ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಚೀನಾ ವೈರಸ್ ಅಲರ್ಟ್; ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

Posted by Vidyamaana on 2023-11-30 13:11:32 |

Share: | | | | |


ಚೀನಾ ವೈರಸ್ ಅಲರ್ಟ್; ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

ನವದೆಹಲಿ: ಚೀನಾದ ಮಕ್ಕಳಲ್ಲಿ ಉಸಿರಾಟ ಸಂಬಂಧಿ ಕಾಯಿಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಗಳಿಗೆ ಅನುಗುಣವಾಗಿ ಕರ್ನಾಟಕ ಸಹಿತ ಐದು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.ಕರ್ನಾಟಕ, ರಾಜಸ್ಥಾನ, ಗುಜರಾತ್, ಉತ್ತರಾಖಂಡ ಮತ್ತು ತಮಿಳುನಾಡು ರಾಜ್ಯಗಳು ಉಸಿರಾಟದ ಸಮಸ್ಯೆಗಳನ್ನು ನಿರ್ವಹಿಸಲು ತಯಾರಾಗಿರುವಂತೆ ಆಸ್ಪತ್ರೆಗಳು ಮತ್ತು ಆರೋಗ್ಯಸೇವಾ ಸಿಬ್ಬಂದಿಗೆ ನಿರ್ದೇಶನ ನೀಡಿವೆ. ಕರೊನಾ ನಿಯಂತ್ರಣಕ್ಕೆ ಹೊರಡಿಸಲಾದ ಪರಿಷ್ಕೃತ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ಕರೊನಾ ಸಂದರ್ಭದಲ್ಲಿ ಆದ ತಪುಪಗಳು ಪುನರಾವರ್ತನೆ ಆಗಬಾರದೆಂಬ ಕಾರಣಕ್ಕೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ. ರಾಜ್ಯದಲ್ಲಿ ಶೀತಜ್ವರ (ಐಎಲ್​ಐ), ಉಸಿರಾಟದ ಸಮಸ್ಯೆ(ಸಾರಿ) ಪ್ರಕರಣಗಳು ಉಲ್ಬಣಿಸಿಲ್ಲ.


ಹೀಗಾಗಿ ಸದ್ಯಕ್ಕಂತೂ ಆತಂಕಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ ವಹಿಸಬೇಕಿದೆ ಎಂದು ಸರ್ಕಾರ ರಚಿಸಿರುವ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ವಿಜಯವಾಣಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೀರ್ಘಾವಧಿ ಹಾಗೂ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಆದ್ಯತೆ ಮೇಲೆ ಮುನ್ನೆಚ್ಚರಿಕೆ ವಹಿಸಬೇಕು. ಜನದಟ್ಟಣೆ ಹಾಗೂ ಶೀತ ಪ್ರದೇಶಕ್ಕೆ ಭೇಟಿ ನೀಡುವುದನ್ನು ನಿಯಂತ್ರಿಸುವುದು ಮತ್ತು ಮಕ್ಕಳು,ವೃದ್ಧರು, ಗರ್ಭಿಣಿಯರು ಸಹ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಇಲಾಖೆ ಸ್ಪಷ್ಟ ಎಚ್ಚರಿಕೆ ನೀಡಿದೆ.


ಬುಧವಾರ ಆರೋಗ್ಯ ಸಚಿವರು ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಸೂಚನೆ ನೀಡಲಾಗಿದೆ. ಇನ್ನೊಂದೆಡೆ ಕೇಂದ್ರದ ಅಧಿಕಾರಿಗಳು ವಿಡಿಯೋ ಕಾನ್ಪರೆನ್ಸ್ ಮೂಲಕ ರಾಜ್ಯದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಬೆಳವಣಿಗೆ ಕುರಿತು ಮಾಹಿತಿ ಹಂಚಿಕೊಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚೀನಾ ವೈರಸ್ ಬಗ್ಗೆ ಸಾರ್ವಜನಿಕರು ಆತಂಕಪಡುವುದು ಬೇಡ. ಸರ್ಕಾರ ಈ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಸಾಧಾರಣವಾಗಿ ನವೆಂಬರ್, ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಚಳಿಗಾಲದ ಕಾರಣಕ್ಕಾಗಿ ಉಸಿರಾಟದ ಸಮಸ್ಯೆ ಪ್ರಕರಣಗಳು ವರದಿಯಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಆದರೆ, ಇದನ್ನು ಚೀನಾ ವೈರಸ್​ಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದರು.


ಎಚ್ಚರಿಕೆ ಕ್ರಮಗಳೇನು?: ಚೀನಾ ವೈರಸ್ ಹಿನ್ನೆಲೆಯಲ್ಲಿ: ಆರೋಗ್ಯ ಇಲಾಖೆ ಆಸ್ಪತ್ರೆಗಳು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸಾರ್ವ ಜನಿಕರು ಮುಖ್ಯವಾಗಿ ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರಅಥವಾ ಟಿಶ್ಯುವಿನಿಂದ ಮುಚ್ಚಿಕೊಳ್ಳಬೇಕು, ಸಾಬೂನು ಮತ್ತು ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳಬೇಕು, ಕೈಗಳಿಂದ ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಮುಟ್ಟಿಕೊಳ್ಳಬಾರದು, ಜನ ದಟ್ಟಣೆ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಜ್ವರಪೀಡಿತ ವ್ಯಕ್ತಿಯಿಂದ ಕನಿಷ್ಠ ಅಂತರ ಕಾಪಾಡಿಕೊಳ್ಳಬೇಕು. ಸಮರ್ಪಕ ವಾಗಿ ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು, ಸಾಕಷ್ಟು ನೀರು ಕುಡಿಯಬೇಕು, ಪೌಷ್ಟಿಕ ಆಹಾರವನ್ನು ಸೇವಿಸಬೇಕು ಎಂದು ಸಲಹೆ ನೀಡಲಾಗಿದೆ. ಸಾರ್ವಜನಿಕವಾಗಿ ಉಗುಳುವುದು, ಸೀನುವುದು ಮಾಡಬಾರದು. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷಿಸದೆ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂಬ ಅಂಶ ಮಾರ್ಗಸೂಚಿಯಲ್ಲಿದೆ.


ಮಾಸ್ಕ್ ಕಡ್ಡಾಯ: ಆಸ್ಪತ್ರೆಯಲ್ಲಿ ವರದಿಯಾಗುವ ಶೀತಜ್ವರ (ಐಎಲ್​ಐ) ಮತ್ತು ಉಸಿರಾಟದ ತೊಂದರೆ (ಸಾರಿ) ಪ್ರಕರಣಗಳ ಕುರಿತು ಐಡಿಎಸ್​ಪಿ-ಐಎಚ್​ಐಪಿ ಪೋರ್ಟಲ್​ನಲ್ಲಿ ದಾಖಲಿಸುವಂತೆ ತಿಳಿಸಲಾಗಿದೆ. ಅಗತ್ಯಔಷಧಗಳ ದಾಸ್ತಾನು ಮಾಡಿಕೊಳ್ಳುವಂತೆ ಮತ್ತು ಎಲ್ಲ ಆರೋಗ್ಯ ಸೇವೆಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ಬಳಸಿಕೊಳ್ಳುವಂತೆ, ವೈದ್ಯರು, ಶುಶ್ರೂಷಕರು ಸೇರಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಗೊತ್ತುಪಡಿಸಿದ ಎಲ್ಲ ಆಸ್ಪತ್ರೆಗಳು ತಕ್ಷಣವೇ ವೈದ್ಯಕೀಯ ಮೂಲಸೌಕರ್ಯ, ವೈದ್ಯಕೀಯ ಮತ್ತು ಅರೆವೈದ್ಯಕೀಯ ಮಾನವಶಕ್ತಿ, ಆಮ್ಲಜನಕ ಹಾಸಿಗೆಗಳು, ಪ್ರತ್ಯೇಕ ಹಾಸಿಗೆಗಳು, ವೆಂಟಿಲೇಟರ್​ಗಳು, ಪಿಎಸ್​ಎ ಪ್ಲಾಂಟ್​ಗಳು, ಎಲ್​ಎಂಒ ಪ್ಲಾಂಟ್​ಗಳ ಸಂಪನ್ಮೂಲಗಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಿಳಿಸಲಾಗಿದೆ.


ಆಮ್ಲಜನಕ ಸಿಲಿಂಡರ್​ಗಳು, ಔಷಧಗಳು, ಪಿಪಿಇ ಕಿಟ್ಗಳು, ಪರೀಕ್ಷಾ ಕಿಟ್​ಗಳು ಮತ್ತು ಲ್ಯಾಬ್ ಸೌಲಭ್ಯಗಳು, ಆಂಬ್ಯುಲೆನ್ಸ್ ಸೇರಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳು ವಂತೆಯೂ ಸೂಚಿಸಲು ಸಭೆಯಲ್ಲಿ ತಿಳಿಸಲಾಗಿದೆ. ಕೋವಿಡ್, ಇನ್ಪೂಯೇನ್ಝಾ ವೈರಸ್, ಅಡೆನೋ ವೈರಸ್ ಸೇರಿ ಯಾವುದೇ ಸೋಂಕು ಮಾದರಿಗಳನ್ನು ಹತ್ತಿರದ ಪ್ರಯೋಗಾಲಯಗಳಿಗೆ ಕಳುಹಿಸಬೇಕು ಹಾಗೂ ರಾಜ್ಯದ ಎಲ್ಲ ವೈರಾಣುಸಂಶೋಧನೆ ಮತ್ತು ರೋಗಪತ್ತೆ ಪ್ರಯೋಗಾಲಯಗಳು ಐಎಚ್​ಐಪಿ ಪೋರ್ಟಲ್​ನಲ್ಲಿ ಪರೀಕ್ಷಾ ವರದಿ ದಾಖಲಿಸಲು ಸೂಚಿಸಲಾಗಿದೆ.


ಮುನ್ನೆಚ್ಚರಿಕೆ ಕ್ರಮಗಳು


ನಿಯಮಿತವಾಗಿ ಕೈಗಳನ್ನು ತೊಳೆಯಿರಿ

ಮಾಸ್ಕ್ ಸರಿಯಾಗಿ ಬಳಸಿ

ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕ ತಪ್ಪಿಸಿ

ನಿಮ್ಮ ಸುತ್ತಲೂ ಶುದ್ಧ, ಉತ್ತಮ ವಾತಾವರಣ ಇರಲಿ

ಪರೀಕ್ಷೆ ಮಾಡಿಕೊಂಡು, ವೈದ್ಯರ ಸಲಹೆಯನ್ನು ತೆಗೆದುಕೊಳ್ಳಿ.

ಅನಾರೋಗ್ಯದಿಂದ ಬಳಲುತ್ತಿದ್ದರೆ, ರೋಗಲಕ್ಷಣಗಳನ್ನು ಹೊಂದಿದ್ದರೆ ಮನೆಯಲ್ಲೇ ಇರಿ

ಶಬರಿಮಲೆ ಯಾತ್ರೆಗೆ ವೃತ ಕೈಗೊಂಡ ಪಾದ್ರಿ ಚರ್ಚ್ ಪರವಾನಿಗೆ ರಿಟರ್ನ್ ಮಾಡಿದ್ದೇಕೆ?

Posted by Vidyamaana on 2023-09-10 18:31:35 |

Share: | | | | |


ಶಬರಿಮಲೆ ಯಾತ್ರೆಗೆ ವೃತ ಕೈಗೊಂಡ ಪಾದ್ರಿ ಚರ್ಚ್ ಪರವಾನಿಗೆ ರಿಟರ್ನ್ ಮಾಡಿದ್ದೇಕೆ?

ತಿರುವನಂತಪುರಂ: ಪ್ರಸಿದ್ಧ ಧಾರ್ಮಿಕ ಕೇಂದ್ರ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಅನುಸರಿಸಿದ 41 ದಿನಗಳ ವ್ರತವನ್ನು ಕೈಗೊಂಡುದಕ್ಕೆ ಕೇರಳದ ಕ್ರಿಶ್ಚಿಯನ್ ಪಾದ್ರಿಯೊಬ್ಬರು ಧಾರ್ಮಿಕ ಸೇವೆಗಳನ್ನು ನಿರ್ವಹಿಸುವುದಕ್ಕಾಗಿ ಚರ್ಚ್ ನೀಡಿದ್ದ ಪರವಾನಗಿಯನ್ನೇ ಹಿಂದಿರುಗಿಸಿ ಸುದ್ದಿಯಾಗಿದ್ದಾರೆ.

ಆಂಗ್ಲಿಕನ್ ಚರ್ಚ್ ಆಫ್ ಇಂಡಿಯಾದಲ್ಲಿ ಪಾದ್ರಿಯಾಗಿರುವ ರೆವ್ ಮನೋಜ್ ಕೆ.ಜಿ. ಅವರು ಈ ತಿಂಗಳ ಕೊನೆಯಲ್ಲಿ ದೇವಾಲಯಕ್ಕೆ ತೀರ್ಥಯಾತ್ರೆಗೆ ಹೋಗುವ ಸಲುವಾಗಿ 41 ದಿನಗಳ ಸಾಂಪ್ರದಾಯಿಕ ವ್ರತವನ್ನು ಆಚರಿಸುತ್ತಿದ್ದಾರೆ. ಚರ್ಚ್‌ಗೆ ಈ ಬಗ್ಗೆ ತಿಳಿದಾಗ, ಇಂತಹ ನಡವಳಿಕೆಯು ಸ್ವೀಕಾರಾರ್ಹವಲ್ಲ ಎಂದು ಆಕ್ಷೇಪಿಸಿದೆ.


ನಾನು ಕ್ರಿಶ್ಚಿಯನ್ ಸಿದ್ಧಾಂತಗಳು ಮತ್ತು ನಿಯಮಗಳನ್ನು ಉಲ್ಲಂಘಿಸಿದ್ದೇನೆ ಎಂದು ನನ್ನಿಂದ ವಿವರಣೆಯನ್ನು ಕೇಳಿದರು. ವಿವರಣೆಯನ್ನು ನೀಡುವ ಬದಲು, ನಾನು ಪಾದ್ರಿಯಾದಾಗ ಸ್ವೀಕರಿಸಿದ, ಚರ್ಚ್ ನನಗೆ ನೀಡಿದ ಗುರುತಿನ ಚೀಟಿ ಮತ್ತು ಪರವಾನಗಿಯನ್ನು ಹಿಂದಿರುಗಿಸಿದೆ” ಎಂದು ಮನೋಜ್ ಕೆ.ಜಿ. ಪಿಟಿಐಗೆ ತಿಳಿಸಿದ್ದಾರೆ.


ತಾನು ಮಾಡಿದ್ದು ಆಂಗ್ಲಿಕನ್ ಚರ್ಚ್ ಆಫ್ ಇಂಡಿಯಾದ ನಿಯಮಗಳು ಮತ್ತು ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ನನ್ನ ಕೆಲಸವು ಚರ್ಚ್‌ನ ಸಿದ್ಧಾಂತಗಳನ್ನು ಆಧರಿಸಿಲ್ಲ, ಬದಲಿಗೆ ಅದು “ಲಾರ್ಡ್ಸ್” ಸಿದ್ಧಾಂತಗಳನ್ನು ಆಧರಿಸಿದೆ ಎಂದು ಮನೋಜ್ ಹೇಳಿದ್ದಾರೆ.


“ದೇವರು ಪ್ರತಿಯೊಬ್ಬರನ್ನು ಅವರ ಜಾತಿ, ಮತ, ಧರ್ಮ ಅಥವಾ ನಂಬಿಕೆಗಳನ್ನು ಲೆಕ್ಕಿಸದೆ ಪ್ರೀತಿಸುವಂತೆ ಕೇಳಿಕೊಂಡಿದ್ದಾನೆ. ಇತರರನ್ನು ಪ್ರೀತಿಸುವುದು ಅವರ ಚಟುವಟಿಕೆಗಳಲ್ಲಿ ಸೇರುವುದನ್ನು ಒಳಗೊಂಡಿರುತ್ತದೆ. ಆದ್ದರಿಂದ ನೀವು ಚರ್ಚ್ ಸಿದ್ಧಾಂತ ಅಥವಾ ದೇವರ ಸಿದ್ಧಾಂತವನ್ನು ಅನುಸರಿಸಲು ಬಯಸುತ್ತೀರಾ ಎಂದು ನಿರ್ಧರಿಸಬಹುದು.ನೀವು ದೇವರನ್ನು ಪ್ರೀತಿಸುತ್ತೀರಾ ಅಥವಾ ಚರ್ಚ್ ಅನ್ನು ಪ್ರೀತಿಸುತ್ತೀರಾ, ನೀವು ನಿರ್ಧರಿಸಬಹುದು. ‘ಚರ್ಚ್’ ಎಂದರೆ ಸಾಂಪ್ರದಾಯಿಕ, ನಿರ್ಮಿತ ಪದ್ಧತಿಗಳು” ಎಂದು 41 ದಿನಗಳ ವ್ರತ ಕೈಗೊಳ್ಳುವ ನಿರ್ಧಾರವನ್ನು ಟೀಕಿಸಿದವರಿಗೆ ಫೇಸ್‌ಬುಕ್‌ನಲ್ಲಿ ಸ್ಪಷ್ಟವಾದ ವಿಡಿಯೋ ಪ್ರತಿಕ್ರಿಯೆ ನೀಡಿದ್ದಾರೆ.

ಮನೋಜ್ ಪಾದ್ರಿಯಾಗುವ ಮೊದಲು ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು.ಆಧ್ಯಾತ್ಮಿಕ ಬೋಧನೆಗಳಿಗೆ ಅಧಿಕೃತತೆಯನ್ನು ನೀಡುವ ಸಲುವಾಗಿ ಅವರು ಪಾದ್ರಿಯಾದೆ ಎಂದು ಹೇಳಿದರು

ಭಾವನಾತ್ಮಕ ಪತ್ರ ಬರೆದ ಅನಂತ್ ಕುಮಾರ್ ಹೆಗಡೆ

Posted by Vidyamaana on 2024-03-25 04:45:39 |

Share: | | | | |


ಭಾವನಾತ್ಮಕ ಪತ್ರ ಬರೆದ ಅನಂತ್ ಕುಮಾರ್ ಹೆಗಡೆ

ಶಿರಸಿ: ಜನಕ್ಕೆ ಸೇವೆಯ ಸೌಭಾಗ್ಯ ಕೊಟ್ಟ ಜನ‌ಮನಕ್ಕೆ ಸಾಷ್ಟಾಂಗ ಪ್ರಣಾಮ ಎಂದು ಸಂಸದ ಅನಂತಕುಮಾರ ಹೆಗಡೆ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.


ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯಿಂದ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಂಚಿತ ಅನಂತಕುಮಾರ ಹೆಗಡೆ ಅವರ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅದರ ಪೂರ್ಣ ಪಾಠ ಇಲ್ಲಿದೆ.

ಈ ಭೂಮಿಯಲ್ಲಿ ಒಂದು ಲೌಕಿಕ ಬದುಕಿನಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನ್ನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ‌ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ  ನಾನು ಈ ಪೂಜೆಯನ್ನು ಎಲ್ಲಿಂದ ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ಧನ ಆರಾಧನೆ. ಸರಿ‌ ಸುಮಾರು ೩೦ ವರ್ಷಗಳ ಲಾಲ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ‌ಪ್ರೀತಿ, ಸ್ನೇಹ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು. ಅದು ಅದಮ್ಯ.


ಯಾವುದೇ ಪೂಜೆ, ಆರಾಧ‌ನೆ ಅದು ಎಂದಿಗೂ‌ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ ಆಕೆಯ ಸೇವೆಯಲ್ಲಿ ನನ್ನನ್ನು‌ ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದ್ದಕ್ಕೆ ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದ ಪದ್ಮಗಳಿಗೆ ಅನಂತ‌ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ‌ ಮೂರು ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ . ಈ ಬದುಕಿನಲ್ಲಿ ಅದು ನನಗೊಂದು ಗುರುತು ನೀಡಿದೆ.ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೆ ಸಿಕ್ಕೀತು? ಎಂದೂ ಕೇಳಿದ್ದಾರೆ.

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ, ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ಮು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ ಮತ್ತೊಮ್ಮೆ ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯಾಂತರಾಳದ ಕೃತಜ್ಞತೆಗಳು ಎಂದು ಪತ್ರ ಬರೆದಿದ್ದಾರೆ

ಸರ್ಕಾರಿ ವೈದ್ಯನಿಂದ ₹ 20 ಲಕ್ಷ ಪಡೆದ ಆರೋಪ: ಇಡಿ ಅಧಿಕಾರಿ ಅರೆಸ್ಟ್​, ಕಚೇರಿ ಮೇಲೆ ತಮಿಳುನಾಡು ಪೊಲೀಸರಿಂದ​ ದಾಳಿ

Posted by Vidyamaana on 2023-12-02 11:59:57 |

Share: | | | | |


ಸರ್ಕಾರಿ ವೈದ್ಯನಿಂದ ₹ 20 ಲಕ್ಷ ಪಡೆದ ಆರೋಪ: ಇಡಿ ಅಧಿಕಾರಿ ಅರೆಸ್ಟ್​, ಕಚೇರಿ ಮೇಲೆ ತಮಿಳುನಾಡು ಪೊಲೀಸರಿಂದ​ ದಾಳಿ

ಚೆನ್ನೈ (ತಮಿಳುನಾಡು): ವೈದ್ಯರೊಬ್ಬರಿಂದ 20 ಲಕ್ಷ ರೂಪಾಯಿ ಲಂಚ ಸ್ವೀಕರಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಯೊಬ್ಬರನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಬಂಧಿತ ಅಧಿಕಾರಿಯನ್ನು ಅಂಕಿತ್ ತಿವಾರಿ ಎಂದು ಗುರುತಿಸಲಾಗಿದೆ. ನಗದು ಸಹಿತ ಕೇಂದ್ರೀಯ ಸಂಸ್ಥೆ ನೀಡಿದ ಅಧಿಕೃತ ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ.


ದಿಂಡುಗಲ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅಧೀಕ್ಷಕರಾಗಿರುವ ಡಾ.ಸುರೇಶ್ ಬಾಬು ಎಂಬುವರು ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ಎದುರಿಸಿದ್ದರು. 2018ರಲ್ಲಿ ಮಧ್ಯಪ್ರದೇಶದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಯಾಗಿ ನೇಮಕಗೊಂಡಿದ್ದ ಅಂಕಿತ್ ತಿವಾರಿ, ಇದೇ ವರ್ಷ ಏಪ್ರಿಲ್​ನಲ್ಲಿ ಮಧುರೈಗೆ ವರ್ಗಾವಣೆಯಾಗಿ ಬಂದಿದ್ದಾರೆ ಡಾ.ಸುರೇಶ್ ಬಾಬು ಅವರನ್ನು ಪ್ರಕರಣದಿಂದ ರಕ್ಷಿಸಲು ಅಂಕಿತ್ ತಿವಾರಿ ಮೂರು ಕೋಟಿ ರೂಪಾಯಿ ಲಂಚ ಕೇಳಿದ್ದರು. ಈ ಹಣವನ್ನು ಜಾರಿ ನಿರ್ದೇಶನಾಲಯಕ್ಕೆ ಒಪ್ಪಿಸುವುದಾಗಿ ಹೇಳಿದ್ದರು ಎನ್ನಲಾಗಿದೆ. ಆದರೆ, ಇಷ್ಟೊಂದು ಹಣಕ್ಕೆ ಕೊಡಲು ಡಾ.ಸುರೇಶ್, ಚೌಕಾಸಿ ನಡೆಸಿ ಕೊನೆಗೆ 51 ಲಕ್ಷ ನೀಡಲು ತೀರ್ಮಾನಿಸಲಾಗಿತ್ತು. ಅಂತೆಯೇ, ನವೆಂಬರ್ 1ರಂದು 20 ಲಕ್ಷ ರೂ.ಗಳನ್ನು ನೀಡಿದ್ದರು. ಉಳಿದ ಮೊತ್ತದ ಸಂಬಂಧ ನಿನ್ನೆ, ನ.30ರಂದು ಅಂಕಿತ್ ತಿವಾರಿ ವಾಟ್ಸ್​ಆಯಪ್​ ಕರೆ ಮಾಡಿ ವೈದ್ಯರನ್ನು ಕೇಳಿದ್ದಾರೆ.


ಆದರೆ, ಈ ಬಗ್ಗೆ ಸುರೇಶ್ ಬಾಬು ದಿಂಡುಗಲ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ. ಈ ವೇಳೆ, ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ನೀಡಿದ ಸಲಹೆಯಂತೆ ಇಂದು, ಡಿಸೆಂಬರ್​ 1ರಂದು ದಿಂಡಿಗಲ್​​ನ ಮಧುರೈ ಬೈಪಾಸ್ ರಸ್ತೆಯಲ್ಲಿ 20 ಲಕ್ಷ ರೂ. ಹಣ ನೀಡುವಂತೆ ಕರೆಸಿದ್ದಾರೆ. ಆಗ ಅಧಿಕಾರಿಯ ಕಾರಿನಲ್ಲಿ ಪಡೆಯಲು ಪ್ರಯತ್ನಿಸಿದಾಗ, ಪೊಲೀಸರು ದಾಳಿ ಮಾಡಿದ್ದಾರೆ. ಆದರೆ, ಅಷ್ಟರಲ್ಲೇ, ಅಂಕಿತ್ ತಿವಾರಿ ಅಲ್ಲಿಂದ ಕಾರಿನಲ್ಲಿ ಪರಾರಿಯಾಗಿದ್ದಾರೆ.


ನಂತರ ದಿಂಡಿಗಲ್​ನಿಂದ ಮಧುರೈಗೆ ಹೋಗುವ ರಸ್ತೆಯ ಕೊಡೈ ರಸ್ತೆಯಲ್ಲಿರುವ ಟೋಲ್ ಗೇಟ್​ ಬಳಿ ಕಾರನ್ನು ತಡೆದಿದ್ದಾರೆ. ಬಳಿಕ ದಿಂಡುಗಲ್​ ಕಚೇರಿಗೆ ಇಡಿ ಅಧಿಕಾರಿಯನ್ನು ಕರೆತಂದು ಬಂಧಿಸಿದ್ದಾರೆ. ಅಲ್ಲದೇ, ಆತನಿಂದ 20 ಲಕ್ಷ ರೂಪಾಯಿ ಹಣ ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಹೆಚ್ಚಿನ ತನಿಖೆಗಾಗಿ ಮಧುರೈನ ಜಾರಿ ನಿರ್ದೇಶನಾಲಯದ ಸಹಾಯಕ ವಲಯ ಕಚೇರಿಗೂ ಭೇಟಿ ನೀಡಿದ್ದಾರೆ. 


ಬಂಧಿತ ಇಡಿ ಅಧಿಕಾರಿ ಮಧುರೈ ಉಪವಲಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ಅವರು ಬಳಸುತ್ತಿದ್ದ ಕೊಠಡಿಗಳನ್ನು ಪರಿಶೀಲಿಸಲು ಅಧಿಕಾರಿಗಳು ಅನುಮತಿ ಕೋರಿದ್ದಾರೆ.ಆದರೆ, ಉನ್ನತ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಶೋಧಕ್ಕೆ ಅವಕಾಶ ಇಲ್ಲ ಎಂದು ಕಚೇರಿಯಲ್ಲಿದ್ದ ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಹಳ ಹೊತ್ತು ಕಾದಿದ್ದಾರೆ. ಈ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಪೊಲೀಸರು ಜಮಾಯಿಸಿದ್ದರು. ಇದೇ ವೇಳೆ ಇಡಿ ಪರ ವಕೀಲರು ಕೂಡ ಕಚೇರಿಗೆ ಆಗಮಿಸಿದ್ದಾರೆ. ಅಂತಿಮವಾಗಿ ಶೋಧ ಕಾರ್ಯ ಅನುಮತಿ ನೀಡಿದ್ದು, ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ತಮ್ಮ ತನಿಖೆ ಮುಂದುವರೆಸಿದ್ದಾರೆ.

ಅಂತ್ಯಕ್ರಿಯೆಗೆ ಬರುವಂತೆ ಪ್ರಿಯತಮೆಗೆ ಆಹ್ವಾನಿಸಿ ಲೈವ್ ವಿಡಿಯೋ ಮಾಡುತ್ತಲೇ ಪ್ರಾಣ ಬಿಟ್ಟ ಪ್ರೇಮಿ

Posted by Vidyamaana on 2023-08-13 08:58:35 |

Share: | | | | |


ಅಂತ್ಯಕ್ರಿಯೆಗೆ ಬರುವಂತೆ ಪ್ರಿಯತಮೆಗೆ ಆಹ್ವಾನಿಸಿ ಲೈವ್ ವಿಡಿಯೋ ಮಾಡುತ್ತಲೇ ಪ್ರಾಣ ಬಿಟ್ಟ ಪ್ರೇಮಿ

ಬೆಂಗಳೂರು: ಪ್ರೇಮಿಯೊಬ್ಬ ವಿಡಿಯೋ ರೆಕಾರ್ಡ್ ಮಾಡಿ ತನ್ನ ಅಂತ್ಯಕ್ರಿಯೆಗೆ ಪ್ರಿಯತಮೆಗೆ ಆಹ್ವಾನ ನೀಡಿ ಲೈವ್​ನಲ್ಲೇ ಪ್ರಾಣಬಿಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿರಣ್(22) ಎಂಬ ಯುವಕ ಲೈವ್ ವಿಡಿಯೋ ಮಾಡಿ ಪ್ರಾಣ ಬಿಟ್ಟಿದ್ದಾನೆ. ಆಗಸ್ಟ್​​​ 9 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯುವಕ ಕಿರಣ್ ತನ್ನ ಲೈವ್ ವಿಡಿಯೋದಲ್ಲಿ ತನ್ನ ಲವ್ವರ್​ಗೆ ತನ್ನ ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿದ್ದಾನೆ. ಹಾಗೂ ಅದೇ ಲೈವ್ ವಿಡಿಯೋದಲ್ಲಿ ಪ್ರಾಣಬಿಟ್ಟಿದ್ದಾನೆ. “ಹಾಯ್” ಬಂಗಾರಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ ಕಣೆ, “ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಆಗು”. ನಿನಗೆ ಹುಟ್ಟಿದ ಮಗುವಿಗೆ ನನ್ನ ಹೆಸರೇ ಇಡಬೇಕು. ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗು. ನನ್ನ ಸಾವಿಗೆ ನಿನ್ನ ತಂಗಿಯನ್ನು ಕರೆದುಕೊಂಡು ಬಾ. ಒಳ್ಳೆಯದಾಗಲಿ ನಿಮ್ಮ ಕುಟುಂಬಕ್ಕೆ. ಹೀಗೆ ಚೆನ್ನಾಗಿರಿ ಎಂದು ಕಿರಣ್ ಲೈವ್​​ನಲ್ಲೇ ಕೈ ಮುಗಿದು ಪ್ರಾಣ ಬಿಟ್ಟಿದ್ದಾನೆ.ಮೃತ ಕಿರಣ್, ಆಗಸ್ಟ್ 3ರಂದು ತಾನು ಪ್ರೀತಿಸುತ್ತಿದ್ದ ಹುಡುಗಿಗೆ ರಿಂಗ್, ಕಾಲು ಚೈನ್ ಕೊಡಿಸಿದ್ದನಂತೆ. ಈ ವಿಷಯ ತಿಳಿದ ಯುವತಿಯ ತಂದೆ ಇವರಿಬ್ಬರ  ಪ್ರೀತಿಯನ್ನು       ನಿರಾಕರಿಸಿದ್ದರು. ಹೀಗಾಗಿ ಯುವತಿ ಮನೆಯವರೆ ಏನೋ ಮಾಡಿ ನನ್ನ ಮಗನ ಸಾವಿಗೆ ಕಾರಣರಾಗಿದ್ದಾರೆಂದು ಕಿರಣ್ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಇನ್ನು ರೇಬೀಸ್ ರೋಗ ಉಲ್ಬಣಗೊಂಡು ಯುವಕ ನಿಮಾನ್ಸ್ ಸೇರಿದ್ದ. ನಿಮಾನ್ಸ್ ಆಸ್ಪತ್ರೆಯ ಬೆಡ್ ಮೇಲೆಯೇ ವಿಡಿಯೋ ಮಾಡುತ್ತ ಕಿರಣ್ ಪ್ರಾಣಬಿಟ್ಟಿದ್ದಾನೆ.

ಪುತ್ತೂರು : ಲೋಕಸಭಾ ಚುನಾವಣೆ ಹಿನ್ನಲೆ :ಬಿಗಿ ಭದ್ರತೆಯಲ್ಲಿ ಕಂಟೇನರ್ ನಲ್ಲಿ ಆಗಮಿಸಿದ ಇವಿಎಮ್ ಮೆಷಿನ್

Posted by Vidyamaana on 2024-03-20 22:52:34 |

Share: | | | | |


ಪುತ್ತೂರು : ಲೋಕಸಭಾ ಚುನಾವಣೆ ಹಿನ್ನಲೆ :ಬಿಗಿ ಭದ್ರತೆಯಲ್ಲಿ ಕಂಟೇನರ್ ನಲ್ಲಿ  ಆಗಮಿಸಿದ ಇವಿಎಮ್ ಮೆಷಿನ್

ಪುತ್ತೂರು : ಲೋಕಸಭಾ ಚುನಾವಣೆ ಹಿನ್ನೆಲೆ ಇವಿಎಮ್ ಮೆಷಿನ್  ಮಾ.20ರಂದು ರಾತ್ರಿ ಪುತ್ತೂರಿಗೆ ಆಗಮಿಸಿದ್ದು, ಕಂಟೈನರ್ ಮೂಲಕ ಇವಿಎಮ್ ಮೆಷಿನ್ ಅನ್ನು ತರಲಾಗಿದೆ.ತೆಂಕಿಲದಲ್ಲಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇವಿಎಮ್ ಮೆಷಿನ್ ಗಳನ್ನು ಸ್ಟ್ರಾಂಗ್ ರೂಂ ನಲ್ಲಿ ಭದ್ರವಾಗಿಡಲಾಗಿದೆ, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಸಹಾಯಕ ಆಯುಕ್ತರು, ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಹಾಗೂ ನಗರ ಸಭೆ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.



Leave a Comment: