ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಬೆಳ್ತಂಗಡಿ ತಾಲೂಕಿನ ಜನಪ್ರತಿನಿಧಿಗಳಗೆ ಯಾಕಿಷ್ಟು ನಿರ್ಲಕ್ಷ್ಯ?

Posted by Vidyamaana on 2024-03-25 13:25:25 |

Share: | | | | |


ಬೆಳ್ತಂಗಡಿ ತಾಲೂಕಿನ ಜನಪ್ರತಿನಿಧಿಗಳಗೆ ಯಾಕಿಷ್ಟು ನಿರ್ಲಕ್ಷ್ಯ?

ಬೆಳ್ತಂಗಡಿ: ಕಳೆದ ಎರಡು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಕುಚ್ಚಂಗಿ ಕೆರೆಯಲ್ಲಿ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಕಾರಿನಲ್ಲಿ  ಬೆಳ್ತಂಗಡಿಯ ಮೂವರ ಶವ ಪತ್ತೆಯಾಗಿತ್ತು.  ಈ ಸುದ್ಧಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಅದರೆ ಬೆಳ್ತಂಗಡಿಯ ಜನಪ್ರತಿನಿಧಿಗಳಿಗೆ ಮಾತ್ರ ಇನ್ನೂ ಈ ವಿಚಾರ ತಿಳಿದಂತಿಲ್ಲ . ಯಾಕೆಂದರೆ ಮೃತ ಮನೆಯವರಿಗೆ ಬಂದು ಸಾಂತ್ವನ ಹೇಳಿ ಧ್ಯೈರ್ಯ ಹೇಳುವಷ್ಟೂ ವ್ಯವಧಾನ ಅವರಿಗೆ ಇಲ್ಲದಾಗಿದೆ ಎಂದು ಮೃತ ಮನೆಯವರ ಕುಟುಂಬಸ್ಥರು ಹಾಗೂ ನೆರೆ ಹೊರೆಯವರು ಬೇಸರ ವ್ಯಕ್ತಪಡಿಸಿದ್ದಾರೆ. 

ಉಜಿರೆ ಕುಂಟಿನಿ ನಿವಾಸಿ ಸಾಹುಲ್ ಹಮೀದ್ ಅವರ ನೆರೆಯ ವ್ಯಕ್ತಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿ ಇಡೀ ಸಮಾಜ ಈ ಘಟನೆಯಿಂದ ನೊಂದಿದೆ. ಮೃತ ಶರೀರವನ್ನು ಅತೀ ಕ್ರೂರ ರೀತಿಯಲ್ಲಿ ಕೊಂದು ಸುಟ್ಟು ಹಾಕಿದ ಪರಿಣಾಮ ಮೂವರ ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಇದೆ. ಕುಟುಂಬಸ್ಥರು ಇದರ ಬಗ್ಗೆ ಯಾರಲ್ಲಿ ಹೇಳುವುದು ನಮಗೆ ನ್ಯಾಯ ದೊರಕಿಸಿಕೊಡುವವರು ಯಾರು ಎಂದು ಕಣ್ಣೀರು ಸುರಿಸುತಿದ್ದರೂ ಬೆಳ್ತಂಗಡಿ ತಾಲೂಕಿನ ಶಾಸಕರು ಸೇರಿದಂತೆ ಯಾರೂ ಕೂಡ ಮನೆಯವರಿಗೆ ಧೈರ್ಯ ತುಂಬುವ ಕೆಲಸ ಮಾಡದಿರುವುದು ತುಂಬಾ ನೋವನ್ನುಂಟು ಮಾಡಿದೆ ಎಂದಿದ್ದಾರೆ.

ಮದ್ದಡ್ಕದ ಇಸಾಕ್ ಅವರ ಕುಟುಂಬಿಕರು ಬೇಸರ ವ್ಯಕ್ತಪಡಿಸಿ ಹೊರ ತಾಲೂಕಿನ ಕೆಲವು ಜನಪ್ರತಿನಿಧಿಗಳನ್ನು ಹೊರತು ಪಡಿಸಿ ಬೆಳ್ತಂಗಡಿಯ  ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಯಾವುದೇ ಜನಪ್ರತಿನಿಧಿಗಳು ಖಂಡಿಸುವ ಅಥವಾ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುವಂತಹ ಒಂದು ಹೇಳಿಕೆ ನೀಡದಿರುವುದು ಬೇಸರ ತರಿಸಿದೆ. 

ಮಸಲ್ಮಾನರೆಂಬ ಕಾರಣಕ್ಕೆ ಈ ರೀತಿಯ ನಿರ್ಲಕ್ಷ್ಯವೇ ಯಾರಿಗೂ ಈ ರೀತಿ ಮಾಡಬಾರದು ಎಲ್ಲಾ ವಿಚಾರದಲ್ಲಿ ರಾಜಕೀಯ ಯೋಚನೆ ಮಾಡಬಾರದು ಕೆಲವೊಮ್ಮೆ ರಾಜಕೀಯ ಮರೆತು ಮಾನವೀಯತೆಯತ್ತ ಯೋಚನೆ ಮಾಡಬೇಕಾಗಿದೆ. 

ಶಿರ್ಲಾಲಿನ ಸಿದ್ದಿಕ್ ಅವರ ತಂದೆ ಮಾತನಾಡಿ ನನ್ನ ಮಗ ಇನ್ನು ಬರುವುದಿಲ್ಲ. ನಮ್ಮ ತಾಲೂಕಿನ ಯಾವನೇ ಒಬ್ಬ ಜನಪ್ರತಿನಿಧಿ ನಮಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಯಾಕೆಂದರೆ ನಾವು ಬಡವರು ಎಂಬ ಕಾರಣಕ್ಕೊ ಅಥವಾ ಇನ್ನೇನಾದರೂ ಕಾರಣವೋ ಗೊತ್ತಿಲ್ಲ ಎಂದು ದುಃಖಿಸಿದರು.

ಪುತ್ತೂರು : ಬೈಕ್-ಸ್ಕೂಟಿ ನಡುವೆ ಅಪಘಾತ : ಇಬ್ಬರಿಗೆ ಗಾಯ.

Posted by Vidyamaana on 2024-03-28 14:24:38 |

Share: | | | | |


ಪುತ್ತೂರು : ಬೈಕ್-ಸ್ಕೂಟಿ ನಡುವೆ ಅಪಘಾತ : ಇಬ್ಬರಿಗೆ ಗಾಯ.

ಪುತ್ತೂರು : ಸ್ಕೂಟಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆಯಲ್ಲಿ ನಡೆದಿದೆ.


ಕರಾವಳಿಯ ಸಾರಿಗೆ ಕ್ಷೇತ್ರದಲ್ಲಿ 50 ವರ್ಷಗಳ ಬಸ್ ಸಂಚಾರ ಸೇವೆಯ ಸಾಧನೆ

Posted by Vidyamaana on 2023-10-01 21:28:45 |

Share: | | | | |


ಕರಾವಳಿಯ ಸಾರಿಗೆ ಕ್ಷೇತ್ರದಲ್ಲಿ 50 ವರ್ಷಗಳ ಬಸ್ ಸಂಚಾರ ಸೇವೆಯ ಸಾಧನೆ

ಮಂಗಳೂರು, ಅ.1: ಮಂಗಳೂರಿನಲ್ಲಿ ಮಹೇಶ್ ಬಸ್ ಟ್ರಾವೆಲ್ಸ್ ಉದ್ಯಮದ ಮೂಲಕ ಹೆಸರು ಮಾಡಿದ್ದ ಪ್ರಕಾಶ್ ಶೇಖ (43) ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 


50 ವರ್ಷಗಳ ಹಿಂದೆಯೇ 1972ರ ವೇಳೆಗೆ ಜಯರಾಮ ಶೇಖ ಅವರು ಮಹೇಶ್ ಬಸ್ ಟ್ರಾವೆಲ್ಸ್ ಉದ್ಯಮ ಆರಂಭಿಸಿದ್ದರು. ಮೊದಲಿಗೆ ಜ್ಯೋತಿ ಎಂದಿದ್ದ ಹೆಸರನ್ನು ಬಳಿಕ ಎರಡನೇ ಮಗ ಮಹೇಶ್ ಹೆಸರಿಗೆ ಬದಲಿಸಿದ್ದರು.‌  ಆರಂಭದಿಂದಲೇ ಮಂಗಳೂರಿನಿಂದ ಕೊಣಾಜೆ ರೂಟಿನಲ್ಲಿ ಬಸ್ ಉದ್ಯಮ ಆರಂಭಿಸಿದ್ದರು. ಆನಂತರ ಇತರ ರೂಟಿನಲ್ಲೂ ಮಹೇಶ್ ಬಸ್ ಸಂಚಾರ ಆರಂಭಿಸಿತ್ತು. ಮೂರನೇ ಮಗ ಪ್ರಕಾಶ್ ಶೇಖ ಉದ್ಯಮದಲ್ಲಿ ತೊಡಗಿಸಿಕೊಂಡ ಬಳಿಕ ವ್ಯವಹಾರ ವಿಸ್ತರಣೆಯಾಗಿತ್ತು.‌


ಕಳೆದ 15 ವರ್ಷಗಳಲ್ಲಿ ಮಹೇಶ್ ಹೆಸರಲ್ಲಿ ಟೂರಿಸ್ಟ್ ಉದ್ಯಮ, ಟಿಪ್ಪರ್, ಸಿಮೆಂಟ್ ಮಿಕ್ಸರ್ ಲಾರಿ ಹೀಗೆ ಹಲವಾರು ವ್ಯವಹಾರ ಮಾಡಿಕೊಂಡಿದ್ದರು. ಹಿರಿಯ ಪುತ್ರರಿಬ್ಬರು ಬೆಂಗಳೂರು, ಮುಂಬೈನಲ್ಲಿ ನೆಲೆಸಿದ ಬಳಿಕ ಪೂರ್ತಿ ಬಸ್ ಉದ್ಯಮದ ವ್ಯವಹಾರವನ್ನು ಪ್ರಕಾಶ್ ಅವರೇ ನೋಡಿಕೊಂಡಿದ್ದರು. ಆಪ್ತರ ಪ್ರಕಾರ, ನೂರಕ್ಕೂ ಹೆಚ್ಚು ಬಸ್ ಗಳು ಅವರ ಒಡೆತನದಲ್ಲಿದ್ದವು. ಹಲವಾರು ಬಸ್ ಗಳನ್ನು ಬೇರೆ ಬೇರೆ ಕಡೆ ಖಾಸಗಿಯಾಗಿ ಕಾಂಟ್ರಾಕ್ಟ್ ಕೊಟ್ಟಿದ್ದರು. ಪ್ರಕಾಶ್ ಅವರು ಪತ್ನಿ ಮಕ್ಕಳ ಜೊತೆಗೆ ಕದ್ರಿಯ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. 80ರ ಹರೆಯದ ಜಯರಾಮ ಶೇಖ ಕುಲಶೇಖರದ ನಿವಾಸದಲ್ಲಿಯೇ ನೆಲೆಸಿದ್ದಾರೆ. 


ಇಂದು ಬೆಳಗ್ಗೆ ಹೊರಗೆ ಹೋಗಿ ಬಂದಿದ್ದ ಪ್ರಕಾಶ್ ಮತ್ತೆ ಬೆಡ್ ರೂಮಿಗೆ ತೆರಳಿದ್ದರು. ಮಧ್ಯಾಹ್ನ ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಪತ್ನಿ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.

ಬಸ್ ಮಾಲಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಜೀಜ್ ಪರ್ತಿಪ್ಪಾಡಿ ಪ್ರತಿಕ್ರಿಯಿಸಿ, ಪ್ರಕಾಶ್ ತುಂಬ ಒಳ್ಳೆಯ ವ್ಯಕ್ತಿಯಾಗಿದ್ದರು. ಅವರ ತಂದೆಯ ಕಾಲದಿಂದಲೂ ಒಡನಾಟ ಇದೆ. ಜಿಲ್ಲಾ ಬಸ್ ಮಾಲಕರ ಸಂಘ ಗಾಢ ಶೋಕ ವ್ಯಕ್ತಪಡಿಸುತ್ತದೆ ಎಂದಿದ್ದಾರೆ


ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್‌, ಮಾಜಿ ಅಧ್ಯಕ್ಷರಾದ ಜಯಶೀಲ ಅಡ್ಯಂತಾಯ, ದಿಲ್‌ರಾಜ್‌ ಆಳ್ವ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.


ಅಂತ್ಯಕ್ರಿಯೆ ಅ.2ರಂದು ಸಂಜೆ 4ಕ್ಕೆ ಕುಲಶೇಖರದಲ್ಲಿರುವ ಅವರ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರ ದಿಂದ ಕೋವಿಡ್ ಸೋಂಕಿ ನಿಂದ ಮೃತಪಟ್ಟವರ ಅಂತ್ಯ ಕ್ರಿಯೆ ಬಗ್ಗೆ ಮಹತ್ವದ ಆದೇಶ

Posted by Vidyamaana on 2024-01-11 16:45:44 |

Share: | | | | |


ರಾಜ್ಯ ಸರ್ಕಾರ ದಿಂದ ಕೋವಿಡ್ ಸೋಂಕಿ ನಿಂದ ಮೃತಪಟ್ಟವರ ಅಂತ್ಯ ಕ್ರಿಯೆ ಬಗ್ಗೆ ಮಹತ್ವದ ಆದೇಶ

ಬೆಂಗಳೂರು : ಕೋವಿಡ್-19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವನ್ನು ಹೊರಡಿಸಿದೆ.ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಗಳ ಅನ್ವಯ ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ / ಸ್ಮಶಾನ/ ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಿದೆ.ಮುಂದುವರೆದು, ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ನಡೆಸಲು ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಚಿತಾಗಾರ / ಸ್ಮಶಾನ/ ರುದ್ರಭೂಮಿಗಳಲ್ಲಿ ಅಂತ್ಯಕ್ರಿಯೆಗೆ ತರುವ ಮೃತದೇಹಗಳನ್ನು ಚಿತಾಗಾರ / ಸ್ಮಶಾನದ ಸಿಬ್ಬಂದಿಯು ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು (N -95 ಮಾಸ್ಕ್, ಗೊವ್ ಹಾಗೂ ಪಿಪಿಇ ಕಿಟ್ ಧರಿಸುವುದು ಮತ್ತು ಅಂತ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ವಿಲೇವಾರಿ ಮಾಡುವುದು) ಅಂತ್ಯಕ್ರಿಯೆಯನ್ನು ನಡೆಸಲು ತಿಳಿಸುವಂತೆ ಈ ಮೂಲಕ ಸೂಚಿಸಿದೆ.


ಈ ನಿಟ್ಟಿನಲ್ಲಿ, ಬಿ, ಬಿ.ಎಂ.ಪಿ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಡಳಿತಗಳು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದೆ.

ಐ.ಎ.ಎಸ್ ಪರೀಕ್ಷೆ: ಯೂನಿವರ್ಸಲ್ ಕೋಚಿಂಗಿನ ವಿದ್ಯಾರ್ಥಿನಿಗೆ 2ನೇ ರ್ಯಾಂಕ್

Posted by Vidyamaana on 2023-05-24 14:01:39 |

Share: | | | | |


ಐ.ಎ.ಎಸ್ ಪರೀಕ್ಷೆ: ಯೂನಿವರ್ಸಲ್ ಕೋಚಿಂಗಿನ ವಿದ್ಯಾರ್ಥಿನಿಗೆ 2ನೇ ರ್ಯಾಂಕ್

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಬಾರಿ 10 ಮಂದಿ ಉತ್ತೀರ್ಣರಾಗಿದ್ದಾರೆ.

ಗರೀಮಾ ಲೋಹಿಯಾ 2ನೇ ಸ್ಥಾನ ಪಡೆದಿದ್ದರೆ, ವೈಷ್ಣವಿ ಪೌಲ್ 62ನೇ ಸ್ಥಾನ, ವಿಶ್ವಜೀತ್ ಸೌರ್ಯನ್ 126ನೇ ಸ್ಥಾನ, ಪಿ.ಶ್ರವಣ್ ಕುಮಾರ್ 222ನೇ ಸ್ಥಾನ, ಶಿವಾಂಗ್ ರಸ್ತೋಗಿ 307ನೇ ಸ್ಥಾನ, ಶುಭ್ರತೋಷ್ ಶರ್ಮ 358 ನೇ ಸ್ಥಾನ, ಸ್ವಸ್ಥಿಕಾ ಆರ್.ಪಿ. 456ನೇ ಸ್ಥಾನ, ಪ್ರಣಯ್ ಕುಮಾರ್ ಸಿಂಗ್ 602ನೇ ಸ್ಥಾನ, ಮನ್ ಪ್ರೀತ್ ಸಿಂಗ್ 616ನೇ ಸ್ಥಾನ ಹಾಗೂ ರಾಮ್ ದೇನಿ ಸಾಯಿನಾಥ್ 743ನೇ ಸ್ಥಾನ ಗಳಿಸಿದ್ದಾರೆ.

23 ವರ್ಷಗಳ ಹಿಂದೆ ಬೆಂಗಳೂರಿನ ವಿಜಯನಗರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಪ್ರಾರಂಭವಾದ ಯೂನಿವರ್ಸಲ್  ಕೋಚಿಂಗ್ ಸೆಂಟರ್ ನಲ್ಲಿ ವ್ಯಾಸಂಗ ಮಾಡಿದ ಸಾವಿರಾರು ಮಂದಿ ಈಗಾಗಲೇ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಈ ಬಾರಿಯೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಂಸ್ಥೆ ಇದೀಗ ಕೆಂಗೇರಿ ಸಮೀಪದ ರಾಮೋಹಳ್ಳಿಯಲ್ಲೂ ಇಂಟಿಗ್ರೇಟೆಡ್ ಪದವಿ ಶಿಕ್ಷಣ ನೀಡುತ್ತಿದೆ ಎಂದು ಸಂಸ್ಥೆಯ ನಿರ್ದೇಶಕ ಉಪೇಂದ್ರ ಶೆಟ್ಟಿ ತಿಳಿಸಿದ್ದಾರೆ.

ಬೆಳ್ಳಾರೆ ಎನ್ಐಎ ದಾಳಿ ಪ್ರಕರಣ ; ಕೇರಳ ಮೂಲದ ಬಿಜು ಅಬ್ರಹಾಂ ನನ್ನು ವಶಕ್ಕೆ ಪಡೆದ ಅಧಿಕಾರಿಗಳು

Posted by Vidyamaana on 2024-03-05 19:50:49 |

Share: | | | | |


ಬೆಳ್ಳಾರೆ ಎನ್ಐಎ ದಾಳಿ ಪ್ರಕರಣ ; ಕೇರಳ ಮೂಲದ ಬಿಜು ಅಬ್ರಹಾಂ ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಮಂಗಳೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರಿಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೇರಳ ಮೂಲದ ಬಿಜು ಅಬ್ರಾಹಂ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು ವಿಚಾರಣೆ ಬಳಿಕ ಸಂಜೆಯ ವೇಳೆಗೆ ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆದೊಯ್ದಿರುವ ಮಾಹಿತಿಯಿದೆ.


ಆರೋಪಿ ಬಿಜು ಅಬ್ರಾಹಂ, ಎಣ್ಮೂರಿನಲ್ಲಿ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿ ಕಳೆದ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜುವನ್ನು ಬಂಧಿಸಲಾಗಿದೆ. ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರೋಪಿಗಳಿಗೆ ಬಿಜು ಅಬ್ರಾಹಂ ಆಶ್ರಯ ನೀಡಿದ್ದ ಎಂಬ ಆರೋಪದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಿಜು ಮನೆಯಲ್ಲಿ ಏಕಾಏಕಿ ದಾಳಿ ನಡೆಸಿ ಶೋಧ ನಡೆಸಿರುವ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದಾರೆ



Leave a Comment: