Posted by vidyamaana on 2024-07-01 19:31:51 |
ಮಳೆಗಾಲ ಆರಂಭವಾಗಿದ್ದು, ಈ ಋತುವಿನಲ್ಲಿ ಆರೋಗ್ಯದ ಕಡೆ ಗಮನಹರಿಸುವುದು ಅಗತ್ಯವಾಗಿದೆ. ಋತುಮಾನದ ಕಾಯಿಲೆಗಳ ಜೊತೆಗೆ ಡೆಂಗ್ಯೂ ಅಪಾಯವಿದೆ. ಡೆಂಗ್ಯೂ ವಾಸ್ತವವಾಗಿ ಹೆಣ್ಣು ಈಜಿಪ್ಟಿ (ಈಡಿಸ್ ಸೊಳ್ಳೆ) ಸೊಳ್ಳೆಗಳಿಂದ ಹರಡುತ್ತದೆ.
ಈ ಸೊಳ್ಳೆಗಳ ಜೀವಿತಾವಧಿ ಕೇವಲ ಒಂದು ತಿಂಗಳು ಮಾತ್ರ. ಆದ್ರೆ, ಈ ಅವಧಿಯಲ್ಲಿ ಅವು 500 ರಿಂದ 1000 ಸೊಳ್ಳೆಗಳಿಗೆ ಜನ್ಮ ನೀಡುತ್ತವೆ. ಈ ಸೊಳ್ಳೆಗಳು ಕೇವಲ ಮೂರು ಅಡಿ ಮಾತ್ರ ಹಾರಬಲ್ಲವು. ಈ ಕಾರಣಕ್ಕಾಗಿ ಅವು ಕೇವಲ ಮನುಷ್ಯನ ಕೆಳಗಿನ ಅಂಗಗಳನ್ನ ಗುರಿಯಾಗಿಸುತ್ತಾರೆ. ಈ ಸೊಳ್ಳೆಗಳು ಕಚ್ಚಿದರೆ ತೀವ್ರ ಜ್ವರದ ಜೊತೆಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ.
ಡೆಂಗ್ಯೂ ಸೊಳ್ಳೆಗಳು ಕೂಲರ್, ಹೂವಿನ ಕುಂಡಗಳು, ಹಳೆಯ ಪಾತ್ರೆಗಳು ಅಥವಾ ಮನೆಯ ಛಾವಣಿಗಳು, ಟೈರ್ಗಳು, ಗುಂಡಿಗಳು ಇತ್ಯಾದಿಗಳಲ್ಲಿ ತಮ್ಮ ಮೊಟ್ಟೆಗಳನ್ನ ಇಡುತ್ತವೆ. ಡೆಂಗ್ಯೂ ಸೊಳ್ಳೆಗಳು ಒಮ್ಮೆಗೆ 100 ರಿಂದ 300 ಮೊಟ್ಟೆಗಳನ್ನ ಇಡುತ್ತವೆ. 4 ದಿನಗಳ ನಂತರ ಅವು ಸೊಳ್ಳೆಗಳಾಗಿ ರೂಪಾಂತರಗೊಳ್ಳುತ್ತವೆ. ಸೊಳ್ಳೆಗಳು ಹುಟ್ಟಿದ 2 ದಿನಗಳಲ್ಲಿ ಹಾರಲು ಪ್ರಾರಂಭಿಸುತ್ತವೆ.
ಡೆಂಗ್ಯೂ ಸೊಳ್ಳೆ ಕಚ್ಚಿದ ತಕ್ಷಣ ಡೆಂಗ್ಯೂ ಲಕ್ಷಣಗಳು ಕಾಣಿಸುವುದಿಲ್ಲ. ಆದ್ರೆ, ಕೆಲವು ದಿನಗಳ ನಂತರ ಅದರ ಪರಿಣಾಮಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಈಡಿಸ್ ಸೊಳ್ಳೆಗಳು ಕಚ್ಚಿದ 3 ರಿಂದ 5 ದಿನಗಳ ನಂತರ ಡೆಂಗ್ಯೂ ಜ್ವರ ಬರುತ್ತದೆ. ಈ ಸೊಳ್ಳೆಗಳು ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ಮಾತ್ರ ಸಂಚರಿಸುತ್ತಿದ್ದು, ಡೆಂಗ್ಯೂ ಸೊಳ್ಳೆಗಳು ಮನೆಗಳ ಮೂಲೆಗಳಲ್ಲಿ ಪರದೆಯ ಹಿಂದೆ, ಸೊಳ್ಳೆಗಳು ಇರುವ ಸ್ಥಳಗಳಲ್ಲಿ ಅಡಗಿಕೊಳ್ಳುತ್ತವೆ.
ಡೆಂಗ್ಯೂ ಜ್ವರದ ಲಕ್ಷಣಗಳು.!
ಡೆಂಗ್ಯೂ ಈಡಿಸ್ ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುವ ಗಂಭೀರ ಕಾಯಿಲೆಯಾಗಿದ್ದು, ಇದರ ಲಕ್ಷಣಗಳು ಸಾಮಾನ್ಯವಾಗಿ ಜ್ವರದಂತಿರುತ್ತವೆ. ಆದ್ರೆ, ಇದು ತೀವ್ರವಾದ ಹೆಮರಾಜಿಕ್ ಜ್ವರಕ್ಕೆ ಕಾರಣವಾಗಬಹುದು. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಿದೆ ಎನ್ನುತ್ತಾರೆ ವೈದ್ಯರು.
ಲಕ್ಷಣಗಳೇನು.?
ತೀವ್ರವಾದ ಜ್ವರ, ತಲೆನೋವು, ಸ್ನಾಯು ನೋವು, ಚರ್ಮದ ಮೇಲೆ ಕೆಂಪು ಗುಳ್ಳೆಗಳು, ಕಣ್ಣುಗಳ ಕೆಳಗೆ ನೋವು, ಮೊಣಕಾಲು ನೋವು, ಊತ, ಹಲ್ಲು, ಮೂಗು, ಒಸಡುಗಳಿಂದ ರಕ್ತಸ್ರಾವ ಇತ್ಯಾದಿಗಳನ್ನ ಗಮನಿಸಿದರೆ ತಕ್ಷಣವೇ ಎಚ್ಚರಗೊಳ್ಳಿ.
ಡೆಂಗ್ಯೂ ತಡೆಗಟ್ಟುವುದು ಹೇಗೆ.?
* ವಿಶೇಷವಾಗಿ ಮಳೆಗಾಲದಲ್ಲಿ ದೇಹವನ್ನ ಸಂಪೂರ್ಣವಾಗಿ ಮುಚ್ಚುವ ಬಟ್ಟೆಗಳನ್ನ ಧರಿಸಿ.
* ಮಲಗುವಾಗ ಸೊಳ್ಳೆ ಪರದೆಗಳನ್ನ ಬಳಸಿ.
* ಸೊಳ್ಳೆ ಕಡಿತವನ್ನು ತಡೆಯಲು ದೇಹಕ್ಕೆ ಎಣ್ಣೆ ಅಥವಾ ಕ್ರೀಮ್ ಹಚ್ಚಿ.
* ನಿಮ್ಮ ಮನೆ ಮತ್ತು ಸುತ್ತಮುತ್ತ ಕೊಳಕು ನೀರು ಬರುವುದನ್ನ ತಪ್ಪಿಸಿ.
* ಅನಗತ್ಯ ವಸ್ತುಗಳು ಹಾಗೂ ಕೂಲರ್ ಕಾಲಕಾಲಕ್ಕೆ ಸ್ವಚ್ಛಗೊಳಿಸುತ್ತಿರಬೇಕು.
* ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
Posted by Vidyamaana on 2024-05-26 13:22:03 |
ಉಡುಪಿ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ, ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು.
Posted by Vidyamaana on 2024-01-10 10:28:41 |
ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತವಾದ ಘಟನೆ ಬೆಳಕಿಗೆ ಬಂದಿದ್ದು, ಖದೀಮರು 2.50 ಲಕ್ಷ ಹಣ ಕದ್ದೊಯ್ದಿದ್ದಾರೆ.ಬೆಂಗಳೂರಿನ ಗುರುಕಿರಣ್ ನಿವಾಸದಲ್ಲಿ ಅವರ ಅತ್ತೆ ಇಟ್ಟಿದ್ದ 2.50 ಲಕ್ಷ ಹಣವನ್ನು ಜ.5 ರಂದು ಖದೀಮರು ಕಳ್ಳತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅವರ ಮನೆಕೆಲದಾಕೆ ಯ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Posted by Vidyamaana on 2023-08-26 16:08:11 |
ಪುತ್ತೂರು:ದುಷ್ಕರ್ಮಿಯಿಂದ ಕೊಲೆಯಾದ ಅಳಿಕೆ ಕುದ್ದುಪದವು ನಿವಾಸಿ ಗೌರಿ ಮನೆಗೆ ಆ. ೨೬ ರಂದು ಶಾಸಕರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅತ್ಯಂತ ಕಡುಬಡತನದಲ್ಲಿ ಕಾಲ ಕಳೆಯುತ್ತಿರುವ ಮೃತ ಗೌರಿ ತಾಯಿಯ ಕಷ್ಟ ಕಂಡು ಶಾಸಕರು ಮರುಗಿದರು. ಗೌರಿ ತಾಯಿಯ ಜೊತೆ ಮಾತನಾಡುವ ವೇಳೆ ಶಾಸಕರಲ್ಲಿ ತನ್ನ ಕುಟುಂಬದ ಸಂಕಷ್ಟವನ್ನು ವಿವರಿಸುವ ವೇಳೆ ನನ್ನ ಸಹೋದರಿ ಅಂಗವಿಕಲೆ ಆಕೆಗೆ ಯಾವುದೇ ಪಿಂಚಣಿ ನೀಡುತ್ತಿಲ್ಲ, ಆಧಾರ್ ಕಾರ್ಡು ಇಲ್ಲ ಎಂದು ಅಧಿಕಾರಿಗಳು ಆಕೆಗೆ ಯಾವುದೇ ಸವಲತ್ತನ್ನು ನೀಡಿಲ್ಲ ಎಂದು ಶಾಸಕರಲ್ಲಿ ಹೇಳಿದರು. ತಕ್ಷಣವೇ ವಿಕಲಚೇತನ ಯುವತಿ ಮಲಗಿದ್ದ ಸ್ಥಳಕ್ಕೆ ತೆರಳಿದ ಶಾಸಕರು ಒಮ್ಮೆಲೆ ಅಚ್ಚರಿಗೊಂಡದ್ದು ಮಾತ್ರವಲ್ಲದೆ ಪಿಂಚನಿ ಕೊಡದೇ ಇರುವ ವಿಚಾರ ಕೇಳಿ ಆಕ್ರೋಶಗೊಂಡರು.
ಛೇ.. ಎಂಥಾ ಅವಸ್ಥೆ.... ವಿಕಲ ಚೇತನಳಾದರೂ ಪಿಂಛಣಿ ಕೊಡ್ಲಿಕ್ಕೆ ಆಗ್ಲಿಲ್ವ ಇಲ್ಲಿನ ವ್ಯವಸ್ಥೆಗೆ? ಎಷ್ಟು ವರ್ಷದಿಂದ ಯುವತಿ ಮಲಗಿದ್ದಲ್ಲೇ ಇದ್ದಾರೆ? ನಿಮ್ಮ ಮನೆಗೆ ಓಟು ಕೇಳಲು ರಾಜಕೀಯದವರು ಬರುವುದಿಲ್ಲವೇ ತಾಯಿ ಎಂದು ಗೌರಿ ತಾಯಿಯನ್ನು ಪ್ರಶ್ನಿಸಿದರು. ಈ ವೇಳೆ ಉತ್ತರಿಸಿದ ಗೌರಿ ತಾಯಿ ನನ್ನ ಸಹೋದರಿ ಶಾರದಾ ಅನೇಕ ವರ್ಷಗಳಿಂದ ಮಲಗಿದ್ದಲ್ಲೇ ಇದ್ದಾಳೆ, ನಾನು ಕೂಲಿ ಕೆಲಸಕ್ಕೆ ತೆರಳಿ ಮಕ್ಕಳನ್ನು ಸಾಕುತ್ತಿದ್ದೇನೆ, ವಿಕಲ ಚೇತನ ನನ್ನ ಸಹೋದರಿಗೆ ಆಧಾರ್ ಕಾರ್ಡು ಇಲ್ಲದ ಕಾರಣ ಸರಕಾರದಿಂದ ಏನೂ ಸಿಗುತ್ತಿಲ್ಲ ಎಂದು ಹೇಳಿದರು.
ನಾಳೆ ನಿಮ್ಮ ಮನೆಗೆ ನನ್ನ ಕಚೇರಿಯಿಂದ ಜನ ಬರುತ್ತಾರೆ ಅವರು ನಿಮ್ಮ ಸಹೋದರಿಗೆ ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ದಪಡಿಸಿ ಮುಂದಿನ ತಿಂಗಳು ಅವರಿಗೆ ವಿಕಲಚೇತನ ಪಿಂಚಣಿ ಬರುತ್ತದೆ ಏನೂ ಹೆದರಬೇಡಿ, ನಿಮ್ಮ ಜೊತೆ ನಾನಿದ್ದೇನೆ, ನಿಮ್ಮ ಕಷ್ಟದ ಜೊತೆ ನಾನಿದ್ದೇನೆ, ಧೈರ್ಯವಾಗಿ ಇರಿ ಎಂದು ಗೌರಿ ತಾಯಿಗೆ ಸಾಂತ್ವನ ಹೇಳಿದರು. ಗೌರಿ ಕುಟುಂಬದ ಬಡತನವನ್ನು ಕಂಡು ಶಾಸಕರ ಕಣ್ಣುಗಳು ತೇವಗೊಂಡವು...
Posted by Vidyamaana on 2023-07-31 03:13:10 |
ಪುತ್ತೂರು: ಆಧುನಿಕ ಜಗತ್ತಿನಲ್ಲಿ ಫ್ಯಾಷನ್ ಉಡುಗೆ ಬಂದರೂ ಜನರು ಮಾತ್ರ ತಮ್ಮ ಹಳೆಯ ಶೈಲಿಯ ಬಟ್ಟೆ ಧರಿಸುವುದನ್ನು ಹಾಗೆಯೇ ಉಳಿಸಿಕೊಂಡು ಬಂದಿದ್ದು ಇದು ಭಾರತೀಯ ಸಂಸ್ಕೃತಿಯ ಮೆರುಗಾಗಿದೆ, ಅನಾಧಿ ಕಾಲದಿಂದಲೂ ಟೈಲರಿಂಗ್ ವೃತ್ತಿ ಮಾಡಿಕೊಂಡೇ ಬದುಕನ್ನು ಕಟ್ಟಿದ ಅನೇಕರು ನಮ್ಮ ಸಮಾಜದಲ್ಲಿ ಇದ್ದಾರೆ. ಟೈಲರಿಂಗ್ ವೃತ್ತಿಯನ್ನು ಮಾಡಿಕೊಂಡು ಬಡತನದಲ್ಲೇ ಜೀವನ ಸಾಗಿಸುವ ಕುಟುಂಬಗಳೂ ಇದೆ, ಟೈಲರಿಂಗ್ ವೃತ್ತಿ ಮಾಡುವ ಬಡ ಟೈಲರ್ಗಳಿಗೆ ಜೀವನಕ್ಕೆ ಭದ್ರತೆ ನೀಡಬೇಕದ ಅವಶ್ಯಕತೆ ಇದ್ದು ನಿಮ್ಮ ಬೇಡಿಕೆಗಳ ಬಗ್ಗೆ ವಿಧಾನಸಭೆಯನ್ನು ಧ್ವನಿ ಎತ್ತುವ ಮೂಲಕ ಸರಕಾರದ ಗಮನಕ್ಕೆ ತರುತ್ತೇನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಜು.3೦ ರಂದು ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಇದರ ಪುತ್ತೂರು ಕ್ಷೇತ್ರ ಸಮಿತಿಯ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಟೈಲರಿಂಗ್ ವೃತ್ತಿಗೆ ಇಂದು ಆಧುನಿಕತೆಯ ಟಚಪ್ ದಾಳಿ ಮಾಡಿದೆ. ಹೊರ ಜಿಲ್ಲೆಗಳಿಂದ ಬರುವ ಫ್ಯಾಷನ್ ಡಿಸೈನ್ ವೃತ್ತಿಯವರು ದುಬಾರಿ ಬೆಲೆಗೆ ಟೈಲರಿಂಗ್ ಕೆಲಸವನ್ನು ಮಾಡುತ್ತಿದ್ದಾರೆ, ಟೈಲರಿಂಗ್ ವೃತ್ತಿಯಲ್ಲೇ ಜೀವನ ಕಟ್ಟಿಕೊಂಡ ಅನೇಕರೂ ಇದ್ದಾರೆ. ಆದರೆ ಬಡ ಟೈಲರ್ಗಳು ಅಂದಿನಿಂದ ಇಂದಿನ ತನಕ ಬಡವನಾಗಿಯೇ ತನ್ನ ಕಸುಬನ್ನು ಮಾಡುತ್ತಿದ್ದು ಅವರಿಗೆ ಸರಕಾರದಿಂದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದೆ. ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಟೈಲರಿಂಗ್ ಕಾರ್ಮಿಕರನ್ನು ಸೇರಿಸುವ ಬಗ್ಗೆ ತಾನು ಆ ಇಲಾಖೆಯ ಸಚಿವರ ಜೊತೆ ಮಾತುಕತೆ ನಡೆಸಿ ತನ್ನಿಂದಾಗುವ ಎಲ್ಲಾ ಸಹಾಯವನ್ನು ಮಾಡುವುದಾಗಿ ಶಾಸಕರು ಸಭೆಯಲ್ಲಿ ಭರವಸೆ ನೀಡಿದರು.
ಕಳೆದ ೨೪ ವರ್ಷಗಳಿಂದ ತಮ್ಮ ಬೇಡಿಕೆಯನ್ನು ಸರಕಾರದ ಮುಂದಿಟ್ಟಿದ್ದರೂ ಇದುವರೆಗೂ ಅದನ್ನು ಯಾವುದೇ ಸರಕಾರ ಪರಿಗಣಿಸಿಲ್ಲ ಎಂದು ಸಮಿತಿಯ ಪ್ರಮುಖರು ಶಾಸಕರ ಗಮನಕ್ಕೆ ತಂದರು. ಈ ವೇಳೆ ಪ್ರತಿಕ್ರಿಯೆ ನೀಡಿದ ಶಾಸಕರು ಸಭೆಯಲ್ಲಿ , ಸಾರ್ವಜನಿಕ ವೇದಿಕೆಯಲ್ಲಿ ನಾವು ಬೊಬ್ಬೆ ಹೊಡೆದರೆ ಯಾವುದೇ ಪ್ರಯೋಜನವಿಲ್ಲ ಮಾತನಾಡುವಲ್ಲಿ ಮಾತನಾಡಬೇಕು, ಕೇಳುವವರಲ್ಲಿ ಕೇಳಿದರೆ ಅದಕ್ಕೆ ಪರಿಹಾರ ಸಿಗಬಹುದು ಮತ್ತು ಬೇಡಿಕೆಯನ್ನು ಈಡೇರಿಸಿಕೊಳ್ಳಬಹುದು ಈ ನಿಟ್ಟಿನಲ್ಲಿ ತನು ಖಂಡಿತಾ ಪ್ರಯತ್ನ ಪಡುವುದಾಗಿ ಶಾಸಕರು ಹೇಳಿದರು.
ಪುತ್ತೂರು ಕ್ಷೆತ್ರ ಸಮಿತಿಯ ಅಧ್ಯಕ್ಷರಾದ ಜಯರಾಮ ಬಿ ಎನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೆಎಸ್ಟಿ ರಾಜ್ಯ ಸಮಿತಿ ಅಧ್ಯಕ್ಷರಾದ ಬಿ ಎ ನಾರಾಯಣ, ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಎ ಪ್ರಜ್ವಲ್ಕುಮಾರ್, ಜಿಲ್ಲಾ ಸಮಿತಿ ಅಧ್ಯಕ್ಷರಾದ ಜಯಂತ ಉರ್ಲಾಂಡಿ, ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಲಿಗೋಧರ ಆಚಾರ್ಯ, ಜಿಲ್ಲಾ ಸಮಿತಿ ಕೋಶಾಧಿಕಾರಿ ಈಶ್ವರಕುಲಾಲ್,ಪುತ್ತೂರು ಸಮಿತಿ ಕಾರ್ಯದರ್ಶಿ ಉಮಾ ಯು ನಾಯ್ಕ್, ಕೋಶಾಧಿಕಾರಿ ಸುಜಾತಾ ಮಂದಾರ, ಪ್ರೇಮಲತಾ ಶೆಟ್ಟಿ, ದಾಮೋದರ ಶೆಟ್ಟಿಗಾರ್, ಕೇಶವ ಕದ್ರಿ, ಯಶೋಧರ್ ಜೈನ್, ನಾಗೇಶ್ ಕುಲಾಲ್ ಉಪಸ್ಥಿತರಿದ್ದರು. ರಾಜ್ಯ ಸಮಿತಿ ಆಂತರಿಕ ಲೆಕ್ಕಪರಿಸೋಧಕರಾದ ಬಿ ರಘುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಉಮಾನಾಯ್ಕ್ ವಂದಿಸಿದರು. ಶಂಭು ಬಲ್ಯಾಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕೆಎಸ್ಟಿ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.
Posted by Vidyamaana on 2023-07-24 06:33:25 |
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಸೋಮವಾರ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.
ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ, ಸಮಾಲೋಚನೆ ನಡೆಸಲಿದ್ದಾರೆ.