Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34
ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.
ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
Posted by Vidyamaana on 2023-08-06 09:05:36 |
ಮಂಗಳೂರು: ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೆಂದೂರುವೆಲ್ ನಲ್ಲಿ ನಡೆದಿದೆ.
ಮೋಹನ್ ಅಮೀನ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.ಇವರು ಮಂಗಳೂರಿನಲ್ಲಿ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದರು . ಅಟ್ಲಾಂಟಿಕ್ ಅಪಾರ್ಟ್ಮೆಂಟ್ ನಿಂದ ಹಾರಿ ಸಾವಿಗೆ ಶರಣಾಗಿದ್ದಾರೆ . ಈ ಕುರಿತು ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ
Posted by Vidyamaana on 2023-09-14 17:47:07 |
ನಾಗ್ಪುರ : ಗೆಳತಿ ಅತ್ಯಾಚಾರ ಆರೋಪ ಮಾಡಿದಳೆಂದು ಪ್ರಿಯಕರನೊಬ್ಬ ಫೇಸ್ಬುಕ್ ಲೈವ್ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮನೀಶ್ ಎನ್ನುವ 38 ವರ್ಷದ ವ್ಯಕ್ತಿಗೆ ಈಗಾಗಲೇ ಮದುವೆಯಾಗಿತ್ತು, ಆದರೂ 19 ವರ್ಷದ ಕಾಜಲ್ ಎಂಬುವವಳನ್ನು ಪ್ರೀತಿ ಮಾಡುತ್ತಿದ್ದ. ಸ್ವಲ್ಪ ದಿನ ಕಳೆದ ನಂತರ ಆಕೆ ಆತನ ಮೇಲೆ ಅತ್ಯಾಚಾರ ಆರೋಪ ಮಾಡಿ ತನ್ನ ಕುಟುಂಬದವರ ಜತೆ ಸೇರಿ ಬ್ಲ್ಯಾಕ್ ಮೇಲೆ ಮಾಡಲು ಆರಂಭಿಸಿದ್ದಳು.ಮನೀಶ್ ಮನನೊಂದು ಸೆಪ್ಟೆಂಬರ್ 10 ರಂದು ಫೇಸ್ಬುಕ್ ಲೈವ್ ನಲ್ಲಿ ತನ್ನ ಗೆಳತಿ ಹಾಗೂ ಆಕೆಯ ಕುಟುಂಬದವರು ತನ್ನ ಮೇಲೆ ಅತ್ಯಾಚಾರ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾನೆ, ಮತ್ತವರ ಕುಟುಂಬದವರು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು, ಹಣವನ್ನು ನೀಡಲು ವಿಫಲವಾದರೆ ಆತನ ವಿರುದ್ಧ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆತ ಹೇಳಿದ್ದಾನೆ.
ಸೆಪ್ಟೆಂಬರ್ 6 ರಂದು, ಯುವತಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಾಳೆ ಮತ್ತು ಆಕೆಯ ಕುಟುಂಬ ಸದಸ್ಯರು ಮನೀಷ್ ಜೊತೆ ಓಡಿಹೋದರು ಎಂದು ಆರೋಪಿಸಿದ್ದಾರೆ.ಮದುವೆಯಾಗಿ ಮೂರು ಮಕ್ಕಳ ತಂದೆಯಾಗಿರುವ 38 ವರ್ಷದ ವ್ಯಕ್ತಿ ಕಿರುಕುಳ ತಾಳಲಾರದೆ ನಾಗಪುರದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆ ವ್ಯಕ್ತಿ ತಾನು ಯುವತಿ ಜತೆಗೆ ದೈಹಿಕ ಸಂಪರ್ಕ ಹೊಂದಿಲ್ಲ ಎಂದು ಲೈವ್ನಲ್ಲಿ ಹೇಳಿದ್ದಾನೆ. ಫೇಸ್ಬುಕ್ ಲೈವ್ ವಿಡಿಯೋ ಹೊರಬಿದ್ದ ನಂತರ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.ವ್ಯಕ್ತಿಯ ಶವವನ್ನು ನದಿಯಿಂದ ವಶಪಡಿಸಿಕೊಳ್ಳಲಾಗಿದ್ದು, ನಾಗಪುರದ ಕಲಮನ ಪೊಲೀಸರು ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.
Posted by Vidyamaana on 2023-10-11 08:58:36 |
ಬೆಂಗಳೂರು ;- ಪ್ರದೀಪ್ ಈಶ್ವರ್ ಅವರು ಬಿಗ್ಬಾಸ್ ಮನೆಯೊಳಗೆ ಪ್ರವೇಶಿಸಿದರ ಬಗ್ಗೆ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ಈ ಸಂಬಂಧ ಮಾತನಾಡಿದ ಅವರು,ಬಿಗ್ ಬಾಸ್ ಕನ್ನಡಕ್ಕೆ ಪ್ರವೇಶಿಸುವುದು ಅವರ ವೈಯಕ್ತಿಕ ಆಯ್ಕೆಯಾಗಿದ್ದು, ಹಾಗೆ ಮಾಡುವುದನ್ನು ತಡೆಯುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದರು.ಇನ್ನೂ ಬಿಗ್ಬಾಸ್ ಮನೆಗೆ ಅತಿಥಿಯಾಗಿ ಬಂದ ಶಾಸಕ ಪ್ರದೀಪ್ ಈಶ್ವರ್ಗೆ ರಿಯಾಲಿಟಿ ಶೋ ತಂಡ ಹಣವನ್ನು ಕೊಟ್ಟಿದೆ. ಬಿಗ್ಬಾಸ್ನಿಂದ ಸಿಕ್ಕ ಹಣವನ್ನು ಪ್ರದೀಪ್ ಅನಾಥಾಶ್ರಮಕ್ಕೆ ನೀಡುವುದಾಗಿ ಹೇಳಿದರು. ಸದ್ಯ ಶಾಸಕ ಮನೆಯೊಳಗೆ ಹೋದ ನಂತರ ಮತ್ತು ಹೊರಬಂದ ನಂತರವೂ ಸಾಕಷ್ಟು ಟ್ರೋಲ್ ಮತ್ತು ವಿವಾದಗಳಿಗೆ ಗುರಿಯಾಗಿದ್ದಾರೆ.
Posted by Vidyamaana on 2023-03-05 06:54:10 |
ಪುತ್ತೂರು: ಬೆಳ್ಳಾರೆ ನಿವಾಸಿ, ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ರವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರಲ್ಲಿ ಓರ್ವನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಮಡಿಕೇರಿಯ ಎಂ.ಎಚ್. ತುಫೈಲ್ ನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಆತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ.
ತುಫೈಲ್ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್.ಐ.ಎ ಘೋಷಣೆ ಮಾಡಿತ್ತು. ಅಷ್ಟೇ ಅಲ್ಲದೇ ಆರೋಪಿಗಳ ವಿರುದ್ಧ ಲುಕೌಟ್ ನೋಟೀಸ್ ಜಾರಿ ಮಾಡಲಾಗಿತ್ತು.
Posted by Vidyamaana on 2024-02-05 15:54:33 |
ಪುತ್ತೂರು: ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ.6ರಂದು ಸಾಯಂಕಾಲ 5.30ರಿಂದ ಉಚಿತ ಲೇಸರ್ ಸ್ಟೋನ್ ಕ್ಯಾಂಪ್ ನಡೆಯಲಿದೆ.
ಖ್ಯಾತ ಮೂತ್ರಶಾಸ್ತ್ರಜ್ಞ ಡಾ. ಅಭೀಷ್ ಹೆಗ್ಡೆರವರು ತಪಾಸಣೆ ನಡೆಸಲಿದ್ದಾರೆ. ಈ ಆನ್ ಲೈನ್ ನ್ಯೂಸ್ ಸಂದರ್ಭದಲ್ಲಿ ಎಲ್ಲಾ ರೀತಿಯ ಮೂತ್ರ ಕಲ್ಲಿನ ಮತ್ತು ಪ್ರಾಸ್ಟೇಟ್ನ ಲೇಸರ್ ಚಿಕಿತ್ಸೆಗೆ ಸಂಬಂದಪಟ್ಟ ತಪಾಸಣೆ ನಡೆಯಲಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನೋಂದಾವಣೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9449991115, 9188656671ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Posted by Vidyamaana on 2024-05-02 20:17:25 |
ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ.
ಘಟನೆಯಿಂದ ಮಂಗಳೂರು - ಪುತ್ತೂರು ಹಾಗೂ ಪುತ್ತೂರು - ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು.