ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

Posted by Vidyamaana on 2023-11-19 20:09:24 |

Share: | | | | |


ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಚಕವಾಗಿ ಸಾಗುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ 241 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ಆರಂಭದಲ್ಲಿ ಅಬ್ಬರಿಸಿದರೂ 3 ವಿಕೆಟ್ ಕಳೆದುಕೊಂಡಿದೆ.7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಶಮಿ ಎಸೆದ ಚೆಂಡನ್ನು ಕೊಹ್ಲಿ ಕೈಗಿತ್ತು ನಿರ್ಗಮಿಸಿದರು. 15 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಬುಮ್ರಾ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ನಿರ್ಗಮಿಸಿದರು. ಬಳಿಕ ಸ್ಮಿತ್‌ ಎಲ್ಬಿಡಬ್ಲ್ಯೂ ಮೂಲಕ ಔಟಾಗಿದ್ದು ವಿಶ್ವಕಪ್ ಫೈನಲ್ ನಂತಹ ಮಹತ್ವದ ಪಂದ್ಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.


ಬುಮ್ರಾ ಎಸೆದ  ಆಫ್-ಕಟ್ಟಿಂಗ್ ನಿಧಾನಗತಿಯ ಚೆಂಡು  ಲೆಗ್ ಸೈಡ್ ಆಡಲು ಬಯಸದ ಸ್ಮಿತ್ ಅವರ ಪ್ಯಾಡ್ ಗೆ ತಾಗಿತು. ಅಂಪಾಯರ್ ಔಟ್ ನೀಡಿದರು. ಆಸಕ್ತಿದಾಯಕರಾಗಿ ಸ್ಮಿತ್ ಅದನ್ನು ಪರಿಶೀಲಿಸಲಿಲ್ಲ. ಇನ್ನೊಂದು ಬದಿಯಲ್ಲಿದ್ದ ಹೆಡ್ ಜತೆ ಮಾತನಾಡಿ ಹೊರನಡೆದರು. ಬಾಲ್ ಎತ್ತರವು ನಿಜವಾಗಿಯೂ ಒಂದು ಪ್ರಶ್ನೆಯಾಗಿತ್ತು. ಆದರೆ ರಿಪ್ಲೇ ಇಂಪ್ಯಾಕ್ಟ್ ನಲ್ಲಿ ಔಟ್ ಆಫ್ ಸ್ಟಂಪ್ ಎಂದು ಕಂಡು ಬಂದಿತು.ಅನುಭವಿ ಆಟಗಾರ ಸ್ಮಿತ್ ಅದನ್ನು ಏಕೆ ಸರಿಯಾಗಿ ಏಕೆ ಪರಿಶೀಲಿಸಲಿಲ್ಲ? ಎಂದು ಹಲವರು ಪ್ರಶ್ನಿಸಿದ್ದಾರೆ.ಆಸ್ಟ್ರೇಲಿಯ 22 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.

ಮಹಿಳಾ ಪೊಲೀಸ್ ಪೇದೆ ಮಂಜುಶ್ರೀ ಆತ್ಮಹತ್ಯೆ , ಕಾರಣ ನಿಗೂಢ

Posted by Vidyamaana on 2024-02-17 21:19:17 |

Share: | | | | |


ಮಹಿಳಾ ಪೊಲೀಸ್ ಪೇದೆ ಮಂಜುಶ್ರೀ ಆತ್ಮಹತ್ಯೆ , ಕಾರಣ ನಿಗೂಢ

ರಾಮನಗರ, ಫೆ 17: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.


ದ್ಯಾವಸಂದ್ರ ಗ್ರಾಮದ ಮಂಜುಶ್ರೀ ( 29) ಆತ್ಮಹತ್ಯೆ ಮಾಡಿಕೊಂಡ ಕಾನ್ ಸ್ಟೇಬಲ್.


ಮಂಜುಶ್ರೀ ಅವರು ಬೆಂಗಳೂರಿನ ಮೈಕೋ ಲೆಔಟ್ ಪೋಲಿಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ನಿಯೋಜನೆಯಡಿ ಶಿವಾಜಿನಗರ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.

ಶುಕ್ರವಾರ ತಡರಾತ್ರಿ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ


ಹಾರೋಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

3 ನೇ ಮಹಾಯುದ್ಧದ ಭೀತಿ : ಇಸ್ರೇಲ್ ಮೇಲೆ ದಾಳಿಗೆ ಇರಾನ್, ಯೆಮೆನ್, ಸಿರಿಯಾ ಮತ್ತು ಇರಾಕ್ ಸಜ್ಜು

Posted by Vidyamaana on 2024-04-14 12:55:15 |

Share: | | | | |


3 ನೇ ಮಹಾಯುದ್ಧದ ಭೀತಿ : ಇಸ್ರೇಲ್ ಮೇಲೆ ದಾಳಿಗೆ ಇರಾನ್, ಯೆಮೆನ್, ಸಿರಿಯಾ ಮತ್ತು ಇರಾಕ್ ಸಜ್ಜು

ಇಸ್ರೇಲ್ : ಇಂದು ಮುಂಜಾನೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯು ಮೂರನೇ ಮಹಾಯುದ್ಧದ ಗಂಟೆಯನ್ನು ಬಾರಿಸಿದೆ. ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ, ಇರಾನ್ ಭಾನುವಾರ ಮುಂಜಾನೆ ಇಸ್ರೇಲ್ ಮೇಲೆ ತೀವ್ರ ದಾಳಿ ನಡೆಸಿತು. ಈ ಸಮಯದಲ್ಲಿ, ಇರಾನ್ ಇಸ್ರೇಲ್ ಮೇಲೆ ನೂರಾರು ಡ್ರೋನ್ಗಳು, ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಕ್ರೂಸ್ ಕ್ಷಿಪಣಿಗಳನ್ನು ಹಾರಿಸುವ ಮೂಲಕ ಕೋಲಾಹಲವನ್ನು ಸೃಷ್ಟಿಸಿತು.ಇಂದು ಮುಂಜಾನೆ, ಇರಾನ್ ಮತ್ತು ಯೆಮೆನ್, ಸಿರಿಯಾ ಮತ್ತು ಇರಾಕ್ನ ಅನುಕಂಪ ಹೊಂದಿರುವವರು ಇಸ್ರೇಲ್ನಲ್ಲಿನ ಮಿಲಿಟರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದರು. ಸಂಪೂರ್ಣ ದಾಳಿಯಿಂದ ಇಸ್ರೇಲ್ ಆಘಾತಕ್ಕೊಳಗಾಗಿದೆ. ಆದಾಗ್ಯೂ, ಇಸ್ರೇಲಿ ಸೈನ್ಯವು ಈ ಹೆಚ್ಚಿನ ದಾಳಿಗಳನ್ನು ಹಿಮ್ಮೆಟ್ಟಿಸಿತು. ಇರಾನ್ ಸೇರಿದಂತೆ ಇತರ ದೇಶಗಳ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಲು ಯುಎಸ್ ಇಸ್ರೇಲ್ಗೆ ಸಹಾಯ ಮಾಡಿತು.

ಸಂಕ್ರಾಂತಿ ಕೋಳಿ ಕಾಳಗ ನೋಡಲು ನೂಕುನುಗ್ಗಲು- ವಿದೇಶದಿಂದಲೂ ಆಗಮನ!

Posted by Vidyamaana on 2024-01-31 10:31:16 |

Share: | | | | |


ಸಂಕ್ರಾಂತಿ ಕೋಳಿ ಕಾಳಗ ನೋಡಲು ನೂಕುನುಗ್ಗಲು- ವಿದೇಶದಿಂದಲೂ ಆಗಮನ!

ಆಂಧ್ರಪ್ರದೇಶ): ಸಂಕ್ರಾಂತಿ ಪ್ರಯುಕ್ತ ಆಂಧ್ರಪ್ರದೇಶದ ಉಭಯ ಗೋದಾವರಿ ಜಿಲ್ಲೆ ಸೇರಿದಂತೆ ವಿವಿಧೆಡೆ ನಡೆದ ವಾರ್ಷಿಕ ಕೋಳಿ ಕಾಳಗದಲ್ಲಿ ಭಾಗವಹಿಸಲು (ಪಂಟರ್‌) ಮತ್ತು ನೋಡಲು ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮವರಂ ಸನಿಹದ ಪೆದಮೀರಂ ಹಳ್ಳಿಯಲ್ಲಿ ಹೊರರಾಜ್ಯಗಳಿಂದ ಬಂದಿದ್ದ ಕಾರುಗಳು ಸಾಲುಗಟ್ಟಿದ್ದವು.ಅವರೆಲ್ಲ ಕೋಳಿ ಕಾಳಗ ನೋಡಲು ಬಂದವರು. ಅಲ್ಲಿ ನೆರೆದವರಲ್ಲಿ ಹಬ್ಬಕ್ಕೆಂದು ವಿದೇಶದಿಂದ ಹಾರಿಬಂದಿದ್ದವರೂ ಇದ್ದರು. ಈ ಸಮಯದಲ್ಲಿ ಕೋಟ್ಯಂತರ ರೂಪಾಯಿಯ ವ್ಯವಹಾರ ನಡೆಯುತ್ತದೆ. 


ಸಾವಿರಕ್ಕೂ ಹೆಚ್ಚು ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿತ್ತು. ಜೂಜುಕೋರರ ನೆರವಿಗೆ ಕಾರ್ಡ್ ಸ್ವೈಪಿಂಗ್ ಯಂತ್ರ, ಹಣ ಎಣಿಸುವ ಯಂತ್ರಗಳನ್ನೂ ತರಲಾಗಿತ್ತು. ಉಪಹಾರವೂ ಸೇರಿದಂತೆ ಮಾಂಸಾಹಾರದ ಭೋಜನ ವ್ಯವಸ್ಥೆ ಮಾಡಲಾಗಿತ್ತು. 


ಅಲ್ಲಿ ಕೋಳಿ ಕಾಳಗದ ಜೊತೆಗೆ ಇಸ್ಪೀಟ್ ಮತ್ತಿತರ ಜೂಜುಗಳನ್ನೂ ಆಡಲಾಗುತ್ತಿತ್ತು. ಅಲ್ಲಿಗೆ ಅರ್ಧ ಕಿಲೋಮೀಟರ್ ದೂರದ ಜುವ್ವಲಪಾಲೇಂ ಎಂಬಲ್ಲಿಯೂ ಸಣ್ಣದೊಂದು ಕೋಳಿ ಕಾಳಗ ಮತ್ತಿತರ ಜೂಜಾಟ ನಡೆಯುತ್ತಿತ್ತು. ಜೂಜುಕೋರರು ಮತ್ತು ಪ್ರೇಕ್ಷಕರ ಪೈಕಿ ಹೆಚ್ಚಿನವರು ಗಂಡಸರೇ ಆಗಿದ್ದರೂ ಕೆಲವು ಮಹಿಳೆಯರು, ಮಕ್ಕಳೂ ಕೂಡ ಸಂಕ್ರಾಂತಿ ಹಬ್ಬದ ವಿಶೇಷ ಕೋಳಿ ಕಾಳಗ ನೋಡಲು ಬಂದಿದ್ದರು. ಕೋಳಿ ಕಾಳಗ, ಜೂಜಾಟಗಳು ಉಭಯ ಗೋದಾವರಿ ಜಿಲ್ಲೆಗಳಲ್ಲಿ ಅಷ್ಟೇ ಅಲ್ಲ, ಆಂಧ್ರದ ಕೃಷ್ಣಾ, ಎನ್‌ಟಿಆರ್ ಮತ್ತಿತರ ಜಿಲ್ಲೆಗಳಲ್ಲಿಯೂ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಮೂರು ದಿನಗಳವರೆಗೆ ನಡೆಯುತ್ತವೆ.

ರೈಲಿನಲ್ಲಿ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ: ಆರೋಪಿ ಶಾರುಖ್ ಸೈಫಿ ಸೆರೆ

Posted by Vidyamaana on 2023-04-05 09:15:56 |

Share: | | | | |


ರೈಲಿನಲ್ಲಿ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ: ಆರೋಪಿ ಶಾರುಖ್ ಸೈಫಿ ಸೆರೆ

ಕೇರಳ :  ಕೋಯಿಕ್ಕೋಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ.ಮುಂಬೈ ಕೋಯಿಕ್ಕೋಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ.

ಈ ಭೀಕರ ಪ್ರಕರಣದಲ್ಲಿ ಮೂವರ ಸಾವು ಮಾತ್ರವಲ್ಲದೇ 9 ಜನರು ಗಾಯಗೊಂಡಿದ್ದರು. ಕೊಯಿಕ್ಕೋಡ್‌ನಲ್ಲಿ ಅಳಪುಳಾ- ಕಣ್ಣೂರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ಆರೋಪಿ ಅಲ್ಲಿಂದ ತಪ್ಪಿಸಿಕೊಂಡಿದ್ದ. ಈತನ ಪತ್ತೆಗೆ ವಿಶೇಷ ತನಿಖಾ ದಳ ತನ್ನ ಹುಡುಕಾಟವನ್ನು ತೀವ್ರಗೊಳಿಸಿತ್ತು.

ಆರೋಪಿ ಶಾರುಖ್‌ ಸೈಫಿ ನೊಯ್ಡಾ ಮೂಲದವನಾಗಿದ್ದು, ಮಂಗಳವಾರ ಆತ ರತ್ನಗಿರಿಯಲ್ಲಿದ್ದಾನೆಂಬ ಲೊಕೇಷನ್ ಪತ್ತೆಯಾಗಿತ್ತು. ರೈಲಿಗೆ ಬೆಂಕಿ ಹಚ್ಚಿ ಅಲ್ಲಿಂದ ಕೆಳಗೆ ಜಿಗಿಯುವಾಗ ಆತನ ತಲೆಗೆ ಗಾಯಾಗಿತ್ತು. ಅದಕ್ಕೆ ಚಿಕಿತ್ಸೆ ಪಡೆಯಲು ಆತ ರತ್ನಾಗಿರಿ ಜಿಲ್ಲಾಸ್ಪತ್ರೆಗೆ ತೆರಳಿದ್ದ. ಆದರೆ, ಅಲ್ಲಿ ಪೂರ್ತಿ ಚಿಕಿತ್ಸೆಯನ್ನು ಪಡೆದುಕೊಳ್ಳದೇ ಪರಾರಿಯಾಗಿದ್ದ. ಬಳಿಕ ರತ್ನಾಗಿರಿಯಲ್ಲಿ ಆತನಿಗಾಗಿ ತೀವ್ರ ಶೋಧ ನಡೆಸಲಾಯಿತು ಕೊನೆಗೆ ಆತ ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಸದ್ಯಕ್ಕೆ ರತ್ನಾಗಿರಿ ಆರ್‌ಪಿಎಫ್ ವಶದಲ್ಲಿರುವ ಆತನನ್ನು ಕೇರಳ ಪೊಲೀಸರು ಶೀಘ್ರವೇ ತಮ್ಮ ವಶಕ್ಕೆ ಪಡೆದುಕೊಳ್ಳಲಿದ್ದಾರೆ.

ಪುತ್ತೂರು : ಸಚಿನ್ ಟ್ರೇಡರ್ಸ್ ನಿಂದ ಲಕ್ಷಾಂತರ ರೂಪಾಯಿ ಕಳವು - ಸಿಸಿಕ್ಯಾಮರದಲ್ಲಿ ಸೆರೆ

Posted by Vidyamaana on 2023-09-09 04:44:40 |

Share: | | | | |


ಪುತ್ತೂರು : ಸಚಿನ್ ಟ್ರೇಡರ್ಸ್ ನಿಂದ ಲಕ್ಷಾಂತರ ರೂಪಾಯಿ ಕಳವು - ಸಿಸಿಕ್ಯಾಮರದಲ್ಲಿ ಸೆರೆ

ಪುತ್ತೂರು: ಪುತ್ತೂರಿನ ಖ್ಯಾತ ಹೋಲ್ ಸೇಲ್

ಡಿಸ್ಟ್ರಿಬ್ಯೂಟರ್ ಸಚಿನ್ ಟ್ರೇಡರ್ಸ್‌ ಅಂಗಡಿಯಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಬಗ್ಗೆ ಪುತ್ತೂರು ಪೊಲೀಸರಿಗೆ ಅಂಗಡಿಯ ಮಾಲಕರು

ದೂರು ನೀಡಿದ್ದಾರೆ.ಕಳವು ಪ್ರಕರಣ ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದೆ. ಸಚಿನ್ ಟ್ರೇಡರ್ಸ್ ನ ಮಾಲಕಿ ವಿದ್ಯಾ ನಾಯಕ್ ಮತ್ತು ಅವರ ಗಂಡ ಮಂಜುನಾಥ್ ನಾಯಕ್ ಅವರು ಅಂಗಡಿಯ ವ್ಯವಹಾರ ನೋಡಿಕೊಳ್ಳುತ್ತಿದ್ದು ಸೆ.4ರಂದು ಮಂಜುನಾಥ್ ನಾಯಕ್ ಅವರು ಲೆಕ್ಕ ಮಾಡಿಟ್ಟ ರೂ. 2,15,000 ನಗದನ್ನು ಪೇಪರ್‌ನಲ್ಲಿ ಕಟ್ಟಿ ಮನೆಗೆ ಹೋಗುವಾಗ ತೆಗೆದುಕೊಂಡು ಹೋಗಲೆಂದು ಡ್ರಾಯರ್ ಪಕ್ಕದಲ್ಲಿ ಇಟ್ಟಿದ್ದರು. ಆದರೆ ಅವರು ಮರೆತು ನಗದನ್ನು ಅಲ್ಲೇ

ಬಿಟ್ಟಿದ್ದರು.ಎರಡು ದಿನ ಬಳಿಕ ಅವರಿಗೆ ತಾನಿಟ್ಟ ಹಣದ ನೆನಪಾಗಿ ಡ್ರಾಯರ್ ಪಕ್ಕ ನೋಡಿದಾಗ ನಗದು ಅಲ್ಲಿ ನಾಪತ್ತೆಯಾಗಿತ್ತು. ಈ ಕುರಿತು ಅವರು ಅಂಗಡಿಯ ಸಿಸಿ ಕ್ಯಾಮರಾವನ್ನು ಪರಿಶೀಲಿಸಿದಾಗ ಸೆ.4 ರಾತ್ರಿ ಸಮಯ ಒಬ್ಬ ವ್ಯಕ್ತಿ ಅಂಗಡಿಯ ಹಿಂಬದಿಯ ಕ್ಯಾಂಟೀನ್ ಗೋಡೆಗೆ ಹತ್ತಿ ವೆಂಟಿಲೇಟರ್ ಮೂಲಕ ಒಳಪ್ರವೇಶಿಸಿ ಅಂಗಡಿಯ ಒಳಗೆ ಬಂದು ಅಂಗಡಿಯ ಡ್ರಾಯ‌ರ್ 

ಪಕ್ಕದಲ್ಲಿದ್ದ ಹಣದ ಕಟ್ಟನ್ನು ಕದ್ದು ಹೋಗುತ್ತಿರುವುದು ಕಂಡು ಬಂದಿದೆ.ಅಂಗಡಿಯ ಮಾಲಕರು ಸೆ.7ರಂದು ಪುತ್ತೂರು

ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆಲಸದಾಳುವಿನ ಮೇಲೆ ಸಂಶಯ :

ಸಿಸಿ ಕ್ಯಾಮರ ಪರಿಶೀಲಿಸಿದಾಗ ಅಂಗಡಿಯ ಕೆಲಸದಾಳು ಕುದ್ಮಾರು ಗ್ರಾಮದ ಚೇತನ್ ಕುಮಾರ್ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿತ್ತು. ಆತನೇ ಕಳವು ಮಾಡಿರಬಹುದು ಎಂದು ಅಂಗಡಿಯ ಮಾಲಕರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



Leave a Comment: