ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

Posted by Vidyamaana on 2024-02-17 21:49:20 |

Share: | | | | |


ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನ ಕಾಂಗ್ರೆಸ್ ಸಮಾವೇಶದತ್ತ ಬರುವ ವೇಳೆ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಮುಖ್ಯಮಂತ್ರಿ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ಸಮಾವೇಶ ನಡೆಯುವ ಸಹ್ಯಾದ್ರಿ ಮೈದಾನಕ್ಕೆ ಬರುವ ವೇಳೆ ಮುತ್ತಿಗೆ ಹಾಕಲು ಬೊಂದೆಲ್ ಬಳಿ ಕಾರ್ಯಕರ್ತರು ಸೇರಿದ್ದರು. 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದು ರಸ್ತೆಯಲ್ಲಿ ಮುಖ್ಯಮಂತ್ರಿ ಬರುವಾಗ ಕಪ್ಪು ಪಟ್ಟಿ ಹಿಡಿದು ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ

ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

Posted by Vidyamaana on 2024-02-15 13:02:04 |

Share: | | | | |


ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

ಬಂಟ್ವಾಳ : ಚಲಿಸುತ್ತಿರುವ ರೈಲಿನಿಂದ ಯುವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಬೆಳಿಗ್ಗೆ 6. 30 ರ ವೇಳೆಗೆ ನಡೆದಿದೆ.


    ಈಕೆ ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಆಗಿರಬಹುದು ಎಂದು ಅವಳ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯಂತೆ ಅಂದಾಜಿಸಲಾಗಿದೆ.


    ಆಧಾರ್ ಕಾರ್ಡ್ ನಲ್ಲಿ c/o ಎಮ್. ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದ್ದು ಆಕೆ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದಾಳೆ.

ಅವಳು ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿ.ಸಿ.ರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.

ಆಕೆಯ ಸ್ಪಷ್ಟ ವಿಳಾಸ ಮತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ ಅಥವಾ ಆಕಸ್ಮಿಕವಾಗಿ ಕೈತಪ್ಪಿ ಬಿದ್ದಿರಬಹುದೇ ಎಂದು ಇನ್ನೂ ಖಚಿತಗೊಂಡಿಲ್ಲ.

    ರೈಲಿನಲ್ಲಿದ್ದ ಪ್ರಯಾಣಿಕರು ರೈಲಿನಿಂದ  ಹಾರಿದ ಬಗ್ಗೆ ಮಾಹಿತಿ ನೀಡಿದ್ದಾರೆ. ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಗೂಡಿನಬಳಿಯ   ಮಹಮ್ಮದ್ ಮಮ್ಮು ನೇತ್ರತ್ವದ ಜೀವರಕ್ಷಕ ತಂಡದ ಇರ್ಶಾದ್ ಡ್ರೀಮ್ಸ್, ಮನ್ಸೂರ್ ವಝೀರ್ ಅವರು ಮೇಲಕ್ಕೆತ್ತಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

    ರೈಲ್ವೇ ಪೊಲೀಸರು ಹಾಗೂ ಬಂಟ್ವಾಳ ನಗರ ಪೋಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕ 

ದೇವಪ್ಪ, ಸಿಬ್ಬಂದಿ ವಿಜಯ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕೋಡಿಕಲ್ ಕ್ರಾಸ್ ನಲ್ಲಿ ಪಾದಚಾರಿ ಮೇಲೆ ಹರಿದ ಲಾರಿ ; ಉತ್ತರ ಭಾರತ ಮೂಲದ ಕಾರ್ಮಿಕ ಯಾದವ್ ಸ್ಥಳದಲ್ಲೇ ಮೃತ್ಯು

Posted by Vidyamaana on 2024-04-20 10:09:16 |

Share: | | | | |


ಕೋಡಿಕಲ್ ಕ್ರಾಸ್ ನಲ್ಲಿ ಪಾದಚಾರಿ ಮೇಲೆ ಹರಿದ ಲಾರಿ ; ಉತ್ತರ ಭಾರತ ಮೂಲದ ಕಾರ್ಮಿಕ ಯಾದವ್ ಸ್ಥಳದಲ್ಲೇ ಮೃತ್ಯು

ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ‌. 

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಯಶಸ್ವಿಗೆ ಸಹಕರಿಸಿದವರಿಗೆ ಅಭಿನಂದನೆ - ಸನ್ಮಾನ

Posted by Vidyamaana on 2024-02-12 07:37:54 |

Share: | | | | |


ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಯಶಸ್ವಿಗೆ ಸಹಕರಿಸಿದವರಿಗೆ ಅಭಿನಂದನೆ - ಸನ್ಮಾನ

ಪುತ್ತೂರು : ಇತಿಹಾಸ ಪ್ರಸಿದ್ಧ 31ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಅತ್ಯಂತ ಯಶಸ್ವಿಗೊಳ್ಳಲು ಸಹಕರಿಸಿದ ಎಲ್ಲಾ ಸದಸ್ಯರಿಗೆ, ತನು ಮನ ಧನ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಾಗೂ ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಪದಾಧಿಕಾರಿಗಳಾಗಿದ್ದು ಇತ್ತೀಚೆಗೆ ವಿವಿಧ ಹುದ್ದೆಗಳನ್ನು ಪಡೆದವರನ್ನು ಸನ್ಮಾನಿಸುವ ಕಾರ್ಯಕ್ರಮವು ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ರವರ ನೇತೃತ್ವದಲ್ಲಿ ಫೆ. 10 ರಂದು ದರ್ಬೆಯಲ್ಲಿ ನಡೆಯಿತು.


ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಅವರು ಮಾತನಾಡಿ, ಪುತ್ತೂರಿನಲ್ಲಿ ಈ ಹಿಂದೆ ನಡೆದ ಪಿಲಿರಂಗ್, ಕಬಡ್ಡಿ ಸ್ಪರ್ಧೆ ಹಾಗೂ 31ನೇ ವರ್ಷದ ಜೋಡುಕರೆ ಕಂಬಳವು ಅತ್ಯಂತ ಯಶಸ್ವಿಗೊಂಡು ಎಲ್ಲಾ ಕಡೆ ಹೆಸರುಗಳಿಸಿದೆ ಇದಕ್ಕೆ ಕಾರಣೀ ಭೂತರಾದ ಹಾಗೂ ಹಗಲು ರಾತ್ರಿ ಎನ್ನದೆ ಶ್ರಮವಹಿಸಿದ ಎಲ್ಲಾ ಸದಸ್ಯರಿಗೆ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು. ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಪದಾಧಿಕಾರಿಗಳಾಗಿದ್ದು, ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ನೇಮಕಗೊಂಡ ನಿರಂಜನ ರೈ ಮಠಂತಬೆಟ್ಟು,ಕೃಷ್ಣಪ್ರಸಾದ್ ಆಳ್ವ, ಆರ್ಯಾಪು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಸುರೇಂದ್ರ ರೈ ಬಳ್ಳ ಮಜಲು ನಿರ್ದೇಶಕರಾಗಿ ಆಯ್ಕೆಗೊಂಡ ರಂಜಿತ್ ಬಂಗೇರ, ಪುತ್ತೂರು ನಗರಸಭಾ ಸದಸ್ಯರಾಗಿ ಆಯ್ಕೆಗೊಂಡ ದಿನೇಶ್ ಶೇವಿರೆ ಪುತ್ತೂರು ಕೋಟಿ ಚೆನ್ನಯ ಕಂಬಳವು ಅತ್ಯಂತ ಯಶಸ್ವಿಯಾಗಿ ನೆರವೇರಲು ಅದರ ನೇತೃತ್ವವನ್ನು ವಹಿಸಿಕೊಂಡ ಚಂದ್ರಹಾಸ ಶೆಟ್ಟಿ ಹಾಗೂ ಅವರ ಟೀಮ್‌ಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಪುತ್ತೂರಿನ ಮಾಜಿ ಶಾಸಕರಾದ ಶಕುಂತಳಾ ಟಿ ಶೆಟ್ಟಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.ಬಳಿಕ ಮಾತನಾಡಿದ ಅವರು ಪುತ್ತೂರು ಕಂಬಳವನ್ನು ನಡೆಸಿಕೊಂಡು ಬಂದ ವಿನಯ್ ಕುಮಾರ್ ಸೊರಕೆ ಅವರು ಉಡುಪಿಯಲ್ಲಿ ಎಂ.ಪಿ. ಆದರೂ ನಾನು ಕಾಂಗ್ರೆಸ್ಸಿಗೆ ಬಂದು ಎಂಎಲ್‌ಎ ಆದೆ. ಅಶೋಕ್ ರೈ ರವರು ಪುತ್ತೂರು ಕಂಬಳಕ್ಕೆ ಸೇರಿಕೊಂಡ ಬಳಿಕ ಶಾಸಕರಾದರು ಅದೇ ರೀತಿ ಕಂಬಳದಲ್ಲಿ ತೊಡಗಿಸಿಕೊಂಡರವರಿಗೆ ಒಂದಲ್ಲ ಒಂದು ರೀತಿಯಲ್ಲಿ ಸ್ಥಾನಮಾನ ದೊರಕುತ್ತಲೇ ಬರಲಿದೆ ಎಂದು ಹೇಳಿದರು. ಸನ್ಮಾನ ಕಾರ್ಯಕ್ರಮದ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ.ಖಜಾಂಜಿ ಪಂಜಿಗುಡ್ಡೆ ಈಶ್ವರಭಟ್ ಉಪಾಧ್ಯಕ್ಷ ಶಿವರಾಮ ಆಳ್ವ ಬಳ್ಳಮಜಲು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೊರ್ಮಂಡ ಉಪಸಿತರಿದ್ದರು.

Watch Video:ಸಾವು ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ?

Posted by Vidyamaana on 2024-06-07 16:38:03 |

Share: | | | | |


Watch Video:ಸಾವು ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ?

ಕೇರಳ: ಅಯ್ಯೋ ನನ್ನ ಸಾವು ಕಣ್ಣೆದುರೇ ಪಾಸ್ ಆದಂತೆ ಆಯ್ತು. ಆ ಘಟನೆಯಿಂದ ನಾನು ಬದುಕಿ ಬಂದಿದ್ದೇ ಪವಾಡ ಹಾಗೆ ಹೀಗೆ ಅಂತ ಹೇಳೋದನ್ನು ಕೇಳಿದ್ದೀರಿ. ಆದ್ರೇ ಇಲ್ಲೊಬ್ಬ ಸಾವಿನಿಂದ ಜಸ್ಟ್ ಮಿಸ್ ಆಗಿದ್ದಾರೆ. ಕಂಡೆಕ್ಟರ್ ಸಹಾಯದಿಂದ ಬದುಕಿ ಬಂದ ಬಡಜೀವದ ಬಗ್ಗೆ ಮುಂದೆ ಓದಿ.

ಕೇರಳದ ಮಲಬಾರ್ ಬಸ್ ನಲ್ಲಿ ವ್ಯಕ್ತಿಯೊಬ್ಬ ಪ್ರಯಾಣಿಸುತ್ತಿದ್ದನು. ಬಸ್ಸಿನ ಡೋರ್ ಬಳಿಯಲ್ಲೇ ನಿಂತು, ಟಿಕೆಟ್ ಖರೀದಿಸಲು ಮುಂದಾಗಿದ್ದಾನೆ. ಬಸ್ ಕಂಡಕ್ಟರ್ ತನ್ನ ಪಾಡಿಗೆ ತಾನು ಡೋರ್ ಸಮೀಪವೇ ನಿಂತಿದ್ದಂತ ವ್ಯಕ್ತಿಗೆ ಟಿಕೆಟ್ ಕೊಡೋದಕ್ಕೆ ಮುಂದಾಗಿದ್ದಾನೆ.

ಉಡುಪಿ: ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿಯ ಪರೋಲ್ ಅರ್ಜಿ ತಿರಸ್ಕೃತ

Posted by Vidyamaana on 2024-02-10 21:50:12 |

Share: | | | | |


ಉಡುಪಿ: ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿಯ  ಪರೋಲ್ ಅರ್ಜಿ ತಿರಸ್ಕೃತ

ಉಡುಪಿ : ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿರುವ ಪರೋಲ್ ಅರ್ಜಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಿರಸ್ಕರಿಸಿ ಆದೇಶ ನೀಡಿದೆ.ಫೆಬ್ರವರಿ 1ರಂದು ನಿಧನರಾದ ತನ್ನ ಸಹೋದರ ನಿತಿನ್ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪರೋಲ್ ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಆರೋಪಿ ಫೆಬ್ರವರಿ 8ರಂದು ಅರ್ಜಿ ಸಲ್ಲಿಸಿದ್ದನು.ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗೆ ಪರೋಲ್ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅಲ್ಲದೆ ಆರೋಪಿಯ ಮೇಲೆ ದಾಳಿಯಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಆರೋಪಿ ತನ್ನ ಸಹೋದರ ಮೃತಪಟ್ಟ ಬಗ್ಗೆ ಯಾವುದೇ ಮರಣ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸದೆ ಇರುವುದರಿಂದ ಆತನಿಗೆ ಪರೋಲ್ ನೀಡಬಾರದು ಎಂದು ವಾದ ಮಂಡಿಸಿದ್ದರು. ಕೋರ್ಟ್ ಈ ವಾದವನ್ನು ಪುರಸ್ಕರಿಸಿತ್ತು.

Recent News


Leave a Comment: