್ ಕ್ಲಬ್ ಸೇವಾ ಚಟುವಟಿಕೆಗೆ ಹೆಸರಾದ ಅಂತಾರಾಷ್ಟ್ರೀಯ ಸಂಸ್ಥೆ. ಇದೀಗ ಸಾಹಿತ್ಯಿಕ ಸೇವೆಗೂ ಮುಂದಡಿಇಟ್ಟಿದೆ. ಮೌಲ್ಯಗಳ ಬಗ್ಗೆ ಬರೆದ ಈ‌ಕೃತಿ ಹೊರತರಲು ವೇದಿಕೆ ಒದಗಿಸಿರುವುದು ನಮ್ಮ ಜವಾಬ್ದಾರಿ ಕೂಡ ಎಂದರು. 

ಲೇಖಕ ಯಾಕೂಬ್ ಎಸ್ ಕೊಯ್ಯೂರು ಅವರು ಪ್ರತಿಕ್ರಿಯಿಸಿ, ನನ್ನ ಅನುಭವ ಮತ್ತು ಆಲೋಚನೆಗಳಿಗೆ ಅಕ್ಷರ ರೂಪ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುತ್ತಿದ್ದೆ. ಜನರ ಪ್ರತಿಕ್ರಿಯೆ, ಹಿರಿಯರ ಸಲಹೆಯ ಮೂಲಕ ಅದಕ್ಕೆ ಈಗ ಪುಸ್ತಕದ ರೂಪ ಬಂದಿದೆ ಎಂದರು.


ಕಾರ್ಯಕ್ರಮ ಸಂಯೋಜಕ ಅಶ್ರಫ್ ಆಲಿಕುಂಞಿ ಮುಂಡಾಜೆ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.

ಅಬ್ದುಲ್ ಖಾದರ್ ನಾವೂರು ಕಾರ್ಯಕ್ರಮ ನಿರೂಪಿಸಿದರು. ಅಝರ್ ವಂದಿಸಿದರು. ಸಹಸಂಯೋಜಕರಾದ ಹರೀಶ್‌ ಹೆಗ್ಡೆ, ಹರ್ಷದ್, ಹೆರಾಲ್ಡ್ ಪಿಂಟೋ, ಶಾಹುಲ್ ಹಮೀದ್ ಸಹಕರಿಸಿದರು. ಸಂಘಟಕರ ಕಡೆಯಿಂದ ಯಾಕೂಬ್ ಎಸ್ ಕೊಯ್ಯೂರು ಅವರನ್ನು ಗೌರವಿಸಲಾಯಿತು. ಸಮಾರಂಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಯ್ದ ಪ್ರತನಿಧಿಗಳು ಭಾಗಿಯಾಗಿದ್ದರು.

ಬ್ಯಾಲೆಟ್ ಪೇಪರ್ ನಲ್ಲಿ ಮೊದಲ ಹೆಸರು ಗಿಟ್ಟಿಸಿಕೊಂಡ ಅಶೋಕ್ ರೈ

Posted by Vidyamaana on 2023-04-24 14:50:20 |

Share: | | | | |


  ಬ್ಯಾಲೆಟ್ ಪೇಪರ್ ನಲ್ಲಿ ಮೊದಲ ಹೆಸರು ಗಿಟ್ಟಿಸಿಕೊಂಡ ಅಶೋಕ್ ರೈ

ಪುತ್ತೂರು: ಅಶೋಕ್ ಕುಮಾರ್ ರೈ ಹೆಸರೇ ಗೆಲುವಿನ ಸೂಚನೆಯನ್ನು ತೋರ್ಪಡಿಸಿದೆ.

ನಾಮಪತ್ರ ಹಿಂದೆಗೆದುಕೊಳ್ಳಲು ಸೋಮವಾರ ಕೊನೆ ದಿನವಾಗಿತ್ತು. ನಾಮಪತ್ರ ವಾಪಾಸ್ ಬಳಿಕ ಸಹಾಯಕ ಆಯುಕ್ತರ ಕಚೇರಿ ಹೊರಗಿನ ನೊಟೀಸ್ ಬೋರ್ಡಿನಲ್ಲಿ ನಾಮಪತ್ರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಅಶೋಕ್ ಕುಮಾರ್ ರೈ ಅವರ ಹೆಸರು ಮೊದಲನೆಯವರಾಗಿ ಕಾಣಿಸಿಕೊಂಡಿದೆ.

ಭಾರತ್ ಬ್ರ್ಯಾಂಡ್ ಅಕ್ಕಿಗೆ ಚಾಲನೆ, ಎಲ್ಲಿ ಸಿಗುತ್ತೆ ಈ ಅಕ್ಕಿ? ಬೆಲೆ ಎಷ್ಟು?

Posted by Vidyamaana on 2024-02-06 21:37:19 |

Share: | | | | |


ಭಾರತ್ ಬ್ರ್ಯಾಂಡ್ ಅಕ್ಕಿಗೆ ಚಾಲನೆ, ಎಲ್ಲಿ ಸಿಗುತ್ತೆ ಈ ಅಕ್ಕಿ? ಬೆಲೆ ಎಷ್ಟು?

ಬೆಂಗಳೂರು : ಕೇಂದ್ರ ಸರ್ಕಾರದ ಭಾರತ್ ಬ್ರ್ಯಾಂಡ್ ಅಕ್ಕಿ ಯೋಜನೆಗೆ ಇಂದು ಚಾಲನೆ‌ ಸಿಕ್ಕಿದೆ. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಈ ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದರು.ಮತ್ತೊಂದೆಡೆ ವಸಂತ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ನೆಫೆಡ್ ಕಚೇರಿ ಮುಂಭಾಗದಲ್ಲಿ ಭಾರತ್ ಅಕ್ಕಿ ಮಾರಟ ವಾಹನಗಳಿಗೆ ಚಾಲನೆ ನೀಡಲಾಗಿದೆ.ಎಫ್‌ಸಿಐ ಚೆರ್ಮನ್ ಭೂಪೇಂದ್ರ ಸಿಂಗ್ ಬಾಟಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಒಟ್ಟು 7 ವಾಹನಗಳಿಗೆ ಚಾಲನೆ ನೀಡಿದರು.


ಅಕ್ಕಿ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ಘೋಷಿಸಿದೆ. ನಾಫೆಡ್​​-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಇಂದು ನಾಫೆಡ್​​ನ 7 ಸಂಚಾರಿ ವಾಹನಗಳಲ್ಲಿ ಭಾರತ್​ ಅಕ್ಕಿ ಮಾರಾಟ ಮಾಡಲಾಗುತ್ತದೆ.


ಭಾರತ್ ಅಕ್ಕಿ ಯೋಜನೆಯಡಿ ಕೆಜಿ ಭಾರತ್ ಅಕ್ಕಿಗೆ 29 ರೂ. ನಿಗದಿ ಪಡಿಸಲಾಗಿದ್ದು, 5 ಕೆಜಿ, 10 ಕೆಜಿ ಬ್ಯಾಗ್​ಗಳಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಲಭ್ಯವಿದೆ. ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನಾಳೆಯಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಲಭ್ಯವಾಗಲಿದೆ.


ಅಮೆಜಾನ್‌, ಫ್ಲಿಪ್‌ಕಾರ್ಟ್‌ ಮುಂತಾದ ಇ - ಕಾಮರ್ಸ್‌ ತಾಣಗಳಲ್ಲಿ ಅಕ್ಕಿ ಮಾರಾಟಕ್ಕೆ ಮುಂದಾಗುತ್ತಿರುವ ಬೆನ್ನಲ್ಲೇ ಈ ನಿರ್ಧಾರ ಕೈಗೊಂಡಿದೆ. ಭಾರತ್‌ ಅಕ್ಕಿ 5 ಕೆ.ಜಿ, 10 ಕೆ.ಜಿ ಪ್ಯಾಕೆಟ್‌ಗಳಲ್ಲಿ ಮಾರಾಟಗೊಳ್ಳಲಿದ್ದು,ಪ್ರತಿ ಕಿ.ಲೋಗೆ 29 ರೂ. ನಿಗದಿ ಪಡಿಸಲಾಗಿದೆ ಎಂದು ಆಹಾರ ಸಚಿವಾಲಯದ ಕಾರ್ಯದರ್ಶಿ ಸಂಜೀವ್‌ ಚೋಪ್ರಾ ಮಾಹಿತಿ ನೀಡಿದ್ದಾರೆ.

ಸಮರ್ಥ ಜನನಾಯಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ – ಪುತ್ತೂರು ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಲು ನಡೆದಿದೆ ಭರ್ಜರಿ ತಯಾರಿ

Posted by Vidyamaana on 2023-05-08 11:07:46 |

Share: | | | | |


ಸಮರ್ಥ ಜನನಾಯಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ – ಪುತ್ತೂರು ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಲು ನಡೆದಿದೆ ಭರ್ಜರಿ ತಯಾರಿ

ಪುತ್ತೂರು: ಒಬ್ಬ ಜನನಾಯಕ ಹೇಗಿರಬೇಕೆಂಬ ಪ್ರಶ್ನೆಗೆ ಹಲವರು ಹಲವು ಉತ್ತರಗಳನ್ನು ಕೊಡಬಹುದು. ಉತ್ತಮ ನಾಯಕತ್ವದ ಗುಣಗಳು, ಮಾತುಗಾರಿಕೆ, ತನ್ನದೇ ಆದ ಸ್ವಂತ ಚಾರ್ಮ್, ಜನರ ನೋವಿಗೆ ಸ್ಪಂದಿಸುವ ಗುಣ, ಸಂಕಷ್ಟದ ಸಂದರ್ಭದಲ್ಲಿ ಎದೆಗುಂದದೆ ಜೊತೆಗಿದ್ದವರಿಗೆ ಧೈರ್ಯ ತುಂಬಿ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುವ ಸ್ವಭಾವ.. ಹೀಗೆ ಒಬ್ಬ ಉತ್ತಮ ನಾಯಕನಲ್ಲಿ ಇಂತಹ ಹಲವು ಗುಣಗಳನ್ನು ನಾವು ಪಟ್ಟಿ ಮಾಡುತ್ತಾ ಹೋಗಬಹುದು. ಆದರೆ ಇವುಗಳಲ್ಲಿ ಎಲ್ಲಾ ಗುಣಗಳು ಅಲ್ಲವಾದರೂ ಕೆಲವು ಗುಣಗಳನ್ನಾದರೂ ಒಬ್ಬನೇ ನಾಯಕನಲ್ಲಿ ನಿರೀಕ್ಷಿಸುವುದು ಇಂದಿನ ದಿನಗಳಲ್ಲಿ ಕಷ್ಟಸಾಧ್ಯವೇ ಸರಿ!

       ಆದರೆ ಪುತ್ತೂರು ಕ್ಷೇತ್ರದ ಜನತೆಯ ಪುಣ್ಯದ ಫಲವೋ ಎಂಬಂತೆ ಈ ಬಾರಿ ಹತ್ತೂರ ಒಡೆಯನ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಓರ್ವ ಸಮರ್ಥ ಅಭ್ಯರ್ಥಿ ಕಣಕ್ಕಿಳಿದಿದ್ದು ಕ್ಷೇತ್ರದ ಮತದಾರರ ಆಶೀರ್ವಾದದ ನಿರೀಕ್ಷೆಯಲ್ಲಿದ್ದಾರೆ- ಅವರೇ ಪುತ್ತೂರಿನವರಿಗೆ ಚಿರಪರಿಚಿತ ಹೆಸರು, ಸಮಾಜಸೇವೆಯ ಮೂಲಕ ನೊಂದ 25 ಸಾವಿರಕ್ಕೂ ಹೆಚ್ಚು ಕುಟುಂಬಗಳ ಬಾಳಿನಲ್ಲಿ ಭರವಸೆಯ ನಗುವನ್ನು ಅರಳಿಸಿರುವ ನಗುಮೊಗದ ನಾಯಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ.

ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

Posted by Vidyamaana on 2024-06-08 17:17:10 |

Share: | | | | |


ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

ಬೆಂಗಳೂರು : ರಾಜಧಾನಿ ಬೆಂಗಳೂರಿ‌ನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್‌ ರಾಡ್‌ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ.

ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿಯಾಗಿದ್ದಾನೆ.

ಥಣಿಸಂದ್ರದ ಅಂಜನಾದ್ರಿ ಲೇಔಟ್ ನಿವಾಸಿಯಾದ ಕೆ.ವಿ. ಶ್ರೀನಾಥ್‌ ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚಿಟ್‌ ಫಂಡ್‌ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ. ಹೀಗಿರುವಾಗ ಕಳೆದ ಮೇ.28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್‌ ವಾಪಸ್ ಆಗಿರಲಿಲ್ಲ. ಇದರಿಂದ ಹೆದರಿದ ಶ್ರೀನಾಥ್‌ ಪತ್ನಿ ಮೇ.29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ದಾಖಲಿಸಿದ್ದರು.

ದೂರು ದಾಖಲಿಸಿಕೊಂಡು ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಕೆ.ವಿ.ಶ್ರೀನಾಥ್ ಮೇ.28ರಂದು ಆರೋಪಿ ಮಾಧವರಾವ್ ಮನೆಗೆ ಹೋಗಿದ್ದು ಗೊತ್ತಾಗಿತ್ತು. ಕೆ.ಆರ್.ಪುರಂನ ವಿಜಿನಪುರದಲ್ಲಿರುವ ಮಾಧವರಾವ್ ಮನೆಗೆ ಶ್ರೀನಾಥ್‌ ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೆ ಒಳಗೆ ಹೋದವನು ಹೊರಗೆ ಬಂದಿರಲಿಲ್ಲ. ಜತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ವು. ಇದರಿಂದ ಮಾಧವರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿದ್ದ.

ಬಳಿಕ ಆತನ ಮೊಬೈಲ್‌ ಲೋಕೇಶನ್‌ ಪತ್ತೆ ಮಾಡಿದ ಪೊಲೀಸರಿಗೆ ಆರೋಪಿ ಆಂಧ್ರಪ್ರದೇಶದಲ್ಲಿಇದ್ದಾನೆ ಎಂದು ಗೊತ್ತಾಗಿತ್ತು. ನಂತರ ಮಾಧವರಾವ್‌ನನ್ನು ಕರೆತಂದು ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಅಸಲಿ ಕಥೆಯನ್ನು ತೆರೆದಿಟ್ಟಿದ್ದ.

ರಣರೋಚಕ ಪಂದ್ಯದಲ್ಲಿ ಗೆದ್ದುಬೀಗಿದ ಆಸೀಸ್‌! ಗೆಲುವಿನ ಹೊಸ್ತಿಲಲ್ಲಿ ಎಡವಿದ ಕಿವೀಸ್‌

Posted by Vidyamaana on 2023-10-29 11:01:02 |

Share: | | | | |


ರಣರೋಚಕ ಪಂದ್ಯದಲ್ಲಿ ಗೆದ್ದುಬೀಗಿದ ಆಸೀಸ್‌! ಗೆಲುವಿನ ಹೊಸ್ತಿಲಲ್ಲಿ ಎಡವಿದ ಕಿವೀಸ್‌

ಧರ್ಮಶಾಲಾ :ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‌ (AUS vs NZ) ನಡುವಿನ ವಿಶ್ವಕಪ್‌ 2023ರ 27ನೇ ಪಂದ್ಯದಲ್ಲಿ ಕಿವೀಸ್‌ ವಿರುದ್ಧ ಆಸೀಸ್‌ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಆಸೀಸ್‌ ವಿಶ್ವಕಪ್‌ ಸೆಮಿ ಫೈನಲ್‌ ಹಾದಿ ಸುಲಭವಾಗಿದೆ. ಇನ್ನು, ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 49.2 ಓವರ್ ಗಳಲ್ಲಿ 388 ರನ್ ಗಳಿಗೆ ಆಲೌಟಾಯಿತು.ಈ ಟಾರ್ಗೆಟ್‌ ಬೆನ್ನಟ್ಟಿದ ನ್ಯೂಜಿಲ್ಯಾಂಡ್‌ ತಂಡ ಉತ್ತಮವಾಗಿ ಬ್ಯಾಟಿಂಗ್‌ ಮಾಡಿದರೂ ಸಹ ಅಂತಿಮ ಹಂತದಲ್ಲಿ ಎಡವಿದ ಕಾರಣ ಗೆಲ್ಲುವ ಅವಕಾಶವನ್ನು ಕಳೆದುಕೊಂಡರು.

ವಿಡಿಯೋ ನೋಡಲು ಕ್ಲಿಕ್ ಮಾಡಿ....ರಣರೋಚಕ ಪಂದ್ಯದಲ್ಲಿ ಗೆದ್ದುಬೀಗಿದ ಆಸೀಸ್‌! ಗೆಲುವಿನ ಹೊಸ್ತಿಲಲ್ಲಿ ಎಡವಿದ ಕಿವೀಸ್‌

ಅಲ್ಲದೇ ಕರ್ನಾಟಕ ಮೂಲದ ಕಿವೀಸ್‌ ಆಟಗಾರ ರಚಿನ್‌ ರವೀಂದ್ರ ಶತಕದ ಆಟವೂ ತಂಡದ ಗೆಲುವಿಗೆ ಸಹಾಕವಾಗಲಿಲ್ಲ. ಅಂತಿಮವಾಗಿ ನ್ಯೂಜಿಲ್ಯಾಂಡ್‌ ತಂಡವು 50 ಓವರ್‌ಗೆ 9 ವಿಕೆಟ್ ನಷ್ಟಕ್ಕೆ 383 ರನ್‌ ಗಳಿಸಿತು. ಈ ಮೂಲಕ 5 ರನ್‌ಗಳಿಂದ ಸೋಲನ್ನಪ್ಪಿತು.


ಭರ್ಜರಿ ಶತಕ ಸಿಡಿಸಿದ್ದ ರಚಿನ್‌ ರವೀಂದ್ರ:


ನ್ಯೂಜಿಲೆಂಡ್ ಪರ 6 ತಿಂಗಳ ಹಿಂದೆಯಷ್ಟೇ ಪದಾರ್ಪಣೆ ಮಾಡಿದ ಆಟಗಾರ ಭರ್ಜರಿ ಶತಕ ಸಿಡಿಸಿ ಮಿಂಚಿದರು. ಕಾಂಗರೂ ತಂಡದ ವಿರುದ್ಧ ಪಂದ್ಯದ ಮೂಲಕ ವಿಶ್ವಕಪ್‌ನಲ್ಲಿ ಎರಡನೇ ಶತಕ ಸಿಡಿಸಿದ ರಚಿನ್ ರವೀಂದ್ರ ಮತ್ತೊಮ್ಮೆ ಅಬ್ಬರಿಸಿದರು. ರಚಿನ್ ರವೀಂದ್ರ ಆಸ್ಟ್ರೇಲಿಯದ ಮೇಲೆ ಪ್ರಾಬಲ್ಯ ಮೆರೆದ ಏಕೈಕ ಬ್ಯಾಟ್ಸ್‌ಮನ್. ಇದರ ಹೊರತಾಗಿ ಡೆರಿಲ್ ಮಿಚೆಲ್ ಅರ್ಧಶತಕ ಇನಿಂಗ್ಸ್ ಆಡಿದರು.ರವೀಂದ್ರ ಅಂಗದ ಹಾಗೆ ಇನ್ನೊಂದು ತುದಿಯಲ್ಲಿ ಹೆಪ್ಪುಗಟ್ಟಿದ. ಅವರು ಕೇವಲ 89 ಎಸೆತಗಳಲ್ಲಿ 9 ಬೌಂಡರಿ ಮತ್ತು 5 ಗಗನಚುಂಬಿ ಸಿಕ್ಸರ್‌ಗಳ ಸಹಾಯದಿಂದ 116 ರನ್ ಗಳಿಸಿದರು. ಆದರೆ ಅವರ ವಿಕೆಟ್ ನಂತರ ನ್ಯೂಜಿಲೆಂಡ್ ತಂಡ ಸಂಕಷ್ಟಕ್ಕೆ ಸಿಲುಕಿತು. ಇದಲ್ಲದೆ ಡೇರಿಲ್ ಮಿಚೆಲ್ ಮತ್ತು ಜೇಮ್ಸ್ ನೀಶಮ್ ತಮ್ಮ ಬಿರುಸಿನ ಅರ್ಧಶತಕಗಳ ಮೂಲಕ ಕಾಂಗರೂ ತಂಡಕ್ಕೆ ಕೊನೆ ಕ್ಷಣದವರೆಗೂ ಕಾಡಿದರು. ಈ ವೇಳೆ ಜೇಮ್ಸ್ ನೀಶಮ್ 39 ಎಸೆತದಲ್ಲಿ 3 ಸಿಕ್ಸ್‌ ಮತ್ತು 3 ಫೋರ್‌ ಮೂಲಕ 58 ರನ್‌ ಸಿಡಿಸುವ ಮೂಲಕ ಕಿವೀಸ್‌ ಪರ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ ಇವರ ವಿಕೆಟ್ ಕಳೆದುಕೊಳ್ಳುತ್ತಿದ್ದಂತೆ ಗೆಲುವೂ ಸಹ ಕೈಜಾರಿತು. ಈ ಮೂಲಕ ತಂಡ 383 ರನ್‌ಗಳಿಗೆ ತನ್ನ ಇನ್ನಿಂಗ್ಸ್ ಕೊನೆಗೊಳಿಸಿತು.


ಭರ್ಜರಿ ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ:


ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆಸೀಸ್‌ ಭರ್ಜರಿ ಬ್ಯಾಟಿಂಗ್‌ ಮೂಲಕ ಬೃಹತ್‌ ಸ್ಕೋರ್‌ ಕಲೆಹಾಕುವಲ್ಲಿ ಯಶಸ್ವಿಯಾದರು. ಆಸೀಸ್‌ ಪರ ಟ್ರಾವಿಸ್ ಹೆಡ್ (67 ಎಸೆತಗಳಲ್ಲಿ 109; 10 ಬೌಂಡರಿ, 7 ಸಿಕ್ಸರ್), ಡೇವಿಡ್ ವಾರ್ನರ್ (65 ಎಸೆತಗಳಲ್ಲಿ 81; 5 ಬೌಂಡರಿ, 6 ಸಿಕ್ಸರ್) ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ (24 ಎಸೆತಗಳಲ್ಲಿ 41; 5 ಬೌಂಡರಿ, 2 ಸಿಕ್ಸರ್) ಮಿಂಚಿದರು.ಬ್ಯಾಟ್ಸ್‌ಮನ್‌ಗಳು. ಕೊನೆಯಲ್ಲಿ ಜೋಸ್ ಇಂಗ್ಲಿಸ್ (28 ಎಸೆತಗಳಲ್ಲಿ 38 ರನ್) ಮತ್ತು ಪ್ಯಾಟ್ ಕಮಿನ್ಸ್ (14 ಎಸೆತಗಳಲ್ಲಿ 37 ರನ್) ಮಿಂಚಿದರು. ಮ್ಯಾಕ್ಸಿ 24 ಎಸೆತಗಳಲ್ಲಿ 41 ರನ್ ಗಳಿಸಿದರು. ಅಂತಿಮವಾಗಿ ಪ್ಯಾಟ್ ಕಮಿನ್ಸ್ ಮತ್ತು ಜೋಸ್ ಇಂಗ್ಲಿಸ್ ಕೂಡ ಮಿಂಚಿದ್ದರಿಂದ ಆಸ್ಟ್ರೇಲಿಯಾ ಬೃಹತ್ ಸ್ಕೋರ್ ದಾಖಲಿಸಿತು.

New Categories
Recent News
Popular News


Leave a Comment: