ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಸುದ್ದಿಗಳು News

Posted by vidyamaana on 2024-07-24 16:44:22 |

Share: | | | | |


ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದು , ಶಾಸಕರ ಬೇಡಿಕೆಗೆ ಸರಕಾರದಿಂದ ಗಟ್ಟಿ ಭರವಸೆ ದೊರೆತಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸರಕಾರ ಭರವಸೆಯನ್ನು ನೀಡಿದೆ.

ತುಳುವಿಗೆ ೨೦೦೦ ವರ್ಷದ ಇತಿಹಾಸವಿದೆ

ತುಳುಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ತುಳು ಮಾತನಾಡುವ ಮಂದಿ ವಿಶ್ವದೆಲ್ಲೆಡೆ ಇದ್ದಾರೆ. ತುಳು ಭಾಷೆಗೆ ಮಾನ್ಯತೆ ಸಿಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಿದೆ. ಎಟಂನೇ ಪರಿಚ್ಚೇಧಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆ ಇನ್ನೊಂದು ಕಡೆ ಇದೆ ಇದೆಲ್ಲದರ ನಡುವೆ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಶಾಸಕನಾಗಿ ಕಳೆದ ಒಂದು ವರ್ಷದಿಂದ ಮಾಡುತ್ತಿದ್ದೇನೆ.

೧೯೯೪ ರಲ್ಲಿ ವೀರಪ್ಪ ಮೊಯಿಲಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದ್ದಾರೆ, ೨೦೦೭ ರಲ್ಲಿ ಕೇರಳ ಸರಕಾರ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ, ಆಕಾಶವಾಣಿಯಲ್ಲಿ ೧೯೭೬ ರಿಂದ ಆಕಾಶವಾಣಿಯಲ್ಲಿ ತುಳು ಕಾರ್ಯಕ್ರಮ ಪ್ರಸಾರವಾಗುತ್ತಿದೆ, ಅಮೇರಿಕಾದಲ್ಲಿ ಸಿಆರ್ ಎಕ್ಸಾಮ್‌ಗೆ ಅರ್ಜಿ ನಮೂನೆಯಲ್ಲೂ ವಿಶ್ವದ ೧೨೨ ಭಾಷೆಯ ಜೊತೆಗೆ ತುಳುವಿಗೆ ಮಾನ್ಯತೆ ನೀಡಲಾಗಿದೆ, ಗೂಗಲ್ ಸಂಸ್ಥೆಯವರು ತರ್ಜುಮೆ ಮಾಡಬಲ್ಲ ಭಾಷೆಗಳ ಪಟ್ಟಿಯಲ್ಲಿ ತುಳುವನ್ನು ಸೇರ್ಪಡೆ ಮಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ನಮ್ಮ ರಾಜ್ಯದಲ್ಲಿ ತುಳುವನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಮೂರು ರಾಜ್ಯಗಳಿಗೆ ಅಧ್ಯಯನ ತಂಡ ಕಳಿಸಿದ್ದೇನೆ

ಬಿಹಾರ, ಪಶ್ಚಿಮಬಂಗಾಳ ಮತ್ತು ಆಂದ್ರಕ್ಕೆ ವಿಶೇಷ ಪ್ರತಿನಿಧಿಯನ್ನು ತನ್ನ ಸ್ವಂತ ಖರ್ಚಿನಲ್ಲಿ ಕಳಿಸಿದ್ದೇನೆ. ಈ ಮೂರು ರಾಜ್ಯಗಳಲ್ಲಿ ಸ್ಥಳೀಯ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಯಾವ ಆಧಾರದಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ಅಧ್ಯಯನ ನಡೆಲಲಾಗಿದೆ. ಆಂದ್ರದಿಂದ ವರದಿಯನ್ನು ತರಿಸಿದ್ದೇನೆ.. ಈ ವರದಿಯನ್ನು ಸರಕಾರದ ಮುಂದೆ ಇಡಲಿದ್ದು ಅದರ ಆಧಾರದಲ್ಲಿ ಕರ್ನಾಟಕದಲ್ಲಿ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗಲಿದೆ ಎಂಬ ಕಾರಣಕ್ಕೆ ನಾನು ಸ್ವಂತ ಖರ್ಚಿನಲ್ಲೇ ಅಧ್ಯಯನ ತಂಡವನ್ನು ಮೂರು ರಾಜ್ಯಗಳಿಗೆ ಕಳಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ವಿಶ್ವದಲ್ಲೇ ತುಳವರಿದ್ದಾರೆ, ತುಳುವರು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಾರೆ.


ನಿಕ್ಲು ಗಲಾಟೆ ಮಲ್ಪೊಡ್ಚಿ ಕುಲ್ಲುಲೆ ಮಾರ್ರೆ

ಪುತ್ತೂರು ಶಾಸಕ ಅಶೋಕ್ ರೈಯವರು ಸದನದಲ್ಲಿ ತುಳು ಭಾಷೆಯಲ್ಲಿ ಮಾತನಾಡುವ ವೇಳೆ ಮಧ್ಯದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್‌ರಲ್ಲಿ ಈರ್ ಬೊಕ್ಕ ಪಾತೆರ‍್ಲೆ , ಇತ್ತೆ ಯಾನ್ ಪಾತರೊಂದುಲ್ಲೆ ಎಂದು ಶಾಸಕ ಅಶೋಕ್ ರೈ ವೇದವ್ಯಾಸ ಕಾಮತರಿಗೆ ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಭಾಪತಿ ಯು ಟಿ ಖಾದರ್ ನಿಕ್ಲು ಗಲಾಟೆ ಮಲ್ಪೊಡ್ಚಿ ಮಾರ್ರೆ ಈರ್ ಕುಲ್ಲುಲೆ ಎಂದು ಶಾಸಕ ವೇದವ್ಯಾಸ ಕಾಮತರಿಗೆ ಕುಳಿತುಕೊಳ್ಳಲು ಹೇಳಿದರು.

 ಇದೇನು ಮಂಗಳೂರು ಅಧಿವೇಶನವಾ: ಆರ್ ಅಶೋಕ್

ಸದನದಲ್ಲಿ ಶಾಸಕ ಅಶೋಕ್ ರೈ ಮತ್ತು ಸಭಾಪತಿ ಯು ಟಿ ಖಾದರ್ ರವರು ತುಳುವಿನಲ್ಲಿ ಮಾತನಾಡುತ್ತಿದ್ದ ವೇಳೆ ಎದ್ದು ನಿಂತ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಇದೇನು ಮಂಗಳೂರು ಅಧಿವೇಶಧನವಾ? ಎಂದು ನಗುತ್ತಲೇ ಹೇಳಿದರು. ಈ ವೇಳೆ ಮಾತನಾಡಿದ ಶಾಸಕ ಅಶೋಕ್ ರೈಯವರು ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್ ರವರೇ ನಾವು ತುಳುವಿನಲ್ಲಿ ಮಾತನಾಡಿದ್ದನ್ನು ಕನ್ನಡದಲ್ಲಿ ಹೇಳುತ್ತೇನೆ. ನೀವು ನಮ್ಮ ಹೋರಾಟಕ್ಕೆ , ನಮ್ಮ ಬೇಡಿಕೆಗೆ ಬೆಂಬಲವನ್ನು ನೀಡಬೇಕು, ಇಡೀ ಸದನ ನಮ್ಮ ನಿಲುವಿಗೆ ಬೆಂಬಲ ನೀಡಬೇಕು ಅ ಮೂಲಕ ತುಳು ಭಾಷೆಗೆ ಸರಕಾರದಿಂದ ಮಾನ್ಯತೆ ದೊರೆಯುವಂತಾಗಲಿ ಇದಕ್ಕೆ ಎಲ್ಲರ ಸಹಕಾರವನ್ನು ಕೋರಿದರು. ತುಳುವಿಗೆ ಲಿಪಿ ಇದೆ, ವಿಶ್ವದಲ್ಲೆಡೆ ತುಳು ಮಾತನಾಡುವ ಮಂದಿ ಇದ್ದಾರೆ ಎಂದು ಹೇಳಿದ ಶಾಸಕ ಅಶೋಕ್ ರೈಯವರು ಸಭಾಧ್ಯಕ್ಷೆರೇ ಈರ್ ಸಪೋರ್ಟು ಮಲ್ಪೊಡು, ಈರ್‌ನ ಸಹಕಾರ ಎಂಕ್ಲೆಗ್ ಬೋಡು ಎಂದು ಮನವಿ ಮಾಡಿದರು.

ಅಶೋಕ್ ರೈಗೆ ಅಭಿನಂದನೆ ಸಲ್ಲಿಸಿದ ವೇದವ್ಯಾಸ ಕಾಮತ್

ಸದನದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ತುಳು ವಿಚಾರದಲ್ಲಿ ಪ್ರಾರಂಭದಿಂದಲೇ ಸರಕರದ ಗಮನಸೆಳೆದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಭೆಯಲ್ಲಿ ತಿಳಿಸಿದರು.

ನಿಮ್ಮ ಕಾಳಜಿಗೆ ಅಭಿನಂದನೆ; ಸಚಿವ ಖರ್ಗೆ

ತನ್ನ ಸ್ವಂತ ಖರ್ಚಿನಲ್ಲಿ ಅಧ್ಯಯನ ತಂಢವನ್ನು ಮೂರು ರಾಜ್ಯಕ್ಕೆ ಕಳುಹಿಸುವ ಮೂಲಕ ತನ್ನ ಊರಿನ ಮಾತೃಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಡಬೇಕು ಎನ್ನುವ ನಿಮ್ಮ ಕಾಳಜಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಪ್ರಿಯಾಂಕ ಖರ್ಗೆ ಶಾಸಕ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸಿದರು. ಮಾತೃಭಷೆಯ ಮೇಲೆ ಎಲ್ಲರಿಗೂ ಪ್ರೀತಿ ಇರುತ್ತದೆ ಆದರಲ್ಲೂ ಅಶೋಕ್ ರೈಯವರು ಈವಿಚಾರದಲ್ಲಿ ಒಂದು ಹಜ್ಜೆ ಮುಂದೆ ಇದ್ದಾರೆ ಇದು ಅಭಿನಂದನಾರ್ಹ ಎಂದು ಸಚಿವರು ಸಭೆಯಲ್ಲಿ ಹೇಳಿದರು.

 ಖಂಡಿತವಾಗಿಯೂ ಬೇಡಿಕೆ ಈಡೇರಲಿದೆ: ಪ್ರಿಯಾಂಕ ಖರ್ಗೆ

ಡಾ. ಮೋಹನ್ ಆಳ್ವರ ನೇತೃತ್ವದ ಸಮಿತಿಯ ವರದಿಯಲ್ಲಿ ಸಾಧ್ಯವಿದೆ ಎಂಬುದರ ಬಗ್ಗೆ ವರದಿ ನೀಡಲಾಗಿದೆ.. ತನ್ನ ಸ್ವಂತ ಖರ್ಚಿನಲ್ಲಿ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿದ ಶಾಸಕ ಅಶೋಕ್ ರೈಯವರ ಕಾಳಜಿಯನ್ನು ಮೆಚ್ಚಲೇಬೇಕು. ತುಳು ಭಾಷೆ, ಅದರ ಸಂಸ್ಕೃತಿ, ಅದರ ಸೌಂದರ್ಯ, ಪ್ರಾಚೀನತೆ, ಎಲ್ಲವೂ ಗೌರವದಿಂದ ಕೂಡಿದೆ. ಸರಕಾರದ ಮುಂದೆ ಈ ಪ್ರಸ್ತಾಪ ಇದೆ. ತುಳುವಿಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಲ್ಲಿ ಸರಕಾರಕ್ಕೆ ಮುತುವರ್ಜಿ ಇದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ ಸಭೆಗೆ ತಿಳಿಸಿದರು. ವೈಯುಕ್ತಿಕವಾಗಿಯೂ ಈ ಪ್ರಸ್ತಾಪಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವರು ಹೇಳಿದರು.

ಸಚಿವರ ಸಭೆ ಕರೆದು ತೀರ್ಮಾನಿಸಿ: ಸಭಾಪತಿ

ಈ ವಿಚಾರದಲ್ಲಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಚಿವರನ್ನೊಳಗೊಂಡಂತೆ ಆ ಭಾಗದ ಶಾಸಕರ ಸಭೆಯನ್ನು ಕರೆದು ತೀರ್ಮಾನ ಕೈಗೊಳ್ಳುವಂತೆ ಸಭಾಪತಿ ಯು ಟಿ ಖಾದರ್ ರವರು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆಯನ್ನು ನೀಡಿದರು.

ಎರಡನೇ ಬಾರಿಗೆ ತುಳುವಿನಲ್ಲಿ ಮಾತು

ಶಾಸಕ ಅಶೋಕ್ ರೈಯವರು ತಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ತುಳುವಿನಲ್ಲಿ ಮಾತನಾಡಿದ್ದರು. ಈ ವಿಚಾರ ಅತೀ ಹೆಚ್ಚು ವೈರಲ್ ಆಗಿತ್ತು. ಅಧಿವೇಶನದ ಇತಿಹಾಸದಲ್ಲೇ ಮೊದಲ ಬಾರಿಗೆ ತುಳುವಿನಲ್ಲಿ ಮಾತನಾಡುವ ಮೂಲಕ ತುಳುವನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಮಾಡಿದ್ದರು. ಇದೀಗ ಎರಡನೇ ಬಾರಿಗೆ ತುಳುವಿನಲ್ಲಿ ಅಧಿವೇಶನದಲ್ಲಿ ಮಾತನಾಡಿರುವುದು ತುಳು ಭಾಷೆಗೆ ಸಿಕ್ಕ ಮಾನ್ಯತೆ ಎಂದೇ ಹೇಳಬಹುದು

 Share: | | | | |


ಇಂದು ಪ್ರಧಾನಿ ಮೋದಿಯಿಂದ ರಾಮಮಂದಿರ ಲೋಕರ್ಪಣೆ ಇಡೀ ಪ್ರಪಂಚದ ಚಿತ್ತ ಅಯ್ಯೋಧ್ಯೆಯತ್ತ

Posted by Vidyamaana on 2024-01-22 07:44:18 |

Share: | | | | |


ಇಂದು ಪ್ರಧಾನಿ ಮೋದಿಯಿಂದ ರಾಮಮಂದಿರ ಲೋಕರ್ಪಣೆ  ಇಡೀ ಪ್ರಪಂಚದ ಚಿತ್ತ ಅಯ್ಯೋಧ್ಯೆಯತ್ತ

ಅಯ್ಯೋಧ್ಯೆ: ರಾಮ ಮಂದಿರದ ಭವ್ಯ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ನವ ವಧುವಿನಂತೆ ಅಯ್ಯೋಧ್ಯೆ ಕಂಗೋಳಿಸುತ್ತಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಎಲ್ಲಾ ರೀತಿಯ ಅಲಂಕಾರಗಳಿಂದ ಅಲಂಕರಿಸಲಾಗಿದೆ.ಪ್ರಾಣ ಪ್ರತಿಷ್ಠಾ ಸಮಾರಂಭದ ತಯಾರಿಗಾಗಿ ಪವಿತ್ರ ನಗರವನ್ನು ರೋಮಾಂಚಕ ಹೂವುಗಳಿಂದ ಅಲಂಕರಿಸಲಾಗಿದೆ. ಜನವರಿ 23 ರಿಂದ ಸಾರ್ವಜನಿಕರಿಗೆ ದರ್ಶನಕ್ಕಾಗಿ ರಾಮ ಮಂದಿರವನ್ನು ತೆರೆಯಲಾಗುವುದು ಎಂದು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇತರ ಗಣ್ಯರ ಸಮ್ಮುಖದಲ್ಲಿ ಶ್ರೀ ರಾಮ್ ಜನ್ಮಭೂಮಿ ದೇವಾಲಯವನ್ನು ಇಂದು ಉದ್ಘಾಟಿಸಲಾಗುವುದು.


ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ನಡೆಯಲಿದೆ. ಜನವರಿ 23 ರಿಂದ ಸಾರ್ವಜನಿಕರಿಗೆ ದರ್ಶನಕ್ಕಾಗಿ ರಾಮ ಮಂದಿರವನ್ನು ತೆರೆಯಲಾಗುವುದು ಎಂದು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇತರ ಗಣ್ಯರ ಸಮ್ಮುಖದಲ್ಲಿ ಶ್ರೀ ರಾಮ್ ಜನ್ಮಭೂಮಿ ದೇವಾಲಯವನ್ನು ಜನವರಿ 22 ರಂದು ಉದ್ಘಾಟಿಸಲಾಗುವುದು. ಪ್ರಾಣ ಪ್ರತಿಷ್ಠಾಪನೆಗೆ ಮುಂಚಿತವಾಗಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಲತಾ ಮಂಗೇಶ್ಕರ್ ಚೌಕ್ ನಲ್ಲಿ ಎಟಿಎಸ್ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಅಯೋಧ್ಯೆಯಲ್ಲಿ ಇಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ ಅಯೋಧ್ಯೆಯ ರಾಮ ದೇವಾಲಯವನ್ನು ಸುಂದರವಾಗಿ ಅಲಂಕರಿಸಲಾಗಿದೆ.


ಕ್ರಿಕೆಟ್ ದಂತಕಥೆಗಳಾದ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಬಾಲಿವುಡ್ ಸೂಪರ್ಸ್ಟಾರ್ಗಳಾದ ಅಮಿತಾಬ್ ಬಚ್ಚನ್, ರಜನಿಕಾಂತ್, ಅನುಷ್ಕಾ ಶರ್ಮಾ, ಆಲಿಯಾ ಭಟ್, ರಣಬೀರ್ ಕಪೂರ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದಂತೆ 7,000 ಕ್ಕೂ ಹೆಚ್ಚು ಜನರನ್ನು ದೇವಾಲಯದ ಟ್ರಸ್ಟ್ ಆಹ್ವಾನಿಸಿದೆ.


ಅಯೋಧ್ಯೆ ರಾಮ ಮಂದಿರದ ಮಹತ್ವವೇನು?

ಅಯೋಧ್ಯೆ ರಾಮ ಮಂದಿರವನ್ನು ಹಿಂದೂಗಳ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದು ಭಗವಾನ್ ರಾಮನ ಜನ್ಮಸ್ಥಳವೆಂದು ನಂಬಲಾಗಿದೆ ಮತ್ತು ಇದನ್ನು ಪವಿತ್ರ ಸ್ಥಳವೆಂದು ಪೂಜಿಸಲಾಗುತ್ತದೆ. ಆಗಸ್ಟ್ 5, 2020 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರಕ್ಕೆ ಶಿಲಾನ್ಯಾಸ ಮಾಡಿದ್ದರು.


ರಾಮ ಮಂದಿರ ನಿರ್ಮಾಣವನ್ನು ಕೇಂದ್ರವು ರಚಿಸಿದ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮೇಲ್ವಿಚಾರಣೆ ನಡೆಸುತ್ತಿತ್ತು. ದೇವಾಲಯದ ನಿರ್ಮಾಣದ ಮೇಲ್ವಿಚಾರಣೆ ನಡೆಸುತ್ತಿರುವ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆರಂಭದಲ್ಲಿ ವೆಚ್ಚವನ್ನು 1,800 ಕೋಟಿ ರೂ.ಗಳೆಂದು ಅಂದಾಜಿಸಿತ್ತು. ಈ ಅಂದಾಜು ನಿರ್ಮಾಣ ವೆಚ್ಚಗಳು, ಸಾಮಗ್ರಿ ವೆಚ್ಚಗಳು, ಯಂತ್ರೋಪಕರಣಗಳು, ಕಾರ್ಮಿಕರು ಮತ್ತು ಇತರ ಆಡಳಿತಾತ್ಮಕ ವೆಚ್ಚಗಳಂತಹ ವಿವಿಧ ಅಂಶಗಳನ್ನು ಒಳಗೊಂಡಿದೆ.

ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ಮಾಡಿದ ನಂತರ 2020 ರಲ್ಲಿ ರಾಮ ದೇವಾಲಯದ ನಿರ್ಮಾಣ ಪ್ರಾರಂಭವಾಯಿತು. 2019 ರಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ದೇವಾಲಯದ ನಿರ್ಮಾಣ ಪ್ರಾರಂಭವಾಯಿತು, ಅಲ್ಲಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪಿನಲ್ಲಿ ಉತ್ತರ ಪ್ರದೇಶದ ಅಯೋಧ್ಯೆ ಪಟ್ಟಣದ ವಿವಾದಿತ 2.77 ಎಕರೆ ಸ್ಥಳವನ್ನು ದೇವಾಲಯ ನಿರ್ಮಾಣಕ್ಕಾಗಿ ಹಿಂದೂ ಕಡೆಯವರಿಗೆ ಹಸ್ತಾಂತರಿಸಿತು. ಹಿಂದೂ ಪುರಾಣಗಳ ಪ್ರಕಾರ, ಭಗವಾನ್ ರಾಮನು ಅಭಿಜಿತ್ ಮುಹೂರ್ತ, ಮೃಗಶಿರ್ಷ ನಕ್ಷತ್ರ, ಅಮೃತ ಸಿದ್ಧಿ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗದ ಸಂಗಮದಲ್ಲಿ ಜನಿಸಿದನೆಂದು ನಂಬಲಾಗಿದೆ. ಗಮನಾರ್ಹವಾಗಿ, ಈ ಎಲ್ಲಾ ಅನುಕೂಲಕರ ಅವಧಿಗಳು ಜನವರಿ 22, 2024 ರಂದು ಹೊಂದಿಕೆಯಾಗಲಿವೆ.


ಅಯೋಧ್ಯೆಯ ರಾಮ ಮಂದಿರವನ್ನು ತಲುಪುವುದು ಹೇಗೆ?

ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ರಸ್ತೆ, ರೈಲು ಅಥವಾ ವಿಮಾನದ ಮೂಲಕ ತಲುಪಬಹುದು. ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣವನ್ನು ಇತ್ತೀಚೆಗೆ ಉದ್ಘಾಟಿಸಲಾಗಿದ್ದು, ದೇವಾಲಯದ ನಗರವನ್ನು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುತ್ತದೆ. ರೈಲು ಮೂಲಕ, ಅಯೋಧ್ಯೆ ಲಕ್ನೋದಿಂದ 135 ಕಿಲೋಮೀಟರ್, ಗೋರಖ್ಪುರದಿಂದ 164 ಕಿಲೋಮೀಟರ್, ಪ್ರಯಾಗ್ರಾಜ್ನಿಂದ 164 ಕಿಲೋಮೀಟರ್ ಮತ್ತು ವಾರಣಾಸಿಯಿಂದ 189 ಕಿಲೋಮೀಟರ್ ದೂರದಲ್ಲಿದೆ. ರಸ್ತೆಯ ಮೂಲಕ ಪ್ರಯಾಣಿಸುವವರಿಗೆ, ಉತ್ತರ ಪ್ರದೇಶ ಸಾರಿಗೆ ನಿಗಮದ ಬಸ್ಸುಗಳು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತವೆ, ಇದು ಎಲ್ಲಾ ಸ್ಥಳಗಳಿಂದ ಅನುಕೂಲಕರ ಪ್ರವೇಶವನ್ನು ಒದಗಿಸುತ್ತದೆ.


ರಾಮ್ ಲಲ್ಲಾ ಆರತಿಯನ್ನು ಪ್ರತಿದಿನ ಮೂರು ಬಾರಿ ನಿಗದಿಪಡಿಸಲಾಗಿದೆ. ಭಕ್ತರು ಬೆಳಿಗ್ಗೆ 6:30, ಮಧ್ಯಾಹ್ನ 12 ಮತ್ತು ಸಂಜೆ 7:30 ಕ್ಕೆ ಆರತಿಯಲ್ಲಿ ಭಾಗವಹಿಸಬಹುದು. ಒಬ್ಬರಿಗೆ ಟ್ರಸ್ಟ್ ಮಾಡಿದ ಪಾಸ್ ಅಗತ್ಯವಿದೆ, ಇದಕ್ಕಾಗಿ ನೀವು ಐಡಿ ಪ್ರೂಫ್ ಒದಗಿಸಬೇಕು. ಜನವರಿ 23 ರಿಂದ ರಾಮ ಮಂದಿರ ಭಕ್ತರಿಗೆ ತೆರೆದಿರುತ್ತದೆ. ದರ್ಶನದ ಸಮಯವನ್ನು ಎರಡು ಸ್ಲಾಟ್ಗಳಾಗಿ ವಿಂಗಡಿಸಲಾಗಿದೆ - ಬೆಳಿಗ್ಗೆ 7 ರಿಂದ 11:30 ಮತ್ತು ಮಧ್ಯಾಹ್ನ 2 ರಿಂದ 7 ರವರೆಗೆ.

ಕರ್ನಾಟಕದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ರಾಮ್ ಲಲ್ಲಾ ವಿಗ್ರಹವನ್ನು ಕೆತ್ತಿದ್ದಾರೆ.


ಅಯೋಧ್ಯೆಯಲ್ಲಿ ರಾಮ ಮಂದಿರದ ಗಾತ್ರವೆಷ್ಟು?

ಒಟ್ಟು ವಿಸ್ತೀರ್ಣ: 2.7 ಎಕರೆ

ಒಟ್ಟು ನಿರ್ಮಾಣ ಪ್ರದೇಶ: 57,400 ಚದರ ಅಡಿ.

ದೇವಾಲಯದ ಒಟ್ಟು ಉದ್ದ: 360 ಅಡಿ

ದೇವಾಲಯದ ಒಟ್ಟು ಅಗಲ: 235 ಅಡಿ

ಶಿಖರ ಸೇರಿದಂತೆ ದೇವಾಲಯದ ಒಟ್ಟು ಎತ್ತರ: 161 ಅಡಿ

ಒಟ್ಟು ಮಹಡಿಗಳ ಸಂಖ್ಯೆ: 3

ಪ್ರತಿ ಮಹಡಿಯ ಎತ್ತರ: 20 ಅಡಿ

ದೇವಾಲಯದ ನೆಲಮಹಡಿಯಲ್ಲಿರುವ ಕಂಬಗಳ ಸಂಖ್ಯೆ: 160

ದೇವಾಲಯದ ಮೊದಲ ಮಹಡಿಯಲ್ಲಿರುವ ಕಂಬಗಳ ಸಂಖ್ಯೆ: 132

ದೇವಾಲಯದ ಎರಡನೇ ಮಹಡಿಯಲ್ಲಿರುವ ಕಂಬಗಳ ಸಂಖ್ಯೆ: 74

ದೇವಾಲಯದಲ್ಲಿರುವ ಶಿಖರಗಳು ಮತ್ತು ಮಂಟಪಗಳ ಸಂಖ್ಯೆ: 5

ದೇವಾಲಯದ ದ್ವಾರಗಳ ಸಂಖ್ಯೆ: 12


ರಾಮ ಮಂದಿರವನ್ನು ಪ್ರವೇಶಿಸಲು, ನೀವು ಭದ್ರತಾ ಮಾನದಂಡಗಳನ್ನು ನೋಡಿಕೊಳ್ಳಬೇಕು. ಮೊಬೈಲ್ ಫೋನ್ಗಳು, ಇಯರ್ಫೋನ್ಗಳು ಅಥವಾ ಇತರ ಯಾವುದೇ ಗ್ಯಾಜೆಟ್ಗಳಂತಹ ಎಲೆಕ್ಟ್ರಿಕ್ ವಸ್ತುಗಳನ್ನು ದೇವಾಲಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ರಾಮ ಮಂದಿರದ ಉದ್ಘಾಟನೆಯ ಸಮಯದಲ್ಲಿ ಸಾಂಪ್ರದಾಯಿಕ ಭಾರತೀಯ ಉಡುಪನ್ನು ಧರಿಸಬಹುದು. ಪುರುಷರು ಧೋತಿ ಅಥವಾ ಕುರ್ತಾ-ಪೈಜಾಮಾ ಧರಿಸಬಹುದು. ಮತ್ತೊಂದೆಡೆ, ಮಹಿಳೆಯರು ಸಲ್ವಾರ್ ಸೂಟ್ ಅಥವಾ ಸೀರೆಗಳನ್ನು ಧರಿಸಬಹುದು. ಆದಾಗ್ಯೂ, ಈ ಬಗ್ಗೆ ರಾಮ್ ದೇವಾಲಯ ಟ್ರಸ್ಟ್ ಯಾವುದೇ ಡ್ರೆಸ್ ಕೋಡ್ ವಿಧಿಸಿಲ್ಲ.


ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರದರ್ಶನವು ಜನವರಿ 22 ರಂದು ದೂರದರ್ಶನದಲ್ಲಿ ಪ್ರಸಾರವಾಗಲಿದೆ. ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಿಂದ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಸಂಪೂರ್ಣ ಧಾರ್ಮಿಕ ಸಮಾರಂಭವನ್ನು ನೇರ ಪ್ರಸಾರ ಮಾಡಲಾಗುತ್ತದೆ. ವೀಕ್ಷಕರು ದೂರದರ್ಶನದ ಡಿಡಿ ನ್ಯೂಸ್ ಮತ್ತು ಡಿಡಿ ನ್ಯಾಷನಲ್ ಚಾನೆಲ್ ಗಳಲ್ಲಿ, ಖಾಸಗಿ ಮಾಧ್ಯಮದಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು


ರಾಮ ಮಂದಿರ ಪ್ರಾಣ ಪ್ರತಿಷ್ಠಾನಕ್ಕೆ ಯಾವ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ?

ಜನವರಿ 22 ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು, ಅಂತರರಾಷ್ಟ್ರೀಯ ಅತಿಥಿಗಳು ಮತ್ತು ಮಂದಿರ ಚಳವಳಿಗೆ ಅಸಾಧಾರಣ ಕೊಡುಗೆ ನೀಡಿದ ಸಾಮಾನ್ಯ ಜನರನ್ನು ಒಳಗೊಂಡ ಕೇವಲ 7,000 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ಆಹ್ವಾನವನ್ನು ನೀಡಲಾಗಿದೆ.

ಪುತ್ತೂರು : ಎಸಿ ಕಚೇರಿಗೆ ಶಾಸಕರಿಂದ ದಿಢೀರ್ ಭೇಟಿ

Posted by Vidyamaana on 2024-03-05 17:45:47 |

Share: | | | | |


ಪುತ್ತೂರು : ಎಸಿ ಕಚೇರಿಗೆ ಶಾಸಕರಿಂದ ದಿಢೀರ್ ಭೇಟಿ

ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು.

ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು, ಕೇಸ್ ವರ್ಕರ್ ಪೂವಪ್ಪ ಅವರನ್ನು ತರಾಟೆಗೆತ್ತಿಕೊಂಡರು.

ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ನಾನೇನು ನನ್ನ ಮನೆ ಕೆಲಸಕ್ಕೆ ಕರೆ ಮಾಡಿರುವುದಲ್ಲ. ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿ ಎಂದ ಶಾಸಕರು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರಕ್ಕೆ ಸಂಬಂಧಿಸಿ ಫೈಲ್ ಪುಟಪ್ ಮಾಡದೆ ಸತಾಯಿಸುತ್ತಿರುವುದರ ಬಗ್ಗೆ ವಿಚಾರಿಸಿದರು.

ಶನಿವಾರದೊಳಗೆ ಫೈಲ್ ಪುಟಪ್ ಆಗಬೇಕು. ಇಲ್ಲದಿದ್ದರೆ ಶನಿವಾರ ಸಂಜೆ ಕಚೇರಿಗೆ ಆಗಮಿಸುವುದಾಗಿ ಎಚ್ಚರಿಕೆ ನೀಡಿದರು.

ಹಿಂದೂ ಧರ್ಮ ದ ಬಗ್ಗೆ ಅವಹೇಳನ ಹೇಳಿಕೆ ಆರೋಪ : ಶಾಲಾ ಶಿಕ್ಷಕಿ ಸಿಸ್ಟರ್ ಪ್ರಭಾ ಅಮಾನತು

Posted by Vidyamaana on 2024-02-12 16:14:10 |

Share: | | | | |


ಹಿಂದೂ ಧರ್ಮ ದ ಬಗ್ಗೆ ಅವಹೇಳನ ಹೇಳಿಕೆ ಆರೋಪ : ಶಾಲಾ ಶಿಕ್ಷಕಿ ಸಿಸ್ಟರ್ ಪ್ರಭಾ ಅಮಾನತು

ಮಂಗಳೂರು: ಶಾಲೆಯೊಂದರ ಶಿಕ್ಷಕಿಯೊಬ್ಬರು ಹಿಂದೂ ಧರ್ಮ, ಶ್ರೀರಾಮ, ಅಯೋಧ್ಯೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಶಿಕ್ಷಕಿಯನ್ನು ಅಮಾನತುಗೊಳಿಸಿ ಶಾಲಾ ಆಡಳಿತ ಮಂಡಳಿ ಆದೇಶಿಸಿದೆ.ಮಂಗಳೂರಿನ ಸಂತ ಜೆರೋಸಲಾ ಶಾಲೆಯಲ್ಲಿನ 7ನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬುವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು.ಶಿಕ್ಷಕಿಯ ಹೇಳಿಕೆ ಖಂಡಿಸಿ ಶಾಸಕ ವೇದವ್ಯಾಸ ಕಾಮತ್ ಜೊತೆಗೂಡಿ ಹಿಂದೂ ಕಾರ್ಯಕರ್ತರು ಶಾಲೆಯ ಬಳಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಮುತ್ತಿಗೆಗೂ ಯತ್ನಿಸಿದ್ದರು.


ಈ ಘಟನೆಯ ನಂತ್ರ ಸಂತ ಜೆರೋಸಲಾ ಶಾಲೆಯ ಆಡಳಿತ ಮಂಡಳಿಯು 7ನೇ ತರಗತಿ ಶಿಕ್ಷಕಿ ಪ್ರಭಾ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಮೂಲಕ ತಾತ್ಕಾಲಿಕವಾಗಿ ಪ್ರಕರಣಕ್ಕೆ ಬ್ರೇಕ್ ನೀಡಲಾಗಿದೆ.

ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

Posted by Vidyamaana on 2024-01-05 15:03:39 |

Share: | | | | |


ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

ಬೆಂಗಳೂರು : ಆರ್ಥಿಕ ಇಲಾಖೆಯ ಅನುಮತಿ ಪಡೆದುಕೊಳ್ಳದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ.ರಾಜ್ಯದಲ್ಲಿ 41 ಸರ್ಕಾರಿ ವಿವಿಗಳಿದ್ದು, ಕೆಲವು ವಿವಿಗಳ ಕುಲಪತಿಗಳು ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳದೆ ತಮ್ಮ ನಿವೃತ್ತಿ ಅವಧಿಯ ಕೊನೆ ಕ್ಷಣದಲ್ಲಿ ಭರ್ತಿ ಮಾಡಿದ ಪ್ರಕರಣಗಳಿವೆ.ಆರ್ಥಿಕ ಇಲಾಖೆ ಈ ಮೊದಲೇ ಎಚ್ಚರಿಕೆ ನೀಡಿದ್ದರೂ ನೇಮಕಾತಿ ಮಾಡಿಕೊಳ್ಳಲಾಗಿದೆ.


ಅನುಮತಿ ಪಡೆದುಕೊಳ್ಳದೆ ಭರ್ತಿ ಮಾಡಿದ ಹುದ್ದೆಗಳನ್ನು ಮಂಜೂರಾದ ಹುದ್ದೆಗಳೆಂದು ಪರಿಗಣಿಸಲಾಗುವುದಿಲ್ಲ. ಈ ಹುದ್ದೆಗಳ ಭರ್ತಿಗೆ ಸಹಮತ ನೀಡುವುದಿಲ್ಲವೆಂದು ಆರ್ಥಿಕ ಇಲಾಖೆಯಿಂದ ವಿವಿಗಳಿಗೆ ಸೂಚನೆ ನೀಡಲಾಗಿದೆ. ಈ ಹುದ್ದೆಗಳಿಗೆ ವಿವಿಯ ಆರ್ಥಿಕ ಸಂಪನ್ಮೂಲದಿಂದ ಮಾತ್ರ ವೇತನ ನೀಡಬೇಕಾಗುತ್ತದೆ. ಆರ್ಥಿಕ ಇಲಾಖೆ ನೀಡುವ ವೇತನಾನುನುದಾನ ಬಳಕೆ ಸಾಧ್ಯವಿರುವುದಿಲ್ಲ.


ಆರ್ಥಿಕ ಇಲಾಖೆ ಅನುಮತಿ ಪಡೆದುಕೊಳ್ಳದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನಾನುದಾನ ನೀಡಲು ವಿವಿಗಳು ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಆರ್ಥಿಕ ಇಲಾಖೆ ಪರಿಶೀಲಿಸಿದಾಗ ಅನುಮತಿ ಪಡೆದುಕೊಳ್ಳದೆ ನೇಮಕಾತಿ ನಡೆಸಿರುವುದು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಾಮಾನ್ಯ ವಿವಿ, ವೈದ್ಯಕೀಯ ವಿವಿ, ಕೃಷಿ ವಿವಿಗಳು ಆಡಳಿತ ಮಂಡಳಿಯ ಅನುಮೋದನೆ ಪಡೆದು ತಮ್ಮ ಹಂತದಲ್ಲಿ ಅನುಮೋದನೆ ಪಡೆದುಕೊಂಡ ಹುದ್ದೆಗಳ ವಿವರ, ಸರ್ಕಾರದ ಆದೇಶ ನೀಡಿರುವ ಕುರಿತಾದ ಮಾಹಿತಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಟೊಪ್ಪಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಲಾಯಿಸಿದರೆ ಬೀಳುತ್ತೆ ದಂಡ

Posted by Vidyamaana on 2023-08-04 09:10:15 |

Share: | | | | |


ಟೊಪ್ಪಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಲಾಯಿಸಿದರೆ ಬೀಳುತ್ತೆ ದಂಡ

 ಪುತ್ತೂರು: ಅಪಘಾತ ಸಂದರ್ಭ ತಲೆಯನ್ನು ರಕ್ಷಿಸುವ ದೃಷ್ಟಿಯಿಂದ ಹೆಲ್ಮೆಟ್ ಧಾರಣೆಯನ್ನು ಈಗಾಗಲೇ ಕಡ್ಡಾಯ ಮಾಡಲಾಗಿದೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಅರ್ಧ ಹೆಲ್ಮೆಟ್ ಧಾರಣೆಗೆ ಮತ್ತು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳಿಗೂ ಪುತ್ತೂರಿನಲ್ಲೂ ಶೀಘ್ರವೇ ಮುಕ್ತಿ ಸಿಗಲಿದೆ ಎಂದು ತಿಳಿದುಬಂದಿದೆ.

ಹೆಲ್ಮೆಟ್ ಕಡ್ಡಾಯ ಮಾಡುತ್ತಿದ್ದಂತೆ, ವಿವಿಧ ವಿನ್ಯಾಸದ ಹೆಲ್ಮೆಟ್‌ಗಳು ಮಾರುಕಟ್ಟೆ ಪ್ರವೇಶಿಸಿದ್ದವು. ದ್ವಿಚಕ್ರ ವಾಹನ ಸವಾರರು ವೈವಿಧ್ಯಮಯವಾದ ಹೆಲ್ಮೆಟ್‌ಗಳನ್ನು ಧರಿಸಿಕೊಂಡು ಓಡಾಡುವುದನ್ನು ಕಾಣಬಹುದು. ಇದರಲ್ಲಿ ಕೆಲವಷ್ಟೇ ಭದ್ರತೆಯನ್ನು ನೀಡಿದರೆ, ಉಳಿದವುಗಳು ಕೇವಲ ಫ್ಯಾಷನ್‌ಗಷ್ಟೇ ಸೀಮಿತವಾಗಿವೆ. ಇಂತಹ ಹೆಲ್ಮೆಟ್‌ಗಳು ಜೀವಕ್ಕೆ ಭದ್ರತೆಯನ್ನು ನೀಡುವಲ್ಲಿ ವಿಫಲವಾಗಿವೆ. ಇದರಲ್ಲಿ ಅರ್ಧ ಹೆಲ್ಮೆಟ್‌ಗಳು ಕೂಡ ಒಂದು.

ಇನ್ನು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳು ಅಪಘಾತದ ಸಂದರ್ಭದಲ್ಲಿ ಸವಾರನಿಗೆ ರಕ್ಷಣೆ ನೀಡುವುದಿಲ್ಲ ಬದಲಾಗಿ ಇದು ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಹಲವರು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುತ್ತಾರೆ.

ಅರ್ಧ ಹೆಲ್ಮೆಟ್‌ಗಳು ಮುಖದ ಭಾಗಕ್ಕೆ, ಕತ್ತಿನ ಭಾಗಕ್ಕೆ ಹಾಗೂ ತಲೆಯ ಎರಡು ಬದಿಗಳಿಗೆ ರಕ್ಷಣೆಯನ್ನು ನೀಡುವುದಿಲ್ಲ. ಅಪಘಾತ ಸಂಭವಿಸಿದಾಗ ಮುಖದ ಹಾಗೂ ತಲೆಯ ಹಿಂಬದಿ ಭಾಗಕ್ಕೆ ಗಂಭೀರ ಗಾಯಗಳಾಗುವ ಸಾಧ್ಯತೆಗಳೇ ಅಧಿಕ. ಈ ಎಲ್ಲಾ ದೃಷ್ಟಿಯಿಂದ ಅರ್ಧ ಹೆಲ್ಮೆಟ್‌ಗಳಿಗೆ ಮುಕ್ತಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಕೆಲವೇ ದಿನಗಳಲ್ಲಿ ಪುತ್ತೂರಿನಲ್ಲಿ ಅರ್ಧ ಹೆಲ್ಮೆಟ್‌ಗಳಿಗೆ ಮತ್ತು ಐ.ಎಸ್.ಐ ಮಾರ್ಕ್ ರಹಿತ ಹೆಲ್ಮೆಟ್ ಗಳಿಗೆ ಮುಕ್ತಿ ಸಿಗುವುದು ಪಕ್ಕಾ. ಫ್ಯಾಶನ್ ಬದಲು ವಾಹನ ಸವಾರರ ಜೀವ ಉಳಿಸಲು ಒತ್ತು ನೀಡಬೇಕು ಎನ್ನುವ ಆಶಯ ಇದರ ಹಿಂದಿದೆ.

ಅಸೈಗೋಳಿಯಲ್ಲಿ ಭೀಕರ ರಸ್ತೆ ಅಪಘಾತ ; ಯುವತಿ ಸಾವಿನ ಬೆನ್ನಲ್ಲೇ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನೂ ಸಾವು

Posted by Vidyamaana on 2024-03-25 22:28:35 |

Share: | | | | |


ಅಸೈಗೋಳಿಯಲ್ಲಿ ಭೀಕರ ರಸ್ತೆ ಅಪಘಾತ ; ಯುವತಿ ಸಾವಿನ ಬೆನ್ನಲ್ಲೇ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನೂ ಸಾವು

ಉಳ್ಳಾಲ, ಮಾ. 25:  ದೇರಳಕಟ್ಟೆ ಸಮೀಪದ ಅಸೈಗೋಳಿ ತಿಬ್ಲೆಪದವು ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರಳಾಗಿದ್ದ ವಿವಾಹಿತ ಮಹಿಳೆ ಮೃತಪಟ್ಟಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರನೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾನೆ. 


ಮಂಗಳೂರಿನ ಪಚ್ಚನಾಡಿ ನಿವಾಸಿ ಯತೀಶ್‌ ದೇವಾಡಿಗ(29) ಸಾವನ್ನಪ್ಪಿದ ಯುವಕ. ನಿನ್ನೆ ಸಂಜೆ ತಿಬ್ಲೆಪದವು ರಾಜ್ಯ ಹೆದ್ದಾರಿಯಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಇನ್ನೊಂದು ಬದಿಯ ರಸ್ತೆಗೆ ಬಿದ್ದಿತ್ತು. ಸವಾರ ಯತೀಶ್ ಮತ್ತು ಸಹ ಸವಾರೆ ಶ್ರೀನಿಧಿ(30) ರಸ್ತೆಗೆಸೆಯಲ್ಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಪಡೀಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಶ್ರೀನಿಧಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿಯೇ ಸಾವನ್ನಪ್ಪಿದ್ದರುಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯತೀಶ್ ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಆದಿತ್ಯವಾರ ಶ್ರೀನಿಧಿ ಅವರು ಮುಡಿಪುವಿನಲ್ಲಿ ನಡೆದಿದ್ದ ಗೃಹ ಪ್ರವೇಶ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಂಜೆ ಯತೀಶ್ ಜೊತೆ ಬೈಕಿನಲ್ಲಿ ಮಂಗಳೂರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. 


ತೋಕೂರಿನ‌ ತವರು ಮನೆಯಲ್ಲೇ ಉಳಿದಿದ್ದ ಶ್ರೀನಿಧಿಗೆ ಇಬ್ಬರು ಪುಟ್ಟ ಮಕ್ಕಳಿದ್ದು ಮನೆ ಮಗಳ ಸಾವಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಯತೀಶ್ ದೇವಾಡಿಗನೂ ಪೋಷಕರಿಗೆ ಏಕೈಕ ಪುತ್ರನಾಗಿದ್ದು ಆತನ ಅಕಾಲಿಕ ಅಗಲಿಕೆಯಿಂದ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

Recent News


Leave a Comment: