ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ಬೆಳ್ತಂಗಡಿ, ಕಬಡ್ಡಿ ಪಂದ್ಯಾವಳಿಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನ; ರೊಚ್ಚಿಗೆದ್ದ ಆಟಗಾರರಿಂದ ಮೈದಾನದಲ್ಲೇ ಫೈಟಿಂಗ್

Posted by Vidyamaana on 2023-02-22 04:33:01 |

Share: | | | | |


ಬೆಳ್ತಂಗಡಿ, ಕಬಡ್ಡಿ ಪಂದ್ಯಾವಳಿಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನ; ರೊಚ್ಚಿಗೆದ್ದ ಆಟಗಾರರಿಂದ ಮೈದಾನದಲ್ಲೇ ಫೈಟಿಂಗ್

ಬೆಳ್ತಂಗಡಿ: ಕಬಡ್ಡಿ ಪಂದ್ಯಾವಳಿಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನಗೊಂಡ ಆಟಗಾರರು ಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆ ಮುಂಡಾಜೆಯಲ್ಲಿ ನಡೆದಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಅಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಆಟಗಾರರ ಮಧ್ಯೆ ಗಲಾಟೆ ನಡೆದಿದ್ದು, ಸದ್ಯ ಹೊಡೆದಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದ ಆಡೂರು ಮೈದಾನದಲ್ಲಿ ಫೆ. 19ರಂದು . ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಕಬಡ್ಡಿ ವಂದ್ಯಾವಳಿ ಆಯೋಜಿಸಿದ್ದರು. ಇದರಲ್ಲಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಹಾಗೂ ಆಟಗಾರರ ಮಧ್ಯೆ ನಡೆದ ಹೊಡೆದಾಟವಾಗಿದೆ.

ಮುಂಬೈ ಗ್ಯಾರೇಜ್‌ ನಲ್ಲಿ ವಾಸವಿದ್ದ ನಟ; ಈಗ ದುಬೈ ಲಂಡನ್‌ ಅಮೆರಿಕಾದಲ್ಲೂ ಮನೆ, ಹತ್ತು ಕಾರುಗಳ ಒಡೆಯ

Posted by Vidyamaana on 2023-12-25 20:23:26 |

Share: | | | | |


ಮುಂಬೈ ಗ್ಯಾರೇಜ್‌ ನಲ್ಲಿ ವಾಸವಿದ್ದ ನಟ; ಈಗ ದುಬೈ ಲಂಡನ್‌ ಅಮೆರಿಕಾದಲ್ಲೂ ಮನೆ, ಹತ್ತು ಕಾರುಗಳ ಒಡೆಯ

ಬಾಲಿವುಡ್ ಜಗತ್ತಿನಲ್ಲಿ 80 ಹಾಗೂ 90ರ ದಶಕಗಳಲ್ಲಿ ಬಹುಬೇಡಿಕೆಯ ಸ್ಟಾರ್ ನಟರಾಗಿದ್ದವರ ಕಥೆಯಿದು. ಅವರಿನ್ನೂ ಆಗತಾನೇ ಇಂಡಸ್ಟ್ರಿಗೆ ಬಂದ ದಿನಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡಿಕೊಂಡು ಜೀವನೋಪಾಯಕ್ಕಾಗಿ ಭಾರಿ ಕಷ್ಟಪಡುತ್ತಿದ್ದರು. ಅದರೆ, ಇಂದು ಬಾಲಿವುಡ್‌ನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಅವರ ಹೆಸರೂ ಕೂಡ ಕಾಣಿಸುತ್ತಿದೆ.ಅವರು ಯಾರು ಬಲ್ಲಿರೇನು?


ಈ ಸ್ಟಾರ್ ನಟರ ಇಂದಿನ ಒಟ್ಟೂ ಅಸ್ತಿಯ ಮೌಲ್ಯ ಬರೋಬ್ಬರಿ 134 ಕೋಟಿ ರೂಪಾಯಿಗಳು. ಪ್ರತಿ ವರ್ಷ ಸಿನಿಮಾ ಹಾಗು ಬಿಸಿನೆಸ್‌ಗಳಿಂದ 12 ಕೋಟಿಗೂ ಹೆಚ್ಚು ಸಂಪಾದನೆ ಮಾಡುತ್ತಾರಂತೆ. ಒಂದು ಸಿನಿಮಾಗೆ ಈಗ 2-4 ಕೋಟಿ ರೂಪಾಯಿಗಳವರೆಗೆ ಸಂಭಾವನೆ ಪಡೆಯುವ ಇವರು, ಸ್ಟಾರ್ ಆಗಿದ್ದ ಕಾಲದಲ್ಲಿ ಅಂದಿನ ಲೆಕ್ಕದಲ್ಲಿ ಚೆನ್ನಾಗಿಯೇ ಸಂಪಾದಿಸುತ್ತಿದ್ದರು. ಇವರು ಬ್ರಾಂಡ್ ಎಂಡಾರ್ಸ್‌ಮೆಂಟ್‌ಗೆ 55 ಲಕ್ಷ ರೂ ಚಾರ್ಜ್ ಮಾಡುತ್ತಾರೆ. ಇನ್ನು ಮುಂಬೈನ ಜುಹುದಲ್ಲಿ ಐಷಾರಾಮಿ ಬಂಗಲೆ ಹೊಂದಿದ್ದು, ಇದರ ಮೌಲ್ಯ 30 ಕೋಟಿ ರೂಪಾಯಿಗಳು.


ಕಳೆದ ನಾಲ್ಕು ದಶಕಗಳಿಂದ ತಮ್ಮ ನಟನೆಯ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಆದರೆ ಈ ಹಂತವನ್ನು ತಲುಪಲು ಅವರ ಪಟ್ಟ ಪಾಡು ಅಂತಿಂಥದಲ್ಲ. ಕಳೆದ ದಿನವಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಈ ಬಾಲಿವುಡ್ ನಟ. ಹಾಗಿದ್ದರೆ ಇವರು ಯಾರು? ಅವರು ಬೇರಾರೂ ಅಲ್ಲ, ಬೇಟಾ (Beta)ಖ್ಯಾತಿಯ ಅನಿಲ್ ಕಪೂರ್.ಮುಂಬೈಗೆ ಬಂದ ಹೊಸದರಲ್ಲಿ ನಟ ಅನಿಲ್ ಕಪೂರ್ ಹಾಗೂ ಅವರ ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಕೂಡ ಇರಲಿಲ್ಲ. ಇ ಟೈಮ್ಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಮುಂಬೈನ ಪೃಥ್ವಿರಾಜ್ ಕಪೂರ್ ಅವರ ಗ್ಯಾರೇಜ್‌ನಲ್ಲಿ ಅನಿಲ್ ಕಪೂರ್ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ವೃತ್ತಿಜೀವನದ ಆರಂಭದಲ್ಲಿ ಮನೆಯ ಖರ್ಚುಗಳನ್ನು ನಿಭಾಯಿಸಲೆಂದು ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಅನಿಲ್, 1979 ರಲ್ಲಿ ಹಮಾರೆ ತುಮ್ಹಾರೆ ಮೂಲಕ ತಮ್ಮ ವೃತ್ತಿಜೀವನವನ್ನು ಶುರು ಮಾಡಿದರು. ಬಳಿಕ, 1980 ರಲ್ಲಿ ತೆಲುಗು ಚಿತ್ರ ವಂಶ ವೃಕ್ಷಂನಲ್ಲಿ ಕೆಲಸ ಮಾಡಿದರು.1983 ರಲ್ಲಿ ಅನಿಲ್ ಕಪೂರ್ ಅವರ ವೋ ಸಾತ್ ದಿನ್ ಚಿತ್ರ ಬಿಡುಗಡೆಯಾಯಿತು. ಇದರಲ್ಲಿ ಅವರು ಮೊದಲ ಬಾರಿಗೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಬಳಿಕ, ಅನಿಲ್ ಕಪೂರ್ ಹಿಂತಿರುಗಿ ನೋಡಲೇ ಇಲ್ಲ. ಬೇಟಾ, ಮಿಸ್ಟರ್ ಇಂಡಿಯಾ, ಮೇರಿ ಜಂಗ್, ಕರ್ಮ, ತೇಜಾಬ್, ಕಸಂ, ರಾಮ್ ಲಖನ್, ಹಮಾರಾ ದಿಲ್ ಆಪ್ಕೆ ಪಾಸ್ ಹೈ, ಲಾಡ್ಲಾ, ಮತ್ತು ನಾಯಕ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಜತೆಗೆ, ಹಾಲಿವುಡ್ ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.ನಟ ಅನಿಲ್ ಕಪೂರ್ ಸಿನಿಮಾ ಪಟ್ಟಿಯಲ್ಲಿ ಸ್ಲಮ್‌ ಡಾಗ್ ಮಿಲಿಯನೇರ್ ಮತ್ತು ಮಿಷನ್ ಇಂಪಾಸಿಬಲ್ ಹಾಗೂ ಘೋಸ್ಟ್ ಪ್ರೋಟೋಕಾಲ್ ಸಹ ಸೇರಿವೆ. ಈ ಸಿನಿಮಾಗಳ ಮೂಲಕ ಅನಿಲ್ ಕಪೂರ್ ತಮ್ಮ ಹೆಸರನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದಾರೆ.ನಟ ಅನಿಲ್ ಕಪೂರ್ ದುಬೈನಲ್ಲಿ 2 ಬೆಡ್ ರೂಂ ಅಪಾರ್ಟ್ ಮೆಂಟ್ ಹೊಂದಿದ್ದು, ಲಂಡನ್‌ ನಲ್ಲಿಯೂ ಒಂದು ಮನೆಯನ್ನು ಹೊಂದಿದ್ದಾರೆ. ಕ್ಯಾಲಿಪೋರ್ನಿಯಾದಲ್ಲೂ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಅನಿಲ್ ಕಪೂರ್ ಅವರು BMW, Bentley,Jaguar, Audi Mercedes Benz S Class ಮುಂತಾದ ದುಬಾರಿ ಮತ್ತು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಒಟ್ಟಿನಲ್ಲಿ, ಅಂದು ಜೀವನೋಪಾಯಕ್ಕೆ ಗ್ಯಾರೇಜ್ ಆಶ್ರಯಿಸಿದ್ದ ನಟ ಇಂದು ಕೋಟ್ಯಾಧಿಪತಿಯಾಗಿ ಬಾಳುತ್ತಿದ್ದಾರೆ.

ಅಕ್ಕನ ಗಂಡನೇ ಬೇಕು, ಆತನನ್ನೇ ಮದುವೆಯಾಗುತ್ತೇನೆಂದು ಹಠ ಹಿಡಿದ ಯುವತಿ! ನೊಂದ ಯುವತಿ ಮಾಡಿದ್ದೇನು ಗೊತ್ತಾ?

Posted by Vidyamaana on 2024-07-19 08:13:00 |

Share: | | | | |


ಅಕ್ಕನ ಗಂಡನೇ ಬೇಕು, ಆತನನ್ನೇ ಮದುವೆಯಾಗುತ್ತೇನೆಂದು ಹಠ ಹಿಡಿದ ಯುವತಿ! ನೊಂದ ಯುವತಿ ಮಾಡಿದ್ದೇನು ಗೊತ್ತಾ?

ತೆಲಂಗಾಣ: ತನ್ನ ಸ್ವಂತ ಅಕ್ಕನ ಗಂಡನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು, ಈ ಸಂಬಂಧವನ್ನು ಮನೆಯವರು ಒಪ್ಪದೇ ಇದ್ದಾಗ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​​​ನ ಹಯಾತ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದರಿಂದ ನೊಂದ ಯುವತಿ ಮಾಡಿದ್ದೇನು ಗೊತ್ತಾ? 

ತೆಲಂಗಾಣ: ತನ್ನ ಸ್ವಂತ ಅಕ್ಕನ ಗಂಡನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದು, ಈ ಸಂಬಂಧವನ್ನು ಮನೆಯವರು ಒಪ್ಪದೇ ಇದ್ದಾಗ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​​​ನ ಹಯಾತ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಯುವಕನ ದಾಂಧಲೆ

Posted by Vidyamaana on 2023-09-26 15:32:07 |

Share: | | | | |


ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಯುವಕನ ದಾಂಧಲೆ

ಮಂಗಳೂರು ಸೆ.26: ನಗರದ ಇಂಡಿಯಾನ ಆಸ್ಪತ್ರೆಗೆ ರೋಗಿಯ ಜೊತೆ ಬಂದಿದ್ದ ವ್ಯಕ್ತಿಯೊಬ್ಬ ರಿಸೆಪ್ಶನಿಸ್ಟ್ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದು ಘಟನೆ ನಡೆದಿದೆ.


ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕದ್ರಿ ವ್ಯಾಸನಗರ ನಿವಾಸಿ ಆಶೀಕ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೆ.25ರಂದು ಸಂಜೆ ಆಶೀಕ್ ತನ್ನ ತಾಯಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ ರೋಗಿಯ ಮಾಹಿತಿ ಕೇಳಿದ್ದಾರೆ.


ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದಾಗ, ಆರೋಪಿ ಆಶೀಕ್ ಕೋಪಗೊಂಡಿದ್ದು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ದಾಂಧಲೆ ನಡೆಸಿದ್ದು ಮಹಿಳೆಯನ್ನು ದೂಡಿ ಮೈ ಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಡ್ಮಿಶನ್ ಡೆಸ್ಕ್ ನಲ್ಲಿದ್ದ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದಾನೆ. ಈ ಬಗ್ಗೆ ತೊಂದರೆಗೀಡಾದ ಮಹಿಳೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ಮಾನಸಿಕ ತೊಂದರೆ ಎದುರಿಸುತ್ತಿದ್ದಾನೆ. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಮನೆಯವರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.

KSRTC Bus: ರಾಜ್ಯದಲ್ಲಿ ರೋಡಿಗಿಳಿದ ಪಲ್ಲಕ್ಕಿ ಬಸ್‌ಗಳು- ಏನೇನು ವೈಶಿಷ್ಟ್ಯ? ಎಲ್ಲೆಲ್ಲಿ ಸಂಚಾರ? ಮಾಹಿತಿ ವಿವರ

Posted by Vidyamaana on 2023-10-08 08:40:51 |

Share: | | | | |


KSRTC Bus: ರಾಜ್ಯದಲ್ಲಿ ರೋಡಿಗಿಳಿದ ಪಲ್ಲಕ್ಕಿ ಬಸ್‌ಗಳು- ಏನೇನು ವೈಶಿಷ್ಟ್ಯ? ಎಲ್ಲೆಲ್ಲಿ ಸಂಚಾರ? ಮಾಹಿತಿ ವಿವರ

ಬೆಂಗಳೂರು: ಬಹುನಿರೀಕ್ಷಿತ ನಾನ್‌ ಎಸಿ ಪಲ್ಲಕ್ಕಿ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. 40 ನಾನ್‌ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್‌ಗಳೊಂದಿಗೆ 100 ಹೊಸ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಹೊರತಂದಿದೆ.ನೂತನ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು. ಈ ವೇಳೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಜರಿದ್ದರು.

ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಪಲ್ಲಕ್ಕಿ ಎಂದು ಹೆಸರಿಸಲಾಗಿರುವ ಸ್ಲೀಪರ್ ಬಸ್‌ಗಳು ಅಂತರರಾಜ್ಯಗಳಿಗೆ ಹಾಗೂ ರಾಜ್ಯದ ಪ್ರಮುಖ ನಗರಗಳ ನಡುವೆ ಸಂಚರಿಸಲಿವೆ.ಪ್ರಸ್ತುತ ಕರ್ನಾಟಕದ ನಾಲ್ಕು ಬಸ್‌ ಘಟಕಗಳು ರಾಜ್ಯದಾದ್ಯಂತ 23,989 ಬಸ್‌ಗಳನ್ನು ನಿರ್ವಹಿಸುತ್ತವೆ. ದಿನಕ್ಕೆ ಸರಾಸರಿ 65.02 ಲಕ್ಷ ಕಿಲೋಮೀಟರ್ ಓಡುತ್ತವೆ.


ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಬಸ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ಬಸ್‌ಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ನೂರಾರು ಹೊಸ ಬಸ್‌ಗಳಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.ಈಗ ಬಿಡುಗಡೆಯಾಗಿರುವ ನಲವತ್ತು ಪಲ್ಲಕ್ಕಿ ಬಸ್‌ಗಳಲ್ಲಿ ಮೂವತ್ತು ಬಸ್‌ಗಳು ಕರ್ನಾಟಕದಲ್ಲಿಯೇ ಸಂಚಾರ ನಡೆಸಲಿವೆ. ಉಳಿದ ಹತ್ತು ಬಸ್‌ಗಳು ಬೇರೆ ರಾಜ್ಯಗಳಿಗೆ ತೆರಳಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಬಸ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ಬಸ್‌ಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ನೂರಾರು ಹೊಸ ಬಸ್‌ಗಳಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.


ಈಗ ಬಿಡುಗಡೆಯಾಗಿರುವ ನಲವತ್ತು ಪಲ್ಲಕ್ಕಿ ಬಸ್‌ಗಳಲ್ಲಿ ಮೂವತ್ತು ಬಸ್‌ಗಳು ಕರ್ನಾಟಕದಲ್ಲಿಯೇ ಸಂಚಾರ ನಡೆಸಲಿವೆ. ಉಳಿದ ಹತ್ತು ಬಸ್‌ಗಳು ಬೇರೆ ರಾಜ್ಯಗಳಿಗೆ ತೆರಳಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೊಸ ಪಲ್ಲಕ್ಕಿ ಬಸ್‌ಗಳ ವೈಶಿಷ್ಟ್ಯ ತಿಳಿಯಿರಿ

- ಈ ಬಸ್‌ಗಳು 11.3 ಮೀಟರ್ ಉದ್ದವಾಗಿವೆ

- ಎಚ್ಪಿ ಕಂಪನಿಯ ಬಿಎಸ್-6 ತಂತ್ರಜ್ಞಾನವನ್ನು ಬಳಸಿ ಇಂಜಿನ್ ತಯಾರಿಸಲಾಗಿದೆ

- ಇವುಗಳಲ್ಲಿ 28 ಹೈಟೆಕ್ ಸ್ಲೀಪರ್ ಬರ್ತ್ ಸೀಟುಗಳು ಇವೆ

- ಪ್ರತಿ ಆಸನಕ್ಕೂ ಮೊಬೈಲ್ ಸ್ಟ್ಯಾಂಡ್‌ಗಳಿವೆ

- ಮೊಬೈಲ್ ಮತ್ತು ಲ್ಯಾಪ್‌ಟಾಪ್ ಚಾರ್ಜಿಂಗ್ ಸೌಲಭ್ಯಗಳನ್ನು ಈ ಬಸ್‌ಗಳು ಹೊಂದಿವೆ

- ರಾತ್ರಿ ವೇಳೆ ಸೀಟ್‌ಗಳ ಸಂಖ್ಯೆಗಳನ್ನು ಸುಲಭವಾಗಿ ಗುರುತಿಸಲು ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ

- ಪ್ರಯಾಣದ ವೇಳೆ ಓದಲು ಸುಧಾರಿತ ಎಲ್ಇಡಿ ಬೆಳಕಿನ ವ್ಯವಸ್ಥೆ ಇದೆ

- ಪ್ರಯಾಣಿಕರ ಮಾಹಿತಿಗಾಗಿ ಆಡಿಯೋ ರಿಸೀವರ್‌ಗಳನ್ನು ಅಳವಡಿಸಲಾಗಿದೆ

- ಪಲ್ಲಕ್ಕಿ ಬಸ್‌ಗಳಲ್ಲಿ ಡಿಜಿಟಲ್ ಗಡಿಯಾರ ಮತ್ತು ಎಲ್ಇಡಿ ನೆಲಹಾಸಿನ ವ್ಯವಸ್ಥೆಯನ್ನು ಅಳವಡಿಸಲಾಗಿದೆ

- ಚಪ್ಪಲಿ ಅಥವಾ ಬೂಟ್‌ಗಳನ್ನು ಇಡಲು ಪ್ರತಿ ಪ್ರಯಾಣಿಕರಿಗೆ ಅನುಕೂಲಕರ ಸ್ಥಳವನ್ನು ಕಲ್ಪಿಸಲಾಗಿದೆ

- ಪ್ರತಿ ಸ್ಲೀಪರ್‌ ಸೀಟುಗಳಲ್ಲಿ ದಿಂಬಿನ ವ್ಯವಸ್ಥೆ ಮಾಡಲಾಗಿದೆ

- ಚಾಲಕನಿಗೆ ಸಹಾಯ ಮಾಡಲು ಬಸ್‌ನ ಹಿಂಭಾಗದಲ್ಲಿ ಹೈಟೆಕ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ

ಮಂಡ್ಯ ಪ್ರಚಾರ ಅಖಾಡಕ್ಕೆ ಸುಮಲತಾ ಎಂಟ್ರಿ ಕ್ಯಾನ್ಸಲ್

Posted by Vidyamaana on 2024-04-24 15:10:09 |

Share: | | | | |


ಮಂಡ್ಯ ಪ್ರಚಾರ ಅಖಾಡಕ್ಕೆ ಸುಮಲತಾ ಎಂಟ್ರಿ ಕ್ಯಾನ್ಸಲ್

ಬೆಂಗಳೂರು : ಸುಮಲತಾ ಅಂಬರೀಶ್‌ ಅವರ ಮಂಡ್ಯ ಪ್ರಚಾರ ರದ್ದಾಗಿದೆ. ಇಂದಿನ ಪ್ರಚಾರದ ಬಗ್ಗೆ ಪಕ್ಷದಿಂದ ಯಾವುದೇ ಸ್ಪಷ್ಟ ನಿರ್ಧಾರ ತಿಳಿಸದ ಕಾರಣ ರದ್ದಾಗಿದೆ. ಮಂಡ್ಯಕ್ಕೆ (Mandya) ತೆರಳದೇ ಬೆಂಗಳೂರಲ್ಲಿ ಸುಮಲತಾ ಅಂಬರೀಶ್ ಉಳಿದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಇಂದು ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಪರ ಸುಮಲತಾ ಮತಯಾಚನೆ ಮಾಡುವ ಕಾರ್ಯಕ್ರಮ ಮಂಗಳವಾರ ನಿಗದಿಯಾಗಿತ್ತು.



Leave a Comment: