ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಜೂ.11: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ

Posted by Vidyamaana on 2023-06-09 16:47:53 |

Share: | | | | |


ಜೂ.11: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಮಂಗಳೂರಿಗೆ

ಮಂಗಳೂರು: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದೇ ದಿನ ರಾತ್ರಿ ಬೆಂಗಳೂರಿಗೆ ಮರಳಲಿದ್ದಾರೆ.

ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 12:30ಕ್ಕೆ ಬಿಜೈಯಲ್ಲಿರುವ ಸರಕಾರಿ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಪರಾಹ್ನ 3ಕ್ಕೆ ದ.ಕ.ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿಪರಿಶೀಲನೆ ಮಾಡುವರು. ರಾತ್ರಿ 9:50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ

ಡಿವಿ ನಳಿನ್ ಭಾವಚಿತ್ರಕ್ಕೆ ಚಪ್ಪಲಿ‌ ಹಾರ: ಬಿಜೆಪಿ‌ ಪ್ರತಿಭಟನೆ

Posted by Vidyamaana on 2023-05-15 09:36:04 |

Share: | | | | |


ಡಿವಿ ನಳಿನ್ ಭಾವಚಿತ್ರಕ್ಕೆ ಚಪ್ಪಲಿ‌ ಹಾರ: ಬಿಜೆಪಿ‌ ಪ್ರತಿಭಟನೆ

ಪುತ್ತೂರು: ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಹಿಂದುಗಳ ಮೇಲೆ ದೌರ್ಜನ್ಯ‌ ಹಾಗೂ ಅಶಾಂತಿಯ ವಾತಾವರಣಕ್ಕೆ ಎಡೆ ನೀಡುವ ಕಾರ್ಯ ನಿರಂತರವಾಗಿ ನಡೆಯಲಿದೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಸದಾ ಸಿದ್ಧರಾಗಿ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಕರೆ ನೀಡಿದರು.

ಡಿ.ವಿ. ಹಾಗೂ ನಳಿನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣವನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ತಾಲೂಕು ಆಡಳಿತ ಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಮಾಜಿ ಸಿಎಂ ಸದಾನಂದ ಗೌಡ ಅವರು ಪುತ್ತೂರಿನ ಅಶಾಂತಿಯ ವಾತಾವರಣಕ್ಕೆ ಇತಿಶ್ರೀ ಹಾಕಿದವರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಶಾಂತಿಯ ವಾತಾವರಣಕ್ಕೆ ಕಡಿವಾಣ ಹಾಕಿದವರು. 

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಮುಖರಾದ ಆಶಾ ತಿಮ್ಮಪ್ಪ, ಸಾಜಾ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನಿವಾಸ್ ರಾವ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ವಿದ್ಯಾ ಆರ್. ಗೌರಿ, ಲೊಕೇಶ್ ಹೆಗ್ಡೆ, ಉಷಾ ಮುಳಿಯ ಉಪಸ್ಥಿತರಿದ್ದರು.

ಅಧಿಕಾರದಲ್ಲಿದ್ದಾಗಲೂ ಪ್ರತಿಭಟನೆ, ಈಗಲೂ ಪ್ರತಿಭಟನೆ ಬಿಜೆಪಿ ಕಾಯಕ : ಅಶೋಕ್ ರೈ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು ಇದನ್ನು ನಾನು ಖಂಡಿಸುತ್ತೇನೆ. ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ಇಂಥಹ ನೀಚ‌ಕೃತ್ಯಕ್ಕೆ ಕೈ ಹಾಕುವುದಿಲ್ಲ, ನಮಗೆ ಯಾರ ಮೇಲೆ ದ್ವೇಷವೂ ಇಲ್ಲ ಎಂದು ಅಶೋಕ್ ರೈ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತದಾರ ನೀಡಿದ ಜನ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದೇ ಸರಕಾರ ಇರುವಾಗಲೂ ಮಾಡಿದ್ದರೂ ಈಗಲೂ ಮಾಡುತ್ತಲೇ ಇದ್ದಾರೆ ಎಂದು ಹೇಳಿದರು.


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

Posted by Vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

ಡಿಸೆಂಬರ್ 14 ರಿಂದ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದು

Posted by Vidyamaana on 2023-12-13 07:34:28 |

Share: | | | | |


ಡಿಸೆಂಬರ್ 14 ರಿಂದ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದು

ಮಂಗಳೂರು: ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಿನ್ಸಿಪಲ್ ಚೀಫ್ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ.


ನೈಋತ್ಯ ರೈಲ್ವೆಯ ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ನಲ್ಲಿ ವಿವಿಧ ಕಾಮಗಾರಿಗಳ ಹಿನ್ನಲೆ ಡಿಸೆಂಬ‌ರ್ 14 ರಿಂದ ಡಿಸೆಂಬರ್ 22 ರವರೆಗೆ ಬೇರೆ ಬೇರೆ ದಿನಗಳಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಿದೆ ಎಂದು ಅವರು ತಿಳಿಸಿದ್ದಾರೆ.


ರೈಲು ಸಂಖ್ಯೆ 16511 ಬೆಂಗಳೂರು- ಮಂಗಳೂರು- ಕಣ್ಣೂರು ಮತ್ತು ರೈಲು ಸಂಖ್ಯೆ 16595 ಬೆಂಗಳೂರು- ಕಾರವಾರ ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸೆಸ್ ಅನ್ನು ಡಿಸೆಂಬ‌ರ್ 16 ರಿಂದ ಡಿಸೆಂಬರ್ 20 ತನಕ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 16512 ಕಣ್ಣೂರು- ಮಂಗಳೂರು-ಬೆಂಗಳೂರು ಮತ್ತು ರೈಲು ಸಂಖ್ಯೆ 16596 ಕಾರವಾರ – ಬೆಂಗಳೂರು ಪಂಚಗಂಗಾ ಎಕ್ಸೆಸ ಡಿಸೆಂಬರ್ 17 ರಿಂದ ಡಿಸೆಂಬರ್ 21 ತನಕ ರದ್ದುಗೊಳಿಸಲಾಗಿದೆ.


ವಾರದಲ್ಲಿ ಮೂರು ದಿನ ಸಂಚರಿಸುವ ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್‌ಪ್ರೆಸ್‌ನ್ನು ಡಿಸೆಂಬರ್ 14, 17, 19 ಮತ್ತು 21 ರಂದು ರದ್ದುಗೊಳಿಸಲಾಗಿದೆ.ಮಂಗಳೂರು ಜಂಕ್ಷನ್- ಯಶವಂತಪುರ ಗೋಮಟೇಶ್ವರ 관령 16576) v 15, 18, 20 총 22 ರಂದು ರದ್ದುಗೊಳಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್‌ ನಂಬರ್ 16515 ಪ್ರಯಾಣವನ್ನು ಡಿಸೆಂಬರ್ 13, 15,18,20 ಮತ್ತು 22 ರಂದು ರದ್ದುಪಡಿಸಲಾಗಿದೆ.


ವಾರದಲ್ಲಿ ಮೂರು ದಿನ ಸಂಚರಿಸುವ ಕಾರವಾರ- ಯಶವಂತಪುರ ನಂಬರ್ 16516 ನಂಬರ್ ರೈಲು ಸೇವೆಯನ್ನು ಡಿಸೆಂಬರ್ 14, 16, 19, 21 ಮತ್ತು 23 ರಂದು ರದ್ದುಗೊಳಿಸಲಾಗಿದೆ. ಡಿಸೆಂಬರ್ 16 ಮತ್ತು 17 ರಂದು ಯಶವಂತಪುರ- ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲ್(16539/ 16540) ಓಡಾಟವನ್ನು ಕ್ರಮವಾಗಿ ರದ್ದುಪಡಿಸಲಾಗಿದೆ. ಲಭ್ಯ ರೈಲು ಮಾರ್ಗ ಈ ಅವಧಿಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು- ಮುರ್ಡೇಶ್ವರ-ಬೆಂಗಳೂರು (ರೈಲು ಸಂಖ್ಯೆ. 16585/ 586) ರಾಜಧಾನಿಯನ್ನು ಕರಾವಳಿಯೊಂದಿಗೆ ಸಂಪರ್ಕಿಸುವ ಏಕೈಕ ರೈಲು ಆಗಿರುತ್ತದೆ.

ಹರೀಶ್ ಪೂಂಜ ಇಡೀ ಜಿಲ್ಲೆಗೆ ಕಳಂಕ ತಂದಿದ್ದಾರೆ :ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

Posted by Vidyamaana on 2024-05-23 17:53:31 |

Share: | | | | |


ಹರೀಶ್ ಪೂಂಜ ಇಡೀ ಜಿಲ್ಲೆಗೆ ಕಳಂಕ ತಂದಿದ್ದಾರೆ :ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

ಮಂಗಳೂರು,ಶಾಸಕ ಹರೀಶ್ ಪೂಂಜ ಪೊಲೀಸರು, ತಹಸೀಲ್ದಾರನ್ನು ನಿಂದಿಸಿ ಬೆಳ್ತಂಗಡಿ ನಾಗರಿಕರಿಗೆ ಅವಮಾನ ಮಾಡಿದ್ದಾರೆ. ರೌಡಿಯಂತೆ ವರ್ತಿಸಿ ಇಡೀ ಜಿಲ್ಲೆಗೆ ಕಳಂಕ ತಂದಿದ್ದಾರೆ. ರೌಡಿ ರೀತಿ ವರ್ತಿಸುತ್ತಿರುವುದನ್ನು ನಾವು ಖಂಡಿಸುತ್ತೇವೆ. ತಾಕತ್ತಿದ್ದರೆ, ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಜನರಿಂದ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಹರೀಶ್ ಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳ್ತಂಗಡಿ ಕ್ಷೇತ್ರವನ್ನು ರತ್ನವರ್ಮ ಹೆಗ್ಗಡೆ, ವೈಕುಂಠ ಬಾಳಿಗಾ, ಸುಬ್ಬಯ್ಯ ಹೆಗಡೆ, ವಸಂತ ಬಂಗೇರರಂತವರು ಪ್ರತಿನಿಧಿಸಿದ್ದರು. ವಸಂತ ಬಂಗೇರ ಐದು ಬಾರಿ ಶಾಸಕರಾಗಿ ಗೌರವ ತಂದುಕೊಟ್ಟಿದ್ದಾರೆ. ಹರೀಶ್ ಪೂಂಜ ಈಗ ವಸಂತ ಬಂಗೇರ ಮಾಡಲು ಹೋಗಿ ಎಲ್ಲೆ ಮೀರಿ ವರ್ತಿಸಿದ್ದಾರೆ. ಬಂಗೇರ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದವರು, ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಟ್ಟು ಕೆಲಸ ಮಾಡುತ್ತಿದ್ದರು. ಯಾವತ್ತೂ ಭ್ರಷ್ಟಾಚಾರಿ, ರೌಡಿಗಳ ಪರ ಕೆಲಸ ಮಾಡಿದವರಲ್ಲ.

ಯುರೋಪ್‌ನಲ್ಲಿ ಚಾಲಕ ಹುದ್ದೆ: ಅರ್ಜಿ ಆಹ್ವಾನ

Posted by Vidyamaana on 2023-06-05 10:32:59 |

Share: | | | | |


ಯುರೋಪ್‌ನಲ್ಲಿ ಚಾಲಕ ಹುದ್ದೆ: ಅರ್ಜಿ ಆಹ್ವಾನ

ಮಂಗಳೂರು, ಜೂ.3: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್‌ ದೇಶದಲ್ಲಿ ಡ್ರೈವರ್‌ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವ‌ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಭಾರೀ ಟ್ರಕ್‌ ಹಾಗೂ ಟೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಜೂ.11ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬಹುದು.


ಜೂ.20 ಹಾಗೂ 21ರಂದು ನೇರ ಸಂದರ್ಶನ ನಡೆಯಲಿದೆ. ಮೂಲವೇತನ ಪ್ರತಿ ತಿಂಗಳಿಗೆ 1,07,000 ರೂ.ಗಳಿಂದ 1,34,000 ರೂ. (1200-1500 ಯುರೋಗಳು) ನೀಡಲಾಗುವುದು. ವಸತಿ, ವಿಮೆ ಇತ್ಯಾದಿ ಸವಲತ್ತಿನೊಂದಿಗೆ ಅಭ್ಯರ್ಥಿಗಳಿಗೆ ಸಮಾನ ಅವಕಾಶ ನೀಡಲಾಗುವುದು. ಇಂಗ್ಲಿಷ್ ಭಾಷೆ ಕಡ್ಡಾಯವಾಗಿ ತಿಳಿದಿರಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಲಹೆಗಾರ ಮೊ.ಸಂ: 91102 4845/9141584259ನು ಸಂರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.



Leave a Comment: