ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ವಿದ್ಯುತ್ ಶಾಕ್ ಹೊಡೆದು ನವವಿವಾಹಿತ ಲೈನ್ ಮ್ಯಾನ್ ದುರಂತ ಸಾವು! ಪತಿಯ ಸಾವು ಕಂಡು ಅಘಾತಕ್ಕೊಳಗಾದ ಪತ್ನಿ

Posted by Vidyamaana on 2023-10-04 12:00:24 |

Share: | | | | |


ವಿದ್ಯುತ್ ಶಾಕ್ ಹೊಡೆದು ನವವಿವಾಹಿತ ಲೈನ್ ಮ್ಯಾನ್ ದುರಂತ ಸಾವು! ಪತಿಯ ಸಾವು ಕಂಡು ಅಘಾತಕ್ಕೊಳಗಾದ ಪತ್ನಿ

ಚಿಕ್ಕಬಳ್ಳಾಪುರ: ಬೆಸ್ಕಾಂನಲ್ಲಿ ಕರ್ತವ್ಯನಿರತ ಲೈನ್ ಮ್ಯಾನ್ ವಿದ್ಯುತ್ ಜಂಪ್ ಕಟ್ ಆಗಿರುವುನ್ನು ಸರಿಪಡಿಸಲು ಹೋಗಿ ವಿದ್ಯುತ್ ಶಾಕ್ ನಿಂದ ದುರಂತ ಸಾವು ಕಂಡಿರುವ ಘಟನೆ ನಡೆದಿದೆ. ಪತಿಯ ಸಾವು ಕಂಡ ಆತನ ಪತ್ನಿ ನವವಿವಾಹಿತೆ ಅಘಾತಕ್ಕೊಳಗಾಗಿದ್ದಾರೆ. ಆತನ ಹೆಸರು ವಿವೇಕ್ ಪಾಟೀಲ್, ಬೆಳಗಾವಿ ಜಿಲ್ಲೆ ರಾಯಬಾಗ್ ತಾಲೂಕಿನ ಉಬ್ಬರವಾಡಿ ನಿವಾಸಿ. ಚಿಕ್ಕಬಳ್ಳಾಪುರ ಜಿಲ್ಲಾ ಬೆಸ್ಕಾಂ ವಿಭಾಗದಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡ್ತಿದ್ದ. ನಿನ್ನೆ ನಂದಿ ವಿಭಾಗದ ಕೋಳವನಹಳ್ಳಿ ಬೊಮ್ಮನಹಳ್ಳಿ ಮಾರ್ಗದಲ್ಲಿ ತ್ರೀ ಫೇಸ್ ಮಾರ್ಗದಲ್ಲಿ ಜಂಪ್ ಕಟ್ ಆಗಿದೆ ಅಂತ ಜಂಪ್ ಹಾಕಲು ವಿದ್ಯುತ್ ಕಂಬ ಹತ್ತಿದ್ದಾನೆ. ಆಗ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲಿ ಮೃತಪಟ್ಟಿದ್ದಾನೆ ಎಂದು ಆನಂದಕುಮಾರ್. ಕೆ ಕಾರ್ಯಪಾಲಕ ಇಂಜಿನಿಯರ್, ಚಿಕ್ಕಬಳ್ಳಾಪುರ ಬೆಸ್ಕಾಂ ಮಾಹಿತಿ ನೀಡಿದ್ದಾರೆ.ವಿವೇಕ್ ಪಾಟೀಲ್ ಮಾರ್ಗದಾಳಾಗಿದ್ದು ನಿನ್ನೆ ಸಂಜೆ ಜಂಪ್ ಹಾಕುವಾಗ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ಮಾರ್ಗದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿಲ್ಲ. ಆದರೂ ಜಂಪ್ ಹಾಕಲು ಮುಂದಾದಾಗ ಘಟನೆ ನಡೆದಿದೆ. ವಿವೇಕ್ ಪಾಟೀಲ್ ಇತ್ತಿಚಿಗೆ ಮದುವೆಯಾಗಿದ್ದು ಪತ್ನಿಯನ್ನು ಚಿಕ್ಕಬಳ್ಳಾಪುರದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಮದುವೆಯಾಗಿ ವರ್ಷದೊಳಗೆ ಪತಿ ಕಳೆದುಕೊಂಡಿರುವ ವಿವೇಕ್ ಪತ್ನಿ ವರ್ಷಾ, ಗಂಡನನ್ನು ನೆನೆದು ಆಘಾತಕ್ಕೊಳಗಾಗಿದ್ದಾರೆ.


ಅಸಲಿಗೆ ಜಂಪ್ ಕಟ್ ಆಗಿರುವ ಸ್ಥಳ ಬೇರೊಬ್ಬ ಮಾರ್ಗದಾಳುವಿಗೆ ಸಂಬಂಧಿಸಿದ್ದು. ಆತ ಅನಾರೋಗ್ಯದಿಂದಿರುವ ಹಿನ್ನೆಲೆ ಮಾರ್ಗದಾಳು ವಿವೇಕ್ ಸಂಬಂಧಿಸಿದ ಮಾರ್ಗದ ವಿದ್ಯುತ್ ಸ್ಥಗಿತಗೊಳಿಸದೆ ಹಾಗೂ ಮುಂಜಾಗ್ರತೆ ಕೈಗೊಳ್ಳದೆ ಕರ್ತವ್ಯ ನಿರ್ವಹಣೆಗೆ ಮುಂದಾಗಿದ್ದೇ ಆತನ ಸಾವಿಗೆ ಕಾರಣ ಎನ್ನಲಾಗಿದೆ. ನಂದಿಗಿರಿಧಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.ಕೋಲಾರದ ಇಟಿಸಿಎಂ ವೃತ್ತದಲ್ಲಿ ಸಾರ್ವಜನಿಕವಾಗಿ ಕತ್ತು ಕೊಯ್ದುಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ರೆಹಮತ್ ಉಲ್ಲಾ ಬೇಗ್ (35) ಕತ್ತು ಕೊಯ್ದುಕೊಂಡು ಮೃತಪಟ್ಟ ವ್ಯಕ್ತಿ. ರೆಹಮತ್, ಕೋಲಾರ ಜಿಲ್ಲೆ ಕೆಜಿಎಫ್​ ತಾಲೂಕಿನ ಬೇತಮಂಗಲ ನಿವಾಸಿಯಾಗಿದ್ದು, ಗ್ಯಾಸ್ ಸ್ಟವ್ ರಿಪೇರಿ ಕೆಲಸ ಮಾಡಿಕೊಂಡಿದ್ದ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರಿಂದ ಕತ್ತು ಕೊಯ್ದುಕೊಂಡಿದ್ದ ರೆಹಮತ್ ಉಲ್ಲಾ ಬೇಗ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.10ಕ್ಕೆ ಎಸ್‌ಎಸ್‌ಎಫ್ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನ: ಸಿಎಂ ಸಿದ್ದರಾಮಯ್ಯ ಭಾಗಿ

Posted by Vidyamaana on 2023-09-09 07:27:01 |

Share: | | | | |


ಸೆ.10ಕ್ಕೆ ಎಸ್‌ಎಸ್‌ಎಫ್ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನ: ಸಿಎಂ ಸಿದ್ದರಾಮಯ್ಯ ಭಾಗಿ

ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್‌ಎಸ್‌ಎಫ್) 50ನೇ ವರ್ಷಾಚರಣೆಯ ಅಂಗವಾಗಿ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನವನ್ನು ಇದೇ 10ರಂದು ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಆಯೋಜಿಸಿದೆಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಸ್‌ಎಫ್‌ ರಾಜ್ಯ ಘಟಕದ ಅಧ್ಯಕ್ಷ ಸುಫ್ಯಾನ್ ಸಖಾಫಿ, ‘ಎಸ್‌ಎಸ್‌ಎಫ್‌ ರಾಷ್ಟ್ರೀಯ ಸಮಿತಿ ಆಯೋಜಿಸಿರುವ ಸಂವಿಧಾನ ಯಾತ್ರೆ ಕಾಶ್ಮೀರದಿಂದ ಆರಂಭವಾಗಿದೆ. ಈ ಯಾತ್ರೆಯ ಸಮಾರೋಪ ಸಮಾರಂಭ ಅದೇ ದಿನ ನಡೆಯಲಿದೆ. ಅಂದು ಬೆಳಿಗ್ಗೆ 10ಕ್ಕೆ ಎಸ್‌ಎಸ್‌ಎಫ್‌ ಪ್ರತಿನಿಧಿ ಸಮಾವೇಶ ನಡೆಯಲಿದ್ದು, ರಾಜ್ಯದ 7 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.


ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕದ ಉಲಮಾ ಒಕ್ಕೂಟದ ಅಧ್ಯಕ್ಷ ಝೈನುಲ್ ಉಲುಮಾ ಮಾಣಿ ಉಸ್ತಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಅಬೂಬಕ್ಕರ್ ಮುಸ್ಲಿಯಾರ್ ಮುಖ್ಯ ಭಾಷಣ ಮಾಡಲಿದ್ದಾರೆ.

ಜಾಹೀರಾತು ಬ್ಲಾಕ್‌ ಮಾಡುವ ಯೂಟ್ಯೂಬ್‌ ಬಳಕೆದಾರರಿಗೆ ಬ್ರೇಕ್‌ ಹಾಕಿದ ಗೂಗಲ್‌; ವೀಕ್ಷಕರಿಗೆ 3 ಆಯ್ಕೆ ನೀಡಿದ ಯೂಟ್ಯೂಬ್‌

Posted by Vidyamaana on 2023-10-25 15:45:27 |

Share: | | | | |


ಜಾಹೀರಾತು ಬ್ಲಾಕ್‌ ಮಾಡುವ ಯೂಟ್ಯೂಬ್‌ ಬಳಕೆದಾರರಿಗೆ ಬ್ರೇಕ್‌ ಹಾಕಿದ ಗೂಗಲ್‌; ವೀಕ್ಷಕರಿಗೆ 3 ಆಯ್ಕೆ ನೀಡಿದ ಯೂಟ್ಯೂಬ್‌

ಯೂಟ್ಯೂಬ್‌ ಬಳಕೆ ಜಾಗತಿಕವಾಗಿ ಗಮನಾರ್ಹವಾಗಿ ಹೆಚ್ಚಾಗುತ್ತಿದೆ. ಎಲ್ಲರೂ ಗೂಗಲ್‌ನ ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಲು ಬಯಸುತ್ತಾರೆ. ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಸುದ್ದಿ, ಸಿನಿಮಾ, ಮನರಂಜನೆ, ಮಾಹಿತಿಯ ವಿಡಿಯೋಗಳನ್ನು ನೋಡಲು ಎಲ್ಲರೂ ಬಯಸುತ್ತಾರೆ. ಈ ರೀತಿ ಯೂಟ್ಯೂಬ್‌ನಲ್ಲಿ ವೀಕ್ಷಣೆ ಮಾಡುವಾಗ ಕಾಣಿಸುವ ಜಾಹೀರಾತುಗಳು ಸಾಕಷ್ಟು ಜನರಿಗೆ ಕಿರಿಕಿರಿ ಉಂಟು ಮಾಡುತ್ತಾರೆ.ಇಂತಹ ಕಿರಿಕಿರಿ ತಪ್ಪಿಸಲು ಕೆಲವು ಜಾಣರು ಆಡ್‌ ಬ್ಲಾಕರ್‌ ಸಾಫ್ಟ್‌ವೇರ್‌ಗಳನ್ನು ಬಳಸುತ್ತಾರೆ. ಈ ರೀತಿ ಜನರು ಆಡ್‌ ಬ್ಲಾಕರ್‌ ಬಳಸಿ ಯೂಟ್ಯೂಬ್‌ ಸೇವೆ ಪಡೆಯುವುದನ್ನು ತಪ್ಪಿಸಲು ಮತ್ತು ಇಂತಹ ಬಳಕೆದಾರರನ್ನು ಕಂಡುಹಿಡಿಯಲು ಗೂಗಲ್‌ ಆರಂಭಿಸಿದೆ.


ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಲು ಆಡ್‌ ಬ್ಲಾಕರ್‌ ಸಾಫ್ಟ್‌ವೇರ್‌ ಬಳಸುವವರಿಗೆ ಗೂಗಲ್‌ನ ಸೇವೆಗಳನ್ನು ಕಡಿತ ಮಾಡಲಾಗುತ್ತಿದೆ. ಎಲ್ಲಾದರೂ ಯೂಟ್ಯೂಬ್‌ ವೀಕ್ಷಿಸುವಾಗ ಆಡ್‌ ಬ್ಲಾಕಿಂಗ್‌ ಸಾಫ್ಟ್‌ವೇರ್‌ ಪತ್ತೆಯಾದರೆ ನಿಮಗೆ ಯೂಟ್ಯೂಬ್‌ನಲ್ಲಿ ಪಾಪ್‌ಅಪ್‌ ಸಂದೇಶ ಕಾಣಿಸಲಿದೆ. ಆ ಸಂದೇಶದಲ್ಲಿ ಈ ರೀತಿ ಆಡ್‌ ಬ್ಲಾಕರ್‌ ಬಳಸಬಾರದು ಎಂಬ ವಿವರದ ಜತೆಗೆ ಮೂರು ಆಯ್ಕೆಗಳನ್ನು ನೀಡಲಾಗುತ್ತದೆ.


ಆ ಯೂಟ್ಯೂಬ್‌ ಅಲಾರ್ಟ್‌ನಲ್ಲಿ ಈ ರೀತಿ ಬರೆದಿರುತ್ತದೆ. ಯೂಟ್ಯೂಬ್‌ ಬಳಸುವಾಗ ಆಡ್‌ ಬ್ಲಾಕರ್‌ ಬಳಸುವುದನ್ನು ನಿಷೇಧಿಸಲಾಗಿದೆ. ಜಾಹೀರಾತುಗಳು ಈ ಸೇವೆಯ ಅಗತ್ಯ ಭಾಗವಾಗಿದೆ. ನೀವು ಯೂಟ್ಯೂಬ್‌ ಪ್ರೀಮಿಯಂಗೆ ಹಣ ಪಾವತಿಸಿದರೆ ಮಾತ್ರ ಜಾಹೀರಾತು ಕಾಣಿಸುವುದಿಲ್ಲ.ನಿಮಗೆ ಒಟ್ಟು ಮೂರು ಆಯ್ಕೆಗಳು ಇವೆ. ನೀವು ಯೂಟ್ಯೂಬ್‌ ಜಾಹೀರಾತುಗಳಿಗೆ ಅನುಮತಿ ನೀಡುವುದು. ಯೂಟ್ಯೂಬ್‌ನಲ್ಲಿ ಜಾಹೀರಾತು ಕಾಣಿಸುವುದನ್ನು ತಡೆಯುವುದನ್ನು ನಿಲ್ಲಿಸಲು ಆಡ್‌ ಬ್ಲಾಕರ್‌ ಆಯ್ಕೆಯನ್ನು ಯೂಟ್ಯೂಬ್‌ ಈ ಸಂದರ್ಭದಲ್ಲಿ ಪ್ರದರ್ಶಿಸುತ್ತದೆ. ಅಥವಾ ಯೂಟ್ಯೂಬ್‌ ಪ್ರೀಮಿಯಂಗೆ ಸೈನ್‌ಅಪ್‌ ಆಗಿ. ಅಥವಾ ಈ ಸಂದೇಶ ಇಗ್ನೋರ್‌ ಮಾಡಿ. ಈ ರೀತಿ ಮೂರು ಆಯ್ಕೆ ನೀಡುತ್ತದೆ. ಸಂದೇಶ ಇಗ್ನೋರ್‌ ಮಾಡಿದ ಬಳಿಕವೂ ನೀವು ಆಡ್‌ ಬ್ಲಾಕರ್‌ ಬಳಸುವುದು ಖಾತ್ರಿಯಾದರೆ ಯೂಟ್ಯೂಬ್‌ ಸೇವೆ ಸ್ಥಗಿತಗೊಳ್ಳಲಿದೆ.


ಎಲ್ಲಾದರೂ ನೀವು ಯೂಟ್ಯೂಬ್‌ನ ಈ ಎಚ್ಚರಿಕೆಯನ್ನು ಕಡೆಗಣಿಸಿದ್ದೀರಿ ಎಂದಿರಲಿ. ಮತ್ತೆ ನೀವು ಹಲವು ವಿಡಿಯೋಗಳನ್ನು ನೋಡಬಹುದು. ಈ ಸಂದರ್ಭದಲ್ಲಿ ನೀವು ಆಡ್‌ ಬ್ಲಾಕರ್‌ ಮೂಲಕ ಜಾಹೀರಾತುಗಳಿಗೆ ತಡೆ ನೀಡುತ್ತಿದ್ದೀರಾ ಎಂದು ಪರಿಶೀಲಿಸುತ್ತದೆ. ಮೂರು ಸ್ಟ್ರೈಕ್‌ ಬಳಿಕ ನಿಮಗೆ ಯೂಟ್ಯೂಬ್‌ ವೀಕ್ಷಣೆಗೆ ಅವಕಾಶ ಇರುವುದಿಲ್ಲ.


ಬಹುತೇಕರು ಆನ್‌ಲೈನ್‌ ಬಳಸುವಾಗ ಆಡ್‌ ಬ್ಲಾಕರ್‌ಗಳನ್ನು ಬಳಸುತ್ತಾರೆ. ವೆಬ್‌ಸೈಟ್‌ಗಳಲ್ಲಿ ಜಾಹೀರಾತುಗಳು ಕಾಣಿಸದಂತೆ ಮಾಡಲು ಈ ರೀತಿ ಮಾಡುತ್ತಾರೆ. ಈ ರೀತಿಯ ಆಡ್‌ ಬ್ಲಾಕರ್‌ಗಳು ನಿಮ್ಮ ಕಂಪ್ಯೂಟರ್‌ಗಳಿಗೂ ಹಾನಿ ಮಾಡಬಹುದು. ನಿಮ್ಮ ಕಂಪ್ಯೂಟರ್‌ನ ಸುರಕ್ಷತೆಗೂ ತೊಂದರೆ ನೀಡಬಹುದು. ನಿಮ್ಮ ಇಂಟರ್‌ನೆಟ್‌ ಚಟುವಟಿಕೆ ಮೇಲೆ ನಿಗಾ ಇಡಬಹುದು. ಕೆಲವೊಂದು ಆಡ್‌ ಬ್ಲಾಕರ್‌ಗಳು ಉತ್ತಮ ಸೇವೆ ನೀಡುತ್ತವೆ. ಖಾಸಗಿತನಕ್ಕೆ ಧಕ್ಕೆಯಾಗದಂತೆ ಸೇವೆ ನೀಡುತ್ತಾವೆ.


ಕಳೆದ ಹಲವು ವರ್ಷಗಳಿಂದ ಯೂಟ್ಯೂಬ್‌ ಈ ಆಡ್‌ ಬ್ಲಾಕರ್‌ಗಳನ್ನು ಗಮನಿಸುತ್ತಿತ್ತು. ಈ ರೀತಿ ಬಳಸುವ ಜನರ ಬಗ್ಗೆ ಮೌನವಾಗಿದ್ದಿತ್ತು. ಇದೀಗ ಈ ಮೂಲಕ ತನ್ನ ಸೇವೆಯನ್ನು ದುರುಪಯೋಗ ಪಡಿಸಿಕೊಳ್ಳುವವರಿಗೆ ಯೂಟ್ಯೂಬ್‌ ವೀಕ್ಷಣೆಗೆ ಅವಕಾಶ ನೀಡದೆ ಇರಲು ನಿರ್ಧರಿಸಿದೆ. ಇದರಿಂದ ಯೂಟ್ಯೂಬ್‌ ಪ್ರೀಮಿಯಂ ಬಳಕೆದಾರರ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆಯಿದೆ.


ಈ ರೀತಿ ಅಲಾರ್ಟ್‌ ಸಂದೇಶ ಬರುವ ತನಕ ನಿರಾಂತಕವಾಗಿ ಇತರರು ಯೂಟ್ಯೂಬ್‌ನಲ್ಲಿ ಆಡ್‌ ಬ್ಲಾಕರ್‌ ಬಳಕೆ ಮುಂದುವರೆಸಬಹುದು.

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆ

Posted by Vidyamaana on 2023-11-11 19:55:28 |

Share: | | | | |


ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆ


ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ‍್ಸ್‌ನಲ್ಲಿ ಸಂಸ್ಥಾಪಕರ ದಿನಾಚರಣೆ ಹಾಗೂ ರಕ್ತದಾನ ಶಿಬಿರವು ನ.10ರಂದು ನೆರವೇರಿತು.


ರಕ್ತದಾನ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ರೋಟರಿ ಕ್ಲಬ್ ಅಧ್ಯಕ್ಷ ಜೈರಾಜ್ ಮಾತನಾಡಿ, ನನ್ನ ವಿದ್ಯಾರ್ಥಿ ಜೀವನದಲ್ಲಿಯೇ ಜಿ.ಎಲ್ ಆಚಾರ್ಯ ಜ್ಯವೆಲ್ಲರ‍್ಸ್ ಪುತ್ತೂರಿನ ಪ್ರತಿಷ್ಠಿತ ಜ್ಯುವೆಲ್ಸರ‍್ಸ್ ಎಂಬ ಖ್ಯಾತಿ ಪಡೆದಿತ್ತು. ಅಂದಿನಿಂದ ಇಂದಿನ ತನಕ ವ್ಯವಹಾರದಲ್ಲಿ ನೈತಿಕಯನ್ನು ಇಂದಿಗೂ ಬೆಳೆಸಿಕೊಂಡು ಬಂದಿದ್ದಾರೆ. ಜಿ.ಎಲ್ ಆಚಾರ್ಯ ಕುಟುಂಬದವರು ರೋಟರಿ ಸಂಸ್ಥೆಯ ಅಸ್ಥಿತ್ವಕ್ಕೂ ಬಹಳಷ್ಟು ಕೊಡುಗೆ ನೀಡಿದ್ದಾರೆ. ಹೀಗಾಗಿ ಸಂಸ್ಥಾಪಕರ ದಿನಾಚರಣೆಯು ಅರ್ಥಪೂರ್ಣವಾದ ದಿನವಾಗಿ ಆಚರಿಸಲಾಗುತ್ತಿದೆ. ಅವರ ಕುಟುಂಬವು ಸಮಾಜ ಸೇವೆಗೆ ತ್ಯಾಗ ಮಾಡುವ ಉದ್ದೇಶದಲ್ಲಿದ್ದು ರಕ್ತದಾನ ಶಿಬಿರವು ಸದುದ್ದೇಶದಿಂದ ಆಯೋಜಿಸಿಕೊಳ್ಳಲಾಗಿದೆ ಎಂದರು.

     ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಮಾತನಾಡಿ, ರೋಟರಿ ಕ್ಲಬ್ ಅಧ್ಯಕ್ಷರಾಗಿ ಜಿ.ಎಲ್ ಆಚಾರ್ಯ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಬ್ಲಡ್ ಬ್ಯಾಂಕ್‌ನ ಬೆಳ್ಳಿ ಹಬ್ಬ ಸಂಭ್ರಮವನ್ನು ಬಂಗಾರದ ಅಂಗಡಿಯಲ್ಲಿ ಆಚರಿಸಲಾಗುತ್ತಿದೆ. ವರ್ಷದ 365 ದಿನ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಬ್ಲಡ್ ಬ್ಯಾಂಕ್ ಐದು ತಾಲೂಕಿಗೆ ರಕ್ತ ಸರಬರಾಜ ಮಾಡಲಾಗುತ್ತದೆ ಎಂದರು.

ಸಂಸ್ಥೆಯ ಮ್ಹಾಲಕ ಬಲರಾಮ ಆಚಾರ್ಯ ಮಾತನಾಡಿ, ಸಂಸ್ಥೆಯ ಸಂಸ್ಥಾಪಕರ ದಿನದ ಅಂಗವಾಗಿ ನಮ್ಮ ಸಿಬ್ಬಂದಿ ವರ್ಗದವರೇ ಆಸಕ್ತಿಯಿಂದ ರಕ್ತದಾನ ಶಿಬಿರ ಆಯೋಜನೆ ಮಾಡಿದ್ದಾರೆ. ಮಳಿಗೆ ಎಲ್ಲಾ ಸಿಬ್ಬಂದಿಗಳು ಹಾಗೂ ನಮ್ಮ ಮಕ್ಕಳು ರಕ್ತದಾನ ಮಾಡಲಿದ್ದಾರೆ. ಅಲ್ಲದೆ ಸಂಸ್ಥಾಪಕರ ದಿನದ ಅಂಗವಾಗಿ ಪಟ್ಟೆ ಪ್ರತಿಭಾ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಪರಿಕರಗಳ ಖರೀದಿಗೆ ದೇಣಿಗೆ ನೀಡಲಾಗುವುದು ಎಂದರು.

ರೋಟರಿ ಕ್ಲಬ್ ಕಾರ್ಯದರ್ಶಿ ಸುಜಿತ್ ರೈ, ಜಿ.ಎಲ್ ಆಚಾರ್ಯ ಮಳಿಗೆಯ ಸುದನ್ವ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪಟ್ಟೆ ಶಾಲೆಗೆ ದೇಣಿಗೆ:

ಮಳಿಗೆಯ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ದೇಣಿಗೆ ನೀಡಲಾಗಿದ್ದು ಶಿಕ್ಷಕ ವಿಶ್ವನಾಥರವರು ಚೆಕ್ ಸ್ವೀಕರಿಸಿದರು. ಬಲರಾಮ ಆಚಾರ್ಯ ಸ್ವಾಗತಿಸಿದರು. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಲಕ್ಷ್ಮೀಕಾಂತ ಆಚಾರ್ಯ ವಂದಿಸಿದರು.

ಸುಳ್ಯ : ಬಸ್‌ ಬೈಕ್ ಅಪಘಾತ ಪ್ರಕರಣ

Posted by Vidyamaana on 2024-03-01 15:38:44 |

Share: | | | | |


ಸುಳ್ಯ : ಬಸ್‌ ಬೈಕ್ ಅಪಘಾತ ಪ್ರಕರಣ

ಸುಳ್ಯ :ಇಲ್ಲಿನ ಅರಂಬೂರು ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ - ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇಂದು ಮಾ 01 ರಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರ ಪತ್ನಿ ಸುಳ್ಯ ಸಿ ಎ ಬ್ಯಾಂಕ್ ಸಿಬ್ಬಂದಿ ಚಂದ್ರಿಕಾ ಮಗಳು ಮನ್ವಿತ ರವರನ್ನು ಅಗಲಿದ್ದಾರೆ


ಮಂಗಳೂರು: ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

Posted by Vidyamaana on 2023-05-10 17:27:33 |

Share: | | | | |


ಮಂಗಳೂರು: ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

ಮಂಗಳೂರು: ನಗರದ ಮೂಡುಶೆಡ್ಡೆ ಬಳಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಆರ್ ಜೈನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು, ಮೂವರು ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಪೊಲೀಸ್ ಸಿಬ್ಬಂದಿಗೂ ಗಾಯವಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕಮೀಷನ್ ತಿಳಿಸಿದ್ದಾರೆ



Leave a Comment: