ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ ಗೆ ಷರತ್ತುಬದ್ಧ ಜಾಮೀನು

Posted by Vidyamaana on 2023-12-05 11:56:37 |

Share: | | | | |


ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು,  ಉದ್ಯಮಿ ಗೋವಿಂದಬಾಬು ಪೂಜಾರಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ ಎರಡನೇ ಆರೋಪಿ ಶ್ರೀಕಾಂತ್​ಗೆ ಮೂರನೇ ಎಸಿಎಂಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅದರಂತೆ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.


ಉದ್ಯಮಿ ಗೋವಿಂದ ಬಾಬು ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾಳನ್ನು ಸೆಪ್ಟೆಂಬರ್ 13 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು.


ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಒಟ್ಟು 4 ಕೋಟಿ ರೂ. ಹಣ ಪಡೆದಿದ್ದಳು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಮತ್ತು ಗ್ಯಾಂಗ್ ಹಣ ನೀಡದೇ ವಂಚಿಸಿತ್ತು. ಈ ಬಗ್ಗೆ ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಸಿಸಿಬಿ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದರು.

ಪಿಎಸ್ಐ ನೇಮಕಾತಿ ಹಗರಣ: ಮರು ಪರೀಕ್ಷೆ ಗೆ ಹೈಕೋರ್ಟ್ ಆದೇಶ

Posted by Vidyamaana on 2023-11-10 13:54:17 |

Share: | | | | |


ಪಿಎಸ್ಐ ನೇಮಕಾತಿ ಹಗರಣ: ಮರು ಪರೀಕ್ಷೆ ಗೆ ಹೈಕೋರ್ಟ್ ಆದೇಶ

ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ನೇಮಕಾತಿ ಅಕ್ರಮ ಹಿನ್ನಲೆಯಲ್ಲಿ, ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ, ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ 269 ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.ಇದೀಗ ಹೈಕೋರ್ಟ್ ಪಿಎಸ್‌ಐ ನೇಮಕಾತಿಯ ಮರು ಪರೀಕ್ಷೆಗೆ ಆದೇಶ ಮಾಡಿದೆ. ಈ ಮೂಲಕ ಹೈಕೋರ್ಟ್ ಮೆಟ್ಟಿಲೇರಿದ್ದಂತ ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದೆ. 


ರಾಜ್ಯ ಸರ್ಕಾರವು ಪಿಎಸ್‌ಐ ನೇಮಕಾ ಅಕ್ರಮದ ನಂತ್ರ ಪರೀಕ್ಷೆ, ಆಯ್ಕೆ ಪಟ್ಟಿ ರದ್ದುಪಡಿಸಿದ್ದನ್ನು ಪ್ರಶ್ನಿಸಿ ಅಭ್ಯರ್ಥಿ ಎನ್ ವಿ ಚಂದನ್ ಸೇರಿದಂತೆ ಆಯ್ಕೆ ಪಟ್ಟಿಯಲ್ಲಿದ್ದ 296ಕ್ಕೂ ಹೆಚ್ಚು ಅಭ್ಯರ್ಥಿಗಳು ಕೆಎಸ್ ಸಿಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.


ಮರು ಪರೀಕ್ಷೆ ವಿರೋಧಿಸಿ 296 ಅಭ್ಯರ್ಥಿಗಳು ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು, ಮರು ಪರೀಕ್ಷೆಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿತ್ತು. ಆ ಬಳಿಕ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠವು ಇಂದು ತನ್ನ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಪ್ರಕಟಿಸಿದ್ದು, 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಮರು ಪರೀಕ್ಷೆ ನಡೆಸುವಂತ ಆದೇಶ ಹೊರಡಿಸಿದೆ. ಅಲ್ಲದೇ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ.


ಅಂದಹಾಗೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಂತ 296ಕ್ಕೂ ಹೆಚ್ಚು ಅಭ್ಯರ್ಥಿಗಳು ಅಕ್ರಮ ಎಸಗಿದವರನ್ನು ಪ್ರತ್ಯೇಕಿಸಿ, ಅಕ್ರಮದಲ್ಲಿ ಭಾಗಿಯಾಗಿರದೇ ಇರುವವರನ್ನು ನೇಮಕಾತಿ ಅಂತಿಮಗೊಳಿಸುವಂತೆ ಕೋರಿದ್ದರು. ಈ ಅರ್ಜಿಗೆ ಹೈಕೋರ್ಟ್ ಮರು ಪರೀಕ್ಷೆ ನಡೆಸುವಂತೆ ಮಹತ್ವದ ತೀರ್ಪನ್ನು ಹೊರಡಿಸಿದೆ.

ಪುತ್ತೂರು :ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

Posted by Vidyamaana on 2024-04-28 07:20:40 |

Share: | | | | |


ಪುತ್ತೂರು :ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

ಪುತ್ತೂರು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿಯು ಏ.28 ರಂದು ನಡೆಯಲಿದೆ.

ಏ.28 ರಂದು ಬೆಳಿಗ್ಗೆ 6 ಗಂಟೆಯಿಂದ ಶ್ರೀ ದಂಡನಾಯಕ ದೈವದ ವಾಲಸರಿ ನೇಮ ನಡೆಯಲಿದೆ.

BREAKING: ನಾಳೆಯೇ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಹೀಗೆ ಮಾಡಿ

Posted by Vidyamaana on 2024-04-09 17:51:34 |

Share: | | | | |


BREAKING: ನಾಳೆಯೇ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಹೀಗೆ ಮಾಡಿ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ( 2nd PUC Examination-1 Result ) ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ( School Education Department ) ತಿಳಿಸಿದೆ. ರಿಸಲ್ಟ್ ಹೇಗೆ ನೋಡಬೇಕು ಅನ್ನೋ ಬಗ್ಗೆ ಮುಂದೆ ಓದಿ.ಈ  ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ- ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಯಿತು ಎಂದಿದೆ.

ಪೊಲೀಸ್ ವಾಹನ ಬಳಸಿ ರೀಲ್ಸ್; ವಿಡಿಯೋ ವೈರಲ್‌ ಬಳಿಕ ಯುವಕನ ಬಂಧನ

Posted by Vidyamaana on 2024-02-19 09:48:32 |

Share: | | | | |


ಪೊಲೀಸ್ ವಾಹನ ಬಳಸಿ ರೀಲ್ಸ್; ವಿಡಿಯೋ ವೈರಲ್‌ ಬಳಿಕ ಯುವಕನ ಬಂಧನ

ಲಕ್ನೋ: ಪೊಲೀಸ್‌ ವಾಹನವನ್ನು ಬಳಸಿಕೊಂಡು ಇನ್ಸ್ಟಾಗ್ರಾಮ್‌ ರೀಲ್ಸ್‌ ಮಾಡಿದ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ಈ ಘಟನೆ ನಡೆದಿದ್ದು, ರೀಲ್ಸ್‌ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಇಂದಿರಾಪುರಂ ಪ್ರದೇಶದಲ್ಲಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಮೊಯಿನ್ ಖಾನ್ ಎಂಬಾತ ಖಾಲಿಯಿದ್ದ ಪೊಲೀಸ್‌ ವಾಹನವನ್ನು ಬಳಸಿಕೊಂಡು ಅದರಲ್ಲಿ ಕೂತು ಸ್ಟೈಲಿಸ್ಟ್‌  ಆಗಿ ರೀಲ್ಸ್‌ ಮಾಡಿದ್ದಾನೆ.

ಪೊಲೀಸ್ ವಾಹನ ಬಳಸಿ ರೀಲ್ಸ್; ವಿಡಿಯೋ ವೈರಲ್‌ ಬಳಿಕ ಯುವಕನ ಬಂಧನ

ಪೊಲೀಸ್‌ ವಾಹನದ ಸೀಟಿನಿಂದ ಕೆಳಗಿಳಿದು, ಕೋಲ್ಡ್‌ ಡ್ರಿಂಕ್‌ ಕುಡಿಯುತ್ತಾ ಬರುವ ದೃಶ್ಯಕ್ಕೆ ಮ್ಯೂಸಿಕ್‌ ವೊಂದನ್ನು ಹಾಕಿ ರೀಲ್ಸ್‌ ಮಾಡಿ ಫೆ.15 ರಂದು ಇನ್ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೋ ವೇಗದಲ್ಲಿ ವೈರಲ್‌ ಆಗಿದೆ.ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಟ್ರಾಫಿಕ್ ಜಾಮ್ ತೆರವುಗೊಳಿಸಲು ತೊಡಗಿದ್ದಾಗ, ಖಾಲಿ ಪೊಲೀಸ್ ವಾಹನವನ್ನು ಗಮನಿಸಿದ ಯುವಕ ಅದನ್ನು ಬಳಸಿ ರೀಲ್ ಮಾಡಿದ್ದಾರೆ. ವಿಡಿಯೋ ವೈರಲ್‌ ಆಗಿ ನಮ್ಮ ಗಮನಕ್ಕೆ ಬಂದ ಬಳಿಕ ಯುವಕನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ರೀಲ್ಸ್ ಮಾಡುತ್ತಲೇ ವಿಧವೆಯಾದ ಮಹಿಳೆ, ಸಾಯುವ ಮುನ್ನ ಪತಿ ಹೇಳಿದ್ದಿಷ್ಟು!

Posted by Vidyamaana on 2024-04-08 20:33:06 |

Share: | | | | |


ರೀಲ್ಸ್ ಮಾಡುತ್ತಲೇ ವಿಧವೆಯಾದ ಮಹಿಳೆ, ಸಾಯುವ ಮುನ್ನ ಪತಿ ಹೇಳಿದ್ದಿಷ್ಟು!

     ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಲೇ ಇರುತ್ತದೆ. ಈ ಜಗಳದಿಂದಾಗಿ ಸಂಬಂಧದಲ್ಲಿ ಮಾಧುರ್ಯ ಉಳಿಯುತ್ತದೆ. ಜಗಳಗಳ ನಂತರ ದಂಪತಿಗಳ ನಡುವೆ ಸಮನ್ವಯವಾದಾಗ, ಪ್ರೀತಿಯು ಮೊದಲಿಗಿಂತ ಹೆಚ್ಚು ಹೆಚ್ಚಾಗುತ್ತದೆ. ಆದರೆ ಅನೇಕ ಬಾರಿ ಈ ಕದನಗಳು ಅದ್ಯಾವ ಅತಿರೇಕಕ್ಕೆ ತಲುಪುತ್ತವೆ ಎಂದರೆ, ಅದರ ಫಲಿತಾಂಶವು ಊಹಿಸಲೂ ಸಾಧ್ಯವಿಲ್ಲ.ರಾಜಸ್ಥಾನದ ಅಲ್ವಾರ್​ನಲ್ಲಿ ಕೌಟುಂಬಿಕ ಕಲಹದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆ ವ್ಯಕ್ತಿ ಅಳುತ್ತಾ ಹೆಂಡತಿಯನ್ನು ಬಿಟ್ಟು ಹೋಗಿದ್ದ.


ರೈನಿ ಪೊಲೀಸ್ ಠಾಣೆ ವ್ಯಾಪ್ತಿಯ ನಂಗಲ್ ಬಸ್ ಗ್ರಾಮದಲ್ಲಿ ವಾಸಿಸುತ್ತಿದ್ದ ಸಿದ್ಧಾರ್ಥ್ ವೃತ್ತಿಯಲ್ಲಿ ಸರ್ಕಾರಿ ನೌಕರನಾಗಿದ್ದ. ಆತನ ಪತ್ನಿ ಮಾಯಾ ಅವರು ರೀಲ್‌ಗಳನ್ನು ಮಾಡುವುದನ್ನು ಇಷ್ಟಪಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪತ್ನಿಯ ಈ ಹವ್ಯಾಸದಿಂದ ಸಿದ್ಧಾರ್ಥ್ ತುಂಬಾ ನೊಂದುಕೊಂಡಿದ್ದ. ರೀಲ್‌ಗಳನ್ನು ಮಾಡದಂತೆ ಅವನು ತನ್ನ ಹೆಂಡತಿಯನ್ನು ಅನೇಕ ಬಾರಿ ಕೇಳಿಕೊಂಡಿದ್ದ. ಆದರೆ ಪ್ರತಿದಿನ ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕುತ್ತಲೇ ಇದ್ದರು. ಈ ಕಾರಣಕ್ಕೆ ಇಬ್ಬರ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಕೊನೆಗೆ ಇದೆಲ್ಲದರಿಂದ ಬೇಸತ್ತು ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.



Leave a Comment: