ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಪರಸ್ಪರ ಪ್ರೀತಿಸಿ ದೇವಸ್ಥಾನದಲ್ಲಿ ವಿವಾಹವಾದ ಸಲಿಂಗಿ ಜೋಡಿ

Posted by Vidyamaana on 2024-01-11 16:46:55 |

Share: | | | | |


ಪರಸ್ಪರ ಪ್ರೀತಿಸಿ ದೇವಸ್ಥಾನದಲ್ಲಿ ವಿವಾಹವಾದ ಸಲಿಂಗಿ ಜೋಡಿ

ಲಕ್ನೋ: ಪರಸ್ಪರ ಪ್ರೀತಿಸುತ್ತಿದ್ದ‌ ಸಲಿಂಗಿ ಜೋಡಿ ಸಾಂಪ್ರದಾಯಿಕವಾಗಿ ದೇವಸ್ಥಾನದಲ್ಲಿ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ.


ಪಶ್ಚಿಮ ಬಂಗಾಳದ ಮೂಲದ ಜಯಶ್ರೀ ರಾಹುಲ್ (28) ಮತ್ತು ರಾಖಿ ದಾಸ್ (23) ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯವರಾದ ಜಯಶ್ರೀ ರಾಹುಲ್‌ ಹಾಗೂ ರಾಖಿ ದಾಸ್ ಡಿಯೋರಿಯಾದಲ್ಲಿ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಜೊತೆಯಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಪ್ರೀತಿ ಹುಟ್ಟಿತ್ತು.

ಕೆಲವು ದಿನಗಳ ಹಿಂದೆ ದೀರ್ಗೇಶ್ವರನಾಥ ದೇವಸ್ಥಾನದಲ್ಲಿ ಮದುವೆಗೆ ಅನುಮತಿಯನ್ನು ಕೋರಲಾಗಿತ್ತು. ಆದರೆ ದೇವಸ್ಥಾನದಲ್ಲಿ ಅನುಮತಿ ನಿರಾಕರಿಸಿದ್ದರು. ಇದಾದ ಬಳಿಕ ಆರ್ಕೆಸ್ಟ್ರಾ ತಂಡದ ಮಾಲೀಕ ಮನ್ನಾ ಪಾಲ್‌ ಮದುವೆಗೆ ನೋಟರೈಸ್ ಮಾಡಿದ ಅಫಿಡವಿಟ್ ಪಡೆದುಕೊಂಡಿದ್ದಾರೆ.ನೋಟರಿ ಪ್ರಮಾಣ ಪತ್ರವನ್ನು ಪಡೆದುಕೊಂಡ ನಂತರ ಸೋಮವಾರ(ಜ.8 ರಂದು) ಡಿಯೋರಿಯಾದ ಭಟ್ಪರ್ ರಾಣಿಯ ಭಗದಾ ಭವಾನಿ ದೇವಸ್ಥಾನದಲ್ಲಿ ತನ್ನ ಆತ್ಮೀಯರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಸಿರಾಜುದ್ದೀನ್ ಮೃತ್ಯು

Posted by Vidyamaana on 2023-04-21 11:46:41 |

Share: | | | | |


ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಸಿರಾಜುದ್ದೀನ್ ಮೃತ್ಯು

ರಿಯಾದ್: ಸೌದಿ ಅರೇಬಿಯಾದಲ್ಲಿ ಮಸೀದಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಮಂಗಳೂರಿನ ಯುವಕ ಮೃತಪಟ್ಟಿರೋ ಘಟನೆ ನಡೆದಿದೆ.

ಸಜಿಪದ ಕೋಣೆಕಣಿ ಮೂಲದ ಖಾಸಿಮ್ ಮತ್ತು ಮೈನಬಾ ದಂಪತಿ ಪುತ್ರ ಸಿರಾಜುದ್ದೀನ್ ಮೃತಪಟ್ಟ ಯುವಕ. ಈತ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಮಾ. 24 : ವಿಟ್ಲದಲ್ಲಿ ಸೌಹಾರ್ದ ಬೃಹತ್ ಇಫ್ತಾರ್ ಕೂಟ

Posted by Vidyamaana on 2024-03-24 10:56:55 |

Share: | | | | |


ಮಾ. 24 : ವಿಟ್ಲದಲ್ಲಿ ಸೌಹಾರ್ದ ಬೃಹತ್ ಇಫ್ತಾರ್ ಕೂಟ

ವಿಟ್ಲ: ವಿ.ಫೌಂಡೇಶನ್ ವಿಟ್ಲ ವತಿಯಿಂದ ಮಾ. 24ರ ಭಾನುವಾರ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್ ನಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಲಿದೆ. ಸುಮಾರು ಒಂದು ಸಾವಿರದಷ್ಟು ಮಂದಿಗೆ ಇಫ್ತಾರ್ ಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸರ್ವಧರ್ಮಿಯರಿಗೆ ಇಫ್ತಾರ್ ನಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ ಎಂದು ವಿ ಫೌಂಡೇಶನ್ ನ ಸಂಘಟಕರು ತಿಳಿಸಿದ್ದಾರೆ.

ಕುಮಾರ ಪರ್ವತದ ಗಿರಿಗದ್ದೆ ಭಟ್ರು ಇನ್ನಿಲ್ಲ: ಕಾಡಿನ ಮಧ್ಯ ಮನೆಯೂಟ ನೀಡ್ತಿದ್ದ ಮಹಾಲಿಂಗ ಭಟ್ರು

Posted by Vidyamaana on 2023-12-21 11:56:10 |

Share: | | | | |


ಕುಮಾರ ಪರ್ವತದ ಗಿರಿಗದ್ದೆ ಭಟ್ರು ಇನ್ನಿಲ್ಲ: ಕಾಡಿನ ಮಧ್ಯ ಮನೆಯೂಟ ನೀಡ್ತಿದ್ದ ಮಹಾಲಿಂಗ ಭಟ್ರು

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ಡಿ.20ರ ಬುಧವಾರ ಇಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮೃತರು ಒರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.ಕುಮಾರಪರ್ವತ ದಾರಿಯ ಗಿರಿಗದ್ದೆಯಲ್ಲಿ ಮನೆ ಹೊಂದಿದ್ದ ಮಹಾಲಿಂಗ ಭಟ್ ಅವರು ಗಿರಿಗದ್ದೆ ಭಟ್ಟರು ಎಂದೇ ಖ್ಯಾತರಾಗಿದ್ದರು. ಇವರು ಕುಮಾರಪರ್ವತ ಚಾರಣಿಗರಿಗೆ ಉಪಚಾರ, ಮಾರ್ಗದರ್ಶನ, ಆಹಾರ ತಯಾರಿಸಿ ನೀಡುವ, ಆಶ್ರಯ ನೀಡುವ ಮೂಲಕ ಚಿರಪರಿಚಿತರಾಗಿದ್ದು, ಚಾರಣಿಗರ ಅಚ್ಚುಮೆಚ್ಚಿನ ವ್ಯಕ್ತಿಯಾಗಿದ್ದರು.


ಕುಮಾರಪರ್ವತ ಚಾರಣಕ್ಕೆ ತೆರಳುವ ಹೆಚ್ಚಿನವರು ಇವರನ್ನು ಸಂಪರ್ಕಿಸಿಯೇ ಆಗಮಿಸುತ್ತಿದ್ದರು. ಮಹಾಲಿಂಗ ಭಟ್ ಅವರ ಮನೆಗೆ ಆಹಾರ ಸಾಮಾಗ್ರಿಗಳನ್ನು ಹಾಗೂ ಮತ್ತಿತರ ಸಾಮಾಗ್ರಿಗಳನ್ನು ಹೊತ್ತುಕೊಂಡೇ ಸಾಗಬೇಕಾಗಿತ್ತು. ಮಹಾಲಿಂಗ ಭಟ್ ಅವರು ಗಿರಿಗದ್ದೆಯಲ್ಲಿ ಕೃಷಿ ಕೆಲಸ ನಿರ್ವಹಿಸಿತ್ತಿದ್ದರು

ಕಡಬ ಠಾಣಾ ಎಸ್‌ಐ ಆಂಜನೇಯ ರೆಡ್ಡಿ ದಿಢೀರ್ ವರ್ಗಾವಣೆ

Posted by Vidyamaana on 2023-08-30 11:11:11 |

Share: | | | | |


ಕಡಬ ಠಾಣಾ ಎಸ್‌ಐ ಆಂಜನೇಯ ರೆಡ್ಡಿ ದಿಢೀರ್ ವರ್ಗಾವಣೆ

ಕಡಬ : ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಆಂಜನೇಯ ರೆಡ್ಡಿಯವರನ್ನು ವರ್ಗಾಯಿಸಲಾಗಿದ್ದು, ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಅಭಿನಂದನ್ ಎಂ.ಎಸ್. ಅವರನ್ನು ನೇಮಿಸಲಾಗಿದೆ.

ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ!

Posted by Vidyamaana on 2023-02-21 04:05:24 |

Share: | | | | |


ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ!

ಪುತ್ತೂರು: ವಿಧಾನಸಭಾ ಚುನಾವಣೆಯ ಗುಂಗು ಹೆಚ್ಚುತ್ತಿದ್ದಂತೆ, ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆಯೂ ಬಹುತೇಕ ಸ್ಪಷ್ಟವಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಮಾರ್ಚ್ 24ರಂದೇ ಚುನಾವಣಾ ದಿನಾಂಕ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಚುನಾವಣೆಗಾಗಿ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಆಕಾಂಕ್ಷಿ ಅಭ್ಯರ್ಥಿಗಳಂತೂ ಭರ್ಜರಿಯಾಗಿಯೇ ತಯಾರಾಗುತ್ತಿದ್ದಾರೆ. ಇದರ ನಡುವೆ ರಾಜಕೀಯ ಊಹಾಪೋಹಗಳು, ಅಭ್ಯರ್ಥಿಗಳ ಕುರಿತಾದ ಅಂತೆ-ಕಂತೆಗಳ ಸುದ್ದಿಗಳು ಎಗ್ಗಿಲ್ಲದೆ ಹರಿದಾಡುತ್ತಿದೆ. ಇದಕ್ಕೆಲ್ಲಾ ಮಾರ್ಚ್ 24ರ ಹೊತ್ತಿಗೆ ತೆರೆ ಬೀಳಲಿದೆ.

ಒಂದು ವೇಳೆ ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟವಾದರೆ, ಮುಂದೆ ಅಂತಿಮ ಸಿದ್ಧತೆಗಳಿಗಷ್ಟೇ ಸಮಯ ಮೀಸಲು. ಪ್ರಚಾರದ ಅಂತಿಮ ದಿನ, ನಾಮಪತ್ರ ಸಲ್ಲಿಕೆಯಿಂದ ಹಿಡಿದು, ಚುನಾವಣಾ ಫಲಿತಾಂಶದವರೆಗಿನ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟ ಮಾಡಲಿದೆ. ರಾಜಕೀಯ ಕುರಿತಾಗಿ ಈಗ ಮೂಡಿರುವ ಎಲ್ಲಾ ಪ್ರಶ್ನೆಗಳಿಗೆ, ಕುತೂಹಲಗಳಿಗೆ ಮಾರ್ಚ್ 24ರಂದೇ ತೆರೆಬೀಳುವ ಸಾಧ್ಯಾತೆ ದಟ್ಟವಾಗಿದೆ.



Leave a Comment: