ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಚಿಕ್ಕಮಗಳೂರು :ಬ್ಯಾಂಕ್ ಸಿಬಂದಿಗಳಿಂದಲೇ ಬ್ಯಾಂಕ್‌ ಗೆ ಕೋಟ್ಯಂತರ ರೂ. ಮೋಸ

Posted by Vidyamaana on 2023-12-01 08:57:16 |

Share: | | | | |


ಚಿಕ್ಕಮಗಳೂರು :ಬ್ಯಾಂಕ್ ಸಿಬಂದಿಗಳಿಂದಲೇ ಬ್ಯಾಂಕ್‌ ಗೆ  ಕೋಟ್ಯಂತರ ರೂ. ಮೋಸ

ಚಿಕ್ಕಮಗಳೂರು: ಬ್ಯಾಂಕ್ ಸಿಬಂದಿಗಳೇ ಬ್ಯಾಂಕ್‌ಗೆ ದೋಖಾ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬ್ಯಾಂಕ್ ಸಿಬಂದಿಗಳು ಬ್ಯಾಂಕ್‌ನಲ್ಲಿ ಗ್ರಾಹಕರು ಇರಿಸಿದ್ದ ಚಿನ್ನ ಮತ್ತು ಎಫ್‌ಡಿ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದ್ದು ನಕಲಿ ಚಿನ್ನದ ಮೇಲೆ ಲೋನ್ ಮಾಡಿ ಹಣ ದುರುಪಯೋಗಪಡಿಸಿಕೊಂಡಿದ್ದು ಇದರಿಂದ ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಗ್ರಾಹಕರು ಇರಿಸಿದ್ದ ಚಿನ್ನವನ್ನು ಮಾರಾಟ ಮಾಡಿ ಆ ಜಾಗದಲ್ಲಿ ನಕಲಿ ಚಿನ್ನವನ್ನು ಇರಿಸಲಾಗಿದೆ. ಹಾಗೂ ಎಫ್‌ಡಿ ಹಣವನ್ನು ಡ್ರಾ ಮಾಡಿಕೊಂಡು ಗ್ರಾಹಕರಿಗೆ ಬ್ಯಾಂಕ್ ಸಿಬಂದಿಗಳು ವಂಚಿಸಿದ್ದಾರೆ.


ಬೆಂಗಳೂರಿನ ಬ್ಯಾಂಕ್ ಅಧಿಕಾರಿಗಳು ಈ ಸಂಬಂಧ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಗ್ರಾಹಕರು ಬ್ಯಾಂಕ್‌ನಲ್ಲಿ ಇರಿಸಿದ್ದ ಚಿನ್ನವನ್ನು ಮಾರಾಟ ಮಾಡಿ ನಕಲಿ ಚಿನ್ನವನ್ನು ಆ ಜಾಗದಲ್ಲಿ ಇರಿಸಲಾಗಿದ್ದು, 141 ಚಿನ್ನದ ಪ್ಯಾಕೇಟ್‌ಗಳಲ್ಲಿ 140 ಪ್ಯಾಕೇಟ್‌ಗಳಲ್ಲಿ ನಕಲಿ ಚಿನ್ನವನ್ನು ಇರಿಸಿರು ವುದು ಪರಿಶೀಲನೆ ವೇಳೆ ಬ್ಯಾಂಕ್ ಅಧಿಕಾರಿಗಳಿಗೆ ತಿಳಿದು ಬಂದಿದೆ.


ಬ್ಯಾಂಕ್ ಸಿಬಂದಿಗಳು ಕೋಟ್ಯಂತರ ರೂ. ಬ್ಯಾಂಕ್‌ಗೆ ಮೋಸ ಮಾಡಿದ್ದು, ಈ ಪ್ರಕರಣ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಸಿಬಂದಿಗಳಾದ ಶಾಖೆಯ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೆಂಗಳೂರು ಮ್ಯಾನೇಜರ್ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದು, ತನಿಖೆಯಿಂದ ಇನಷ್ಟು ಮಾಹಿತಿ ಬಹಿರಂಗಗೊಳ್ಳಬೇಕಿದೆ.

ಮುಂಬೈ ಗ್ಯಾರೇಜ್‌ ನಲ್ಲಿ ವಾಸವಿದ್ದ ನಟ; ಈಗ ದುಬೈ ಲಂಡನ್‌ ಅಮೆರಿಕಾದಲ್ಲೂ ಮನೆ, ಹತ್ತು ಕಾರುಗಳ ಒಡೆಯ

Posted by Vidyamaana on 2023-12-25 20:23:26 |

Share: | | | | |


ಮುಂಬೈ ಗ್ಯಾರೇಜ್‌ ನಲ್ಲಿ ವಾಸವಿದ್ದ ನಟ; ಈಗ ದುಬೈ ಲಂಡನ್‌ ಅಮೆರಿಕಾದಲ್ಲೂ ಮನೆ, ಹತ್ತು ಕಾರುಗಳ ಒಡೆಯ

ಬಾಲಿವುಡ್ ಜಗತ್ತಿನಲ್ಲಿ 80 ಹಾಗೂ 90ರ ದಶಕಗಳಲ್ಲಿ ಬಹುಬೇಡಿಕೆಯ ಸ್ಟಾರ್ ನಟರಾಗಿದ್ದವರ ಕಥೆಯಿದು. ಅವರಿನ್ನೂ ಆಗತಾನೇ ಇಂಡಸ್ಟ್ರಿಗೆ ಬಂದ ದಿನಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡಿಕೊಂಡು ಜೀವನೋಪಾಯಕ್ಕಾಗಿ ಭಾರಿ ಕಷ್ಟಪಡುತ್ತಿದ್ದರು. ಅದರೆ, ಇಂದು ಬಾಲಿವುಡ್‌ನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಅವರ ಹೆಸರೂ ಕೂಡ ಕಾಣಿಸುತ್ತಿದೆ.ಅವರು ಯಾರು ಬಲ್ಲಿರೇನು?


ಈ ಸ್ಟಾರ್ ನಟರ ಇಂದಿನ ಒಟ್ಟೂ ಅಸ್ತಿಯ ಮೌಲ್ಯ ಬರೋಬ್ಬರಿ 134 ಕೋಟಿ ರೂಪಾಯಿಗಳು. ಪ್ರತಿ ವರ್ಷ ಸಿನಿಮಾ ಹಾಗು ಬಿಸಿನೆಸ್‌ಗಳಿಂದ 12 ಕೋಟಿಗೂ ಹೆಚ್ಚು ಸಂಪಾದನೆ ಮಾಡುತ್ತಾರಂತೆ. ಒಂದು ಸಿನಿಮಾಗೆ ಈಗ 2-4 ಕೋಟಿ ರೂಪಾಯಿಗಳವರೆಗೆ ಸಂಭಾವನೆ ಪಡೆಯುವ ಇವರು, ಸ್ಟಾರ್ ಆಗಿದ್ದ ಕಾಲದಲ್ಲಿ ಅಂದಿನ ಲೆಕ್ಕದಲ್ಲಿ ಚೆನ್ನಾಗಿಯೇ ಸಂಪಾದಿಸುತ್ತಿದ್ದರು. ಇವರು ಬ್ರಾಂಡ್ ಎಂಡಾರ್ಸ್‌ಮೆಂಟ್‌ಗೆ 55 ಲಕ್ಷ ರೂ ಚಾರ್ಜ್ ಮಾಡುತ್ತಾರೆ. ಇನ್ನು ಮುಂಬೈನ ಜುಹುದಲ್ಲಿ ಐಷಾರಾಮಿ ಬಂಗಲೆ ಹೊಂದಿದ್ದು, ಇದರ ಮೌಲ್ಯ 30 ಕೋಟಿ ರೂಪಾಯಿಗಳು.


ಕಳೆದ ನಾಲ್ಕು ದಶಕಗಳಿಂದ ತಮ್ಮ ನಟನೆಯ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಆದರೆ ಈ ಹಂತವನ್ನು ತಲುಪಲು ಅವರ ಪಟ್ಟ ಪಾಡು ಅಂತಿಂಥದಲ್ಲ. ಕಳೆದ ದಿನವಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಈ ಬಾಲಿವುಡ್ ನಟ. ಹಾಗಿದ್ದರೆ ಇವರು ಯಾರು? ಅವರು ಬೇರಾರೂ ಅಲ್ಲ, ಬೇಟಾ (Beta)ಖ್ಯಾತಿಯ ಅನಿಲ್ ಕಪೂರ್.ಮುಂಬೈಗೆ ಬಂದ ಹೊಸದರಲ್ಲಿ ನಟ ಅನಿಲ್ ಕಪೂರ್ ಹಾಗೂ ಅವರ ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಕೂಡ ಇರಲಿಲ್ಲ. ಇ ಟೈಮ್ಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಮುಂಬೈನ ಪೃಥ್ವಿರಾಜ್ ಕಪೂರ್ ಅವರ ಗ್ಯಾರೇಜ್‌ನಲ್ಲಿ ಅನಿಲ್ ಕಪೂರ್ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ವೃತ್ತಿಜೀವನದ ಆರಂಭದಲ್ಲಿ ಮನೆಯ ಖರ್ಚುಗಳನ್ನು ನಿಭಾಯಿಸಲೆಂದು ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಅನಿಲ್, 1979 ರಲ್ಲಿ ಹಮಾರೆ ತುಮ್ಹಾರೆ ಮೂಲಕ ತಮ್ಮ ವೃತ್ತಿಜೀವನವನ್ನು ಶುರು ಮಾಡಿದರು. ಬಳಿಕ, 1980 ರಲ್ಲಿ ತೆಲುಗು ಚಿತ್ರ ವಂಶ ವೃಕ್ಷಂನಲ್ಲಿ ಕೆಲಸ ಮಾಡಿದರು.1983 ರಲ್ಲಿ ಅನಿಲ್ ಕಪೂರ್ ಅವರ ವೋ ಸಾತ್ ದಿನ್ ಚಿತ್ರ ಬಿಡುಗಡೆಯಾಯಿತು. ಇದರಲ್ಲಿ ಅವರು ಮೊದಲ ಬಾರಿಗೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಬಳಿಕ, ಅನಿಲ್ ಕಪೂರ್ ಹಿಂತಿರುಗಿ ನೋಡಲೇ ಇಲ್ಲ. ಬೇಟಾ, ಮಿಸ್ಟರ್ ಇಂಡಿಯಾ, ಮೇರಿ ಜಂಗ್, ಕರ್ಮ, ತೇಜಾಬ್, ಕಸಂ, ರಾಮ್ ಲಖನ್, ಹಮಾರಾ ದಿಲ್ ಆಪ್ಕೆ ಪಾಸ್ ಹೈ, ಲಾಡ್ಲಾ, ಮತ್ತು ನಾಯಕ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಜತೆಗೆ, ಹಾಲಿವುಡ್ ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.ನಟ ಅನಿಲ್ ಕಪೂರ್ ಸಿನಿಮಾ ಪಟ್ಟಿಯಲ್ಲಿ ಸ್ಲಮ್‌ ಡಾಗ್ ಮಿಲಿಯನೇರ್ ಮತ್ತು ಮಿಷನ್ ಇಂಪಾಸಿಬಲ್ ಹಾಗೂ ಘೋಸ್ಟ್ ಪ್ರೋಟೋಕಾಲ್ ಸಹ ಸೇರಿವೆ. ಈ ಸಿನಿಮಾಗಳ ಮೂಲಕ ಅನಿಲ್ ಕಪೂರ್ ತಮ್ಮ ಹೆಸರನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದಾರೆ.ನಟ ಅನಿಲ್ ಕಪೂರ್ ದುಬೈನಲ್ಲಿ 2 ಬೆಡ್ ರೂಂ ಅಪಾರ್ಟ್ ಮೆಂಟ್ ಹೊಂದಿದ್ದು, ಲಂಡನ್‌ ನಲ್ಲಿಯೂ ಒಂದು ಮನೆಯನ್ನು ಹೊಂದಿದ್ದಾರೆ. ಕ್ಯಾಲಿಪೋರ್ನಿಯಾದಲ್ಲೂ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಅನಿಲ್ ಕಪೂರ್ ಅವರು BMW, Bentley,Jaguar, Audi Mercedes Benz S Class ಮುಂತಾದ ದುಬಾರಿ ಮತ್ತು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಒಟ್ಟಿನಲ್ಲಿ, ಅಂದು ಜೀವನೋಪಾಯಕ್ಕೆ ಗ್ಯಾರೇಜ್ ಆಶ್ರಯಿಸಿದ್ದ ನಟ ಇಂದು ಕೋಟ್ಯಾಧಿಪತಿಯಾಗಿ ಬಾಳುತ್ತಿದ್ದಾರೆ.

ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

Posted by Vidyamaana on 2024-06-17 16:11:21 |

Share: | | | | |


ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

ಶಿವಮೊಗ್ಗ: ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು.

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಪ್ರಮುಖ 3 ಆರೋಪಿಗಳಿಗೆ ಜಾಮೀನು

Posted by Vidyamaana on 2024-03-17 07:48:18 |

Share: | | | | |


ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಪ್ರಮುಖ 3 ಆರೋಪಿಗಳಿಗೆ ಜಾಮೀನು

ಮಂಗಳೂರು: 2022 ಜುಲೈ 28ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಾಝಿಲ್ ಹತ್ಯೆ ನಡೆಸಿದ ಪ್ರಮುಖ 3 ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ.


ಸುರತ್ಕಲ್ ಮಂಗಳಪೇಟೆಯ ಮೊಹಮ್ಮದ್ ಫಾಝಿಲ್ ಹತ್ಯೆಯ A1 ಆರೋಪಿ ಸುಹಾಸ್ ಶೆಟ್ಟಿ, A2 ಆರೋಪಿ ಅಭಿಷೇಕ್, A3 ಆರೋಪಿ ನೇಪಾಳಿ ಗಣೇಶ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.


ಫಾಝಿಲ್ ಹತ್ಯೆಯಲ್ಲಿ ಒಟ್ಟು 8 ಪ್ರಮುಖ ಆರೋಪಿಗಳ ಬಂಧನವಾಗಿತ್ತು. ಐವರು ಆರೋಪಿಗಳು ಈಗಾಗಲೇ ಜಾಮೀನಿನಲ್ಲಿ ಹೊರ ಬಂದಿದ್ದಾರೆ. ಇದೀಗ ಮೂವರು ಪ್ರಮುಖ ಆರೋಪಿಗಳಿಗೆ ಜಾಮೀನು ಆಗಿದೆ. ಈ ಮೂಲಕ‌ ಫಾಝಿಲ್ ಹತ್ಯೆಯ ಎಲ್ಲ ಆರೋಪಿಗಳೂ ಬಂಧಮುಕ್ತರಾದಂತಾಗಿದೆ.


2022 ಜುಲೈ 28ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮೊಹಮ್ಮದ್ ಫಾಜಿಲ್ (23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ದಾಳಿ ಮಾಡಿ ಪರಾರಿಯಾಗಿದ್ದರು. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಝಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಫಾಝಿಲ್ ಕೊನೆಯುಸಿರೆಳೆದಿದ್ದರು.

ಬೋಳಿಯಾರ್ ಪ್ರಕರಣ; ತಪ್ಪು ಮಾಡಿದವರನ್ನು ಬೆಂಬಲಿಸುವುದಿಲ್ಲ: ಸ್ಪೀಕರ್ ಯು.ಟಿ. ಖಾದರ್

Posted by Vidyamaana on 2024-06-14 15:13:14 |

Share: | | | | |


ಬೋಳಿಯಾರ್ ಪ್ರಕರಣ; ತಪ್ಪು ಮಾಡಿದವರನ್ನು ಬೆಂಬಲಿಸುವುದಿಲ್ಲ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದದಿಂದ ಇದ್ದಾರೆ. ಹೊರಗಿನವರು ಇಲ್ಲಿ ಬಂದು ವಾತಾವರಣ ಕೆಡಿಸಬೇಡಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಲಿ ವಾಸ್ತವದಲ್ಲಿ ಏನಾಗಿದೆ ಎಂಬುದು ಸ್ಥಳದಲ್ಲಿ ಇದ್ದವರಿಗೆ, ಸ್ಥಳೀಯರಿಗೆ ಮಾತ್ರ ಗೊತ್ತಿದೆ. ಮೂರನೇ ವ್ಯಕ್ತಿಗಳಾಗಿ ನಾವು ನಿರ್ಣಯಕ್ಕೆ ಬರುವುದು ಸರಿಯಲ್ಲ. ಈ ರೀತಿ ಮಾಡಿದರೆ ಚುನಾವಣೆಯಲ್ಲಿ ಮತ ಸಿಗುತ್ತದೆ ಎಂಬ ಭ್ರಮೆ ಬೇಡ. ಈ ರೀತಿ ಮಾಡುವುದರಿಂದ ಒಂದು ವೋಟ್ ಕೂಡ ಸಿಗುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಪ್ರಯತ್ನ ಪಟ್ಟವರು ಈಗ ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿಶಿಷ್ಟ ಕ್ಯಾಂಪೇನ್ ಕಾರ್ ಬಿಟ್ಟು ರಿಕ್ಷಾ ಏರಿ ಪ್ರಚಾರ ನಡೆಸಿದ ಕೈ ಅಭ್ಯರ್ಥಿ

Posted by Vidyamaana on 2024-04-15 08:36:00 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿಶಿಷ್ಟ ಕ್ಯಾಂಪೇನ್ ಕಾರ್ ಬಿಟ್ಟು ರಿಕ್ಷಾ ಏರಿ ಪ್ರಚಾರ ನಡೆಸಿದ ಕೈ ಅಭ್ಯರ್ಥಿ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ವಿವಿದೆಡೆ ಪ್ರಚಾರ ಕಾರ್ಯ ನಡೆಯಿತು.


ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮನೆ, ಅಂಗಡಿಗಳಿಗೆ ತೆರಳಿ, ಮತ ಯಾಚನೆ ನಡೆಸಿದರು.

ಕೋಟೆಕಾರ್, ಕಾಪಿಕಾಡ್, ತಲಪಾಡಿಯ ಕೆ.ಸಿ. ರೋಡ್ ಜಂಕ್ಷನ್, ಕುಂಪಲಕ್ರಾಸ್, ಕುಂಪಲ ಆಶ್ರಯ ಕಾಲನಿ, ಪಿಲಾರು, ಕುತ್ತಾರು, ಅಂಬ್ಲಮೊಗರು, ಅಸೈಗೋಳಿ, ಕೊಣಾಜೆ, ಗ್ರಾಮಚಾವಡಿ ಮೊದಲಾದೆಡೆ ಪ್ರಚಾರ ಕಾರ್ಯ ನಡೆಸಲಾಯಿತು.

Recent News


Leave a Comment: