ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ; ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಸುದ್ದಿಗಳು News

Posted by vidyamaana on 2024-06-30 21:58:04 |

Share: | | | | |


ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ;  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ.

ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.

ಬೆಂಕಿ ಅವಘಡದ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತರಾದ ಸಲೀಕತ್, ಅಬೂಬಕ್ಕರ್, ರಿಯಾಝ್, ಜುನೈದ್ ಮನೆಯೊಳಗೆ ಪ್ರವೇಶಿಸಿ

ವಿದ್ಯುತ್ ಸಂಪರ್ಕ, ಗ್ಯಾಸ್ ಸಂಕರ್ಪ ಕಡಿತಗೊಳಿಸಿದರು. ಪುತ್ತೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.

ಘಟನಾ ಸ್ಥಳಕ್ಕೆ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಆತೂರು ಬದ್ರಿಯಾ ಮಸೀದಿ ಖತೀಬ್ ಜುನೈದ್ ಜಿಫ್ರಿ ತಂಙಳ್ ಭೇಟಿ ನೀಡಿದರು. ಕೊಯಿಲ ಗ್ರಾಮಕರಣಿಕ ಶೇಷಾದ್ರಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ನಾನು ಕೋಣೆಯೊಂದರಲ್ಲಿ ಕೆಲಸದಲ್ಲಿ ನಿರತಳಾಗಿದ್ದೆ. ತುಂತುರು ಮಳೆಯಾಗುತ್ತಿತ್ತು. ಭಾರಿ ಸಿಡಿಲಿನ ಶಬ್ದ ಕೇಳಿಸಿತ್ತು. ಸ್ವಲ್ಪ ಹೊತ್ತಿನ ಬಳಿಕ ಮನೆಯೊಳಗೆ ಹೊಗೆ ತುಂಬತೊಡಗಿತು. ಮನೆಯಿಂದ ಹೊರ ಬರುವುದಕ್ಕೂ ದಾರಿ ಕಾಣುತ್ತಿರಲಿಲ್ಲ ಎಂದು ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ತಿಳಿಸಿದರು.

ಉಪ್ಪಿನಂಗಡಿ ಸಮೀಪದ ಕೆಮ್ಮಾರದಲ್ಲಿ ಮನೆ ಭಾಗಶಃ ಬೆಂಕಿಗೆ ಆಹುತಿಯಾಗಿದ್ದು ಕಂದಾಯ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು

 Share: | | | | |


ಮಂಗಳಮುಖಿ ಸ್ನೇಹದಿಂದ ಲಿಂಗ ಪರಿವರ್ತನೆಗೆ ಮುಂದಾದ 3 ಮಕ್ಕಳ ತಾಯಿ

Posted by Vidyamaana on 2023-10-07 12:45:59 |

Share: | | | | |


ಮಂಗಳಮುಖಿ ಸ್ನೇಹದಿಂದ ಲಿಂಗ ಪರಿವರ್ತನೆಗೆ ಮುಂದಾದ 3 ಮಕ್ಕಳ ತಾಯಿ

ಹಾವೇರಿ, ಅಕ್ಟೋಬರ್​ 4: ಮೂರು ಮಕ್ಕಳ ತಾಯಿಯೊಬ್ಬರು (Mother) ಲಿಂಗ ಪರಿವರ್ತನೆಗೆ ಮುಂದಾಗಿದ್ದಾರೆ. ಮಂಗಳಮುಖಿಯ (Transgender) ಸ್ನೇಹದಿಂದಾಗಿ ಸದರಿ ಮಹಿಳೆಯು ಈ ಪರಿವರ್ತನೆ ಬಯಸಿದ್ದಾರೆ. ಇದು ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಮಹಿಳೆಯೊಬ್ಬರ ಕಥೆ. ಈ ಮಧ್ಯೆ, ಇದೇ ವಿಷಯವಾಗಿ ರಾಣೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸದರಿ ಮಹಿಳೆಯು ಮೂಲತಃ ವಿಜಯಪುರ ಜಿಲ್ಲೆಯವರು. ಸುಮಾರು 40 ವರ್ಷಗಳಿಂದ ರಾಣೇಬೆನ್ನೂರಿನಲ್ಲಿ (Ranebennur, Haveri district) ವಾಸವಿದ್ದಾರೆ. ಮಂಗಳಮುಖಿಯ ಜೊತೆಗೆ ಸ್ನೇಹದಿಂದಾಗಿ ಗಂಡನಿಗೆ ವಿಚ್ಚೇದನ ನೀಡಿ, ಲಿಂಗ ಪರಿವರ್ತನೆಗೆ ಮುಂದಾಗಿದ್ದಾರೆ. ಈ ಮಧ್ಯೆ, ಮಂಗಳಮುಖಿ ಜೊತೆಗಿನ ಸಹವಾಸದಿಂದಾಗಿ ಮಹಿಳೆಗೆ ಡ್ರಗ್ಸ್ ಚಟ ಹತ್ತಿದೆ.ಈ ಬೆಳವಣಿಗಳಿಂದಾಗಿ ಆ ಮಹಿಳೆಯು ಮಂಗಳಮುಖಿಯ ಜೊತೆಗೆ ಜೀವನ ನಡೆಸುವ ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಆದರೆ ಮಹಿಳೆ ಲಿಂಗ ಪರಿವರ್ತನೆ ಬಯಸಿದ್ದರಾದರೂ, ತಾಂತ್ರಿಕ ದೋಷದಿಂದ ಅದು ಸಾಧ್ಯವಾಗಿಲ್ಲ.


ಹಾವೇರಿ ಇಡಾರಿ ಸಂಸ್ಥೆಯ ಮೂಲಕ ಸಮಾಲೋಚನೆ ನಡೆಸಿ ಲಿಂಗ‌ ಪರಿವರ್ತನೆಗೆ ಸದ್ಯ ತಡೆಯೊಡ್ಡಲಾಗಿದೆ. ಸದರಿ ಮಹಿಳೆಯು ತನ್ನ ಜೊತೆಗೆ ತನ್ನ ಎರಡು ಮಕ್ಕಳಿಗೂ ಲಿಂಗ ಪರಿವರ್ತನೆ ಮಾಡಿಸಲು ಮುಂದಾಗಿದ್ದರು ಎಂಬ ಆತಂಕಕಾರಿ ಮಾಹಿತಿ ದೊರೆತಿದೆ.

ನೈನ್ ಟು ನೈನ್ – ಜಿ.ಎಲ್.ಒನ್ ಮಾಲ್ ನಲ್ಲಿ ಶುಭಾರಂಭಗೊಳ್ಳುತ್ತಿದೆ ಮಂಗಲ್ ಹೈಪರ್ ಮಾರ್ಕೆಟ್

Posted by Vidyamaana on 2024-03-28 11:39:02 |

Share: | | | | |


ನೈನ್ ಟು ನೈನ್ – ಜಿ.ಎಲ್.ಒನ್ ಮಾಲ್ ನಲ್ಲಿ ಶುಭಾರಂಭಗೊಳ್ಳುತ್ತಿದೆ ಮಂಗಲ್ ಹೈಪರ್ ಮಾರ್ಕೆಟ್

ನೈನ್ ಟು ನೈನ್ – ಜಿ.ಎಲ್.ಒನ್ ಮಾಲ್ ನಲ್ಲಿ ಶುಭಾರಂಭಗೊಳ್ಳುತ್ತಿದೆ ‘ಮಂಗಲ್ ಹೈಪರ್ ಮಾರ್ಕೆಟ್’

ಇದು ನಮ್ಮ ಊರಿನ ನಿಮ್ಮ ಅಂಗಡಿ – ಈ ಸುದ್ದಿ ಓದಿದ್ರೆ ನಿಮ್ಗೆ ಗೊತ್ತಾಗುತ್ತರೆ ಎಲ್ಲಾ ವಿದ್ಯಮಾನ!

ವಿಶ್ವಾಸಾರ್ಹ ಸೇವೆ ಮೂಲಕ ಜನರ ಪ್ರೀತಿಗೆ ಪಾತ್ರವಾಗಿರುವ ಮಂಗಲ್ ಸ್ಟೋರ್ಸ್ ನ ಹೊಸ ಸ್ವರೂಪ ‘ಮಂಗಲ್ ಹೈಪರ್ ಮಾರ್ಕೆಟ್’


ಹೈಪರ್ ಮಾರ್ಕೆಟ್ ಗಳು ಇಂದಿನ ಜನರ ದೈನಂದಿನ ಅವಶ್ಯಕತೆಗಳನ್ನು ಪೂರೈಸುವ ಮಳಿಗೆಗಗಳಾಗಿ ಮಾರ್ಪಟ್ಟಿವೆ. ಮಹಾನಗರಗಳಿಗೆ ಸೀಮಿತವಾಗಿದ್ದ ಹೈಪರ್ ಮಾರ್ಕೆಟ್ ಗಳು ಇವತ್ತು ಸಣ್ಣ ನಗರ –ಪಟ್ಟಣಗಳಲ್ಲು ತಲೆ ಎತ್ತಿ ನಿಂತಿದ್ದು ಆ ಭಾಗದ ಗ್ರಾಹಕರ ಖರೀದಿಗೆ ‘ಬಲ’ ತುಂಬುವ ಕೆಲಸವನ್ನು ಮಾಡುತ್ತಿದೆ.

ಆದರೆ ಹೆಚ್ಚಿನ ಹೈಪರ್ ಮಾರ್ಕೆಟ್ ಗಳಿಗೆ ಆ ಊರಿನ ನಂಟು ಇರುವುದಿಲ್ಲ. ಹೆಚ್ಚೆಂದರೆ ಆ ಊರಿನ ಜನರನ್ನು ಕೆಲಸಕ್ಕೆ ಇಟ್ಟುಕೊಳ್ಳಟಬಹುದಷ್ಟೇ, ಆದರೆ ಇದೀಗ ಪುತ್ತೂರಿನಲ್ಲಿ ಎ.01ರಂದು ಇಲ್ಲಿನ ಜಿ.ಎಲ್.ಒನ್ ಮಾಲ್ ನಲ್ಲಿ ಶುಭಾರಂಭಗೊಳ್ಳುತ್ತಿರುವ ಮಂಗಲ್ ಹೈಪರ್ ಮಾರ್ಕೆಟ್ – ನಮ್ಮ ಊರಿನ ನಿಮ್ಮ ಅಂಗಡಿ ಎಂಬ ವಿಶೇಷ ಟೈಟಲ್ ನೊಂದಿಗೆ ಊರಿನ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗಿ ಶುಭಾರಂಭಗೊಳ್ಳುತ್ತಿದೆ.


 ಎಲ್ಲಾ ದಿನಬಳಕೆ ವಸ್ತುಗಳನ್ನು ಅತ್ಯಂತ ಕಡಿಮೆ ಬೆಲೆಗೆ ಒಂದೇ ಕಡೆ ಖರೀದಿ ಮಾಡಕೆಂದು ಬಯಸುವವರಿಗೆ ಅತ್ಯುತ್ತಮ ತಾಣವೊಂದು ಮುತ್ತಿನ ನಗರಿ ಪುತ್ತೂರಿನ ಹೃದಯಭಾಗದಲ್ಲಿ ಆರಂಭಗೊಳ್ಳುತ್ತಿದೆ.‌ ಹೌದು, ಹಲವು ವರ್ಷಗಳ ಗುಣಮಟ್ಟದ, ವಿಶ್ವಾಸಾರ್ಹ ಸೇವೆಯ ಮೂಲಕ ಪುತ್ತೂರಿಗರ ಮನಗೆದ್ದಿರುವ ಮಂಗಲ್ ಸ್ಟೋರ್ಸ್ ಇದೀಗ ಪುತ್ತೂರಿನ ಜಿ.ಎಲ್.ಒನ್ ಮಾಲ್ ನಲ್ಲಿ ಕಾರ್ಯಾರಂಭ ಮಾಡುವುದಕ್ಕೆ ಸಜ್ಜಾಗಿ ನಿಂತಿದೆ. 

ಇದೇ ಎ.೧ರಿಂದ ಮಂಗಲ್‌ ಹೈಪರ್‌ ಮಾರ್ಕೆಟ್‌ ಪುತ್ತೂರಿನ ಜಿ.ಎಲ್.ಒನ್ ಮಾಲ್ ನಲ್ಲಿ ತೆರೆದುಕೊಳ್ಳಲಿದೆ. ಮಾಸ್ಟರ್ ಪ್ಲಾನರಿಯ ಎಸ್.ಕೆ. ಆನಂದ್‌ ರವರ ಮಾರ್ಗದರ್ಶನದೊಂದಿಗೆ ಕಳೆದ 20 ವರ್ಷಗಳಿಂದ ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಮಂಗಲ್ ಸ್ಟೋರ್ಸ್ ತನ್ನ ಉತ್ಪನ್ನಗಳ ಗುಣಮಟ್ಟ, ಸ್ಪರ್ಧಾತ್ಮಕ ಬೆಲೆಯ ಮೂಲಕ ಜನಪ್ರಿಯತೆ ಗಳಿಸಿದೆ.  ಗ್ರಾಹಕಸ್ನೇಹಿ ಸಿಬ್ಬಂದಿಗಳ ನಗುಮೊಗದ ಸ್ವಾಗತ, ವಿಶ್ವಾಸಾರ್ಹ ಖರೀದಿ, ಸಂತೃಪ್ತಿಯ ಸೇವೆಯಿಂದಾಗಿ ಗ್ರಾಹಕರು ಸಂಸ್ಥೆ ಮೇಲಿಟ್ಟಿರುವ ನಂಬಿಕೆ ಅಚಲವಾಗಿದೆ. ಇದೀಗ ಗ್ರಾಹಕರ  ಹೆಚ್ಚಿನ ಅನುಕೂಲಕ್ಕಾಗಿ ಪುತ್ತೂರು ಪೇಟೆಯ ಹೃದಯಭಾಗದಲ್ಲಿ ಮಂಗಲ್‌ ಹೈಪರ್‌ ಮಾರ್ಕೆಟ್‌ ಅನ್ನು ಪ್ರಾರಂಭಿಸಲಾಗುತ್ತಿದ್ದು, ಗ್ರಾಹಕರಿಗೆ ಅತ್ಯಂತ ಕಡಿಮೆ ದರಗಳಲ್ಲಿ ಗುಣಮಟ್ಟದ ವಸ್ತುಗಳು ದೊರಕಲಿದೆ.

ಏನಿದು ‘ಸರ್ವಮಂಗಲ್‌’..!?

ಯಾವುದೇ ಪೂಜೆ ಇರಲಿ, ಶುಭಸಮಾರಂಭವಿರಲಿ

ದಿನಸಿ ಸಾಮಾಗ್ರಿಗಳು, ತಾಜಾ ತರಕಾರಿಗಳಿಗಾಗಿ ಹಲವು ಕಡೆ ಹೋಗಬೇಕೆಂದಿಲ್ಲ..! ನಿಮ್ಮ ಅಗತ್ಯದ ದಿನಸಿ ಸಾಮಾಗ್ರಿಗಳು, ತಾಜಾ ತರಕಾರಿಗಳ ಪಟ್ಟಿಯಲ್ಲಿ ಮುಂಗಡವಾಗಿ ನೀಡಿ, ನಿಮ್ಮ ಮನೆಬಾಗಿಲಿಗೆ, ಯಾ ಸಭಾಭವನಕ್ಕೆ ತರಿಸಿಕೊಳ್ಳ ಬಹುದಾದಂತಹ ವಿಶೇಷ ಸೇವೆಯಾಗಿದೆ. ಯಾವುದೇ ಜಂಟಾಟವಿಲ್ಲದೇ, ನಿರಾಳವಾಗಿ ಸಂಭ್ರಮಾಚರಣೆಯನ್ನು ಆನಂದಿಸಬಹುದು..


ದಿನನಿತ್ಯದ ಆವಶ್ಯಕತೆಗಳಿಗೆ ಬೇಕಾಗುವ ಎಲ್ಲವೂ ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು, ಉಚಿತ ಪಾರ್ಕಿಂಗ್‌ನೊಂದಿಗೆ ಆಹ್ಲಾದಕರ ವಾತಾವರಣದಲ್ಲಿ ಆರಾಮವಾಗಿ ಶಾಪಿಂಗ್‌ ಮಾಡಬಹುದಾಗಿದೆ. ಪ್ರೆಸ್ಟೋ ಕಂಪೆನಿಯ ಪ್ರೀಮಿಯಂ ಸ್ವೀಟ್ಸ್‌ಗಳ ವಿಶೇಷ ಕೌಂಟರ್‌ ಕೂಡ ಲಭ್ಯವಿದೆ.

ಮಂಗಲ್‌ ಹೈಪರ್‌ ಮಾರ್ಕೆಟ್‌ ಬೆಳಿಗ್ಗೆ 9ರಿಂದ ರಾತ್ರಿ 9ರ ತನಕ ವಾರದ ಏಳು ದಿನಗಳಲ್ಲೂ ಕಾರ್ಯ ನಿರ್ವಹಿಸಲಿದೆ. ಈ ಮೂಲಕ ಗ್ರಾಹಕರ ನಗುಮೊಗದ ಸೇವೆಗೆ ಸಜ್ಜಾಗಿ ನಿಂತಿದೆ.

ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೋಲೆ ಪ್ರಕರಣ: ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ

Posted by Vidyamaana on 2023-11-18 20:00:07 |

Share: | | | | |


ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೋಲೆ  ಪ್ರಕರಣ: ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ

ಉಡುಪಿ : ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣವನ್ನು ಕ್ಷಿಪ್ರವಾಗಿ ಪತ್ತೆ ಮಾಡಿದ ಉಡುಪಿ ಪೊಲೀಸ್ ಇಲಾಖೆಯನ್ನು ಮೃತರ ಕುಟುಂಬ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅವರನ್ನು ಭೇಟಿಯಾಗಿ ಅಭಿನಂದಿಸಿತು.


ನೇಜಾರಿನ ನೂರ್ ಮುಹಮ್ಮದ್, ಅವರ ಮಗ ಅಸಾದ್,ಮೃತ ಹಸೀನಾರ ಸಹೋದರ ಅಶ್ರಫ್, ಇವರ ಮಗಳು ಫಾತಿಮಾ ಅಸ್ಟಾ ಸಂಬಂಧಿಕ ಯಾಸೀನ್, ಕಾಂಗ್ರೆಸ್ ಮುಖಂಡ ಎಂ.ಎ.ಗಫೂರ್ ಅವರು ಎಸ್ಪಿಯವರನ್ನು ಭೇಟಿಯಾಗಿ ಅಭಿನಂದಿಸಿದರು.ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಎ.ಗಫೂರ್, ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ನೂರ್ ಮುಹಮ್ಮದ್ ತಮ್ಮ ಕುಟುಂಬದ ಜೊತೆ ಬೆರೆತು ಸಮಯ ಕಳೆಯುವಂತೆ ಮತ್ತು ಮಗನಿಗೆ ಭವಿಷ್ಯದ ಕುರಿತು ಕೆಲವು ಮಾರ್ಗದರ್ಶನ ನೀಡಿದರು ಎಂದು ತಿಳಿಸಿದರು.


ಅದೇ ರೀತಿ ಸಮಾಜದ ಸುರಕ್ಷತೆ, ಸೌಹಾರ್ದತೆ ಬಗ್ಗೆಯೂ ಎಸ್ಪಿಯವರ ಜೊತೆ ಚರ್ಚೆ ಮಾಡಿದ್ದೇವೆ.


ಸಮಾಜದಲ್ಲಿ ಶಾಂತಿ ಸಾಮರಸ್ಯ ನಿರ್ಮಾಣವಾಗಿ, ಜನ ಭಯಭೀತಿಯಿಂದ ಹೊರಬರಬೇಕು. ಮಹಿಳೆಯರು ಸುರಕ್ಷಿತವಾಗಿ ಕೆಲಸಕ್ಕೆ ಹೋಗುವಂತೆ ಮಾಡಬೇಕು ಎಂಬುದರ ಕುರಿತು ಎಸ್ಪಿ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಅವರು ಹೇಳಿದರು

ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗುವನ್ನು ಮೊಸಳೆ ಬಾಯಿಗೆ ಹಾಕಿದ ಪತ್ನಿ

Posted by Vidyamaana on 2024-05-05 12:03:40 |

Share: | | | | |


ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗುವನ್ನು ಮೊಸಳೆ ಬಾಯಿಗೆ ಹಾಕಿದ ಪತ್ನಿ

 ಕಾರವಾರ,ಮೇ.5- ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.ದಂಪತಿ ನಡುವಿನ ಜಗಳದಿಂದ ಸಿಟ್ಟಿಗೆದ್ದ ತಾಯಿ ಹೆತ್ತ ಕಂದಮ್ಮನನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಆಲಮಡ್ಡಿಯಲ್ಲಿ ನಡೆದಿದೆ.ವಿನೋದ (6) ಮೊಸಳೆ ಬಾಯಿಗೆ ಸಿಲುಕಿ ಮೃತಪಟ್ಟ ಬಾಲಕ.ಸಾವಿತ್ರಿ ಹಾಗೂ ರವಿಕುಮಾರ್‌ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ತಾರಕಕ್ಕೇರಿದ್ದು, ಸಿಟ್ಟಿಗೆದ್ದ ಸಾವಿತ್ರಿ ತನ್ನ ಮಗನನ್ನು ಮನೆಯ ಸಮೀಪವಿರುವ ಮೊಸಳೆಗಳಿದ್ದ ನಾಲೆಗೆ ಎಸೆದಿದ್ದಾಳೆ.

ಸೌಜನ್ಯ ಅತ್ಯಾಚಾರ - ಕೊಲೆ ಪ್ರಕರಣ

Posted by Vidyamaana on 2023-08-04 05:55:04 |

Share: | | | | |


ಸೌಜನ್ಯ ಅತ್ಯಾಚಾರ - ಕೊಲೆ ಪ್ರಕರಣ

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳ ಸಮೀಪದ ನಿವಾಸಿ ಪಾಂಗಳದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಹತ್ಯೆ ಮಾಡಿದ ನೈಜ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವ ಕುರಿತಂತೆ ಹಕ್ಕೊತ್ತಾಯ ಮತ್ತು ಪ್ರಕರಣ ಮುಂದಿಟ್ಟು ಧರ್ಮಸ್ಥಳ ಕ್ಷೇತ್ರದ ಮೇಲೆ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲೆ ವೃಥಾರೋಪಗಳಿಂದ ನೊಂದಿರುವ ಆಕ್ರೋಶಿತ ಬಂಧುಗಳು, ನಾಡಿನ ಲಕ್ಷಾಂತರ ಭಕ್ತರು ಸೇರಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ವತಿಯಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಂಭಾಗ ಇದೀಗ ಬೃಹತ್ ಸಮಾವೇಶ ಆರಂಭಗೊಂಡಿದೆ.

ಪ್ರಕರಣ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅವಹೇಳನ ವಿಚಾರ ಪ್ರತಿಭಟನಾ ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗದ ಭಕ್ತರು ಆಗಮಿಸಿ ಮಳೆಯ ಮಧ್ಯೆಯೇ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೈಕಾರ ಕೂಗುತ್ತ ಸೌಜನ್ಯಳಿಗೆ ನ್ಯಾಯ ಒದಗಿಸಬೇಕೆಂದು ಹೋರಾಟ ಮುಂದುವರೆದಿದೆ‌.


ಪ್ರತಿಭಟನಾ ಸಮಾವೇಶದ ಬಳಿಕ ಉಜಿರೆ ದೇವಸ್ಥಾನದಿಂದ ಉಜಿರೆ ಎಸ್.ಡಿ.ಎಂ. ಕಾಲೇಜಿನವರೆಗೆ ಭಕ್ತರು ಪ್ರತಿಭಟನಾ ಜಾಥಾ ನಡೆಸಲಿರುವರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು.ಎಸ್.ಕೆ.ಡಿ.ಆರ್.ಡಿ.ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜಯನಾಥ್ ಮಾತನಾಡಿ, ಇದು ಧಮನಿತರ ಸಮಾವೇಶ, ದಶಕದಿಂದ ನೋವನ್ನು ಅನುಭವಿಸುತ್ತಿರುವವರ ಕಾರ್ಯಕ್ರಮ. ನಮ್ಮ ಸಹನೆಯ ಕಟ್ಟೆ ಮೀರಿ ಒಡೆದಿದ್ದೇವೆ. ಹಂದಿ ಹೊಡೆಯುವ ಎಂಬ ಹುನ್ನಾರವನ್ನು ಜನ ಪ್ರಶ್ನಿಸುವ ಕಾಲ ಬಂದಿದೆ. ನಮ್ಮ ಹೋರಾಟ ನಿಲ್ಲದು, ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಘೋಷಣೆಯೊಂದಿಗೆ ಬೃಹತ್ ಹಕ್ಕೊತ್ತಾಯಕ್ಕೆ ಚಾಲನೆ ನೀಡಿದರು.

ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಮಾಜಿ ಸಚಿವ ಅಭಯಚಂದ್ರ ಜೈನ್, ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ತಾಲೂಕು ಅಧ್ಯಕ್ಷ ಖಾಸಿಂ ಮಲ್ಲಿಗೆ ಮನೆ, ಮಾಜಿ ಅಧ್ಯಕ್ಷೆ ಶಾರದಾ ರೈ, ತಿಗಳ ಸಮಾಜ ರಾಜ್ಯಾಧ್ಯಕ್ಷ ಜಯರಾಜ್ ಹೊಸಕೋಟೆ, ಸುಂದರ ಗೌಡ ಇಚ್ಚಿಲ, ಎಸ್.ಕೆ.ಡಿ.ಆರ್.ಡಿ.ಪಿ. ಸಿಒಒ ಅನಿಲ್ ಕುಮಾರ್, ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಹಿತ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆ. 28: ಪುತ್ತೂರು ಶಾಸಕರ ನೂತನ ಕಚೇರಿ ಉದ್ಘಾಟನೆ

Posted by Vidyamaana on 2023-08-22 16:20:28 |

Share: | | | | |


ಆ. 28: ಪುತ್ತೂರು ಶಾಸಕರ ನೂತನ ಕಚೇರಿ ಉದ್ಘಾಟನೆ

ಪುತ್ತೂರು: ನೂತನ‌ ಶಾಸಕ ಅಶೋಕ್ ಕುಮಾರ್ ರೈ ಅವರ ನೂತನ ಕಚೇರಿ ಉದ್ಘಾಟನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ಆ. 28ರಂದು ಪುತ್ತೂರು ಶಾಸಕರ ಸುಸಜ್ಜಿತ ಕಚೇರಿ ಲೋಕಾರ್ಪಣೆಗೊಳ್ಳಲಿದೆ.

ಹಿಂದಿನ ಸಹಾಯಕ ಆಯುಕ್ತರ ಕಚೇರಿ, ನಂತರ‌ ಪುಡಾ ಆಫೀಸ್ ಆಗಿದ್ದ ಕಟ್ಟಡದಲ್ಲೇ ಶಾಸಕರ ನೂತನ ಕಚೇರಿ ಇರಲಿದೆ. ಸಾರ್ವಜನಿಕರ ಅನುಕೂಲತೆ ದೃಷ್ಟಿಯನ್ನಿಟ್ಟುಕೊಂಡು ಹೊಸ ಕಚೇರಿ ಉದ್ಘಾಟನೆಗೆ ಸಿದ್ಧವಾಗಿದೆ.

ಸಾಕಷ್ಟು ಸ್ಥಳಾವಕಾಶ ಇಟ್ಟುಕೊಂಡು ನೂತನ ಕಚೇರಿಯ ಪ್ಲ್ಯಾನ್ ಸಿದ್ಧಪಡಿಸಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆ ಆಗದಂತೆ ಸುವ್ಯವಸ್ಥಿತವಾಗಿ ಕಚೇರಿ ನಿರ್ಮಾಣ ಮಾಡಲಾಗಿದೆ.



Leave a Comment: