ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ಸ್ಕಾರ್ಪಿಯೋ ಅಪಘಾತಕ್ಕೀಡಾಗಿ ಯುವಕ ಮೃತ್ಯು

Posted by Vidyamaana on 2023-09-26 20:28:29 |

Share: | | | | |


ಸ್ಕಾರ್ಪಿಯೋ ಅಪಘಾತಕ್ಕೀಡಾಗಿ ಯುವಕ ಮೃತ್ಯು

ಲಕ್ನೋ, ಸೆ.26: ಐಷಾರಾಮಿ ಕಾರುಗಳ ಬಗ್ಗೆ ತಪ್ಪಾದ ಭರವಸೆಗಳನ್ನು ನೀಡಿ ಮೋಸ ಎಸಗಿದ್ದಾರೆಂದು ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ್ ಮಹೀಂದ್ರಾ ಮತ್ತು ಇತರ 12 ಮಂದಿಯ ವಿರುದ್ಧ ಉತ್ತರ ಪ್ರದೇಶದ ಖಾನ್ ಪುರದಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.


ರಾಜೇಶ್ ಮಿಶ್ರಾ ಎಂಬವರು ದೂರು ನೀಡಿದ್ದು, ತನ್ನ ಮಗ ಡಾ.ಅಪೂರ್ವ ಮಿಶ್ರಾ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು ಅದಕ್ಕೆ ಕಂಪನಿಯ ನಿರ್ಲಕ್ಷ್ಯ ಕಾರಣ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ. ರಾಜೇಶ್ ಮಿಶ್ರಾ ತನ್ನ ಮಗನಿಗೆ 17.40 ಲಕ್ಷ ಮೌಲ್ಯದ ಐಷಾರಾಮಿ ಕಪ್ಪು ಸ್ಕಾರ್ಪಿಯೋ ಕಾರನ್ನು ಗಿಫ್ಟ್ ನೀಡಿದ್ದರು. 2022ರ ಜನವರಿ 14ರಂದು ಮಗ ಮತ್ತು ಆತನ ಸ್ನೇಹಿತರು ಲಕ್ನೋದಿಂದ ಖಾನ್ ಪುರಕ್ಕೆ ಹಿಂತಿರುಗುತ್ತಿದ್ದಾಗ ಮಂಜಿನಲ್ಲಿ ಕಾಣಿಸದೆ ಕಾರು ಅಪಘಾತಕ್ಕೀಡಾಗಿತ್ತು. ಕಾರು ಪಲ್ಟಿ ಹೊಡೆದು ಅದರಲ್ಲಿದ್ದ ತನ್ನ ಏಕೈಕ ಮಗ ಅಪೂರ್ವ ಮಿಶ್ರಾ ಸ್ಥಳದಲ್ಲೇ ಮೃತಪಟ್ಟಿದ್ದ. ಕಾರಿನಲ್ಲಿ ಬೆಲ್ಟ್ ಹಾಕ್ಕೊಂಡಿದ್ದು, ಒಳಗಡೆ ಸೇಫ್ಟಿ ಬ್ಯಾಗ್ ಇದ್ದರೂ ಮಗನ ಜೀವ ಉಳಿಯಲಿಲ್ಲ. ಹೀಗಾಗಿ ಕಾರಿನ ಬಗ್ಗೆ ಕಂಪನಿ ನೀಡಿದ್ದ ಭರವಸೆ ಸುಳ್ಳಾಗಿದೆ. ಸೇಫ್ಟಿ ಇದೆಯೆಂಬ ಕಾರಣಕ್ಕೆ ಈ ಕಾರನ್ನು ಖರೀದಿಸಿದ್ದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


BS6 Mahindra Scorpio: Price, variant-wise features explained


ಕಾರು ಕಂಪೆನಿ ಮತ್ತು ಡೀಲರ್ ಗಳು ಸೇಫ್ಟಿ ಬಗ್ಗೆ ಎಡ್ವರ್ಟೈಸ್ ನೀಡಿದ್ದರಿಂದ ಕಾರು ಖರೀದಿಸಿದ್ದೆ. ಇಲ್ಲದಿದ್ದರೆ ಇಂತಹ ಕಾರು ಖರೀದಿ ಮಾಡುತ್ತಿರಲಿಲ್ಲ. ಅಪಘಾತ ಸಂದರ್ಭದಲ್ಲಿ ಏರ್ ಬ್ಯಾಗ್ ತೆರೆದುಕೊಂಡಿರಲಿಲ್ಲ. ಅದೇ ಕಾರಣದಿಂದ ಮಗನಿಗೆ ತೀವ್ರ ಪೆಟ್ಟಾಗಿತ್ತು. ಕಂಪನಿಯವರು ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಖಾನ್ ಪುರದ ಸ್ಥಳೀಯ ಕೋರ್ಟಿನಲ್ಲಿ ರಾಜೇಶ್ ಮಿಶ್ರಾ ದಾವೆ ಹೂಡಿದ್ದರು. ಕೋರ್ಟ್ ಸೂಚನೆಯಂತೆ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರಾ ಮತ್ತು ಕಂಪನಿಯ ಇತರ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.


ಐಪಿಸಿ ಸೆಕ್ಷನ್ 420(ಮೋಸ), 287(ಮೆಶಿನರಿ ವರ್ಕ್ ನಲ್ಲಿ ನಿರ್ಲಕ್ಷ್ಯ ಮಾಡಿರುವುದು), 304-ಎ( ಸಾವಿಗೆ ಕಾರಣವಾಗಿರುವುದು), 504(ಉದ್ದೇಶಪೂರ್ವಕ ಅಗೌರವ ಸೂಚಿಸಿ ಶಾಂತಿ ಭಂಗ), 506 ಮತ್ತು 102 ಬಿ (ಕ್ರಿಮಿನಲ್ ಕೂಟ ರಚನೆ) ಇತ್ಯಾದಿ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.

ತುಂಬಿದ ಸಭೆಯಲ್ಲಿ ಮಹಿಳೆಯ ತುಟಿಗೆ ಚುಂಬಿಸಲು ಯತ್ನಿಸಿದ ವಿದೇಶಾಂಗ ಸಚಿವ - ವೈರಲ್ ಆಯ್ತು ವಿಡಿಯೋ..

Posted by Vidyamaana on 2023-11-06 21:00:45 |

Share: | | | | |


ತುಂಬಿದ ಸಭೆಯಲ್ಲಿ ಮಹಿಳೆಯ ತುಟಿಗೆ ಚುಂಬಿಸಲು ಯತ್ನಿಸಿದ ವಿದೇಶಾಂಗ ಸಚಿವ - ವೈರಲ್ ಆಯ್ತು  ವಿಡಿಯೋ..

       ದೇಶ ಒಂದರ ವಿದೇಶಾಂಗ ಸಚಿವರು ಅಂದರೆ ಅದು ಅತ್ಯಂತ ಜವಾಬ್ದಾರಿಯುತ ಸ್ಥಾನ. ಆದರೆ ಇದೀಗ ಅಂತಹದ್ದೊಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ವಿದೇಶಾಂಗ ಸಚಿವರು ತುಂಬಿದ ಸಭೆಯಲ್ಲಿ ಮಹಿಳೆಯೊಬ್ಬರಿಗೆ ಕಿಸ್ ಮಾಡಲು ಪ್ರಯತ್ನಿಸಿದ್ದಾರೆ.ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋ ನೋಡಲು ಕ್ಲಿಕ್ ಮಾಡಿ

ಜರ್ಮನಿಯಲ್ಲಿ ನಡೆದ ಯುರೋಪಿಯನ್ ಯೂನಿಯನ್ ಸಮ್ಮೇಳನದ ಗ್ರೂಪ್ ಫೋಟೋ ತೆಗೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.ತುಂಬಿದ ಸಭೆಯಲ್ಲಿ ಪೋಲಿ ಸಚಿವನ ಕಿಸ್ ಮಸ್‌!


ಹೌದು, ಜರ್ಮನಿಯಲ್ಲಿ ನಡೆದ ಯುರೋಪಿಯನ್ ಯೂನಿಯನ್ ಸಮ್ಮೇಳನದ ಗ್ರೂಪ್ ಫೋಟೋ

ಸೆಷನ್ ವೇಳೆ ಕ್ರೋವೆಷಿಯಾದ 65 ವರ್ಷದ ಪೋಲಿ ವಿದೇಶಾಂಗ ಸಚಿವ ಗೋರ್ಡನ್ ಗ್ರೀಕ್ ರಾಡ್ ಮನ್ತ ನ್ನ ಪಕ್ಕದಲ್ಲಿ ನಿಂತಿದ್ದ ಜರ್ಮನಿಯ ಮಹಿಳಾ ಪ್ರತಿನಿಧಿ ಅನ್ನಾಲೆನ್ ಬೇರ್ ಬಾಕ್ ಎಂಬವರಿಗೆ ಕಿಸ್ ಮಾಡಲು ಪ್ರಯತ್ನಿಸಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಾಗತಿಕ ಮಟ್ಟದಲ್ಲಿ ಈ ವಿಚಾರ ಬಿಸಿಬಿಸಿ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.

ಮೂಡುಬಿದ್ರೆ ; ಖಾಸಗಿ ಕಾಲೇಜು ವಿದ್ಯಾರ್ಥಿನಿ ಆದಿರಾ ನಾಪತ್ತೆ

Posted by Vidyamaana on 2024-02-25 13:42:08 |

Share: | | | | |


ಮೂಡುಬಿದ್ರೆ ; ಖಾಸಗಿ ಕಾಲೇಜು ವಿದ್ಯಾರ್ಥಿನಿ ಆದಿರಾ ನಾಪತ್ತೆ

ಮೂಡಬಿದಿರೆ, ಫೆ.25: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬೈಂದೂರು ಮೂಲದ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡುಬಿದ್ರೆ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಪಿಟಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ನಾಪತ್ತೆಯಾದವಳು. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದಿದ್ದು ಕನ್ನಡ ಭವನದ ಬಳಿ ಇಳಿದಿದ್ದಾಳೆಂದು ಜೊತೆಗಿದ್ದವರು ಮಾಹಿತಿ ನೀಡಿದ್ದಾರೆ. ಆನಂತರ ಯುವತಿ ಅಲ್ಲಿಂದ ಕಾಲೇಜಿಗೆ ಅಥವಾ ಮನೆಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ. ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

Posted by Vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

Posted by Vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಪುತ್ತಿಲ ಕಿಡಿ

Posted by Vidyamaana on 2023-05-02 07:51:47 |

Share: | | | | |


ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಪುತ್ತಿಲ ಕಿಡಿ

ಪುತ್ತೂರು : ಚುನಾವಣೆಯ ಹೊಸ್ತಿಲಿನಲ್ಲಿಯೇ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಪ್ರಣಾಳಿಕೆ ಕೆಲವು ವಿಚಾರವು ಕಿಚ್ಚು ಹಚ್ಚಿದೆ.

ಈ ಬಗ್ಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಪ್ರತಿಕ್ರಿಯಿಸಿದ್ದು, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳದ ನಿಷೇಧದ ಉಲ್ಲೇಖ ನನ್ನ ಗಮನಕ್ಕೆ ಬಂದಿದೆ.., ಹಿಂದೂ ಸಮಾಜದ ಮೇಲೆ ಕಾಂಗ್ರೆಸ್ ನ ಇಂತಹ ಷಡ್ಯಂತ್ರಗಳು ನಡೆಯಲು ಬಿಡುವುದಿಲ್ಲ. ಧರ್ಮ ವಿರೋಧದ ಯೋಚನೆಯನ್ನು ನಾವು ವಿರೋಧಿಸಬೇಕಾಗಿದೆ. ಇಂತಹ ಯೋಚನೆಗಳಿಂದ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದಿದ್ದಾರೆ.

ಭಜರಂಗದಳವನ್ನು ನಿಷೇಧ ಮಾಡಬೇಕು ಎಂಬ ಯೋಚನೆಯಡಿಯಲ್ಲಿ ಪ್ರಣಾಳಿಕೆ ಸೇರಿಸುವಂತ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಇದನ್ನು ನಾವು ಖಂಡಿಸುತ್ತೇವೆ.

ಪ್ರಣಾಳಿಕೆಯಿಂದ ಈ ವಿಚಾರವನ್ನು ಕೈ ಬಿಡದೆ ಇದ್ರೆ ಕಾಂಗ್ರೆಸ್ ಸರ್ವನಾಶವಾಗುವುದು ಖಂಡಿತ. ನಿಷೇಧ ಮಾಡುವುದು ಬಿಡಿ.., ಒಬ್ಬ ಹಿಂದೂ ಕಾರ್ಯಕರ್ತನನ್ನು ಮುಟ್ಟುವಂತಹ ಪ್ರಯತ್ನವನ್ನು ಮಾಡಿದ್ರೇ ನಾವು ಇದಕ್ಕೆ ಉತ್ತರವನ್ನು ಕೊಡುತ್ತೇವೆ ಎಂದು ಅವರು ಗುಡುಗಿದ್ದಾರೆ..



Leave a Comment: