ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಕರಾವಳಿ ಭಾಗದಿಂದ ಸೂಪರ್ ಸಿಂಗಂ ಸ್ಪರ್ಧೆ.. ಅಣ್ಣಾಮಲೈಗೆ ಗೆಲುವಿನ ಮಾಲೆ ತೊಡಿಸಲು ಬಿಜೆಪಿ ಹೈಕಮಾಂಡ್ ಮೆಘಾ ಪ್ಲ್ಯಾನ್!

Posted by Vidyamaana on 2024-03-06 21:17:28 |

Share: | | | | |


ಕರಾವಳಿ ಭಾಗದಿಂದ ಸೂಪರ್ ಸಿಂಗಂ ಸ್ಪರ್ಧೆ..  ಅಣ್ಣಾಮಲೈಗೆ ಗೆಲುವಿನ ಮಾಲೆ ತೊಡಿಸಲು ಬಿಜೆಪಿ ಹೈಕಮಾಂಡ್ ಮೆಘಾ ಪ್ಲ್ಯಾನ್!

ನವದೆಹಲಿ :2024ರ ಲೋಕಸಭೆ ಚುನಾವಣೆ ಅಖಾಡ ರಂಗೇರಿದೆ. ಅದರಲ್ಲೂ, ಈ ಬಾರಿ ಲೋಕಸಭೆಗೆ ಬಿಜೆಪಿ & ಕಾಂಗ್ರೆಸ್ ನಡುವೆ ಭಾರಿ ಪೈಪೋಟಿ ನಿರೀಕ್ಷೆ ಮಾಡಲಾಗುತ್ತಿದೆ. ಕೆಲ ತಿಂಗಳಿಂದ, ಎರಡೂ ಪಕ್ಷಗಳ ನಾಯಕರ ನಡುವೆ ಮಾತಿನ ಮಹಾಯುದ್ಧ ಕೂಡ ನಡೆಯುತ್ತಿದೆ. ಹೀಗೆ ಫೈಟಿಂಗ್ ಜೋರಾದ ಸಮಯಕ್ಕೇ, ಬಿಜೆಪಿ ವರಿಷ್ಠರ ಪಡೆ ರಣತಂತ್ರಗಳ ಮೇಲೆ ರಣತಂತ್ರ ಹೆಣೆಯುತ್ತಿದ್ದಾರೆ. ಈಗ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ವರಿಷ್ಠರು, ಕರ್ನಾಟಕದಿಂದ ಚುನಾವಣೆ ಅಖಾಡಕ್ಕೆ ಇಳಿಸುತ್ತಾರಾ? ಮುಂದೆ ಓದಿ.ಅಣ್ಣಾಮಲೈ ಅಂದ್ರೆ ತಮಿಳುನಾಡಿನ ಮೂಲೆ ಮೂಲೆಯಲ್ಲೂ ಹವಾ ಇದೆ. ಇನ್ನು ಕರ್ನಾಟಕ ರಾಜ್ಯದಲ್ಲೂ ಅಣ್ಣಾಮಲೈ ಅವರು ದೊಡ್ಡ ಹೆಸರು ಸಂಪಾದಿಸಿದ್ದಾರೆ.


ಯಾಕಂದ್ರೆ ಇದೇ ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ರು. ಚಿಕ್ಕಮಗಳೂರು ಭಾಗದಲ್ಲಿ ಇವರ ಹೆಸರಿನ ಬದಲು ಸಿಂಗಂ ಅಣ್ಣಾಮಲೈ ಅಂತಾನೆ ಜನರು ಕರೆಯುತ್ತಿದ್ದರು. ಈಗ ಇದೆ ಅಣ್ಣಾಮಲೈ ಅವರು ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದಾರೆ. ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎಂಬ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗಿದೆ.


ಕರ್ನಾಟಕಕ್ಕೆ ಅಣ್ಣಾಮಲೈ ಎಂಟ್ರಿ?ಅಣ್ಣಾಮಲೈ ಅವರ ಹೆಸರು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ದೊಡ್ಡ ಮಟ್ಟಿಗೆ ಸದ್ದು ಮಾಡುತ್ತಿದೆ. ಹೀಗಾಗಿಯೇ ಈ ಬಾರಿ ಕೆ. ಅಣ್ಣಾಮಲೈ ಅವರನ್ನು ಕರ್ನಾಟಕದ ಕರಾವಳಿ ಭಾಗದ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ಸಾಗಿವೆ ಎಂಬ ಮಾತು ಹರಿದಾಡಿದೆ. ಇನ್ನೊಂದು ಕಡೆ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಇದೀಗ ದಕ್ಷಿಣ ಕನ್ನಡದಲ್ಲಿ ಅಸಮಾಧಾನ ಇದೆ ಎಂಬ ಆರೋಪ ಕೇಳಿಬರುತ್ತಿದೆ.


ಹೀಗಾಗಿಯೇ ಕಟೀಲ್ ಬದಲು ಈಗ ಅಣ್ಣಾಮಲೈ ಅವರನ್ನ ದಕ್ಷಿಣ ಕನ್ನಡದಿಂದ ಲೋಕಸಭೆಗೆ ಇಳಿಸಲು ಚರ್ಚೆ ನಡೆದಿಯಂತೆ. ಹಾಗಾದರೆ ಇದರ ಹಿಂದಿನ ತಂತ್ರ ಏನು?ಬಿ.ಎಲ್. ಸಂತೋಷ್ ಅವರ ಆಪ್ತರುಕೆ. ಅಣ್ಣಾಮಲೈ ಅವರನ್ನು ಕಂಡರೆ ಪ್ರಧಾನಿ ಮೋದಿ ಅವರಿಂದ ಹಿಡಿದು, ಆರ್‌ಎಸ್‌ಎಸ್ ಮುಖಂಡರ ತನಕ ಪ್ರತಿಯೊಬ್ಬರಿಗೂ ಭಾರಿ ಗೌರವ.


ಬಿಜೆಪಿಗೆ ಬಂದು ಕೆಲವೇ ವರ್ಷದಲ್ಲಿ ಅಣ್ಣಾಮಲೈ ಅವರು ದೊಡ್ಡ ಹೆಸರು ಸಂಪಾದಿಸಿದ್ದಾರೆ. ಅದ್ರಲ್ಲೂ ಕೆಲವು ದಿನಗಳ ಹಿಂದೆ ಅಷ್ಟೇ ಪ್ರಧಾನಿ ಮೋದಿ ಅವರು ಅಣ್ಣಾಮಲೈ ಅವರನ್ನು ಹೊಗಳಿದ್ದರು. ಇದರ ಜೊತೆಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಗಿರುವ ಬಿ.ಎಲ್. ಸಂತೋಷ್‌ರ, ಹೊಸ ರಣತಂತ್ರದ ಪ್ರಕಾರ ಅಣ್ಣಾಮಲೈಗೆ ದಕ್ಷಿಣ ಕನ್ನಡ ಲೋಕಸಭೆ ಟಿಕೆಟ್ ಸಿಗುತ್ತದೆ ಎನ್ನಲಾಗುತ್ತಿದೆ.


ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಒಟ್ನಲ್ಲಿ ಕಣ್ಣು ಮುಚ್ಚಿ ಕಣ್ಣು ಬಿಡುವುದರ ಒಳಗೆ 2024ರ ಲೋಕಸಭೆ ಚುನಾವಣೆಯು ಬಂದೇ ಬಿಡುತ್ತೆ. ಯಾಕಂದ್ರೆ 2024ರ ಲೋಕಸಭೆ ಚುನಾವಣೆಗೆ ಕಡಿಮೆ ಸಮಯ ಇದ್ದು. ಹೀಗಾಗಿಯೇ ದೇಶದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತೀವ್ರ ಪೈಪೋಟಿ ಶುರುಮಾಡಿವೆ. ಬಿಜೆಪಿಗೆ ಈ ಗೆಲುವು ದೊಡ್ಡ ಬಲ ತಂದುಕೊಡುವ ನಿರೀಕ್ಷೆ ಇದ್ದು, ಹೀಗಾಗಿ ಕಮಲ ಪಡೆ ಅಭ್ಯರ್ಥಿ ಆಯ್ಕೆಯಲ್ಲಿ ಭಾರಿ ಮುನ್ನೆಚ್ಚರಿಕೆ ವಹಿಸಿದೆ.

ಜಿ20 ಶೃಂಗಸಭೆಗೆ ಪಾಲ್ಗೊಳ್ಳುವ -ಗೈರಾಗುವ ನಾಯಕರ ಪಟ್ಟಿ ಇಲ್ಲಿದೆ

Posted by Vidyamaana on 2023-09-08 15:54:34 |

Share: | | | | |


ಜಿ20 ಶೃಂಗಸಭೆಗೆ ಪಾಲ್ಗೊಳ್ಳುವ -ಗೈರಾಗುವ ನಾಯಕರ ಪಟ್ಟಿ ಇಲ್ಲಿದೆ

ನವದೆಹಲಿ: ಬಹುನಿರೀಕ್ಷೆಯ ಜಿ20 ಶೃಂಗಸಭೆಯು ಇದೇ ವಾರಾಂತ್ಯದಲ್ಲಿ ಸೆ.9 ಮತ್ತು 10ಎಂದು ರಾಷ್ಟ್ರ ರಾಜಧಾನಿಯ ದೆಹಲಿಯಲ್ಲಿ ನಡೆಯಲಿದೆ. ಈ ಸಂಬಂಧ ಅಗತ್ಯ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.ಶೃಂಗಸಭೆ ಸಲುವಾಗಿ ವಿಶ್ವದ ಕೆಲವು ಶಕ್ತಿಶಾಲಿ ಹಾಗೂ ಪ್ರಭಾವಿ ನಾಯಕರುಗಳು ಭಾರತಕ್ಕೆ ಆಗಮಿಸಲಿದ್ದಾರೆ.ಅಮೆರಿಕಾ (US) ಅಧ್ಯಕ್ಷ ಜೋ ಬೈಡೆನ್, ಇಂಗ್ಲೆಂಡ್ (UK) ಪ್ರಧಾನಿ ರಿಷಿ ಸುನಕ್ ಸೇರಿದಂತೆ ಇನ್ನಿತರ ರಾಷ್ಟ್ರಗಳ ಮುಖ್ಯಸ್ಥರು ವರ್ಷದ ಪ್ರಮುಖ ಜಾಗತಿಕ ಕೂಟಗಳಲ್ಲಿ ಒಂದಾಗಲಿದ್ದಾರೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಆರ್ಥಿಕ ಕುಸಿತ, ಇಂದನ ಬೆಲೆ ಸೇರಿದಂತೆ ಜಾಗತಿಕ ವಿಚಾರಗಳ ಕುರಿತು ಎರಡು ದಿನ ಚರ್ಚೆ ನಡೆಸಲಿದ್ದಾರೆ.


ಹಾಗಾದರೆ ಭಾರತದಲ್ಲಿಯ ನಡೆಯುತ್ತಿರುವ ಇಂಥಹ ಮಹತ್ವ ಸಮ್ಮೇಳನಕ್ಕೆ ಯಾವ ಗಣ್ಯರು ಹಾಜರಾಗುತ್ತಾ, ಯಾರು ಗೈರಾಗುತ್ತಿದ್ದಾರೆ ಎಂಬ ಮಾಹಿತಿ ಇಲ್ಲಿ ತಿಳಿಯಬಹುದಾಗಿದೆ.

G20 ಶೃಂಗಸಭೆಯಲ್ಲಿ ಭಾಗವಹಿಸುವವರ ವಿವರ

ಅಮೆರಿಕಾ (US) ಜೋ ಬೈಡೆನ್ ಅವರು ಇಂದು ಸೆ. 8ರಂದು ನವದೆಹಲಿಗೆ ಆಗಮಿಸಲಿದ್ದಾರೆ. ಅವರು ಸಮ್ಮೇಳನದಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ. ಅವರು ಸಭೆಯಲ್ಲಿ ಉಕ್ರೇನ್‌ನಲ್ಲಿನ ಯುದ್ಧದ ಸಾಮಾಜಿಕ ಪರಿಣಾಮ, ಶುದ್ಧ ಶಕ್ತಿಯ ಪರಿವರ್ತನೆ, ಹವಾಮಾನ ಬದಲಾವಣೆಗಳ ವಿರುದ್ಧದ ಹೋರಾಟ ಹಾಗೂ ಬಡತನದ ನೀಗಿಸಲು ಬಹುಪಕ್ಷೀಯ ಬ್ಯಾಂಕುಗಳ ಸಾಮರ್ಥ್ಯ ಹೆಚ್ಚಳ ವಿಚಾರಗಳ ಕುರಿತು ಅವರು ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.* ಇಂಗ್ಲೆಂಡ್ (UK) ಅಧ್ಯಕ್ಷ ರಿಷಿ ಸುನಕ್ ಅವರು ಪ್ರಧಾನ ಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸ್ವದೇಶ ಭಾರತಕ್ಕೆ ಆಗಮಿಸುತ್ತಿದ್ದಾರೆ. ಅವರು ನವದೆಹಲಿಯಲ್ಲಿ ನಾಳೆಯಿಂದ ಎರಡು ದಿನ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.


* ಜಪಾನ್ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ಅವರ ಆಗಮನ ಸಹ ಖಚಿತವಾಗಿದೆ. G7 ನ ಪ್ರಸ್ತುತ ಅಧ್ಯಕ್ಷರಾಗಿ ಉಕ್ರೇನ್ ಯುದ್ಧಕ್ಕಾಗಿ ರಷ್ಯಾ ವಿರುದ್ಧ ಅವರು ಟೀಕಿಸುವ ಸಾಧ್ಯತೆಗಳು ಇವೆ.


* ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಸ್ತುತ ಇಂಡೋನೇಷ್ಯಾದಲ್ಲಿದ್ದಾರೆ. ಆದರೆ G20 ಶೃಂಗಸಭೆಗಾಗಿ ನಾಳೆ ಸೆಪ್ಟೆಂಬರ್ 9ಕ್ಕೆ ಅವರು ಆಗಮಿಸಲಿದ್ದಾರೆ ಎಂದು ಅವರು ಕಚೇರಿ ಮಾಹಿತಿ ನೀಡಿದೆ.


* ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದು ಪಕ್ಕಾ ಆಗಿದೆ. ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಗಳು ಇವೆ.


* ಭಾರತ, ಇಂಡೋನೇಷ್ಯಾ ಹಾಗೂ ಫಿಲಿಪೈನ್ಸ್ ‌ಒಳಗೊಂಡ ಮೂರು ದೇಶಗಳ ಪ್ರವಾಸದ ಭಾಗವಾಗಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸದರಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.* ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಸಹ ನಾಳೆ ರಾಷ್ಟ್ರ ರಾಜಧಾನಿಗೆ ಬಂದಿಳಿಯಲಿದ್ದಾರೆ. ರಷ್ಯಾ ಹಾಗೂ ಚೀನಾದ ಅನುಪಸ್ಥಿತಿಯ ಹೊರತಾಗಿಯೂ ಶೃಂಗಸಭೆ ಮಹತ್ವ ಪಡೆದುಕೊಂಡಿದೆ.


* ಅಧ್ಯಕ್ಷ ಯೂನ್ ಸುಕ್ ಯೋಲ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಜೊತೆಗೆ ಉತ್ತರ ಕೊರಿಯಾದ ಪರಮಾಣು ಬೆದರಿಕೆ, ಕ್ಷಿಪಣಿ ಪ್ರಚೋದನೆ ಇನ್ನಿತರ ಕುರಿತು ಸದಸ್ಯರ ರಾಷ್ಟ್ರಗಳ ನಾಯಕರನ್ನು ಒತ್ತಾಯಿಸುವ ಸಾಧ್ಯತೆಯಿದೆ.


* ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಹಾಗೂ ಟರ್ಕಿ ದೇಶದ ಅಧ್ಯಕ್ಷರಾದ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಸಹ ಶೃಂಗಸಭೆಗೆ ಹಾಜರಿರಲಿದ್ದಾರೆ.

ಶೃಂಗಸಭೆಗೆ ಗೈರಾಗುವವರ ಮಾಹಿತಿ

* ಶೃಂಗಸಭೆಯಲ್ಲಿ ಗೈರು ಆಗುವವರ ಪೈಕಿ ಗಮನಾರ್ಹ ವ್ಯಕ್ತಿ ಎಂದರೆ ಅದು ಚೀನಾ ಅಧ್ಯಕ್ಷ ಲ್ಲಿ ಕ್ಸಿ ಜಿನ್‌ಪಿಂಗ್. ಚೀನಾ ಅಧ್ಯಕ್ಷರ ಅನುಪಸ್ಥಿತಿಯಲ್ಲಿ, ಸ್ಟೇಟ್ ಕೌನ್ಸಿಲ್‌ನ ಚೀನಾದ ಪ್ರಧಾನ ಮಂತ್ರಿ ಲಿ ಕಿಯಾಂಗ್ ಅವರು ದೇಶದ ನಿಯೋಗವನ್ನು ಮುನ್ನಡೆಸಲಿದ್ದಾರೆ. ಚೀನಾ ಗೈರಾಗುತ್ತಿರುವುದು ಇದೇ ಮೊದಲು ಎನ್ನಲಾಗಿದೆ.* ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಈ ವರ್ಷ G20 ಶೃಂಗಸಭೆ ಬರಬೇಕಿತ್ತು. ಆದರೆ ರಷ್ಯಾ ಉಕ್ರೇನ್ ವಿಚಾರವಾಗಿ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ರಷ್ಯಾದ ಅಧ್ಯಕ್ಷರಿಗೆ ಉಕ್ರೇನ್‌ನಲ್ಲಿ ಯುದ್ಧ ಅಪರಾಧಗಳ ಆರೋಪ ಹೊರಿಸಿ ಬಂಧನ ವಾರಂಟ್ ಹೊರಡಿಸಿದೆ. ಹೀಗಾಗಿ ಅವರು ಗೈರಾಗಲಿದ್ದು, ಅವರ ಪರವಾಗಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹಾಜರಿರಲಿದ್ದಾರೆ.


* ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಝ್ ಅವರಿಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಗುರುವಾರ ನಡೆಸಿದ ಆರೋಗ್ಯ ತಪಾಸಣೆಯಲ್ಲಿ ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವುದು ಗೊತ್ತಾಗಿದೆ. ಈ ಸಂಬಂಧ ಅವರು ಈ ಬಾರಿಗೆ ಜಿ20 ಶೃಂಗಸಭೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.


* ಮೆಕ್ಸಿಕೋ ದೇಶದ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಈ ಸಮ್ಮೇಳನಕ್ಕೆ ಹಾಜರಾಗುವುದಿಲ್ಲ ಎಂದು ಅವರ ಕಚೇರಿ ಮಾಹಿತಿ ನೀಡಿದೆ.


ಶೃಂಗಸಭೆಯಲ್ಲಿ ಪಾಲ್ಗೊಳ್ಳುವ G20 ಅಲ್ಲದ ಸದಸ್ಯರ ಪಟ್ಟಿಜಿ20 ರಾಷ್ಟ್ರಗಳ ಸದಸ್ಯರ ಜೊತೆಗೆ ಬಾಂಗ್ಲಾದೇಶ, ಈಜಿಪ್ಟ್, ಒಮನ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಸಿಂಗಾಪುರ, UAE ಹಾಗೂ ಸ್ಪೇನ್ ದೇಶಗಳ ನಾಯಕರು ಸಹ ಭಾರತದ ಆಹ್ವಾನದ ಮೇರೆಗೆ ನವದೆಹಲಿಗೆ ಆಗಮಿಸಲಿದ್ದಾರೆ.ಇವರೊಂದಿಗೆ ಶೃಂಗಸಭೆಯಲ್ಲಿ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹಾಗೂ ವಿಶ್ವಬ್ಯಾಂಕ್‌ನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಉನ್ನತ ಆಡಳಿತಗಾರರು ಸಹ ಪಾಲ್ಗೊಳ್ಳಲಿದ್ದಾರೆ.ಇವರೊಂದಿಗೆ ಶೃಂಗಸಭೆಯಲ್ಲಿ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹಾಗೂ ವಿಶ್ವಬ್ಯಾಂಕ್‌ನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಉನ್ನತ ಆಡಳಿತಗಾರರು ಸಹ ಪಾಲ್ಗೊಳ್ಳಲಿದ್ದಾರೆ.

ಹಾರಾಡಿ : ಚಾಲಕನ ನಿಯಂತ್ರಣ ಕಳೆದುಕೊಂಡ ರಿಕ್ಷಾ: ಆ್ಯಕ್ಟಿವ್ ಸವಾರನಿಗೆ ಗಾಯ!

Posted by Vidyamaana on 2024-05-31 20:08:32 |

Share: | | | | |


ಹಾರಾಡಿ : ಚಾಲಕನ ನಿಯಂತ್ರಣ ಕಳೆದುಕೊಂಡ ರಿಕ್ಷಾ: ಆ್ಯಕ್ಟಿವ್ ಸವಾರನಿಗೆ ಗಾಯ!


ಪುತ್ತೂರು: ರಿಕ್ಷಾವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಹೋಗುತ್ತಿದ್ದ ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದ ಘಟನೆ ಪಡೀಲ್ ಹಾರಾಡಿ ಶಾಲಾ ಎದುರು ಶುಕ್ರವಾರ ಸಂಜೆ ನಡೆದಿದೆ.

ಆ್ಯಕ್ಟೀವಾ (KA 19 HN 1431) ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ (KA21 A 6438) ನಜ್ಜುಗುಜ್ಜಾಗಿದೆ.

ಮಂಗಳೂರಿಗೆ ಆಗಮಿಸಿದ ಸಿ ಎಂ ಸಿದ್ದರಾಮಯ್ಯ

Posted by Vidyamaana on 2023-08-01 06:14:32 |

Share: | | | | |


ಮಂಗಳೂರಿಗೆ ಆಗಮಿಸಿದ ಸಿ ಎಂ ಸಿದ್ದರಾಮಯ್ಯ

ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.


ಈ ಸಂದರ್ಭದಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.


ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕೂಡಾ ಆಗಮಿಸಿದ್ದಾರೆ.


ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ವಸಂತ ಬಂಗೇರ,ಜಿಲ್ಲಾಧಿಕಾರಿ ಮುಲ್ಫ್ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಯುಕುಮಾರ್, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

ಗುಂಡು ಸೂಜಿ ನುಂಗಿದ ಬಾಲಕ: ಬ್ರಾಂಕೋಸ್ಕೋಪ್ ಮೂಲಕ ಹೊರತೆಗೆದ ರಿಮ್ಸ್ ವೈದ್ಯರು

Posted by Vidyamaana on 2023-12-03 12:26:48 |

Share: | | | | |


ಗುಂಡು ಸೂಜಿ ನುಂಗಿದ ಬಾಲಕ: ಬ್ರಾಂಕೋಸ್ಕೋಪ್ ಮೂಲಕ ಹೊರತೆಗೆದ ರಿಮ್ಸ್ ವೈದ್ಯರು

ರಾಯಚೂರು: ಆಟವಾಡುವ ಭರದಲ್ಲಿ ಬಾಲಕನೊಬ್ಬ ಗುಂಡು ಸೂಜಿ ನುಂಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಸಿರವಾರ ತಾಲೂಕಿನ ಮುಚ್ಚುಳ‌ಗುಡ್ಡ ಕ್ಯಾಂಪ್​ನ 13 ವರ್ಷದ ಬಾಲಕ ಶಿವಕುಮಾರ ದೇವರಾಜ ಶಾಲೆಯಲ್ಲಿ ಆಟವಾಡುವ ವೇಳೆ ನೋಟಿಸ್​ ಬೋರ್ಡ್ ಅಂಟಿಸುವ ಗುಂಡು ಸೂಜಿಯನ್ನು ಬಾಯಿಯಲ್ಲಿ ಇಟ್ಟುಕೊಂಡಾಗ ಆಕಸ್ಮಿಕವಾಗಿ ನುಂಗಿದ್ದಾನೆ. ಪರಿಣಾಮ ಗುಂಡು ಸೂಜಿಯು ಬಲ ಶ್ವಾಸಕೋಶದೊಳಗಡೆ ಸೇರಿತ್ತು. 


ಹೀಗಾಗಿ ಚಿಕಿತ್ಸೆಗಾಗಿ ಬಾಲಕನನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾದ ಬಾಲಕನ ಶ್ವಾಸಕೋಶದ ಎಕ್ಸ್​ ರೇ ಮಾಡಿಸಿದಾಗ ಬಲ ಶ್ವಾಸಕೋಶದಲ್ಲಿ ಸೂಚನಾ ಫಲಕದ ಗುಂಡು ಇರುವುದು ಖಚಿತಪಡಿಸಿಕೊಂಡು, ಆಗ ರಿಮ್ಸ್ ವೈದ್ಯರ ತಂಡ ಬ್ರಾಂಕೋಸ್ಕೋಪ್ ಮೂಲಕ ಗುಂಡು ಸೂಜಿಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. 


ಶಸ್ತ್ರ ಚಿಕಿತ್ಸೆ ತಂಡದಲ್ಲಿ ಇಎನ್‌ಟಿ ತಜ್ಞ ವೈದ್ಯ ಡಾ. ಅರವಿಂದ್ ಸಂಗವಿ, ಅರವಳಿಕೆ ತಜ್ಞ ವೈದ್ಯ ಡಾ.ಕಿರಣ ನಾಯಕ, ಡಾ. ಮಲ್ಲಿಕಾರ್ಜುನ್ .ಕೆ ಪಾಟೀಲ್, ಡಾ.ಸಿಂಧು ಪಿಜಿ, ಡಾ.ಇಂದುಮಣಿ, ನರ್ಸಿಂಗ್ ಅಧಿಕಾರಿ ಅಮರೇಶ್ ಸಕ್ರಿ, ಓಟಿ ತಂತ್ರಜ್ಞರಾದ ಲಿಂಗರಾಜ್, ಸುಮನ್ ಕ್ಲ್ಯಾರಿ, ನಾರಾಯಣ, ಶಂಕರ ಸೇರಿದಂತೆ ಇನ್ನಿತರಿದ್ದರು.


ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಪೀರಾಪುರ್, ರಿಮ್ಸ್ ಮೆಡಿಕಲ್ ಕಾಲೇಜ ಪ್ರಾಂಶುಪಾಲ ಡಾ.ಬಸವರಾಜ್ ಎಂ ಪಾಟೀಲ್, ವೈದ್ಯಕೀಯ ಅಧೀಕ್ಷಕ ಡಾ.ಭಾಸ್ಕರ್ ಕೆಂಪೇಗೌಡ, ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ.ವೆಂಕಟೇಶ್ ಹಾಗೂ ಅರವಳಿಕೆ ಮುಖ್ಯಸ್ಥ ಡಾಕ್ಟರ್ ನಂದನ್ ಪಡಶೆಟ್ಟಿ, ಓಟಿ ಇಂಚಾರ್ಜ್ ಶುಶ್ರುಷಕ ಮೇಲ್ವಿಚಾರಕಿ ಆಶಾ ಹುಂಬಿ ಅತ್ಯುತ್ತಮ ಉಪಕರಣಗಳನ್ನು ಆಸ್ಪತ್ರೆಗೆ ಒದಗಿಸಿ ಶಸ್ತ್ರ ಚಿಕಿತ್ಸೆ ಯಶಸ್ವಿಗೊಳಿಸಿದ್ದಕ್ಕೆ ಇವರಿಗೆಲ್ಲ ಬಾಲಕನ ಕುಟುಂಬಸ್ಥರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಸದ್ಯ ಶಿವಕುಮಾರ ಆರಾಮವಾಗಿ ಶಸ್ತ್ರಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾನೆ.ಸೇಫ್ಟಿ ಪಿನ್ ನುಂಗಿದ್ದ 5 ತಿಂಗಳ ಮಗು: ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿತ್ತು. 5 ತಿಂಗಳ ಮಗು ಅಚಾನಕ್​ ಆಗಿ ಸೇಫ್ಟಿ ಪಿನ್ ನುಂಗಿತ್ತು. ಇದು ಪೋಷಕರಿಗೆ ತಿಳಿದಿರಲಿಲ್ಲ. ಮಗುವಿಗೆ ಉಸಿರಾಟದ ತೊಂದರೆಯಾಗಲು ಆರಂಭವಾದಾಗ ಅವರು ಮಗುವನ್ನು ಕರೆದುಕೊಂಡು ಸಮೀಪ ವೈದ್ಯರ ಬಳಿ ಹೋದಾಗ ಶೀತ ಭಾದೆ ಉಂಟಾಗಿದೆ ಎಂದು ಚಿಕಿತ್ಸೆ ನೀಡಲು ಆರಂಭಿಸಿದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಕೋಲ್ಕತ್ತಾ ವೈದ್ಯಕೀಯ ಕಾಲೇಜಿಗೆ ದಾಖಲಿಸಿದರು. ಅಲ್ಲಿ ವೈದ್ಯರು ಎಕ್ಸ್ - ರೇ ಮಾಡಿದಾಗ ಶ್ವಾಸನಾಳದಲ್ಲಿ ಉದ್ದನೆಯ ಸೇಫ್ಟಿ ಪಿನ್​ ಸಿಲುಕಿರುವುದು ಗೊತ್ತಾಗಿದೆ. ಫಿನ್​ನ ಚುಪಾದ ಒಂದು ತುದಿ ಬಾಯ್ತೆರೆದುಕೊಂಡಿರುವುದನ್ನೂ ಕಂಡುಕೊಂಡರು. ಹೀಗಾಗಿ ಮಗುವಿಗೆ 40 ನಿಮಿಷದ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನೆರವೇರಿಸಿ ಪಿನ್ ಅ​ನ್ನು ಹೊರತೆಗೆದು ಮಗುವಿನ ಪ್ರಾಣ ಉಳಿಸಿದ್ದರು.

ಪ್ರೇಮ ಸಂಬಂಧದಲ್ಲಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ : ಕೋರ್ಟ್ ನಿಂದ ಮಹತ್ವದ ತೀರ್ಪು

Posted by Vidyamaana on 2023-10-14 06:38:07 |

Share: | | | | |


ಪ್ರೇಮ ಸಂಬಂಧದಲ್ಲಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ : ಕೋರ್ಟ್ ನಿಂದ ಮಹತ್ವದ ತೀರ್ಪು

ಟ್ನಾ : ಅತ್ಯಾಚಾರ ಪ್ರಕರಣದ ತೀರ್ಪು ಪ್ರಕಟಿಸಿದ ಪಾಟ್ನಾ ಸಿವಿಲ್ ನ್ಯಾಯಾಲಯದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಂಗಮ್ ಸಿಂಗ್, ಪ್ರೇಮ ಸಂಬಂಧದಲ್ಲಿ ದೈಹಿಕ ಸಂಬಂಧ ಹೊಂದುವುದು ಅತ್ಯಾಚಾರವಲ್ಲ ಎಂದು ಹೇಳಿದ್ದಾರೆ.ಸಂತ್ರಸ್ತೆ ವಯಸ್ಕ ಮಹಿಳೆ ಎಂದು ನ್ಯಾಯಾಲಯ ಹೇಳಿದೆ.ಆರೋಪಿಯು ಅವಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದನು ಮತ್ತು ಅವರ ನಡುವೆ ದೈಹಿಕ ಸಂಬಂಧವೂ ಇತ್ತು.


ಈ ಕ್ರಿಮಿನಲ್ ಪ್ರಕರಣವನ್ನು 2015 ರಲ್ಲಿ ಪಾಟ್ನಾ ಜಿಲ್ಲೆಯ ಅಥಮಲ್ಗೊಲಾ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಅತ್ಯಾಚಾರದ ಆರೋಪವನ್ನು ನಿಜವೆಂದು ಪರಿಗಣಿಸಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದನ್ನು ಗಮನಿಸಿದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ದಾಖಲೆಗಳನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ವಿಚಾರಣೆಗಾಗಿ ಕಳುಹಿಸಿದ್ದಾರೆ. ಯಾವುದೇ ಪುರಾವೆಗಳು ಸಿಗದ ಕಾರಣ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿತು.ಮತ್ತೊಂದೆಡೆ, ಈ ಕ್ರಿಮಿನಲ್ ಪ್ರಕರಣದ ದಾಖಲೆಯಲ್ಲಿ, ಇಬ್ಬರ ನಡುವೆ ಹಣದ ವ್ಯವಹಾರದ ಪ್ರಕರಣವಿದೆ ಎಂದು ತೋರುತ್ತದೆ. ಈ ಪ್ರಕರಣವನ್ನು ಅತ್ಯಾಚಾರ ಪ್ರಕರಣವನ್ನಾಗಿ ಮಾಡಲಾಗಿದೆ. ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆದಿರುವುದಕ್ಕೆ ಯಾವುದೇ ಪುರಾವೆಗಳು ಲಭ್ಯವಿಲ್ಲ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯವು ಆರೋಪಿ ವಿಪಿನ್ ಕುಮಾರ್ ಅಲಿಯಾಸ್ ವಿಪಿನ್ ಲಾಲ್ ಅವರನ್ನು ಖುಲಾಸೆಗೊಳಿಸಿತು.



Leave a Comment: