ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಮಾಣಿಲ ಗ್ರಾಮದ ಕಾಮಜಾಲಿನಲ್ಲಿ ೧೦೦ ಕೋಟಿ ರೂ ವೆಚ್ಚದಲ್ಲಿ ಸೇತುವೆ ನಿರ್ಮಾಣ

Posted by Vidyamaana on 2023-10-17 07:44:31 |

Share: | | | | |


ಮಾಣಿಲ ಗ್ರಾಮದ ಕಾಮಜಾಲಿನಲ್ಲಿ ೧೦೦ ಕೋಟಿ ರೂ ವೆಚ್ಚದಲ್ಲಿ ಸೇತುವೆ ನಿರ್ಮಾಣ

ಪುತ್ತೂರು: ಮಾಣಿಲ ಗ್ರಾಮದ ಕಾಮಜಾಲು ಎಂಬಲ್ಲಿ ನದಿಗೆ ಕಿಂಡಿ ಅಣೆಕಟ್ಟು ಮತ್ತು ಸೇತುವೆ ನಿರ್ಮಾಣಕ್ಕೆ ಈಗಾಗಲೇ ೧೦೦ ಕೋಟಿ ರೂ ಪ್ರಸ್ತಾವನೆ ಸಲ್ಲಿಸಲಾಗಿದ್ದು ಕೇರಳ ಮತ್ತು ಕರ್ನಾಟಕದ ಗಡಿ ಪ್ರದೇಶವಾದ ಕಾರಣ ಕೇರಳ ಮತ್ತು ಕರ್ನಾಟಕ ಸರಕಾರದ ಒಪ್ಪಿಗೆಯೊಂದಿಗೆ ಇಲ್ಲಿ ಕಾಮಗಾರಿ ನಡೆಸಬೇಕಾಗಿದ್ದು ಕೇರಳದಿಂದ ಒಪ್ಪಿಗೆಗಾಗಿ ಸರಕಾರದ ಜೊತೆ ಮಾತುಕತೆ ನಡೆಸುವುದಾಗಿ ಮಂಜೇಶ್ವರ ಶಾಸಕರಾದ ಎನ್ ಕೆ ಎಂ ಅಶ್ರಫ್‌ರವರು ಒಪ್ಪಿಕೊಂಡಿದ್ದು ಶೀಘ್ರದಲ್ಲೇ ಕಾಮಗಾರಿಗೆ ಸಂಬಂದಿಸಿದ ಪ್ರಸ್ತಾವನೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಯವರು ತಿಳಿಸಿದ್ದಾರೆ.


ನದಿಯ ಒಂದು ತಟ ಕರ್ನಾಟಕ್ಕೆ ಸೇರಿದರೆ ಇನ್ನೊಂದು ತಟ ಕೇರಳಕ್ಕೆ ಸೇರಿದ್ದಾಗಿದೆ. ಇಲ್ಲಿ ಸೇತುವೆ ನಿರ್ಮಾಣವಾಗಬೇಕಾದರೆ ಎರಡೂ ಸರಕಾರದ ಒಪ್ಪಿಗೆ ಅಗತ್ಯವಾಗಿದೆ. ಇದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪೆರ್ಲಕ್ಕೆ ಸಂಪರ್ಕ ಕಲ್ಪಿಸುತ್ತದೆ. ಮಾಣಿಲಂದಿದ ಕಾಸರಗೋಡಿಗೆ ತೆರಳಬೇಕಾದರೆ ಸುತ್ತು ಬಳಸಿ ಹೋಗಬೇಕಾಗಿದ್ದು ಸೇತುವೆ ನಿರ್ಮಾಣವಾದಲ್ಲಿ ಕೇವಲ ಬೆರಳೆಣಿಕೆಯ ಕಿ ಮಿ ದೂರ ಕ್ರಯಿಸಿದರೆ ಪೆರ್ಲವನ್ನು ತಲುಪಬಹುದಾಗಿದೆ. ಇಲ್ಲಿ ಸೇತುವೆ ನಿರ್ಮಾಣವಾಗಬೇಕೆಂದು ಕಳೆದ ೩೦ ವರ್ಷಗಳಿಂದ ಜನರು ಬೇಡಿಕೆಯನ್ನು ಸಲ್ಲಿಸುತ್ತಿದ್ದಾರೆ. ಒಂದು ಬಾರಿ ಸ್ಥಳದಲ್ಲಿ ಸರ್ವೆ ಕಾರ್ಯ ನಡೆದಿದ್ದು ಆ ಬಳಿಕ ಅದು ಸ್ಥಗಿತಗೊಂಡಿತ್ತು. ನದಿಯ ಒಂದು ಬದಿ ಎಣ್ಮಕಜೆ ಗ್ರಾಪಂ ಸೇರಿದ್ದು ಈಚೆ ಬದಿ ಕಾಮಜಾಲು ಹೆಸರಿನಿಂದ ಕರೆದರೆ ಆಚೆ ಬದಿ ಪೂವನಡ್ಕಂ ಎಂಬ ಹೆಸರಿನಿಂದ ಕರೆಯಲ್ಪಡುತ್ತದೆ.

ಮಂಜೇಶ್ವರ ಶಾಸಕರ ಜೊತೆ ಅಶೋಕ್ ರೈ ಮಾತುಕತೆ

ಕೇರಳ ಮತ್ತು ಕರ್ನಾಟಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯಾಗಿರುವ ಕಾರಣ ಕೇರಳ ಸರಕಾರದಿಂದ ಎನ್ ಒ ಸಿ ಪಡೆಯಬೇಕಾಗಿದೆ. ಕರ್ನಾಕಟದಿಂದ ಎನ್ ಒ ಸಿ ವ್ಯವಸ್ಥೆಯನ್ನು ಸಾಸಕ ಅಶೋಕ್ ರೈ ಮಾಡಲಿದ್ದು ಕೇರಳ ಸರಕಾರದಿಂದ ಮಂಜೇಶ್ವರ ಶಾಸಕರಾದ ಅಶ್ರಫ್ ರವರು ಎನ್ ಒ ಸಿ ವ್ಯವಸ್ಥೆ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ. ಈ ನದಿ ತಡದಲ್ಲಿ ಸುಮಾರು ೫೦೦ ಎಕ್ರೆ ಕೃಷಿ ಭೂಮಿಯೂ ಇದೆ. ನದಿಯ ನೀರನ್ನು ಕರ್ನಾಟಕ ಮತ್ತು ಕೇರಳದ ಕೃಷಿಕರು ಬಳಸುವ ಕಾರಣ ಮುಂದಕ್ಕೆ ತಕರಾರು ಬಾರದಂತೆ ವ್ಯವಸ್ಥೆಯನ್ನೂ ಮಾಡಬೇಕಿದೆ. ಈ ಎಲ್ಲಾ ವಿಚಾರಗಳಿಗೆ ಸಂಬಂಧಿಸಿದಂತೆ ಶಾಸಕದ್ವಯರು ಮಾತುಕತೆ ನಡೆಸಿದ್ದಾರೆ.

ಪೆರ್ಲಕ್ಕೆ ೭ ಕಿ ಮೀ

ಸೇತುವೆಯ ಜೊತೆಗೆ ಅಣೆಕಟ್ಟು ಕೂಡಾ ನಿರ್ಮಾಣವಾಗಲಿದೆ. ಸೇತುವೆ ನಿರ್ಮಾಣವಾದರೆ ಮಾಣಿಲದಿಂದ ಪೆರ್ಲಕ್ಕೆ ಕೇವಲ ೭ ಕಿ ಮೀ ದೂರ ಕ್ರಯಿಸಿದರೆ ಸಾಕಾಗುತ್ತದೆ. ಮಾಣಿಲದಿಂದ ಪೆರ್ಲಕ್ಕೆ ತೆರಳಬೇಕದರೆ ಸುತ್ತು ಬಳಸಿ ೩೫ ಕಿ ಮೀ ಪ್ರಯಾಣ ಮಾಡಬೇಕಾಗುತ್ತದೆ. ಸೇತುವೆಯ ಎರಡು ರಾಜ್ಯಗಳ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡಲಿದೆ. ಉಪ್ಪಳಕ್ಕೆ ತೆರಳುವುದು ಅತ್ಯಂತ ಹತ್ತಿರವಾಗಲಿದೆ.

೧೦೦ ಕೋಟಿ ರೂ ಪ್ರಸ್ತಾವನೆ

ಹೊಸ ಸೇತುವೆಯ ನಿರ್ಮಾಣಕ್ಕೆ ೧೦೦ ಕೋಟಿ ರೂ ಬೇಕಾಗಿದ್ದು ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಜನತೆಯ ಹಲವು ವರ್ಷಗಳ ಬೇಡಿಕೆಯ ಬಗ್ಗೆ ಚುನಾವಣಾ ಸಮಯದಲ್ಲಿ ಗ್ರಾಮಸ್ಥರು ಶಾಸಕರ ಮುಂದಿಟ್ಟಿದ್ದರು. ಇದೀಗ ಶಾಸಕರು ಪ್ರಸ್ತಾವನೆಯನ್ನು ಸರಕಾರದ ಮುಂದಿಟ್ಟಿದ್ದಾರೆ.


ಮಾಣಿಲ ಗ್ರಾಮದ ಕಾಮಜಾಲಿನಲ್ಲಿ ಕೇರಳ ಸಂಪರ್ಕ ಸೇತುವೆಯ ನಿರ್ಮಾಣದ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಒಂದು ಬದಿ ಕೇರಳಕ್ಕೆ ಸೇರಿದ ಕಾರಣ ಕೇರಳ ಸರಕಾರದಿಂದ ಎನ್ ಒ ಸಿ ಪೊಡೆಯಬೇಕಾಗುತ್ತದೆ ಇದಕ್ಕಾಗಿ ಈಗಾಗಲೇ ಮಂಜೇಶ್ವರ ಶಾಸಕರು ಎನ್ ಒ ಸಿ ಗಾಗಿ ಕೇರಳ ಸರಕಾರದ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ. ಕೇರಳ ಮತ್ತು ಕರ್ನಾಟಕ ಸರಕಾರಗಳ ಜಂಟಿ ಯೋಜನೆಯಲ್ಲಿ ಇಲ್ಲಿ ಸೇತುವೆಯ ನಿರ್ಮಾಣವಾಗಲೂ ಬಹುದು. ಏನೇ ಆಗಲಿ ಜನರ ಬೇಡಿಕೆಯನ್ನು ಪರಿಗಣಿಸಲಾಗಿದೆ.

ಅಶೋಕ್ ಕುಮಾರ್ ರೈ ಶಾಸಕರು, ಪುತ್ತೂರು

ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

Posted by Vidyamaana on 2024-05-04 20:42:20 |

Share: | | | | |


ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

ಪುತ್ತೂರು ಮೇ 04 : ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ದಿನವೇ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಗುರುವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.

ರಾಮಚಂದ್ರ ಅವರು ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜನವರಿ 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.

ಪುತ್ತೂರು: ಪ್ರಯಾಣಿಕರ ಓವರ್ ಲೋಡ್ - ಬಸ್ ಓಡಿಸಲು ನಿರಾಕರಿಸಿದ ಕೆಎಸ್ ಆರ್ ಟಿಸಿ ಚಾಲಕ

Posted by Vidyamaana on 2023-10-29 15:35:36 |

Share: | | | | |


ಪುತ್ತೂರು: ಪ್ರಯಾಣಿಕರ ಓವರ್ ಲೋಡ್ - ಬಸ್ ಓಡಿಸಲು ನಿರಾಕರಿಸಿದ ಕೆಎಸ್ ಆರ್ ಟಿಸಿ ಚಾಲಕ

ಪುತ್ತೂರು : ಪ್ರಯಾಣಿಕರ ಓವರ್  ಲೋಡ್‌ಗೆ ಭಯಗೊಂಡು ಕೆಎಸ್ಆರ್ ಟಿಸಿ  ಬಸ್ ಓಡಿಸಲು ನಿರಾಕರಿಸಿದ ಚಾಲಕ ಘಟನೆ ಕಡಬದಿಂದ ಪುತ್ತೂರಿಗೆ ತೆರಳುವ ಬಸ್‌ ನಲ್ಲಿ ನಡೆದಿದೆ.

ಬಸ್ ಅಲಂಕಾರ್ ತಲುಪಿದಾಗ 130 ಮಂದಿ ಬಸ್ ಹತ್ತಿದ್ದರು. ಇದು ವಾಹನದ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಾಗಿತ್ತು. ಅರ್ಧದಷ್ಟು ಪ್ರಯಾಣಿಕರು ಇಳಿಯಬೇಕು ಇಲ್ಲದಿದ್ದರೆ ಬಸ್ ಓಡಿಸಲು ಹೋಗುವುದಿಲ್ಲ ಎಂದು ಚಾಲಕ ಹೇಳಿದರು.


ಇತ್ತೀಚೆಗೆ ಕಡಬದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ ಹೋಗುವ ಬೆಳಗ್ಗಿನ ಸಂಚಾರಿಸುವ ಒಂದು ಬಸ್ಸನ್ನು ನಿಲ್ಲಿಸಲಾಗಿತ್ತು. ಈ ಹಿನ್ನಲೆ ಬೆಳಗ್ಗಿನ ಆರಂಭದ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಓವರ್ ಲೋಡ್

ಆಗುತ್ತಿತ್ತು. ಇದರಿಂದ ಇತ್ತೀಚೆಗೆ ಬಸ್ ನ ಟಯರ್ ಬ್ಲಾಸ್ಟ್ ಆದ ಘಟನೆ ನಡೆದಿತ್ತು. ಹೀಗಾಗಿ ಬಸ್ ಚಾಲಕನಿಗೆ 5,000 ದಂಡ ಕೂಡ ವಿಧಿಸಲಾಗಿತ್ತು. ಇತ್ತ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಈ ಮಾರ್ಗದಲ್ಲಿ ಹೆಚ್ಚುವರಿ ಬಸ್ ಹಾಕುವಂತೆ ಜನರು ವಿನಂತಿಸಿದರು ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಪ್ರಯಾಣಿಕರ ಆರೋಪ.


ಕಡಬದಿಂದ ಶಾಂತಿಮುಗೇರು ಮಾರ್ಗವಾಗಿ 7.30 ಕ್ಕೆ ಬಸ್ಸು ಹೊರಟರೆ ಮತ್ತೆ 8.40 ರ ನಂತರವೇ ಕಡಬದಿಂದ ಈ ಮಾರ್ಗವಾಗಿ ಬಸ್ ತೆರಳುತ್ತದೆ. ಪರಿಣಾಮ 7.30 ರ ಬಸ್ಸು ಆಲಂಕಾರು ತಲುಪುವಾಗ ಜನರಿಂದ ತುಂಬಿಹೋಗಿರುತ್ತದೆ. ಇನ್ನು ಈ ಬಸ್ಸಿನಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಿವಿಧ ಸರ್ಕಾರಿ ಉದ್ಯೋಗಿಗಳು ಸೇರಿದಂತೆ ಇತರ ಪ್ರಯಾಣಿಕರೆಂದು ಸುಮಾರು 150 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಹೀಗಾಗಿ ಚಾಲಕ ಅಪಾಯ ಸಂಭವಿಸಬಹುದು ಎಂದು ಬಸ್ ಟಯರ್ ದುರ್ಬಲವಾಗಿದೆ ನಾನು ಇನ್ನು ಮುಂದೆ ಬಸ್ಸು ಓಡಿಸುವುದಿಲ್ಲ ನಿಲ್ಲಿಸಲಾಯಿತು.


ಬಳಿಕ ಪ್ರಯಾಣಿಕ ಒಬ್ಬ ಡಿಪೋಗೆ ಕರೆ ಮಾಡಿ ವಿಷಯ ತಿಳಿಸಿದ ಬಳಿಕ ಚಾಲಕ ಬಸ್‌ ಓಡಿಸಲು ಮುಂದಾದ . ಆದರೆ ಕಡಬದಿಂದ ಶಾಂತಿಮುಗೇರು ಮಾರ್ಗವಾಗಿ ಹೋಗುವ ಬಸ್ಸಿನ ಸೇವೆಯನ್ನು ಕಡಿತಗೊಳಿಸಿರುವುದೇ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದಕ್ಕೆ ಕಾರಣ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ವಿವಾಹಿತೆಯೊಂದಿಗೆ ಮರಕ್ಕೆ ನೇಣು ಬಿಗಿದುಕೊಂಡ ಯುವಕ

Posted by Vidyamaana on 2023-12-28 16:50:02 |

Share: | | | | |


ವಿವಾಹಿತೆಯೊಂದಿಗೆ  ಮರಕ್ಕೆ ನೇಣು ಬಿಗಿದುಕೊಂಡ ಯುವಕ

ಕೋಲಾರ : ಒಂದೇ ಮರಕ್ಕೆ ನೇಣು ಬಿಗಿದುಕೊಂಡು (Lovers Death) ಗೃಹಿಣಿ ಹಾಗೂ ಯುವಕ ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಎಸ್ ಜಿಡಿಮಾಕಲಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅನುಸೂಯ (35), ವಿಜಯ್ ಕುಮಾರ್ (27) ಮೃತರು.ಇವರಿಬ್ಬರು ಗ್ರಾಮದ ಹೊರವಲಯದ ಕೆರೆ ಅಂಗಳದಲ್ಲಿದ್ದ ಹೊಂಗೆ ಮರಕ್ಕೆ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಸೂಯ ಮದುವೆ ಆಗಿ ಇಬ್ಬರು ಮಕ್ಕಳಿದ್ದರೂ, ವಯಸ್ಸಿನಲ್ಲಿ ತನಗಿಂತ 8 ವರ್ಷ ಚಿಕ್ಕವನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಹಿಂದೊಮ್ಮೆ ಇವರಿಬ್ಬರು ಮನೆ ಬಿಟ್ಟು ಓಡಿ ಹೋದಾಗ ಕುಟುಂಬಸ್ಥರು ಕಾಣೆಯಾಗಿದ್ದಾಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇವರಿಬ್ಬರನ್ನು ಹುಡುಕಿ ಪೊಲೀಸರು ಕುಟುಂಬಸ್ಥರಿಗೆ ಒಪ್ಪಿಸಿದ್ದರು.


ಈ ವೇಳೆ ಇಬ್ಬರಿಬ್ಬರ ಪ್ರೀತಿಯಾಟ ಬಯಲಾಗಿತ್ತು. ಹಲವು ಬಾರಿ ರಾಜಿ ಪಂಚಾಯತಿಯನ್ನು ಕುಟುಂಬಸ್ಥರು ಮಾಡಿದ್ದರು. ಆದರೆ ಯುವಕನ ಮೋಹಪಾಶಕ್ಕೆ ಬಿದ್ದ ಅನುಸೂಯ ಮತ್ತೆ ತನ್ನ ಗಂಡ- ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಓಡಿ ಹೋಗಿದ್ದಳು. ಬಳಿಕ ಮತ್ತೆ ರಾಜಿ ಪಂಚಾಯತಿ ನಂತರ ಅನುಸೂಯ ತವರು ಮನೆ ಸೇರಿದ್ದಳು. ಇತ್ತ ವಿಜಯ್‌ ಕುಮಾರ್‌ ಮದನಪಲ್ಲಿಯಲ್ಲಿ ಇರುವ ಮಾವನ ಮನೆ ಸೇರಿದ್ದ.ಕಳೆದ ಎರಡು ದಿನಗಳ ಹಿಂದೆ ವಿಜಯ್‌ಕುಮಾರ್‌ ತನ್ನ ತಾಯಿಗೆ ಹಾವು ಕಚ್ಚಿದೆಯೆಂದು ಮದನಪಲ್ಲಿಯಿಂದ ಬಂದಿದ್ದ. ಆದರೆ ತಾಯಿ ನೋಡಲು ಬಂದವನು ಪ್ರೇಯಸಿಯ ಜತೆಗೆ ಒಟ್ಟಿಗೆ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಸ್ಥಳೀಯರು ಇಬ್ಬರ ಮೃತದೇಹವನ್ನು ಕಂಡು ರಾಯಲ್ಪಾಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸ್ಥಳಕ್ಕಾಗಮಿಸಿದ ಪೊಲೀಸರು ಮರದಿಂದ ಮೃತದೇಹಗಳನ್ನು ಇಳಿಸಿ, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇತ್ತ ತಾಯಿ ಪ್ರೀತಿಗೆ ಪುಟ್ಟ ಮಕ್ಕಳಿಬ್ಬರು ಅನಾಥರಾದರೆ, ಮಗನನ್ನು ಕಳೆದುಕೊಂಡ ವೃದ್ಧ ತಂದೆ-ತಾಯಿ ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ರಾಯಲ್ಪಾಡು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಸೆ 10 : ಬೆಂಗಳೂರಲ್ಲಿ ಎಸ್ಸೆಸ್ಸಫ್ ಗೋಲ್ಡನ್ ಫಿಫ್ಟಿ ಸಮಾವೇಶ

Posted by Vidyamaana on 2023-09-09 19:25:42 |

Share: | | | | |


ಸೆ 10 : ಬೆಂಗಳೂರಲ್ಲಿ ಎಸ್ಸೆಸ್ಸಫ್ ಗೋಲ್ಡನ್ ಫಿಫ್ಟಿ ಸಮಾವೇಶ

ಪುತ್ತೂರು : ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ( ಎಸ್ಸೆಸ್ಸಫ್ ) ಇದರ ಐವತ್ತನೇ ವರ್ಷಾಚರಣೆಯ ಪ್ರಯುಕ್ತ ಗೋಲ್ಡನ್ ಫಿಫ್ಟಿ ಸಮಾವೇಶವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಲಿದೆ.

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಸಹಿತ ಹಲವಾರು ಧಾರ್ಮಿಕ, ಸಾಮಾಜಿಕ, ರಾಜಕೀಯ ನಾಯಕರು, ಚಿಂತಕರು ಭಾಗವಹಿಸಲಿದ್ದಾರೆ.

ಈ ಸಮಾವೇಶದಲ್ಲಿ ಪುತ್ತೂರು ತಾಲ್ಲೂಕಿನಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಮುಸ್ಲಿಂ ಜಮಾಅತ್, ಎಸ್‌ವೈಎಸ್ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಗೋಲ್ಡನ್ ಫಿಫ್ಟಿ ಸಮಾವೇಶದ ಸಮಾರೋಪ ಸಮಾರಂಭ ನವಂಬರ್ 23,24,25 ರಂದು ಮುಂಬೈಯ ಏಕತಾ ಮೈದಾನದಲ್ಲಿ ನಡೆಯಲಿದೆ ಎಂದು ಎಸ್ಸೆಸ್ಸಫ್ ಪುತ್ತೂರು ಡಿವಿಶನ್ ನಾಯಕರು ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಹೆತ್ತವರ ಆಶೀರ್ವಾದ ಪಡೆದ ಪುತ್ತಿಲ

Posted by Vidyamaana on 2023-04-18 12:40:41 |

Share: | | | | |


ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಹೆತ್ತವರ  ಆಶೀರ್ವಾದ ಪಡೆದ  ಪುತ್ತಿಲ

ಪುತ್ತೂರು : ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮಂಗಳೂರು ಜಿಲ್ಲಾ ಘಟಕದ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ರವರ ಮನೆಗೆ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ಭೇಟಿ ನೀಡಿದರು.ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಪುತ್ತಿಲ ರವರು ಪ್ರವೀಣ್ ತಂದೆ-ತಾಯಿಯ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಹಲವು ಮಂದಿ ಉಪಸ್ಥಿತರಿದ್ದರು.



Leave a Comment: