Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2024-02-03 22:30:51 |
ಬೆಳಗಾವಿ: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದೆ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jag
non
ish Shettar) ಕೊನೆಗೂ ಬಿಜೆಪಿ ಸೇರಿದ್ದಾರೆ. ಇನ್ನೊಂದೆಡೆ ಶೆಟ್ಟರ್ ಬಿಜೆಪಿ ಸೇರುತ್ತಿದ್ದಂತೆ ಇತ್ತ ಕಾಂಗ್ರೆಸ್ (Congress) ಅಲರ್ಟ್ ಆಗಿದೆ.ಹೌದು.. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಲರ್ಟ್ ಆಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಸೇರ್ಪಡೆಯಾದ ಬೆನ್ನಲ್ಲೇ ಮತ್ತೆ ಯಾವುದೇ ನಾಯಕರು ಬಿಜೆಪಿಯತ್ತ ಮುಖ ಮಾಡದಂತೆ ನೋಡಿಕೊಳ್ಳಲು ಪ್ಲಾನ್ ರೂಪಿಸಿದೆ. ಆ ಮೂಲಕ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಪ್ಲಾನ್ ಮಾಡಲಾಗಿದೆ.ಈ ಹಿನ್ನೆಲೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಶ್ರಮಿಸಿದ ಶಾಸಕ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ನಲ್ಲಿಯೇ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಪ್ಲಾನ್ ರೂಪಿಸಿದ್ದು, ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಲಕ್ಷ್ಮಣ ಸವದಿ ಅವರಿಗೆ ಪಕ್ಷ ಬಿಡದಂತೆ ಸೂಚಿಸಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರು ಲಕ್ಷ್ಮಣ ಸವದಿ ಪಕ್ಷ ಬಿಡದಂತೆ ಎಚ್ಚರಿಕೆ ವಹಿಸಿದ್ದಾರೆ.ಎಲ್ಲಾ ಬೆಳವಣಿಗೆಗಳ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಲಕ್ಷ್ಮಣ ಸವದಿಗೆ ಕರೆ ಮಾಡಿ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಬಿಡದಂತೆ ಮತ್ತು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲಾ ಮಾತಿನಿಂದ ಸಂತಸಗೊಂಡಿರುವ ಶಾಸಕ ಲಕ್ಷ್ಮಣ ಸವದಿ, ಮುಂದಿನ ವಾರ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ದೆಹಲಿ ಮಟ್ಟದಿಂದಲೇ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ನಾಯಕರು ಸಂಪರ್ಕ ಮಾಡಿದ್ದು, ಲೋಕಸಭಾ ಚುನಾವಣೆಗೂ ಮುನ್ನವೇ ಅವರನ್ನು ಬಿಜೆಪಿಗೆ ಕರೆತರಿಸಿ ಮತ್ತೆ ಸೂಕ್ತ ಸ್ಥಾನಮಾನ ನೀಡೋದು ಮತ್ತು ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಪ್ಲಾನ್ ರೂಪಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡ ಎಚ್ಚರಿಕೆ ವಹಿಸಿದ್ದಾರೆ.ಇನ್ನು ಮುಂದಿನ ವಾರ ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜೊತೆಗೆ ಲಕ್ಷ್ಮಣ ಸವದಿ ಮಾತುಕತೆ ನಡೆಸುವ ವೇಳೆ ಕೆಲವು ಬೇಡಿಕೆಗಳನ್ನು ಈಡೇರಿಸಲು ಲಕ್ಷ್ಮಣ ಸವದಿ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2024-02-15 11:24:39 |
ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ನಿವಾಸಿ ಅತ್ತಾವುಲ್ಲಾ (22) ಮೃತ ಯುವಕ.ಅತ್ತಾವುಲ್ಲಾ ರವರ ಸಂಬಂಧಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಅತ್ತಾವುಲ್ಲಾ ತಾಯಿಯೊಂದಿಗೆ ವಾಸವಾಗಿದ್ದು, ಮಡಂತ್ಯಾರಿನ ಕಾಲೇಜಿನಲ್ಲಿ ದ್ವಿತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು.
ಅತ್ತಾವುಲ್ಲಾ ಸುಮಾರು 1 ½ ತಿಂಗಳಿಂದ ಕಾಲೇಜಿಗೆ ಹೋಗದೇ ಮನೆಯಲ್ಲಿಯೇ ಇದ್ದು, ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆ.14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸು ಮನೆಗೆ ಬಂದು ನೋಡಿದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅತ್ತಾವುಲ್ಲಾ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ., ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಹೊರತು ಆತನ ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಯುಡಿಆರ್ ನಂಬ್ರ 03/2024 ಕಲಂ:174 CRPC ರಂತೆ ಪ್ರಕರಣ ದಾಖಲಾಗಿದೆ.
Posted by Vidyamaana on 2024-06-11 11:09:57 |
ಬೆಂಗಳೂರು :ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆದ ಘಟನೆಗೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ.
ಇನ್ನೂ ಕೊಲೆಯಾದ ರೇಣುಕಾ ಸ್ವಾಮಿ ಚಿತ್ರದುರ್ಗದ ಬಡಾವಣೆಯೊಂದರಲ್ಲಿ ವಾಸವಾಗಿದ್ದರು.ಅವರ ತಂದೆ ನಿವೃತ್ತ ಸರ್ಕಾರಿ ಅಧಿಕಾರಿ.ಇವರಿಗೆ ಕಳೆದ ವರ್ಷವಷ್ಟೇ ಮದುವೆಯಾಗಿದ್ದು ಹೆಂಡತಿ ಗರ್ಭಿಣಿಯಾಗಿದ್ದಾರೆ.ರೇಣುಕಾ ಸ್ವಾಮಿ ಮೆಡಿಕಲ್ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
Posted by Vidyamaana on 2023-11-10 07:26:53 |
ಮಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದೆ ಊರಿಗೆ ಬರಲು ಬಸ್ಸು, ರೈಲುಗಳಲ್ಲಿ ಟಿಕೆಟು ಸಿಗುತ್ತಿಲ್ಲ ಎಂದು ಟೆನ್ಷನ್ ಮಾಡುತ್ತಿರುವವರಿಗೆ ರೈಲ್ವೇ ಇಲಾಖೆ ಒಂದು ಗುಡ್ ನ್ಯೂಸ್ ನೀಡಿದೆ. ಹಬ್ಬದ ಪ್ರಯುಕ್ತ ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲೊಂದನ್ನು ಇಲಾಖೆ ಬಿಟ್ಟಿದ್ದು ಅದರ ವೇಳಾಪಟ್ಟಿ ಇಂತಿದೆ.
ಬೆಳಕಿನ ಹಬ್ಬದ ಈ ವಿಶೇಷ ರೈಲು ಓಡಾಟದ ವೇಳಾಪಟ್ಟಿ ಇಂತಿದೆ.
• ದಿನಾಂಕ 10/11/2023 ಶುಕ್ರವಾರ ರೈಲು ಸಂಖ್ಯೆ 07303 ಮೈಸೂರು ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು ಮೈಸೂರಿನಿಂದ ರಾತ್ರಿ 8:30ಕ್ಕೆ ಹೊರಟು ರಾತ್ರಿ 11:25ಕ್ಕೆ ಬೆಂಗಳೂರು ತಲುಪಲಿದೆ. ಅಲ್ಲಿಂದ ರಾತ್ರಿ 11:30ಕ್ಕೆ ಹೊರಟು ಮರುದಿನ ಅಂದರೆ ದಿನಾಂಕ 11/11/2023 ಶನಿವಾರದಂದು ಬೆಳಗ್ಗೆ 9:40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
• ದಿನಾಂಕ 14/11/2023 ಬುಧವಾರ ರೈಲು ಸಂಖ್ಯೆ 07304 ಮಂಗಳೂರು ಜಂಕ್ಷನ್-ಮೈಸೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು ಮಂಗಳೂರು ಜಂಕ್ಷನ್ನಿಂದ ಸಂಜೆ 5:15ಕ್ಕೆ ಹೊರಟು ಮರುದಿನ ಬೆಳಗ್ಗೆ 3:45ಕ್ಕೆ ಬೆಂಗಳೂರು ತಲುಪಲಿದೆ. ಅಲ್ಲಿಂದ ಬೆಳಗ್ಗೆ 3:50ಕ್ಕೆ ಹೊರಡುವ ರೈಲು ಬೆಳಗ್ಗೆ 7:30ಕ್ಕೆ ಹುಬ್ಬಳ್ಳಿ ತಲುಪಲಿದೆ.
ಈ ರೈಲಿಗೆ ಬಂಟ್ವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯರೋಡ್, ಸಕಲೇಶಪುರ, ಹಾಸನ ಜಂಕ್ಷನ್, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಕುಣಿಗಲ್, ನೆಲಮಂಗಲ, ಯಶವಂತಪುರ, ಬೆಂಗಳೂರು, ಕೆಂಗೇರಿ, ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.
ಈ ರೈಲಿನಲ್ಲಿ ಜನರಲ್, ಸ್ಲೀಪರ್ ಕ್ಲಾಸ್, 3 ಟೈರ್ ಎಸಿ, 2 ಟೈರ್ ಎಸಿ ಹಾಗೂ ಪ್ರಥಮ ದರ್ಜೆಯ ಕ್ಯಾಬಿನ್ ಕೋಚ್ಗಳು ಇರಲಿದೆ. ತಮ್ಮ ಕುಟುಂಬ ಸದಸ್ಯರೊಂದಿಗೆ ಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳಲು ಬಯಸುವವರು ಈ ವಿಶೇಷ ರೈಲಿನ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿರುತ್ತದೆ.
Posted by Vidyamaana on 2024-03-23 14:29:07 |
ಮಂಗಳೂರು, ಮಾ.23: ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪ್ಪಚ್ವಿಯಾದ ಘಟನೆ ನಂತೂರಿನಲ್ಲಿ ತಡರಾತ್ರಿ ಸಂಭವಿಸಿದ್ದು ಭೀಕರ ರಸ್ತೆ ಅಪಘಾತಕ್ಕೆ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಬಲಿಯಾಗಿದ್ದಾನೆ.
ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಸಾವನ್ನಪ್ಪಿರುವ ಯುವಕ. ಶಮಿತ್ ನಿನ್ನೆ ರಾತ್ರಿ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಯಾವುದೆಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಬೆಳಗ್ಗೆ ಜೆಸಿಬಿ ಮೂಲಕ ಕಾರನ್ನು ತೆರವುಗೊಳಿಸಲಾಗಿತ್ತು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಲಿತಾ ಸುಂದರ್ ಅವರು ಬಿಜೆಪಿಯ ಹಿರಿಯ ನಾಯಕಿಯಾಗಿದ್ದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಆಶೀರ್ವಾದ್ ಕಾಂಪ್ಲೆಕ್ಸ್ ಹೆಸರಿನ ಬೃಹತ್ ವಾಣಿಜ್ಯ ಕಟ್ಟಡ ಮತ್ತು ಹೊಟೇಲ್ ಹೊಂದಿದ್ದಾರೆ. ಲಲಿತಾ ಅವರ ಏಕೈಕ ಮಗ ಸಂತೋಷ್ ಯಾನೆ ಸಂತು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಮೊಮ್ಮಗ ಶಮಿತ್ ಬಾಲ್ಯದಿಂದಲೇ ತಾಯಿ, ಅಜ್ಜಿಯ ಆರೈಕೆಯಲ್ಲಿ ಬೆಳೆದಿದ್ದ. ಶಮಿತ್ ಮದುವೆ ಮಾಡಲು ವಧುವಿನ ಅನ್ವೇಷಣೆಯನ್ನೂ ಪೋಷಕರು ನಡೆಸುತ್ತಿದ್ದರು.
ಲಲಿತಾ ಸುಂದರ್ ಅವರು ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ನ ಕೊರಗಜ್ಜ ಸೇವಾ ಸಮಿತಿಯ ಗೌರವಾಧ್ಯಕ್ಷೆ ಆಗಿದ್ದು ಕುಟುಂಬವು ಕಳೆದ ಎರಡು ವರುಷದ ಹಿಂದೆ ಕೊರಗಜ್ಜನಿಗೆ ಬೆಳ್ಳಿಯ ಮುಟ್ಟಾಲೆ, ದಂಟೆಯನ್ನ ಹರಕೆ ರೂಪದಲ್ಲಿ ಸಮರ್ಪಿಸಿತ್ತು. ಶಮಿತ್ ಅವರ ಅಕಾಲಿಕ ಅಗಲಿಕೆಗೆ ಬಿಜೆಪಿ ಜಿಲ್ಲಾ ಮತ್ತು ಮಂಗಳೂರು ಮಂಡಲದ ನಾಯಕರು ಶೋಕ ವ್ಯಕ್ತ ಪಡಿಸಿದ್ದಾರೆ. ಮೃತ ಶಮಿತ್ ತಾಯಿ, ಸಹೋದರಿ, ಅಜ್ಜಿಯನ್ನು ಅಗಲಿದ್ದಾರೆ.
Posted by Vidyamaana on 2024-04-10 06:19:14 |
ನವದೆಹಲಿ :ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ.ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಭದ್ರತೆ ನೀಡಿದೆ