Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2024-03-20 19:44:20 |
ಹೊಳಲ್ಕೆರೆ: ಬೆಟ್ಟಿಂಗ್ ದಂಧೆ ಮೋಸಕ್ಕೆ ಸಿಲುಕಿದ್ದ ಗಂಡನಿಗೆ ಸಾಲಗಾರರು ನೀಡುತ್ತಿದ್ದ ಹಿಂಸೆಗೆ ಬೇಸತ್ತು ಪತ್ನಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದಿದೆ.ಪಟ್ಟಣದಲ್ಲಿ ಶಿವಮೊಗ್ಗ ರಸ್ತೆಯ ಬಸವ ಲೇಔಟ್ ನಿವಾಸಿ ರಂಚಿತಾ (23) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಬೆಟ್ಟಿಂಗ್ ದಂಧೆಗೆ ಪ್ರೇರಣೆ ನೀಡಿ ಸಾಲ ಕೊಟ್ಟವರ ಕಾಟ ದಿನದಿಂದ ದಿನಕ್ಕೆ ಹೆಚ್ಚಾದ ಹಿನ್ನಲೆಯಲ್ಲಿ ತೀವ್ರ ಮನನೊಂದ ಮಗಳು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ರಂಚಿತಾ ತಂದೆ ವೆಂಕಟೇಶ್ ಅವರು ಹೊಳಲ್ಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಂಚಿತಾ ಐದು ವರ್ಷಗಳ ಹಿಂದೆ ಪಟ್ಟಣದ ಮುಖಂಡ ಬಾಲು ಪ್ರಕಾಶ ಹಾಗೂ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಚಂದ್ರಕಲಾ ದಂಪತಿಯ ಪುತ್ರನಾದ ಇಂಜಿನಿಯರ್ ವೃತ್ತಿ ಮಾಡಿಕೊಂಡಿದ್ದ ದರ್ಶನ್ ಬಾಲು ನನ್ನು ವಿವಾಹವಾಗಿದ್ದು, ನಾಲ್ಕು ವರ್ಷ ಗಂಡು ಮಗುವಿದೆ.
ಹೊಳಲ್ಕೆರೆ ಪಟ್ಟಣದ ನಿವಾಸಿಗಳಾದ ಗಿರೀಶ್, ರಾಘು, ಚಿತ್ರದುರ್ಗ ಸುದೀಪ್, ತಿಪ್ಪೇಸ್ವಾಮಿ, ವೆಂಕಟೇಶ್, ಗುರು, ವಾಗೀಶ್, ರಾಕೇಶ್, ಪಾವಗಡದ ಪೊತರೆಡ್ಡಿ, ಅಜ್ಜಂಪುರ ಕಂಟ್ರಾಕ್ಟರ್ ಹೊನ್ನಪ್ಪ, ಹಿರಿಯೂರು ಮಹಾಂತೇಶ್, ಕಂಟ್ರಾಕ್ಟರ್ ಜಗನ್ನಾಥಶಿರಾ ಮತ್ತಿತರರು ಆಳಿಯ ದರ್ಶನ್ ಇವರಿಗೆ ಐಪಿಎಲ್ ಬೆಟ್ಟಿಂಗ್ ನಿಂದ ಕೋಟಿ ಕೋಟಿ ಸಂಪಾದಿಸಬಹುದು ಎಂದು ಪುಸಲಾಯಿಸಿದ್ದು, ಹಣವಿಲ್ಲ ಎಂದು ಹೇಳಿದರೂ ಖಾಲಿ ಚೆಕ್ ಪಡೆದು ಬೆಟ್ಟಿಂಗ್ ಗೆ ಹಣ ಕಟ್ಟಿಸಿದ್ದಾರೆ. ದಂಧೆಯಲ್ಲಿ ಸೊಲಾದ ಬಳಿಕ ಹಣಕೊಡದಿದ್ದರೆ ಚೆಕ್ ಗಳನ್ನು ಕೋರ್ಟಿಗೆ ಹಾಕಿ ಜೈಲಿಗೆ ಕಳುಸಿವುದಾಗಿ ಬೇದರಿಸಿದ್ದಾರೆ. ಹಣವನ್ನು ದರ್ಶನ್ ತಂದೆ ಪ್ರಕಾಶ್ ಅವರು ತೀರಿಸುವ ಭರವಸೆ ನೀಡಿದ್ದರೂ, ಪದೆಪದೆ ಮನೆಗೆ ಪೋನ್ ಮಾಡಿ, ಬೆದರಿಕೆ ಹಾಕಿ, ಮಾನಸಿಕ ಕಿರಿಕುಳ, ಹಿಂಸೆ ನೀಡಿದ್ದು, ಇದನ್ನು ಸಹಿಸಿಕೊಳ್ಳದೆ ಮಗಳು ರಂಚಿತಾ ಸೋಮವಾರ ಸಂಜೆ ಮನೆಯಲ್ಲಿ ನೇಣುಹಾಕಿಕೊಂಡಿದ್ದಾಳೆ. ನಾವು ತತ್ ಕ್ಷಣವೇ ನೋಡಿ ಅಸ್ಪತ್ಸೆಗೆ ಕರೆದುಕೊಂಡು ಹೋದರೂ ಫಲಕಾರಿಯಾಗಿಲ್ಲ. ನಮ್ಮ ಮಗಳ ಸಾವಿಗೆ ಬೆಟ್ಟಿಂಗ್ ದಂಧೆದಾರರೆ ಕಾರಣವಾಗಿದ್ದು ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಂಚಿತಾ ತಂದೆ ವೆಂಕಟೇಶ್ ದೂರಿನಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧ ಶಿವ ಮತ್ತು ಗಿರೀಶ್ ಎಂಬವರನ್ನು ಬಂಧಿಸಲಾಗಿದೆ ಎಂದು ಪಿಎಸ್ಐ ಸುರೇಶ್ ತಿಳಿಸಿದ್ದಾರೆ.
Posted by Vidyamaana on 2023-12-13 21:05:17 |
ಪುತ್ತೂರು: ಮಾಧಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯವು ಪೀಳಿಗೆ ಮಾಧಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು, ಸಮಾಜವನ್ನು ಹಾಳು ಮಾಡುತ್ತಿರುವ ಇಂತವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಮಾಧಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೧೪೭ ಪೆಡ್ಲರ್ಗಳ ವಿರುದ್ದ ಪ್ರಕರಣ ದಾಖಲಾಗಿದೆ, ೫೨೮ ಮಂದಿ ಮಾದಕ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಾಗಿದೆ, ಪುತ್ತೂರಿನಲ್ಲಿ ೨೬ ಪ್ರಕರಣಗಳು ದಾಖಲಾಗಿದೆ. ಇದನ್ನು ನಿಯಂತ್ರಣ ಮಾಡಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.
ವ್ಯಸನ ಮುಕ್ತ ಕೇಂದ್ರಗಳನ್ನು ಆರಂಭಿಸಿ
ರಾಜ್ಯದ ಪ್ರತೀ ತಾಲೂಕುಗಳಲ್ಲಿ ಡಿ ಎಡಿಕ್ಸನ್ ಸೆಂಟರ್ಗಳನ್ನು ಆರಂಭಿಸಬೇಕು. ಈ ಕೇಂದ್ರಗಳಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಬೇಕಿದೆ. ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಜನ ಪ್ರದೇಶಗಳ ಬಗ್ಗೆ ಪೊಲೀಸರು ಹೆಚ್ಚು ನಿಗಾ ಇಡಬೇಕು, ಕೆಲವು ಕಡೆಗಳಲ್ಲಿ ವೆಂಟೆಡ್ ಡ್ಯಾಮ್ಗಳ ಬಳಿ ಈ ವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿದೆ. ಇದೆಲ್ಲವನ್ನೂ ತಡೆಗಟ್ಟುವ ಮೂಲಕ ಪೊಲೀಸ್ ಇಲಾಖೆ ಮಾಧಕ ವ್ಯಸನಿಗಳ ಭೇಟೆಯಾಡಬೇಕು ಎಂದು ಶಾಸಕರು ಆಗ್ರಹಿಸಿದರು.
ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಮಾಡಿ
ಪ್ರತೀ ಶಾಲಾ ಕಾಲೇಜುಗಳಲ್ಲಿ ಮಾಧಕ ದ್ರವ್ಯ ವ್ಯಸನದಿಂದ ಅಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು. ಈ ರೀತಿಯ ಕಾರ್ಯಕ್ರಮವನ್ನು ಮಾಡುವ ಮೂಲಕ ಯುವ ಸಮೂಹ ಮತ್ತು ಯುವ ವಿದ್ಯಾರ್ಥಿ ಸಮೂಹ ಈ ಚಟಗಳಿಗೆ ಬಲಿಯಾಗದಂತೆ ಎಚ್ಚರಿಕಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಾಸಕರು ಸರಕಾರವನ್ನು ಆಗ್ರಹಿಸಿದರು.
ಪುತ್ತೂರಿನಲ್ಲಿ ಡಿಎಡಿಕ್ಸನ್ ಸೆಂಟರ್ ಗೆ ಮನವಿ
ಪುತ್ತೂರಿನಲ್ಲಿ ಡಿ ಎಡಿಕ್ಸನ್ ಸೆಂಟರ್ ಪ್ರಾರಂಭ ಮಾಡುವಂತೆ ಶಾಸಕರು ಗೃಹ ಸಚಿವರಾದ ಡಾ. ಎಚ್ ಜಿ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದರು. ಈ ವಿಚಾರವನ್ನು ಪರಿಶೀಲನೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು. ದ ಕ ಜಿಲ್ಲೆಯಲ್ಲಿ ಮಂಗಳೂರಿನಲ್ಲಿ ಮಾತ್ರ ಡಿ ಎಡಿಕ್ಸನ್ ಕೇಂದ್ರವಿದ್ದು ಉಪ ವಿಭಾಗವಾದ ಪುತ್ತೂರಿನಲ್ಲಿ ವ್ಯಸನ ಮುಕ್ತ ಕೇಂದ್ರವನ್ನು ಆರಂಭಿಸಬೇಕು ಎಂದು ಶಾಸಕರು ಮನವಿ ಮಾಡಿದರು.
ಮಾಧಕ ವ್ಯಸನಿಗಳ ವಿರುದ್ದ ಯುದ್ದ ಸಾರಿದ್ದೇವೆ: ಗೃಹ ಸಚಿವರು
ಮಾಧಕ ವ್ಯಸನಿಗಳಿಂದ ಸಮಾಜಕ್ಕೆ ಕಂಠಕ ಉಂಟಾಗುತ್ತಿದೆ. ಇಂಥವರ ವಿರುದ್ದ ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವ್ಯಸನಿಗಳ ಭೇಟೆಯಾಡುತ್ತಿದ್ದೇವೆ. ಈಗಾಗಲೇ ರಾಜ್ಯಾದ್ಯಂತ ಕಾರ್ಯಾಚರಣೆ ಪ್ರಾರಂಭವಾಗಿದೆ. ನೂರಾರು ಕೋಟಿ ರೂ ಬೆಲೆ ಬಾಳುವ ಮಾಧಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದಲ್ಲೇ ಅತೀ ಹೆಚ್ಚು ಅಂದರೆ ಸುಮಾರು ೨೧ ಕೋಟಿ ರೂ ಮೌಲ್ಯದ ಮಾಧಕ ವಸ್ತುಗಳನ್ನು ಒಂದೇ ದಿನದಲ್ಲಿ ವಶಕ್ಕೆ ಪಡೆಯಲಾಗಿದೆ. ದ ಕ ಜಿಲ್ಲೆಯನ್ನು ಒಂದು ವರ್ಷದೊಳಗೆ ವ್ಯಸನ ಮುಕ್ತ ಅಥವಾ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವುದಾಗಿ ಪೊಲೀಸರು ಒಪ್ಪಿಕೊಂಡಿದ್ದು ಅದನ್ನು ಚಾಲೆಂಜಗಿ ಸ್ವೀಕರಿಸಿದ್ದಾರೆ. ಮಾಧಕ ವ್ಯಸನಿಗಳ ಮತ್ತು ಅದನ್ನು ಮರಾಟ ಮಾಡುವ ದುಷ್ಕರ್ಮಿಗಳ ವಿರುದ್ದ ನಾವು ಈಗಾಗಲೇ ಯುದ್ದವನ್ನೇ ಸಾರಿದ್ದು , ಈಗಾಗಲೇ ರಾಜ್ಯದಲ್ಲಿ ೪೬ ಕಡೆಗಳಲ್ಲಿ ವಿಶೇಷ ಠಾಣೆಗಳನ್ನು ತೆರೆಯಲಾಗಿದೆ,ಇದರಲ್ಲಿ ಯವುದೇ ರಾಜಿಯಿಲ್ಲ ಎಂದು ಗೃಹ ಸಚಿವ ಡಾ. ಎಚ್ ಜಿ ಪರಮೇಶ್ವರ್ ಅವರು ಸಭೆಯಲ್ಲಿ ಸಪಷ್ಟಪಡಿಸಿದರು.
Posted by Vidyamaana on 2024-03-05 07:22:31 |
ಪುತ್ತೂರು : ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆರತಿ ಮೃತ ಯುವತಿ.ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ., ಅಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.
ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ.
ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.ಮೃತ ವಿದ್ಯಾರ್ಥಿನಿ ತಂದೆ, ತಾಯಿ ಮತ್ತು ಓರ್ವ ಸಹೋದರರನ್ನು ಅಗಲಿದ್ದಾರೆ.
Posted by Vidyamaana on 2023-07-13 17:07:27 |
ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಇಂದಿನಿಂದ (ಜುಲೈ 1) ಜಾರಿಗೆ ಬರುತ್ತಿದೆ. ಆದರೆ, ಅರ್ಜಿ ಹಾಕದವರಿಗೆ ಉಚಿತ ವಿದ್ಯುತ್ ಇಲ್ಲ, ಅರ್ಜಿ ಹಾಕದೇ ಉಚಿತ ಹೇಗೆ ಕೊಡೋದು. ಜುಲೈ ಕೊನೆ ವಾರದೊಳಗೆ ಅರ್ಜಿ ಸಲ್ಲಿಸಿದವರಿಗೆ ಉಚಿತ ವಿದ್ಯುತ್ ಯೋಜನೆಯ ಲಾಭ ಸಿಗಲಿದೆ ಎಂದು ಇಂಧನ
ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಈಗಾಗಲೇ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಜುಲೈ 1ರಿಂದ ಎಲ್ಲರಿಗೂ ಉಚಿತ ವಿದ್ಯುತ್ ಸಿಗಲಿದೆ. ಜೂನ್ ತಿಂಗಳಿನ ವಿದ್ಯುತ್ ಬಿಲ್ ಜುಲೈ ತಿಂಗಳಲ್ಲಿ ಬರಲಿದೆ. ಗೃಹಜ್ಯೋತಿ ಯೋಜನೆಗೆ ಅರ್ಹತೆ ಹೊಂದಿರುವವರಿಗೆ ಆಗಸ್ಟ್ ಒಂದಕ್ಕೆ ಈ ಯೋಜನೆಯ ಲಾಭ ಸಿಗಲಿದೆ ಎಂದು ಹೇಳಿದರು.ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕದವರು ಬೇಗ ಹಾಕಬೇಕು. ಕೆಇಬಿ ಆಫೀಸ್ಗೆ ಹೋಗಿ ಅರ್ಜಿಯನ್ನು ಕೊಡಬಹುದು. ಅರ್ಜಿ ಹಾಕಲು ಈಗ ಅಷ್ಟು ಸಮಸ್ಯೆ ಇಲ್ಲ, ಒತ್ತಡ ಕಡಿಮೆ ಆಗಿದೆ. ಅರ್ಜಿ ಹಾಕಲು ಯಾವುದೇ ಡೆಡ್ಲೈನ್ ಅನ್ನು ನಾವು ನೀಡಿಲ್ಲ. ಆದರೆ, ಅರ್ಜಿ ಹಾಕದಿದ್ದರೆ ಉಚಿತ ವಿದ್ಯುತ್ ಸಿಗುವುದಿಲ್ಲ. ಅರ್ಜಿ ಹಾಕಲೇಬೇಕು. ಅರ್ಜಿ ಸಲ್ಲಿಸುವುದು ತಡವಾದರೆ, ಸೌಲಭ್ಯ ಸಿಗುವುದು ಕೂಡ ವಿಳಂಬ ಆಗುತ್ತದೆ ಎಂದರು.ಆಗಸ್ಟ್ 1 ರಿಂದ ಜುಲೈ ತಿಂಗಳಿನಿಂದ ಬಿಲ್ಲಿಂಗ್ ಮಾಡುತ್ತೇವೆ. ಅಷ್ಟರೊಳಗೆ ಅರ್ಜಿಯನ್ನು ಸಲ್ಲಿಸಿದ್ದವರಿಗೆ ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಸಿಗುತ್ತದೆ. ಅರ್ಜಿ ಹಾಕದಿದ್ದರೆ ಮುಂದಿನ ತಿಂಗಳ ಬಿಲ್ನಲ್ಲಿ ವಿನಾಯಿತಿ ಸಿಗಲ್ಲ. ಎಲ್ಲರೂ ಆದಷ್ಟು ಬೇಗ ಅರ್ಜಿ ಹಾಕುವುದು ಒಳ್ಳೆಯದು. ಇನ್ನು ಟೈಂ ಇದೆ, ಬೇಗ ಅರ್ಜಿ ಹಾಕಲಿ ಎಂದು ಕೆಜೆ ಜಾರ್ಜ್ ಜನರಿಗೆ ಕರೆ ನೀಡಿದರು.ಶನಿವಾರದಿಂದ ಯೋಜನೆ ಜಾರಿ!
ಕಾಂಗ್ರೆಸ್ ಸರ್ಕಾರ ತಾನೂ ಚುನಾವಣೆ ವೇಳೆ ಘೋಷಿಸಿದಂತೆ 200 ಯೂನಿಟ್ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆ ಗೃಹಜ್ಯೋತಿ ಜುಲೈ 1ರಿಂದ ಜಾರಿಯಾಗಿದೆ. ಜೂನ್ 18ರಿಂದಲೇ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈಗಾಗಲೇ 86 ಲಕ್ಷಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣದ ಸರಾಸರಿ ಜೊತೆಗೆ ಹೆಚ್ಚುವರಿ ಶೇ.10ರಷ್ಟು ವಿದ್ಯುತ್ ಅನ್ನು ಉಚಿತವಾಗಿ ಸರ್ಕಾರ ನೀಡಲಿದೆ. 200 ಯೂನಿಟ್ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಉಚಿತ ವಿದ್ಯುತ್ ಲಾಭ ಜನರಿಗೆ ಸಿಗುವುದಿಲ್ಲ.ಶನಿವಾರದಿಂದ ಯೋಜನೆ ಜಾರಿ!
ಕಾಂಗ್ರೆಸ್ ಸರ್ಕಾರ ತಾನೂ ಚುನಾವಣೆ ವೇಳೆ ಘೋಷಿಸಿದಂತೆ 200 ಯೂನಿಟ್ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆ ಗೃಹಜ್ಯೋತಿ ಜುಲೈ 1ರಿಂದ ಜಾರಿಯಾಗಿದೆ. ಜೂನ್ 18ರಿಂದಲೇ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈಗಾಗಲೇ 86 ಲಕ್ಷಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣದ ಸರಾಸರಿ ಜೊತೆಗೆ ಹೆಚ್ಚುವರಿ ಶೇ.10ರಷ್ಟು ವಿದ್ಯುತ್ ಅನ್ನು ಉಚಿತವಾಗಿ ಸರ್ಕಾರ ನೀಡಲಿದೆ. 200 ಯೂನಿಟ್ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಉಚಿತ ವಿದ್ಯುತ್ ಲಾಭ ಜನರಿಗೆ ಸಿಗುವುದಿಲ್ಲ.ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಸೇವಾಸಿಂಧು ಪೋರ್ಟಲ್ ಅನ್ನು ರೂಪಿಸಲಾಗಿದೆ. ಮೊದಲ ವಾರ ಸರ್ವರ್ ಬ್ಯುಸಿಯಿಂದ ಜನರು ಅರ್ಜಿ ಸಲ್ಲಿಸಲು ಪರದಾಡಿದ್ದರು. ಈಗ ಸರ್ವರ್ ಸಮಸ್ಯೆ ಅಷ್ಟೊಂದು ಕಾಣುತ್ತಿಲ್ಲ. ಈಗ ಅರ್ಜಿಯನ್ನು ಜನರ ತಮ್ಮ ಮೊಬೈಲ್ ಮತ್ತು ಕಂಪ್ಯೂಟರ್ಗಳಲ್ಲಿ ಸಲ್ಲಿಸಬಹುದಾಗಿದೆ
Posted by Vidyamaana on 2023-06-07 16:04:50 |
ಪುತ್ತೂರು: ಟಯರ್ ಇಲ್ಲದೇ, ಚೈನ್ ಸಹಾಯದಿಂದ ಮುನ್ನಡೆಯುವ ಹಿಟಾಚಿಗಳನ್ನು ರಸ್ತೆಗೆ ಇಳಿಸಬಾರದು ಎಂಬ ನಿಯಮವಿದೆ. ಈ ಕಾರಣದಿಂದ, ಹಿಟಾಚಿಗಳಿಗೆ ಆರ್.ಟಿ.ಓ. ನೋಂದಣಿಯೂ ಇರುವುದಿಲ್ಲ. ಹೀಗಿದ್ದರೂ ಪಣೆ ಮಜಲು ಪರಿಸರದಲ್ಲಿ ಹಿಟಾಚಿಯೊಂದನ್ನು ರಸ್ತೆಯಲ್ಲೇ ಕೊಂಡೊಯ್ಯುತ್ತದೆ ದೃಶ್ಯ ವೀಡಿಯೋವೊಂದರಲ್ಲಿ ಸೆರೆಯಾಗಿದೆ.
ಹಿಟಾಚಿಗಳನ್ನು ಮಣ್ಣು ಅಗೆಯಲು ಉಪಯೋಗಿಸುತ್ತಾರೆ. ಗುಡ್ಡವನ್ನು ಲೀಲಾಜಾಲವಾಗಿ ಹತ್ತಿಳಿಯಬಲ್ಲ ಈ ಹಿಟಾಚಿಗಳನ್ನು ರಸ್ತೆಗೆ ತರುವಂತೆ ಇಲ್ಲ. ತಂದದ್ದೇ ಆದರೆ, ಡಾಮರು ರಸ್ತೆ ಕಿತ್ತು ಹೋಗುತ್ತದೆ. ಇದಕ್ಕೆ ಸಾಕಷ್ಟು ನಿದರ್ಶನಗಳೂ ಇವೆ. ಆದ್ದರಿಂದ ಹಿಟಾಚಿಯನ್ನು ರಸ್ತೆಗೆ ಇಳಿಸಲು ನಿರ್ಬಂಧ ವಿಧಿಸಲಾಗಿದೆ.
ಪಣೆಮಜಲು ಪರಿಸರದ ಮುಖ್ಯರಸ್ತೆಯಲ್ಲಿ ಹಿಟಾಚಿಯೊಂದು ಬೆಳ್ಳಂಬೆಳಗೆ ತೆರಳುತ್ತಿರುವುದು ವೀಡಿಯೋದಲ್ಲಿ ಚಿತ್ರೀಕರಣಗೊಂಡಿದೆ. ರಸ್ತೆ ಹಾಳಾಗಿ ಹೋಗುತ್ತದೆ ಎನ್ನುವ ಪರಿಜ್ಞಾನವೇ ಇಲ್ಲದೇ, ನಿಯಮಗಳನ್ನು ಗಾಳಿಗೆ ತೂರಿ ಮುಖ್ಯರಸ್ತೆಯಲ್ಲೇ ಕೊಂಡೊಯ್ಯಲಾಗುತ್ತಿತ್ತು. ಯಾರೂ ನೋಡುವುದಿಲ್ಲ, ಯಾರಿಗೂ ತಿಳಿಯುವುದಿಲ್ಲ ಎಂಬ ಕಾರಣಕ್ಕೆ ಬೆಳಗ್ಗಿನ ಹೊತ್ತನ್ನೇ ಆಯ್ಕೆ ಮಾಡಿಕೊಂಡು, ಹಿಟಾಚಿ ಕೊಂಡೊಯ್ಯಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.
ಪ್ರಜ್ಞಾವಂತ ನಾಗರಿಕರು ಕಾನೂನು ಕೈಗೆತ್ತಿಕೊಳ್ಳಲಾರರು ಎನ್ನುವುದು ಎಲ್ಲರಿಗೂ ತಿಳಿದಿರುವ ಸತ್ಯ. ಕಾನೂನು ತಿಳಿದೂ, ಹೀಗೆ ವರ್ತಿಸಿದವರಿಗೆ ಏನೆನ್ನಬೇಕು? ಸಂಬಂಧಪಟ್ಟ ಇಲಾಖೆಗಳು ಇದರ ಬಗ್ಗೆ ಏನು ಕ್ರಮ ಕೈಗೊಳ್ಳಬಹುದು. ಕಾದು ನೋಡಬೇಕಿದೆ?
Posted by Vidyamaana on 2024-06-07 16:03:32 |
ಪುತ್ತೂರು : ವಿವೇಕಾನಂದ ಕಾಲೇಜಿನ ಮಾಸ್ ಕಮ್ಯೂನಿಕೇಷನ್ ಮತ್ತು ಜರ್ನಲಿಸಂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ದಿವ್ಯಶ್ರೀ ವಿ. ರೈ ಮೊದಲ ರ್ಯಾಂಕ್ ಪಡೆದಿದ್ದಾರೆ.
ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ವಿದ್ಯಾರ್ಥಿನಿಯಾಗಿದ್ದ ದಿವ್ಯಶ್ರೀ ಕಳೆದ 2022-23ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.