ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಪತಿಯ ಕೊಲೆಗೆ 10 ಸಾವಿರ ರೂಪಾಯಿ ಸುಪಾರಿ ಕೊಟ್ಟ ಪತ್ನಿ

Posted by Vidyamaana on 2023-10-06 07:03:47 |

Share: | | | | |


ಪತಿಯ ಕೊಲೆಗೆ 10 ಸಾವಿರ ರೂಪಾಯಿ ಸುಪಾರಿ ಕೊಟ್ಟ ಪತ್ನಿ

ಕಾರವಾರ: ಗಂಡನ ಸ್ನೇಹಿತನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಮಹಿಳೆಯೊಬ್ಬಳು ಕೊನೆಗೂ ಅಂದರ್​ ಆಗಿದ್ದಾಳೆ. ಪ್ರಿಯಕರನಿಗೆ ಕೇವಲ 10 ಸಾವಿರ ಸುಪಾರಿ ಕೊಟ್ಟು ತನ್ನ ಗಂಡನನ್ನು ಕುಮಟಾದ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿಸಿರುವ ಪ್ರಕರಣವನ್ನು ಕುಮಟಾ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.


ಸೆ.30 ರಂದು ಕುಮಟಾ ತಾಲೂಕಿನ ದೇವಿಮನೆ ಘಟ್ಟದ ದೇವಸ್ಥಾನವೊಂದರ ಹಿಂಬದಿ ಪ್ರದೇಶದಲ್ಲಿ ಅಪರಿಚಿತ ಶವವೊಂದು ಪತ್ತೆಯಾದಾಗ, ಕುಮಟಾ ಪೊಲೀಸರು ತೆರಳಿ ಪರಿಶೀಲಿಸಿದ್ದರು. ಸುಮಾರು 35 ರಿಂದ 40 ವರ್ಷದ ಪುರುಷನನ್ನು ಯಾರೋ ಕೊಲೆ ಮಾಡಿ ದೇಹವನ್ನು ಎಸೆದು ಹೋಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.


ಇನ್ನು ಶವದ ಗುರುತಿನ ಪತ್ತೆಗೆ ಕುಮಟಾ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಪತ್ತೆಗೆ ಮುಂದಾದಾಗ ಯಾವ ಮಾಹಿತಿ ಸಿಕ್ಕಿರಲಿಲ್ಲ. ಆದರೆ ಮೃತ ವ್ಯಕ್ತಿಯ ಕಿಸೆಯಲ್ಲಿ ಮಂಗಳೂರಿನಿಂದ ಶಿರಸಿಗೆ ಕೆಎಸ್ಆರ್ ಟಿಸಿ ಬಸ್​ನಲ್ಲಿ ಪ್ರಯಾಣಿಸಿದ ಟಿಕೆಟ್​ದಿಂದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ನೆರವಾಯಿತು.


ಕೊನೆಗೆ ಕುಮಟಾ ಪೊಲೀಸರು ಬೇರೆ ಜಿಲ್ಲೆಯಲ್ಲಿನ ನಾಪತ್ತೆ ಪ್ರಕರಣಗಳ ಪತ್ತೆಗೆ ಮುಂದಾದಾಗ ಬಾಗಲಕೋಟೆ ಜಿಲ್ಲೆಯ ಹೊಸೂರು ಗ್ರಾಮದ ಬಶೀರಸಾಬ್ ಎಂಬ ವ್ಯಕ್ತಿಯು ನಾಪತ್ತೆಯಾಗಿದ್ದು, ಆತನ ಶವ ಪತ್ತೆಯಾಗಿರುವುದು ಗೊತ್ತಾಗಿತ್ತು. ಪೊಲೀಸರು ಮೃತ ಬಶೀರಸಾಬ್​ನ ಊರಿನಲ್ಲಿ ವಿಚಾರಣೆ ಮಾಡಲು ಮುಂದಾದಾಗ ಆತನಿಗೂ ಮತ್ತು ಆತನ ಪತ್ನಿಗೂ ಆಗಾಗ್ಗೆ ಗಲಾಟೆಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು


ಈ ಬಗ್ಗೆ ಮೃತ ಬಶೀರಸಾಬ್ ಪತ್ನಿ ರಾಜಮಾಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಹಿಂದೆ ಆಕೆ ಇರುವುದು ಶಂಕೆ ವ್ಯಕ್ತವಾಗಿತ್ತು. ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರ ಪರಶುರಾಮ್, ಆತನ ಸ್ನೇಹಿತ ರವಿ ಹಾಗೂ ಆದೇಶ ಕುಂಬಾರ ಸೇರಿಕೊಂಡು ಕೊಲೆ ಮಾಡಿಸಿರುವ ವಿಷಯವನ್ನು ಬಾಯ್ಬಿಟ್ಟಿದ್ದಳು. ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಿದ್ದಾರೆ.


ಆರೋಪಿ ರಾಜಮಾಗೆ ಇಬ್ಬರು ಮಕ್ಕಳಿದ್ದು ಪತಿ ಬಶೀರಸಾಬ್ ಜೊತೆ ಚೆನ್ನಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಳು. ಬಶೀರಸಾಬ್ ಕುರಿ ಕಾಯುವ ಕೆಲಸವನ್ನು ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಬಾದಾಮಿ ತಾಲೂಕಿನಲ್ಲಿ ನಡೆದ ಜಾತ್ರೆಯೊಂದರಲ್ಲಿ ಕುರಿ ಮಾರಾಟ ಮಾಡಲು ಬಶೀರಸಾಬ್ ಸಹೋದರ ಖಾಸಿಂ ತೆರಳಿದ್ದ ವೇಳೆ ಆರೋಪಿ ಪರಶುರಾಮನ ಪರಿಚಯ ಆಗಿತ್ತು.


ಖಾಸಿಂ ಪರಿಚಯದ ಮೇಲೆ ಆರೋಪಿ ಪರಶುರಾಮ್ ಬಶೀರಸಾಬ್ ಮನೆಗೆ ಬಂದಾಗ ಆತನ ಹೆಂಡತಿ ರಾಜಮಾಳನ್ನು ಪರಿಚಯ ಮಾಡಿಕೊಂಡಿದ್ದ. ರಾಜಮಾ ಹಾಗೂ ಪರಶುರಾಮ್ ಇಬ್ಬರದ್ದು ಒಂದೇ ಊರಾಗಿದ್ದರಿಂದ ಪರಿಚಯ ನಂತರ ಪ್ರೇಮಕ್ಕೆ ತಿರುಗಿತ್ತು.


ಇಬ್ಬರ ನಡುವೆ ಅನೈತಿಕ ಸಂಬಂಧ ಸಹ ಪ್ರಾರಂಭವಾಗಿ ಈ ವಿಷಯ ಪತಿ ಬಶೀರಸಾಬ್ ಗೆ ಸಹ ತಿಳಿದಿತ್ತು. ಬಶೀರ್ ಸಾಬ್ ಹೆಂಡತಿ ರಾಜಮಾ ಜೊತೆ ಗಲಾಟೆ ಮಾಡಿಕೊಳ್ಳಲು ಪ್ರಾರಂಭ ಮಾಡಿದ್ದನು. ಆತನ ಪತ್ನಿ ರಾಜಮಾ ತನ್ನ ತವರು ಮನೆಗೆ ಬಂದು ಉಳಿದಿದ್ದಳು. ಸೆ.26ರಂದು ಪ್ರಿಯಕರ ಪರಶುರಾಮನನ್ನು ಕರೆಯಿಸಿಕೊಂಡಿದ್ದ ರಾಜಮಾ, 10 ಸಾವಿರ ರೂಪಾಯಿ ಹಣವನ್ನು ನೀಡಿ ತಮ್ಮಿಬ್ಬರ ಸಂಬಂಧಕ್ಕೆ ಅಡ್ಡಿಯಾಗಿರುವ ಪತಿಯನ್ನು ಕೊಲೆ ಮಾಡುವಂತೆ ಸುಪಾರಿ ನೀಡಿದ್ದಳು.


ಪರಶುರಾಮ್ ಬಶೀರಸಾಬ್​ನನ್ನು ಪ್ರವಾಸಕ್ಕೆಂದು ತನ್ನ ಸ್ನೇಹಿತ ರವಿ ಮತ್ತು ಆದೇಶ ಎನ್ನುವವರ ಜೊತೆ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಸೆ.29ರಂದು ಮಂಗಳೂರು ಪ್ರವಾಸ ಮುಗಿಸಿ ವಾಪಸ್ ಬರುವಾಗ ದೇವಿಮನೆ ಘಟ್ಟದಲ್ಲಿ ಬಸ್​​ನಿಂದ ಇಳಿದಿದ್ದರು. ದೇವಸ್ಥಾನದ ಹಿಂದೆ ಕುಡಿಯಲು ನಾಲ್ವರು ಕುಳಿತಿದ್ದು ಬಶೀರಸಾಬ್​ನಿಗೆ ಕುಡಿಸಿದ ನಂತರ ಉಳಿದ ಪರಶುರಾಮ್, ರವಿ ಹಾಗೂ ಆದೇಶ ಮೂರು ಜನ ಸೇರಿ ಬಶೀರಸಾಬ್ ತಲೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು ಎಂದು ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಟಿ ಜಯಕುಮಾರ್ ಮಾಹಿತಿ ನೀಡಿದ್ದಾರೆ.


ಕುಮಟಾ ಪೊಲೀಸ್​ ಠಾಣೆ ಸಿಪಿಐ ತಿಮ್ಮಪ್ಪ ನಾಯ್ಕ, ಪಿಎಸ್​​​ಐ ನವೀನ್ ನಾಯ್ಕ ಹಾಗೂ ಸಂಪತ್ ನೇತೃತ್ವದಲ್ಲಿ ಪೊಲೀಸ​ರ ತಂಡ ಕೆಲವೇ ದಿನದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ

ರಾಜ್ಯದ 108 ಸಿಬ್ಬಂದಿ ಮುಷ್ಕರ ವಾಪಾಸ್‌: ಎಂದಿನಂತೆ ಕೆಲಸಕ್ಕೆ ಹಾಜರ್

Posted by Vidyamaana on 2024-05-07 21:05:44 |

Share: | | | | |


ರಾಜ್ಯದ 108 ಸಿಬ್ಬಂದಿ ಮುಷ್ಕರ ವಾಪಾಸ್‌: ಎಂದಿನಂತೆ ಕೆಲಸಕ್ಕೆ ಹಾಜರ್

ಬೆಂಗಳೂರು : 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಹಾಗೂ ಜಿವಿಕೆ ಇಎಂಆರ್ ಸಂಸ್ಥೆಯವರೊಂದಿಗೆ ಚರ್ಚೆ ನಡೆಸಿದ್ದಾರೆ.ಸರ್ಕಾರದಿಂದ ಯಾವುದೇ ವೇತನವನ್ನ ಬಾಕಿ ಉಳಿಸಿಕೊಂಡಿಲ್ಲ ಎಂದರು.

ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ನೀಡಬೇಕಾದ ವೇತನವನ್ನ ನಿಯಮನುಸಾರ ಪಾವತಿಸಲಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಯೋಜನೆಯನ್ನ ನಿರ್ವಹಿಸುತ್ತಿರುವ ಸಂಸ್ಥೆ ಜಿವಿಕೆ ಇಎಂಆರ್ ನವರು ವೇತನ ನೀಡಬೇಕು. ಸಂಸ್ಥೆಯವರೊಂದಿಗೆ ಒಡಂಬಡಿಕೆಯ ಪ್ರಕಾರ ಸರ್ಕಾರದಿಂದ ಕೊಡಬೇಕಾದ ಅನುದಾನವನ್ನ ಪಾವತಿಸಲಾಗಿದೆ. ಅನಗತ್ಯವಾಗಿ ವಿಪಕ್ಷಗಳು ಸರ್ಕಾರದ ಮೇಲೆ ಬೊಟ್ಟು ಮಾಡಿ ತೋರಿಸುವುದು ಸರಿಯಲ್ಲ.

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

Posted by Vidyamaana on 2023-09-07 17:47:26 |

Share: | | | | |


ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

ಬೆಳ್ಳಾರೆ: ಕಳಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ.

ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು. ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ರವರು ವಾದ ಮಂಡಿಸಿದ್ದರು. ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಮೂರು ಜನ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು. 2022ರ ಜು. 19ರಂದು ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ  ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

ಮಸೂದ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಅಭಿಲಾಶ್, ಸುನಿಲ್ ಕೆ, ಸುಧೀರ್, ಶಿವಪ್ರಸಾದ್, ರಂಜಿತ್ ಬಿ, ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ ಎಂ ಯನ್ನು ಪೊಲೀಸರು ಬಂಧಿಸಿದ್ದರು.

ಮಾ.2, 3ಕ್ಕೆ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಮಟ್ಟದ ತುಳುವೆರೆ ಮೇಳೊ

Posted by Vidyamaana on 2024-02-27 13:11:22 |

Share: | | | | |


ಮಾ.2, 3ಕ್ಕೆ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ  ಪುತ್ತೂರು ತಾಲೂಕು ಮಟ್ಟದ ತುಳುವೆರೆ ಮೇಳೊ

ಪುತ್ತೂರು: ತುಳು ಕೂಟೊ ಪುತ್ತೂರು ತಾಲೂಕು ಇದರ ವತಿಯಿಂದ ತುಳುವೆರೆ ಮೇಳೊ-2024 ಮತ್ತು ತೆನೆಸ್ ಮೇಳೊ ಕಾರ್ಯಕ್ರಮ ಮಾ.2 ಮತ್ತು 3ರಂದು ಪುತ್ತೂರು ಮಂಜಲ್ಪಡು ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ಜರುಗಲಿದೆ ಎಂದು ತುಳುವೆರೆ ಮೇಳೊ ಸಮಿತಿ ಇದರ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.


ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವಿರೇಂದ್ರ ಹೆಗ್ಗಡೆಯವರ ಮತ್ತು ಒಡಿಯೂರು ಶ್ರೀ ಗುರುದೇವಾನಂದ ಅವರ ಆಶಿರ್ವಾದ ಪಡೆದು ಕೊಂಡು ಸುದಾನ ವಸತಿಯುತ ಶಾಲೆಯ ಸಂಚಾಲಕ ರೇ ವಿಜಯ ಹಾರ್ವಿನ್ ಅವರ ನಾಯಕತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾ.2ರಂದು ಮೇಳದಲ್ಲಿ ತೆನೆಸ್ ಮೇಳೊ, ತುಳು ಪದ ನಲಿಕೆ, ತುಡರ ಪದ(ಕತ್ತಲ ಹಾಡು) ಜರುಗಲಿದ್ದು, ಮಾ.3ರಂದು ತುಳುವೆರೆ ಮೇಳೊ ಬೆಳಿಗ್ಗೆ ಉದ್ಘಾಟನೆಗೊಳ್ಳಲಿದೆ. ಈ ಸಂದರ್ಭ ಐವರಿಗೆ ಪ್ರಶಸ್ತಿ ಪ್ರದಾನ, ಅಮೃತ ಸೋಮೇಶ್ವರ ಅವರ ನೆನಪು, ಪ್ರಬಂದ ಮಂಡನೆ, ಕವಿ ಕೂಟೊ, ತುಳು ಮನರಂಜನೆ, ಯಕ್ಷಗಾನ ತಾಳಮದ್ದಳೆ, ಬಲೆ ತೆಲಿಪುಕೊ, ತುಳು ಸಿನಿಮದ ಹಾಡುಗಳು, ನಾಟಕ ಮೇಳ ಜರುಗಲಿದೆ ಎಂದವರು ಹೇಳಿದರು.ತುಳುವೆರೆ ಮೇಳೊ ಇದರ ಕಾರ್ಯಾಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್ ಅವರು ಮಾತನಾಡಿ ಮಾ.2ರಂದು ಬೆಳಿಗ್ಗೆ ಆಹಾರ ಮೇಳ ಮತ್ತು ವ್ಯಾಪಾರ ಮಳಿಗೆಯ ಉದ್ಘಾಟನೆ ನಡೆಯಲಿದೆ. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ ಪೈ ಅವರು ಉದ್ಘಾಟಿಸಲಿದ್ದಾರೆ. ಮೂಡಾಯಿ ತೆನೆಸ್ ಅನ್ನು ಡಾ. ಸುರೇಶ್ ಪುತ್ತೂರಾಯ, ಪಡ್ಡಾಯಿ ತೆನೆಸ್ ಅನ್ನು ಹೊಟೇಲ್ ಅಭಿಮಾನ್ ಇದರ ಮಾಲಕ ಅಭಿಜಿತ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ರೂಪೇಶ್ ರೈ ಅಲಿಮಾರ್, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಿತ್ತಳಿಕೆ ಸೂರ್ಯನಾಥ ಆಳ್ವ, ಜನ್ಮ ಫೌಂಡೇಶನ್ ಇದರ ಅಧ್ಯಕ್ಷ ಡಾ. ಹರ್ಷಕುಮಾ‌ರ್ ರೈ ಮಾಡಾವು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭ ಮಧ್ಯಾಹ್ನ ಸಸ್ಯಹಾರಿ ಮತ್ತು ಮಾಂಸಹಾರಿ ಆಹಾರದ ವ್ಯವಸ್ಥೆಯಿದೆ.

ಸಾಂಸ್ಕೃತಿಕ ಕಾರ್ಯಕ್ರಮ: ಮಧ್ಯಾಹ್ನ ಗಂಟೆ 3.30ರಿಂದ

ಶರಣ್ಯ, ಶ್ರಾವಣ್ಯ ರೈ, ಧನ್ವಿ ರೈ ಪಾಣಾಜೆ, ನವ್ಯ ರೆಂಜಲಾಡಿ ಮತ್ತು ಬಳಗದಿಂದ ತುಳು ಪದ ನಲಿಕೆ, ಗುರುಕುಲ ಕಲಾ ಕೇಂದ್ರ ಪುರುಷರಕಟ್ಟೆ ಇದರ ವತಿಯಿಂದ ಗಾನ ನೃತ್ಯ ವೈಭವ ನಡೆಯಲಿದೆ. ಸಂಜೆ ಗಂಟೆ 7ರಿಂದ ಮಣಿನಾಲ್ಕೂರ ಅವರಿಂದ ತುಡ ಪದ (ಕತ್ತಲ ಹಾಡು) ವಿಶೇಷ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯಗುರು ಸಾಹಿತಿ ನಾರಾಯಣ ಕುಕ್ಕುವಳ್ಳಿ ದೀಪ ಪ್ರಜ್ವಲಿಸಲಿದ್ದಾರೆ.ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಮುಳಿಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾ.3ಕ್ಕೆ ತುಳುವೆರೆ ಮೇಳೊ-2024

ಮಾ.೩ರಂದು ತುಳುವೆರೆ ಮೇಳೊ ಕಾರ್ಯಕ್ರಮ ಬೆಳಿಗ್ಗೆ ಗಂಟೆ 9.30ರಿಂದ ಆರಂಭಗೊಳ್ಳಲಿದೆ. ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ಮಂಡಳಿ ಪುತ್ತೂರು ಘಟಕದವತಿಯಿಂದ ತುಳು ಪದರಂಗಿತ ನಡೆಯಲಿದ್ದು ಬಳಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಕಲಸೆಗೆ ಭತ್ತವನ್ನು ತುಂಬಿಸುವ ಮೂಲಕ ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತುಳುವೆರೆ ಮೇಳೊ ಇದರ ಅಧ್ಯಕ್ಷ ರೇ ವಿಜಯ ಹಾರ್ವಿನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಎ.ಸಿ.ಭಂಡಾರಿ, ಅಖಿಲ ಭಾರತ ಪೆಟ್ರೋಲಿಯಂ ವಿತರಕರ ಸಂಘದ ಕಾರ್ಯದರ್ಶಿ ಕೆ.ವಿಶ್ವಾಸ್‌ ಶೆಣೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಸಿಟಿ ಆಸ್ಪತ್ರೆಯ ಅಡಳಿತ ವೈದ್ಯಾಧಿಕಾರಿ ಡಾ. ಭಾಸ್ಕರ್ ಎಸ್, ರೋಟರಿ ವಲಯ 5ರ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ಮಿತ್ರಂಪಾಡಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕೋಟಿ ಚೆನ್ನಯಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ನಗರಭೆ ಮಾಜಿ ಅಧ್ಯಕ್ಷ ಜಗದೀಶ್‌ ಶೆಟ್ಟಿ ನೆಲ್ಲಿಕಟ್ಟೆ, ಆರ್ಯಾಪು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದ ಅವರು ಇದೇ ಸಂದರ್ಭ ತುಳುವೆರೆ ಮೇಳದಲ್ಲಿ ಐವರು ಸಾಧಕರಿಗೆ ಬಿರ್ದ್‌ದ ತುಳುವೆ‌ರ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿಜಯ ಕುಮಾ‌ರ್ ಹೆಬ್ಬಾರಬೈಲು, ಯೂಸೂಪ್ ಮಠ, ಕೊಳ್ತಿಗೆ ನಾರಾಯಣ ಗೌಡ, ಯಮುನಾ ಪೂಜಾರಿ, ಗುಬ್ಬಿ ಕೆಮ್ಮಾರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ತುಳುವಾಮೃತ:

ಮಧ್ಯಾಹ್ನ ಗಂಟೆ 12ಕ್ಕೆ ಅಮೃತ ಸೋಮೇಶ್ವರ ಅವರ ನೆನಪು ತುಳುವಾಮೃತ ಕಾರ್ಯಕ್ರಮ ನಡೆಯಲಿದೆ. ತುಳುಕೂಟೊ ಇದರ ಮಾಜಿ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ಸುದ್ದಿ ಬಿಡುಗಡೆ ಪತ್ರಿಕೆಯ ಆಡಳಿತ ವ್ಯವಸ್ಥಾಪಕ ನಿರ್ದೇಶಕ ಡಾ.ಯು.ಪಿ.ಶಿವಾನಂದ, ವಿಶ್ರಾಂಶ ಪ್ರಾಂಶುಪಾಲ ಝೇವಿಯ‌ರ್ ಡಿಸೋಜ, ಬಿ.ವಿ.ಸೂರ್ಯನಾರಾಯಣ ಅವರು ಮಾತನಾಡಲಿದ್ದಾರೆ. ಸಾಹಿತಿ ಪ್ರೊ. ವಿ.ಬಿ.ಅರ್ತಿಕಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ಮಹಿಳಾ ಕಾಲೇಜಿನ ಉಪನ್ಯಾಸಕ ನರೇಂದ್ರ ರೈ ದೇರ್ಲ, ರಂಗ ನಿರ್ದೇಶಕ ಐ.ಕೆ.ಬೊಳುವಾರು, ಯಕ್ಷಗಾನ ಕಲಾವಿದ ಜಬ್ಬ‌ರ್ ಸಮೊ ಪ್ರಬಂದ ಮಂಡನೆ ಮಾಡಲಿದ್ದಾರೆ.ಇದಾದ ಬಳಿಕ ಕಬಿ ಕುಟೊ ನಡೆಯಲಿದ್ದು, ನ್ಯಾಯವಾದಿ ಭಾಸ್ಕರ್ ಕೋಡಿಂಬಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ದಂಬೆಕ್ಕಾನ ಸದಾಶಿವ ರೈ, ಪುತ್ತೂರು ಸಿಟಿ ಆಸ್ಪತ್ರೆಯ ಡಾ. ಎ.ಪಿ.ಭಟ್, ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್ ರಾವ್ ಮಾತನಾಡಲಿದ್ದಾರೆ. ಸಂಜೆ ಗಂಟೆ 4ರಿಂದ ತುಳು ಮನರಂಜನೆ ನಡೆಯಲಿದ್ದು, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯೆ ಶ್ರೀಶಾವಸವಿ, ರೋಟರಿ ವಲಯ 4ರ ಸಹಾಯಕ ಗವರ್ನರ್ ರತ್ನಾಕರ ರೈ ಕೆದಂಬಾಡಿಗುತ್ತು, ತುಳು ಅಪ್ಪೆಕೂಟೊ ಇದರ ಅಧ್ಯಕ್ಷೆ ಹರಿಣಾಕ್ಷಿ ಜೆ ಶೆಟ್ಟಿ ಮಾತನಾಡಲಿದ್ದಾರೆ. ಸಂಜೆ ಗಂಟೆ 4 ರಿಂದ ಧೀಶಕ್ತಿ ಮಹಿಳಾ ಯಕ್ಷ ಬಳದಿಂದ ಸಮರ ಸೌಗಂಧಿಕಾ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಸಂಜೆ ಗಂಟೆ 5.30ರಿಂದ ಬಲೆ ತಲಿಪುಕೊ ಕಾರ್ಯಕ್ರಮ ನಡೆಯಲಿದೆ. ಗಂಟೆ 6.30ರಿಂದ ಮಿಥುನ್ ರಾಜ್ ವಿದ್ಯಾಪುರ ಮತ್ತು ಚಂದ್ರಶೇಖರ ಹೆಗ್ಡೆ ಬಳಗದಿಂದ ತಳು ಸಿನಿಮಾ ಹಾಡುಗಳ ಪ್ರಸ್ತುತಿ ನಡೆಯಲಿದೆ. ಗಂಟೆ 7 ರಿಂದ ನಾಟಕ ಮೇಳ ನಡೆಯಲಿದೆ. ರೋಶನ್ ರೈ ಬನ್ನೂರು ಅವರು ಅಧ್ಯಕ್ಷತೆ ವಹಿಸಲಿದ್ದು, ನಾಟಕ ನಿರ್ದೇಶಕ ಮತ್ತು ಸಿನಿಮಾ ಕಲಾವಿದ ಸುಂದರ ರೈ ಮಂದಾರ, ಒಕ್ಕಲಿಗ ಯುವ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ಮಾತನಾಡಲಿದ್ದಾರೆ. ಬಳಿಕ ತುಳು ಹಾಸ್ಯ ನಾಟಕ ನಂಬಕೆ ದಾಯೆಗ್ ಎಂಬ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಎಂದು ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ತುಳುವೆರೆ ಮೇಳೊ ಸಮಿತಿ ಇದರ ಕಾರ್ಯದರ್ಶಿ ಡಾ| ರಾಜೇಶ್ ಬೆಜ್ಜಂಗಳ, ಜೊತೆ ಕಾರ್ಯದರ್ಶಿ ಉಲ್ಲಾಸ್ ಪೈ ಉಪಸ್ಥಿತರಿದ್ದರು.

ಬಿಜೆಪಿಯನ್ನು ಕುಲಗೆಡಿಸೋರು ಬಿಜೆಪಿ ಒಳಗಿನವರೇ

Posted by Vidyamaana on 2023-12-28 07:25:01 |

Share: | | | | |


ಬಿಜೆಪಿಯನ್ನು ಕುಲಗೆಡಿಸೋರು ಬಿಜೆಪಿ ಒಳಗಿನವರೇ

ಬೆಂಗಳೂರು : ಬಿಜೆಪಿಯಲ್ಲಿ (Karnataka BJP) ಆಂತರಿಕ ಕಲಹ ಮಿತಿ ಮೀರುತ್ತಿರುವ ಹೊತ್ತಿನಲ್ಲೇ ಮತ್ತೊಬ್ಬ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಡಿವಿ ಸದಾನಂದ ಗೌಡ (DV S

non

ananda Gowda) ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದಾರೆ.ಈ ಬಗ್ಗೆ ಸುದ್ದಿಗೋಷ್ಠಿ ಕರೆದು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ನಾನು ತುಂಬಾ ಬೇಸರದಿಂದ ಈ ಸುದ್ದಿಗೋಷ್ಟಿ ಕರೆದು ಮಾತನಾಡುತ್ತಿದ್ದೇನೆ.ಕರ್ನಾಟಕ ಬಿಜೆಪಿ ಘಟಕಕ್ಕೆ ಪದಾಧಿಕಾರಿಗಳ ಬಿಡುಗಡೆ ಆಗಿದೆ. ಒಂದು ಪಕ್ಷದ ಆಂತರಿಕ ವ್ಯವಸ್ಥೆ ಇನ್ನೂ ಸರಿ ಆಗಿಲ್ಲ ಯಾಕೆ? ಡಜನ್ ಗಟ್ಟಲೆ ಪ್ರಮುಖ ಸ್ಥಾನದಲ್ಲಿರುವ ನಾಯಕರು ಪಕ್ಷದ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯನ್ನ ಕುಲಗೇಡಿಸೋರು ಬಿಜೆಪಿಯ ಒಳಗಿನವರೇ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲೆಂಬ ದೃಷ್ಟಿಯಿಂದ ಹೇಳುತ್ತಿದ್ದೇನೆ ಎಂದ ಡಿವಿಎಸ್, ನಾನು ನಿನ್ನೆ ಕಡಬ ಒಕ್ಕಲಿಗರ ಭವನ ಕಾರ್ಯಕ್ರಮಕ್ಕೆ ಹೋಗಿದ್ದೆ. ಸುಳ್ಯ ವಿಧಾನಸಭಾ ಕ್ಷೇತ್ರ ಸಂಘಟನೆಯಲ್ಲಿ ನಂಬರ್ 1 ಸ್ಥಾನದಲ್ಲಿರುವ ಕ್ಷೇತ್ರ. ಆಗ ಕಾರ್ಯಕರ್ತರು ಬಂದು ನಿಮ್ಮಂತಹ ಹಿರಿಯರು ಇದ್ದು ಈ ರೀತಿ ಆಗಿದ್ಯಲ್ಲ‌ ಅಂತ ಕೇಳಿದ್ರು, ಗಂಭೀರವಾಗಿ ಬೇಸರದಿಂದ ಪ್ರಶ್ನೆ ಮಾಡಿದ್ರು ಎಂದು ನೋವು ತೋಡಿಕೊಂಡರು.ಕೇಂದ್ರ ಅಥವಾ ರಾಜ್ಯ ನಾಯಕರು ಬುದ್ದಿ ಹೇಳುತ್ತಿಲ್ಲ, ಕರ್ನಾಟಕ ಬಿಜೆಪಿಯಲ್ಲಿ ಯಾರೂ ಹೇಳುವವರಿಲ್ಲ, ಕೇಳೋರಿಲ್ಲ ಎಂದ ಡಿವಿ ಸದಾನಂದ ಗೌಡ, ನಾವು ಹೇಳಿದಂತೆ ನಡೆಯುತ್ತೆ ಅಂತ ತಿಳಿದಿದ್ದಾರೆ. ಕುಲಗೆಟ್ಟ ವ್ಯವಸ್ಥೆ ಈ ರೀತಿ ಎಂದೂ ನೋಡಿರಲಿಲ್ಲ. ಕರ್ನಾಟಕ ವಿಕಸಿತ ಬಿಜೆಪಿ ಬಗ್ಗೆ ಯಾರೂ ಯೋಚನೆ ಮಾಡಲ್ವಾ? ಪಕ್ಷದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವವರ ಬಾಯಿಗೆ ಬೀಗ ಹಾಕುವ ಕೆಲಸ ಅಗಬೇಕಿದೆ. ಪಕ್ಷ ಚಟುವಟಿಕೆ ಹೇಗೆ ಆರಂಭಿಸೋದು ಅಂತ ನನ್ನಂತಹ ಹಿರಿಯ ನಾಯಕನಿಗೆ ಅನಿಸಿದೆ. ನಮ್ಮ ತಂಡದ ಬಗ್ಗೆ ನಾವೇ ಮಾತನಾಡುವುದು ಬಾರೀ ದೊಡ್ಡ ರೀತಿಯಲ್ಲಿ ಪರಿಣಾಮ ಬೀರುತ್ತೆ ಎಂದರು.ಕಾರ್ಯಕರ್ತರು ಪಕ್ಷದ ನಾಯಕರನ್ನ ಪ್ರಶ್ನಿಸುವ ಸ್ಥಿತಿ ಬಂದೊದಗಿದೆ. ಹೀಗಾಗಿ ಅರಿತುಕೊಳ್ಳದಿದ್ದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಎಚ್ಚರಿಕೆ ನೀಡಿದ ಸದಾನಂದ ಗೌಡ, ಹೊಸ ಟೀಂ ಮಾಡುವಾಗ ನಿಮ್ಮನ್ನ ಪರಿಗಣಿಸಿದ್ರಾ ಅಂತ ಕಾರ್ಯಕರ್ತರು ನನ್ನನ್ನ‌ ಕೇಳಿದ್ರು. ಅದಕ್ಕೆ ಏನು ಉತ್ತರ ಕೊಡಲಿ ಹೇಳಿ ನಾನು? ಅದಕ್ಕೆ ನಾನು ಹೇಳಿದೆ, ಇಲ್ಲ ಬಂದಿಲ್ಲ. ಹೊಸ ಟೀಂ ರಚನೆ ಮಾಡುವಾಗಲೂ ಸಮಾಲೋಚನೆ ಮಾಡಿಲ್ಲ. ತುಂಬಾ ನೋವಾಗ್ತಿರೋದು ನನಗೆ ಮಾದ್ಯಮಗಳ ಮೂಲಕವೇ ಈ ಎಲ್ಲ ಬೆಳವಣಿಗೆಗಳು ತಿಳಿಯಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.


ಪಕ್ಷದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಕೇಂದ್ರ ನಾಯಕರು ಯಾರೂ ಬಂದು ಮಾತನಾಡುತ್ತಿಲ್ಲ, ವಿಪಕ್ಷ ನಾಯಕರು, ಪಕ್ಷದ ಅಧ್ಯಕ್ಷರ ನೇಮಕದ ವಿಳಂಬವೇ ಪಕ್ಷಕ್ಕೆ ದೊಡ್ಡ ಹಿನ್ನಡೆ ಆಗಿದೆ. ಪಕ್ಷದಲ್ಲಿ ಅಧಿಕಾರ ಅನುಭವಿಸಿ ಮಾತನಾಡುತ್ತಿರುವುದು ಒಳ್ಳೆಯದಲ್ಲ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೋದಿ ಪ್ರಧಾನಿ ಮಾಡುವ ದೃಷ್ಟಿಯಿಂದ ಸುಮ್ಮನಿರಬೇಕು ಎಂದರು.ಇನ್ನು, ಪಕ್ಷ ವಿರೋಧಿ ಹೇಳಿಕೆ ಕೊಟ್ಟ ಜನಾರ್ಧನ ರೆಡ್ಡಿಯನ್ನ ನಾನು ಕೂಡಲೇ ಸಸ್ಪೆಂಡ್ ಮಾಡಿದ್ದೆ ಎಂದ ಡಿ.ವಿ ಸದಾನಂದಗೌಡ, ಯತ್ನಾಳ್‌ರನ್ನೂ ಅಮಾನತ್ತು ಮಾಡಿದ್ದೆ. ಆಮೇಲೆ ಬಿಎಸ್‌ವೈ ಬಸನಗೌಡ ಪಾಟೀಲ ಯತ್ನಾಳ್ ಅಮಾನತು ಆದೇಶ ವಾಪಾಸ್ ಪಡೆಯಿರಿ ಅಂದ್ರು. ಅದರ ಪರಿಣಾಮ ಇವತ್ತು ಅನುಭವಿಸ್ತಾ ಇದ್ದೀವಿ. ನನ್ನ ಕಾಲಘಟ್ಟದಲ್ಲಿ ಈ ರೀತಿ ನಡೆದಿರಲಿಲ್ಲ. ಪಕ್ಷದ ರಾಜ್ಯಾಧ್ಯಕ್ಷರು ಕ್ರಮ‌ ಕೈಗೊಳ್ಳುವ ಕೆಲಸ ಮಾಡಬೇಕು ಎಂದು ಹೇಳಿದರು.


ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್‌ ಸಂದರ್ಭದಲ್ಲಿ 40,000 ಕೋಟಿ ಮೌಲ್ಯದ ಹಗರಣದ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ ಗಂಭೀರ ಆರೋಪದ ಬಗ್ಗೆಯೂ ಮಾತನಾಡಿದ ಡಿವಿ ಸದಾನಂದ ಗೌಡ, ನಾನು ಯತ್ನಾಳ್‌ರನ್ನ ಅಮಾನತ್ತು ಮಾಡಿದ್ದೆ, ಬಿಎಸ್‌ವೈ ವಾಪಾಸ್ ಪಡೆಸಿದ್ದರ ಪರಿಣಾಮ ಇವತ್ತು ಅನುಭವಿಸ್ತಿದ್ದೀವಿ.ಯತ್ನಾಳ್‌ಗೆ ಕನಿಷ್ಠ ನೋಟೀಸ್ ಆದರೂ ಜಾರಿ ಮಾಡಬೇಕು. ಇಲ್ಲದಿದ್ದರೆ ಪಕ್ಷವನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಗೃಹಲಕ್ಷ್ಮೀ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ

Posted by Vidyamaana on 2023-07-30 01:53:26 |

Share: | | | | |


ಗೃಹಲಕ್ಷ್ಮೀ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ

ಕಡಬ: ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ನ ಉಚಿತವಾಗಿ ನೋಂದಣಿಗೆ ಸರಕಾರ ಆದೇಶ ನೀಡಿರುವುದರಿಂದ ಗ್ರಾಮ ಒನ್ ಕೇಂದ್ರಗಳು ಸಂಕಷ್ಟಕ್ಕೆ ಒಳಗಾಗಿದೆ ಈ ಸಮಸ್ಯೆಯನ್ನು ಪರಿಹರಿಸಿಕೊಡುವಂತೆ ಕಡಬ ತಾಲೂಕಿನ ಗ್ರಾಮ ಒನ್ ಫ್ರಾಂಚೈಸಿನ ನಿರ್ವಾಹಕರು ಕಡಬ ತಹಸೀಲ್ದಾರ್ ಮೂಲಕ ಜು.24ರಂದು ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.


ಕಡಬ ತಾಲೂಕಿನ ಸುಮಾರು 20 ಗ್ರಾಮ್ ಒನ್ ಫ್ರಾಂಚೈಸಿ ನಿರ್ವಾಹಕರು ಮನವಿ ನೀಡಿದ್ದು, ನಾವು ಒಂದು ವರುಷದ ಹಿಂದೆ ಗ್ರಾಮ ಒನ್ ಕೇಂದ್ರಗಳನ್ನು ಬಂಡವಾಳ ಹೂಡಿಕೆ ಮಾಡಿ ಆರಂಭಿಸಿರುತ್ತೇವೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನವರು ಗ್ರಾಮ ಪಂಚಾಯತ್‌ಗಳಿಗೆ ಕಳುಹಿಸಿದ ಸುತ್ತೋಲೆಯಲ್ಲೂ ಗ್ರಾಮ ಒನ್ ಕೇಂದ್ರಗಳಿಗೆ ಬೇಕಾದ ವ್ಯವಸ್ಥೆಗಳನ್ನು ಮಾಡಿ ಕೊಡಬೇಕಾಗಿ ತಿಳಿಸಲಾಗಿದೆ. ಆದರೆ ಸರಕಾರದಿಂದ ನಮ್ಮ ದ ಕೇಂದ್ರಗಳಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಒದಗಿಸಿರುವುದಿಲ್ಲ. ಕೇವಲ ಐಡಿ ಮಾತ್ರ ಕೊಟ್ಟು ನಮ್ಮ ಮೂಲಕ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ನಮಗೆ ಸರಿಯಾದ ಕಮಿಷನ್ ಕೂಡ ಸಿಗುತ್ತಿಲ್ಲ. ಈ ಮೊದಲು ಉಚಿತವಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಮಾಡಿಸಿಕೊಡುವಂತೆ ಜಿಲ್ಲಾ ಸಂಯೋಜಕರು ನಮಗೆ ತಿಳಿಸಿ, ಇದಕ್ಕೆ ಸಂಭಾವನೆ ಇದೆ ಎಂದು ಎಲ್ಲರಿಗೂ ದೂರವಾಣಿ ಮುಖಾಂತರ ತಿಳಿಸಿದ್ದರು. ಆದರೆ ಅದಕ್ಕೆ ಸರಿಯಾದ ಕಮಿಷನ್ ಅಥವಾ ಯಾವುದೇ ರೀತಿಯ ಸಂಭಾವನೆಯನ್ನು ಇಲ್ಲಿಯವರೆಗೆ ನೀಡಿರುವುದಿಲ್ಲ. ಹಲವು ಕ್ಯಾಂಪ್‌ಗಳನ್ನು ಮಾಡಿ ಸಾವಿರಾರು ರೂ ಖರ್ಚು ಮಾಡಿ ನಷ್ಟ ಅನುಭವಿಸಿರುತ್ತೇವೆ. ಅದಕ್ಕೆ ಮಾಡಿದ ಖರ್ಚು ಕೂಡ ನಮಗೆ ಕೊಟ್ಟಿಲ್ಲ. ಇದೀಗ ಸರಕಾರದ ವತಿಯಿಂದ ಗೃಹಲಕ್ಷ್ಮಿ ಯೋಜನೆಯನ್ನು ಉಚಿತವಾಗಿ ಮಾಡಿಕೊಡಬೇಕೆಂದು ಒತ್ತಡ ಹಾಕುತ್ತಿದ್ದಾರೆ.ನಾವು ನೀಡುವ ಸೇವೆಗಳಿಗೆ ಹಣವನ್ನು ಅದೇ ದಿನ ಜಮಾ ಮಾಡಬೇಕು. ಎಲ್ಲವನ್ನೂ ಉಚಿತವಾಗಿ ಮಾಡಿಕೊಟ್ಟರೆ ನಮ್ಮ ಗ್ರಾಮ ಒನ್ ಕೇಂದ್ರದ ಖರ್ಚು ವೆಚ್ಚಗಳನ್ನು ಯಾರು ಕೊಡುವುದು ನಮ್ಮ ಜೀವನೋಪಾಯಕ್ಕೆ ನಾವು ಏನು ಮಾಡಬೇಕು. ತಿಂಗಳ ಖರ್ಚು ಕೊಠಡಿ ಬಾಡಿಗೆ ವಿದ್ಯುತ್ ಬಿಲ್, ಇಂಟರ್ನೆಟ್ ಬಿಲ್ ಪ್ರಿಂಟ್ ಪೇಪರ್ ಮತ್ತು ಇತರ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಗ್ರಾಮಒನ್ ಐಡಿ ಪಡೆದುಕೊಂಡು ಸೈಬರ್ ಸೆಂಟರ್‌ಗಳಿಂದ ದುರುಪಯೋಗ:

ಈ ನಡುವೆ ಕೆಲವು ಸೇವಾ ಕೇಂದ್ರದ ಹೆಸರಿನಲ್ಲಿ ಅನಧಿಕೃತವಾಗಿ ಸೇವಾ ಸಿಂಧು ಐಡಿಯಲ್ಲಿ ಕೆಲಸ ಮಾಡಿಕೊಂಡು ಹಣ ಮಾಡುತ್ತಿದ್ದಾರೆ. ನಾವು ಎಲ್ಲವನ್ನು ಸಹಿಸಿಕೊಂಡು ವಿಧೇಯತೆಯಿಂದ ಕೆಲಸ ಮಾಡುತ್ತಿದ್ದರೂ, ಅದನ್ನು ಸಹಿಸಲಾಗದೆ ಕೆಲವರು ಗ್ರಾಮ್ ಒನ್‌ ನಾಗರಿಕ ಸೇವಾ ಕೇಂದ್ರದ ವಿರೋಧಿಗಳು ನಮ್ಮ ವಿರುದ್ದ ವಿವಿಧ ರೀತಿಯ ಷಡ್ಯಂತರಗಳನ್ನು ಮಾಡಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಈ ಸಮಸ್ಯೆಗಳನ್ನು ನಿಭಾಯಿಸಿಕೊಂಡು ಕೆಲಸ ಮಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರ ಮನವಿಯಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಕಡಬ ತಾಲೂಕಿನ ಗ್ರಾಮಒನ್‌ ಪ್ರಾಂಚೈಸಿ ನಿರ್ವಾಹಕರು ಉಪಸ್ಥಿತರಿದ್ದರು, ಉಪ ತಹಸೀಲ್ದಾರ್ ಮನೋಹರ್ ಕೆ.ಟಿ. ಮನವಿ ಸ್ವೀಕರಿಸಿದರು



Leave a Comment: