ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಮೋದಿ 3.0 : ದೇವರ ಹೆಸರಲ್ಲಿ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ

Posted by Vidyamaana on 2024-06-09 21:35:34 |

Share: | | | | |


ಮೋದಿ 3.0 : ದೇವರ ಹೆಸರಲ್ಲಿ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ

ನವದೆಹಲಿ : ಈ ಬಾರಿ ಚಿಕ್ಕಮಂಗಳೂರು ಉಡುಪಿ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಶೋಭಾ ಕರಂದ್ಲಾಜೆ ಅವರು 2004ರಲ್ಲಿ ಬಿಜೆಪಿ ಎಂಎಲ್ಸಿಯಾಗಿ ಆಯ್ಕೆಯಾಗಿದ್ದಾರೆ. 2014ರಲ್ಲಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 2019 ರಲ್ಲಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಶಾಸಕಿ,ಎಂಎಲ್ಸಿ ಹಾಗೂ ಸಂಸದರಾಗಿ ಆಯ್ಕೆಯಾಗಿದ್ದಾರೆ. 2018 ರಲ್ಲಿ ಬೆಂಗಳೂರಿನ ಯಶವಂತಪುರದ ಶಾಸಕಿಯಾಗಿದ್ದಾರೆ.

ಉಳ್ಳಾಲ: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ನಾಲ್ವರು ಪೊಲೀಸ್ ವಶ

Posted by Vidyamaana on 2024-05-16 07:23:16 |

Share: | | | | |


ಉಳ್ಳಾಲ: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ನಾಲ್ವರು ಪೊಲೀಸ್ ವಶ

ಉಳ್ಳಾಲ: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದೇರಳಕಟ್ಟೆ ಪರಿಸರದಲ್ಲಿ ಕಾರನ್ನು ಪತ್ತೆ ಹಚ್ಚಿದ್ದು, ಕಾರಿನಲ್ಲಿದ್ದ ಬಿಜೈ ನ್ಯೂರೋಡ್‌ನ‌ ಮೊಹಮ್ಮದ್‌ ಅಮೀನ್‌ ರಾಫಿ (23), ಅಡ್ಡೂರಿನ ಮೊಹಮ್ಮದ್‌ ಸಿನಾನ್‌ ಅಬ್ದುಲ್ಲಾ (23), ಬಂದರಿನ ಮೊಹಮ್ಮದ್‌ ನೌಮಾನ್‌ (22) ಮತ್ತು ಬೋಳಿಯಾರ್‌ನ ಮೊಹಮ್ಮದ್‌ ಸಫೀಲ್‌ (23)ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅವರಿಂದ 6,50,000 ರೂ ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್‌, ಕಾರು, ಡಿಜಿಟಲ್‌ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಅಂದಾಜು 14,85,500 ರೂ. ಎಂದು ಅಂದಾಜಿಸಲಾಗಿದೆ.

ಕೆಎಸ್ಸಾರ್ಟಿಸಿಗೆ 40 ಪಲ್ಲಕ್ಕಿ ಉತ್ಸವ ದಕ್ಷಿಣ ಕನ್ನಡ ಜಿಲ್ಲೆಗೆ 12 ಐಷಾರಾಮಿ ಬಸ್

Posted by Vidyamaana on 2023-10-13 17:15:58 |

Share: | | | | |


ಕೆಎಸ್ಸಾರ್ಟಿಸಿಗೆ 40 ಪಲ್ಲಕ್ಕಿ ಉತ್ಸವ ದಕ್ಷಿಣ ಕನ್ನಡ ಜಿಲ್ಲೆಗೆ 12 ಐಷಾರಾಮಿ ಬಸ್

Y, ಅ.13: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಸಾರ್ಟಿಸಿ) ಐಶಾರಾಮಿ ಬಸ್‌ಗಳ ಸಾಲಿಗೆ ಪಲ್ಲಕ್ಕಿ ಉತ್ಸವ ಹೆಸರಿನ ಸ್ಲೀಪರ್‌ ಬಸ್‌ಗಳು ಸೇರ್ಪಡೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಬಸ್‌ಗಳು ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ. 


ಐರಾವತ, ಅಂಬಾರಿ ರೀತಿಯಲ್ಲೇ ಅತ್ಯಾಧುನಿಕ ವ್ಯವಸ್ಥೆಗಳನ್ನು ಹೊಂದಿರುವ ಪಲ್ಲಕ್ಕಿ ಉತ್ಸವ ಬಸ್‌ಗಳಿಗೆ ಅಕ್ಟೋಬರ್‌ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದರು. ಕೆಎಸ್‌ಆರ್‌ಟಿಸಿ 40 ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದ್ದು, ಇದರಲ್ಲಿ ಮಂಗಳೂರು ವಿಭಾಗಕ್ಕೆ 8 ಮತ್ತು ಪುತ್ತೂರು ವಿಭಾಗಕ್ಕೆ 4 ಬಸ್‌ಗಳು ಬರಲಿದ್ದು ಹೆಚ್ಚಿನವು ಬೆಂಗಳೂರಿಗೆ ಪ್ರಯಾಣಿಸಲಿವೆ. 


ಪುತ್ತೂರು ಮತ್ತು ಧರ್ಮಸ್ಥಳ ಡಿಪೋಗಳಿಗೆ ತಲಾ 2ರಂತೆ ಬಸ್‌ ಗಳನ್ನು ನೀಡಲಾಗಿದ್ದು ಪುತ್ತೂರು, ಧರ್ಮಸ್ಥಳ ಮತ್ತು ಬೆಳ್ತಂಗಡಿಯಿಂದ ಬೆಂಗಳೂರಿಗೆ ರಾತ್ರಿ ಸಂಚಾರ ನಡೆಸಲಿವೆ ಎಂದು ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ. ಇದಲ್ಲದೆ, 9 ಹೊಸ ಸಾಮಾನ್ಯ ಸಾರಿಗೆಯ ಕೆಂಪು ಬಸ್‌ಗಳು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗಕ್ಕೆ ಬರಲಿದ್ದು, ಇದರಲ್ಲಿ ಪುತ್ತೂರು, ಬಿ.ಸಿ.ರೋಡ್‌, ಧರ್ಮಸ್ಥಳ ಮತ್ತು ಮಡಿಕೇರಿ ಡಿಪೋಗಳಿಗೆ ತಲಾ 2 ಮತ್ತು ಸುಳ್ಯಕ್ಕೆ 1 ಬಸ್‌ ನೀಡಲು ನಿರ್ಧರಿಸಲಾಗಿದೆ. ಮಹಿಳೆಯರಿಗೆ ಉಚಿತ ಯೋಜನೆ ಬಂದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುವರಿ ಸರ್ಕಾರಿ ಬಸ್ ಗಳನ್ನು ಇಳಿಸಲು ಒತ್ತಾಯ ಕೇಳಿಬಂದಿತ್ತು. 


ಪಲ್ಲಕ್ಕಿ ನಾನ್‌ ಎ.ಸಿ. ಸ್ಲೀಪರ್‌ ಬಸ್ ಆಗಿದ್ದು, 30 ಸ್ಲೀಪರ್‌ ಬರ್ತ್ ಹೊಂದಿದೆ. ಪ್ರತೀ ಸ್ಲೀಪರ್‌ನಲ್ಲಿ ಮೊಬೈಲ್‌ ಹೋಲ್ಡರ್‌, ಮೊಬೈಲ್‌ ಚಾರ್ಜರ್‌, ಪಾದರಕ್ಷೆ ಇಡುವ ವ್ಯವಸ್ಥೆ ಹೊಂದಿದೆ. ಎಮೆರ್ಜೆನಿ ಅಲರ್ಟ್‌ ವ್ಯವಸ್ಥೆ ಇದೆ. ಆಡಿಯೋ ಮೂಲಕ ಪ್ರಯಾಣಿಕರಿಗೆ ಮಾಹಿತಿ ನೀಡುವ ಮತ್ತು ಪ್ರಯಾಣಿಕರಿಂದ ಮಾಹಿತಿ ಪಡೆಯುವ ಸೌಕರ್ಯವಿದೆ. ಸೀಟ್‌ ನಂಬರ್‌ ಮೇಲೆ ಎಲ್‌ಇಡಿ ಬೆಳಕು, ಡಿಜಿಟಲ್‌ ಗಡಿಯಾರ, ಎಲ್‌ಇಡಿ ಫ್ಲೋರ್‌ ಮುಂತಾದ ಸವಲತ್ತುಗಳಿವೆ. ಚಾಲಕನಿಗೆ ನೆರವಾಗುವ ಅತ್ಯಾಧುನಿಕ ಬ್ಯಾಕ್‌ ಕ್ಯಾಮೆರಾವೂ ಇದೆ. 


ಕೆಎಸ್‌ಆರ್‌ಟಿಸಿ ರಾಜ್ಯದಲ್ಲಿ 40 ಪಲ್ಲಕ್ಕಿ ಉತ್ಸವ ಬಸ್‌ಗಳನ್ನು ಖರೀದಿ ಮಾಡಿದೆ. ಈ ಪೈಕಿ ಒಟ್ಟು 12ಕ್ಕೂ ಅಧಿಕ ಮಾರ್ಗಗಳಲ್ಲಿ ಈ ಬಸ್‌ಗಳು ಸಂಚಾರ ನಡೆಸಲಿವೆ. ಪ್ರಮುಖವಾಗಿ ಬೆಂಗಳೂರಿನಿಂದ ಮಂಗಳೂರು, ಉತ್ತರ ಕನ್ನಡ, ಹೊಸಪೇಟೆ, ಬೆಳಗಾವಿ, ಮಂತ್ರಾಲಯ, ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸಲಿವೆ. ಮಂಗಳೂರಿನಿಂದ ಮಂತ್ರಾಲಯ, ಬೆಂಗಳೂರಿಗೆ, ದಾವಣಗೆರೆಯಿಂದ ಮಂಗಳೂರು, ಕಲಬುರಗಿಗೆ ಈ ಪಲ್ಲಕ್ಕಿ ಉತ್ಸವ ಬಸ್‌ಳ ಸೌಲಭ್ಯ ನೀಡಲಾಗಿದೆ

ಮಾರ್ಚ್ 4: ಮೂಡೂರು – ಪಡೂರು ಬಂಟ್ವಾಳ ಕಂಬಳ

Posted by Vidyamaana on 2023-03-03 15:43:23 |

Share: | | | | |


ಮಾರ್ಚ್ 4: ಮೂಡೂರು – ಪಡೂರು ಬಂಟ್ವಾಳ ಕಂಬಳ

ರಮಾನಾಥ ರೈ ಸಾರಥ್ಯದಲ್ಲಿ 12ನೇ ವರ್ಷದ ಬಯಲು ಕಂಬಳ

 ಬಂಟ್ವಾಳ: ಇಲ್ಲಿನ ಮೂಡೂರು – ಪಡೂರು ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ 12ನೇ ವರ್ಷದ ಹೊನಲು ಬೆಳಕಿನ ಮೂಡೂರು – ಪಡೂರು ಜೋಡುಕರೆ ಬಯಲು ಕಂಬಳ ಮಾರ್ಚ್ 4ರಂದು ಬೆಳಿಗ್ಗೆ 8.45ಕ್ಕೆ ನಾವೂರು ಗ್ರಾಮದ ಕೋಡಿಬೈಲಿನಲ್ಲಿ ಉದ್ಘಾಟನೆಗೊಳ್ಳಲಿದೆ.

ಸೋಲೂರು ಕರ್ನಾಟಕ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ಧರ್ಮಗುರು ವಂ. ಫೆಡ್ರಿಕ್ ಮೊಂತೆರೊ, ಕಾವಳಕಟ್ಟೆ ಹಝ್ರತ್ ಡಾ. ಮುಹಮ್ಮದ್ ಫಾಝಿಲ್ ರಿಝ್ಜಿ ಕಂಬಳವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸುವರು.

ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ಯು.ಟಿ. ಖಾದರ್, ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಮೊದಲಾದವರು ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು! ಜೈಲಿನಿಂದ ಬಿಡುಗಡೆ

Posted by Vidyamaana on 2023-09-17 14:49:48 |

Share: | | | | |


ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು! ಜೈಲಿನಿಂದ ಬಿಡುಗಡೆ

ಬೆಂಗಳೂರು (ಸೆ.17): ರಾಜ್ಯದಲ್ಲಿ ಹಿಂದೂಪರ ಹೋರಾಟಗಾರ ಹಾಗೂ ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ಹಲ್ಲೆ ಹಾಗೂ ವಿವಿಧ ಪ್ರಕರಣಗಳಡಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್‌ ದಾಖಲಿಸಿ ಜೈಲಿಗಟ್ಟಿದ್ದರು. ಆದರೆ, ಗಣೇಶ ಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ರಾಷ್ಟ್ರ ರಕ್ಷಣಾ ಪಡೆಯ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಗೆ ಗುಡ್‌ ನ್ಯೂಸ್‌ ನೀಡಿರುವ ಸರ್ಕಾರ, ಅವರ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಗೊಳಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ


ಪೊಲೀಸ್‌ ಆಯುಕ್ತರು, ಬೆಂಗಳೂರು ನಗರ ಇವರು ಕರ್ನಾಟಕ ಕಳ್ಳ ಭಟ್ಟಿ ವ್ಯಾಪಾರಿಗಳ, ಮಾದಕ ವಸ್ತು ಅಪರಾಧಿಗಳ, ಜೂಜುಕೋರರ, ಗೂಂಡಾಗಳ, ಅನೈತಿಕ ವ್ಯವಹಾರ ಅಪರಾಧಿಗಳ, ಕೊಳಚೆ ಪ್ರದೇಶಗಳನ್ನು ಕಬಳಿಸುವವರ, ವಿಡಿಯೋ ಅಥವಾ ಆಡಿಯೋ ಪೈರೇಟ್ ಚಟುವಟಿಕೆಗಳ ತಡೆ ಅಧಿನಿಯಮ, 1985ರಡಿಯಲ್ಲಿ ಪುನೀತ್ ಕುಮಾರ್ ಅಲಿಯಾಸ್‌ ಪುನೀತ್ ಕೆರೆಹಳ್ಳಿ (32 ವರ್ಷ) ವಿರುದ್ಧ ಆ.11ರಂದು ಹೊರಡಿಸಿರುವ ಬಂಧನ ಆದೇಶವನ್ನು ಆ.17ರಂದು ಅನುಮೋದಿಸಲಾಗಿತ್ತು. ಆದರೆ, ಸಲಹಾ ಮಂಡಳಿಯು ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಸೆ.13ರ ವರದಿಯಲ್ಲಿ ಅಭಿಪ್ರಾಯಪಟ್ಟಿರುತ್ತದೆ.ಆದ್ದರಿಂದ ಕರ್ನಾಟಕ ಸರ್ಕಾರವು ಸದರಿ ಅಧಿನಿಯಮದ 12ನೇ ಪುಕರಣದ 2ನೇ ಉಪ ಪುಕರಣದಡಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಇವರು, ಪುನೀತ್ ಕುಮಾರ್ ಅಲಿಯಾಸ್‌ ಪುನೀತ್ ಕೆರೆಹಳ್ಳಿ ವಿರುದ್ಧ ಹೊರಡಿಸಿರುವ ಬಂಧನ ಆದೇಶವನ್ನು ಹಿಂಪಡೆದು, ಈ ಪುಕರಣಕ್ಕೆ ಅನ್ವಯವಾಗುವಂತೆ ಮಾತ್ರ ತಕ್ಷಣದಿಂದ ಜಾರಿಗೆ ಬರುವಂತೆ ಬಂಧಮುಕ್ತಗೊಳಿಸಿ ಆದೇಶಿಸಿದೆ.


ಗೂಂಡಾ ಕಾಯ್ದೆ ಜಾರಿ ಬಗ್ಗೆ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿದ್ದ ಹೈಕೋರ್ಟ್‌: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಸಂಬಂಧ ರಾಜ್ಯ ಸರ್ಕಾರ, ನಗರ ಪೊಲೀಸ್‌ ಆಯುಕ್ತರು ಮತ್ತು ಸಿಸಿಬಿ ಪೊಲೀಸರಿಗೆ ಹೈಕೋರ್ಟ್‌ನಿಂದ ಆ.24ರಂದು ನೋಟಿಸ್‌ ಜಾರಿ ಮಾಡಿತ್ತು. ಗೂಂಡಾ ಕಾಯ್ದೆಯಡಿ ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದುಆರೋಪಿಸಿ ಪುನೀತ್‌ ಕೆರೆಹಳ್ಳಿ (Puneeth kerehalli) ಸಲ್ಲಿಸಿರುವ ಹೇಬಿಯಸ್‌ ಕಾರ್ಪಸ್‌ ಅರ್ಜಿ (Habeas Corpus Petition) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತ್ತು.

ಸಮಾಜ ಸೇವಕ ಪುನೀತ್‌ ಕೆರೆಹಳ್ಳಿ ಎಂದು ವಾದ ಮಂಡನೆ:

ಇನ್ನು ಈ ಅರ್ಜಿಯ ಕುರಿತು ವಿಚಾರಣೆ ವೇಳೆ ಪುನೀತ್‌ ಪರ ಹಿರಿಯ ವಕೀಲ ಅರುಣ್‌ ಶ್ಯಾಮ್‌ (Arun shyam) ವಾದ ಮಂಡಿಸಿ, ಅರ್ಜಿದಾರರು ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಅರ್ಜಿದಾರರು ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಕಟ್ಟಿದೇಶಕ್ಕಾಗಿ ಹೋರಾಡುವ ಸಮಾನ ಮನಸ್ಕರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ದುರುದ್ದೇಶಪೂರ್ವಕವಾಗಿ ಹಲವು ಪ್ರಕರಣ ಹೂಡಿ ಮತ್ತು ರಾಜಕೀಯ ದ್ವೇಷದ ಕಾರಣಕ್ಕೆ ಅರ್ಜಿದಾರರನ್ನು ಆ.11ರಂದು ಗೂಂಡಾ ಕಾಯ್ದೆಯಡಿ ಅಕ್ರಮವಾಗಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರ ಪೊಲೀಸ್‌ ಆಯುಕ್ತರು ಯಾವುದೇ ವಿವೇಚನೆ ಬಳಸದೆ ಏಕಾಏಕಿ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಇದು ಏಕಪಕ್ಷೀಯ ನಡೆಯಾಗಿದ್ದು, ಆ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

ಮಳೆ ಅವಾಂತರ: ಮನೆಗಳಿಗೆ ಗಂಡಾಂತರ

Posted by Vidyamaana on 2023-07-06 16:14:06 |

Share: | | | | |


ಮಳೆ ಅವಾಂತರ: ಮನೆಗಳಿಗೆ ಗಂಡಾಂತರ

ಪುತ್ತೂರು: ಮಳೆ ಬಿಡುವು ಪಡೆಯದೇ ಸುರಿಯುತ್ತಿದೆ. ಅದರದ್ದೇನೂ ತಪ್ಪಿಲ್ಲ‌ ಬಿಡಿ. ಮಳೆಗಾಲ ತಾನೇ? ಆದರೆ ಜನರು ವಾಸಿಸಬೇಕಲ್ಲವೇ? ಮನೆಗಳಿಗೆ ನೀರು ನುಗ್ಗಿದರೆ ಜನರಾದರೂ ಎತ್ತ ಹೋಗಬೇಕು? ತಮ್ಮ ನೋವನ್ನು ಯಾರ ಬಳಿ ತೋಡಿಕೊಳ್ಳಬೇಕು?

ಇದು ಹಾರಾಡಿ - ಪುತ್ತೂರು ರೈಲ್ವೇ ನಿಲ್ದಾಣ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿನ ಮನೆ ಪರಿಸ್ಥಿತಿ. ಎಷ್ಟೋ ವರ್ಷಗಳಿಂದ ಕಾಡಿ ಬೇಡಿ ರೈಲ್ವೇ ರಸ್ತೆಯಂತೂ ಈಗ ಸರಿಯಾಗುವ ಹಂತಕ್ಕೆ ಬಂದಿದೆ. ಅಷ್ಟರಲ್ಲಿ ಹೊಸ ಸಮಸ್ಯೆ ಎದುರಾಗಿದೆ ನೋಡಿ.

ಮಳೆ ನೀರು ಸರಾಗವಾಗಿ ಚರಂಡಿಯಲ್ಲಿ ಹೋಗುವುದು ಬಿಟ್ಟು, ಮನೆಗಳಿಗೆ ನುಗ್ಗಿದೆ. ಹಾಗೆಂದು ಮಳೆ ಅಥವಾ ನೀರಿಗೆ ಬೈಯ್ಯುವಂತಿಲ್ಲ. ಇದಕ್ಕೆ ಕಾರಣವಾದ ನಮ್ಮ ತಂತ್ರಜ್ಞರು, ತಂತ್ರಜ್ಞಾನವನ್ನು ಹಳಿಯಬೇಕಷ್ಟೇ‌. ಅಧಿಕಾರಿಗಳೇ ಸ್ವಲ್ಪ ಇತ್ತ ಗಮನ ಹರಿಸಿ. ಜನರ ವಾಸಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಡಿ.



Leave a Comment: