ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಸುದ್ದಿಗಳು News

Posted by vidyamaana on 2024-06-30 19:50:01 |

Share: | | | | |


ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು. 


ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

 Share: | | | | |


ವಾಟ್ಸಾಪ್ ಚಾನೆಲ್ ಸೇರಿದ ಪ್ರಧಾನಿ ಮೋದಿ : ನಮೋ ಸಂಪರ್ಕಿಸೋದು ಈಗ ಇನ್ನಷ್ಟು ಸುಲಭ

Posted by Vidyamaana on 2023-09-20 08:20:04 |

Share: | | | | |


ವಾಟ್ಸಾಪ್ ಚಾನೆಲ್ ಸೇರಿದ ಪ್ರಧಾನಿ ಮೋದಿ : ನಮೋ ಸಂಪರ್ಕಿಸೋದು ಈಗ ಇನ್ನಷ್ಟು ಸುಲಭ

ನವದೆಹಲಿ: ಬುಧವಾರವಷ್ಟೇ ಮೆಟಾ ಕಂಪನಿ(Meta) ಲಾಂಚ್ ಮಾಡಿದ್ದ ವಾಟ್ಸಾಪ್‌ನ ಹೊಸ ಫೀಚರ್ ‘ಚಾನೆಲ್’ (WhatsApp Channel) ಈಗ ಜನಪ್ರಿಯವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೂ ಈಗ ವಾಟ್ಸಾಪ್‌ ಚಾನೆಲ್ ಆರಂಭಿಸಿದ್ದಾರೆ. ವಾಟ್ಸಾಪ್‌ ಚಾನೆಲ್‌ನಲ್ಲಿ ಅಡ್ಮಿನ್‌ಗಳು (WhatsApp Channel Admin), ತಮ್ಮ ಫಾಲೋವರ್ಸ್‌ಗೆ ಪಠ್ಯ, ಟೆಕ್ಸ್ಟ್, ಫೋಟೋ, ವಿಡಿಯೋ, ಸ್ಟಿಕರ್ಸ್ ಷೇರ್ ಮಾಡಬಹುದು. ಜತೆಗೆ ಸಮೀಕ್ಷೆ ಕೂಡ ಕೈಗೊಳ್ಳಬಹುದು.

Read more.....

ಜನ ಸಂಪರ್ಕಕ್ಕೆ ವಾಟ್ಸಪ್ ಚಾನೆಲ್ ಆರಂಭಿಸಿದ ದೇಶದ ಮೊಟ್ಟ ಮೊದಲ ಸಿಎಂ ಸಿದ್ದರಾಮಯ್ಯ


ಏನಿದು ವಾಟ್ಸಾಪ್ ಚಾನೆಲ್?

ವಾಟ್ಸಾಪ್ ಚಾನೆಲ್, ಇದು ಒನ್‌ ವೇ ಬ್ರಾಡಕಾಸ್ಟರ್ ಸಾಧನವಾಗಿದೆ. ಅಡ್ಮಿನ್‌ಗಳು ಫಾಲೋವರ್ಸ್‌ಗಳೊಂದಿಗೆ ಪಠ್ಯದಿಂದ ಮಲ್ಟಿಮೀಡಿಯಾ ಮತ್ತು ಸಮೀಕ್ಷೆಗಳವರೆಗೆ ವಿವಿಧ ರೀತಿಯ ವಿಷಯವನ್ನು ಹಂಚಿಕೊಳ್ಳಲು ಇದು ಅನುಮತಿಸುತ್ತದೆ. ವ್ಯಕ್ತಿಗತ ಬಳಕೆದಾರರು ತಮ್ಮ ನೆಚ್ಚಿನ ವ್ಯಕ್ತಿಗಳು ಮತ್ತು ಸಂಸ್ಥೆಗಳ ಚಟುವಟಿಕೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿ ಇರಲು ಇದರಿಂದ ಸಾಧ್ಯವಾಗಲಿದೆ. ಕುಟುಂಬ, ಸ್ನೇಹಿತರು ಮತ್ತು ಸಮುದಾಯಗಳೊಂದಿಗೆ ನಿಮ್ಮ ನಿಯಮಿತ ಚಾಟ್‌ಗಳಿಂದ ಭಿನ್ನವಾಗಿರುವ “ಅಪ್‌ಡೇಟ್‌ಗಳು” ಹೆಸರಿನ ಮೀಸಲಾದ ಟ್ಯಾಬ್ ಮೂಲಕ ವಾಟ್ಸಾಪ್ ಚಾನೆಲ್‌ ಪ್ರವೇಶಿಸಬಹುದಾಗಿದೆ.


ವಾಟ್ಸಾಪ್ ಚಾನೆಲ್ ಕಾರ್ಯ ಹೇಗೆ?

ಚಾನೆಲ್‌ಗಳು ಒನ್‌ವೇ ಬ್ರಾಡ್‌ಕಾಸ್ಟ್ ಆಗಿರುವುದರಿಂದ ಅಡ್ಮಿನ್‌ಗೆ ಮಾತ್ರ ಷೇರ್ ಮಾಡುವ ಹಕ್ಕಿರುತ್ತದೆ. ಬಳಕೆದಾರರು ಎಮೋಜಿಗಳ ಮೂಲಕ ಮಾತ್ರವೇ ಪ್ರತಿಕ್ರಿಯೆ ನೀಡಬಹುದು. ಹಾಗೆಯೇ, ಚಾನೆಲ್ ಪೋಸ್ಟ್‌ಗೆ ಎಷ್ಟು ರಿಯಾಕ್ಷನ್‌ಗಳು ಬಂದಿವೆ ಎಂಬುದನ್ನು ಲೆಕ್ಕ ಹಾಕಬಹುದು.


30 ದಿನಗಳವರೆಗೆ ಮಾತ್ರ ಅಡ್ಮಿನ್‌ಗಳಿಗೆ ತಮ್ಮ ಕಂಟೆಂಟ್ ಅಪ್‌ಡೇಟ್ ಮಾಡುವ ಇಲ್ಲವೇ ಬದಲಾವಣೆ ಮಾಡುವ ಅವಕಾಶವನ್ನು ಈ ಹೊಸ ಫೀಚರ್ ಒದಗಿಸುತ್ತದೆ. ಅದರ ವಾಟ್ಸಾಪ್, ತನ್ನ ಪ್ಲಾಟ್‌ಫಾರ್ಮ್ ಸರ್ವರ್‌ಗಳಿಂದ ಹಳೆಯ ಅಪ್‌ಡೇಟ್‌ಗಳನ್ನು ಸ್ವಯಂಚಾಲಿತವಾಗಿ ಡಿಲಿಟ್ ಮಾಡುತ್ತದೆ.ಇದಲ್ಲದೆ, ನೀವು ಚಾಟ್‌ಗಳು ಅಥವಾ ಗ್ರೂಪ್‌ಗಳಿಗೆ ಅಪ್‌ಡೇಟ್ಸ್ ಫಾರ್ವರ್ಡ್ ಮಾಡಿದಾಗ, ಅದು ಸ್ವಯಂಚಾಲಿತವಾಗಿ ಮೂಲ ಚಾನಲ್‌ಗೆ ಲಿಂಕ್ ಒಳಗೊಂಡಿರುತ್ತದೆ. ಇದರಿಂದಾಗಿ ಚಾನೆಲ್‌ನ ಕಂಟೆಂಟ್ ಹುಡುಕುವ ಇತರರಿಗೆ ಸುಲಭ ಪ್ರವೇಶ ಒದಗಿಸಲು ಸಾಧ್ಯವಾಗುತ್ತದೆ.


ನರೇಂದ್ರ ಮೋದಿ ವಾಟ್ಸಾಪ್ ಚಾನೆಲ್‌ ಫಾಲೋ ಮಾಡುವುದು ಹೇಗೆ?

ಮೊದಲಿಗೆ ನಿಮ್ಮ ವಾಟ್ಸಾಪ್‌ ಅಪ್‌ಡೇಟ್ ಆಗಿದೆಯಾ ಚೆಕ್ ಮಾಡಿಕೊಳ್ಳಿ. ಒಂದೊಮ್ಮೆ ಆಗಿರದಿದ್ದರೆ ಗೂಗಲ್ ಪ್ಲೇಸ್ಟೋರ್‌ಗೆ ಹೋಗಿ, ವಾಟ್ಸಾಪ್ ಅಪ್‌ಡೇಟ್ ಮಾಡಿಕೊಳ್ಳಿ. ಇಷ್ಟಾದ ಮೇಲೆ ಮೊದಲಿಗೆ ವಾಟ್ಸಾಪ್ ತೆರೆಯಿರಿ ಮತ್ತು ಅಪ್‌ಡೇಟ್‌ಗೆ ನ್ಯಾವಿಗೇಟ್ ಮಾಡಿ. ಬಳಿಕ, ನಿಮ್ಮ ಸ್ಕ್ರೀನ್‌ನ ಕೆಳಭಾಗದಲ್ಲಿ, ನೀವು “Find Channels” ಆಯ್ಕೆಯನ್ನು ಕಾಣುತ್ತೀರಿ. ಅದರ ಮೇಲೆ ಟ್ಯಾಪ್ ಮಾಡಿ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಲಭ್ಯವಿರುವ ಚಾನೆಲ್‌ಗಳ ಪಟ್ಟಿ ನಿಮ್ಮ ಮುಂದೆ ಗೋಚರವಾಗುತ್ತದೆ. ಚಾನೆಲ್‌ ಸೇರಲು, ಚಾನೆಲ್ ಮುಂದೆ ಇರುವ plus icon ಮೇಲೆ ಟ್ಯಾಪ್ ಮಾಡಿ. ಮತ್ತೊಂದು ರೀತಿಯಲ್ಲೂ ನೀವು ಚಾನೆಲ್ ಜಾಯಿನ್ ಆಗಬಹುದು. ಇದಕ್ಕಾಗಿ ನೀವು, ನಿಮ್ಮ ಪರದೆಯ ಮೇಲಿನ ಬಲ ಮೂಲೆಯಲ್ಲಿರುವ ಹುಡುಕಾಟ ಐಕಾನ್ ಅನ್ನು ನೀವು ಬಳಸಬಹುದು ಅಥವಾ ಕ್ಲಿಕ್ ಮಾಡಿ ಮತ್ತು ಹುಡುಕಬಹುದು.

ಶಾಸಕರ ಇಂದಿನ ಕಾರ್ಯಕ್ರಮ (ಜೂ 2)

Posted by Vidyamaana on 2023-06-02 03:15:32 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ (ಜೂ 2)

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜೂನ್ 2ರಂದು ಮಧ್ಯಾಹ್ನದ‌ ಬಳಿಕ ಕುಡಿಯುವ ನೀರಿನ‌ ವಿಷಯದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ

ಮಧ್ಯಾಹ್ನ 3 ಕ್ಕೆ ನೀರಾವರಿ ಇಲಾಖೆ ಅಧಿಕಾರಿಗಳ ಸಭೆ.

ಸಂಜೆ 5.30ಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಸಭೆ.

ನಾನು ನಿಶ್ಚಿಂತೆಯಿಂದ ಇರುತ್ತೇನೆ - ಮೌನಕ್ಕಿರುವ ಬೆಲೆ ಮಾತಿಗಿಲ್ಲ.. ಡಾ. ವೀರೇಂದ್ರ ಹೆಗ್ಗಡೆ

Posted by Vidyamaana on 2023-10-30 14:31:24 |

Share: | | | | |


ನಾನು ನಿಶ್ಚಿಂತೆಯಿಂದ ಇರುತ್ತೇನೆ - ಮೌನಕ್ಕಿರುವ ಬೆಲೆ ಮಾತಿಗಿಲ್ಲ.. ಡಾ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ : ನಾನು ನಿಶ್ಚಿಂತೆಯಿಂದ ಇರುತ್ತೇನೆ. ಮೌನಕ್ಕಿರುವ ಬೆಲೆ ಮಾತಿಗಿಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನಡೆದ ಧರ್ಮಸಂರಕ್ಷಣಾ ‌ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.


ನಮಗೆ ಸಾಕಷ್ಟು ಪ್ರಸಾದ ಬಂದಿದೆ. ಹಲವು ದೇವಸ್ಥಾನದಿಂದ ನಮಗೆ ಪ್ರಸಾದ ಬಂದಿದೆ. ನಿಜವಾದ ಪ್ರೀತಿ, ಭಕ್ತಿ ಇಟ್ಟಿದ್ದಕ್ಕೆ ಧನ್ಯವಾದಗಳು. ನಿಮಗೆ, ನಿಮ್ಮ ಕುಟುಂಬಕ್ಕೆ ಧನ್ಯವಾದಗಳು. ಮೌನಕ್ಕಿರೋ ಬೆಲೆ , ಮಾತಿಗಿಲ್ಲ. ನಾನು ಅವರಾಗೆ ಮಾತಾಡಿದ್ರೆ ವ್ಯತ್ಯಾಸ ಗೊತ್ತಾಗೊದಿಲ್ಲ. ಸ್ವಾಮೀಜಿಗಳು ಮಂತ್ರಾಕ್ಷತೆ ಕೊಟ್ಟು ನಿಮ್ಮೊಂದಿಗೆ ಇದ್ದಾರೆ ಅಂದಿದ್ದಾರೆ. ನಿಮ್ಮೊಂದಿಗೆ ನಾನು ಇದ್ದೇನೆ ಎಂದು ಅಭಯ ನೀಡಿದರು.


ನನ್ನ ಪತ್ನಿ, ಸಹೋದರ, ಅವರ ಪುತ್ರರು ಸಾಕಷ್ಟು ನೋವುಂಡಿದ್ದಿದ್ದಾರೆ. ಮಳೆಯಿಂದ ಎಲ್ಲಾ ಕಷ್ಟ ಕಳೆದುಹೋಗಲಿ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಟೀಕೆ ಆಪತ್ತು ಬಂದಾಗ ನೀವು ಮಾಡಿದ ಪೂಜೆ, ಪ್ರಾರ್ಥನೆಗೆ ಬಲ ಬಂದಿದೆ. ನಾನು ನಿಶ್ಚಿಂತೆಯಿಂದ ಇರುತ್ತೇನೆ. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರು ಸೇರಿ ಎಲ್ಲರೂ ಬೆಂಬಲಿಸಿದ್ದಾರೆ. ನಿಮ್ಮ ತ್ಯಾಗ ಎಲ್ಲವೂ ನಮ್ಮ ಸಂಪತ್ತು. ಮಹಾರಾಷ್ಟ್ರದಿಂದ ಕೇರಳದವರೆಗೆ ದೇವಸ್ಥಾನಕ್ಕೆ ಸಹಾಯ ಮಾಡಿದ್ದೇವೆ. ಹಿಂದೆಗಿಂತ ದುಪ್ಪಟ್ಟು ಸೇವೆ ಮಾಡುತ್ತೇನೆ ಎಂದು ಪೂಜ್ಯರು ಹೇಳಿದರು.


ಹೆಗ್ಗಡೆಯವರಪರವಾಗಿನಾವಿದ್ದೇವೆ


ಸಭೆ ಮುಕ್ತಾಯದ ಬಳಿಕ ಸನಾತನ ಪರಂಪರೆಯ ರಕ್ಷಣೆಗೆ ನಾವಿದ್ದೇವೆ. ಧರ್ಮಸ್ಥಳ ಪರಂಪರೆಯ ರಕ್ಷಣೆಗೆ, ಧರ್ಮಸ್ಥಳದ ಪರವಾಗಿ, ಹೆಗ್ಗಡೆಯವರ ಪರವಾಗಿ ನಾವಿದ್ದೇವೆ ಎಂದು ನೆರೆದಿದ್ದ ಭಕ್ತರು ಘೋಷಣೆ ಕೂಗಿದರು. ಹರಶಂಭೋ, ಮಹಾದೇವ, ಶಿವಶಂಕರ, ನೀಲಕಂಠ ಸಮೋಸ್ತುತೆ ಎಂದು ಪ್ರಾರ್ಥನೆ ಮೊಳಗಿಸಿದರು.

ನನ್ನ ಕ್ಷೇತ್ರದಲ್ಲಿ ಯಾರೂ ಹಸಿವಿನಿಂದ ಇರಬಾರದು ಸೂರು ನೀರು ಕರೆಂಟಿಲ್ಲದ ಮನೆಯೇ ಇರಬಾರದು: ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-08-28 13:54:49 |

Share: | | | | |


ನನ್ನ ಕ್ಷೇತ್ರದಲ್ಲಿ ಯಾರೂ ಹಸಿವಿನಿಂದ ಇರಬಾರದು ಸೂರು ನೀರು ಕರೆಂಟಿಲ್ಲದ ಮನೆಯೇ ಇರಬಾರದು: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನಾನು ಬಡತನದಿಂದ ಮೇಲೆ ಬಂದವ, ಬಡತನ ಏನೆಂಬುದು ನನಗೆ ಗೊತ್ತಿದೆ ಈ ಕಾರಣ ನಾನು ಹಸಿವನ್ನು ಚೆನ್ನಗಿ ಬಲ್ಲೆ, ನಾನು ಈಗ ಶಾಸಕನಾಗಿದ್ದೇನೆ ನನ್ನ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಹಸಿವಿನಿಂದ ಮಲಗಬಾರದು, ಸೂರು, ಕುಡಿಯುವ ನೀರು ಮತ್ತು ಕರೆಂಟ್ ಎಲ್ಲರಿಗೂ ಸಿಗುವಂತಾಗಬೇಕಂಬುದೇ ನನ್ನ ಉದ್ದೇಶವಾಗಿದೆ ನನ್ನ ಅಧಿಕಾರದ ಅವಧಿಯಲ್ಲಿ ಬಡವರಿಗೆ ಇವೆಲ್ಲವನ್ನೂ ನೀಡಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಆ. ೨೮ ರಂದು ಪುತ್ತೂರಿನಲ್ಲಿ ತನ್ನ ನೂತನ ಕಚೇರಿಯನ್ನು ಉದ್ಘಾಟಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

೯೪ಸಿ ಮತ್ತು ೯೪ ಸಿಸಿ ಇದು ಇಲ್ಲಿನ ಬಡವರ ಹಕ್ಕು. ಯಾರೆಲ್ಲಾ ಸರಕಾರಿ ಜಾಗದಲ್ಲಿ ಮನೆ ಮಾಡಿಕೊಂಡಿದ್ದಾರೆ, ಅವರು ಮನೆ ಕಟ್ಟಿರುವ ಜಾಗ ಕಾನೂನು ಪ್ರಕಾರ ಸರಕಾರಕ್ಕೆ ಸೇರಿದ್ದೇ ಅದಲ್ಲಿ ಅವರಿಗೆ ಹಕ್ಕು ಪತ್ರ ಕೊಟ್ಟೇ ಕೊಡ್ತೇನೆ. ಅಕ್ರಮ ಸಕ್ರಮ ಅರ್ಜಿಗಳನ್ನು ಕೆಲವೇ ತಿಂಗಳಲ್ಲಿ ಪೂರ್ಣಗೊಳಿಸಲಿದ್ದು ನಯಾ ಪೈಸೆ ಲಂಚ ಕೊಡದೆ ಅಕ್ರಮಸಕ್ರಮ ಕಡತವನ್ನು ವಿಲೇವಾರಿ ಮಾಡಿಸುತ್ತೇನೆ. ಮನೆ ಕಟ್ಟಲು ಜಾಗವೇ ಇಲ್ಲದವರಿಗೆ ೩ ಸೆಂಟ್ಸ್ ಜಾಗವನ್ನು ನೀಡಿ ಅವರಿಗೆ ಸೂರು ಕಲ್ಪಿಸುವ ಯೋಜನೆ ಇದೆ ಇದಕ್ಕಾಗಿ ವಿಟ್ಲದಲ್ಲಿ ೭ ಎಕ್ರೆ ಜಾಗ ಮತ್ತು ಕುಂಬ್ರ ಸಮೀಪ ಸ್ವಂತ ಹಣದಿಂದ ಜಾಗವನ್ನು ಖರೀದಿ ಮಾಡಿದ್ದೇನೆ. ಈಗಾಗಲೇ ಜಾಗವೇ ಇಲ್ಲದ ೬೦೦ ಮಂದಿ ನಿವೇಶನಕ್ಕಾಗಿ ಅರ್ಜಿ ಕೊಟ್ಟಿದ್ದಾರೆ. ವಿಧವೆಯವರಿಗೆ , ಅನಾಥರಿಗೆ, ನಿರ್ಗತಿಕರಿಗೆ ಮೊದಲ ಆದ್ಯತೆ ಮೇರೆಗೆ ಜಾಗವನ್ನು ಕೊಡಲಿದ್ದೇನೆ ಮತ್ತು ಪ್ರತೀ ಗ್ರಾಮದಲ್ಲಿ ಸರಕಾರಿ ಜಾಗವನ್ನು ಗುರುತಿಸಿ ಅದನ್ನು ಕಾನೂನಾತ್ಮಕವಾಗಿ ಬಡವರಿಗೆ ಹಂಚುವ ಕೆಲಸವನ್ನು ಮಾಡುತ್ತೇನೆ. ನಾನು ಚುನಾವಣೆಗೆ ಮುಂಚೆ ನಿಮಗೆ ಕೊಟ್ಟ ಭರವಸೆಯನ್ನು ಮರೆತಿಲ್ಲ ಎಂದು ಹೇಳಿದ ಶಾಸಕರು ಕ್ಷೇತ್ರದ ಅಭಿವೃದ್ದಿಗೆ ಜನರ ಸಹಕಾರವನ್ನು ಕೋರಿದರು.

ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಎಸ್.ಅಂಗಾರ

Posted by Vidyamaana on 2023-04-12 05:58:07 |

Share: | | | | |


ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಎಸ್.ಅಂಗಾರ

ಸುಳ್ಯದಲ್ಲಿ‌ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಹಾಲಿ ಸಚಿವ, ಎಸ್ ಅಂಗಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು   ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು.

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತಕ್ಕೆ ಕಳಂಜಿಬೈಲ್ ನಿವಾಸಿ ಜಾಫರ್ ಮೃತ್ಯು.

Posted by Vidyamaana on 2023-04-22 11:58:16 |

Share: | | | | |


ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತಕ್ಕೆ  ಕಳಂಜಿಬೈಲ್ ನಿವಾಸಿ ಜಾಫರ್ ಮೃತ್ಯು.

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಇದೀಗ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ.



ಈದುಲ್ ಫಿತ್ರ್ ಸಂಭ್ರಮದಲ್ಲಿ ನೆಂಟರಸ್ಥರ ಮನೆಗೆ ತನ್ನೆರೆಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ರಾಂಗ್ ಸೈಡ್ ನಲ್ಲಿ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಜಾಫರ್ ರವರ ಸ್ಕ್ಯೂಟರ್ ಪೊದೆಗೆ ಹೋಗಿ ಬಿದ್ದಿದ್ದು ಜಾಫರ್ ರವರು ಸ್ಥಳದಲ್ಲೇ ಅಸು ನೀಗಿದ್ದಾರೆ.ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಹಬ್ಬದ ಸಂಭ್ರಮದಲ್ಲಿ ಈ ಅಪಘಾತ ನಿಜಕ್ಕೂ ಆಘಾತ ಮೂಡಿಸಿದೆ.



Leave a Comment: