ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಕೊಡಗು ಹತ್ಯೆ ಕೇಸ್; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ ಬೆಚ್ಚಿ ಬಿದ್ದ ಪೊಲೀಸರು

Posted by Vidyamaana on 2024-05-11 16:27:56 |

Share: | | | | |


ಕೊಡಗು ಹತ್ಯೆ ಕೇಸ್; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ  ಬೆಚ್ಚಿ ಬಿದ್ದ ಪೊಲೀಸರು

ಕೊಡಗು:‌ ಮದುವೆ ರದ್ದಾಗಿದ್ದಕ್ಕೆ ಕೋಪಗೊಂಡ ಪಾಗಲ್‌ ಪ್ರೇಮಿಯೊಬ್ಬ ಬಾಲಕಿಯನ್ನು ಕೊಲೆ (Murder Case) ಮಾಡಿ ರುಂಡದೊಂದಿಗೆ ಪರಾರಿ ಆಗಿದ್ದ. ಕಾಡಿನಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಶನಿವಾರ ಬಂಧಿಸಿದ್ದರು. ಆದರೆ ಆರೋಪಿ ಸಿಕ್ಕರೂ ಬಾಲಕಿಯ ರುಂಡ ಪತ್ತೆಯಾಗಿರಲಿಲ್ಲ.ಇದೀಗ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದೆ. ಬಾಲಕಿಯ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲೆ ಇರಿಸಿದ್ದ. ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಿಳಾ ಪೊಲೀಸ್ ಪೇದೆ ಮಂಜುಶ್ರೀ ಆತ್ಮಹತ್ಯೆ , ಕಾರಣ ನಿಗೂಢ

Posted by Vidyamaana on 2024-02-17 21:19:17 |

Share: | | | | |


ಮಹಿಳಾ ಪೊಲೀಸ್ ಪೇದೆ ಮಂಜುಶ್ರೀ ಆತ್ಮಹತ್ಯೆ , ಕಾರಣ ನಿಗೂಢ

ರಾಮನಗರ, ಫೆ 17: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.


ದ್ಯಾವಸಂದ್ರ ಗ್ರಾಮದ ಮಂಜುಶ್ರೀ ( 29) ಆತ್ಮಹತ್ಯೆ ಮಾಡಿಕೊಂಡ ಕಾನ್ ಸ್ಟೇಬಲ್.


ಮಂಜುಶ್ರೀ ಅವರು ಬೆಂಗಳೂರಿನ ಮೈಕೋ ಲೆಔಟ್ ಪೋಲಿಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ನಿಯೋಜನೆಯಡಿ ಶಿವಾಜಿನಗರ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.

ಶುಕ್ರವಾರ ತಡರಾತ್ರಿ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ


ಹಾರೋಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಕೊರಿಯರ್ ಪಾರ್ಸೆಲ್​ನಲ್ಲಿ ಡ್ರಗ್ಸ್ ಹೆಸರಲ್ಲಿ ಮೋಸ

Posted by Vidyamaana on 2023-12-02 11:17:58 |

Share: | | | | |


ಕೊರಿಯರ್ ಪಾರ್ಸೆಲ್​ನಲ್ಲಿ ಡ್ರಗ್ಸ್ ಹೆಸರಲ್ಲಿ ಮೋಸ

ಬೆಂಗಳೂರು: ವ್ಯಕ್ತಿಯೊಬ್ಬರಿಗೆ ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿಗಳು, ನಿಮ್ಮ ಕೊರಿಯರ್ ಪಾರ್ಸೆಲ್​ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ, ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ್ದ 8 ಮಂದಿ ಸೈಬರ್ ವಂಚಕರನ್ನು ಉತ್ತರ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 


ದಾವಣಗೆರೆ ಮೂಲದ ವಾಸಿಂ, ಹಬ್ಬಿಬುಲಾ, ನಿಜಾಮುದ್ದೀನ್, ಮುಷರಫ್ ಖಾನ್, ಬೆಂಗಳೂರಿನ ನೂರುಲ್ಲಾ ಖಾನ್, ಮೊಹಮ್ಮದ್ ಉಮರ್, ಸೈಯದ್ ಅಹ್ಮದ್​ ಹಾಗೂ ಸೈಯ್ಯದ್ ಹುಸೇನ್ ಬಂಧಿತರು. ಮಲ್ಲೇಶ್ವರದ ನಟರಾಜ್ ಬಿ.ಎಸ್.ರಾವ್ ಎಂಬವರು ನೀಡಿದ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ, 13 ಲಕ್ಷ ಹಣ ವಶಪಡಿಸಿಕೊಂಡಿದೆ. ಅಲ್ಲದೆ, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 19 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ್ದ 11 ಮೊಬೈಲ್ ಫೋನ್, 148 ಬೇನಾಮಿ ಬ್ಯಾಂಕ್ ಖಾತೆಗಳನ್ನ ಜಪ್ತಿ ಮಾಡಲಾಗಿದೆ. ಜೊತೆಗೆ 4500 ಯುಎಸ್ ಡಾಲರ್ ವಶಕ್ಕೆ ಪಡೆದಿರುವುದಾಗಿ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.ಕಳೆದ ನವೆಂಬರ್ 10ರಂದು ನಟರಾಜ್ ಅವರಿಗೆ ವಾಟ್ಸ್​​ಆ್ಯಪ್ ಕರೆ ಮಾಡಿದ ಆರೋಪಿಗಳು ಮುಂಬೈ ಪೊಲೀಸರು ಎಂದು ತಮ್ಮನ್ನು ಪರಿಚಯಿಸಿ ತಮ್ಮ ಪತ್ನಿ ಹೆಸರಿನಲ್ಲಿ ಮುಂಬೈನಿಂದ ಥಾಯ್ಲೆಂಡ್​​ಗೆ ಕಳುಹಿಸುವ ಫೆಡಕ್ಸ್ ಕೊರಿಯರ್​ ಪಾರ್ಸಲ್​ನಲ್ಲಿ 140 ಗ್ರಾಂ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಅಲ್ಲದೇ ಹಲವು ಬ್ಯಾಂಕ್ ಖಾತೆಗಳನ್ನ ತೆರೆದು ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ತನಿಖೆ ಮುಗಿಯುವ ವರೆಗೂ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣ ಒಪ್ಪಿಸಬೇಕಿದೆ. ತನಿಖೆ ಬಳಿಕ ಹಣ ನಿಮ್ಮ ಖಾತೆಗೆ ಜಮೆ ಮಾಡಲಾಗುವುದು ಎಂದು ನಂಬಿಸಿ ಒಟ್ಟು 1.08 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದರು.


ದಾವಣಗೆರೆ ಹಾಗೂ ಬೆಂಗಳೂರು ಮೂಲದ ಆರೋಪಿಗಳು ಕಳೆದ ಎರಡು ವರ್ಷಗಳಿಂದ ಸೈಬರ್ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ವ್ಯವಸ್ಥಿತವಾಗಿ ಸಂಚು ರೂಪಿಸಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಕೊರಿಯರ್ ಪಾರ್ಸಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ಅಮಾಯಕರನ್ನು ಯಾಮಾರಿಸುತ್ತಿದ್ದರು. ಇವರು ಅಮಾಯಕರಿಗೆ ಹಣ ನೀಡಿ ಅವರ ಹೆಸರಿನಲ್ಲಿ ಬೇನಾಮಿ ಬ್ಯಾಂಕ್​ ಖಾತೆಗಳನ್ನು ತೆರೆಯುತ್ತಿದ್ದರು. ವರ್ಗಾಯಿಸಿಕೊಂಡಿದ್ದ 1.08 ಕೋಟಿ ಪೈಕಿ ದಾವಣಗೆರೆಯ ಆರ್.ಬಿಎಲ್ ಬ್ಯಾಂಕ್ ನಿಂದ ಆರೋಪಿಗಳು 9.34 ಲಕ್ಷ ರೂಪಾಯಿ ಹಣ ವಿತ್ ಡ್ರಾ ಮಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ವಂಚಕರನ್ನ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


72 ಪ್ರಕರಣಗಳು ಪತ್ತೆ 


ವಾಟ್ಸ್​​ಆ್ಯಪ್​ ಆಡಿಯೋ ಕರೆ ಮಾಡಿದ ಆರೋಪಿಗಳು, ಸಾರ್ವಜನಿಕರಿಂದ ವರ್ಗಾಯಿಸಿಕೊಂಡಿದ್ದ 1.08 ಕೋಟಿ ಹಣವನ್ನು ಕೆಲವೇ ಗಂಟೆಗಳಲ್ಲಿ 72 ಬೇನಾಮಿ ಅಕೌಂಟ್​ಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆರು ಗಂಟೆಗಳ ವಾಟ್ಸಾಆ್ಯಪ್ ಕರೆ ಮಾಡಿ ಪ್ರಕರಣದ ದೂರುದಾರರ ನಟರಾಜ್ ನಂಬಿಸಿ ಯಾಮಾರಿಸಿದ್ದರು. ಆರೋಪಿಗಳ ಬಂಧನದಿಂದ ರಾಷ್ಟ್ರೀಯ ಅಪರಾಧ ಸಂಗ್ರಹ ಘಟಕದಲ್ಲಿ (ಎನ್​ಸಿಆರ್​ಬಿ) ದಾಖಲಾಗಿದ್ದ 72 ಸೈಬರ್ ವಂಚನೆ ಪ್ರಕರಣಗಳು ಪತ್ತೆಯಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಬಿಜೆಪಿ ಮುಖಂಡ ಅರೆಸ್ಟ್ - ರಾತ್ರೋರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ

Posted by Vidyamaana on 2024-05-19 17:35:19 |

Share: | | | | |


ಬಿಜೆಪಿ ಮುಖಂಡ ಅರೆಸ್ಟ್ - ರಾತ್ರೋರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು.ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಳ್ತಂಗಡಿಯ ಮೆಲಂತಬೆಟ್ಟು ಎಂಬಲ್ಲಿ ಕಲ್ಲಿನ ಕೋರೆ ನಡೆಯುತ್ತಿದ್ದಲ್ಲಿಗೆ ಶನಿವಾರ ಸಂಜೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಜೂ 8 :ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್-ಕಾಲೇಜು ಫೆಸ್ಟ್.

Posted by Vidyamaana on 2023-06-08 03:58:28 |

Share: | | | | |


ಜೂ 8 :ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್-ಕಾಲೇಜು ಫೆಸ್ಟ್.

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಕಾಲೇಜುಗಳ ಅಂತರ್-ಕಾಲೇಜು ಮ್ಯಾನೇಜ್ಮೆಂಟ್ ಹಾಗೂ ಸಾಂಸ್ಕೃತಿಕ ಫೆಸ್ಟ್ ‘ಕೃತ್ವ ‘ಜೂ.8 ರಂದು ಕಾಲೇಜಿನಲ್ಲಿ ಜರಗಲಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಫೈನಾನ್ಸ್ ಆಫೀಸರ್ ಪ್ರೊ|ವೈ ಸಂಗಪ್ಪರವರು ಫೆಸ್ಟ್ ಅನ್ನು ದೀಪ ನ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಚೇರ್ ಮ್ಯಾನ್ ಜಯಂತ್ ನಡುಬೈಲುರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಮಾಜಿ  ಕಾರ್ಪೋರೇಟರ್ ಹಾಗೂ ಕುಳಾಯಿ ಫೌಂಡೇಶನ್ ನ ಸ್ಥಾಪಕರು, ಅಧ್ಯಕ್ಷರೂ ಆಗಿರುವ ಪ್ರತಿಭಾ ಕುಳಾಯಿ, ಪುತ್ತೂರು ಕೆನರಾ ಬ್ಯಾಂಕಿನ ರೀಜನಲ್ ಮ್ಯಾನೇಜರ್ ವೈ ನರೇಂದ್ರ ರೆಡ್ಡಿರವರು ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜಿನ ಚೇರ್ ಮ್ಯಾನ್ ಜಯಂತ್ ನಡುಬೈಲುರವರು ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರಿನ ವಿಝ್ಡಮ್ ಎಡ್ ನ ಡಾ|ಗುರು ತೇಜ್, ಪುತ್ತೂರು ಸ್ನೇಹ ಸಿಲ್ಕ್ಸ್ ನ ಮಾಲಕ ಸತೀಶ್ ಎಸ್.ರವರು ಭಾಗವಹಿಸಲಿದ್ದಾರೆ ಎಂದು ಅಕ್ಷಯ ಕಾಲೇಜಿನ ಫೆಸ್ಟ್ ಇದರ ಸಂಯೋಜಕ ರಕ್ಷಣಾ ಟಿ.ಆರ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಗನ್ ದೀಪ್ ಎ.ಬಿ, ಕಾರ್ಯದರ್ಶಿ ಲಿಖಿತ್ ಎ.ವಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

35 ಕಾಲೇಜುಗಳು ಭಾಗವಹಿಸುವ ನಿರೀಕ್ಷೆ

ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಟ್ಟ ಪದವಿ ಕಾಲೇಜುಗಳ ಅಂತರ್-ಕಾಲೇಜು ಸ್ಪರ್ಧಾಕೂಟ ಇದಾಗಿದ್ದು ಸುಮಾರು 30 ರಿಂದ 35 ಕಾಲೇಜುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ಈ ಸ್ಪರ್ಧಾಕೂಟದಲ್ಲಿ ಬೆಸ್ಟ್ ಮ್ಯಾನೇಜರ್, ಮಾರ್ಕೆಟಿಂಗ್, ಫೈನಾನ್ಸ್, ಸಮೂಹ ನೃತ್ಯ, ಮೂವೀ ಸ್ಪೂಫ್, ಸ್ಟೋರಿ ಬಿಲ್ಡಿಂಗ್, ಮಲ್ಟಿ ಟಾಸ್ಕಿಂಗ್, ಪಾಟ್ ಡೆಕೋರೇಶನ್, ಫ್ಯಾಶನ್ ಶೋ, ಟ್ಯಾಟ್ಯೂಯಿಂಗ್, ಡ್ರಾಯಿಂಗ್, ಫೇಸ್ ಆಫ್ ಕೃತ್ವ  ಹೀಗೆ  ಒಟ್ಟು 12 ಇವೆಂಟ್ ಗಳನ್ನು ಫೆಸ್ಟ್ ಹೊಂದಿದೆ

ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಕಿತ್ತೋಯ್ದ ಆರೋಪಿಗಳು

Posted by Vidyamaana on 2024-06-24 06:31:55 |

Share: | | | | |


ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಕಿತ್ತೋಯ್ದ ಆರೋಪಿಗಳು

ಮಡಿಕೇರಿ: ಕೋಟೆಬೆಟ್ಟ (Kotebetta) ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ (Tourists) ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ನಡೆದಿದೆ.ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ್ದರು.



Leave a Comment: